ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಹಾಡಿ ಜನ ಕುಡಿಯುತ್ತಿರೋದು ಕೊಳಚೆ ನೀರು! – Kannada News | Acute Water Crisis Plagues Chennangi Basavanahalli in Kodagu
ಮಡಿಕೇರಿ ಫೆಬ್ರವರಿ 05: ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಸವನಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾವೇರಿಯ ತವರಾದ ಕೊಡಗಿನಲ್ಲಿ ಫೆಬ್ರವರಿ ತಿಂಗಳ ಮೊದಲ ವಾರದಲ್ಲೇ ನೀರಿನ ಹಾಹಾಕಾರ ಶುರುವಾಗಿದೆ. ಜೀವಜಲಕ್ಕಾಗಿ ಈ ಭಾಗದ ಆದಿವಾಸಿ ಕುಟುಂಬಗಳು ಕಾಡುಮೇಡು ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಿನಿಂದ ಕೊಳಚೆ ನೀರನ್ನು ತಂದು ಕುಡಿಯಲು ಮತ್ತು ಇತರೆ ಅಗತ್ಯಗಳಿಗೆ ಬಳಸುತ್ತಿರುವುದರಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳು ಆಗಾಗ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಗ್ರಾಮದಲ್ಲಿರುವ ವಾಟರ್ ಟ್ಯಾಂಕ್ ಮೂರು ತಿಂಗಳಿಂದ ನೀರಿಲ್ಲದೆ…