Headlines

ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು – Kannada News

ಶಿವಮೊಗ್ಗ, ಜೂ.11: ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಸ್ವಂತ ಪತ್ನಿಯ ಮೇಲೆಯೇ ದಾಳಿ ನಡೆಸಲು ಬುರ್ಖಾಧಾರಿ ಗ್ಯಾಂಗ್ ಕಳುಹಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗದ ಕೆ.ಆರ್. ಪುರಂನಲ್ಲಿ ನಡೆದಿದೆ. ಆದರೆ, ಸ್ಥಳೀಯ ನಾಗರಿಕರ ಸಮಯಪ್ರಜ್ಞೆಯಿಂದಾಗಿ ಬುರ್ಖಾ ಧರಿಸಿ ಬಂದಿದ್ದ ಗ್ಯಾಂಗ್ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಧರ್ಮದೇಟು ತಿಂದು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ಒಂದು ವರ್ಷದಿಂದ ಕೊಲೆ ಪ್ರಕರಣವೊಂದರ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೇ ಈ ಇಡೀ ಷಡ್ಯಂತ್ರದ…

Read More

ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ – Kannada News

ವಾಷಿಂಗ್ಟನ್, ಜೂನ್ 11: ಒಮಾನ್ (Oman) ಕರಾವಳಿಯಲ್ಲಿ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ, ಆ ಹಡಗಿನ ಇಂಜಿನ್ ಕೋಣೆಯನ್ನು ಗುರಿಯಾಗಿಸಿ 2 ‘ಹೆಲ್‌ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಒಪ್ಪಿಕೊಂಡಿದೆ. ಗಲ್ಫ್ ವಲಯದಲ್ಲಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಹಡಗಿನ ಮೇಲೆ ಈ ವಾರ ನಡೆದ ಮೂರನೇ ದಾಳಿ ಇದಾಗಿದೆ. ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸಾಮಾಜಿಕ ಮಾಧ್ಯಮವಾದ ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗಿನಿ-ಬಿಸೌ ದೇಶದ ಧ್ವಜವನ್ನು ಹೊಂದಿದ್ದ…

Read More

Chanakya Niti: ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ; ಏಕೆ ಗೊತ್ತಾ? – Kannada News

ಒಳ್ಳೆಯ ವ್ಯಕ್ತಿಯಾಗಿ ಸಮಾಜದಲ್ಲಿ ಬಾಳುವುದು ತುಂಬಾನೇ ಮುಖ್ಯ. ಆದರೆ ಅತಿಯಾದ ಒಳ್ಳೆಯತನ  (honesty) ಎಂದಿಗೂ ಒಳ್ಳೆಯದಲ್ಲ. ಅತಿಯಾದರೆ ಅಮೃತವೂ ವಿಷವೆನ್ನುವಂತೆ ಅತಿಯಾದ ಒಳ್ಳೆಯತನದಿಂದ ನಾವೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು. ಹಾಗಾಗಿ ಪ್ರತಿಯೊಂದು ಒಳ್ಳೆಯ ಗುಣಕ್ಕೂ ಒಂದು ಮಿತಿ ಇರಬೇಕು, ಜಾಸ್ತಿ ಒಳ್ಳೆಯತನವನ್ನು ತೋರಿದರೆ  ಕೆಲವೊಮ್ಮೆ ಅದೇ ಗುಣವು ದೌರ್ಬಲ್ಯವಾಗಿ ಬದಲಾಗಬಹುದು ಮತ್ತು ಜನ  ನಮ್ಮ ಈ ಒಳ್ಳೆಯತನ ಲಾಭವನ್ನು ಪಡೆಯಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ.  ಅತಿಯಾದ ಒಳ್ಳೆಯತನ ಏಕೆ ಒಳ್ಳೆಯದಲ್ಲ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಅತಿಯಾದ…

Read More

ಪಿಒಕೆಯಲ್ಲಿ ರಕ್ತಪಾತ; ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು – Kannada News

ಮುಜಾಫರಾಬಾದ್, ಜೂನ್ 11: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಉಂಟಾಗಿರುವ ಆರ್ಥಿಕ ಬಿಕ್ಕಟ್ಟು, ಅತಿಯಾದ ಹಣದುಬ್ಬರ, ಹಿಂಸಾತ್ಮಕ ದಬ್ಬಾಳಿಕೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಯನ್ನು ವಿರೋಧಿಸಿ ಸ್ಥಳೀಯ ನಾಗರಿಕರು ದೀರ್ಘಕಾಲದಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಈ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನಿ ಸೇನೆಯು ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಇದರಿಂದ ಇಡೀ ಪ್ರದೇಶ ರಣರಂಗವಾಗಿ ಮಾರ್ಪಟ್ಟಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆ ನಡೆಸಿದ ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಿಂದ 16…

Read More

ಕೀನಾ ಏರ್​ಪೋರ್ಟ್ ಗುತ್ತಿಗೆ: ಅದಾನಿಗೆ ಸಿಗಬೇಕಿದ್ದ ಗುತ್ತಿಗೆ ಚೀನೀ ಕಂಪನಿ ಪಾಲಾಯ್ತು – Kannada News

ಕೀನ್ಯಾ ಏರ್​ಪೋರ್ಟ್Image Credit source: Nairobinews ನೈರೋಬಿ, ಜೂನ್ 11: ಭಾರತದ ಪ್ರಮುಖ ಉದ್ಯಮ ಸಂಸ್ಥೆಯಾದ ‘ಅದಾನಿ ಗ್ರೂಪ್’ (Adani Group) ಜೊತೆಗಿನ ಒಪ್ಪಂದ ರದ್ದಾದ ಬೆನ್ನಲ್ಲೇ, ಕೀನ್ಯಾ ದೇಶವು ತನ್ನ ಅತ್ಯಂತ ದೊಡ್ಡ ವಿಮಾನ ನಿಲ್ದಾಣದ ನವೀಕರಣ ಮತ್ತು ವಿಸ್ತರಣೆಯ ಬೃಹತ್ ಗುತ್ತಿಗೆಯನ್ನು ಚೀನಾದ ಕಂಪನಿಗೆ ನೀಡಿದೆ. ಕೀನ್ಯಾ ರಾಜಧಾನಿನಗರಿ ನೈರೋಬಿಯಲ್ಲಿರುವ ‘ಜೋಮೋ ಕೆನ್ಯಾಟ್ಟಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ದ (JKIA- Jomo Kenyatta International Airport) ನವೀಕರಣದ ಜವಾಬ್ದಾರಿಯನ್ನು ಚೀನಾದ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ‘ಚೀನಾ…

Read More

349 ರನ್ ಬಾರಿಸಿಯೂ ಅಫ್ಘನ್ ವಿರುದ್ಧ ಸೋತ ಟೀಂ ಇಂಡಿಯಾ – Kannada News

ತ್ರಿಕೋನ ಏಕದಿನ ಸರಣಿಗಾಗಿ ಶ್ರೀಲಂಕಾ ಪ್ರವಾಸ ಮಾಡಿರುವ (Sri Lanka Triangular Series) ಭಾರತ ಎ ತಂಡ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ತಂಡವನ್ನು ಎದುರಿಸಿದ್ದ ಭಾರತ ಎ ಪಡೆ ( Afghanistan A vs India A) 349 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕಿದ ಹೊರತಾಗಿಯೂ ಸೋಲಿಗೆ ಕೊರಳೊಡ್ಡಬೇಕಾಯಿತು. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ…

Read More

ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News

ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್​​ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ…

Read More

‘ಸೌಂದರ್ಯ’ ಸಿನಿಮಾ ಬಾಲನಟಿ ನೆನಪಿದ್ದಾರಾ? ಈಗ ಹೇಗಿದ್ದಾರೆ ನೋಡಿ? – Kannada News

ಬಾಲನಟ-ಬಾಲನಟಿಯಾಗಿ ಚಿತ್ರರಂಗಕ್ಕೆ (Movie) ಎಂಟ್ರಿ ಕೊಟ್ಟ ಹಲವರು ಆ ನಂತರ ನಾಯಕರಾಗಿಯೋ, ನಾಯಕಿಯರಾಗಿಯೋ ಚಿತ್ರರಂಗದಲ್ಲಿ ಉಳಿದುಕೊಳ್ಳುವುದು ಹೆಚ್ಚು. ಈಗ ಚಾಲ್ತಿಯಲ್ಲಿರುವ ಹಲವು ನಟ-ನಟಿಯರು ಖುದ್ದು ಬಾಲನಟ-ನಟಿಯಾಗಿ ಎಂಟ್ರಿ ಕೊಟ್ಟಿದ್ದವರೇ. ಆದರೆ ಕೆಲವರು ಮಾತ್ರ ಬಾಲನಟರಾಗಿ ಮಿಂಚಿ ಆ ನಂತರ ಮರೆ ಆಗಿದ್ದಾರೆ. ಅವರಲ್ಲಿ ಶ್ರಿಯಾ ಶರ್ಮಾ ಸಹ ಒಬ್ಬರು. ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಾಲನಟಿಯಾಗಿ ನಟಿಸಿದ್ದ ಶ್ರಿಯಾ ಶರ್ಮಾ, ಈಗ ಚಿತ್ರರಂಗದಿಂದ ದೂರ ಉಳಿದಿದ್ದಾ. ಅಂದಹಾಗೆ ಅವರು ಈಗ ಏನು ಮಾಡುತ್ತಿದ್ದಾರೆ? ಈಗ ಹೇಗೆ ಕಾಣುತ್ತಾರೆ?…

Read More

ಹಾಲು ಹಾಕಿದ ಚಹಾ ಕುಡಿದರೆ ಅಸಿಡಿಟಿ ಆಗುತ್ತಾ? ಹಾಗಿದ್ರೆ ಈ ಸಿಂಪಲ್ ಟ್ರಿಕ್ ಪಾಲಿಸಿ ನೋಡಿ – Kannada News

ಇತ್ತೀಚಿನ ದಿನಗಳಲ್ಲಿ ಗ್ಯಾಸ್ (Gas Problem), ಅಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಸಾಮಾನ್ಯವಾಗುತ್ತಿವೆ. ಅದರಲ್ಲಿಯೂ ಕೆಲವರಿಗೆ ಹಾಲು ಹಾಕಿದ ಚಹಾ ಕುಡಿದ ಕೆಲವೇ ಸಮಯದಲ್ಲಿ ಹೊಟ್ಟೆ ಉಬ್ಬರ, ಎದೆ ಉರಿ, ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದಿನವನ್ನು ಚಹಾದಿಂದಲೇ ಆರಂಭಿಸುವವರ ಸಂಖ್ಯೆ ಹೆಚ್ಚಾದರೂ, ಕುಡಿಯಬಾರದ ಸಮಯದಲ್ಲಿ ಅಥವಾ ಸರಿಯಾದ ರೀತಿಯಲ್ಲಿ ಚಹಾ ಸೇವಿಸದಿರುವುದು ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾದರೆ ಹಾಲಿನ ಚಹಾ ಮತ್ತು ಅಸಿಡಿಟಿಗಿರುವ ಸಂಬಂಧವೇನು, ಈ ರೀತಿ…

Read More

ದೈಹಿಕ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿತ್ಯ ತಿನ್ನಿ ಈ ಗಿಡದ ಎಲೆ – Kannada News

ಗಿಡಮೂಲಿಕೆಗಳ ರಾಣಿ ಎಂದೇ ಕರೆಯಲ್ಪಡುವ ತುಳಸಿ (Tulsi) ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಸಸ್ಯಕ್ಕೆ ಪೂಜ್ಯನೀಯ ಸ್ಥಾನವನ್ನು ನೀಡಲಾಗಿರುವುದರಿಂದ ಮನೆಗಳಲ್ಲಿ ಈ ಪವಿತ್ರ ಗಿಡವನ್ನು ನೆಟ್ಟು ಪೂಜಿಸಲಾಗುತ್ತದೆ. ಧಾರ್ಮಿಕ ಮಹತ್ವವನ್ನು ಪಡೆದಿರುವ ತುಳಸಿ ಹಲವಾರು ಔಷಧೀಯ ಗುಣಗಳನ್ನು ಸಹ ಹೊಂದಿದೆ. ತುಳಸಿ ಎಲೆಯಲ್ಲಿ ವಿಟಮಿನ್‌ ಎ, ಸಿ, ಕೆ ಮತ್ತು ಕ್ಯಾಲ್ಸಿಯಂ, ಮೆಗ್ನೇಸಿಯಂ, ರಂಜಕ, ಕಬ್ಬಿಣದಂತಹ ಹಲವಾರು ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳಿದ್ದು, ಪ್ರತಿನಿತ್ಯ ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ಸಾಕಷ್ಟು ದೈಹಿಕ ಮತ್ತು ಮಾನಸಿಕ…

Read More