Headlines

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್ ಕುಮಾರ್ – Kannada News

‘ನಾಗುಗೆ ವಧು ಬೇಕಾಗಿದೆ’ (Naaguge Vadhu Bekaagide) ಎಂಬ ಭಿನ್ನ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ಆರ್.ಕೆ. ಅವರು ನಿರ್ದೇಶನ ಮಾಡಿದ್ದಾರೆ. ದತ್ತು ಪೂಜಾರಿ, ಸೋನಿಕಾ, ಚಿತ್ರಲ್ ರಂಗಸ್ವಾಮಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಚಿತ್ರದ ಟೈಟಲ್ ಬಗ್ಗೆ ಖ್ಯಾತ ನಿರ್ದೇಶಕ, ಗೀತಸಾಹಿತಿ ಚೇತನ್ ಕುಮಾರ್ ಅವರು ಮಾತನಾಡಿದರು. ‘ಒಂದು ಸಿನಿಮಾಗೆ ಶೀರ್ಷಿಕೆ ಬಹಳ ಮುಖ್ಯ. ನಿರ್ದೇಶಕರು ಬಂದು ಒಮ್ಮೆ ಭೇಟಿ ಆದರು. ಸಿನಿಮಾ ಮೇಲೆ ಅವರಿಗೆ ಬಹಳ ಪ್ರೀತಿ ಇದೆ. ಸಿನಿಮಾದ…

Read More

ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನದಲ್ಲೂ ಬಿಜೆಪಿಗೆ ಅವಿರೋಧ ಗೆಲುವು

ಭೋಪಾಲ್, ಜೂನ್ 11: ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯು (BJP) ರಾಜ್ಯದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ತೆರವಾಗಿದ್ದ 3 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ರದ್ದುಗೊಳಿಸಿದರು….

Read More

ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ? – Kannada News

ಈ ತಿಂಗಳಲ್ಲಿ ಕೊನೆಯ ಗ್ರಹವಾದ ಕೇತುವು ರವಿ, ಬುಧ, ಶನಿ ಮತ್ತು ಕುಜರ ವಿಶಿಷ್ಟ ಪ್ರಭಾವದಲ್ಲಿ ಇರುವನು. ಮಘಾ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದು ಇದರ ಅಧಿಪತಿ ಕೇತುವೇ ಆಗಿದ್ದಾನೆ. ಕುಜನ ಫಲವನ್ನು ಕೊಡುತ್ತಾನೆ ಎಂಬ ಪ್ರತೀತಿ ಇದೆ‌. ಕುಜನ ದೃಷ್ಟಿ ಈ ಗ್ರಹದ ಮೇಲಿರಲಿದೆ. ಗಣಪತಿಯ ಆರಾಧನೆಯಿಂದ ದೋಷಗಳನ್ನು ಕಡಿಮೆ ಮಾಡಿಕೊಳ್ಳಬಹುದು. ​ಮೇಷ ರಾಶಿ ​ಕುಜನ ದ್ವಾದಶಾಂಶವಿರುವುದರಿಂದ ಧೈರ್ಯ ಹೆಚ್ಚಲಿದೆ. ಶತ್ರುಗಳ ನಾಶ ಹಾಗೂ ದಿಢೀರ್ ಧನಲಾಭವಾಗಲಿದೆ. ರವಿಯ ಪ್ರಭಾವದಿಂದ ಸಮಾಜದಲ್ಲಿ ಗೌರವ ಸಿಗಲಿದ್ದು, ಸರ್ಕಾರಿ ಕೆಲಸಗಳು…

Read More

ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ – Kannada News

ನವದೆಹಲಿ, (ಜೂನ್ 11): ದೆಹಲಿ (New Delhi)ಪ್ರವಾಸದಲ್ಲಿರುವ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಜೂನ್ 11) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಮೊದಲ ನೀತಿ ಆಯೋಗದ ಸಭೆಯ ನಂತರ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕರ್ನಾಟಕದ (Karnataka) ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ಆದ್ಯತೆಗಳಾದ ಮೂಲಸೌಕರ್ಯ, ಹೂಡಿಕೆ, ನಗರ ಸಾರಿಗೆ, ನೀರಾವರಿ, ನಾವೀನ್ಯತೆ…

Read More

‘ಮಹಾನ್ ಕಿಲಾಡಿ’ ರಿಯಾಲಿಟಿ ಶೋ ಆರಂಭಿಸಿದ ಮಿಂಚು: ಏನಿದರ ವಿಶೇಷ? – Kannada News

ಒಂದಷ್ಟು ತಿಂಗಳ ಹಿಂದೆ ನಟಿ ಮಿಂಚು (Minchu) ಅವರು ವಿವಾದದ ಮೂಲಕ ಸುದ್ದಿ ಆಗಿದ್ದರು. ಆದರೆ ಈಗ ಅವರು ಆ ಘಟನೆಗಳಿಂದ ಹೊರಬಂದಿದ್ದಾರೆ. ಸಂಪೂರ್ಣ ಒಳ್ಳೆಯ ಕಾರಣಕ್ಕೆ ಅವರೀಗ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಈ ಮೊದಲು ರಿಯಾಲಿಟಿ ಶೋಗಳ (Reality Show) ಮೂಲಕವೇ ಮಿಂಚು ಅವರು ಗುರುತಿಸಿಕೊಂಡಿದ್ದರು. ಈಗ ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ಅದಕ್ಕಾಗಿ ತಾವೇ ಸ್ವತಃ ಒಂದು ಹೊಸ ರಿಯಾಲಿಟಿ ಶೋ ಆರಂಭಿಸುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ‘ಮಹಾನ್ ಕಿಲಾಡಿ’ (Mahan Khiladi)…

Read More

IND vs AFG: ಏಕದಿನ ಪಂದ್ಯದಲ್ಲಿ ‘ಅತ್ಯಂತ ಹಿರಿಯ’ ದಾಖಲೆ ಬರೆಯಲಿದ್ದಾರೆ ರೋಹಿತ್ ಶರ್ಮಾ

ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಸರಣಿಯ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುವ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಪ್ರಮುಖ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ (PC- PTI). ವಾಸ್ತವವಾಗಿ ಗಾಯದಿಂದ ಬಳಲುತ್ತಿದ್ದ ರೋಹಿತ್ ಶರ್ಮಾ ಈ ಏಕದಿನ ಸರಣಿಯಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ…

Read More

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ – Kannada News

ಬೆಂಗಳೂರು, ಜೂ.11: ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗರಬಾವಿ ನಿವಾಸಿಗಳಾದ ದಂಪತಿ ಶಬ್ರಾಜ್ (28) ಮತ್ತು ಶಬ್ರೀನ್ (24) ಸಾವನ್ನಪ್ಪಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 11:50ರ ಸುಮಾರಿಗೆ ಗ್ಯಾಸ್ ತುಂಬಿದ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ದಂಪತಿ ಗೊರಗುಂಟೆಪಾಳ್ಯ ಸಿಗ್ನಲ್ ದಾಟಿ ಯಶವಂತಪುರ ಕಡೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗ್ಯಾಸ್ ಲಾರಿ ಚಾಲಕ ಬೊಮ್ಮರಾಜೇಗೌಡ (60) ತನಗೆ ಬ್ರೇಕ್ ಹಿಡಿಯಲಿಲ್ಲ ಎಂದು…

Read More

Kharg Island: ವೆನೆಜುವೆಲಾ ಬಳಿಕ ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟ ಟ್ರಂಪ್; ಇರಾನ್​ಗೆ ಈ ಸಣ್ಣ ಪ್ರದೇಶವೇಕೆ ಬಹಳ ಮುಖ್ಯ? – Kannada News

ವಾಷಿಂಗ್ಟನ್, ಜೂನ್ 11: ಇರಾನ್ ಜೊತೆಗಿನ ಸಂಘರ್ಷ ಆರಂಭವಾದಾಗಿನಿಂದಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟಿದ್ದಾರೆ. ಖಾರ್ಗ್ ದ್ವೀಪವು (Kharg Island) ಇರಾನ್‌ನ ತೈಲ ವ್ಯಾಪಾರದ ಬೆನ್ನೆಲುಬಾಗಿದ್ದು, ದೇಶದ ಬಹುಪಾಲು ಕಚ್ಚಾ ತೈಲದ ರಫ್ತನ್ನು ಇದೊಂದೇ ದ್ವೀಪ ನಿರ್ವಹಿಸುತ್ತದೆ. ಪ್ರತಿದಿನ ಸುಮಾರು 20 ಲಕ್ಷ (2 ಮಿಲಿಯನ್) ಬ್ಯಾರೆಲ್ ತೈಲವು ಈ ಸಣ್ಣ ಗಲ್ಫ್ ದ್ವೀಪದಿಂದ ಹೊರಹೋಗುತ್ತದೆ. ಅದರಲ್ಲಿ ಬಹುಪಾಲು ಚೀನಾ ದೇಶಕ್ಕೆ ರಫ್ತಾಗುತ್ತದೆ. ಹೀಗಾಗಿ, ಇರಾನ್ ಪಾಲಿಗೆ ಈ…

Read More

BAN vs AUS: ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಸೋಲಿಸಿ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ತಂಡಮ, ಬಾಂಗ್ಲಾದೇಶ (Australia vs Bangladesh) ಪ್ರವಾಸ ಮಾಡಿದೆ. ಈಗಾಗಲೇ ಸರಣಿಯ ಎರಡು ಪಂದ್ಯಗಳು ಮುಗಿದಿದ್ದು, ಆತಿಥೇಯ ಬಾಂಗ್ಲಾದೇಶದ ವಿರುದ್ಧ ಎರಡೂ ಪಂದ್ಯಗಳನ್ನು ಸೋತಿರುವ ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಬಾಂಗ್ಲಾದೇಶಕ್ಕೆ ಬರುವ ಮುನ್ನ ಪಾಕಿಸ್ತಾನದಲ್ಲಿ ಏಕದಿನ ಸರಣಿಯನ್ನಾಡಿದ್ದ ಆಸೀಸ್ ಪಡೆ ಅಲ್ಲೂ ಸಹ ಏಕದಿನ ಸರಣಿಯನ್ನು ಸೋತಿತ್ತು. ಇದೀಗ ಬಾಂಗ್ಲಾದೇಶದಲ್ಲೂ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕಳೆದುಕೊಂಡಿದೆ. ಇತ್ತ ಬಾಂಗ್ಲಾದೇಶ ತಂಡ ತನ್ನ ಕ್ರಿಕೆಟ್…

Read More

World Day Against Child Labour 2026: ಮಕ್ಕಳ ಸುಂದರ ಬಾಲ್ಯ, ಉಜ್ವಲ ಭವಿಷ್ಯವನ್ನು ಕಸಿಯುತ್ತಿದೆ ಬಾಲ ಕಾರ್ಮಿಕ ಪದ್ಧತಿ – Kannada News

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನImage Credit source: Getty Images ಬಾಲ್ಯವು ಜೀವನದ ಅತ್ಯಂತ ಸ್ಮರಣೀಯ ಘಟ್ಟವಾಗಿದ್ದು, ಪ್ರತಿಯೊಂದು ಮಗುವಿಗೂ ಈ ಬಾಲ್ಯವನ್ನು ಆನಂದಿಸುವ, ಶಾಲೆಗೆ ಹೋಗುವ, ಸ್ನೇಹಿತರ ಜೊತೆ ಸೇರಿ ಆಡುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ (Child Labour)  ಪದ್ಧತಿ ಎಂದು ಅನಿಷ್ಠ ಪಿಡುಗಿನ ಕಾರಣ ಅದೆಷ್ಟೋ ಮಕ್ಕಳಿಗೆ ತಮ್ಮ ಸುಂದರ ಬಾಲ್ಯವನ್ನು ಸವಿಯುವ ಅವಕಾಶವೇ ಇಲ್ಲದಂತಾಗಿದೆ. ಹೌದು 14 ವರ್ಷದೊಳಗಿನ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಬಾರದು, ಅವರನ್ನು ಶಾಲೆಗೆ ಕಳುಹಿಸಬೇಕು ಎಂಬ ಕಠಿಣ…

Read More