ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು – Kannada News
ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಅಫಿಡವಿಟ್ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಮುಖ್ಯಾಂಶಗಳು ಪರಿಷತ್ ಚುನಾವಣೆ…