Headlines

ಜೈಲಿಂದ ಹೊರ ಬರುವ ಆಸೆಯಲ್ಲಿದ್ದ ಕಮಲಾಕರ ಭಟ್​​ಗೆ ನಿರಾಸೆ: ಇನ್ನೊಂದು ಕೇಸ್ ದಾಖಲು – Kannada News | Karwar: Kamalakara Bhat Faces New POCSO Case in Siddapura

ಕಾರವಾರ, ಫೆಬ್ರವರಿ 21: ಜ್ಯೋತಿಷಿಯಾಗಿ ಪ್ರಸಿದ್ಧಿ ಪಡೆದಿದ್ದ ಕಮಲಾಕರ ಭಟ್ (Kamalakar Bhat)​​, ಹಣ, ಆಸ್ತಿ, ರಾಜಕೀಯ ನಾಯಕರ ಬೆಂಬಲ ಸಂಪಾದಿಸಿದ್ಧ. ಆದರೆ ಸುಚಿತ್ರಾಳ ಸಹವಾಸ ಮಾಡಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲು ಕಂಬಿ ಎಣಿಸುವಂತಾಗಿದೆ. ಹೀಗಿರುವಾಗಲೇ ಇದೀಗ ಕಮಲಾಕರ ಭಟ್​​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈ ಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ಹೀಗಾಗಿ ಸದ್ಯ…

Read More

ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ವೈಷ್ಣವಿ ಗೌಡ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈಗ ಅವರು ಕೆಂಪು ಬಣ್ಣದ ಡ್ರೆಸ್ ಅಲ್ಲಿ ಮಿಂಚಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ವೈಷ್ಣವಿ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ವೈಷ್ಣವಿ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅನುಕೂಲ್ ಮಿಶ್ರಾ ಅವರನ್ನು ವೈಷ್ಣವಿ ಮದುವೆ ಆದರು. ವೈಷ್ಣವಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ವೈಷ್ಣವಿ ಗೌಡ ಫೋಟೋಗೆ ಫ್ಯಾನ್ಸ್…

Read More

ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ! – Kannada News | Bengaluru Crime Alert: Chain Snatchers Target Women; Police Investigate

ಬೆಂಗಳೂರು, ಫೆ.21: ರಾಜಧಾನಿಯಲ್ಲಿ (Bangalore chain snatching) ಬಂಗಾರದ ಬೆಲೆ ಗಗನಕ್ಕೇರುತ್ತಿದ್ದಂತೆ, ಇತ್ತ ಸರಗಳ್ಳರ ಹಾವಳಿಯೂ ಮಿತಿಮೀರಿದೆ. ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬರುವ ಖದೀಮರು, ರಸ್ತೆಯಲ್ಲಿ ಒಂಟಿಯಾಗಿ ಹೋಗುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿರುವ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಆಗ್ಗಾಗೆ ಎಚ್ಚರಿಕೆ ನೀಡುತ್ತಿದ್ದಾರೆ. ಇದೀಗ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿಡಿಯೋ ಸ್ಟಾಪ್ ನಿವಾಸಿ ಇಂದ್ರಾವತಿ ಎಂಬುವವರೇ ಈ ಕೃತ್ಯಕ್ಕೆ ಬಲಿಯಾದ ಮಹಿಳೆ. ರಾತ್ರಿ ಸುಮಾರು…

Read More

Chanakya Niti: ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಈ ಅಂಶಗಳೇ ಮುಖ್ಯ ಕಾರಣ – Kannada News | Chanakya Niti: Chanakya says this is the main reason why relationships between couples deteriorate

ಗಂಡ ಹೆಂಡತಿಯ ಸಂಬಂಧ (relationship) ಎನ್ನುವಂತಹದ್ದು ತುಂಬಾನೇ ಅಮೂಲ್ಯ ಮತ್ತು ವಿಶೇಷವಾದದ್ದು. ಈ ಸಂಬಂಧವನ್ನು ಜೋಪಾನವಾಗಿ ಕಾಪಾಡಿಕೊಳ್ಳುವುದು ತುಂಬಾನೇ ಮುಖ್ಯ, ಇಲ್ಲದಿದ್ದರೆ ಒಡೆದು ಹೋಗುತ್ತದೆ. ಅದರಲ್ಲೂ ಈ ಕೆಲವು ಅಂಶಗಳು ವಿಚ್ಛೇದನಕ್ಕೂ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಅವುಗಳನ್ನು ಸರಿಪಡಿಸಿಕೊಂಡರೆ ಖಂಡಿತವಾಗಿಯೂ ಸಂಸಾರ ಹಾಲು ಜೇನಿನಂತಿರುತ್ತದೆ ಎಂದು ಹೇಳಿದ್ದಾರೆ. ಹಾಗಿದ್ದರೆ ಯಾವ ಅಂಶಗಳು ಗಂಡ ಹೆಂಡತಿಯ ಸಂಬಂಧದ ನಡುವೆ ಬಿರುಕು ಮೂಡಲು ಕಾರಣವಾಗುತ್ತದೆ ಎಂಬುದನ್ನು ನೋಡೋಣ ಬನ್ನಿ. ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಕಾರಣ…

Read More

ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು – Kannada News | POCSO Court orders FIR against Swami Avimuktateshwaranand Saraswati in child sexual abuse case

ನವದೆಹಲಿ, ಫೆಬ್ರವರಿ 21: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಎಡಿಜೆ ಅತ್ಯಾಚಾರ ಮತ್ತು ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಜ್ಯೋತಿಷ್ ಪೀಠದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ. ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ಜೋನ್ಸಿ ಪೊಲೀಸ್ ಠಾಣೆಗೆ ಆದೇಶಿಸಿದ್ದಾರೆ. ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಶಕುಂಭರಿ ಪೀಠಾಧೀಶ್ವರ…

Read More

ಕೆಮ್ಮಿನ ಶಬ್ದದಿಂದಲೇ ಕಾಯಿಲೆ ಪತ್ತೆ ಹಚ್ಚುತ್ತೆ ಈ ಎಐ ಟೂಲ್! ಏಮ್ಸ್ ನಿಂದಲೂ ಸಿಕ್ಕಿದೆ ಗ್ರೀನ್ ಸಿಗ್ನಲ್! – Kannada News | New AI Tool for Asthma and COPD Diagnosis

ಆರೋಗ್ಯ ವಲಯದಲ್ಲೂ ಎಐ (AI ) ಹೆಚ್ಚು ಪ್ರಯೋಜನಕಾರಿ ಎಂಬುದು ಸಾಬೀತಾಗುತ್ತಿದೆ. ಇದರ ಸಹಾಯದಿಂದ, ಕಡಿಮೆ ಸಮಯದಲ್ಲಿ ರೋಗಗಳನ್ನು ಪತ್ತೆಹಚ್ಚಲು ಸಹಾಯ ಮಾಡುವ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೆಮ್ಮಿನಿಂದಲೇ ಉಸಿರಾಟಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ಕೆಮ್ಮಿನ ಶಬ್ದವನ್ನು ಕೇಳುವ ಮೂಲಕ ಉಸಿರಾಟಕ್ಕೆ ಸಂಬಂಧ ಪಟ್ಟ ಕಾಯಿಲೆಗಳನ್ನು ಗುರುತಿಸುತ್ತದೆ. ಈ ಸ್ವಾಸ ಎಂಬ ಎಐ ಅಪ್ಲಿಕೇಶನ್ (AI Tool) ನಿಮಿಷಗಳಲ್ಲಿಯೇ ರಿಪೋರ್ಟ್ ನೀಡುವುದರಿಂದ ರೋಗಗಳನ್ನು ಬೇಗ ಪತ್ತೆ ಹಚ್ಚಬಹುದಾಗಿದೆ. ಈ ತಂತ್ರಜ್ಞಾನವನ್ನು ಏಮ್ಸ್ ಸಹ…

Read More

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ? – Kannada News | I will not run away from the battle, says Siddaramaiah; what is the secret behind the CM series of posts

ಬೆಂಗಳೂರು, ಫೆಬ್ರವರಿ 21: ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ಮಾಡಿದ ಸರಣಿ ಟ್ವೀಟ್​ಗಳು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳ ನಾಯಕರಿಗೆ ಸಿದ್ದರಾಮಯ್ಯ ಮಾಡಿರುವ ಪೋಸ್ಟ್​ಗಳೇ ಅಸ್ತ್ರವಾಗಿವೆ. ಇನ್ನು ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ ಅಂತಾ ಅವರ ಆಪ್ತ ಶಾಸಕರು ನೀಡುತ್ತಿರುವ ಡೇಟ್​ಗಳು ಕಾಂಗ್ರೆಸ್​ ಪಕ್ಷದಲ್ಲಿ ಪಟ್ಟದ ಕಾಳಗವನ್ನ ತೀವ್ರಗೊಳಿಸಿದೆ. ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರ ಇರೋವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ…

Read More

Video: ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಎದುರಾಗುವ ಸವಾಲುಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆ ಹೆಚ್ಚು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಸಚಿನ್ ತೆಂಡೂಲ್ಕರ್, ಅಣ್ಣಾ ಹಜಾರೆ ಮತ್ತು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹವರ ಉದಾಹರಣೆಗಳನ್ನು ನೀಡಿ, ಜೀವನದಲ್ಲಿ ಅಂಕಗಳಷ್ಟೇ ನಿರ್ಣಾಯಕವಲ್ಲ ಎಂದು ತಿಳಿಸಿದ್ದಾರೆ. ಆತ್ಮವಿಶ್ವಾಸ ನಮ್ಮೊಳಗೆ ಇರಬೇಕು ಮತ್ತು ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ತಪ್ಪಿಸಬೇಕು. ಸ್ವಯಂ ಸ್ಪರ್ಧೆಯು ಯಶಸ್ಸಿಗೆ…

Read More

ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ – Kannada News | Studying Developments Indias First Reaction After US Supreme Court Order On Trump Tariffs

ನವದೆಹಲಿ, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ (Donald Trump) ವಿಧಿಸಿದ ಸುಂಕಗಳನ್ನು ರದ್ದುಗೊಳಿಸುವ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳನ್ನು ಭಾರತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. “ನಿನ್ನೆ ಸುಂಕಗಳ ಕುರಿತು ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಆ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುಎಸ್ ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮಗಳಿ ಬಗ್ಗೆ…

Read More

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ – Kannada News | Karnataka Village Fury: Enraged Father in Law Burns Son in Law’s Home Over Love Marriage

ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾದ ಅಳಿಯನ ಮೇಲೆ ಕೋಪಗೊಂಡ ಮಾವನೊಬ್ಬ ಅಳಿಯನ ಮನೆಗೇ ಬೆಂಕಿ ಹಚ್ಚಿರುವ ಘಟನೆ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಮತ್ತು ಕಾವ್ಯಾ ಎಂಬುವರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕಾವ್ಯಾ ಮನೆಯಲ್ಲಿ ತೀವ್ರ ವಿರೋಧವಿತ್ತು. ಮನೆಯವರ ವಿರೋಧದ ನಡುವೆಯೂ ಈ ಜೋಡಿ ಕಳೆದ ಗುರುವಾರ ಮದುವೆಯಾಗಿತ್ತು. ತನ್ನ ಮಗಳು ವಿರೋಧದ ನಡುವೆ ಮದುವೆಯಾಗಿದ್ದರಿಂದ…

Read More