Category Archives: Blog

Your blog category

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | 2026 Women’s T20 World Cup: Eng vs SL Opener! Live Stream, Squads and Match Details

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಂದರೆ ಜೂನ್ 12 ರಿಂದ ಆರಂಭವಾಗುತ್ತಿದೆ. ಇಂಗ್ಲೆಂಡ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, 24 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯವೂ ಸೇರಿದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಬಿ ಗುಂಪಿನಲ್ಲಿರುವ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿವೆ. ಆತಿಥೇಯ ಇಂಗ್ಲೆಂಡ್‌, ಈ ಟೂರ್ನಿ ಆರಂಭಕ್ಕೂ ಮುನ್ನ ನಡೆದ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದು, ಇದೀಗ ಅದೇ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಇತ್ತ ಲಂಕಾ ಪಡೆ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಆರಂಭಿಸುವ ಇರಾದೆಯಲ್ಲಿದೆ.

ಇಂಗ್ಲೆಂಡ್-ಶ್ರೀಲಂಕಾ ಮುಖಾಮುಖಿ ದಾಖಲೆ

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಕೊನೆಯ ಟಿ20 ಪಂದ್ಯವು 2023 ರಲ್ಲಿ ನಡೆದಿತ್ತು. ಆಗ ಶ್ರೀಲಂಕಾ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ, ಇಂಗ್ಲೆಂಡ್ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಒಟ್ಟು 12 ಪಂದ್ಯಗಳನ್ನು ಆಡಿವೆ. ಈ 12 ಪಂದ್ಯಗಳಲ್ಲಿ ಇಂಗ್ಲೆಂಡ್ 10 ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದರೆ, ಇತ್ತ ಶ್ರೀಲಂಕಾ ಕೇವಲ 2 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಜೂನ್ 12 ರ ಶುಕ್ರವಾರದಂದು ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಲ್ಲಿ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಟಿಲ್ಲಿ ಕಾರ್ಟೀನ್-ಕೋಲ್ಮನ್, ಚಾರ್ಲಿ ಡೀನ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಡ್ಯಾನಿ ಗಿಬ್ಸನ್, ಆಮಿ ಜೋನ್ಸ್, ಫ್ರೇಯಾ ಕೆಂಪ್, ಹೀದರ್ ನೈಟ್, ಲಿನ್ಸೆ ಸ್ಮಿತ್, ಇಸ್ಸಿ ವಾಂಗ್, ಡ್ಯಾನಿ ವ್ಯಾಟ್-ಹಾಡ್ಜ್

ಶ್ರೀಲಂಕಾ ತಂಡ: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವೀಶಾ ದಿಲ್ಹಾರಿ, ಹನ್ಸಿಮಾ ಕರುಣಾರತ್ನೆ, ಕೌಶಿನಿ ನುತ್ಯಂಗನಾ, ಸುಗಂದಿಕಾ ದಾಸನಾಯಕ, ನಿಮಾಶಾ ಮದುಶಾನಿ, ಕಾವ್ಯಾ ಕವಿಂದಿ, ಮಾಲ್ಕಿ ಮಾದರ, ಮಿಥಾಲಿ ಅಯೋಧ್ಯಾ, ಚೇತನಾ ವಿಮುಕ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್

ತಮಿಳುನಾಡು ಸಿಎಂ ವಿಜಯ್ (CM Vijay) ಅವರು ಇಂದು (ಜೂನ್ 12) ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ – Kannada News | Pakistan Economic Crisis Deepens: Poverty Rate Soars 7pc in 6 Years

ಇಸ್ಲಾಮಾಬಾದ್, ಜೂನ್ 12: ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ‘ಆರ್ಥಿಕ ಸಮೀಕ್ಷೆ 2025-26’ (Pakistan Economic Survey) ವರದಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ದೇಶದ ಬಡತನದ ಪ್ರಮಾಣವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಸುಮಾರು 2.70 ಕೋಟಿಗೂ ಹೆಚ್ಚು ಜನರು ಹೊಸದಾಗಿ ಬಡತನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದು, ದೇಶದ ಒಟ್ಟು ಬಡವರ ಸಂಖ್ಯೆ ಈಗ ಅಂದಾಜು 7 ಕೋಟಿಗೆ ತಲುಪಿದೆ.

2018-19 ರಲ್ಲಿ ಪಾಕಿಸ್ತಾನ ದೇಶದಲ್ಲಿದ್ದ ಬಡತನದ ಪ್ರಮಾಣ ಶೇ. 21.9 ರಷ್ಟಿತ್ತು. 2024-25 ರ ವೇಳೆಗೆ ಇದು ಶೇ. 28.9 ಕ್ಕೆ ಏರಿಕೆಯಾಗಿದೆ. ಅಂದರೆ ಕೇವಲ 6 ವರ್ಷಗಳಲ್ಲಿ ಬಡತನದ ಪ್ರಮಾಣದಲ್ಲಿ ಶೇ. 7 ರಷ್ಟು ಜಿಗಿತ ಕಂಡುಬಂದಿದೆ. ಹಳ್ಳಿಗಳಲ್ಲಿ ಬಡತನದ ಪ್ರಮಾಣವು ಶೇಕಡಾ 28.2 ರಿಂದ 36.2 ಕ್ಕೆ ಏರಿದೆ. ನಗರ ಪ್ರದೇಶಗಳಲ್ಲೂ ಪರಿಸ್ಥಿತಿ ಬಿಗಡಾಯಿಸಿದ್ದು, ಬಡತನದ ಪ್ರಮಾಣವು ಶೇ. 11 ರಿಂದ 17.4 ಕ್ಕೆ ಏರಿಕೆಯಾಗಿದೆ.

ಪಾಕಿಸ್ತಾನದ ವಿವಿಧ ಪ್ರಾಂತ್ಯಗಳಲ್ಲಿ ಬಡತನದ ಸ್ಥಿತಿಗತಿ

  1. ಬಲೂಚಿಸ್ತಾನ್: ಇಲ್ಲಿ ಬಡತನದ ಪ್ರಮಾಣವು ಶೇ. 41.8 ರಿಂದ ಶೇ. 47 ಕ್ಕೆ ಏರಿಕೆಯಾಗಿದ್ದು, ದೇಶದಲ್ಲೇ ಅತ್ಯಂತ ಹೆಚ್ಚು ಬಡತನ ಹೊಂದಿರುವ ಪ್ರದೇಶವಾಗಿದೆ.
  2. ಸಿಂಧ್: ಶೇ. 24.5 ರಿಂದ ಶೇ. 32.6 ಕ್ಕೆ ಏರಿದೆ.
  3. ಖೈಬರ್ ಪಖ್ತುಂಖ್ವಾ: ಶೇ. 28.7 ರಿಂದ ಶೇ. 35.3 ಕ್ಕೆ ಹೆಚ್ಚಾಗಿದೆ.
  4. ಪಂಜಾಬ್: ಶೇ. 16.5 ರಿಂದ ಶೇ. 23.3 ಕ್ಕೆ ಏರಿಕೆಯಾಗಿದ್ದರೂ, ಬೇರೆ ಪ್ರಾಂತ್ಯಗಳಿಗೆ ಹೋಲಿಸಿದರೆ ಇಲ್ಲಿ ಬಡತನದ ತೀವ್ರತೆ ಸ್ವಲ್ಪ ಕಡಿಮೆ ಇದೆ.

ಇದನ್ನೂ ಓದಿ: ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ

ಬಡತನ ಹೆಚ್ಚಾಗಲು ಪ್ರಮುಖ ಕಾರಣಗಳೇನು?

ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಆರ್ಥಿಕ ಆಘಾತಗಳೇ ಇದಕ್ಕೆ ಕಾರಣ ಎಂದು ಆರ್ಥಿಕ ಸಮೀಕ್ಷಾ ವರದಿ ಹೇಳಿದೆ. ದಾಖಲೆ ಮಟ್ಟದ ಹಣದುಬ್ಬರ (ಬೆಲೆ ಏರಿಕೆ) ಮತ್ತು ಪಾಕಿಸ್ತಾನಿ ರೂಪಾಯಿ ಮೌಲ್ಯದ ಕುಸಿರುವುದು; ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ವಿಧಿಸಿರುವ ಕಠಿಣ ಆರ್ಥಿಕ ಸ್ಥಿರೀಕರಣ ಕ್ರಮಗಳು; ಭೀಕರ ಪ್ರವಾಹದಂತಹ ಹವಾಮಾನ ವೈಪರೀತ್ಯದ ವಿಕೋಪಗಳು; ಹಾಗೂ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಸಂಘರ್ಷಗಳ ಜಾಗತಿಕ ಪ್ರಭಾವವು ಬಡತನ ಹೆಚ್ಚಳಕ್ಕೆ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ.

ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ

ಬಡತನ ಹೆಚ್ಚಾಗುವುದರ ಜೊತೆಗೆ ಶ್ರೀಮಂತರು ಮತ್ತು ಬಡವರ ನಡುವಿನ ಆರ್ಥಿಕ ಅಸಮಾನತೆಯೂ (Income Inequality) ಹೆಚ್ಚಾಗಿದೆ. ದೇಶದ ಆದಾಯದ ಅಸಮಾನತೆಯನ್ನು ಅಳೆಯುವ ‘ಗಿನಿ ಕೋಫಿಷಿಯಂಟ್’ (Gini coefficient) ಸೂಚ್ಯಂಕವು 2018-19 ರಲ್ಲಿದ್ದ 28.4 ರಿಂದ 2024-25 ರ ವೇಳೆಗೆ 32.7 ಕ್ಕೆ ಏರಿಕೆಯಾಗಿದೆ. ಇದು ದೇಶದಲ್ಲಿ ಸಂಪತ್ತಿನ ಹಂಚಿಕೆ ಸರಿಯಾಗಿ ಆಗುತ್ತಿಲ್ಲ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ

ಭಾರತದಲ್ಲಿರುವಂತೆ ಪಾಕಿಸ್ತಾನದಲ್ಲೂ ಕೂಡ ಪ್ರತಿ ವರ್ಷ ಸರ್ಕಾರವು ತನ್ನ ದೇಶದ ಬಜೆಟ್ ಮಂಡಿಸುವ ಮುನ್ನ ಅಧಿಕೃತ ಆರ್ಥಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡುತ್ತದೆ. ಈ ವರದಿಯು ಮೂಲಭೂತ ಅಗತ್ಯಗಳ ವೆಚ್ಚದ (Cost of Basic Needs) ಆಧಾರದ ಮೇಲೆ ಬಡತನವನ್ನು ಲೆಕ್ಕ ಹಾಕುತ್ತದೆ. ವಿಶ್ವಬ್ಯಾಂಕ್ ವರದಿ ಪ್ರಕಾರ ಭಾರತದಲ್ಲಿ ಕಡುಬಡತನದ ಮಟ್ಟ ಶೇ 5-6ರಷ್ಟು ಇದ್ದರೆ, ಪಾಕಿಸ್ತಾನದಲ್ಲಿ ಅದು ಶೇ. 25ಕ್ಕಿಂತಲೂ ಹೆಚ್ಚು ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ! – Kannada News | 9th Class Student Gives Birth to Baby in Hostel at Sirs

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಆಕೆ 9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೇರಿರುವ ಸುದ್ದಿ ಕೇಳಿ ಶಾಕ್​​​ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

Source link

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಎಸ್ಪಿ ಪ್ರಶ್ನೆಗಳಿಗೆ ಪ್ರಾದೇಶಿಕ ಸಾರಿಗೆ ಆಯುಕ್ತರೇ ತಬ್ಬಿಬ್ಬು! – Kannada News | Lokayukta Raid on Bengaluru South District RTO Office: Illegal Sand Mining Exposed in Haveri

RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​Image Credit source: Tv9 Kannada

ರಾಮನಗರ, ಜೂನ್​​ 12: ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ರೇಡ್​​ ನಡೆದಿದೆ. ಲೋಕಾಯುಕ್ತ ಎಸ್ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, RTO ಕಚೇರಿಯಲ್ಲಿ ಅಧಿಕಾರಿಗಳು ಇಂಚಿಂಚೂ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ ಇದಾಗಿದೆ.

ಮುಖ್ಯಾಂಶಗಳು

  • ಬೆಂಗಳೂರು ದಕ್ಷಿಣ ಜಿಲ್ಲಾ RTO ಕಚೇರಿ ಸಿಬ್ಬಂದಿಗೆ ಲೋಕಾಯುಕ್ತ ಶಾಕ್​​
  • ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ಕಚೇರಿ ಮೇಲೆ ದಾಳಿ
  • ಒಂದು ವರ್ಷದ ಅವಧಿಯಲ್ಲಿ 3ನೇ ಬಾರಿ ನಡೆದ ಲೋಕಾಯುಕ್ತ ದಾಳಿ

ತಾಯಿಯ ಬದಲು ಮಗಳು ಕೆಲಸ!

ಇನ್ನು ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಆರ್​​ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳು ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 3 ತಿಂಗಳು ಕಳೆದರೂ ಸ್ಮಾರ್ಟ್ ಕಾರ್ಡ್​​ ವಿತರಿಸದೇ ಕಚೇರಿಯಲ್ಲೇ ಶೇಖರಣೆ ಮಾಡಿರುವುದು ಗೊತ್ತಾಗಿದೆ. ಏಜೆಂಟ್​ಗಳ ಮೂಲಕ ಬಂದರೇ ಮಾತ್ರ RTO ಕಚೇರಿಯಲ್ಲಿ ಕೆಲಸ ನಡೆಯುತ್ತೆ ಎಂಬ ಆರೋಪವೂ ಇದ್ದು, ಏಜೆಂಟ್​ಗಳ ನಡುಗೆ ಹೊಡೆದಾಟ ನಡೆದರೂ ಪ್ರಾದೇಶಿಕ ಸಾರಿಗೆ ಆಯುಕ್ತರು ದೂರು ನೀಡಿಲ್ಲ. ಕಚೇರಿಯಲ್ಲಿ ಗುತ್ತಿಗೆ ನೌಕರರ ದರ್ಬಾರ್ ನಡೆಯುತ್ತಿದ್ದು, ಎಸ್​​ಪಿ ಸ್ನೇಹಾ ಪ್ರಶ್ನೆಗಳಿಗೆ ಆರ್​​ಟಿಒ ಟಿ.ಎ.ಸತೀಶ್ ಬಾಬು ತಬ್ಬಿಬ್ಬಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್; ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?

ಹಾವೇರಿಯಲ್ಲೂ ಲೋಕಾಯುಕ್ತ ರೆಡ್​​

ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಗಳ ಮೇಲೆ ಹಾವೇರಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಣೇಬೆನ್ನೂರು ತಾಲ್ಲೂಕಿನ ನಿಟಪಳ್ಳಿ, ಚಂದಾಪುರ, ಬೆಲೂರು , ಐರಣಿ ಹರನಗಿರಿ, ಕೋಟಿಹಾಳ ಮತ್ತು ಚಿಕ್ಕಕುರವತ್ತಿ ಗ್ರಾಮದ ಬಳಿ ಸೇರಿ ಒಟ್ಟು 8 ಸ್ಥಳಗಳಲ್ಲಿ ಏಕಕಾಲಕ್ಕೆ ರೇಡ್​​ ನಡೆದಿದೆ. ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ಮಧುಸೂದನ್ ನೇತ್ರತ್ವದಲ್ಲಿ ದಾಳಿ ನಡೆದಿದ್ದು, ಸುಮಾರು 12,779 ಮೆಟ್ರಿಕ್ ಟನ್ ಮರಳು, 2 ಜೆಸಿಬಿ ಹಾಗೂ 4 ತೆಪ್ಪಗಳನ್ನ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:08 pm, Fri, 12 June 26

Source link

ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿಯಲ್ಲಿ ಜೆಡಿಎಸ್, ಕಾಂಗ್ರೆಸ್ ಹೈ ಅಲರ್ಟ್: ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆ – Kannada News | Karnataka MLC Election 2026: Cross Voting Fears Grip Congress and JDS Ahead of June 18 Polls; Resort Politics Likely

ರೆಸಾರ್ಟ್ ರಾಜಕೀಯ ಶುರುವಾಗೋ ಸಾಧ್ಯತೆImage Credit source: tv9

ಬೆಂಗಳೂರು, ಜೂನ್ 12: ಜೂನ್ 18ರಂದು ನಡೆಯಲಿರುವ ಕರ್ನಾಟಕ ವಿಧಾನಪರಿಷತ್ ಚುನಾವಣೆಯ (Karnataka MLC Election) ಕಾವು ಜೋರಾಗಿದ್ದು, ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಅಡ್ಡ ಮತದಾನ ಮತ್ತು ಕುದುರೆ ವ್ಯಾಪಾರದ ಭೀತಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್ (JDS) ಅನ್ನು ಆವರಿಸಿದೆ. ಶಾಸಕರನ್ನು ಹಿಡಿದಿಟ್ಟುಕೊಂಡು ಒಗ್ಗಟ್ಟು ಪ್ರದರ್ಶಿಸಲು ಎರಡೂ ಪಕ್ಷಗಳು ರೆಸಾರ್ಟ್ ರಾಜಕೀಯದ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಪ್ರತಿ ಶಾಸಕರ ಮತವೂ ನಿರ್ಣಾಯಕವಾಗಿದ್ದು, ಯಾವುದೇ ರೀತಿಯ ಮತ ವಿಭಜನೆ ಅಥವಾ ಅಡ್ಡ ಮತದಾನವನ್ನು ತಡೆಯುವುದು ಪಕ್ಷಗಳಿಗೆ ಸವಾಲಾಗಿದೆ.

ಮುಖ್ಯಾಂಶಗಳು

  • ಜೂನ್ 18ರ ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೋರಾದ ರಾಜಕೀಯ ಚಟುವಟಿಕೆ
  • ಶಾಸಕರ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್, ಜೆಡಿಎಸ್ ತಂತ್ರಗಾರಿಕೆ
  • ರೆಸಾರ್ಟ್ ರಾಜಕೀಯ ಶುರುವಾಗುವ ಸಾಧ್ಯತೆ

ಜೆಡಿಎಸ್ ಶಾಸಕರ ಸೆಳೆಯಲು ಕಾಂಗ್ರೆಸ್ ತಂತ್ರ

ವಿಶೇಷವಾಗಿ ಕಾಂಗ್ರೆಸ್ ಪಕ್ಷವು ತಮ್ಮ ಐದನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಜೆಡಿಎಸ್ ಶಾಸಕರ ಮತಗಳನ್ನು ಸೆಳೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರನ್ನು ಒಗ್ಗೂಡಿಸಿ, ಅವರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ರೆಸಾರ್ಟ್‌ಗೆ ಸ್ಥಳಾಂತರಿಸುವ ಕುರಿತು ಜೆಡಿಎಸ್ ವಲಯದಲ್ಲಿ ಗಂಭೀರ ಚರ್ಚೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲು ಇಂದು (ಜೂನ್ 12) ಸಂಜೆ ಶಾಸಕರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ರೆಸಾರ್ಟ್ ಪಾಲಿಟಿಕ್ಸ್ ಬಗ್ಗೆ ಪ್ರಮುಖ ನಿರ್ಧಾರ ಪ್ರಕಟವಾಗುವ ನಿರೀಕ್ಷೆಯಿದೆ.

ಇದೇ ರೀತಿ, ಕಾಂಗ್ರೆಸ್ ನಾಯಕರು ಕೂಡ ತಮ್ಮ ಶಾಸಕರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೆರೆಮರೆಯ ಕಸರತ್ತು ನಡೆಸುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಯಾರಿಗೂ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅಡ್ಡ ಮತದಾನವಾಗದಂತೆ ತಡೆಯುವುದು ಮತ್ತು ಗೆಲ್ಲುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯಲ್ಲಿ ಕುತ್ತು ಬಾರದಂತೆ ನೋಡಿಕೊಳ್ಳುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ.

ಇದನ್ನೂ ಓದಿ: ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಈ ಚುನಾವಣೆಯಲ್ಲಿ ಕಾಂಗ್ರೆಸ್ ಐದನೇ ಅಭ್ಯರ್ಥಿಯನ್ನು ಗೆಲ್ಲಿಸುವ ಗುರಿ ಹೊಂದಿದ್ದರೆ, ಜೆಡಿಎಸ್ ಕೂಡ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶ್ರಮಿಸುತ್ತಿದೆ. ಬಿಜೆಪಿ ಕೂಡ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಜವಾಬ್ದಾರಿ ಅದರ ಮೇಲೂ ಇದೆ. ಆದರೆ, ಪ್ರಮುಖವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿಯ ವಾತಾವರಣ ಸೃಷ್ಟಿಯಾಗಿದ್ದು, ಈ ಎರಡೂ ಪಕ್ಷಗಳ ನಾಯಕರ ಮೇಲೆ ಶಾಸಕರನ್ನು ಸುರಕ್ಷಿತವಾಗಿರಿಸುವ ದೊಡ್ಡ ಜವಾಬ್ದಾರಿ ಇದೆ. ಒಟ್ಟಾರೆಯಾಗಿ, ಪರಿಷತ್ ಚುನಾವಣೆಯಲ್ಲಿ ಕುದುರೆ ವ್ಯಾಪಾರದ ಆತಂಕ ಮತ್ತು ಅಡ್ಡ ಮತದಾನದ ಭೀತಿಯನ್ನು ಎದುರಿಸಲು ರೆಸಾರ್ಟ್ ರಾಜಕೀಯ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ – Kannada News | NEET UG 2026 Re Exam to be held on 21st June; Hall Ticket to release on 14 June; Read more details

ನವದೆಹಲಿ, ಜೂನ್ 21:  ನೀಟ್ ಯುಜಿ(NEET UG) 2026ರ ಮರು ಪರೀಕ್ಷೆಯು ಜೂನ್ 21ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗಾಗಿ ಎನ್​ಟಿಎ ವಿಶೇಷ ಕ್ರಮಗಳನ್ನು ಘೋಷಿಸಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆ ನಡೆಯಲಿದೆ. ನೀಟ್ ಯುಜಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಜೂನ್ 14 ರಂದು ಬಿಡುಗಡೆ ಮಾಡಲಾಗುವುದು. ರಫ್​ ವರ್ಕ್​ಗೆ ಕೂಡ ಹೆಚ್ಚು ಸ್ಥಳಾವಕಾಶವನ್ನು ಪೇಪರ್​ನಲ್ಲಿ ನೀಡಲಾಗುತ್ತದೆ.

ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದ ನಂತರ, ಅಭ್ಯರ್ಥಿಗಳು ಅಧಿಕೃತ NTA ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅವುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – neet.nta.nic.in ನಲ್ಲಿ ನೀಟ್ ಯುಜಿ ಮರು-ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು.

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಎದುರಾಗುವ ಅತಿ ದೊಡ್ಡ ಸವಾಲೆಂದರೆ ಸಮಯದ ಅಭಾವ. ಇದನ್ನು ಮನಗಂಡಿರುವ ಎನ್‌ಟಿಎ, ಈ ಬಾರಿ ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಸರಿಯಾಗಿ ಓದಿ, ಯೋಚಿಸಿ ಉತ್ತರಿಸಲು ಅನುಕೂಲವಾಗುವಂತೆ ಹೆಚ್ಚುವರಿ ಸಮಯವನ್ನು ನೀಡಲು ನಿರ್ಧರಿಸಿದೆ. ಈ ಕ್ರಮದಿಂದಾಗಿ ವಿದ್ಯಾರ್ಥಿಗಳು ಯಾವುದೇ ಆತಂಕ ಅಥವಾ ತರಾತುರಿಯಿಲ್ಲದೆ ನಿರಾಳವಾಗಿ ಪರೀಕ್ಷೆ ಬರೆಯಬಹುದು.

ಮತ್ತಷ್ಟು ಓದಿ: NEET-UG 2026: ನೀಟ್ ಯುಜಿ ಪರೀಕ್ಷೆ; ಹೇಳಿಕೆ ಆಧಾರಿತ ಉದ್ದನೆಯ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಹೈರಾಣು!

ಇತ್ತೀಚಿನ ಗೊಂದಲಗಳಿಗೆ ತೆರೆ ಎಳೆದು, ಪ್ರತಿಯೊಬ್ಬ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗೂ ಸಮಾನ ಹಾಗೂ ನ್ಯಾಯಯುತವಾದ ಅವಕಾಶ ಸಿಗಬೇಕು ಎಂಬ ಜವಾಬ್ದಾರಿಯಿಂದ ಈ ಮರು ಪರೀಕ್ಷೆಯನ್ನು ಆಯೋಜಿಸಲಾಗಿದೆ. ಎನ್‌ಟಿಎ ಕೈಗೊಂಡಿರುವ ಈ ಕಟ್ಟುನಿಟ್ಟಿನ ಹಾಗೂ ಪಾರದರ್ಶಕ ಕ್ರಮಗಳು ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ.

ಜೂನ್ 21 ರಂದು ನಡೆಯಲಿರುವ ಈ ಪರೀಕ್ಷೆಯು ಕೇವಲ ಮರು ಪರೀಕ್ಷೆಯಲ್ಲ, ಬದಲಿಗೆ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಸಿಗಲಿರುವ ನ್ಯಾಯಯುತ ವೇದಿಕೆಯಾಗಿದೆ. ಎನ್‌ಟಿಎ ತಂದಿರುವ ಈ ಹೊಸ ಸುಧಾರಣೆಗಳು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡವನ್ನು ಗಣನೀಯವಾಗಿ ಕಡಿಮೆ ಮಾಡಿದ್ದು, ದೇಶದ ಭವಿಷ್ಯದ ವೈದ್ಯರು ಅತ್ಯುನ್ನತ ಯಶಸ್ಸು ಸಾಧಿಸಲು ಹಾದಿ ಸುಗಮಗೊಳಿಸಿದೆ.

ಪರೀಕ್ಷಾ ಪ್ರವೇಶ ಪ್ರತಿಯನ್ನು ಡೌನ್​ಲೋಡ್ ಮಾಡುವುದು ಹೇಗೆ?

  • ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು, ಮೊದಲು ನೀವು NTA ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ಇದರ ನಂತರ, ಅಭ್ಯರ್ಥಿಗಳು ವೆಬ್‌ಸೈಟ್‌ನ ಮುಖಪುಟದಲ್ಲಿ ಅಭ್ಯರ್ಥಿ ಚಟುವಟಿಕೆ ವಿಭಾಗದ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಈಗ ನೀವು NEET UG ಮರು-ಪರೀಕ್ಷೆಯ ಪ್ರವೇಶ ಕಾರ್ಡ್ 2026 ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  • ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಲಾಗಿನ್ ವಿವರಗಳನ್ನು ನಮೂದಿಸಬೇಕಾಗುತ್ತದೆ.
  • ಲಾಗಿನ್ ವಿವರಗಳನ್ನು ನಮೂದಿಸಿದ ನಂತರ, ಪ್ರವೇಶ ಪತ್ರವು ಪರದೆಯ ಮೇಲೆ ತೆರೆಯುತ್ತದೆ.
  • ಅಂತಿಮವಾಗಿ, ಅದರ ಮುದ್ರಣವನ್ನು ತೆಗೆದುಕೊಳ್ಳಲು ಮರೆಯದಿರಿ.

ನೀಟ್ ಯುಜಿ ಪರೀಕ್ಷೆಯು ಜೂನ್ 21 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.  ಸುಮಾರು 2.2 ಮಿಲಿಯನ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪ್ರವೇಶ ಪತ್ರವನ್ನು ನೀಡಿದ ನಂತರ ಅದರಲ್ಲಿ ನೀಡಲಾದ ಪ್ರಮುಖ ಮಾರ್ಗಸೂಚಿಗಳನ್ನು ಎಲ್ಲಾ ಅಭ್ಯರ್ಥಿಗಳು ಎಚ್ಚರಿಕೆಯಿಂದ ಓದಲು ಸೂಚಿಸಲಾಗಿದೆ. ಅಲ್ಲದೆ, ಪರೀಕ್ಷಾ ದಿನದಂದು ಅಗತ್ಯ ದಾಖಲೆಗಳೊಂದಿಗೆ ಪ್ರವೇಶ ಪತ್ರವನ್ನು ಕೊಂಡೊಯ್ಯಿರಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ – Kannada News | Mallikarjun Kharge Receives Rajya Sabha Victory Certificate at Vidhana Soudha

ಬೆಂಗಳೂರು, ಜೂನ್​​ 12: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು (ಜೂನ್​​ 12) ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಪ್ರಮಾಣಪತ್ರ ಸ್ವೀಕರಿಸುವ ವೇಳೆ ಅಪಾರ ಸಂಖ್ಯೆಯ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು

ಬೀದರ್, ಜೂ.12: ಮಾವಿನ ಹಣ್ಣು ತಿಂದು ಅಸ್ವಸ್ಥಗೊಂಡಿದ್ದ ಬೀದರ್ ಮೂಲದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ನಿವಾಸಿಗಳು ಆಗಿರುವ ಭವಾನಿ ವೈಜಿನಾಥ ಮೇತ್ರೆ (17) ಮತ್ತು ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟ ದುರ್ದೈವಿ ಬಾಲಕಿಯರು ಎಂದು ಹೇಳಲಾಗಿದೆ. ಮನೆಯಲ್ಲಿ ಊಟದ ಬಳಿಕ ಎಲ್ಲರೂ ಸೇರಿ ಮಾವಿನಹಣ್ಣು ತಿಂದಿದ್ದಾರೆ. ಸ್ವಲ್ಪ ಹೊತ್ತಿನ ನಂತರ ತಾಯಿ ಇಂದುಮತಿ ಹಾಗೂ ಐವರು ಹೆಣ್ಣುಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಾವು ತಿಂದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಎಲ್ಲರಲ್ಲೂ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಎಲ್ಲರನ್ನೂ ತಕ್ಷಣ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮೇತ್ರೆ, ಸಂಧ್ಯಾರಾಣಿ ಮೇತ್ರೆ ಸಾವನ್ನಪ್ಪಿದ್ದಾರೆ. ಇನ್ನು ಮತ್ತೊಬ್ಬ ಸಹೋದರಿ ವಿಜಯಶ್ರೀ(19)ಗೆ ಚಿಕಿತ್ಸೆ ಮುಂದುವರಿದೆ. ಇನ್ನು ತಾಯಿ ಮತ್ತು ವಿಜಯಶ್ರೀ ಚೇತರಿಕೆಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಭವಾನಿ ಮೇತ್ರೆ, ಸಂಧ್ಯಾರಾಣಿ ಮೇತ್ರೆ ಅವರ ದೇಹವನ್ನು ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ. ಈ ವರದಿ ಬಂದ ನಂತರವೇ ಸತ್ಯಾಂಶ ಬಹಿರಂಗವಾಗಲಿದೆ. ಈ ಪ್ರಕರಣದ ಬಗ್ಗೆ ಹೈದರಾಬಾದ್​ನ ನಾರಾಯಣಗುಡ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಈ ಘಟನೆ ಮೂರು ದಿನದ ಹಿಂದೆಯೇ ನಡೆದಿದೆ ಎಂದು ಹೇಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Kannada News | Grant Discrimination Row: Former CM Siddaramaiah Clarifies Fund Allocation Criteria for Backward Class Institutions

ಬೆಂಗಳೂರು, ಜೂನ್​​ 12: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನೀಡಲಾಗಿದ್ದ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ – ಸಂಸ್ಥೆಗಳಿಗೆ 71.85 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿಯನ್ನು ಇಲಾಖೆ ನೀಡಿದೆ. ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ ಎಂದವರು ತಿಳಿಸಿದ್ದಾರೆ.

ಎಕ್ಸ್​​ ಪೋಸ್ಟ್​​ ಮೂಲಕ ಮಾಹಿತಿ

ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ; ಅಷ್ಟಕ್ಕೂ ಆಗಿದ್ದೇನು?

ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯಿತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ. ಈ ಆದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್‌, ಸಂಘ ಸಂಸ್ಥೆಯ 3 ವರ್ಷದ ಆಡಿಟ್‌ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ.

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು. ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2A ನಲ್ಲಿ ಬರುವ ಜಾತಿಗಳಿಗೆ ಶೇ.70ರಷ್ಟು ಮತ್ತು ಪ್ರವರ್ಗ 3A ಮತ್ತು 3Bನಲ್ಲಿ ಬರುವ ಜಾತಿಗಳಿಗೆ ಶೇ.30ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2A ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:08 pm, Fri, 12 June 26

Source link