ಜೈಲಿನಲ್ಲಿ ಕುಳಿತು ಪತ್ನಿ ಕೊಲೆಗೆ ಸ್ಕೆಚ್: ಶಿವಮೊಗ್ಗದಲ್ಲಿ ನಾಲ್ವರು ಬುರ್ಖಾ ಹಾಕಿಕೊಂಡು ಬಂದವರಿಗೆ ಸಾರ್ವಜನಿಕರಿಂದ ಧರ್ಮದೇಟು – Kannada News
ಶಿವಮೊಗ್ಗ, ಜೂ.11: ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಸ್ವಂತ ಪತ್ನಿಯ ಮೇಲೆಯೇ ದಾಳಿ ನಡೆಸಲು ಬುರ್ಖಾಧಾರಿ ಗ್ಯಾಂಗ್ ಕಳುಹಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗದ ಕೆ.ಆರ್. ಪುರಂನಲ್ಲಿ ನಡೆದಿದೆ. ಆದರೆ, ಸ್ಥಳೀಯ ನಾಗರಿಕರ ಸಮಯಪ್ರಜ್ಞೆಯಿಂದಾಗಿ ಬುರ್ಖಾ ಧರಿಸಿ ಬಂದಿದ್ದ ಗ್ಯಾಂಗ್ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು, ಹಿಗ್ಗಾಮುಗ್ಗಾ ಧರ್ಮದೇಟು ತಿಂದು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ಒಂದು ವರ್ಷದಿಂದ ಕೊಲೆ ಪ್ರಕರಣವೊಂದರ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೇ ಈ ಇಡೀ ಷಡ್ಯಂತ್ರದ…