Category Archives: Blog

Your blog category

T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ, ಇಂಗ್ಲೆಂಡ್ ತಂಡಕ್ಕೆ ಸಮನಾದ ಹೋರಾಟ ನೀಡಿತು. ಇಂಗ್ಲೆಂಡ್ ವಿರುದ್ಧ ನೇಪಾಳ ತಂಡದ ಪ್ರದರ್ಶನಕ್ಕೆ ಇಡೀ ವಿಶ್ವ ಕ್ರಿಕೆಟ್ ಸಲಾಂ ಹೊಡೆದಿದೆ. ಲೆಜೆಂಡರಿ ಆಟಗರರು ನೇಪಾಳ ತಂಡದ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಇದರ ಜೊತೆಗೆ ದಕ್ಷಿಣ ಆಫ್ರಿಕಾ ತಂಡದ ಮಾಜಿ ಲೆಜೆಂಡರಿ ವೇಗಿ ಡೇಲ್ ಸ್ಟೈನ್, ನೇಪಾಳ ತಂಡದ ಕೋಚ್ ಆಗಲು ನಾನು ಸಿದ್ಧ ಎಂದಿದ್ದಾರೆ.

ಸೇವೆ ನೀಡಲು ಸಿದ್ಧನಿದ್ದೇನೆ

ಡೇಲ್ ಸ್ಟೇನ್ ನೇಪಾಳ ತಂಡಕ್ಕೆ ತರಬೇತಿ ನೀಡಲು ಮುಂದಾಗಿದ್ದು, ನೇಪಾಳ ತಂಡದೊಂದಿಗೆ ಕೆಲಸ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪಂದ್ಯದ ನಂತರ ಪೋಸ್ಟ್ ಹಂಚಿಕೊಂಡಿರುವ ಡೇಲ್ ಸ್ಟೇನ್, ‘ನೇಪಾಳ, ನಿಮಗೆ ಎಂದಾದರೂ ನನ್ನ ಅಗತ್ಯವಿದ್ದರೆ ನಾನು ನಿಮ್ಮ ತಂಡಕ್ಕೆ ಸೇವೆ ನೀಡಲು ಸಿದ್ಧನಿದ್ದೇನೆ’ ಎಂದು ಬರೆದಿದ್ದಾರೆ. ಡೇಲ್ ಸ್ಟೇನ್ ಅವರ ಈ ಪೋಸ್ಟ್ ಇದೀಗ ವೈರಲ್ ಆಗಿದೆ.

ಡೇಲ್ ಸ್ಟೇನ್ ಅವರ ಈ ಆಫರ್ ನೇಪಾಳ ಕ್ರಿಕೆಟ್‌ಗೆ ಸಿಕ್ಕ ದೊಡ್ಡ ಗೌರವವಾಗಿದೆ. ಅಲ್ಲದೆ ನೇಪಾಳ ತಂಡದ ಈ ಉನ್ನತ ಮಟ್ಟದ ಪ್ರದರ್ಶನ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಅಷ್ಟಕ್ಕೂ ನೇಪಾಳ ಈ ಹಿಂದೆಯೂ ಈ ರೀತಿಯ ಅಚ್ಚರಿಯ ಪ್ರದರ್ಶನಗಳನ್ನು ನೀಡಿದ್ದು, ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ ಒಂದು ರನ್‌ನಿಂದ ಸೋತಿತ್ತು. ಮಾತ್ರವಲ್ಲದೆ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ಸಹ ಗೆದ್ದಿದೆ.

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 184 ರನ್ ಗಳಿಸಿತು. ತಂಡದ ಪರ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 53 ರನ್ ಗಳಿಸಿರೆ, ಜಾಕೋಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಮತ್ತು ವಿಲ್ ಜಾಕ್ಸ್ 18 ಎಸೆತಗಳಲ್ಲಿ ಔಟಾಗದೆ 39 ರನ್ ಗಳಿಸಿ ತಂಡವನ್ನು ಈ ಉತ್ತಮ ಸ್ಕೋರ್​ಗೆ ಕೊಂಡೊಯ್ದರು.

ENG vs NEP: ಕೊನೆಯ 3 ಓವರ್​ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ

ಈ 185 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ನೇಪಾಳ ಅದ್ಭುತ ಪ್ರದರ್ಶನ ನೀಡಿತು, ಆದರೆ ಅಂತಿಮವಾಗಿ ವಿಫಲವಾಯಿತು. ನೇಪಾಳ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ ಕೇವಲ 180 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಅಂತಿಮ ಓವರ್‌ನಲ್ಲಿ ಗೆಲ್ಲಲು ಅವರಿಗೆ 10 ರನ್‌ಗಳು ಬೇಕಾಗಿದ್ದವು, ಆದರೆ ಕೇವಲ 5 ರನ್‌ಗಳನ್ನು ಗಳಿಸಲು ಸಾಧ್ಯವಾಯಿತು. ಆದಾಗ್ಯೂ, ಅಸೋಸಿಯೇಟ್ ರಾಷ್ಟ್ರವಾಗಿ ನೇಪಾಳವು ಪೂರ್ಣ ಸದಸ್ಯ ತಂಡಕ್ಕೆ ಕಠಿಣ ಹೋರಾಟವನ್ನು ನೀಡಿದ್ದರಿಂದ, ಈ ಸೋಲನ್ನು ಅನೇಕರು ಗೆಲುವಿಗಿಂತ ಕಡಿಮೆಯಿಲ್ಲ ಎಂದು ಪರಿಗಣಿಸುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು ವಿವರಿಸಿದ್ದಾರೆ.

‘ವಾರಣಾಸಿ’ ಸಿನಿಮಾವು ಟ್ರಾವೆಲ್ ಅಡ್ವೇಂಚರ್ ಮಾದರಿಯ ಕತೆ ಹೊಂದಿರುವುದಾಗಿ ಈ ಹಿಂದೆಯೇ ರಾಜಮೌಳಿ ಹೇಳಿದ್ದರು. ಸಿನಿಮಾನಲ್ಲಿ ರಾಮಾಯಣದ ಕತೆಯೂ ಸಹ ಇರಲಿದೆ ಎನ್ನಲಾಗಿತ್ತು, ಇದೀಗ ರಾಜಮೌಳಿ ಇದನ್ನು ಖಾತ್ರಿ ಪಡಿಸಿದ್ದು, ಟೀಸರ್​​ನಲ್ಲಿ ಸಹ ರಾಮಾಯಣಕ್ಕೆ ಸಂಬಂಧಿಸಿದ ಕೆಲ ದೃಶ್ಯದ ತುಣುಕುಗಳು ಇವೆ. ಅಸಲಿಗೆ ರಾಮಾಯಣಕ್ಕೆ ಸಂಬಂಧಿಸಿದ ದೃಶ್ಯಗಳ ಚಿತ್ರೀಕರಣವೇ ರಾಜಮೌಳಿಗೆ ಬಹಳ ಕಷ್ಟವಾಯ್ತಂತೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ರಾಜಮೌಳಿ, ‘ರಾಮಾಯಣಕ್ಕೆ ಸಂಬಂಧಿಸಿದ ದೃಶ್ಯಗಳು ಸಿನಿಮಾನಲ್ಲಿವೆ. ಈ ದೃಶ್ಯಗಳು ಸುಮಾರು 25 ನಿಮಿಷಗಳದ್ದಾಗಿದ್ದು, ಆ ದೃಶ್ಯಗಳ ಚಿತ್ರೀಕರಣವೇ ಬಹಳ ಸವಾಲಿನದ್ದು ಮತ್ತು ಅಷ್ಟೇ ಉತ್ಸಾಹಕಾರಿಯೂ ಆಗಿತ್ತು’ ಎಂದು ರಾಜಮೌಳಿ ಹೇಳಿದ್ದಾರೆ. ‘ಆ 25 ನಿಮಿಷದ ದೃಶ್ಯ, ಸಿನಿಮಾನಲ್ಲಿ ಒಂದೇ ಬಾರಿಗೆ ಬರುವುದಿಲ್ಲ ಬದಲಿಗೆ ಹಲವು ಬಾರಿ ಬಂದು ಹೋಗಿ, ಕೊನೆಗೆ ಒಂದು ಅದ್ಭುತ ಆಕ್ಷನ್ ದೃಶ್ಯವಾಗಿ ಮಾರ್ಪಾಡು ಪಡೆಯುತ್ತದೆ. ಹಾಗಾಗಿ ಆ ದೃಶ್ಯಗಳು ಕತೆಯ ಕಾರಣಕ್ಕೆ, ಸಿನಿಮಾ ಕಾರಣಕ್ಕೆ ಬಹಳ ಮಹತ್ವದ್ದು’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ:ಧರಣಿ ಮಾಡುತ್ತಾರಂತೆ ರಾಜಮೌಳಿ: ಎಲ್ಲಿ? ಯಾವ ಕಾರಣಕ್ಕೆ?

ಕೇವಲ 25 ನಿಮಿಷದ ದೃಶ್ಯವಾದರೂ ಅದನ್ನು ಚಿತ್ರೀಕರಣ ಮಾಡಲು ನಾವು ಬರೋಬ್ಬರಿ 60 ದಿನಗಳನ್ನು ತೆಗೆದುಕೊಂಡಿದ್ದೇವೆ. ಭಾರತದ ಹಲವಾರು ಸಿನಿಮಾಗಳು ಮಹಾಭಾರತ ಮತ್ತು ರಾಮಾಯಣದಿಂದ ಸ್ಪೂರ್ತಿ ಪಡೆದಿವೆ. ಆದರೆ ನಾವು ‘ವಾರಣಾಸಿ’ ಸಿನಿಮಾಕ್ಕಾಗಿ ರಾಮಾಯಣದ ಒಂದು ಭಾಗವನ್ನು ಚಿತ್ರೀಕರಣ ಮಾಡಿದ್ದೇವೆ’ ಎಂದಿದ್ದಾರೆ ರಾಜಮೌಳಿ.

‘ವಾರಣಾಸಿ’ ಸಿನಿಮಾನಲ್ಲಿ ಮಹೇಶ್ ಬಾಬು ರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಸಿನಿಮಾದ ನಾಯಕಿ. ಪೃಥ್ವಿರಾಜ್ ಸುಕುಮಾರನ್ ಸಿನಿಮಾದ ವಿಲನ್ ಆಗಿ ನಟಿಸಿದ್ದಾರೆ. ಈ ಸಿನಿಮಾ ಭಾರತದ ಬಹುದೊಡ್ಡ ಬಜೆಟ್​​ನ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್​ನ ಪ್ರಮುಖ ಸ್ಟುಡಿಯೋಗಳು ಸಹ ಕೆಲಸ ಮಾಡಿವೆ. ಹಾಲಿವುಡ್​ನ ಕೆಲವು ಖ್ಯಾತ ನಟರು ಸಹ ಈ ಸಿನಿಮಾನಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಾಲೀಕನಿಂದ ಫಸ್ಟ್‌ ಪಾರ್ಟಿಗೆ ಹೋಗಿದ್ದೇಗೆ? ಲ್ಯಾಂಬೋರ್ಗಿನಿ ಕಳ್ಳಾಟ ರಹಸ್ಯ ಬಿಚ್ಚಿಟ್ಟ ಅಧಿಕಾರಿ – Kannada News | Bengaluru RTO Talks after Sized Lamborghini Car for forged documents

ಬೆಂಗಳೂರು, (ಫೆಬ್ರವರಿ 08): ಅದು ಕೋಟಿ ಕೋಟಿ ಮೌಲ್ಯದ ಐಷಾರಾಮಿ ಕಾರು. ಅಷ್ಟೊಂದು ದುಬಾರಿ ಹಣ ಸುರಿದು ಕಾರ್‌ ಖರೀದಿಸಿದ್ದ ಮಾಲೀಕ ನೋಂದಣಿ ಮಾಡಿಸದೇ ಕಳ್ಳಾಟವಾಡಿದ್ದ. ಒಂದಲ್ಲ, ಎರಡಲ್ಲ, ಬರೋಬ್ಬರಿ ಮೂರು ವರ್ಷ ನಂಬರ್‌ ಇಲ್ದೆ ಗಾಡಿ ಓಡಿಸಿ ಕಳ್ಳಾಟವಾಡಿದ್ದ. ಅದೇ ಕಾರು ಇಂದು (ಫೆಬ್ರವರಿ 08) ಸೀಜ್ ಆಗಿದೆ. ಲ್ಯಾಂಬೋರ್ಗಿನಿ ಉರಾಖಾನ್‌ ಕಾರು ಬರೋಬ್ಬರಿ 3 ಕೋಟಿ 51 ಲಕ್ಷ ರೂಪಾಯಿ ಬೆಲೆ ಬಾಳುತ್ತೆ. ಪಟ್ನಂ ಚಿರು ಹರ್ಷ ಎಂಬಾತ 2022 ರಲ್ಲಿ ಈ ಕಾರು ಖರೀದಿಸಿದ್ದು, ಹರ್ಷ ಇನ್ಪ್ರಾ construction pvt limited ಅನ್ನೋ ಕಂಪನಿ ಹೆಸರಿಗೆ ರಿಜಿಸ್ಟ್ರೇಷನ್ ಆಗಿದೆ. ತೆಲಂಗಾಣದಲ್ಲೇ ಕಾರ್‌ನ ನೋಂದಣಿ ಮಾಡಿಸುತ್ತೇವೆ ಅಂತಾ ಹೇಳಿದ್ದ ಮಾಲೀಕ, ಎಲೆಕ್ಟ್ರಾನಿಕ್‌ ಸಿಟಿ ಆರ್‌ಟಿಒದಲ್ಲಿ ತಾತ್ಕಾಲಿಕವಾಗಿ ನೋಂದಣಿ ಮಾಡಿಸಿದ್ದ. ಆದ್ರೆ ಮೂರು ವರ್ಷವಾದ್ರೂ ಪರ್ಮಮೆಂಟ್ ರಿಜಿಸ್ಟ್ರೇಷನ್ ಮಾಡಿಸಿಕೊಂಡಿಲ್ಲ. ಇದ್ರ ನಡುವೆ ಇದೇ ಕಾರನ್ನ ಹೆಚ್‌-1 ಕಾರ್‌ ಕೇರ್ ಕಂಪನಿಗೆ ಚಿರು ಮಾರಾಟ ಮಾಡಿದ್ದ.

ಇನ್ನು ಚಿರು ಅವರಿಂದ ಕಾರ್‌ ಖರೀದಿಸಿದ್ದ ಹೆಚ್‌-1 ಕಾರ್‌ ಕೇರ್ ಕೂಡಾ ಮೋಸದಾಟ ಮಾಡಿದೆ. ಈ ಕಾರ್‌ನ ಮಾಲೀಕ ನಾನೇ ಅನ್ನೋ ದುರುದ್ದೇಶದಿಂದ ಹೊಸ ಕಾರು ಎಂಬಂತೆ ನಕಲಿ ದಾಖಲೆ ಸೃಷ್ಟಿಸಿದೆ. 2025 ರಲ್ಲಿ ಈ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿರುವ ಹಾಗೆ ತೋರಿಸಿ ಸತತ ಮೂರು ವರ್ಷಗಳ ದಂಡವನ್ನು ಪಾವತಿಸದೆ ಕಸ್ತೂರಿ ನಗರ ಆರ್‌ಟಿಒದಲ್ಲಿ ಹೊಸದಾಗಿ ನೋಂದಣಿ ಮಾಡಿಸಿದ್ದಾರೆ. ಈ ಮೋಸದಾಟ ಗೊತ್ತಾಗ್ತಿದ್ದಂತೆ ಇಂದು ಕಾರ್‌ ಸೀಜ್ ಮಾಡಲಾಗಿದೆ. ಇನ್ನು ಈ ಬಗ್ಗೆ ಆರ್​​ಟಿಓ ಅಧಿಕಾರಿ ಇನ್ನಷ್ಟು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಕಾರು ಖರೀದಿಸಿದ್ದು ಯಾರೋ, ನೋಂದಣಿ ಮಾಡಿಸಿದ್ದು ಇನ್ಯಾರದೋ ಹೆಸರಿಗೆ: ಲ್ಯಾಂಬೋರ್ಗಿನಿ ರಹಸ್ಯ ಬಯಲು

Source link

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ವಿನಯ್ ಅವರು 2011ರಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಬನಶಂಕರಿ ಕಲ್ಯಾಣ ಮಂಟಪದಲ್ಲಿ ಪ್ರಿಯತಾ ಆರ್. ಅವರನ್ನು ಲಿಂಗಾಯತ ಕುಂಬಾರ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಈ ದಂಪತಿಗೆ  ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆರಂಭದಲ್ಲಿ ಸುಖವಾಗಿದ್ದ ಇವರ ಸಂಸಾರದಲ್ಲಿ ಬಿರುಕು ಮೂಡಿದ್ದು 2015ರ ನಂತರ ಎಂದು ವಿನಯ್ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್‌: ಅಸಲಿ ಮುಖ ಬಯಲು

ಕ್ರೈಸ್ತ ಧರ್ಮದ ಕಡೆಗೆ ಆಕರ್ಷಿತರಾಗಿದ್ಹೇಗೆ?

2015ರಲ್ಲಿ ಶಿವಮೊಗ್ಗದ ಪ್ರತಿಷ್ಠಿತ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಪ್ರಿಯತಾ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿದ್ದರು. ಅಲ್ಲಿ ಅದೇ ಶಾಲೆಯಲ್ಲಿದ್ದ ಮರಿಯಾ ಪ್ರಿಯದರ್ಶಿನಿ ಎಂಬ ಸಹೋದ್ಯೋಗಿಯ ಸಂಪರ್ಕ ಬೆಳೆದಿದೆ. ಮರಿಯಾ ಅವರ ಪ್ರಭಾವದಿಂದ ಪ್ರಿಯತಾ ಹಿಂದೂ ಧರ್ಮದ ಆಚರಣೆಗಳನ್ನು ಬಿಟ್ಟು ಕ್ರೈಸ್ತ ಧರ್ಮದ ಕಡೆಗೆ ಆಕರ್ಷಿತರಾಗಿದ್ದಾರೆ. ಕ್ರಮೇಣ ಅವರು ಸಂಪೂರ್ಣವಾಗಿ ಮತಾಂತರಗೊಂಡಿದ್ದಾರೆ ಎಂದು ಪತಿ ವಿನಯ್ ಆರೋಪಿಸಿದ್ದಾರೆ.

ಮತಾಂತರಗೊಂಡ ನಂತರ ಪ್ರಿಯತಾ ಅವರ ವರ್ತನೆಯಲ್ಲಿ ಭಾರೀ ಬದಲಾವಣೆ ಕಂಡುಬಂದಿದೆ. ಅವರು ನಿಯಮಿತವಾಗಿ ಚರ್ಚ್‌ಗೆ ಹೋಗಲಾರಂಭಿಸಿದರು. ಮನೆಯಲ್ಲಿಯೇ ಬೈಬಲ್ ತಂದು ಇಟ್ಟುಕೊಂಡು ಓದುವುದು, ಯೇಸುಕ್ರಿಸ್ತನನ್ನು ಪೂಜಿಸುವುದನ್ನು ರೂಢಿಸಿಕೊಂಡರು. ಪತಿ ಎಷ್ಟೇ ಬುದ್ಧಿವಾದ ಹೇಳಿದರೂ, ‘ನಾನು ಕ್ರೈಸ್ತ ಧರ್ಮ ಪಾಲಿಸುತ್ತಿದ್ದೇನೆ, ನೀವೂ ಅದನ್ನೇ ಪಾಲಿಸಿ’ ಎಂದು ಒತ್ತಾಯಿಸಿದ್ದಾರೆ.

ಕೇವಲ ಪತಿಯನ್ನು ಮಾತ್ರವಲ್ಲದೆ, ತಮ್ಮ ಹಿರಿಯ ಮಗಳಿಗೂ ಕ್ರೈಸ್ತ ಧರ್ಮವನ್ನೇ ಪಾಲಿಸುವಂತೆ ಪ್ರಿಯತಾ ಒತ್ತಾಯಿಸುತ್ತಿದ್ದರು ಎಂದು ವಿನಯ್ ದೂರಿದ್ದಾರೆ. ಕ್ರೈಸ್ತ ಧರ್ಮಕ್ಕೆ ಸೇರಿದ ವೆಬ್‌ಸೈಟ್‌ಗಳನ್ನು ಫಾಲೋ ಮಾಡುವುದು, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪ್ರಾರ್ಥನೆ ಸಲ್ಲಿಸುವುದು ಮತ್ತು ಪ್ರತಿ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಹಣ ಪಾವತಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದರು.

ತವರು ಮನೆ ಸೇರಿದ ಪತ್ನಿ

ಮತಾಂತರದ ವಿಚಾರವಾಗಿ ಮನೆಯಲ್ಲಿ ನಿತ್ಯ ಜಗಳವಾಗುತ್ತಿತ್ತು. 2019ರಲ್ಲಿ ಒಮ್ಮೆ ತವರು ಮನೆಗೆ ಹೋಗಿದ್ದ ಪತ್ನಿಯನ್ನು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ವಿನಯ್ ಅವರು 2020ರಲ್ಲಿ ಮನವೊಲಿಸಿ ಕರೆತಂದಿದ್ದರು. ಆದರೆ, 2024ರ ವೇಳೆಗೆ ಅವರ ವರ್ತನೆ ಮತ್ತಷ್ಟು ತೀವ್ರವಾಯಿತು. ‘ನನ್ನ ಮಾತನ್ನು ನೀವು ಕೇಳದಿದ್ದರೆ ನಾನು ಮನೆಯಲ್ಲಿ ಇರುವುದಿಲ್ಲ’ ಎಂದು ಹಠ ಹಿಡಿದ ಪ್ರಿಯತಾ, ಪತಿ ಮತ್ತು ಮಕ್ಕಳು ಮತಾಂತರಗೊಳ್ಳಲು ಒಪ್ಪದ ಕಾರಣ 2025ರಲ್ಲಿ ಗಂಡ-ಮಕ್ಕಳನ್ನು ಬಿಟ್ಟು ತವರು ಮನೆಗೆ ತೆರಳಿದ್ದಾರೆ. ಸ್ನೇಹಿತರ ಮೂಲಕ ಸಂಧಾನಕ್ಕೆ ಪ್ರಯತ್ನಿಸಿದಾಗ, ‘ನೀವು ಮತ್ತು ಮಕ್ಕಳು ಮತಾಂತರಗೊಂಡರೆ ಮಾತ್ರ ನಾನು ವಾಪಸ್ ಬರುತ್ತೇನೆ’ ಎಂದು ಕಡಾಖಂಡಿತವಾಗಿ ಹೇಳಿದ್ದಾರೆ ಎಂದು ವಿನಯ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

T20 World Cup: 2ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ – Kannada News | Team India Squad Changes for Namibia T20 WC: Sundar’s Comeback & Bumrah’s Fitness Update

ಅಮೆರಿಕ ವಿರುದ್ಧದ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ 2026 ರ ಟಿ20 ವಿಶ್ವಕಪ್ (T20 World Cup 2026) ಅಭಿಯಾನವನ್ನು ಆರಂಭಿಸಿರುವ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ (India vs Namibia) ವಿರುದ್ಧ ಆಡಲಿದೆ. ಮೊದಲ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆಗಳಾಗಿದ್ದವು. ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ ಹಾಗೂ ಸಂಜು ಸ್ಯಾಮ್ಸನ್ ಪ್ಲೇಯಿಂಗ್​ 11 ನಿಂದ ಹೊರಬಿದ್ದಿದ್ದರು. ಇದೀಗ ಎರಡನೇ ಪಂದ್ಯಕ್ಕೂ ಭಾರತದ ಆಡುವ 11 ರ ಬಳಗದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ. ಹೀಗಾಗಿ ಸುಂದರ್​ಗೆ ಪ್ಲೇಯಿಂಗ್​ನಲ್ಲಿ ಅವಕಾಶಕೊಟ್ಟರೆ ಯುಎಸ್​ಎ ವಿರುದ್ಧ ಆಡಿದ ತಂಡದಲ್ಲಿ ಬದಲಾವಣೆಯಾಗುವುದು ಖಚಿತ.

ಅಭಿಷೇಕ್​ಗೆ ಅನಾರೋಗ್ಯ

ಜ್ವರದಿಂದಾಗಿ ಅಮೆರಿಕ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿ ಔಟಾದ ಅಭಿಷೇಕ್ ಫೀಲ್ಡಿಂಗ್ ಮಾಡಿರಲಿಲ್ಲ. ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್ ಫೀಲ್ಡಿಂಗ್ ಮಾಡಿದ್ದರು.

ಅಭಿಷೇಕ್ ಚೇತರಿಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅಭಿಷೇಕ್‌ಗೆ ವಿಶ್ರಾಂತಿ ನೀಡಿದರೆ, ಸಂಜು ಸ್ಯಾಮ್ಸನ್-ಇಶಾನ್ ಕಿಶನ್ ಭಾರತದ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಆದರೆ ಮುಂದಿನ ಪಂದ್ಯಕ್ಕೆ ಇನ್ನು 4 ದಿನಗಳು ಬಾಕಿ ಇರುವುದರಿಂದ ಅಭಿಷೇಕ್ ಅಷ್ಟರೊಳಗೆ ಗುಣಮುಖರಾಗುವ ಸಾಧ್ಯತೆಯಿದೆ. ಹೀಗಾಗಿ ನಮೀಬಿಯಾ ವಿರುದ್ಧ ಅಭಿಷೇಕ್ ಕಣಕ್ಕಿಳಿಯುವುದು ಖಚಿತ. ಹೀಗಾಗಿ ಸಂಜುಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆ ಇಲ್ಲ.

U19 World Cup 2026: ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ

ಸುಂದರ್, ಬುಮ್ರಾ ಇನ್

ಇನ್ನು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದ ವಾಷಿಂಗ್ಟನ್ ಸುಂದರ್ ಟಿ20 ಸರಣಿ ಮತ್ತು ವಿಶ್ವಕಪ್‌ನ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಅವರು ವಿಶ್ವಕಪ್ ತಂಡವನ್ನು ಸೇರಿಕೊಂಡಿದ್ದಾರೆ.

ಸುಂದರ್ ಅವರನ್ನು ಆಡುವ ಹನ್ನೊಂದರ ಬಳಗಕ್ಕೆ ಸೇರಿಸಿದರೆ, ಕಳಪೆ ಫಾರ್ಮ್‌ನಲ್ಲಿರುವ ರಿಂಕು ಸಿಂಗ್ ಅವರನ್ನು ಕೈಬಿಡುವ ಸಾಧ್ಯತೆಯಿದೆ. ಅವರು ಆಲ್‌ರೌಂಡರ್ ಆಗಿರುವುದರಿಂದ ಸುಂದರ್ ಅವರನ್ನು ಆಡಿಸುವ ಸಾಧ್ಯತೆ ಹೆಚ್ಚಿದೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಯುಎಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಡಿಸಲಾಗಿತ್ತು. ಅಮೆರಿಕ ವಿರುದ್ಧ ಸಿರಾಜ್ ಮೂರು ವಿಕೆಟ್ ಕಬಳಿಸಿದ್ದರು. ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ, ಬುಮ್ರಾ ತಂಡಕ್ಕೆ ಮರಳಿದಾಗ ಸಿರಾಜ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಡಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋಲಾರ: ಬೊಲೆರೊ ಪಲ್ಟಿಯಾಗಿ ಮೂವರು ಸಾವು; 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯ – Kannada News | Kolar Bolero Accident: 3 Laborers Dead, 10 Injured

ಪಲ್ಟಿಯಾಗಿರುವ ಬೊಲೆರೊ Image Credit source: tv9 kannada

ಕೋಲಾರ, ಫೆಬ್ರವರಿ 08: ಬೊಲೆರೊ ಪಲ್ಟಿಯಾಗಿ (Bolero Overturns) ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್​​ ಬಳಿ ನಡೆದಿದೆ. ಆಂಧ್ರದ ಮುನಿಯಮ್ಮ, ವೆಂಕಟಪ್ಪ ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದೆ. ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ: ಗರ್ಭಿಣಿ ಸಾವು

ಬೈಕ್​ಗೆ ಹಿಂದಿನಿಂದ ಬಂದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದ ಗುಂಡಪ್ಪ ಕ್ರಾಸ್​ನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ವೀರೆನಹಳ್ಳೀ ನಿವಾಸಿ ಮಾನಸಾ (29) ಭೀಕರ ಅಪಘಾತದಲ್ಲಿ ಸಾವನ್ನಪಿದ ನಾಲ್ಕು ತಿಂಗಳ ಗರ್ಭಿಣಿ.

ಇದನ್ನೂ ಓದಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ

ಇಂದು ಬೆಳಗ್ಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಂತ ಮಾನಸಾ ಮನೆಯಿಂದ ಸ್ಕೂಟಿಯಲ್ಲಿ ಯಲಹಂಕದ ಕಡೆ ಬಾಗಲೂರು ಮೂಲಕ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಲಾರಿ, ಬೈಕ್​ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹಾಗೆ ಮುಂದಕ್ಕೆ ಸಾಗಿದ್ದು ಚಕ್ರದ ಅಡಿಗೆ ಸಿಲುಕಿ ಮಾನಸಾ ಸಾವನ್ನಪಿದ್ದಾರೆ.

ಇದನ್ನೂ ಓದಿ: ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ

ಇನ್ನು ಇತ್ತೀಚೆಗೆ ಲಾರಿ ಚಾಲಕರ ಅತಿವೇಗ, ಅಜಾಗರೂಕತೆಯಿಂದ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಯಮಸ್ವರೂಪಿ ಲಾರಿಗಳಿಗೆ ಬ್ರೇಕ್ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ. ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಸಮೇತ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:31 pm, Sun, 8 February 26

Source link

ಡ್ರಿಂಕ್ಸ್ ಅಂದ್ಕೊಂಡು ಸ್ಪಿರಿಟ್ ಕುಡಿದ್ರಾ? ಐವರು ಸ್ನೇಹಿತರ ಪೈಕಿ ಇಬ್ಬರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ – Kannada News | Koppal Tragedy: Friends Party Kills Two, One Critical; Survivors Under Suspicion

ಕೊಪ್ಪಳ, ಫೆಬ್ರವರಿ 08: ಅವರೆಲ್ಲಾ ಒಂದೇ ಗ್ರಾಮದವರು. ಅದರಲ್ಲೂ ಐವರು ಸ್ನೇಹಿತರು. ನಾಲ್ಕು ದಿನಗಳ ಹಿಂದೆ ಪಾರ್ಟಿ ಮಾಡಿದ್ದರು. ಐವರಲ್ಲಿ ಇಬ್ಬರು ಸಾವನ್ನಪ್ಪಿದ್ದರೆ (death), ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಬಣ್ಣಕ್ಕೆ ಮಿಕ್ಸ್ ಮಾಡುವ ಸ್ಪಿರಿಟ್‌ (Spirit) ಕುಡಿದಿದ್ದಾರೆ ಎನ್ನಲಾಗುತ್ತಿದೆ. ಮತ್ತಿಬ್ಬರು ಅರೆಸ್ಟ್ ಆಗಿದ್ದಾರೆ. ಪಾರ್ಟಿಯಲ್ಲಿ ಇಬ್ಬರು ಸ್ಪಿರಿಟ್ ಕುಡಿಯದಿರುವುದು ಸದ್ಯ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಅಮರಯ್ಯ ಹಿರೇಮಠ, ರಮೇಶ್ ಹೊಸಹಳ್ಳಿ, ಶರಣಪ್ಪ ಹಂಚಿನಾಳ, ಮಾರುತಿ ಬಂಡಿ ಹಾಗೂ ಶರಣಪ್ಪ ಗುರಿಕಾರ ಕೊಪ್ಪಳ ತಾಲೂಕಿನ ಕೂಕನಪಳ್ಳಿ ನಿವಾಸಿಗಳು. ಇವರ ಪೈಕಿ ಅಮರಯ್ಯ ಹಿರೇಮಠ (35) ಮತ್ತು ರಮೇಶ್ ಹಿರೇಮಠ (25) ಸಾವನ್ನಪ್ಪಿದ್ದಾರೆ. ಶರಣಪ್ಪ ಹಂಚಿನಾಳ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ.

ನಡೆದಿದ್ದೇನು? 

ಫೆಬ್ರವರಿ 4ರಂದು ಅಮರಯ್ಯ, ರಮೇಶ್ ಹಾಗೂ ಶರಣಪ್ಪ ಸ್ಪಿರಿಟ್ ಸೇವನೆ ಮಾಡಿದ್ದರು. ಸ್ಪಿರಿಟ್ ಸೇವನೆ ಮಾಡಿದ ಮರುದಿನವೇ ಅಸ್ವಸ್ಥರಾದ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ನಿನ್ನೆ ರಮೇಶ್ ಹೊಸಹಳ್ಳಿ ಹಾಗೂ ತಡರಾತ್ರಿ ಅಮರಯ್ಯ ಹಿರೇಮಠ ಮೃತಪಟ್ಟಿದ್ದಾರೆ. ಶರಣಪ್ಪ ಹಂಚಿನಾಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಒಟ್ಟು ಐವರು ಸ್ನೇಹಿತರು ಪಾರ್ಟಿ ಮಾಡಿದ್ದರು. ಆದರೆ ಇದರಲ್ಲಿ ಮಾರುತಿ ಬಂಡಿ ಹಾಗೂ ಶರಣಪ್ಪ ಗುರಿಕಾರ ಸ್ಪಿರಿಟ್ ಸೇವನೆ ಮಾಡಿರಲಿಲ್ಲ. ಹೀಗಾಗಿ ಈ ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಇದನ್ನೂ ಓದಿ: ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಮೃತ ರಮೇಶ್ ತಂದೆ ಯಮನೂರಪ್ಪ ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಸ್ಪಿರಿಟ್ ನೀಡಿರುವ ಆರೋಪದಡಿ ಮಾರುತಿ ಹಾಗೂ ಶರಣಪ್ಪ ಗುರಿಕಾರನನ್ನ ಪೊಲೀಸರು ಬಂಧಿಸಿದ್ದಾರೆ. ಆದರೆ ಮಾರುತಿಗೆ ಸ್ಪಿರಿಟ್ ಸಿಕ್ಕಿದ್ದು ಹೇಗೆ ಎನ್ನುವುದು ಸದ್ಯದ ಪ್ರಶ್ನೆ. ಮಾರುತಿ ಹೆದ್ದಾರಿ ಪಕ್ಕದಲ್ಲಿ ಲಾರಿಗಳ ವಾಶಿಂಗ್ ಕೆಲಸ ಮಾಡುತ್ತಿದ್ದ. ಮೂಲತಃ ಕೊಪ್ಪಳ ತಾಲೂಕಿನ ದದೇಗಲ್ ನಿವಾಸಿಯಾಗಿದ್ದು, ಆದರೆ ಕೂಕನಪಳ್ಳಿ ಗ್ರಾಮದಲ್ಲಿ ವಾಸಿಸುತ್ತಿದ್ದ.

ಇಬ್ಬರ ಸಾವಿನ ಹಿಂದೆ ಮತ್ತೊಂದು ಟ್ವಿಸ್ಟ್

ಈ ಘಟನೆ ಬಗ್ಗೆ ಪೊಲೀಸರಿಗೆ ಗೊತ್ತಾಗುತ್ತಿದ್ದಂತೆ ಇವರ ಜೊತೆಗಿದ್ದ ರಮೇಶ್ ಹೊಸಹಳ್ಳಿಯನ್ನ ವಿಚಾರಣೆ ಮಾಡಿದ್ದಾರೆ. ಯಾವುದೇ ದೂರು ದಾಖಲಾಗದಿದ್ದರೂ ಮುನಿರಾಬಾದ್ ಪೊಲೀಸರು ವಿಚಾರಣೆ ಮಾಡುತ್ತಾರೆ. ಆದರೆ ವಿಚಾರಣೆಗೆ ಹೋಗಿ ಬಂದ ಬಳಿಕ ರಮೇಶ್ ಅದೇ ಸ್ಪಿರಿಟ್ ಕುಡಿದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುತ್ತಾನೆ. ನಿನ್ನೆ ಮುಂಜಾನೆ ಆತ ಸಾವನ್ನಪ್ಪಿದ್ದಾನೆ. ಘಟನೆ ನಡೆದು ಎರಡು-ಮೂರು ದಿನಗಳಾಗಿದ್ದರೂ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ. ಇದು ಕೂಡ ಹಲವು ಅನುಮಾನಕ್ಕೆ ಕಾರಣವಾಗಿತ್ತು.

ರಮೇಶ್​ ಏಕೆ ಪೊಲೀಸರ ವಿಚಾರಣೆ ಬಳಿಕ ಮೃತಪಟ್ಟ ಅನ್ನೋದು ಕೂಡ ದೊಡ್ಡ ಪ್ರಶ್ನೆ ಆಗಿದೆ. ಈ ಐವರ ಪಾರ್ಟಿ ಹಿಂದೆ ಇರುವ ಉದ್ದೇಶ ಏನೂ ಅನ್ನೋದು ನಿಗೂಢವಾಗಿದೆ. ಸ್ಪಿರಿಟ್ ಆತನಿಗೆ ಸಿಕ್ಕಿದ್ದು ಹೇಗೆ ಅನ್ನೋದು ಪ್ರಶ್ನೆಯಾಗಿದೆ. ಇನ್ನು ಮಾರುತಿ ಪಕ್ಕಾ ಪ್ಲ್ಯಾನ್ ಮಾಡಿ ಸ್ಪಿರಿಟ್ ಸಂಗ್ರಹ ಮಾಡಿದ್ದ ಎನ್ನಲಾಗುತ್ತಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಆತ ಸ್ಪಿರೀಟ್ ಸಂಗ್ರಹಿಸಿದ್ದ ಎನ್ನಲಾಗಿದೆ. ಕೂಕನಪಳ್ಳಿ ಗ್ರಾಮದಲ್ಲಿ ಮೊದಲೇ ಆತ ಸ್ಪಿರಿಟ್ ಸಂಗ್ರಹ ಮಾಡಿದ್ದ ಅನ್ನೋ ಮಾತುಗಳು ಕೇಳಿ ಬರ್ತಿವೆ.

ಮುಗಿಲು ಮುಟ್ಟಿದೆ ಕುಟುಂಬಸ್ಥರ ಆಕ್ರಂದನ 

ಇನ್ನು ಪೊಲೀಸರ ಮಾಹಿತಿ ಪ್ರಕಾರ, ಗೋವಾ ಡ್ರಿಂಕ್ಸ್ ಅಂದುಕೊಂಡು ಸ್ಪಿರಿಟ್ ಸೇವನೆ ಮಾಡಿದ್ದಾರೆ ಎನ್ನಲಾಗಿದೆ. ಬಣ್ಣಕ್ಕೆ ಮಿಕ್ಸ್ ಮಾಡುವ ಸ್ಪಿರಿಟ್ ಅನ್ನು ಲಾರಿ ಚಾಲಕ ಮಾರುತಿ ಬಳಿ ಕೊಟ್ಟಿದ್ದ. ಅದೇ ಬಾಟಲ್​ ಅನ್ನು ಗೋವಾದ ಕಾಜು ಡ್ರಿಂಕ್ಸ್ ಎಂದು ಕುಡಿದಿದ್ದಾರೆ ಎನ್ನಲಾಗಿದೆ. ಸದ್ಯ ಇಬ್ಬರು ಮೃತಪಟ್ಟಿದ್ದು, ಇಬ್ಬರ ಮನೆಯಲ್ಲೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮೃತ ಅಮರಯ್ಯ ಕೆಇಬಿಯಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡತಿದ್ದ. ರಮೇಶ್ ಹೊಸಹಳ್ಳಿ ಮದುವೆ ವಯಸ್ಸಿಗೆ ಬಂದಿದ್ದ. ತಂದೆ ತಾಯಿಗೆ ಒಬ್ಬನೇ ಮಗ. ಮಗನನ್ನ ಕಳೆದುಕೊಂಡ ಹೆತ್ತವರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆ ನಡೆಸುವಂತೆ ಅತ್ತೆಯಿಂದ ಒತ್ತಾಯ: 11 ತಿಂಗಳ ಮಗು ಬಿಟ್ಟು ಗೃಹಿಣಿ ಆತ್ಮಹತ್ಯೆ

ಒಟ್ಟಾರೆ ಸ್ಪೀರಿಟ್ ಕುಡಿದು ಇಬ್ಬರು ಸಾನ್ನಪ್ಪಿರುವ ಪ್ರಕರಣ ಇದೀಗ ನಿಗೂಢವಾಗಿದೆ. ಸ್ಪಿರಿಟ್ ಕುಡಿದೆ ಸಾವನ್ನಪ್ಪಿದ್ರಾ ಅಥವಾ ಕುಡಿಯೋದ್ರಲ್ಲಿ ಏನಾದರೂ ಮಿಕ್ಸ್ ಮಾಡಿದಾರಾ ಅನ್ನೋ ಅನುಮಾನ ಹುಟ್ಟಿಕೊಂಡಿದೆ. ಸ್ಪಿರಿಟ್ ಸಿಕ್ಕಿದ್ದು ಕೂಡ ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿದ್ದು, ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:08 pm, Sun, 8 February 26

Source link

ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು – Kannada News | R Chandru talks about his realization and upcoming movies

ಆರ್ ಚಂದ್ರು (R Chandru) ಕನ್ನಡದ ಜನಪ್ರಿಯ ನಿರ್ದೇಶಕ. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಕೆಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೆ ಆರ್ ಚಂದ್ರು ಅವರು ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಚಂದ್ರು, ‘ನಾನು ನಿರ್ದೇಶಕ ಆಗಿರುವ ಜೊತೆಗೆ ಕೃಷಿಕ ಸಹ ಹೌದು. ದಾಳಿಂಬೆ, ದ್ರಾಕ್ಷಿ, ರೇಷ್ಮೆ ಇನ್ನೂ ಕೆಲವು ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಕೃಷಿಯ ಜೊತೆಗೆ ಸಿನಿಮಾ ಅನ್ನೂ ಸಹ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಷ್ಟು ದಿನ ಬೇರೆಯವರಿಂದ ಕಲಿಯುತ್ತಿದ್ದೆ, ಈಗ ನನಗೆ ಜ್ಞಾನೋದಯವಾಗಿದೆ, ಇನ್ನು ಮುಂದೆ ನಾನು ಕೊಡುವ ಕಂಟೆಂಟ್, ನಾನು ಇಡುವ ಹೆಜ್ಜೆಗಳು ಬೇರೆ ರೀತಿ ಇರುತ್ತವೆ’ ಎಂದಿದ್ದಾರೆ ಆರ್ ಚಂದ್ರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ENG vs NEP: ಕೊನೆಯ 3 ಓವರ್​ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ – Kannada News | Nepal’s Thrilling 4 Run Loss to England in 2026 T20 World Cup Shocker

2026 ರ ಟಿ20 ವಿಶ್ವಕಪ್‌ನ (T20 World Cup 2026) ಐದನೇ ಪಂದ್ಯದಲ್ಲಿ ನೇಪಾಳ ತಂಡ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ (Nepal vs England) ತಂಡಕ್ಕೆ ಕಠಿಣ ಸವಾಲು ನೀಡಿತು. ಇಂಗ್ಲೆಂಡ್ ನೀಡಿದ 185 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನೇಪಾಳ, ಕೊನೆಯ ಎಸೆತದವರೆಗೂ ಗೆಲುವಿಗಾಗಿ ಹೋರಾಡಿತು. ಆದರೆ, ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ನ ಬಿಗಿಯಾದ ಬೌಲಿಂಗ್‌ನಿಂದ ನೇಪಾಳ 4 ರನ್‌ಗಳಿಂದ ಸೋಲಬೇಕಾಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಇಂಗ್ಲೆಂಡ್ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 7 ವಿಕೆಟ್‌ಗಳ ನಷ್ಟಕ್ಕೆ 184 ರನ್ ಗಳಿಸಿತು. ತಂಡದ ಪರ ಜಾಕೋಬ್ ಬೆಥೆಲ್ 55 ಮತ್ತು ಹ್ಯಾರಿ ಬ್ರೂಕ್ 53 ರನ್ ಗಳಿಸಿದರು. ನೇಪಾಳ ಪರ ದೀಪೇಂದ್ರ ಸಿಂಗ್ ಐರಿ ಮತ್ತು ನಂದನ್ ಯಾದವ್ ತಲಾ ಎರಡು ವಿಕೆಟ್ ಪಡೆದರು.

ಆರ್ಚರ್​ಗೆ 1 ಓವರ್​ನಲ್ಲಿ 3 ಸಿಕ್ಸರ್

ಈ ಗುರಿ ಬೆನ್ನಟ್ಟಿದ ನೇಪಾಳ 17 ಓವರ್​ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 139 ರನ್ ಕಲೆಹಾಕಿತ್ತು. ಅಂದರೆ ಕೊನೆಯ 3 ಓವರ್​ಗಳಲ್ಲಿ ನೇಪಾಳದ ಗೆಲುವಿಗೆ 45 ರನ್​ಗಳು ಬೇಕಾಗಿದ್ದವು. ಇಂಗ್ಲೆಂಡ್​ನ ಬೌಲಿಂಗ್ ವಿಭಾಗವನ್ನು ನೋಡಿದರೆ, ನೇಪಾಳಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿತ್ತು. ಇದಕ್ಕೆ ಪೂರಕವಾಗಿ 18ನೇ ಓವರ್ ಬೌಲ್ ಮಾಡಲು ಬಂದಿದ್ದು, ವಿಶ್ವದ ಅಗ್ರಗಣ್ಯ ವೇಗದ ಬೌಲರ್​ಗಳಲ್ಲಿ ಒಬ್ಬರಾದ ಜೋಪ್ರಾ ಆರ್ಚರ್. ಆದರೆ ಆರ್ಚರ್​ನಂತಹ ಘಾತುಕ ವೇಗಿಗೂ ನೇಪಾಳದ ಬ್ಯಾಟ್ಸ್‌ಮನ್​ಗಳು ಬೆವರಿಳಿಸಿದರು.

ENG vs NEP: ಕ್ರಿಕೆಟ್ ಜನಕ ಇಂಗ್ಲೆಂಡ್​ಗೆ ಸೋಲಿನ ಭಯ ಹುಟ್ಟಿಸಿ ಸೋತ ಕ್ರಿಕೆಟ್ ಶಿಶು ನೇಪಾಳ

ಈ ಓವರ್​ನ ಮೊದಲ ಎಸೆತ ವೈಡ್ ಆದರೆ, ನಂತರದ ಎಸೆತವನ್ನು ಆರಿಫ್ ಸಿಕ್ಸರ್​ಗಟ್ಟಿದರು. ಆದರೆ ನಂತರದ ಎಸೆತದಲ್ಲಿ ಔಟಾದರು. ಆ ನಂತರ ಲೋಕೇಶ್ ಓವರ್​ನ ನಾಲ್ಕು ಮತ್ತು ಐದನೇ ಎಸೆತಗಳಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದರು. ಈ ಮೂಲಕ ಈ ಓವರ್​ನಲ್ಲಿ 22 ರನ್ ಬಂದವು. ಹೀಗಾಗಿ ಕೊನೆಯ 2 ಓವರ್​ಗಳಲ್ಲಿ ನೇಪಾಳ ಗೆಲುವಿಗೆ 23 ರನ್ ಬೇಕಿದ್ದವು. ಲ್ಯುಕ್ ವುಡ್​ ಬೌಲಿಂಗ್ ಮಾಡಿದ 19ನೇ ಓವರ್​ನಲ್ಲಿ ನೇಪಾಳ 13 ರನ್ ಕಲೆಹಾಕಿತು. ಈ ಓವರ್​ನಲ್ಲೂ ಲೋಕೇಶ್ 2 ಬೌಂಡರಿ ಬಾರಿಸಿದರು. ಅಂತಿಮವಾಗಿ ಕೊನೆಯ ಓವರ್​ನಲ್ಲಿ ನೇಪಾಳಕ್ಕೆ 10 ರನ್ ಬೇಕಿದ್ದವು. ಆದರೆ 20ನೇ ಓವರ್​ ಬೌಲ್ ಮಾಡಿದ ಸ್ಯಾಮ್ ಕರನ್ ತಮ್ಮ ಸ್ಲೋ ಯಾರ್ಕರ್​ಗಳಿಂದ ನೇಪಾಳಿ ಬ್ಯಾಟ್ಸ್‌ಮನ್​ಗಳನ್ನು ಬಿಗ್ ಶಾಟ್ ಹೊಡೆಯದಂತೆ ತಡೆದರು. ಈ ಓವರ್​ನಲ್ಲಿ ಒಂದೇ ಒಂದು ಬೌಂಡರಿಯಾಗಲಿ ಅಥವಾ ಸಿಕ್ಸರ್ ಆಗಲಿ ಬರಲಿಲ್ಲ. ಇದರ ಪರಿಣಾಮವಾಗಿ ನೇಪಾಳ ತಂಡ 4 ರನ್​ಗಳ ಸೋಲು ಕಾಣಬೇಕಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ – Kannada News | 8 death, several Injured In Road Accident at various districts In Karnataka On February 8th

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ.

ತುಮಕೂರಿನಲ್ಲಿ ಸರಣಿ ಅಪಘಾತ

ತುಮಕೂರು: ಇನ್ನೊಂದೆಡೆ 3 ಕಾರುಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಬಾಣಾವರ ಬಳಿ ಈ ಸರಣಿ ಅಪಘಾತ ಸಂಭವಿಸಿದೆ. ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಕ್ವಾಲಿಸ್ ಹಾಗೂ ಮುಂದೆ ಬರುತಿದ್ದ ಎಸ್ಟೀಮ್ ಹಾಗೂ ಬೋಲೆನೋ ಕಾರಿನ ನಡುವೆ ಸರಣಿ ಅಪಘಾತ‌ ನಡೆದಿದೆ. ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆ ರವಾನೆ ಮಾಡಲಾಗಿದೆ. ಮುರುಳಿ, ಸುರೇಶ್ ಮೃತ ದುರ್ವೈವಿಗಳು. ಇನ್ನು ಅಪಘಾತದಲ್ಲಿ ತುಮಕೂರು ಸೆನ್ ಇನ್ಸ್ ಪೆಕ್ಟರ್ ರಾಮಕೃಷ್ಣ ಸೇರಿದಂತೆ ಗಾಯಾಳುಗಳನ್ನು ತಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ

ಚಿಕ್ಕಬಳ್ಳಾಪುರ: ಚಿಂತಾಮಣಿ ಹೊರವಲಯದಲ್ಲಿ ಕಾರು ಡಿಕ್ಕಿ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​​​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಹೊರವಲಯದಲ್ಲಿ ದುರ್ಘಟನೆ ನಡೆದಿದೆ. ಕಾರು ಬೈಕ್​ಗೆ ಡಿಕ್ಕಿ ಹೊಡೆದು 200 ಮೀಟರ್ ಎಳೆದೊಯ್ದಿದೆ. ಬೈಕ್​​​ನಲ್ಲಿದ್ದ ನಾಗರಾಜು(68), ವೆಂಕಟರೆಡ್ಡಿ(50) ಮೃತಪಟ್ಟಿದ್ದಾರೆ.

ಆಟೋ ಡಿಕ್ಕಿಯಾಗಿ ವೃದ್ಧ ಸಾವು

ಚಿಕ್ಕಮಗಳೂರು: ಆಟೋ ಡಿಕ್ಕಿಯಾಗಿ ಸ್ಕೂಟಿಯಲ್ಲಿ ತೆರಳ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಬ್ಬಿಣಸೇತುವೆ ಗ್ರಾಮ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಉದ್ದೇಗೌಡ(68) ಎನ್ನುವ ಸ್ಕೂಟಿಯಲ್ಲಿ ಹೋಗುತ್ತಿದ್ದು, ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಆಟೋ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸದ್ಯ ಆಲ್ದೂರು ಪೊಲೀಸರು ಆಟೋ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link