Category Archives: Blog

Your blog category

ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ – Kannada News | Shocking Bihar Pakadwa Vivah: Home Guard Aspirant Kidnapped and Drugged for Marriage

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು ಎನ್ನಲಾಗಿದೆ. ಯುವಕನ ಹೇಳಿಕೆಯ ಪ್ರಕಾರ, ಅವರು ಕಣ್ಣು ಬಿಟ್ಟಾಗ ಮದುವೆ ಮಂಟಪದಲ್ಲಿದ್ದರು. ಮಾದಕ ದ್ರವ್ಯದ ಪ್ರಭಾವದಿಂದ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದಾಗಲೇ, ಬೆದರಿಕೆ ಹಾಕಿ ಯುವತಿಯೊಬ್ಬಳ ಜೊತೆ ಮದುವೆ ವಿಧಿವಿಧಾನಗಳನ್ನು ಮಾಡಲಾಗಿದೆ. ನಾನು ಎಚ್ಚರಗೊಂಡಾಗ ಮದುವೆಯ ಕಾರ್ಯಗಳು ನಡೆಯುತ್ತಿದ್ದವು, ನನಗೆ ಏನಾಗುತ್ತಿದೆ ಎಂದು ಅರ್ಥವಾಗುವಷ್ಟರಲ್ಲಿ ಮದುವೆ ಮುಗಿದಿತ್ತು ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ – Kannada News | Karnataka Government Closes 638 Kannada Schools; Former CM Basavaraj Bommai Demands Reopening

ಮಾಜಿ ಸಿಎಂ ಬಸವರಾಜ ಬೊಮ್ಮಾಯಿImage Credit source: scroll.in

ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್​ ಸ್ಕೂಲ್​​ (KPS​​) ಮ್ಯಾಗ್ನೆಟ್​ ಯೋಜನೆ ಜಾರಿಗೆ ಮುಂದಾಗಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj S Bommai)
ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ.  ಇದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ, ಕನ್ನಡ ಶಾಲೆಗಳ ಪುನರಾರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಬೊಮ್ಮಾಯಿ

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಮೇಲಿಂದ ಮೇಲೆ ಚುನಾವಣೆಯಲ್ಲಿ ಸೋಲುತ್ತಿರುವುದರಿಂದ ಅವರ ನಾಯಕ ಹತಾಶರಾಗಿದ್ದಾರೆ. ಹೀಗಾಗಿ ಸಂಸತ್ತಿನಲ್ಲಿ ಅವರು ನಗರ ನಕ್ಸಲರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​

ಬೆಂಚ್​ಗಳ ಮೇಲೆ ನಿಲ್ಲುವುದು, ಸ್ಪೀಕರ್ ಮೇಲೆ ದಾಳಿ ಮಾಡುವುದು ಇದು ಮಿತಿಮೀರಿದೆ. ಕಾಂಗ್ರೆಸ್ ಮಹಿಳಾ ಸಂಸದರು  ಪ್ರಧಾನಮಂತ್ರಿಯ ಆಸನದವರೆಗೆ ಬಂದು ಅವರು ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ರೀತಿ ಸಂಸತ್ತಿನ ಇತಿಹಾಸದಲ್ಲಿ ಯಾವತ್ತೂ ಆಗಿರಲಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್​ನಲ್ಲಿ ಕೆಲಸ! SSLC ಫಲಿತಾಂಶ ಹೆಚ್ಚಿಸಲು ವಿನೂತನ ಪ್ರಯೋಗ

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸಲು ಬಿಡುತ್ತಾರೆ ಎನ್ನುವ ನಂಬಿಕೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ, ಅವರು ಜನರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ. ಅವರು ತೊಂದರೆ ಕೊಡುವುದನ್ನೇ ಅಜೆಂಡಾ ಮಾಡಿಕೊಂಡಿದ್ದಾರೆ. ಬಹುತೇಕ ಅದೇ ಆಗಬಹುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ – Kannada News | Karnataka CM Post Battle: DK Suresh Backs Shivakumar, Recalls Siddaramaiah’s Promise

ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆImage Credit source: Tv9 Kannada

ಬೆಂಗಳೂರು, ಫೆಬ್ರವರಿ 11: ರಾಜ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಫೈಟ್​ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್​​ ದೆಹಲಿಗೆ ಹಾರಿದ್ದರೆ, ಇತ್ತ ಡಿ.ಕೆ. ಸುರೇಶ್​ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಈಗಲೂ ಭರವಸೆ ಇದೆ ಎಂದಿದ್ದಾರೆ.

ಡಿಕೆಶಿ ಪರ ಸಹೋದರನ ಬ್ಯಾಟಿಂಗ್​​


ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂದು ಕಾಂಗ್ರೆಸ್​​ ಎಂಎಲ್ಸಿ ಯತೀಂದ್ರ ಹೇಳಿಕೆ ಸಂಬಂಧವೂ ವ್ಯಂಗ್ಯವಾಡಿರುವ ಸುರೇಶ್​​, ಅವರು ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ. ಕಾಂಗ್ರೆಸ್​ ಪಕ್ಷದ ಕೆಲ ಶಾಸಕರಿಗೆ ಡಿಕೆಶಿ ವಿದೇಶ ಪ್ರವಾಸ ಆಯೋಜಿಸಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ವಿದೇಶ ಪ್ರವಾಸಕ್ಕೂ ಡಿ.ಕೆ.ಶಿವಕುಮಾರ್​ಗೂ ಸಂಬಂಧವಿಲ್ಲ. ಯಾರು ವಿದೇಶ ಪ್ರವಾಸ ಹೋಗ್ತಿದ್ದಾರೆ ಅವರನ್ನೇ ನೀವು ಕೇಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ತಾರಕಕ್ಕೇರಲಿದೆ ಕುರ್ಚಿ ಕದನ; ಟೂರ್ ಪಾಲಿಟಿಕ್ಸ್ Vs ರೆಸಾರ್ಟ್ ಪಾಲಿಟಿಕ್ಸ್​ಗೆ ಬಣಗಳ ಸಿದ್ಧತೆ

‘ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ’

ನಿಗಮ ಮಂಡಳಿಯಲ್ಲಿ ಬಿಜೆಪಿ ಮುಖಂಡನಿಗೆ ಸ್ಥಾನ ನೀಡಿದ ವಿಚಾರವಾಗಿಯೂ ಸರ್ಕಾರದ ವಿರುದ್ಧ ಡಿ.ಕೆ.ಸುರೇಶ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲರನ್ನೂ ಗೌರವಿಸುತ್ತದೆ ಅಂತಾಯ್ತಲ್ಲ. ರಾಜ್ಯ ಸರ್ಕಾರ ಎಲ್ಲರನ್ನೂ ಕೂಡ ಜೊತೆಗೆ ಕರೆದೊಯ್ಯಬೇಕು. ಕಾಂಗ್ರೆಸ್​ ಪಕ್ಷದ್ದು ಸರ್ವಧರ್ಮ ಪಾಲಿಸಿ ಅಲ್ವಾ? ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಎಲ್ಲ ವಿಚಾರದಲ್ಲೂ ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಎರಡನೇ‌ ಆದ್ಯತೆ ನೀಡಲಾಗುವುದು ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರ ನಡೆ ಬಗ್ಗೆ ಕಿಡಿ ಕಾರಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ – Kannada News | Don’t Ask the Same Question Repeatedly: Siddaramaiah Reacts Sharply, Says He and DK Will Follow High Command

ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಸಿಎಂ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆಯಿತು. ಕಳೆದ ಮೂರು ತಿಂಗಳಿಂದಲೂ ಇದೇ ವಿಷಯವನ್ನು ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು.

ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ ಖರ್ಚಿನಲ್ಲಿದ್ದರೆ ವಿವಾದ ಏಕೆ ಎಂದು ಪ್ರಶ್ನಿಸಿದರು. ಆದರೆ, ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಯಿಂದ ಅವರು ಸಿಡಿಮಿಡಿಗೊಂಡರು.

‘ನಾನು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪಕ್ಷದ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ, ಅದನ್ನು ನಾವು ತಪ್ಪದೆ ಪಾಲಿಸುತ್ತೇವೆ. ಇದು ಸಂಪೂರ್ಣವಾಗಿ ಹೈಕಮಾಂಡ್​ಗೆ ಬಿಟ್ಟ ವಿಚಾರ’ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

Source link

ಜೈಲು ಸೇರಿದ ರಾಜ್​ಪಾಲ್ ಯಾದವ್​​ಗೆ ಹರಿದು ಬರುತ್ತಿದೆ ನೆರವು

ಬಾಲಿವುಡ್​ನ (Bollywoo) ಖ್ಯಾತ ಹಾಸ್ಯನಟ ರಾಜ್​​ಪಾಲ್ ಯಾದವ್ 2010ರ ಹಳೆಯ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ದೋಷಿಯೆಂದು ಆದೇಶಿಸಲಾಗಿದೆ ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ವರ್ಷಗಳ ಕಾಲ ನಡೆದ ನ್ಯಾಯಾಲಯದ ಸಮರದಲ್ಲಿ ರಾಜ್​​ಪಾಲ್ ಯಾದವ್ ಅವರಿಗೆ ಸೋಲಾಗಿದ್ದು ಇತ್ತೀಚೆಗಷ್ಟೆ ಅವರು ನ್ಯಾಯಾಲಯದ ಆದೇಶದಂತೆ ತಿಹಾರ್ ಜೈಲಿಗೆ ಸರೆಂಡರ್ ಆಗಿದ್ದು ಮುಂದಿನ ಹಲವು ತಿಂಗಳು ಅವರು ಜೈಲಿನಲ್ಲಿ ಸೆರೆವಾಸ ಅನುಭವಿಸಬೇಕಿದೆ. ಆದರೆ ಇದೀಗ ರಾಜ್​ಪಾಲ್ ಯಾದವ್ ಅವರಿಗೆ ಚಿತ್ರರಂಗದ ನೆರವು ಸಿಗುತ್ತಿದೆ.

ರಾಜ್​​ಪಾಲ್ ಯಾದವ್ ಬಾಲಿವುಡ್​ನಲ್ಲಿ 27 ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ ಹಾಸ್ಯನಟರಲ್ಲಿ ರಾಜ್​ಪಾಲ್ ಯಾದವ್ ಸಹ ಒಬ್ಬರು. ಇದೇ ಕಾರಣಕ್ಕೆ ಚಿತ್ರರಂಗದ ಕೆಲವರು ಇದೀಗ ರಾಜ್​ಪಾಲ್ ಯಾದವ್ ಅವರ ನೆರವಿಗೆ ಬಂದಿದ್ದಾರೆ. ಇತ್ತೀಚೆಗೆ ಟ್ವೀಟ್ ಮಾಡಿದ್ದ ನಟ ಸೋನು ಸೂದ್, ‘ಚಿತ್ರರಂಗದವರು ರಾಜ್​ಪಾಲ್ ಯಾದವ್ ನೆರವಿಗೆ ಬರಬೇಕು, ಅವರೊಟ್ಟಿಗೆ ಸಿನಿಮಾ ಸಹಿ ಮಾಡಿಸಿಕೊಂಡಾದರೂ ಅವರಿಗೆ ಅಡ್ವಾನ್ಸ್ ರೂಪದಲ್ಲಿ ಹಣ ನೀಡಬೇಕು, ನಾನೂ ಸಹ ಹಾಗೆಯೇ ಮಾಡುತ್ತಿದ್ದೇನೆ. ಇದರಿಂದ ಅವರ ಸಮಸ್ಯೆಗೆ ಪರಿಹಾರ ಸಿಗುತ್ತದೆ’ ಎಂದಿದ್ದರು.

ಇದೀಗ ಖ್ಯಾತ ಸಂಗೀತ ನಿರ್ದೇಶಕ ರಾವ್ ಇಂದೆರ್ಜೀತ್ ಸಿಂಗ್ ಅವರು ರಾಜ್​ಪಾಲ್ ಯಾದವ್ ಸಹಾಯಕ್ಕೆ ಬಂದಿದ್ದು, ರಾಜ್​ಪಾಲ್ ಯಾದವ್ ಅವರಿಗೆ 1.11 ಕೋಟಿ ರೂಪಾಯಿಗಳ ನೆರವು ನೀಡಿದ್ದಾರೆ. ‘ಭೂಲ್ ಭುಲಯ್ಯ’, ‘ಹಂಗಾಮ’, ‘ವೆಲ್​​ಕಮ್’ ಇನ್ನೂ ಹಲವು ಹಿಂದಿ ಸಿನಿಮಾಗಳಿಗೆ ಸಂಗೀತ ನೀಡಿರುವ ರಾವ್ ಇಂದೆರ್ಜೀತ್ ಸಿಂಗ್ ಅವರು ರಾಜ್​​ಪಾಲ್ ಯಾದವ್ ಅವರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಇದನ್ನೂ ಓದಿ:ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ

ಈ ಬಗ್ಗೆ ಮಾತನಾಡಿರುವ ಇಂದೆರ್ಜೀತ್ ಸಿಂಗ್, ‘ರಾಜ್​​ಪಾಲ್ ಯಾದವ್ ಅವರು ಭಾರತೀಯರನ್ನು ದಶಕಗಳಿಂದಲೂ ರಂಜಿಸುತ್ತಾ ಬಂದಿದ್ದಾರೆ. ಸಿನಿಮಾ ಪ್ರೇಮಿಗಳಿಗೆ ಹಲವು ನೆನಪುಳಿವ, ಸಂತೋಷದ ಕ್ಷಣಗಳನ್ನು ನೀಡಿದ್ದಾರೆ. ಭಾರತೀಯ ಚಿತ್ರರಂಗದ ಅವಿಭಾಜ್ಯ ಅಂಗ ಸಹ ಆಗಿದ್ದಾರೆ. ಇದು ಕೇವಲ ಹಣದ ಸಹಾಯ ಮಾತ್ರ ಅಲ್ಲ. ಇದು ಒಬ್ಬ ವ್ಯಕ್ತಿ ಕಷ್ಟದಲ್ಲಿದ್ದಾಗ, ಅದರಲ್ಲೂ ಒಬ್ಬ ಚಿತ್ರಕರ್ಮಿ ಕಷ್ಟದಲ್ಲಿದ್ದಾಗ ಜೊತೆಗೆ ನಿಲ್ಲಬೇಕಾದುದು ಕರ್ತವ್ಯ ಎಂಬ ಕಾರಣಕ್ಕೆ ಮಾಡಿದ ಸಹಾಯ’ ಎಂದಿದ್ದಾರೆ.

ರಾಜ್​​ಪಾಲ್ ಯಾದವ್ ಅವರಿಗೆ 10 ಲಕ್ಷ ರೂಪಾಯಿ ಹಣ ಸಹಾಯ ಮಾಡುವುದಾಗಿ ವಿವಾದಾತ್ಮಕ ಸಿನಿಮಾ ವಿಮರ್ಶಕ ಕಮಾಲ್ ಆರ್ ಖಾನ್ ಸಹ ಹೇಳಿದ್ದಾರೆ. ಕೆಲ ಮಾಹಿತಿಗಳ ಪ್ರಕಾರ, ಚಿತ್ರರಂಗದ ಕೆಲವು ದಿಗ್ಗಜರು ತೆರೆ ಮರೆಯಲ್ಲಿ ರಾಜ್​ಪಾಲ್ ಯಾದವ್ ಅವರಿಗೆ ಹಣ ನೀಡಿದ್ದಾರೆ ಎಂದು ಸಹ ಹೇಳಲಾಗುತ್ತಿದೆ.

ರಾಜ್​​ಪಾಲ್ ಯಾದವ್ ಅವರು 9 ಕೋಟಿ ರೂಪಾಯಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಒಂದೊಮ್ಮೆ ಅವರು 9 ಕೋಟಿ ರೂಪಾಯಿ ಹಣವನ್ನು ಕಟ್ಟಿದ್ದೇ ಆದಲ್ಲಿ ಅವರು ಜೈಲಿನಿಂದ ಬಿಡುಗಡೆ ಹೊಂದಬಹುದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಕ್ಲು ಶಿವ ಕೊಲೆ ಕೇಸ್​: ಭೈರತಿ ಬಸವರಾಜ್ ವಿರುದ್ಧ ಲುಕ್ ಔಟ್ ನೋಟಿಸ್ – Kannada News | Biklu Shiva Murder Case: Lookout Notice Issued for Byrathi Basavaraj After Bail Cancellation

ಬೆಂಗಳೂರು, ಫೆಬ್ರವರಿ 11: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಬೇಲ್ ಅರ್ಜಿ ಎರಡು ಬಾರಿ ರದ್ದಾದ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶಕ್ಕೆ ತೆರಳುವುದನ್ನು ತಡೆಯುವ ನಿಟ್ಟಿನಲ್ಲಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಟಿವಿ9ಗೆ ಸಿಐಡಿ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಭೈರತಿ ಬಸವರಾಜ್ ಸ್ವತಃ ಶರಣಾದರೆ ಒಳ್ಳೆಯದು. ಇಲ್ಲವಾದರೆ ಪೊಲೀಸರು ಅವರನ್ನು ಪತ್ತೆ ಹಚ್ಚಿ ಬಂಧಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಕೊಡಿ: ಹೂವು ಮಾರುವಾಕೆಯ ಮುಗ್ಧತೆಗೆ ಮನಸೋತ ಮಹಿಳೆ – Kannada News | Heartwarming Viral Video: Flower Seller’s Respect and Joy Inspires

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಒಬ್ಬ ಹೂವು ಮಾರುವ ಮಹಿಳೆಯ ಮುಗ್ಧತೆ ಮತ್ತು ಆಕೆಯ ಮುಖದಲ್ಲಿರುವ ಸುಂದರವಾದ ನಗು ಎಲ್ಲರ ಗಮನ ಸೆಳೆಯುತ್ತದೆ. ಆಕೆ ಹಣಕ್ಕಿಂತ ಹೆಚ್ಚಾಗಿ ಪ್ರೀತಿ ಮತ್ತು ಗೌರವಕ್ಕೆ ಬೆಲೆ ನೀಡುತ್ತಾಳೆ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರವಾಗುತ್ತದೆ. ಈ ವಿಡಿಯೋ ಇಷ್ಟೊಂದು ಜನರಿಗೆ ತಲುಪಲು ಮುಖ್ಯ ಕಾರಣ ಆ ಹೂವು ಮಾರುವ ಮಹಿಳೆಯ ಆತ್ಮವಿಶ್ವಾಸ ಮತ್ತು ಮುಗ್ಧತೆ ಕಾರಣ. ಸಾಮಾನ್ಯವಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರು ಗ್ರಾಹಕರೊಂದಿಗೆ ಚೌಕಾಶಿ ಮಾಡುವುದನ್ನು ನಾವು ನೋಡುತ್ತೇವೆ. ಆದರೆ ಇಲ್ಲಿ ಈಕೆ, ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಅಷ್ಟೇ ಕೊಡಿ. ಎಂದು ಹೇಳುವ ಮೂಲಕ ಹಣಕ್ಕಿಂತ ಗೌರವ ಮತ್ತು ಸಂಬಂಧಕ್ಕೆ ಹೆಚ್ಚಿನ ಬೆಲೆ ನೀಡಿದ್ದಾಳೆ. ಈ ವಿಡಿಯೋದಲ್ಲಿ ನಡೆದ ಸಂಭಾಷಣೆ ಏನು? ಎಂಬುದು ಇಲ್ಲಿದೆ. ಹೂವು ಮಾರುವಾಕೆ ಅರೇ… ಇಲ್ಲ ಇಲ್ಲ ಇಲ್ಲ. ಇದು ನಿಮಗಾಗಿ, ಇದಕ್ಕೆ ಕಾರಿನಲ್ಲಿದ್ದವರು ಎಷ್ಟು ಇದರ ಬೆಲೆ? ಹೇಳಿ ಎಂದು ಕೇಳುತ್ತಾರೆ. ಇಟ್ಟುಕೊಳ್ಳಿ ದೀದಿ. ಪರವಾಗಿಲ್ಲ ಎಂದು ಹೂವು ಮಾರುವಾಕೆ ಹೇಳುತ್ತಾಳೆ. ಫ್ರೀ ಆದ್ರೆ ಬೇಡ, ನನಗೆ ಬೇಡ ಎಂದು ಕಾರಿನಲ್ಲಿದ್ದವರು ಹೇಳುತ್ತಾರೆ. ಮತ್ತೆ ಹೂವು ಮಾರುವ ಮಹಿಳೆ, ಇಲ್ಲ, ಇದು ನಿಮಗಾಗಿ ಎಂದು ಹೇಳುತ್ತಾಳೆ. ಇದರ ಬೆಲೆ ಎಷ್ಟು? ಬೇಗ ಹೇಳಿ ಎಂದು ಕಾರಿನಲ್ಲಿದ್ದವರು ಕೇಳುತ್ತಾರೆ. ನೀವು ಖುಷಿಯಿಂದ ಎಷ್ಟು ಕೊಡ್ತೀರೋ ಅಷ್ಟು ಕೊಡಿ ಎಂದು ಈ ಮಹಿಳೆ ಹೇಳುತ್ತಾಳೆ. ಥ್ಯಾಂಕ್ ಯು ಸರ್… ಬಾಯ್! ಎಂದು ಹೇಳುತ್ತಾಳೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಹೊಸ ಐಟಿ ರೂಲ್ಸ್; ಎಐ ಸೃಷ್ಟಿದ ಕಂಟೆಂಟ್​ಗೆ ಲೇಬಲಿಂಗ್ ಕಡ್ಡಾಯ; ಫೇಸ್​ಬುಕ್, ಇನ್ಸ್​ಟಾಗಳಿಗೆ ಕಠಿಣ ನಿಯಮ – Kannada News | New IT rules from 2026 Feb 20th, mandatory AI content labelling and other things to know

ಡೀಪ್ ಫೇಕ್ ಕಂಟೆಂಟ್​ನ ಸಾಂದರ್ಭಿಕ ಚಿತ್ರ

ನವದೆಹಲಿ, ಫೆಬ್ರುವರಿ 11: ಎಐ ಸೃಷ್ಟಿದ ಫೋಟೋ, ವಿಡಿಯೋಗಳು (AI generated content) ಥೇಟ್ ನೈಜ ವ್ಯಕ್ತಿ ಮತ್ತು ಸ್ಥಳದ್ದೇ ಎನಿಸುವಂತಿರುತ್ತವೆ. ಯಾವುದು ಅಸಲಿ, ಯಾವುದು ಕೃತಕ ಎಂದು ಮೇಲ್ನೋಟಕ್ಕೆ ಕಂಡು ಹಿಡಿಯುವುದು ಕಷ್ಟ. ದುರುಳರು ಈ ಎಐ ಅನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ. ಇದನ್ನು ನಿಯಂತ್ರಿಸಲು ಸರ್ಕಾರವು ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ರೂಪಿಸಿದೆ. ಡೀಪ್​ಫೇಕ್ ವಿಡಿಯೋ, ಸಿಂಥೆಟಿಕ್ ಆಡಿಯೋ, ತಿರುಚಿದ ದೃಶ್ಯಗಳು ಇತ್ಯಾದಿ ಎಐ ಸೃಷ್ಟಿದ ಕಂಟೆಂಟ್ ಅನ್ನು ಐಟಿ ನಿಯಮಗಳಡಿ ತರಲಾಗಿದೆ. ಫೆಬ್ರುವರಿ 20ರಿಂದ ಹೊಸ ನಿಯಮಗಳು ಜಾರಿಗೆ ಬರುತ್ತವೆ.

ಎಐ ಕಂಟೆಂಟ್ ಎಂದು ನೋಡಿದ ಕೂಡಲೇ ಗೊತ್ತಾಗಬೇಕು…

ಫೇಸ್​ಬುಕ್ ಇತ್ಯಾದಿ ಪ್ಲಾಟ್​ಫಾರ್ಮ್​ಗಳು ತಮ್ಮಲ್ಲಿ ಅಪ್​ಲೋಡ್ ಆಗುವ ಕಂಟೆಂಟ್​ಗಳು ಸಿಂಥೆಟಿಕ್ ಆಗಿದ್ದರೆ ಅದು ಗೊತ್ತಾಗುವ ರೀತಿಯಲ್ಲಿ ಲೇಬಲ್ ಆಗಿರಬೇಕು. ಮೆಟಾಡಾಟಾ ಮತ್ತು ಯೂನಿಕ್ ಐಡೆಂಟಿಫೈರ್​ಗಳನ್ನು ಎಂಬೆಡ್ ಮಾಡಬೇಕು. ಒಟ್ಟಿನಲ್ಲಿ, ಸೋಷಿಯಲ್ ಮೀಡಿಯಾ ಮತ್ತು ವೆಬ್​ಸೈಟ್​ಗಳಲ್ಲಿ ಸಿಂಥೆಟಿಕ್ ಕಂಟೆಂಟ್ ಅಪ್​ಲೋಡ್ ಆಗಿದ್ದರೆ, ಅದು ನೋಡುಗರಿಗೆ ಸ್ಪಷ್​ಟವಾಗಿ ಗೊತ್ತಾಗುವಂತಿರಬೇಕು ಎಂಬುದು ಆಶಯ.

ಸಿಂಥೆಟಿಕ್ ಅಥವಾ ಎಐ ಜನರೇಟೆಡ್ ಕಂಟೆಂಟ್ ಯಾವುವು?

ನೈಜವೆನಿಸುವ ರೀತಿಯಲ್ಲಿ ಕಂಪ್ಯೂಟರ್ ಬಳಸಿ ಯಾವುದೇ ಧ್ವನಿ ಅಥವಾ ದೃಶ್ಯವನ್ನು ಸೃಷ್ಟಿಸಿದ್ದರೆ ಅಥವಾ ಬದಲಾಯಿಸಿದ್ದರೆ ಅಂಥದ್ದನ್ನು ಸಿಂಥೆಟಿಕ್ ಆಗಿ ಸೃಷ್ಟಿಸಿದ ಮಾಹಿತಿ ಎಂದು ವ್ಯಾಖ್ಯಾನಿಸಲಾಗಿದೆ.

ಇದನ್ನೂ ಓದಿ: ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

ಗಮನಿಸಬೇಕಾದ ಸಂಗತಿ ಎಂದರೆ, ಫೋಟೋ ಅಥವಾ ವಿಡಿಯೋದಲ್ಲಿ ಮಾಡಲಾಗುವ ಎಲ್ಲಾ ಬದಲಾವಣೆಗಳೂ ಇದಕ್ಕೆ ಒಳಪಡುವುದಿಲ್ಲ. ಉದಾಹರಣೆಗೆ, ಫೋಟೋ ಅಥವಾ ವಿಡಿಯೋದಲ್ಲಿ ಕಲರ್ ಕರೆಕ್ಷನ್, ಬ್ರೈಟ್ನೆಸ್ ಹೊಂದಾಣಿಕೆ, ನಾಯ್ಸ್ ಕರೆಕ್ಷನ್ ಇತ್ಯಾದಿ ಮಾಡಿದರೆ ಸಮಸ್ಯೆ ಇರುವುದಿಲ್ಲ.

ಬಳಕೆದಾರರಿಗೆ ಜವಾಬ್ದಾರಿ…

ಸೋಷಿಯಲ್ ಮೀಡಿಯಾ ಬಳಕೆದಾರರು ತಾವು ಅಪ್​ಲೋಡ್ ಮಾಡುವ ಕಂಟೆಂಟ್ ಎಐ ಸೃಷ್ಟಿತವಾಗಿದ್ದರೆ ಅದನ್ನು ನಮೂದಿಸಬೇಕು. ಇವರು ಕಂಟೆಂಟ್ ಅನ್ನು ಅಪ್​ಲೋಡ್ ಮಾಡುವ ಮುನ್ನ ಅದು ಎಐ ಜನರೇಟೆಡ್ ಹೌದಾ ಅಲ್ಲವಾ ಎಂಬುದನ್ನು ಪ್ಲಾಟ್​ಫಾರ್ಮ್​ಗಳು ಕೇಳಬೇಕು. ಫೇಸ್ಬುಕ್​ನಲ್ಲಿ ಯಾರಾದರೂ ಫೋಟೋ ಅಪ್ಲೋಡ್ ಮಾಡುವಾಗ ಇದನ್ನು ಘೋಷಿಸಬೇಕು.

ಇಷ್ಟು ಮಾತ್ರವಲ್ಲ, ಯಾರಾದರೂ ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಎಐ ಸೃಷ್ಟಿತ ಕಂಟೆಂಟ್ ಅನ್ನು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ಹಾಕುವ ಸಾಧ್ಯತೆ ಇರುವುದರಿಂದ, ಆಟೊಮೇಟ್ ಟೂಲ್​ಗಳ ಮೂಲಕ ಅವುಗಳ ಕ್ರಾಸ್ ವೆರಿಫಿಕೇಶನ್ ಮಾಡಬೇಕು ಎನ್ನುತ್ತದೆ ನಿಯಮ.

ಪ್ಲಾಟ್​ಫಾರ್ಮ್​ಗಳಿಗೆ ಕಡಿಮೆ ಸಮಯಾವಕಾಶ…

ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ನಿರ್ದಿಷ್ಟ ಕಂಟೆಂಟ್ ಅನ್ನು ತೆಗೆದುಹಾಕಲು ಕಾನೂನಿನ ಆದೇಶ ಬಂದರೆ ಅದನ್ನು ಪಾಲಿಸಲು 36 ಗಂಟೆ ಇದ್ದ ಕಾಲಾವಕಾಶದ ಅವಧಿಯನ್ನು 3 ಗಂಟೆಗೆ ಇಳಿಸಲಾಗಿದೆ. 15 ದಿನಗಳಿದ್ದ ಕಾಲಾವಕಾಶವನ್ನು ಏಳು ದಿನಕ್ಕೆ ಇಳಿಸಲಾಗಿದೆ. 24 ಗಂಟೆ ಇದ್ದ ಡೆಡ್​ಲೈನ್ ಅನ್ನು 12 ಗಂಟೆಗೆ ಇಳಿಸಲಾಗಿದೆ.

ಇದನ್ನೂ ಓದಿ: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ

ಇವು ಕೂಡ ಕ್ರಿಮಿನಲ್ ಅಪರಾಧಗಳೇ…

ಮಕ್ಕಳ ಲೈಂಗಿಕ ದುರ್ಬಳಕೆಯ ಸರಕುಗಳು, ಅಶ್ಲೀಲ ಕಂಟೆಂಟ್, ನಕಲಿ ಎಲೆಕ್ಟ್ರಾನಿಕ್ ರೆಕಾರ್ಡ್​ಗಳು, ನೈಜ ವ್ಯಕ್ತಿಯನ್ನು ಹೋಲುವ ಡೀಪ್​ಫೇಕ್​ಗಳು ಮತ್ತು ನಕಲಿ ಧ್ವನಿಗಳನ್ನು ಸೃಷ್ಟಿಸಿದರೆ ಅದು ಭಾರತೀಯ ನ್ಯಾಯ ಸಂಹಿತೆ, ಪೋಕ್ಸೋ ಕಾಯ್ದೆ ಅಡಿಯಲ್ಲಿನ ಅಪರಾಧವಾಗುತ್ತದೆ ಎಂದು ಹೊಸ ಐಟಿ ನಿಯಮಗಳಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆಯಾಗಿ ಮಕ್ಕಳಿರುವ ವಿಷಯ ಮುಚ್ಚಿಟ್ಟು ಮತ್ತೊಂದು ವಿವಾಹ: ಮಹಿಳೆಯ ಸ್ಫೋಟಕ ಹೇಳಿಕೆ – Kannada News | Haveri Marriage Scam: Woman Accused of Fraud Denies Receiving Money, Claims to Have Informed Broker of Previous Marriage

ಹಾವೇರಿ, ಫೆಬ್ರವರಿ 11: ರಾಣೆಬೆನ್ನೂರಿನಲ್ಲಿ ಮದುವೆ ವಂಚನೆಯ ಪ್ರಕರಣವೊಂದು ವರದಿಯಾಗಿದೆ. ತುಮ್ಕಿನಕಟ್ಟಿ ಗ್ರಾಮದ ರವಿಚಂದ್ರ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ರೇಖಾ ಎಂಬ ಮಹಿಳೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರೇಖಾ ಅವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರೂ ರವಿಚಂದ್ರ ಅವರನ್ನು ಮದುವೆಯಾಗಿ 2.5 ಲಕ್ಷ ರೂಪಾಯಿ ವಧು ದಕ್ಷಿಣೆ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮದುವೆಯಾದ ಕೆಲವೇ ದಿನಗಳಲ್ಲಿ ರೇಖಾ ಅವರ ಮಕ್ಕಳು ಕರೆ ಮಾಡಿದಾಗ ಈ ಕೃತ್ಯ ಬಯಲಾಗಿದೆ. ನ್ಯಾಯಕ್ಕಾಗಿ ರವಿಚಂದ್ರ ಅವರು ಹಲಗೇರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರೋ ರೇಖಾ, ತಮಗೆ ಹಣದ ವಿಷಯ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2.5 ರಿಂದ 3 ಲಕ್ಷ ರೂಪಾಯಿ ಸ್ವೀಕರಿಸಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿರುವ ಅವರು, ಹಣವನ್ನು ಯಾರು ತೆಗೆದುಕೊಂಡಿದ್ದಾರೆ ಎಂದು ಬ್ರೋಕರ್​ಗಳನ್ನು ಕೇಳುವಂತೆ ಹೇಳಿದ್ದಾರೆ. ಅಲ್ಲದೆ ಬ್ರೋಕರ್​ಗೆ ತಾನು ಹಿಂದೆಯೇ ಮದುವೆಯಾಗಿದ್ದೇನೆ ಎಂದು ತಿಳಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link