ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಸಾಕಷ್ಟು ವರ್ಷಗಳ ಹಿಂದೆ ಮುಳುಗಿದ್ದ ದೇಗುಲದ ಅವಶೇಷ ಗೋಚರ – Kannada News
ಮೈಸೂರು, ಜೂನ್ 12: ಮೈಸೂರು ಜಿಲ್ಲೆಯ ಹೆಚ್ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಸಾಕಷ್ಟು ವರ್ಷಗಳ ಹಿಂದೆ ಮುಳುಗಡೆಯಾಗಿದ್ದ ಬಸವೇಶ್ವರ ದೇಗುಲದ ಅವಶೇಷಗಳು ಈಗ ಮತ್ತೆ ಗೋಚರವಾಗಿವೆ. ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಬಹುದು ಎಂಬ ಚರ್ಚೆಯ ನಡುವೆಯೇ ಈ ವಿದ್ಯಮಾನ ಕಂಡುಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿರುವುದರಿಂದ ದೇವಸ್ಥಾನದ ಕಲ್ಲುಮಂಟಪದ ಭಾಗಗಳು ಕಾಣಿಸಿಕೊಳ್ಳುತ್ತಿವೆ. ಸ್ಥಳೀಯರ ಪ್ರಕಾರ, 15 ವರ್ಷಗಳ ಹಿಂದೆ ಇದೇ ರೀತಿಯ ಪರಿಸ್ಥಿತಿ ಎದುರಾದಾಗಲೂ ದೇಗುಲದ…