Headlines

ಗೊರಗುಂಟೆಪಾಳ್ಯದಲ್ಲಿ ಗ್ಯಾಸ್ ಲಾರಿ ಬ್ರೇಕ್ ಫೇಲ್ ಆಗಿ ಕೆಟಿಎಂ ಬೈಕ್‌ಗೆ ಡಿಕ್ಕಿ; ಲಾರಿ ಚಕ್ರದಡಿ ಸಿಲುಕಿ ದಂಪತಿ ಸಾವು – Kannada News

ಬೆಂಗಳೂರು, ಜೂ.11: ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ಇಂದು (ಜೂ.11) ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಲಿಂಡರ್‌ಗಳಿಂದ ತುಂಬಿದ್ದ ಗ್ಯಾಸ್ ಲಾರಿಯೊಂದರ ಬ್ರೇಕ್ ಫೇಲ್ ಆದ ಪರಿಣಾಮ, ನಿಯಂತ್ರಣ ತಪ್ಪಿ ಕೆಟಿಎಂ ಡ್ಯೂಕ್ (KTM Duke) ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಬೈಕ್‌ನಲ್ಲಿದ್ದ ಪತಿ-ಪತ್ನಿ ಇಬ್ಬರೂ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ನಾಗರಬಾವಿ ನಿವಾಸಿಗಳಾದ ಶಬ್ರಾಜ್ (28) ಮತ್ತು ಆತನ ಪತ್ನಿ ಶಬ್ರೀನ್ (24) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ತಮ್ಮ ಕೆಟಿಎಂ…

Read More

ಅನಿವಾಸಿ ಭಾರತೀಯರ FCNR-B ಠೇವಣಿಗಳಿಗೆ ಭಾರತದ ಬ್ಯಾಂಕುಗಳಿಂದ ಭರ್ಜರಿ ಬಡ್ಡಿ ಆಫರ್ – Kannada News

ನವದೆಹಲಿ, ಜೂನ್ 11: ಅನಿವಾಸಿ ಭಾರತೀಯರಿಂದ (NRI) ಅವರ ದೇಶಗಳ ಕರೆನ್ಸಿಯನ್ನು ಆಕರ್ಷಿಸುವ ಸಲುವಾಗಿ ಆರ್​ಬಿಐ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡಿದ ಬೆನ್ನಲ್ಲೇ ಭಾರತದ ಹಲವು ಬ್ಯಾಂಕುಗಳು ಎನ್​ಆರ್​ಐ ಠೇವಣಿಗಳ (FCNR-B) ದರಗಳನ್ನು ಗಣನೀಯವಾಗಿ ಹೆಚ್ಚಿಸತೊಡಗಿವೆ. ಸರ್ಕಾರಿ ಸ್ವಾಮ್ಯದ ಎಸ್​ಬಿಐನಿಂದ ಹಿಡಿದು ಖಾಸಗಿಯ ಯೆಸ್ ಬ್ಯಾಂಕ್​ವರೆಗೆ ಹಲವು ಬ್ಯಾಂಕುಗಳು ವಿದೇಶೀ ಕರೆನ್ಸಿಗಳ ಠೇವಣಿ ದರಗಳನ್ನು ಏರಿಸಿವೆ. ಕೆಲ ಠೇವಣಿಗಳಿಗೆ ಶೇ. 7.1ರವರೆಗೂ ಬಡ್ಡಿ ಆಫರ್ ಮಾಡಲಾಗಿದೆ. ಯೆಸ್ ಬ್ಯಾಂಕ್ (Yes Bank) ತನ್ನ ವಿದೇಶಿ ಕರೆನ್ಸಿ ಅನಿವಾಸಿ…

Read More

ಇಂಗ್ಲೆಂಡ್​ನಲ್ಲಿ ಮಂಕಾದ ಮಂಧಾನ; ತಂಡಕ್ಕೆ ಎದುರಾಯ್ತು ಹೊಸ ತಲೆನೋವು – Kannada News

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಇಂಗ್ಲೆಂಡ್​ನಲ್ಲಿ ಆರಂಭವಾಗುತ್ತಿದೆ. ಈ ಪಂದ್ಯಾವಳಿಗಾಗಿ ಟೀಂ ಇಂಡಿಯಾ ಕೂಡ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಅದರ ಭಾಗವಾಗಿ ಭಾರತ ವನಿತಾ ಪಡೆ, ಆತಿಥೇಯ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಿತು. ಆದರೆ ಆ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿತು. ಇದಾದ ನಂತರ ಎರಡು ಅಭ್ಯಾಸ ಪಂದ್ಯಗಳನ್ನು ಆಡಿತು. ಅದರಲ್ಲಿ ಒಂದು ಪಂದ್ಯದಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿತು….

Read More

ನೀರಿನ ಬಾಟಲಿನ ಕ್ಯಾಪ್​ಗಳು ಏಕೆ ಬೇರೆ ಬೇರೆ ಬಣ್ಣದಲ್ಲಿರುವುದು ಏಕೆ? – Kannada News

ಸಾಮಾನ್ಯವಾಗಿ ನಾವು ದಿನನಿತ್ಯ ಬಳಸುವ ವಸ್ತುಗಳ ಬಗ್ಗೆ ಅಷ್ಟಾಗಿ ಯೋಚನೆ ಮಾಡಲ್ಲ. ಹೌದು, ಪ್ರತಿದಿನ ಬಳಸುವ ಸಾಮಾನ್ಯ ವಸ್ತುಗಳಲ್ಲಿ ಈ ನೀರಿನ ಬಾಟಲಿ (water bottle) ಕೂಡ ಒಂದು. ಪ್ರಯಾಣದ ವೇಳೆ ಖರೀದಿ ಮಾಡುವ ಈ ನೀರಿನ ಬಾಟಲಿಯ ಕ್ಯಾಪ್ ಬಣ್ಣವು ಹೆಚ್ಚಾಗಿ ನೀಲಿಯಾಗಿರುತ್ತದೆ. ಆದರೆ ಇನ್ನು ಕೆಲವು ಬಾಟಲಿ ಮುಚ್ಚಳವು ಬಿಳಿ, ಕಪ್ಪು, ಹಸಿರು, ಹಳದಿ ಹೀಗೆ ವಿವಿಧ ಬಣ್ಣದಲ್ಲಿರುವುದನ್ನು ನೀವು ನೋಡಿರುತ್ತೀರಿ. ಬಾಟಲಿ ಮುಚ್ಚಳಗಳು ಬೇರೆ ಬೇರೆ ಬಣ್ಣದಲ್ಲಿರುವುದು ಯಾಕೆ ಎನ್ನುವುದಕ್ಕೆ ಕಾರಣವೂ ಇದೆ….

Read More

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ – Kannada News

ಬೆಂಗಳೂರು (ಜೂ.11): ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ (Karnataka Rajya Sabha) ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾವಣ ಕಣದಲ್ಲಿ ಯಾವುದೇ ಪ್ರತಿಸ್ಪರ್ಧಿಗಳಿಲ್ಲದಿದ್ದರಿಂದ ನಾಲ್ಕು ಸ್ಥಾನಗಳ ಪೈಕಿ ಮೂವರು ಕಾಂಗ್ರೆಸ್ (Congress) ಮತ್ತು ಓರ್ವ ಬಿಜೆಪಿ (BJP) ಅಭ್ಯರ್ಥಿ ಅವಿರೋಧವಾಗಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ. ಆವಿರೋಧವಾಗಿ ರಾಜ್ಯಸಭೆಗೆ ಪ್ರವೇಸಿಸಿದ…

Read More

BAN vs AUS: ಸೊನ್ನೆಗೆ 3 ವಿಕೆಟ್; ಬಾಂಗ್ಲಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ (Bangladesh vs Australia), ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಹೀನಾಯವಾಗಿ ಸೋತು ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತ್ತು. ಇದೀಗ ಸರಣಿಯ ಎರಡನೇ ಪಂದ್ಯದಲ್ಲೂ ಕಾಂಗರೂಗಳ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದೆ. ಬಾಂಗ್ಲಾ ನೆಲದಲ್ಲಿ ನೆಲಕಚ್ಚಿ ಆಡುವುದನ್ನು ಮರೆತಿರುವ ಆಸೀಸ್ ಬ್ಯಾಟರ್​ಗಳು ಒಂದಂಕಿ ದಾಟಲು ಪರದಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ಅಗ್ರ ಮೂವರು ಬ್ಯಾಟರ್​ಗಳು…

Read More

Welcome To The Jungle: 2000 ಕೋಟಿ ರೂ. ನಕಲಿ ಸಿನಿಮಾ; ಫ್ಲಾಪ್ ನಟ ಅಕ್ಷಯ್ ಕುಮಾರ್ ಪರಿಸ್ಥಿತಿ ಇದು – Kannada News

ಬಾಲಿವುಡ್ ಅಂಗಳದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ವೆಲ್ಕಮ್’ ಸರಣಿಯ ಮೂರನೇ ಚಿತ್ರ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಸಿನಿಮಾದ ಅದ್ದೂರಿ ಟ್ರೇಲರ್ ಗುರುವಾರ (ಜೂನ್ 11) ಬಿಡುಗಡೆಯಾಗಿದೆ. 4 ನಿಮಿಷ 10 ಸೆಕೆಂಡ್‌ಗಳ ಈ ಸುದೀರ್ಘ ಟ್ರೇಲರ್ ಪ್ರೇಕ್ಷಕರಿಗೆ ನಗುವಿನ ರಸದೌತಣ ನೀಡುತ್ತಿದ್ದು, ಚಿತ್ರದ ಕ್ರೇಜಿ ಕಥಾಹಂದರವನ್ನು ಬಿಚ್ಚಿಟ್ಟಿದೆ. ಕೊರಿಯೋಗ್ರಾಫರ್ ಹಾಗೂ ನಿರ್ದೇಶಕ ಅಹಮದ್ ಖಾನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. 2000 ಕೋಟಿ ರೂಪಾಯಿ ಬಜೆಟ್​ನ ನಕಲಿ ಸಿನಿಮಾದಲ್ಲಿ ನಟಿಸುವ ಫ್ಲಾಪ್…

Read More

ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ – Kannada News

ಟೆಹ್ರಾನ್, ಜೂನ್ 11: ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್ ದೇಶವು ಜಾಗತಿಕವಾಗಿ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಚ್ಚುವುದಾಗಿ ಘೋಷಿಸಿದೆ. ಇರಾನ್‌ನ ಇಂಟರ್ನ್ಯಾಷನಲ್ ಸೆಂಟ್ರಲ್ ಕಮಾಂಡ್ ಅನ್ನು ಉಲ್ಲೇಖಿಸಿ ಅಲ್ಲಿನ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯು, ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ವರದಿ ಮಾಡಿದೆ. ಇಂದು ಬಿಡುಗಡೆಯಾದ ಖಾತಮ್ ಅಲ್-ಅನ್ಬಿಯಾ ಸೆಂಟ್ರಲ್ ಹೆಡ್‌ಕ್ವಾರ್ಟರ್ಸ್‌ನ ಅಧಿಕೃತ ಹೇಳಿಕೆಯನ್ನು ಪ್ರೆಸ್ ಟಿವಿ ಪ್ರಸಾರ ಮಾಡಿದೆ. ಈ ಆದೇಶದ ಪ್ರಕಾರ, ತೈಲ ಟ್ಯಾಂಕರ್‌ಗಳು…

Read More

ಭಕ್ತರೇ ಗಮನಿಸಿ, ಪೊಲೀಸ್ ಇಲಾಖೆಯಿಂದ ಮಹತ್ವದ ಸೂಚನೆ: ನಾಳೆ ಈ ಸಮಯದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಇರುವುದಿಲ್ಲ – Kannada News

ಕೊಲ್ಲೂರು, ಜೂ.11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ನಾಳೆ (ಜೂನ್ 12, ಶುಕ್ರವಾರ) ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ. ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ಹಾಗೂ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದುದ್ದಕ್ಕೂ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಅತ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಸಾರ್ವಜನಿಕರು ಹಾಗೂ ದೂರದೂರುಗಳಿಂದ ಬರುವ ಭಕ್ತಾದಿಗಳಿಗೆ ದರ್ಶನದ ವೇಳೆ ಅನಾನುಕೂಲವಾಗುವುದನ್ನು ತಪ್ಪಿಸಲು ಪೊಲೀಸ್ ಇಲಾಖೆಯು ಮಹತ್ವದ ಮಾರ್ಗಸೂಚಿ ಪ್ರಕಟಣೆಯನ್ನು ಹೊರಡಿಸಿದೆ….

Read More

ಡಿಸಿಎಂ ಪವನ್ ಕಲ್ಯಾಣ್​​ರ ಭೇಟಿಯಾದ ನಟ ಅಲ್ಲು ಅರ್ಜುನ್: ಕಾರಣ? – Kannada News

ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ಮತ್ತು ಅಲ್ಲು ಅರ್ಜುನ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಕಳೆದ ವಿಧಾನಸಭೆ ಚುನಾವಣೆ ವೇಳೆ ಅಲ್ಲು ಅರ್ಜುನ್ ಅವರು, ಎದುರಾಳಿ ಪಕ್ಷದ ಒಬ್ಬ ಅಭ್ಯರ್ಥಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು. ಆದರೆ ಪವನ್ ಕಲ್ಯಾಣ್ ಅವರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಬದಲಿಗೆ ಪವನ್ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಪವನ್ ಅವರ ಸಹೋದರ ನಾಗಬಾಬು ಅಂತೂ ಅಲ್ಲು ಅರ್ಜುನ್ ಅವರ ಬಗ್ಗೆ ಸಿಟ್ಟಿನಿಂದ ಪೋಸ್ಟ್ ಸಹ ಹಂಚಿಕೊಂಡಿದ್ದರು. ಬಳಿಕ…

Read More