ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ! – Kannada News
ಮುಂಬೈ, ಜೂನ್ 11: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಾಲೂಕಿನ ಬಂಬಾಲಿ ಗ್ರಾಮದಲ್ಲಿ ದೇಶವನ್ನೇ ಬೆಚ್ಚಿಬೀಳಿಸುತ್ತಿರುವ ಹೃದಯವಿದ್ರಾವಕ ಘಟನೆ (Viral News) ಬೆಳಕಿಗೆ ಬಂದಿದೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬದ ದುಃಸ್ಥಿತಿಯನ್ನು ನೋಡಿ ನೆಟ್ಟಿಗರು ಮರುಕಪಡುತ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಸಿಡಿಲಿನ ಹೊಡೆತಕ್ಕೆ ಬಂಬಲಿ ಗ್ರಾಮದ ಬಡ ರೈತ ಕಾಶಿನಾಥ್ ಗಾಯಕ್ವಾಡ್ ಅವರಿಗೆ ಸೇರಿದ ಎತ್ತು ಸಾವನ್ನಪ್ಪಿತು. ಖಾರಿಫ್ ಋತು ಆರಂಭವಾಗಿ ಕೃಷಿ ಕೆಲಸಗಳು ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಅವರ ಜೀವನೋಪಾಯಕ್ಕೆ ಆಧಾರವಾಗಿದ್ದ…