Category Archives: Blog

Your blog category

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ – Kannada News | Dalit Leaders Condemn MLA Chandru Lamani’s Lokayukta Detention, Call it Political Plot

ಗದಗ, ಫೆ.21: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ದಲಿತ ಮತ್ತು ಹಿಂದುಳಿದ ವರ್ಗದ ನಾಯಕರು ರಾಜಕೀಯವಾಗಿ ಬೆಳೆಯುವುದನ್ನು ಸಹಿಸದ ಶಕ್ತಿಗಳು ಈ ರೀತಿಯ ಲೋಕಾಯುಕ್ತ ಟ್ರ್ಯಾಪ್‌ಗಳ ಮೂಲಕ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುತ್ತಿವೆ. ಇಬ್ಬರು ಪ್ರಮುಖ ನಾಯಕರ ಮೇಲೆ ನಡೆಯುತ್ತಿರುವ ಈ ರೀತಿಯ ಒತ್ತಡದ ತಂತ್ರಗಳನ್ನು ಲಂಬಾಣಿ ಮತ್ತು ದಲಿತ ಸಮಾಜ ಸಹಿಸುವುದಿಲ್ಲ. ಇವರ ವಿರುದ್ಧದ ಸಂಚನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಪರೂಪದ ಖನಿಜ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಬ್ರೆಜಿಲ್; 20 ಬಿಲಿಯನ್ ಡಾಲರ್ ವ್ಯಾಪಾರದ ಗುರಿ – Kannada News | Reflection Of Trust India signs critical minerals deal with Brazil set 20 Billion Dollar trade goal

ನವದೆಹಲಿ, ಫೆಬ್ರವರಿ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ತಂತ್ರಜ್ಞಾನ, ಅಪರೂಪದ ಭೂಮಿಯ ಖನಿಜಗಳು ಮತ್ತು ಗಣಿಗಾರಿಕೆ ಸಹಕಾರವನ್ನು ಹೆಚ್ಚಿಸಲು ಪ್ರಮುಖ ಒಪ್ಪಂದಗಳಿಗೆ ಎರಡೂ ದೇಶಗಳ ನಾಯಕರು ಸಹಿ ಹಾಕಿದ್ದಾರೆ.

ವಿಶ್ವದ ಅಪರೂಪದ-ಭೂಮಿ ಮತ್ತು ನಿರ್ಣಾಯಕ ಖನಿಜಗಳ ಗಣಿಗಾರಿಕೆ ಮತ್ತು ಸಂಸ್ಕರಣೆಯಲ್ಲಿ ಚೀನಾ ಪ್ರಾಬಲ್ಯ ಹೊಂದಿದೆ. ಇತ್ತೀಚಿನ ತಿಂಗಳುಗಳಲ್ಲಿ ಅಮೆರಿಕವು ಬೆಳೆಯುತ್ತಿರುವ ಉದ್ಯಮದ ಮೇಲಿನ ತನ್ನ ಹಿಡಿತವನ್ನು ಸಾಧಿಸಲು ರಫ್ತುಗಳ ಮೇಲೆ ತನ್ನ ಹಿಡಿತವನ್ನು ಹೆಚ್ಚಿಸಿದೆ. ವಿಶ್ವದ ಎರಡನೇ ಅತಿದೊಡ್ಡ ನಿರ್ಣಾಯಕ ಖನಿಜಗಳನ್ನು ಹೊಂದಿರುವ ದೇಶವಾಗಿರುವ ಬ್ರೆಜಿಲ್‌ ಜೊತೆ ಭಾರತ ಒಪ್ಪಂದ ಮಾಡಿಕೊಳ್ಳುವ ಮೂಲಕ ಚೀನಾದ ಅವಲಂಬನೆಯಿಂದ ಹೊರಬರಲು ಹೆಜ್ಜೆಯಿಟ್ಟಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ

ಮೋದಿ ಹಾಗೂ ಲುಲಾ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ ಮೊದಲು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು. ಅಲ್ಲಿ ಅವರು ಜಾಗತಿಕ ದಕ್ಷಿಣದ 2 ಪ್ರಮುಖ ಪ್ರಜಾಪ್ರಭುತ್ವಗಳ ನಡುವೆ ವಿಸ್ತರಿಸುತ್ತಿರುವ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಒತ್ತಿ ಹೇಳಿದರು.

“ಮುಂದಿನ 5 ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಡಾಲರ್​ಗಿಂತ ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ. ನಮ್ಮ ವ್ಯಾಪಾರವು ಕೇವಲ ಒಂದು ಅಂಕಿ ಅಂಶವಲ್ಲ; ಇದು ನಂಬಿಕೆಯ ಪ್ರತಿಬಿಂಬವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ

ಈ ಭೇಟಿಯ ಸಮಯದಲ್ಲಿ 3 ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಭವಿಷ್ಯಕ್ಕಾಗಿ ಡಿಜಿಟಲ್ ಪಾಲುದಾರಿಕೆಯ ಕುರಿತಾದ ಘೋಷಣೆ, ಅಪರೂಪದ ಭೂಮಿ ಮತ್ತು ನಿರ್ಣಾಯಕ ಖನಿಜಗಳಲ್ಲಿನ ಸಹಕಾರದ ಕುರಿತಾದ ಒಪ್ಪಂದ, ಗಣಿಗಾರಿಕೆ ಮತ್ತು ಉಕ್ಕಿನ ಪೂರೈಕೆ ಸರಪಳಿಗಳ ಕುರಿತಾದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಕೃತಕ ಬುದ್ಧಿಮತ್ತೆ (ಎಐ), ಸೂಪರ್‌ಕಂಪ್ಯೂಟರ್‌ಗಳು, ಸೆಮಿಕಂಡಕ್ಟರ್‌ಗಳು ಮತ್ತು ಬ್ಲಾಕ್‌ಚೈನ್ ಸೇರಿದಂತೆ ತಂತ್ರಜ್ಞಾನಗಳಲ್ಲಿನ ಸಹಯೋಗವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಒತ್ತಿ ಹೇಳಿದರು.
ಬ್ರೆಜಿಲ್ ಅಧ್ಯಕ್ಷ ಲುಲಾ ಭಾರತವನ್ನು “ಡಿಜಿಟಲ್ ಸೂಪರ್‌ಪವರ್” ಮತ್ತು ಬ್ರೆಜಿಲ್ ಅನ್ನು ನವೀಕರಿಸಬಹುದಾದ ಇಂಧನ ನಾಯಕ ಎಂದು ಬಣ್ಣಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ – Kannada News | Bagalkote Stone pelting case: Hindu activists arrested; Muthalik, Kerehalli restricted

ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು.

ಇಬ್ಬರು ಹಿಂದೂ ಕಾರ್ಯಕರ್ತ ಬಂಧನ

ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಖಾಸಗಿ ಆಸ್ತಿಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಇಬ್ಬರು ಹಿಂದು ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅಶೋಕ್​ ವಶಕ್ಕೆ ಪಡೆಯಲು ಬೈಕ್​ ಹಿಂಬಾಲಿಸಿದಾಗ ಬಿದ್ದು ಗಾಯ ಮಾಡಿಕೊಂಡಿದ್ದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದಾರೆ. ಕಲ್ಲು ಎಸೆಯುವ ವಿಡಿಯೋ, ಫೋಟೋ ಸಾಕ್ಷಿ ಆಧರಿಸಿ ಬಂಧಿಸಿರುವ ಪೊಲೀಸರು ಸದ್ಯಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ನಿರ್ಬಂಧ

ಕಲ್ಲೆಸೆತ ಕೇಸ್​​ ವಿಚಾರವಾಗಿ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​  ಮುತಾಲಿಕ್ ಮತ್ತು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ನಿರ್ಬಂಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಸಮಾಜದಲ್ಲಿ ಅಶಾಂತಿ ಹರಡಬಾರದೆಂಬ ಮುನ್ನೆಚ್ಚೆರಿಕೆಯಿಂದ ಕ್ರಮ ಎಂದು ಸಬೂಬು ನೀಡಿ ಡಿಸಿ ಸಂಗಪ್ಪ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಇಂದಿನಿಂದ ಮಾ.21ರವರೆಗೆ ಇಬ್ಬರಿಗೂ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಇನ್ನು ನಿಷೇಧಾಜ್ಞೆ ನಡುವೆ ನವನಗರದಲ್ಲಿ ವಿರಾಟ ಹಿಂದೂ ಸಮಾವೇಶ ಅದ್ಧೂರಿಯಾಗಿ ನಡೆಯಿತು. ಶೋಭಾಯಾತ್ರೆಯಲ್ಲಿ ಪುಟಾಣಿ ಮಕ್ಕಳ ಭಜನೆ ಗಮನ ಸೆಳೆಯಿತು. ಸಂಸದರು, ಮಾಜಿ ಶಾಸಕರು ಯಾತ್ರೆಯಲ್ಲಿ ಭಾಗಿಯಾಗಿದ್ದರು. ಇನ್ನು ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರೇಡ್ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:56 pm, Sat, 21 February 26

Source link

‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ – Kannada News | Ravi Basrur Gets 35 Lakh Rolex from Tollywood Star Vishwak Sen for Cult Music

ಸಂಗೀತ ಸಂಯೋಜಕ ರವಿ ಬಸ್ರೂರು ಅವರಿಗೆ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬೇಡಿಕೆ ಇದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಅವರಿಗೆ ಪರಭಾಷೆಯಿಂದಲೂ ಆಫರ್​​​ಗಳು ಬರುತ್ತಿವೆ. ಹೀಗಿರುವಾಗಲೇ ರವಿ ಬಸ್ರೂರಿಗೆ ಟಾಲಿವುಡ್ ಹೀರೋ 35 ಲಕ್ಷ ರೂಪಾಯಿಯ ರೊಲೆಕ್ಸ್ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ವಾಚ್ ಅನ್ನು ರವಿ ಅವರು ಎಲ್ಲರ ಎದುರು ತೋರಿಸಿದ್ದಾರೆ.

ವಿಶ್ವಕ್​ಸೇನ್ ಅವರು ‘#ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅವರದ್ದೇ ನಿರ್ದೇಶನ ಕೂಡ ಇದೆ. ವಿಶ್ವಕ್​ಸೇನ್ ಹಾಗೂ ಇತರ ಗೆಳೆಯರು ‘#ಕಲ್ಟ್’ ಹೆಸರಿನ ಪಾಸ್ ತೆಗೆದುಕೊಂಡು ಪಬ್ ಒಂದಕ್ಕೆ ತೆರಳುತ್ತಾರೆ. ಅಲ್ಲಿ ಗೇಮ್ ಶುರುವಾಗುತ್ತದೆ. ಗೇಮ್​​ನಲ್ಲಿ ಸೋತವರನ್ನು ಕೊಲ್ಲಲಾಗುತ್ತದೆ. ಸೇಮ್ ಟು ಸೇಮ್ ‘ಸ್ಕ್ವಿಡ್ ಗೇಮ್’ ವೆಬ್ ಸರಣಿಯ ರೀತಿಯಲ್ಲೇ. ಟೀಸರ್ ಉದ್ದಕ್ಕೂ ಹಿಂಸೆಯನ್ನು ತೋರಿಸಲಾಗಿದೆ. ಇದನ್ನು ನೋಡಿದವರಿಗೆ ಒಮ್ಮೆ ಎದೆ ಝಲ್ ಎನಿಸದೆ ಇರದು.

ಈ ಟೀಸರ್ ಲಾಂಚ್ ಈವೆಂಟ್​​ನಲ್ಲಿ ರವಿ ಬಸ್ರೂರು ಕೂಡ ಇದ್ದರು. ರವಿ ಅವರ ಕೆಲಸವನ್ನು ವಿಶ್ವಕ್ ಸೇನ್ ಹೊಗಳಿದರು. ಈ ಚಿತ್ರದಲ್ಲಿರೋ ಕ್ರೂರತೆ ವೈಭವೀಕರಣ ಆಗಲು ಮ್ಯೂಸಿಕ್ ಸಹಕಾರಿ ಆಗಿದೆ ಎನ್ನುತ್ತಾರೆ ವಿಶ್ವಕ್​ಸೇನ್. ಹೀಗಾಗಿ, 35 ಲಕ್ಷದ ವಾಚ್​​ನ ಕೊಟ್ಟರು. ಈ ಮೂಲಕ ಅವರು ಧನ್ಯವಾದ ಹೇಳಿದರು. ಸಾಮಾನ್ಯವಾಗಿ ನಿರ್ಮಾಪಕರು, ನಿರ್ದೇಶಕರು ಅಥವಾ ಸಿನಿಮಾ ಹೀರೋಗಳಿಗೆ ಕಾರ್ ಅನ್ನು ಗಿಫ್ಟ್ ಕೊಡೋದು ವಾಡಿಕೆ. ಆದರೆ, ರಿಲೀಸ್​​​ಗೆ ಮೊದಲೇ ನಿರ್ದೇಶಕರೊಬ್ಬರು ಸಂಗೀತ ಸಂಯೋಜಕನಿಗೆ ಈ ರೀತಿಯ ದುಬಾರಿ ವಾಚ್ ಕೊಟ್ಟಿದ್ದು ಅಪರೂಪ ಎನಿಸಿಕೊಂಡಿದೆ.

ಇದನ್ನೂ ಓದಿ: ‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್

‘ಟಾಕ್ಸಿಕ್’ ಸಿನಿಮಾ ಮೂಲಕ ರವಿ ಬಸ್ರೂರು ಅವರು ಗಮನ ಸೆಳೆಯಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ಯಶ್ ಹೀರೋ. ಈ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಟೀಸರ್​​ಗೆ ಸಂಗೀತವನ್ನು ರವಿ ಅವರೇ ನೀಡಿದ್ದಾರೆ. ಹಿನ್ನೆಲೆ ಸಂಗೀತಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ – Kannada News | T20 World Cup 2026 Super 8: New Zealand Pakistan Match Canceled Due to Rain

2026 ರ ಟಿ20 ವಿಶ್ವಕಪ್ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದೆ. ಅಂದರೆ ಗುಂಪು ಹಂತ ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 8 ಸುತ್ತು ಶುರುವಾಗಿದೆ. ಗುಂಪು ಹಂತದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿವೆ. ಈ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯ ಇಂದು ನಡೆಯಬೇಕಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿತ್ತು.ಆ ಪ್ರಕಾರ, ಉಭಯ ತಂಡಗಳ ನಡುವೆ ಟಾಸ್ ಕೂಡ ನಡೆಯಿತು. ಅದರೆ ಟಾಸ್ ಬಳಿಕ ಎಂಟ್ರಿಕೊಟ್ಟ ವರುಣರಾಯ ಒಂದೇ ಒಂದು ಎಸೆತವನ್ನು ಎಸೆಯಲು ಅನುವು ಮಾಡಿಕೊಡಲಿಲ್ಲ. ಇದರ ಪರಿಣಾಮವಾಗಿ ಪಂದ್ಯವು ಒಂದೇ ಒಂದು ಎಸೆತವನ್ನು ಕಾಣದೆ ರದ್ದಾಯಿತು.

Source link

ಲಂಚ ಪಡೆಯುವಾಗ ಬಿಜೆಪಿ ಶಾಸಕ ಲಾಕ್​​: ಚಂದ್ರು ಲಮಾಣಿಯಿಂದ ಧಮ್ಕಿ; ಗುತ್ತಿಗೆದಾರ ನೀಡಿದ ದೂರಿನಲ್ಲೇನಿದೆ? – Kannada News | BJP MLA arrested while accepting bribe; Chandru Lamani issues threat; what complaint did the contractor file

ಬಿಜೆಪಿ ಶಾಸಕ ಚಂದ್ರು ಲಮಾಣಿ Image Credit source: moneycontrol

ಗದಗ, ಫೆಬ್ರವರಿ 21: ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಕೆರಳಿದ್ದಾರೆ. ಕಮಿಷನ್​​​ ದಂಧೆ ಜೋರಾಗಿದೆ ಅಂತ ಆರೋಪ ಮಾಡುತ್ತಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಅಸ್ತ್ರ ಮಾಡ್ಕೊಂಡು ವಾಗ್ದಾಳಿ ಮಾಡುತ್ತಿದ್ದಾರೆ. ಇಂತಹ ಹೊತ್ತಲ್ಲಿ ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani), ಗುತ್ತಿಗೆದಾರನಿಂದ ಕಮಿಷನ್ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಸದ್ಯ ಇದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಫೆ 18ರಂದೇ ಲೋಕಾಯುಕ್ತಕ್ಕೆ ಗುತ್ತಿಗೆದಾರ ವಿಜಯರಾಜ ಎಸ್ ಪೂಜಾರ ದೂರು ನೀಡಿದ್ದರು. ಜೊತೆಗೆ ಚಂದ್ರು ಲಮಾಣಿ ಧಮ್ಕಿ ಹಾಕಿದ್ದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗುತ್ತಿಗೆದಾರ ನೀಡಿದ್ದ ದೂರಿನಲ್ಲೇನಿದೆ?

ಫೆಬ್ರವರಿ 18ರಂದು ಗದಗ ಜಿಲ್ಲೆಯ ಗದಗ ತಾಲೂಕಿನ ಚಿಂಚಲಿ ಗ್ರಾಮದ ಪ್ರಥಮ ದರ್ಜೆ ಸಿವಿಲ್ ಗುತ್ತಿಗೆದಾರ ವಿಜಯರಾಜ ಎಸ್ ಪೂಜಾರ ಗದಗ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದಾರೆ. ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳನ್ನು ಮಾಡುತ್ತಿದ್ದು, 2025ರ ಜುಲೈ ತಿಂಗಳಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಲಕ್ಷ್ಮೀಶ್ವರ ತಾಲೂಕಿ ಸಂಕದಾಳ ಗ್ರಾಮದಲ್ಲಿ ಹಳ್ಳಕ್ಕೆ ತಡೆಗೋಡೆ ನಿರ್ಮಿಸುವ ಎರಡು ಕಾಮಗಾರಿಗಳನ್ನು ಮಾಡಲು ಆದೇಶ ಪಡೆದಿರುತ್ತಾರೆ.

ಇದನ್ನೂ ಓದಿ: ಗದಗ: 11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ

ಈ ಕಾಮಗಾರಿಗಳನ್ನು ಮಾಡಲು ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಎಂಎಲ್​​ಎ ಚಂದ್ರು ಲಮಾಣಿ ತೊಂದರೆ ಮಾಡುತ್ತಿದ್ದು, ಫಿರ್ಯಾದಿದಾರರು ಅವರನ್ನು ಬೇಟಿಯಾದಾಗ ಶಾಸಕರು ಹಾಗೂ ಅವರ ಪಿ.ಎ ಮಂಜುನಾಥ್​ ವಾಲ್ಮೀಕಿ ಮತ್ತು ಶಾಸಕರ ಸಂಬಂಧಿ ಗುರು ಲಮಾಣಿ ಗುತ್ತಿಗೆದಾರರಿಗೆ ಈ ಎರಡು ಕಾಮಗಾರಿಗಳನ್ನು ತಮಗೆ ತಿಳಿಸದೇ ಏಕೆ ಮಾಡುತ್ತಿದ್ದೀರಾ, ಈ ಟೆಂಡರ್ ರದ್ದು ಮಾಡಿಸುತ್ತೇವೆ. 12% ಕಮಿಷನ್ ಕೊಟ್ಟರೆ ಮಾತ್ರ ನಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ಬಿಡುತ್ತೇವೆ. ಇಲ್ಲದಿದ್ದರೆ ರೌಡಿಗಳನ್ನು ಕಳುಹಿಸಿ ಬುದ್ದಿ ಕಲಿಸುತ್ತೇವೆ ಎಂದು ಧಮಕಿ ಹಾಕಿರುತ್ತಾರೆ ಹಾಗೂ ಎರಡು ಕಾಮಗಾರಿಗಳಿಗೆ ಒಟ್ಟು 11 ಲಕ್ಷ ರೂ ಹಣವನ್ನು ಲಂಚವಾಗಿ ಕಮಿಷನ್ ರೂಪದಲ್ಲಿ ಕೊಡಲು ಒತ್ತಾಯ ಮಾಡಿರುತ್ತಾರೆ.

ಈ ಬಗ್ಗೆ ಫಿರ್ಯಾದಿದಾರರು ನೀಡಿದ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದೂರಿನನ್ವಯ ಇಂದು ಮಧ್ಯಾಹ್ನ 02 ಗಂಟೆಯ ಸುಮಾರಿಗೆ ಫಿರ್ಯಾದಿದಾರರಿಂದ ಮೇಲ್ಕಂಡ ಮೂರು ಜನ ಆಪಾದಿತರು ಲಂಚದ ಹಣವಾಗಿ 5 ಲಕ್ಷ ರೂಗಳನ್ನು ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ದಸ್ತಗಿರಿ ಆಗಿರುತ್ತಾರೆ.

ಇದನ್ನೂ ಓದಿ: ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ

ಈ ಪ್ರಕರಣದಲ್ಲಿ ಎಡಿಜಿಪಿ ಮನೀಷ ಕರ್ಬಿಕರ್, ಐಜಿಪಿ ಸುಬ್ರಹ್ಮಣೇಶ್ವರ ರಾವ್, ಎಸ್.ಟಿ.ಸಿದ್ದಲಿಂಗಪ್ಪ, ಎಸ್.ಪಿ ಕರ್ನಾಟಕ ಲೋಕಾಯುಕ್ತ ಧಾರವಾಡ ರವರ ಮಾರ್ಗದರ್ಶನದಲ್ಲಿ ಗದಗ ಮತ್ತು ಧಾರವಾಡ ಲೋಕಾಯುಕ್ತ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಯಿಂದ ಕಾರ್ಯಚರಣೆ ಮಾಡಿದ್ದು, ಸದ್ಯ ತನಿಖೆ ಮುಂದುವರೆದಿದೆ ಎಂದು ಲೋಕಾಯುಕ್ತ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್ – Kannada News | Chandru Lamani Lokayukta: Yatnal Claims Political Trap Against Banjara Leader

ವಿಜಯಪುರ, ಫೆ.21: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣವು ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೊಂದು ವ್ಯವಸ್ಥಿತವಾದ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಅವರು ಒಬ್ಬ ಒಳ್ಳೆಯ ವೈದ್ಯರು ಹಾಗೂ ಉತ್ತಮ ಮನುಷ್ಯ. ಅವರು ಕೇವಲ ಎರಡು-ಮೂರು ಲಕ್ಷ ರೂಪಾಯಿಗಾಗಿ ಕೈವೊಡ್ಡುವಂತಹ ಸಣ್ಣ ವ್ಯಕ್ತಿತ್ವದ ಮನುಷ್ಯ ಅಲ್ಲವೇ ಅಲ್ಲ,” ಎಂದು ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ. ಬಂಜಾರ ಸಮಾಜದ ಉದಯೋನ್ಮುಖ ನಾಯಕನನ್ನು ಹತ್ತಿಕ್ಕುವ ಉದ್ದೇಶದಿಂದ ಈ ಟ್ರ್ಯಾಪ್ ಮಾಡಲಾಗಿದೆ. ವ್ಯವಸ್ಥಿತವಾಗಿ ಒಬ್ಬ ಬಂಜಾರ ಸಮಾಜದ ಶಾಸಕನನ್ನು ಸಿಲುಕಿಸಬೇಕು ಎಂಬ ಕಾರಣಕ್ಕೆ ಈ ಪ್ಲಾನ್ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಇಡೀ ಪ್ರಕರಣದ ಹಿಂದೆ ರಾಜಕೀಯ ಪ್ರೇರಿತ ಸಂಚು ಅಡಗಿದೆ. ಅವರನ್ನು ಸಿಲುಕಿಸಲೇಬೇಕು ಎಂಬ ಹಠದಿಂದ ಈ ಕಾರ್ಯಾಚರಣೆ ನಡೆಸಿದಂತೆ ಕಾಣುತ್ತಿದೆ ಎಂದು ಯತ್ನಾಳ್ ಅನುಮಾನ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ – Kannada News | Brazilian President Lula Condemns Terror Attacks In Kashmir Watch Video

ನವದೆಹಲಿ, ಫೆಬ್ರವರಿ 21: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ನವದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಬ್ರೆಜಿಲ್ ಅಧ್ಯಕ್ಷ ಲುಲಾ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗಳನ್ನು ಬಲವಾಗಿ ಖಂಡಿಸಿದ್ದಾರೆ. “ಭಯೋತ್ಪಾದನೆ ಯಾವುದೇ ರಾಷ್ಟ್ರೀಯತೆ ಅಥವಾ ಧರ್ಮದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಅವರು ಹೇಳಿದ್ದಾರೆ.

ಭಾರತ-ಬ್ರೆಜಿಲ್ ಒಗ್ಗಟ್ಟನ್ನು ಬಲಪಡಿಸಿದ ಅವರು, ಭಯೋತ್ಪಾದನೆಯ ವಿರುದ್ಧದ ಜಾಗತಿಕ ಪ್ರಯತ್ನಗಳು ನಿರ್ದಿಷ್ಟ ಸಮುದಾಯಗಳು ಅಥವಾ ರಾಷ್ಟ್ರಗಳೊಂದಿಗೆ ಹಿಂಸಾಚಾರವನ್ನು ಜೋಡಿಸುವುದನ್ನು ತಪ್ಪಿಸಬೇಕು ಎಂದು ಹೇಳಿದರು. ಇದಕ್ಕೂ ಮುನ್ನ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಲೂಲಾ ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಈ ಹೇಳಿಕೆ ನೀಡಲಾಗಿದೆ. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಈ ದಾಳಿಗೆ ಬ್ರೆಜಿಲ್ ಈ ಹಿಂದೆ ಸಂತಾಪ ಸೂಚಿಸಿತ್ತು ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೋಫಿ ಶೈನ್ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿಖರ್ ಧವನ್; ವಿಡಿಯೋ ವೈರಲ್ – Kannada News | Shikhar Dhawan’s Second Innings: Marries Sophie Shine in Traditional Ceremony

ಭಾರತ ಕ್ರಿಕೆಟ್ ತಂಡದ ಮಾಜಿ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ವೈಯಕ್ತಿಕ ಬದುಕಿನಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ವಾಸ್ತವವಾಗಿ ಫೆಬ್ರವರಿ 21 ರ ಶನಿವಾರದಂದು ತಮ್ಮ ಪ್ರೇಯಸಿ ಸೋಫಿ ಶೈನ್ ಅವರೊಂದಿಗೆ ಶಿಖರ್ ಧವನ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಶಿಖರ್ ಧವನ್​ಗೆ ಇದು ಎರಡನೇ ಮದುವೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ್ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ದಂಪತಿಗಳಿಬ್ಬರು 2023 ರಲ್ಲಿ ವಿಚ್ಛೇದನ ಪಡೆದಿದ್ದರು.

ಆ ಬಳಿಕ ಐರಿಶ್ ಮೂಲದ ಸೋಫಿ ಶೈನ್ ಜೊತೆ ಸುಮಾರು ಒಂದೂವರೆ ವರ್ಷದಿಂದ ಪ್ರೀತಿಯಲ್ಲಿ ಬಿದಿದ್ದ ಧವನ್, ಕಳೆದ ತಿಂಗಳು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈಗ, ಸುಮಾರು 40 ದಿನಗಳ ನಂತರ ಮದುವೆಯಾಗಿದ್ದಾರೆ. ಭಾರತೀಯ ಪದ್ಧತಿಗಳ ಪ್ರಕಾರ ಇವರಿಬ್ಬರ ವಿವಾಹ ನೆರವೇರಿದ್ದು, ಮೆಹಂದಿ ಮತ್ತು ಹಲ್ದಿಯಂತಹ ಕಾರ್ಯಕ್ರಮಗಳಲ್ಲಿ ಈ ಜೋಡಿ ಸಂಭ್ರಮದಲ್ಲಿ ಮಿಂದೆದ್ದಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ಶಿಖರ್ ಮತ್ತು ಸೋಫಿ ಅವರ ವಿವಾಹದಲ್ಲಿ ಅವರ ಕುಟುಂಬಗಳು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು. ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಕೂಡ ಈ ಸಮಾರಂಭದಲ್ಲಿ ಭಾಗವಹಿಸಿದ್ದು, ಅದರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು.

Source link

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ – Kannada News | Shivarajkumar Happy After Preetham Acting In Dance Karnataka Dance

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಪ್ರೀತಮ್ ಅವರು ಕವಿರತ್ನ ಕಾಳಿದಾಸನ ಪಾತ್ರ ಮಾಡಿದ್ದಾರೆ. ಇದನ್ನು ನೋಡಿ ಶಿವರಾಜ್​​ಕುಮಾರ್ ಅವರು ಭಾವುಕರಾದರು. ಅವರಿಗೆ ಈ ಕ್ಷಣ ತುಂಬಾನೇ ವಿಶೇಷವಾಗಿತ್ತು. ಶಿವಣ್ಣಗೆ ಕಾಳಿದಾಸನೇ ನೆನಪಾದರು. ಈ ಸಂದರ್ಭದ ವಿಡಿಯೋ ವೈರಲ್ ಗಮನ ಸೆಳೆದಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಅಪರೂಪದ ಕ್ಷಣ ಗಮನ ಸೆಳೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link