Category Archives: Blog

Your blog category

ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಇದ್ದ ರೈಲಿನ ಮೇಲೆ ಕಲ್ಲು ತೂರಾಟ – Kannada News

ಕಾನ್ಪುರ, ಜೂನ್ 12: ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್(Mohan Bhagwat) ಇದ್ದ ರೈಲಿನ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಮೇಲೆ ಫಿಜೋರಾಬಾದ್ ಬಳಿ ಗುರುವಾರ ಸಂಜೆ ಕಲ್ಲು ತೂರಾಟ ನಡೆದಿದೆ. ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅತ್ಯಂತ ತೀವ್ರ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ರೈಲಿನಲ್ಲಿದ್ದ ಆರ್‌ಎಸ್‌ಎಸ್ ಸರ್ಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಸಂಪೂರ್ಣ ಸುರಕ್ಷಿತವಾಗಿದ್ದು, ತನಿಖೆ ಚುರುಕುಗೊಂಡಿದೆ.

ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12003) ಸಂಜೆ 7.15 ರ ಸುಮಾರಿಗೆ ಫಿರೋಜಾಬಾದ್ ಜಿಲ್ಲೆಯ ಮಖನ್‌ಪುರ ನಿಲ್ದಾಣದ ಬಳಿ ಹಾದುಹೋಗುವಾಗ ಈ ಕಲ್ಲು ತೂರಾಟ ನಡೆದಿದೆ. ಕಲ್ಲು ಎಸಿ ಕೋಚ್‌ನ ಕಿಟಕಿಗೆ ತಗುಲಿ ಹೊರಗಿನ ಗಾಜು ಮಾತ್ರ ಬಿರುಕು ಬಿಟ್ಟಿದೆ. ಅದೇ ಕೋಚ್‌ನಲ್ಲಿದ್ದ ಮೋಹನ್ ಭಾಗವತ್ ಅವರು ಎದುರು ಭಾಗದ ಸೀಟಿನಲ್ಲಿ ಕುಳಿತಿದ್ದರಿಂದ ಅವರಿಗೆ ಹಾಗೂ ರೈಲಿನಲ್ಲಿದ್ದ ಇತರ ಯಾವುದೇ ಪ್ರಯಾಣಿಕರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ.

ಘಟನೆ ನಡೆದ ತಕ್ಷಣವೇ ಆಗ್ರಾ ವಲಯದ ಎಡಿಜಿ ಎಸ್‌ಕೆ ಭಗತ್, ಡಿಐಜಿ ಶೈಲೇಶ್ ಪಾಂಡೆ ಮತ್ತು ಫಿರೋಜಾಬಾದ್ ಎಸ್‌ಎಸ್‌ಪಿ ಆದಿತ್ಯ ಲಾಂಘೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ದಂಡೇ ಸ್ಥಳಕ್ಕೆ ಧಾವಿಸಿತು. ಪರಿಸ್ಥಿತಿಯನ್ನು ಅದ್ಭುತವಾಗಿ ನಿಯಂತ್ರಿಸಿದ ಪೊಲೀಸರು, ಹಳಿಗಳ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೇವಲ ಕೆಲವೇ ಗಂಟೆಗಳಲ್ಲಿ ಒಬ್ಬ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು

ತುಂಡ್ಲಾ ಜಂಕ್ಷನ್‌ನ ಹೊರ ಸಿಗ್ನಲ್‌ನಲ್ಲಿ ರೈಲನ್ನು ನಿಲ್ಲಿಸಿ, ಅಧಿಕಾರಿಗಳು ಇಡೀ ಕೋಚ್‌ನ ಸುರಕ್ಷತೆಯನ್ನು ಕೂಲಂಕಷವಾಗಿ ಪರಿಶೀಲಿಸಿದರು. ಎಲ್ಲವೂ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಂಡ ತಕ್ಷಣವೇ, ಅಂದರೆ ಸಂಜೆ 7.41 ಕ್ಕೆ ರೈಲು ದೆಹಲಿಯತ್ತ ತನ್ನ ಪ್ರಯಾಣವನ್ನು ಯಶಸ್ವಿಯಾಗಿ ಮುಂದುವರಿಸಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ – Kannada News

ಕೊಪ್ಪಳ, ಜೂನ್ 12: ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣದಲ್ಲಿ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಪ್ರಮಾಣವಾಗಿದೆ. ಕಳೆದ ವರ್ಷ ಜೂನ್‌ನಲ್ಲಿ ಜಲಾಶಯದಲ್ಲಿ 24 ಟಿಎಂಸಿ ನೀರಿತ್ತು. ಈ ವರ್ಷ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರೂ, ಮಲೆನಾಡು ಭಾಗದಲ್ಲಿ ಮಳೆಯ ಕೊರತೆಯಿಂದ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದೆ. ಕೇವಲ 9 ಟಿಎಂಸಿ ನೀರಿನಲ್ಲಿ ಕುಡಿಯುವ ನೀರು, ಕೃಷಿ ಹಾಗೂ ಜಲಚರಗಳಿಗೆ ನೀರು ಒದಗಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಪ್ರಸ್ತುತ ಕುಡಿಯುವ ನೀರು ಮತ್ತು ಕಾಲುವೆಗಳಿಗೆ ಸುಮಾರು 249 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ನೀರಿನ ಈ ಕೊರತೆಯು ಈ ನಾಲ್ಕು ಜಿಲ್ಲೆಗಳ ರೈತರಲ್ಲಿ ಮತ್ತು ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯಕ್ಕೆ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಗಾಳಿ ಸುದ್ದಿ ನಂಬಬೇಡಿ’; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಪ್ರತಿಕ್ರಿಯೆ – Kannada News

ಬೆಂಗಳೂರು, ಜೂನ್, 12: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ತನ್ನನ್ನು ಕೆಲವರು ಬಳಸಿಕೊಂಡು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಚಿನ್ನಯ್ಯ ಹೇಳಿದ್ದಾನೆ. ಅಲ್ಲದೆ, ಈತ ಪ್ರಕಾಶ್ ರಾಜ್ ಹೆಸರನ್ನು ರಿಟ್ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾನೆ. ಈ ಬೆನ್ನಲ್ಲೇ, ನಟ ಪ್ರಕಾಶ್ ರಾಜ್ ಅವರು (Prakash Raj) ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಅಧಿಕೃತ ಸ್ಪಷ್ಟನೆ ನೀಡಿರುವ ಅವರು, ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ ಎಂದು ಕಿಡಿಕಾರಿದ್ದಾರೆ.

ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್:

‘ಎಲ್ಲರಿಗೂ ನಮಸ್ಕಾರ.. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಕೆಲವು ಸುದ್ದಿಗಳು ಚರ್ಚೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ಸೂಕ್ಷ್ಮವಾದ ವಿಷಯವಾಗಿರುವುದರಿಂದ ಮತ್ತು ಕೋಟ್ಯಂತರ ಭಕ್ತರ ನಂಬಿಕೆಗೆ ಸಾಕ್ಷಿಯಾಗಿರುವುದರಿಂದ, ಇಂತಹ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವೂ ಆಗಿದೆ’ ಎಂದು ಪ್ರಕಾಶ್ ರಾಜ್ ಪೋಸ್ಟ್ ಆರಂಭಿಸಿದ್ದಾರೆ.

‘ನಾನು ಸದ್ಯ ಊರಿನಲ್ಲಿ ಇಲ್ಲ. ಇನ್ನೆರಡು ದಿನಗಳಲ್ಲಿ ನಾನೇ ಖುದ್ದಾಗಿ ಬಂದು ಮಾಧ್ಯಮ ಮಿತ್ರರ ಮೂಲಕ ಇದಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದ್ದೇನೆ. ಅಲ್ಲಿಯವರೆಗೆ ಗಾಳಿ ಸುದ್ದಿಗಳನ್ನು ದಯವಿಟ್ಟು ಯಾರೂ ನಂಬಬೇಡಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಉಲ್ಲೇಖಿಸಿದ ಚಿನ್ನಯ್ಯ!

ಪ್ರಕರಣದ ಹಿನ್ನೆಲೆ:

ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣದ ಹಿಂದೆ ನಟ ಪ್ರಕಾಶ್ ರಾಜ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್, ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ., ಅಜಯ್, ದಿನೇಶ್ ಸೇರಿದಂತೆ ಹಲವು ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ತಾವು ಹೇಳಿದಂತೆ ನಡೆದುಕೊಳ್ಳದೆ ಇದ್ದರೆ ಕೊಲೆ ಮಾಡುವ ಬೆದರಿಕೆ ಕೂಡ ಇತ್ತು ಎಂದು ಆತ ಆರೋಪಿಸಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇರಾನ್ ಮೇಲಿನ ದಾಳಿ ರದ್ದುಗೊಳಿಸಿದ ಟ್ರಂಪ್, ಶೀಘ್ರದಲ್ಲೇ ಶಾಂತಿ ಒಪ್ಪಂದ – Kannada News

ವಾಷಿಂಗ್ಟನ್, ಜೂನ್ 12: ಮಧ್ಯಪ್ರಾಚ್ಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿದ್ದ ಯುದ್ಧದ ಭೀತಿ ಮತ್ತು ಬಿಕ್ಕಟ್ಟು ಕೊನೆಗೊಳ್ಳುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಜಾಗತಿಕ ಮಟ್ಟದಲ್ಲಿ ನಡೆದಿದೆ. ಇರಾನ್ ಮೇಲಿನ ಸತತ ಮೂರನೇ ದಿನದ ನಿಗದಿತ ಮಿಲಿಟರಿ ದಾಳಿಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅಧಿಕೃತವಾಗಿ ರದ್ದುಗೊಳಿಸಿದ್ದು, ಟೆಹ್ರಾನ್ ಜೊತೆಗಿನ ಐತಿಹಾಸಿಕ ಶಾಂತಿ ಒಪ್ಪಂದ ಅಂತಿಮ ಹಂತಕ್ಕೆ ತಲುಪಿದೆ ಎಂದು ಘೋಷಿಸಿದ್ದಾರೆ.

ಒಪ್ಪಂದಕ್ಕೆ ಅಮೆರಿಕ-ಇರಾನ್ ಒಲವು: ಶ್ವೇತಭವನದ  ಮಾತನಾಡಿದ ಅಧ್ಯಕ್ಷ ಟ್ರಂಪ್, ಒಪ್ಪಂದಕ್ಕೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ. ಶೀಘ್ರದಲ್ಲೇ ಒಪ್ಪಂದಕ್ಕೆ ಸಹಿ ಹಾಕುವ ಸಮಯ ಮತ್ತು ಸ್ಥಳವನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ಮತ್ತೊಂದೆಡೆ, ಅಮೆರಿಕದೊಂದಿಗಿನ ಈ ತಿಳಿವಳಿಕೆ ಒಪ್ಪಂದದ ಪ್ರಸ್ತಾವನೆಯು ಇರಾನ್‌ನ ಉನ್ನತ ನಾಯಕರ ಸಕಾರಾತ್ಮಕ ಪರಿಗಣನೆಯಲ್ಲಿದೆ ಎಂದು ಟೆಹ್ರಾನ್‌ನ ಹಿರಿಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ರಾಜತಾಂತ್ರಿಕ ತಂತ್ರಗಾರಿಕೆ ಯಶಸ್ವಿ: ನ್ಯಾಟೋ ಡಿಫೆನ್ಸ್ ಕಾಲೇಜಿನ ಅಂತಾರಾಷ್ಟ್ರೀಯ ಭದ್ರತಾ ತಜ್ಞ ರಿಚರ್ಡ್ ವೈಟ್ಜ್ ಅವರ ಪ್ರಕಾರ, ಟ್ರಂಪ್ ಇರಾನ್ ವಿರುದ್ಧ ಉದ್ವಿಗ್ನತೆ ಕಡಿಮೆ ಮಾಡುವ ಯಶಸ್ವಿ ತಂತ್ರವನ್ನು ಅನುಸರಿಸಿದ್ದಾರೆ. ಅಮೆರಿಕದ ಕಠಿಣ ಮಿಲಿಟರಿ ಎಚ್ಚರಿಕೆಗಳೇ ಈಗ ಉಭಯ ದೇಶಗಳನ್ನು ಯುದ್ಧದ ಹಾದಿ ಬಿಟ್ಟು ಮಾತುಕತೆಯ ಮೇಜಿನ ಬಳಿ ತಂದು ನಿಲ್ಲಿಸಲು ಕಾರಣವಾಗಿದೆ.

ಮತ್ತಷ್ಟು ಓದಿ: Kharg Island: ವೆನೆಜುವೆಲಾ ಬಳಿಕ ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟ ಟ್ರಂಪ್; ಇರಾನ್​ಗೆ ಈ ಸಣ್ಣ ಪ್ರದೇಶವೇಕೆ ಬಹಳ ಮುಖ್ಯ?

ಇರಾನ್ ಜನತೆಯಲ್ಲಿ ಹರ್ಷದ ವಾತಾವರಣ: ಯುದ್ಧ ಮತ್ತು ಆರ್ಥಿಕ ನಿರ್ಬಂಧಗಳಿಂದಾಗಿ ತೀವ್ರ ಕಷ್ಟ ಅನುಭವಿಸುತ್ತಿದ್ದ ಇರಾನ್‌ನ ಸಾಮಾನ್ಯ ನಾಗರಿಕರು ಈ ಶಾಂತಿ ಸುದ್ದಿಯಿಂದ ನಿರಾಳರಾಗಿದ್ದಾರೆ. ಆರ್ಥಿಕತೆ ಚೇತರಿಸಿಕೊಳ್ಳುವ ಮತ್ತು ಮುರಿದುಬಿದ್ದಿದ್ದ ಜೀವನೋಪಾಯಗಳು ಮತ್ತೆ ಹಳಿಗೆ ಬರುವ ಭರವಸೆ ಮೂಡಿದೆ. ಇರಾನ್ ನಾಯಕತ್ವವೂ ಸಹ ಈ ಸಂಘರ್ಷದಿಂದ ದೇಶವು ಮತ್ತಷ್ಟು ಬಲಿಷ್ಠವಾಗಿ ಹೊರಹೊಮ್ಮಲಿದೆ ಎಂದು ಜನರಲ್ಲಿ ವಿಶ್ವಾಸ ತುಂಬುತ್ತಿದೆ.

ಪ್ರಾದೇಶಿಕ ಸ್ಥಿರತೆಗೆ ಮುನ್ನುಡಿ: ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕುವೈತ್, ಬಹ್ರೇನ್ ಹಾಗೂ ಜೋರ್ಡಾನ್ ಭಾಗದಲ್ಲಿ ಇತ್ತೀಚೆಗೆ ನಡೆಸಿದ್ದ ಸರಣಿ ಪ್ರತಿಕ್ರಿಯಾತ್ಮಕ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯ ಆತಂಕಕ್ಕೆ ಈಗ ತೆರೆ ಬೀಳಲಿದೆ. ಇರಾನ್-ಅಮೆರಿಕ ನಡುವೆ ಏರ್ಪಡಲಿರುವ ಈ ಪ್ರಗತಿಪರ ಒಪ್ಪಂದವು ಇಡೀ ಮಧ್ಯಪ್ರಾಚ್ಯ ವಲಯದಲ್ಲಿ ಶಾಶ್ವತ ಶಾಂತಿ ಸ್ಥಾಪನೆಗೆ ಹೊಸ ಹೆಬ್ಬಾಗಿಲನ್ನು ತೆರೆಯಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಣವೀರ್ ಸಿಂಗ್ ಎಕ್ಸಿಟ್ ಎಫೆಕ್ಟ್: ಅಧಿಕೃತವಾಗಿ ‘ಡಾನ್ 3’ ಕೈಬಿಟ್ಟ ಫರ್ಹಾನ್ ಅಖ್ತರ್? – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಫ್ರಾಂಚೈಸಿ ‘ಡಾನ್ 3’ ಸಿನಿಮಾ ಶೂಟಿಂಗ್ ಆರಂಭಕ್ಕೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಿಂದ ನಟ ರಣವೀರ್ ಸಿಂಗ್ ಹೊರನಡೆದ ಮೇಲೆ ‘ಡಾನ್ 3’ ಸದ್ಯಕ್ಕಂತೂ ಸೆಟ್ಟೇರುವುದು ಅನುಮಾನ ಎಂಬ ಮಾತು ಕೇಳಿಬರುತ್ತಿತ್ತು. ಆ ಮಾತು ಈಗ ನಿಜವಾಗುವ ಸಮಯ ಬಂದಿದ್ದು, ನಿರ್ದೇಶಕ ಹಾಗೂ ನಟ ಫರ್ಹಾನ್ ಅಖ್ತರ್ ಈ ಪ್ರಾಜೆಕ್ಟ್ ಅನ್ನು ಸದ್ಯಕ್ಕೆ ಬದಿಗೆ ತಳ್ಳಿದ್ದಾರೆ. ಇದರ ಬೆನ್ನಲ್ಲೇ ಅವರು ಹೊಸದೊಂದು ಬಿಗ್ ಪ್ರಾಜೆಕ್ಟ್‌ಗೆ ಕೈಹಾಕಿದ್ದಾರೆ.

ಹೊಸ ವರ್ದಿಗಳ ಪ್ರಕಾರ ಫರ್ಹಾನ್ ಅಖ್ತರ್ ಅವರು ಭಾರತೀಯ ಚಿತ್ರರಂಗದ ದಂತಕಥೆ, ಖ್ಯಾತ ಸಂಗೀತ ಮಾಂತ್ರಿಕ ಆರ್.ಡಿ. ಬರ್ಮನ್ ಅವರ ಬಯೋಪಿಕ್‌ನಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ‘ಎಂ.ಎಸ್. ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ’ ಖ್ಯಾತಿಯ ಯಶಸ್ವಿ ನಿರ್ದೇಶಕ ನೀರಜ್ ಪಾಂಡೆ ಈ ಚಿತ್ರವನ್ನು ನಿರ್ದೇಶಿಸಲಿದ್ದು, ಸ್ಕ್ರಿಪ್ಟ್ ಕೆಲಸಗಳು ವೇಗವಾಗಿ ನಡೆಯುತ್ತಿವೆ. ಆರ್.ಡಿ. ಬರ್ಮನ್ ಅವರ ಪಾತ್ರಕ್ಕೆ ಜೀವ ತುಂಬಲು ಫರ್ಹಾನ್ ಅಖ್ತರ್ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದ್ದು, 2026ರ ಕೊನೆಯ ವೇಳೆಗೆ ಈ ಚಿತ್ರದ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದೆ.

ರಣವೀರ್ ಸಿಂಗ್ ಹೊಸ ‘ಡಾನ್’ ಆಗಲಿದ್ದಾರೆ ಎಂದು ಘೋಷಿಸಿದಾಗ ಅಭಿಮಾನಿಗಳಲ್ಲಿ ಭಾರಿ ಕುತೂಹಲವಿತ್ತು. ಆದರೆ, ಸ್ಕ್ರಿಪ್ಟ್ ಫೈನಲ್ ಆಗದ ಕಾರಣ ಮತ್ತು ಶೂಟಿಂಗ್ ಪದೇ ಪದೇ ತಡವಾಗುತ್ತಿದ್ದರಿಂದ ಬೇಸತ್ತ ರಣವೀರ್ ಚಿತ್ರದಿಂದ ಹೊರನಡೆದಿದ್ದರು.

ಇದನ್ನೂ ಓದಿ: ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್

ಈ ದಿಢೀರ್ ಎಕ್ಸಿಟ್‌ನಿಂದ ತಮಗೆ ಭಾರಿ ಆರ್ಥಿಕ ನಷ್ಟವಾಗಿದೆ ಎಂದು ಆರೋಪಿಸಿ ಫರ್ಹಾನ್ ಅಖ್ತರ್ ಅವರ ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯು ರಣವೀರ್ ಸಿಂಗ್ ವಿರುದ್ಧ ಬರೋಬ್ಬರಿ 45 ಕೋಟಿ ರೂ. ಪರಿಹಾರ ಕೋರಿ ನೋಟಿಸ್ ನೀಡಿದೆ. ಈ ದೊಡ್ಡ ಕಾನೂನು ಸಮರ ಹಾಗೂ ವಿವಾದಗಳ ಕಾರಣದಿಂದಾಗಿ ‘ಡಾನ್ 3’ ಸಿನಿಮಾ ಸದ್ಯಕ್ಕೆ ಸಂಪೂರ್ಣವಾಗಿ ನೆನೆಗುದಿಗೆ ಬಿದ್ದಂತಾಗಿದೆ. ಈ ಸಿನಿಮಾಗೆ ಹೃತಿಕ್ ಎಂಟ್ರಿ ಆಗುತ್ತದೆ ಎಂದಿದೆಯಾದರೂ ಅದು ಇನ್ನೂ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿದ್ಯಾರ್ಥಿಗಳ ಫ್ರೀ ಬಸ್ ಪಾಸ್​ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು: ಈ ದಾಖಲೆಗಳು ಕಡ್ಡಾಯ – Kannada News

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್‌ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭImage Credit source: tv9

ಬೆಂಗಳೂರು, ಜೂನ್ 12: ಪ್ರಸಕ್ತ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್‌ಗಾಗಿ (Student Bus Pass) ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ (Shakti Scheme) ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಇರುವುದರಿಂದ ಹೆಣ್ಣು ಮಕ್ಕಳು ಪ್ರತ್ಯೇಕವಾಗಿ ಬಸ್ ಪಾಸ್ ಪಡೆಯುವ ಅವಶ್ಯಕತೆ ಇರುವುದಿಲ್ಲ. ಮುಖ್ಯಮಂತ್ರಿಗಳು ಘೋಷಣೆ ಮಾಡಿರುವ ಈ ನೂತನ ಉಚಿತ ಬಸ್ ಪಾಸ್ ಸೌಲಭ್ಯವು ಕೇವಲ ಗಂಡು ಮಕ್ಕಳಿಗೆ (ವಿದ್ಯಾರ್ಥಿಗಳಿಗೆ) ಅನ್ವಯಿಸಲಿದ್ದು, ಅವರು ಕಡ್ಡಾಯವಾಗಿ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಬೇಕಾಗುತ್ತದೆ. ಇನ್ನು ಈಗಾಗಲೇ ಹಣ ನೀಡಿ ಪಾಸ್ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಮುಂದಿನ 15 ದಿನಗಳಲ್ಲಿ ಹಣ ಮರುಪಾವತಿ (Refund) ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ. ಇದಕ್ಕಾಗಿ ಸರ್ಕಾರ ಒಟ್ಟು 86,86,25,000 ಕೋಟಿ ರೂ. ಹಣವನ್ನು ನಾಲ್ಕು ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಿದೆ.

ಅರ್ಜಿ ಸಲ್ಲಿಕೆ ಎಲ್ಲಿ? ಬೇಕಾಗುವ ದಾಖಲೆಗಳೇನು?

ವಿದ್ಯಾರ್ಥಿಗಳು ತಮ್ಮ ಮೊಬೈಲ್, ಯಾವುದೇ ಸೈಬರ್ ಸೆಂಟರ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ‘ಸೇವಾಸಿಂಧು (Seva Sindhu)’ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿ ಬೇಕಾಗುತ್ತವೆ;

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಶಾಲಾ/ಕಾಲೇಜು ಪ್ರವೇಶಾತಿ ರಶೀದಿ (College Admission Receipt)
  • ವಿದ್ಯಾರ್ಥಿಯ ಇತ್ತೀಚಿನ 2 ಪಾಸ್‌ಪೋರ್ಟ್ ಅಳತೆಯ ಫೋಟೋಗಳು

ಮುಖ್ಯವಾಗಿ, ಆನ್‌ಲೈನ್ ಅರ್ಜಿಯ ಪ್ರತಿಯಲ್ಲಿ ವಿದ್ಯಾರ್ಥಿ ಓದುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ (Principal/Head Master) ಕಡ್ಡಾಯವಾಗಿ ಸಹಿ ಮತ್ತು ಅಧಿಕೃತ ಸೀಲ್ ಹಾಕಿಸಿಕೊಂಡಿರಬೇಕು.

ಪಾಸ್ ವಿತರಣೆ ಹೇಗೆ?

ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆಯಾ ಅರ್ಜಿಗಳನ್ನು ಬಿಎಂಟಿಸಿ (BMTC), ಕೆಎಸ್‌ಆರ್‌ಟಿಸಿ (KSRTC), ವಾಯುವ್ಯ (NWKRTC) ಮತ್ತು ಕಲ್ಯಾಣ ಕರ್ನಾಟಕ (KKRTC) ಸಾರಿಗೆ ನಿಗಮಗಳ ಪಾಸ್ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ವಿದ್ಯಾರ್ಥಿಯ ಶಾಲಾ-ಕಾಲೇಜಿನ ಮಾಹಿತಿ ನಿಖರವಾಗಿದ್ದಲ್ಲಿ ಅರ್ಜಿಯನ್ನು ಅನುಮೋದಿಸಲಾಗುತ್ತದೆ (Approval). ಅರ್ಜಿ ಅನುಮೋದನೆಗೊಂಡ ತಕ್ಷಣ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಸಂದೇಶ (SMS) ಬರಲಿದ್ದು, ಆ ಬಳಿಕ ನಿಗದಿಪಡಿಸಿದ ಕೌಂಟರ್‌ಗಳಲ್ಲಿ ಪಾಸ್ ಪಡೆಯಬಹುದು.

ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ, ಆನೇಕಲ್ ಸೇರಿದಂತೆ ಪ್ರಮುಖ ಆರು ಟಿಟಿಎಂಸಿ (TTMC) ಕೇಂದ್ರಗಳಲ್ಲಿ ಹಾಗೂ ರಾಜ್ಯದ ಎಲ್ಲಾ ಪ್ರಮುಖ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳು ಭೌತಿಕ ಪಾಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ – Kannada News

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಮುಖ್ಯಾಂಶಗಳು

  • ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ, ಭಾರಿ ಮಳೆಯ ಮುನ್ಸೂಚನೆ.
  • ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
  • ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚನೆ.

ಕರಾವಳಿಗೆ ಆರೆಂಜ್ ಅಲರ್ಟ್​

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಭಾರೀ ಮಳೆ

ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮಲೆನಾಡು ಭಾಗಕ್ಕೆ ಹೈ ಅಲರ್ಟ್

ಮಲೆನಾಡು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ.

ಭಾರಿ ಮಳೆ ಮತ್ತು ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ/ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸೂರ್ಯವಂಶಿ ಟೀಮ್ ಇಂಡಿಯಾ ಡೆಬ್ಯೂ ವಿಳಂಬ? ಎದುರಾಯ್ತು ಅಡಚಣೆ – Kannada News

ಅಂಡರ್-19 ವಿಶ್ವಕಪ್ ಹಾಗೂ ಐಪಿಎಲ್​‌ನಲ್ಲಿ ಅಬ್ಬರಿಸಿದವರು ವೈಭವ್ ಸೂರ್ಯವಂಶಿ (Vaibhav Sooryavamshi). ಕೇವಲ 15ನೇ ವಯಸ್ಸಿಗೆ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಈಗ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಕೊಂಚ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ಭಾರತ ತಂಡ ಜೂನ್ ಕೊನೆಯ ವಾರದಲ್ಲಿ ಐರ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದೆ. ಆದರೆ, ಸದ್ಯ ಅಲ್ಲಿ ಉಂಟಾಗಿರುವ ಆಂತರಿಕ ಕಲಹದಿಂದ ಈ ಸರಣಿ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ಜೂನ್ 26 ಮತ್ತು 28 ರಂದು ಬೆಲ್‌ಫಾಸ್ಟ್‌ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಿಗದಿಯಾಗಿದೆ. ಆದರೆ, ಇತ್ತೀಚೆಗೆ ಅಲ್ಲಿ ನಡೆದ ಹಿಂಸಾತ್ಮಕ ವಲಸೆ ವಿರೋಧಿ ದಂಗೆಗಳಿಂದಾಗಿ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿರುವ ಐರ್ಲೆಂಡ್ ಕ್ರಿಕೆಟ್ ಮಂಡಳಿ, ಆಟಗಾರರು ಮತ್ತು ಪ್ರೇಕ್ಷಕರ ರಕ್ಷಣೆ ನಮಗೆ ಮುಖ್ಯ ಎಂದಿದೆ. ಒಂದು ವೇಳೆ ಬೆಲ್‌ಫಾಸ್ಟ್‌ನಲ್ಲಿ ಪರಿಸ್ಥಿತಿ ಹತೋಟಿಗೆ ಬಾರದಿದ್ದರೆ ಪಂದ್ಯಗಳನ್ನು ಡಬ್ಲಿನ್‌ಗೆ ಸ್ಥಳಾಂತರಿಸುವ ಆಲೋಚನೆಯೂ ಇದೆ. ಹಾಗಾದಲ್ಲಿ ಪಂದ್ಯ ನಿಗದಿತ ಸಮಯಕ್ಕೆ ನಡೆಯದೇ ವಿಳಂಬ ಆಗಬಹುದು.

ಈ ಸರಣಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ವೈಭವ್ ಸೂರ್ಯವಂಶಿ ಈ ಪಂದ್ಯದ ಮೂಲಕ ಭಾರತದ ಕ್ರಿಕೆಟ್ ತಂಡ ಸೇರಿಕೊಳ್ಳಲಿದ್ದಾರೆ. ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ (16 ವರ್ಷ 205 ದಿನಗಳು) ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಮುರಿಯಲಿದ್ದಾರೆ.

ಐರ್ಲೆಂಡ್‌ನ ಈಗಿನ ಪರಿಸ್ಥಿತಿ ಈ ಐತಿಹಾಸಿಕ ಕ್ಷಣಕ್ಕೆ ಸದ್ಯಕ್ಕೆ ಬ್ರೇಕ್ ಹಾಕುವಂತೆ ಕಾಣುತ್ತಿದೆ. ಅಲ್ಲದೆ, ಶ್ರೇಯಸ್ ಅಯ್ಯರ್ ಅವರ ಟಿ20 ನಾಯಕತ್ವದ ಹೊಸ ಇನ್ನಿಂಗ್ಸ್ ಕೂಡ ಈ ಸರಣಿಯಿಂದಲೇ ಆರಂಭವಾಗಬೇಕಿದೆ. ಸದ್ಯಕ್ಕೆ ಪ್ರವಾಸ ರದ್ದಾಗಿಲ್ಲವಾದರೂ, ಮುಂಬರುವ ದಿನಗಳಲ್ಲಿ ಕ್ರಿಕೆಟ್ ಐರ್ಲೆಂಡ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ವೈಭವ್ ಭಾರತದ ಪ್ರವಾಸದ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: 200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ!

ಐರ್ಲೆಂಡ್ ಸರಣಿಗೆ ಭಾರತ ಟಿ20 ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ ಕೃಷ್ಣ, ವೈಭವ್ ಸೂರ್ಯವಂಶಿ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ತೆವಳುತ್ತಾ ಬಂದು ನಡುರಸ್ತೆಯಲ್ಲಿ ಕುಳಿತ ಮಗು, ದೇವರಂತೆ ಬಂದು ರಕ್ಷಿಸಿದ ಬಸ್ ಡ್ರೈವರ್ – Kannada News

ತಿರುವನಂತಪುರಂ, ಜೂನ್ 12: ನಡು ರಸ್ತೆಯಲ್ಲಿ ಬಂದು ಕುಳಿತಿದ್ದ ಮಗುವನ್ನು ಬಸ್(Bus) ಚಾಲಕರೊಬ್ಬರು ದೇವರಂತೆ ಬಂದು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಕೇರಳಂನ ಮಲಪ್ಪುರಂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂನ್ 10ರಂದು ನಡೆದಿದೆ.
ವಾಹನಗಳು ಅತಿ ವೇಗವಾಗಿ ಚಲಿಸುವ ಮುಖ್ಯ ರಸ್ತೆಯೊಂದರ ಮೇಲೆ ಕೇವಲ ಮಗುವೊಂದು ಮನೆಯ ಗೇಟ್ ದಾಟಿ ತೆವಳುತ್ತಾ ಬಂದು ರಸ್ತೆಯ ಮಧ್ಯಕ್ಕೆ ಕುಳಿತಿತ್ತು. ಸರಿಯಾಗಿ ಅದೇ ಕ್ಷಣದಲ್ಲಿ ಆ ರಸ್ತೆಯಲ್ಲಿ ಬಸ್ಸೊಂದು ವೇಗವಾಗಿ ಅದೇ ದಾರಿಯಲ್ಲಿ ಬರುತ್ತಿತ್ತು. ಮಗುವಿನ ಸಮೀಪ ಬರುತ್ತಿದ್ದಂತೆ ಏಕಾಏಕಿ ಚಾಲಕ ಬ್ರೇಕ್ ಹಾಕಿದ್ದಾನೆ.

ಆದರೆ, ಬಸ್ಸಿನ ಸ್ಟೀರಿಂಗ್ ಹಿಡಿದಿದ್ದ ಚಾಲಕನ ದೃಷ್ಟಿ ರಸ್ತೆಯ ಮೇಲಿದ್ದ ಆ ಸಣ್ಣ ಮಗುವಿನ ಮೇಲೆ ಬಿತ್ತು. ಧೃತಿಗೆಡದ ಆತ ಅತ್ಯಂತ ವೇಗವಾಗಿ ಪ್ರತಿಕ್ರಿಯಿಸಿ, ಬಸ್ಸಿನ ಎಮರ್ಜೆನ್ಸಿ ಬ್ರೇಕ್ ಒತ್ತಿದ್ದರೆ. ಚಾಲಕನ ಅದ್ಭುತ ನಿಯಂತ್ರಣದಿಂದಾಗಿ ಬಸ್ಸು ಮಗುವಿನಿಂದ ಕೇವಲ ಕೆಲವೇ ಇಂಚುಗಳ ದೂರದಲ್ಲಿ ನಿಂತಿತ್ತು.

ಬಸ್ಸು ನಿಲ್ಲುತ್ತಿದ್ದಂತೆಯೇ, ಕೃತಜ್ಞತಾ ಭಾವದಿಂದ ಡ್ರೈವರ್ ಬಾಗಿಲು ತೆರೆದು ರಸ್ತೆಯತ್ತ ಧಾವಿಸಿದ್ದಾರೆ. ವಿರುದ್ಧ ದಿಕ್ಕಿನಿಂದ ಬರಬಹುದಾದ ಬೇರೆ ಯಾವುದೇ ವಾಹನಗಳು ಮಗುವಿಗೆ ಡಿಕ್ಕಿ ಹೊಡೆಯುವ ಮುನ್ನವೇ, ಆ ಮಗುವನ್ನು ಎತ್ತಿ ಎದೆಗೆ ಅಪ್ಪಿಕೊಂಡು ಸುರಕ್ಷಿತವಾಗಿ ರಸ್ತೆಯ ಪಕ್ಕಕ್ಕೆ ಕರೆತಂದಿದ್ದಾರೆ.

ಮತ್ತಷ್ಟು ಓದಿ: ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ

ಮಗುವನ್ನು ಎತ್ತಿಕೊಂಡು ಹತ್ತಿರದ ಮನೆಗೆ ಹೋಗಿ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಮಗು ಮನೆಯಿಂದ ಹೇಗೆ ಹೊರಗೆ ಬಂತು ಎಂಬುದು ಇನ್ನು ನಿಖರವಾಗಿ ತಿಳಿದುಬಂದಿಲ್ಲವಾದರೂ, ಮಗು ಸುರಕ್ಷಿತವಾಗಿ ತಾಯಿಯ ಮಡಿಲು ಸೇರಿರುವುದು ಇಡೀ ದೇಶ ನಿರಾಳವಾಗುವಂತೆ ಮಾಡಿದೆ.

ವಿಡಿಯೋ

ಪ್ರತ್ಯೇಕ ಘಟನೆ: ಮುಂಬೈನಲ್ಲಿ ಬಸ್ ಅಪಘಾತ

ಮುಂಬೈನ ದಾದರ್ ಬಳಿಯ ಪ್ಲಾಜಾ ಸಿನಿಮಾ ಬಳಿ ‘ಬೆಸ್ಟ್’ ಸಂಸ್ಥೆಯ ಬಸ್ಸೊಂದು ನಿಯಂತ್ರಣ ತಪ್ಪಿ ಆಕ್ಟಿವಾ, ಎಲೆಕ್ಟ್ರಿಕ್ ಬೈಕ್ ಮತ್ತು ಕಾರು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ದುರದೃಷ್ಟಕರ ಘಟನೆಯಲ್ಲಿ 30 ವರ್ಷದ ಡೆಲಿವರಿ ಎಕ್ಸಿಕ್ಯೂಟಿವ್ ನೌಕರರೊಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವಾಹನವನ್ನು ಮರುಪ್ರಾರಂಭಿಸುವಾಗ ಚಾಲಕ ಆಕಸ್ಮಿಕವಾಗಿ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಒತ್ತಿದ್ದೇ ಇದಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Breaking News Today Live: ಸಂಪುಟ ವಿಸ್ತರಣೆ ಕಸರತ್ತಿನ ಬೆನ್ನಲ್ಲೇ ಅಮಿತ್ ಶಾ ಭೇಟಿಯಾಗಲಿರುವ ಸಿಎಂ ಡಿಕೆ ಶಿವಕುಮಾರ್! – Kannada News

ದೆಹಲಿ ಪ್ರವಾಸದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರನ್ನು ಆಡಳಿತಾತ್ಮಕ ವಿಷಯಗಳ ಸಲುವಾಗಿ ಭೇಟಿಯಾಗಲಿದ್ದಾರೆ. ಇನ್ನೊಂದೆಡೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ಹಲವು ಹಿರಿಯ ಮತ್ತು ಕಿರಿಯ ಶಾಸಕರು ಕೂಡ ದೆಹಲಿಯಲ್ಲೇ ಬೀಡುಬಿಟ್ಟು ತೀವ್ರ ಲಾಬಿ ನಡೆಸುತ್ತಿದ್ದಾರೆ.ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಈ ಬಾರಿ ಸಂಪುಟದಲ್ಲಿ ಹೊಸ ಹಾಗೂ ಯುವ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Source link