Category Archives: Blog

Your blog category

IND vs SA: ಬದಲಾಗಲಿದೆಯಾ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ – Kannada News | India’s Predicted Playing 11 vs South Africa in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ದ್ವಿತೀಯ ಸುತ್ತಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 21 ರಂದು ನಡೆಯಲಿರುವ ಸೂಪರ್-8 ರೌಂಡ್​ನ ಮೊದಲ ಮ್ಯಾಚ್​ನಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಇನ್ನು ಫೆಬ್ರವರಿ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಢ್ ಮತ್ತು ಶ್ರೀಲಂಕಾ ಕಣಕ್ಕಿಳಿದರೆ, ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಲಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ ಬದಲಿಸಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಟೀಮ್ ಇಂಡಿಯಾ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಕಳೆದ ಮೂರು ಮ್ಯಾಚ್​ಗಳಲ್ಲಿ ಸೊನ್ನೆ ಸುತ್ತಿದ್ದಾರೆ.

ಇದಾಗ್ಯೂ ಅಭಿಷೇಕ್ ಶರ್ಮಾ ಅವರನ್ನು ಆಡುವ ಬಳಗದಿಂದ ಕೈ ಬಿಡುವ ಸಾಧ್ಯತೆಯಿಲ್ಲ. ಏಕೆಂದರೆ ತಂಡದಲ್ಲಿರುವ ಮತ್ತೋರ್ವ ಆರಂಭಿಕ ದಾಂಡಿಗ ಸಂಜು ಸ್ಯಾಮ್ಸನ್ ಕೂಡ ಫಾರ್ಮ್​ನಲ್ಲಿಲ್ಲ. ಹೀಗಾಗಿ ಅಭಿಷೇಕ್​ಗೆ ಮತ್ತೊಂದು ಚಾನ್ಸ್​ ನೀಡುವ ಸಾಧ್ಯತೆ ಹೆಚ್ಚು.

ಅಷ್ಟೇ ಅಲ್ಲದೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಬಳಗವೇ ಸೌತ್ ಆಫ್ರಿಕಾ ವಿರುದ್ಧ ಕೂಡ ಆಡುವ ಸಾಧ್ಯತೆಯಿದೆ. ಏಕೆಂದರೆ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯ ನಡೆದಿರುವುದು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಹೀಗಾಗಿ ಅದೇ ಪ್ಲೇಯಿಂಗ್ ಇಲೆವೆನ್​ ಅನ್ನೇ ಈ ಮ್ಯಾಚ್​ನಲ್ಲೂ ಮುಂದುವರೆಸುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗಲಿದೆ. ಹಾಗೆಯೇ ಫಿನಿಶರ್ ಪಾತ್ರದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯಲಿದ್ದಾರೆ. ಇನ್ನುಳಿದಂತೆ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ಇಶಾನ್ ಕಿಶನ್
  • ಅಭಿಷೇಕ್ ಶರ್ಮಾ
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ಶಿವಂ ದುಬೆ
  • ರಿಂಕು ಸಿಂಗ್
  • ವರುಣ್ ಚಕ್ರವರ್ತಿ
  • ಅರ್ಷದೀಪ್ ಸಿಂಗ್
  • ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Source link

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ! – Kannada News | Shivamogga Woman’s Suicide: Bhadravathi Constable Harassment via Social Media Blamed

ಸೋಶಿಯಲ್ ಮೀಡಿಯಾದಲ್ಲಿ ಕಾಡಿಸುತ್ತಿದ್ದ ಕಾನ್ಸ್‌ಟೇಬಲ್‌; ಕಿರುಕುಳ ತಾಳಲಾರದೆ ಮಹಿಳೆ ಆತ್ಮಹತ್ಯೆ!

ಶಿವಮೊಗ್ಗ, ಫೆಬ್ರವರಿ 21: ಜಿಲ್ಲೆಯಲ್ಲಿ ಕಾನ್ಸ್‌ಟೇಬಲ್‌ನ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮಹಿಳೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ವಿಪರೀತ ತೊಂದರೆ ನೀಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.

ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್

ಮೃತಳ ತಾಯಿ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಫೇಸ್‌ಬುಕ್ ಹಾಗೂ ಮೆಸೇಂಜರ್ ಮೂಲಕ ತನ್ನ ಮಗಳಿಗೆ ನಿರಂತರವಾಗಿ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದನೆಂದು, ಬ್ಲಾಕ್ ಮಾಡಿದರೂ ಬೇರೆ ಖಾತೆಗಳಿಂದ ಸಂಪರ್ಕಿಸುತ್ತಿದ್ದನೆಂದು ದೂರಿನಲ್ಲಿ ತಾಯಿ ಉಲ್ಲೇಖಿಸಿದ್ದಾರೆ. ಮಹಿಳೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.ಮೃತದೇಹದ ಮರಣೋತ್ತರ ಪರೀಕ್ಷೆ ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಪೂರ್ಣಗೊಂಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಬಿ. ನಿಖಿಲ್ ಪ್ರತಿಕ್ರಿಯೆ ನೀಡಿದ್ದು, ಆರೋಪಿ ಕಾನ್ಸ್‌ಟೇಬಲ್ ಮೋಹನ್ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ ಹಾಗೂ ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಅನೇಕ ಮಹಿಳೆಯರಿಗೆ ಕಾಟ ಕೊಟ್ಟಿದ್ದ ಆಸಾಮಿ

ಮೋಹನ್ ಈ ಹಿಂದೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಅಶಿಸ್ತು ಹಿನ್ನೆಲೆ ತೀರ್ಥಹಳ್ಳಿ ತಾಲೂಕಿನ ಮಾಳೂರು ಠಾಣೆಗೆ ವರ್ಗಾವಣೆಗೊಂಡಿದ್ದ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಇನ್ನೂ ಅನೇಕ ಮಹಿಳೆಯರಿಗೆ ಇದೇ ರೀತಿ ಕಿರುಕುಳ ನೀಡಿದ್ದಾನೆ ಎಂಬ ಆರೋಪಗಳೂ ಕೇಳಿಬಂದಿವೆ. ಜೊತೆಗೆ ನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದನೆಂಬ ದೂರುಗಳೂ ದಾಖಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ ತುಂಗಾ ನದಿ ತೀರದಲ್ಲಿ ವಿದೇಶಿಗರ ಪಾರ್ಟಿ! ರೆಸಾರ್ಟ್ ಮಾಲೀಕರ ಮೇಲೆ ಬಿತ್ತು ಕೇಸ್

ಆರು ದಿನಗಳ ಹಿಂದೆ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಪೊಲೀಸ್ ಪೇದೆ ಜಗದೀಶ್ ಅನಾರೋಗ್ಯದಿಂದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಆತ್ಮಹತ್ಯೆಯಾದ ಆರು ದಿನಗಳಲ್ಲೇ ಪತ್ನಿ ಕೂಡ ಅದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ತಂದೆ ತಾಯಿಯಿಲ್ಲದೆ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಈಗ ಅನಾಥರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs SA: ಟೀಮ್ ಇಂಡಿಯಾ ಆಟಗಾರ ಗಾಯಾಳು – Kannada News | T20 World Cup 2026: Mohammed Siraj Suffers Injury Scare

T20 World Cup 2026: ಭಾರತ ಮತ್ತು ಸೌತ್ ಆಫ್ರಿಕಾ (IND vs SA) ನಡುವಣ ಸೂಪರ್-8 ಸುತ್ತಿನ ಪಂದ್ಯವು ನಾಳೆ (ಫೆ.22) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಗಾಯಗೊಂಡಿದ್ದಾರೆ. ಅಹಮದಾಬಾದ್​ನಲ್ಲಿ ನಡೆದ ಅಭ್ಯಾಸ ಪಂದ್ಯದ ವೇಳೆ ಸಿರಾಜ್ ಅವರ ಕಾಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು.

ನೆಟ್ಸ್​ನಲ್ಲಿ ಸಿರಾಜ್ ಟೀಮ್ ಇಂಡಿಯಾ ಬ್ಯಾಟರ್ ಹಾರ್ದಿಕ್ ಪಾಂಡ್ಯಗೆ ಬೌಲಿಂಗ್ ಮಾಡುತ್ತಿದ್ದರು. ವೇಳೆ ಪಾಂಡ್ಯ ಹೊಡೆದ ಚೆಂಡು ನೇರವಾಗಿ ಸಿರಾಜ್​ ಅವರ ಎಡಗಾಲಿನ ಮಂಡಿಗೆ ಬಡಿದಿದೆ.

ಚೆಂಡು ತಗುಲಿದ ತಕ್ಷಣ ಮೊಹಮ್ಮದ್ ಸಿರಾಜ್ ನೋವಿನಿಂದ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಫಿಸಿಯೋಗಳು ಅವರಿಗೆ ಐಸ್ ಪ್ಯಾಕ್ ಚಿಕಿತ್ಸೆ ನೀಡಿದರು. ಇದಾಗ್ಯೂ ಅವರು ಚೇತರಿಸಿಕೊಂಡಿರಲಿಲ್ಲ. ಅಲ್ಲದೆ ನೋವಿನೊಂದಿಗೆ ಕಾಲು ಎಳೆಯುತ್ತಾ ಮೈದಾನದಿಂದ ಹೊರನಡೆದಿದ್ದಾರೆ.

ಸದ್ಯ ಮೊಹಮ್ಮದ್ ಸಿರಾಜ್ ಅವರ ಗಾಯದ ತೀವ್ರತೆಯ ಬಗ್ಗೆ ವೈದ್ಯಕೀಯ ತಂಡ ನಿಗಾ ಇರಿಸಿದ್ದು, ಫೆಬ್ರವರಿ 22 ರಂದು ಸೌತ್ ಆಫ್ರಿಕಾ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯಕ್ಕೆ ಅವರು ಲಭ್ಯರಿರುತ್ತಾರೆಯೇ ಎಂಬುದು ಇನ್ನು 24 ಗಂಟೆಗಳಲ್ಲಿ ನಿರ್ಧಾರವಾಗಲಿದೆ.

ಅಂದಹಾಗೆ ಮೊಹಮ್ಮದ್ ಸಿರಾಜ್ ಈ ಬಾರಿಯ ಟಿ20 ವಿಶ್ವಕಪ್​ಗೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಹರ್ಷಿತ್ ರಾಣಾ ಗಾಯಗೊಂಡ ಪರಿಣಾಮ ಸಿರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಅದರಂತೆ ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಸಿರಾಜ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಅವರು ಗಾಯಗೊಂಡಿರುವ ಕಾರಣ ಬದಲಿ ಆಟಗಾರನನ್ನು ಆಯ್ಕೆ ಮಾಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಸೂಪರ್-8 ಪಂದ್ಯಗಳ ವೇಳೆ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ?

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Published On – 1:59 pm, Sat, 21 February 26

Source link

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಬೇಕಾಗಿದ್ದ ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆ – Kannada News | NIA Announces Rs 5 Lakh Reward for Information on LeT Operative Junaid Ahmed Wanted in Bengaluru Terror Case

ಉಗ್ರ ಜುನೈದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ: ಎನ್ಐಎ ಘೋಷಣೆImage Credit source: TV9 Network

ಬೆಂಗಳೂರು, ಫೆಬ್ರವರಿ 21: ಲಷ್ಕರ್ ಎ ತೊಯ್ಬಾ (LeT) ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (NIA) ಘೋಷಿಸಿದೆ. 33 ವರ್ಷ ವಯಸ್ಸಿನ ಉಗ್ರ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಎನ್​ಐಎಗೆ ಬೇಕಾಗಿದ್ದಾನೆ. ಜುಲೈ 2023 ರಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ವಿವಿಧ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್​​ನಲ್ಲಿ ವಾಸಿಸುತ್ತಿದ್ದ.

ಜುನೈದ್ ಅಹ್ಮದ್ ಬಂಧನಕ್ಕೆ ನೆರವಾಗುವಂಥ ಯಾವುದೇ ಮಾಹಿತಿಯನ್ನು ನೀಡುವವರಿಗೆ ಬಹುಮಾನ ನೀಡಲಾಗುವುದು. ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್​ಐಎ ಹೇಳಿದೆ. ಮಾಹಿತಿಯನ್ನು 080-29510900 ಅಥವಾ 8904241100 ಗೆ ಕರೆ ಮಾಡಿ ಹಂಚಿಕೊಳ್ಳಬಹುದು. ಜುನೈದ್ ಅಹ್ಮದ್ ಎಂಬ ಉಗ್ರ ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಮತ್ತು ಜನ್ನು ಎಂಬ ಹೆಸರುಗಳಿಂದ ಗುರುತಿಸಿಕೊಂಡಿದ್ದ ಎನ್ನಲಾಗಿದೆ.

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಬೆಂಗಳೂರಿನ ಪರಪ್ಪನ ಅಗಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ 2023 ರ ಜುಲೈನಲ್ಲಿ ಐವರು ಭಯೋತ್ಪಾದಕ ಶಂಕಿತರನ್ನು ಬಂಧಿಸಿದ್ದರು. ಅವರನ್ನು ಎಲ್‌ಇಟಿ ಉಗ್ರನೊಬ್ಬ ನಗರದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸೆಳೆದುಕೊಂಡಿದ್ದು ಬಯಲಾಗಿತ್ತು. ಆರೋಪಿಗಳಿಂದ ಏಳು ದೇಶೀಯ ಪಿಸ್ತೂಲ್‌ಗಳು, 45 ಜೀವಂತ ಸುತ್ತುಗಳು, ವಾಕಿ-ಟಾಕಿ ಸೆಟ್‌ಗಳು, ಒಂದು ಚಾಕು ಮತ್ತು 12 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಭಯೋತ್ಪಾದ ಚಟುವಟಿಕೆ ಸಂಬಂಧ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಬಂಧಿಸಲಾಗಿತ್ತು. ಎಲ್‌ಇಟಿ ಕಾರ್ಯಕರ್ತ ಟಿ ನಸೀರ್ ಅಲಿಯಾಸ್ ಉಮ್ಮರ್ ಹಾಜಿ ಮತ್ತು ಜುನೈದ್ ಅಹ್ಮದ್ ಜೊತೆಗೆ ಐವರು ಶಂಕಿತ ಭಯೋತ್ಪಾದಕ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಜುನೈದ್ ಅಹ್ಮದ್ ಜೊತೆಗೆ ಬಂಧಿತರಾದ ಐವರು 2017 ರಲ್ಲಿ ಆರ್‌ಟಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ನೂರ್ ಅಹ್ಮದ್‌ ಎಂಬಾತನನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಸುಮಾರು 18 ತಿಂಗಳ ಕಾಲ ವಿಚಾರಣಾಧೀನ ಕೈದಿಗಳಾಗಿ ಜೈಲು ಶಿಕ್ಷೆ ಅನುಭವಿಸಿದ ನಂತರ, ಜುನೈದ್ ಅಹ್ಮದ್ ಜೊತೆಗೆ ಬಂಧಿಸಲಾದ ಐವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಬಿಡುಗಡೆಯಾದ ನಂತರ ಐವರು ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು.

ಜುನೈದ್ ಅಹ್ಮದ್ 2020 ರಲ್ಲಿ ಮತ್ತೆ ರಕ್ತಚಂದನ ಕಳ್ಳಸಾಗಣೆಗಾಗಿ ಬಂಧನಕ್ಕೊಳಗಾಗಿ ಮತ್ತೆ ಐದು ತಿಂಗಳು ಅದೇ ಜೈಲಿನಲ್ಲಿದ್ದನು. 2021 ರಲ್ಲಿ ಡಕಾಯಿತಿ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದ. ಜಾಮೀನಿನ ಮೇಲೆ ಹೊರಬಂದ ನಂತರ, ದೇಶ ಬಿಟ್ಟು ಓಡಿಹೋಗಿ ಪ್ರಸ್ತುತ ಮಧ್ಯಪ್ರಾಚ್ಯ ದೇಶದಲ್ಲಿ ಆಶ್ರಯ ಪಡೆದಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕರ್ನಾಟಕದ ಮೂವರು ಶಂಕಿತ ಉಗ್ರರನ್ನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಉಗ್ರ ಟಿ. ನಾಸಿರ್​​ಗೆ ಮೊಬೈಲ್ ಮತ್ತು ಹಣವನ್ನು ಒದಗಿಸಿದ ಆರೋಪದ ಮೇಲೆ ಜುನೈದ್ ತಾಯಿ ಅನೀಸ್ ಫಾತಿಮಾರನ್ನು ಎನ್​ಐಎ ಬಂಧಿಸಿತ್ತು. ಫಾತಿಮಾ ಜೊತೆಗೆ ನಗರ ಸಶಸ್ತ್ರ ಮೀಸಲು-ದಕ್ಷಿಣದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಚಂದ್ ಪಾಷಾ ಮತ್ತು ಬೆಂಗಳೂರು ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್ ಅವರನ್ನು ಸಹ ಬಂಧಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vastu Tips: ಮನೆ, ಜಾಗ ಖರೀದಿಸುವ ಯೋಚನೆ ಇದ್ದರೆ, ಈ ಮುಖ್ಯ ವಾಸ್ತು ಸಲಹೆ ಮರೆಯದಿರಿ – Kannada News | Vastu Shastra Tips: Avoid These 5 Mistakes When Buying Your New Home

ಹಿಂದೂ ಸಂಪ್ರದಾಯಗಳಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ಭೂಮಿಯನ್ನು ಖರೀದಿಸುವುದರಿಂದ ಆರಂಭಿಸಿ, ಮನೆ ನಿರ್ಮಾಣ, ಗೃಹಪ್ರವೇಶ ಹಾಗೂ ದೈನಂದಿನ ಜೀವನವರೆಗೂ ವಾಸ್ತು ನಿಯಮಗಳು ಪರಿಣಾಮ ಬೀರುತ್ತವೆ ಎಂದು ನಂಬಲಾಗಿದೆ. ಈ ನಿಯಮಗಳನ್ನು ಪಾಲಿಸದೆ ನಿರ್ಮಿಸಲಾದ ಮನೆಗಳಲ್ಲಿ ವಾಸ್ತು ದೋಷಗಳು ಉಂಟಾಗಿ, ಕುಟುಂಬದ ಶಾಂತಿ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಗೆ ಅಡಚಣೆ ಉಂಟಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ.

ಮನೆ ಹತ್ತಿರ ಸ್ಮಶಾನ:

ಮೊದಲನೆಯದಾಗಿ, ಮನೆ ಅಥವಾ ಆಸ್ತಿಯನ್ನು ಆಯ್ಕೆಮಾಡುವಾಗ ಅದರ ಸುತ್ತಮುತ್ತಲಿನ ಪರಿಸರವನ್ನು ಚೆನ್ನಾಗಿ ಪರಿಶೀಲಿಸಬೇಕು. ಮನೆ ಹತ್ತಿರ ಸ್ಮಶಾನ ಇರಬಾರದು ಎಂದು ವಾಸ್ತು ಸೂಚಿಸುತ್ತದೆ. ಇಂತಹ ಪ್ರದೇಶಗಳು ನಕಾರಾತ್ಮಕ ಶಕ್ತಿಯನ್ನು ಹೊಂದಿರುತ್ತವೆ ಎಂಬ ನಂಬಿಕೆ ಇದೆ. ಇದು ಮನೆಯ ಒಳಗಿನ ಶಾಂತಿ, ಸಮತೋಲನ ಮತ್ತು ಸಕಾರಾತ್ಮಕ ವಾತಾವರಣಕ್ಕೆ ಧಕ್ಕೆಯನ್ನು ಉಂಟುಮಾಡಬಹುದು ಎಂದು ಹೇಳಲಾಗುತ್ತದೆ.

ಮನೆಯ ಸುತ್ತ ಕಸದ ರಾಶಿ:

ಅದೇ ರೀತಿ, ಮನೆಯ ಸುತ್ತ ಕಸದ ರಾಶಿಗಳು ಅಥವಾ ಅಶುಚಿ ಪ್ರದೇಶಗಳು ಇರಬಾರದು. ಕಸದ ಗುಡ್ಡೆಗಳು ಕೇವಲ ಆರೋಗ್ಯ ಸಮಸ್ಯೆಗಳಿಗೆ ಮಾತ್ರವಲ್ಲ, ವಾಸ್ತು ದೃಷ್ಟಿಯಿಂದಲೂ ಅಶುಭವೆಂದು ಪರಿಗಣಿಸಲಾಗುತ್ತದೆ. ಸ್ವಚ್ಛ ಮತ್ತು ನಿರ್ಮಲ ಪರಿಸರವು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಮನೆ ನಿರ್ಮಾಣ ಅಥವಾ ಖರೀದಿಸುವಾಗ ಸ್ವಚ್ಛತೆಯನ್ನು ವಿಶೇಷವಾಗಿ ಗಮನಿಸಬೇಕು.

ಮನೆಯ ಹತ್ತಿರ ಪಾಳು ಬಾವಿ:

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಹತ್ತಿರ ದೊಡ್ಡ ಗುಂಡಿ, ಹೊಂಡ ಅಥವಾ ಪಾಳು ಬಾವಿ ಇದ್ದರೆ ಅದು ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು ಎಂದು ಹೇಳಲಾಗಿದೆ. ಇಂತಹ ಕುಳಿಗಳು ಅಥವಾ ತಗ್ಗು ಪ್ರದೇಶಗಳು ಮನೆಯ ಶಕ್ತಿಸಂತುಲನವನ್ನು ಹಾಳುಮಾಡಬಹುದು. ಹೀಗಾಗಿ ಮನೆ ಆಯ್ಕೆ ಮಾಡುವ ಮೊದಲು ಅದರ ಸುತ್ತಲಿನ ಭೂಆಕಾರವನ್ನು ಪರಿಶೀಲಿಸುವುದು ಒಳಿತು.

ಇದನ್ನೂ ಓದಿ: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮನೆಯ ಉತ್ತರ ದಿಕ್ಕಿನಲ್ಲಿ ಬೆಟ್ಟ:

ಇನ್ನೊಂದು ಪ್ರಮುಖ ನಿಯಮವೆಂದರೆ ಮನೆಯ ಉತ್ತರ ದಿಕ್ಕಿನಲ್ಲಿ ಬೆಟ್ಟ ಅಥವಾ ದೊಡ್ಡ ಅಡಚಣೆ ಇರಬಾರದು. ಉತ್ತರ ದಿಕ್ಕು ಧನ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆ ದಿಕ್ಕಿನಲ್ಲಿ ಅಡಚಣೆ ಇದ್ದರೆ ಗಾಳಿಯ ಹರಿವು ಮತ್ತು ಶಕ್ತಿಯ ಪ್ರಸರಣ ತಡೆಯಲ್ಪಟ್ಟು, ಮನೆಯ ಒಟ್ಟು ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬ ನಂಬಿಕೆ ಇದೆ.

ಆದರೆ, ಇವುಗಳೆಲ್ಲವೂ ಪರಂಪರೆಯ ನಂಬಿಕೆಗಳ ಮೇಲೆ ಆಧಾರಿತವಾಗಿದೆ. ಮನೆ ಖರೀದಿಸುವಾಗ ಕೇವಲ ವಾಸ್ತು ಮಾತ್ರವಲ್ಲದೆ, ಸ್ಥಳದ ಸುರಕ್ಷತೆ, ನೀರು–ವಿದ್ಯುತ್ ಸೌಲಭ್ಯಗಳು, ರಸ್ತೆ ಸಂಪರ್ಕ ಮತ್ತು ಕಾನೂನು ಸಂಬಂಧಿತ ದಾಖಲೆಗಳ ಪರಿಶೀಲನೆಯೂ ಕೂಡ ಮುಖ್ಯ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು! – Kannada News | T20 World Cup 2026: India, South Africa and West Indies in the same group after 17 years

ಬರೋಬ್ಬರಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಈ ಹಿಂದೆ 2009ರ ಟಿ20 ವಿಶ್ವಕಪ್​ನಲ್ಲಿ ಈ ಮೂರು ತಂಡಗಳು ಸೇಮ್ ಗ್ರೂಪ್​ನಲ್ಲಿ ಸ್ಥಾನ ಪಡೆದಿದ್ದವು. ಇದೀಗ ಹದಿನೇಳು ವರ್ಷಗಳ ಬಳಿಕ ಮತ್ತೊಮ್ಮೆ ಬಲಿಷ್ಠ ಮೂರು ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ.

ಟೀಮ್ ಇಂಡಿಯಾದ ಕಹಿ ನೆನಪು:

2007ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾ 2009 ರಲ್ಲಿ ದ್ವಿತೀಯ ಸುತ್ತಿನಲ್ಲೇ ಹೊರಬಿದ್ದಿತ್ತು. ಇದಕ್ಕೆ ಕಾರಣವಾಗಿದ್ದು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್.

  • ದ್ವಿತೀಯ ಸುತ್ತಿನಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್​ಗಳ ಸೋಲನುಭವಿಸಿತ್ತು.
  • ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 3 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು.
  • ಭಾರತ ತಂಡವನ್ನು 12 ರನ್​ಗಳಿಂದ ಸೋಲಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿತ್ತು.

ಈ ನಾಲ್ಕು ತಂಡಗಳಲ್ಲಿ 2009 ರಲ್ಲಿ ಸೆಮಿಫೈನಲ್​ಗೇರಿದ್ದು ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್. ಅಂದರೆ ಭಾರತ ಮತ್ತು ಇಂಗ್ಲೆಂಡ್ ತಂಡಗಳು ದ್ವಿತೀಯ ಸುತ್ತಿನಲ್ಲೇ ಹೊರಬಿದ್ದಿದ್ದವು.

ಇದೀಗ ಬರೋಬ್ಬರಿ 17 ವರ್ಷಗಳ ಬಳಿಕ ಗ್ರೂಪ್​-1 ರಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಕಾಣಿಸಿಕೊಂಡಿವೆ. ಇಲ್ಲಿ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಬದಲಿಗೆ ಝಿಂಬಾಬ್ವೆ ತಂಡವಿದೆ.

ಅಂದರೆ 17 ವರ್ಷಗಳ ಹಿಂದೆ ಟೀಮ್ ಇಂಡಿಯಾ ಯಾವ ಎರಡು ತಂಡಗಳ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತೋ ಇದೀಗ ಅದೇ ತಂಡಗಳು ಎದುರಾಳಿಗಳಾಗಿ ಸಿಕ್ಕಿದ್ದಾರೆ. ಅದರಲ್ಲೂ ಭಾರತ ತಂಡದ ವಿರುದ್ಧ ಸೆಣಸಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ಮೊದಲ ಸುತ್ತಿನಲ್ಲಿ ಯಾವುದೇ ಪಂದ್ಯವನ್ನು ಸೋತಿರಲಿಲ್ಲ ಎಂಬುದು ಉಲ್ಲೇಖಾರ್ಹ.

ಇತ್ತ ಟೀಮ್ ಇಂಡಿಯಾ ತವರಿನಲ್ಲಿ ಮೂರು ಪಂದ್ಯಗಳನ್ನಾಡಿದರೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಭರ್ಜರಿ ಫಾರ್ಮ್​ನಲ್ಲಿರುವ ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಗೆಲುವು ಅಂದುಕೊಂಡಷ್ಟು ಸುಲಭವಲ್ಲ.

ಭಾರತದ ಪಂದ್ಯಗಳ ವೇಳಾಪಟ್ಟಿ (ಸೂಪರ್-8)

  • ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 (ಸಂಜೆ 7:00 IST), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.
  • ಭಾರತ vs ಝಿಂಬಾಬ್ವೆ: ಫೆಬ್ರವರಿ 26 (ಸಂಜೆ 7:00 IST), ಎಂ.ಎ. ಚಿದಂಬರಂ ಸ್ಟೇಡಿಯಂ, ಚೆನ್ನೈ.
  • ಭಾರತ vs ವೆಸ್ಟ್ ಇಂಡೀಸ್: ಮಾರ್ಚ್ 1 (ಸಂಜೆ 7:00 IST), ಈಡನ್ ಗಾರ್ಡನ್ಸ್, ಕೋಲ್ಕತ್ತಾ.

Source link

ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Prahlad Joshi Slams Karnataka Government Over Bagalkot Incident, Alleges Double Standards on Religious Gatherings

ಕಲಬುರಗಿ, ಫೆಬ್ರವರಿ 21: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪೊಲೀಸರ ಕಾರ್ಯವೈಖರಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ, ಅಲ್ಲಿ ಮಾರಕಾಸ್ತ್ರಗಳು ಸಂಗ್ರಹವಾಗಿವೆ ಎಂಬ ಮಾಧ್ಯಮ ವರದಿಗಳಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ ಜೋಶಿ, ಇದು ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಹಿಂದೂಗಳ ಮೆರವಣಿಗೆಗಳಿಗೆ ನಿಷೇಧ ಹೇರಿ, ಒಂದು ಸಮುದಾಯಕ್ಕೆ ಅನುಮತಿ ನೀಡುವ ದ್ವಂದ್ವ ನೀತಿಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಐಪಿಎಸ್ ಅಧಿಕಾರಿಯಾದ ನೀವು ‘ಅಯೋಗ್ಯರ’ ಮಾತು ಕೇಳಿ ನಡೆದುಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಮತಾಂಧ ಇಸ್ಲಾಮಿಕ್ ಶಕ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ – Kannada News | Bangalore Victoria Hospital Scanning Crisis: MRI Breakdown Leaves Patients Stranded

ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್!

ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ರೋಗಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಎಂಆರ್‌ಐ ಸ್ಕ್ಯಾನ್ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಬಿಲ್ಡಿಂಗ್​ನಿಂದ ಬಿಲ್ಡಿಂಗ್​ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ.

ಮೂರೂ ಯಂತ್ರಗಳು ಖರಾಬು!

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಹಾಳಾಗಿರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ. ವಿಕ್ಟೋರಿಯಾ ಆಸ್ಪತ್ರೆ ಹಾಗೂ ಪಿಎಂಎಸ್‌ಎಸ್‌ವೈ ಸೇರಿ ಮೂರು ಆಸ್ಪತ್ರೆಗಳಿಗೆ ಒಟ್ಟು ಕೇವಲ ಮೂರು ಸ್ಕ್ಯಾನಿಂಗ್ ಯಂತ್ರಗಳಷ್ಟೇ ಲಭ್ಯವಿವೆ. ಅವುಗಳಲ್ಲಿ ಒಂದು ಯಂತ್ರ ಎಸಿ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಇದರಿಂದ ಉಳಿದ ಎರಡು ಯಂತ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ, ಸ್ಕ್ಯಾನಿಂಗ್ ಪ್ರಕ್ರಿಯೆ ವಿಳಂಬವಾಗುತ್ತಿದೆ.

ಎರಡು ದಿನಗಳಿಂದ ಸ್ಕ್ಯಾನಿಂಗ್ ಕೌಂಟರ್ ಬಳಿ ಬಂದು ಕೊನೆಗೆ ಬರಿಗೈಯಲ್ಲಿ ಹಿಂತಿರುಗುತ್ತಿರುವ ರೋಗಿಗಳ ಅಸಮಾಧಾನ ಹೆಚ್ಚಾಗಿದೆ. ತುರ್ತು ಚಿಕಿತ್ಸೆಗಾಗಿ ಸ್ಕ್ಯಾನಿಂಗ್ ಅವಶ್ಯಕವಾಗಿರುವ ರೋಗಿಗಳಿಗೆ ವರದಿಗಳು ತಡವಾಗಿ ಕೈ ಸೇರುತ್ತಿರುವುದರಿಂದ ಆರೋಗ್ಯ ಸೇವೆಗಳ ಗುಣಮಟ್ಟದ ಕುರಿತು ಪ್ರಶ್ನೆಗಳು ಎದ್ದಿವೆ. ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ!

ಜಿಲ್ಲಾಸ್ಪತ್ರೆಗಳಲ್ಲೂ ಇದೇ ಪಾಡು!

ಇತ್ತ ರಾಜ್ಯದ 13 ಜಿಲ್ಲಾಸ್ಪತ್ರೆಗಳಲ್ಲಿಯೂ ಸ್ಕ್ಯಾನಿಂಗ್ ಯಂತ್ರಗಳು ಸ್ಥಗಿತಗೊಂಡಿರುವ ಮಾಹಿತಿ ಲಭ್ಯವಾಗಿದೆ. ಆರೋಗ್ಯ ಇಲಾಖೆ ಸುಮಾರು 143 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವುದೇ ಸಮಸ್ಯೆಗೆ ಕಾರಣ ಎಂಬ ಆರೋಪವೂ ಕೇಳಿಬಂದಿದೆ. ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸೌಲಭ್ಯಗಳ ಕೊರತೆಯಿಂದ ಬಡ ರೋಗಿಗಳು ಹೆಚ್ಚಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆರೋಗ್ಯ ಇಲಾಖೆಯಿಂದ ಸುಮಾರು 140 ಕೋಟಿ ರೂ ಬಿಲ್ ಬಾಕಿ ಉಳಿದ ಹಿನ್ನೆಲೆ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿಟಿ ಸ್ಕ್ಯಾನಿಂಗ್ ಸೇವೆ ಸ್ಥಗಿತಗೊಂಡಿದೆ. ಬಿಪಿಎಲ್ ಕಾರ್ಡ್ ಹೊಂದಿದ ಬಡ ರೋಗಿಗಳು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಸರ್ಕಾರದ ಬಾಕಿ ಪಾವತಿ ವಿಳಂಬದ ಕಾರಣ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲೂ ಉಚಿತ ಸಿಟಿ ಸ್ಕ್ಯಾನ್ ಸೇವೆ ಬಂದ್ ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ಸರ್ಜನ್ ಮನವಿ ಮೇರೆಗೆ ಮಾತ್ರ ಸ್ಕ್ಯಾನಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ. ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ KRSNAA ಡಯಾಗ್ನೊಸ್ಟಿಕ್ ಸೆಂಟರ್‌ಗಳು 143 ಕೋಟಿ ಬಾಕಿ ಹಿನ್ನೆಲೆಯಲ್ಲಿ ಸೇವೆ ನಿಲ್ಲಿಸಿವೆ. ಸಿಟಿ, ಎಂಆರ್‌ಐ ಸೌಲಭ್ಯಗಳಿಲ್ಲದೆ ರೋಗಿಗಳು ಸಂಕಷ್ಟದಲ್ಲಿದ್ದು, ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 11:24 am, Sat, 21 February 26

Source link

‘ಧುರಂಧರ್ 2’ ಬಿಡುಗಡೆ ದಿನಾಂಕ ಬದಲು? ಟ್ರೈಲರ್​​ನಲ್ಲಿ ಸಿಗಲಿದೆ ಮಾಹಿತಿ – Kannada News | Dhurandhar 2 movie release may get postponed

ಟಾಕ್ಸಿಕ್’ (Toxic) ಮತ್ತು ‘ಧುರಂಧರ್ 2’ (Dhurandhar) ಸಿನಿಮಾಗಳ ನಡುವೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಅದೇ ದಿನ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ‘ಧುರಂಧರ್ 2’ ಸಿನಿಮಾ ಬಿಡುಗಡೆ ಮುಂದೂಡಲಾಗುತ್ತದೆ ಎನ್ನಲಾಗುತ್ತಿದೆ. ನಿನ್ನೆಯಷ್ಟೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆಗಳನ್ನು ದುಪ್ಪಟ್ಟು ಮಾಡಿದೆ. ಇದೀಗ ‘ಟಾಕ್ಸಿಕ್’ಗೆ ಠಕ್ಕರ್ ಕೊಡಲು ‘ಧುರಂಧರ್ 2’ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಟ್ರೈಲರ್​​ನಲ್ಲಿಯೇ ಸಿನಿಮಾದ ಅಧಿಕೃತ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ ಮಾಡಲಿದೆ ಚಿತ್ರತಂಡ.

‘ಧುರಂಧರ್ 2’ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದ್ದು, ನಿಗದಿತ ಸಮಯಕ್ಕೆ ಸಿನಿಮಾದ ಚಿತ್ರೀಕರಣ ಮುಗಿಯುವುದಿಲ್ಲ ಎನ್ನಲಾಗುತ್ತಿದೆ. ವಾರದ ಹಿಂದೆ ಸಹ ಮುಂಬೈನಲ್ಲಿ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿತ್ತು. ಮುಂಬೈ ಮಹಾನಗರ ಪಾಲಿಕೆಯ ನಿಯಮಗಳನ್ನು ಉಲ್ಲಂಘಿಸಿ ಚಿತ್ರೀಕರಣ ಮಾಡಿದ್ದಕ್ಕೆ ಚಿತ್ರತಂಡದ ವಿರುದ್ಧ ದೂರು ಸಹ ದಾಖಲಾಗಿದೆ. ಚಿತ್ರೀಕರಣಕ್ಕೆ ಬಳಸಿದ್ದ ಕೆಲವು ವಸ್ತುಗಳನ್ನು ಸಹ ಸೀಜ್ ಮಾಡಲಾಗಿದೆ. ಚಿತ್ರೀಕರಣ ತಡವಾಗುತ್ತಿರುವ ಕಾರಣದಿಂದಾಗಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೂಡ ತಡವಾಗುವ ಸಾಧ್ಯತೆ ಇದ್ದು, ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಲಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.

ಇದನ್ನೂ ಓದಿ:‘ಟಾಕ್ಸಿಕ್’ ಟೀಸರ್: ವೈರಲ್ ಆಗುತ್ತಿದೆ ಯಶ್ ಕಾಲೇಜು ವಿಡಿಯೋ ವಿಶೇಷತೆಯೇನು?

ಪಿಂಕ್‌ವಿಲ್ಲಾ ವರದಿಯ ಪ್ರಕಾರ, ರಣವೀರ್ ಸಿಂಗ್ ಬಹು ನಿರೀಕ್ಷಿತ ಸಿನಿಮಾ ‘ಧುರಂಧರ್ 2’ ಟ್ರೈಲರ್ ಮಾರ್ಚ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ಈದ್ ಹಬ್ಬದ ಪ್ರಯುಕ್ತ ತೆರೆಗೆ ಬರಲು ಸಿದ್ಧವಾಗಿದ್ದು, ಅದಕ್ಕೂ ಮುನ್ನ ಟ್ರೈಲರ್ ಮೂಲಕ ಪ್ರೇಕ್ಷಕರನ್ನು ಸೆಳೆಯಲು ಚಿತ್ರತಂಡ ಮಾಸ್ಟರ್ ಪ್ಲಾನ್ ಮಾಡಿದೆ. ರಣ್ವೀರ್ ಸಿಂಗ್ ಅವರನ್ನು ಎರಡು ಲುಕ್​​ಗಳಲ್ಲಿ ‘ಧುರಂಧರ್ 2’ ಟ್ರೈಲರ್​​ನಲ್ಲಿ ತೋರಿಸಲಾಗುತ್ತದೆ ಎನ್ನಲಾಗುತ್ತಿದೆ. ಜೊತೆಗೆ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಟ್ರೈಲರ್​​ನಲ್ಲಿ ಘೋಷಿಸಲಾಗುತ್ತದೆಯಂತೆ.

ಇನ್ನು ಕನ್ನಡಿಗರ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದ ಟೀಸರ್‌ನಲ್ಲಿ ಯಶ್ ಅವರ ಸ್ಟೈಲಿಶ್ ಲುಕ್ ಮತ್ತು ಹಿನ್ನೆಲೆ ಸಂಗೀತ ಅಭಿಮಾನಿಗಳಿಗೆ ಹಬ್ಬದೂಟ ಬಡಿಸಿದೆ. ‘ಧುರಂಧರ್ 2’ ಅಪ್‌ಡೇಟ್ ಬರುವ ಸಮಯದಲ್ಲೇ ಯಶ್ ಅವರ ‘ಟಾಕ್ಸಿಕ್’ ಹವಾ ಶುರುವಾಗಿರುವುದು ಸಿನಿರಂಗದಲ್ಲಿ ತೀವ್ರ ಪೈಪೋಟಿಗೆ ನಾಂದಿ ಹಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್! – Kannada News | Goripalya Indira Canteen Turns into Hub of Illegal Activities: Residents Allege Neglect by Authorities in Bengaluru

ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಗೋರಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ. ಬಡವರ ಅಕ್ಷಯ ಪಾತ್ರೆ ಎಂದೇ ಕರೆಯಲ್ಪಡುತ್ತಿದ್ದ ಈ ಕ್ಯಾಂಟೀನ್ ಪ್ರಸ್ತುತ ದಯನೀಯ ಸ್ಥಿತಿಯಲ್ಲಿದೆ. ಕಳೆದ ಎರಡು-ಮೂರು ತಿಂಗಳಿಂದ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಸ್ಥಳೀಯರ ಪ್ರಕಾರ, ಕ್ಯಾಂಟೀನ್ ಆವರಣವನ್ನು ಈಗ ಗಾಂಜಾ ಮತ್ತು ಇತರೆ ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಸದ್ಯ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಹಿಂದೆ ಬಡವರು ಇಲ್ಲಿ ನೆಮ್ಮದಿಯಿಂದ ಊಟ ಮಾಡುತ್ತಿದ್ದರು. ಆದರೆ ಈಗ ಕ್ಯಾಂಟೀನ್ ಸುತ್ತಮುತ್ತ ಕಸ ಮತ್ತು ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಅಧಿಕಾರಿಗಳು, ಕಾರ್ಪೊರೇಟರ್‌ಗಳು ಈ ಬಗ್ಗೆ ಗಮನಹರಿಸಿ, ಕ್ಯಾಂಟೀನ್ ಅನ್ನು ಸ್ವಚ್ಛಗೊಳಿಸಿ, ಪುನಃ ತೆರೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ಅರುಣ್​ ಕುಮಾರ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link