Category Archives: Blog

Your blog category

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 7ರ ದಿನಭವಿಷ್ಯ – Kannada News | Daily Horoscope Feb 7: Numerology Insights for Birth Numbers 4, 5, 6 & Rahu Kala Tip

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ತಿಳಿವಳಿಕೆ- ಅನುಭವ- ಜ್ಞಾನಕ್ಕೆ ಹಾಗೂ ಅದರ ಸರಿಯಾದ ಬಳಕೆಗೆ ಉತ್ತಮವಾದ ಪ್ರತಿಫಲ ದೊರೆಯಲಿದೆ. ವ್ಯಾಪಾರದ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ನೀವು ಕೈಗೊಳ್ಳುವ ಪ್ರಯಾಣವು ಲಾಭದಾಯಕ ಆಗಲಿದೆ. ಅತಿಯಾದ ಖರ್ಚು ಮಾಡುವ ಪ್ರವೃತ್ತಿಯನ್ನು ನಿಯಂತ್ರಿಸಿಕೊಳ್ಳುವುದು ಮುಖ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚುತ್ತದೆ. ಗುರು ಸಮಾನರಾದ ವ್ಯಕ್ತಿಗಳನ್ನು ಈ ದಿನ ಭೇಟಿಯಾಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಯಾವುದೇ ವ್ಯಕ್ತಿ ಅಥವಾ ವಿಷಯವನ್ನು ತುಂಬ ಹಚ್ಚಿಕೊಳ್ಳಬೇಡಿ. ಕುಟುಂಬದೊಂದಿಗೆ ಸಮಯ ಕಳೆಯುವುದರಿಂದ ನೆಮ್ಮದಿ ಸಿಗುತ್ತದೆ. ಸಣ್ಣ ವಿಷಯಗಳಿಗೂ ಅತಿಯಾಗಿ ಚಿಂತಿಸುವುದನ್ನು ತಪ್ಪಿಸುವುದಕ್ಕಾಗಿ ನಿಮಗೆ ಬರುವಂಥ ಆಲೋಚನೆಗಳನ್ನು ಬರೆದಿಡುವ ಅಭ್ಯಾಸ ಮಾಡಿ. ಇದನ್ನು ಈ ದಿನದ ಮಟ್ಟಿಗೆ ಮಾಡಿದರೂ ಸಾಕು. ಶಿಕ್ಷಣ, ಬ್ಯಾಂಕಿಂಗ್ ಅಥವಾ ಕನ್ಸಲ್ಟಿಂಗ್ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಸುತ್ತಿದ್ದಲ್ಲಿ ಯಶಸ್ಸು ಸಿಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕ್ರಿಯೇಟಿವ್ ಮತ್ತು ಕಲೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ಭಾವನಾತ್ಮಕ ನಿರ್ಧಾರಗಳಿಂದ ಸಾಧ್ಯವಾದಷ್ಟೂ ದೂರವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು. ದೊಡ್ಡ ಮೊತ್ತದ ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ ತೆಗೆದುಕೊಳ್ಳುವುದು ಅಗತ್ಯ ಎಂಬುದು ಗಮನದಲ್ಲಿ ಇರಲಿ. ನಿಮ್ಮ ಭಾವನೆಗಳಿಗೆ ಸಣ್ಣ ಸಣ್ಣ ಸಂಗತಿಗಳು ಸಹ ಘಾಸಿ ಮಾಡಬಹುದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 7ರ ದಿನಭವಿಷ್ಯ – Kannada News | Feb 7th Saturday Horoscope: Birth Numbers 1, 2, 3 Daily Forecast and Life Advice

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಭವಿಷ್ಯದ ಬಗ್ಗೆ ಆಲೋಚಿಸಿ, ಅದರ ಕಡೆಗೆ ನೀವು ಮಾಡಿದ ಕೆಲಸದ ಫಲವಾಗಿ ಈ ಹಿಂದಿನ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ತಾಂತ್ರಿಕ ಕ್ಷೇತ್ರ, ರಾಜಕೀಯ ಅಥವಾ ರಿಯಲ್ ಎಸ್ಟೇಟ್‌ನಲ್ಲಿ ಕಾರ್ಯ ನಿರ್ವಹಿಸುವವರು ಉತ್ತಮ ಯಶಸ್ಸು ಕಾಣುವಿರಿ. ಆದರೆ ಹಣಕಾಸಿನ ನಿರ್ವಹಣೆಯಲ್ಲಿ ಸ್ಪಷ್ಟತೆ ಇರಿಸಿಕೊಳ್ಳಿ. ನಿಮ್ಮಲ್ಲಿ ಕೆಲವರಿಗೆ ಅನಿರೀಕ್ಷಿತವಾಗಿ ಅಡೆತಡೆಗಳು ಎದುರಾಗಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸರ್ಕಾರದಿಂದ ನೋಟಿಸ್ ನೀಡುವ ಸಾಧ್ಯತೆ ಇದೆ. ಇನ್ನು ನಿಮ್ಮ ಆಪ್ತ ಸ್ನೇಹಿತರೊಂದಿಗೆ ಸಣ್ಣ ಮಟ್ಟದಲ್ಲಾದರೂ ವಿವಾದಗಳು ಉಂಟಾಗಬಹುದು. ಯಾವುದೇ ಕಾರಣಕ್ಕೂ ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಏಕೆಂದರೆ ಇದೇ ವಿಚಾರಕ್ಕೆ ನಿಮ್ಮ ಮನಸ್ಸಿನ ಆತಂಕ ಹೆಚ್ಚಾಗಬಹುದು. ಅನಗತ್ಯವಾದ ಆತಂಕ ಮತ್ತು ಅಸುರಕ್ಷತೆ ಭಾವ ಕಾಡಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಆಲೋಚನೆಗಳು ವಾಸ್ತವಕ್ಕೆ ಹತ್ತಿರವಾಗಿವೆಯೇ ಅಥವಾ ಕೇವಲ ಊಹೆಯೇ ಎಂಬುದನ್ನು ವಿಶ್ಲೇಷಣೆ ಮಾಡಿ. ಕುಟುಂಬದಲ್ಲಿ ಸೌಹಾರ್ದ ವಾತಾವರಣ ಇರುತ್ತದೆ. ನೀವು ಸಾಮಾನ್ಯವಾಗಿಯೇ ಇತರರಿಗೆ ಸಲಹೆಗಳನ್ನು ನೀಡಲು ಬಯಸುತ್ತೀರಿ. ಈ ದಿನ ಅವರಾಗಿಯೇ ಕೇಳಿದಾಗ ಮಾತ್ರ ಸಲಹೆ ನೀಡಿ ಮತ್ತು ಇತರರ ಪರ್ಸನಲ್ ಸ್ಪೇಸ್ ಅನ್ನು ಗೌರವಿಸಿ.

ಲೇಖನ- ಸ್ವಾತಿ ಎನ್.ಕೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅನ್ಯರಿಂದ ಗೆಲುವಿನ ಸಂಭ್ರಮ – Kannada News | Horoscope 07 February 2026; Dina Rashi Bhavishya Today, Checkout the details here

ಮೇಷ ರಾಶಿ :

ಉದ್ಯೋಗದ ಕಾರಣಕ್ಕೆ ಪ್ರಯಾಣ ಮಾಡುವ ಅವಕಾಶವಿರುತ್ತದೆ. ವ್ಯಾಪಾರವನ್ನು ಹೆಚ್ಚಿಸಲು ಹೊಸ ಸ್ಥಳದ ಪರಿಶೀಲನೆ ನಡೆಸುವಿರಿ.‌ ಇಂದು ವೃತ್ತಿಗೆ ಸೇರಿದ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ. ಕಛೇರಿಯ ಕೆಲಸದಲ್ಲಿ ನೌಕರರ ಕಾರ್ಯದಕ್ಷತೆತ ಕಾರಣಗಳಿಂದ ನಿಧಾನವಾಗಲಿದೆ. ನಿಮ್ಮಿಂದಾಗಿ ಮನೆಯಲ್ಲಿ‌ ಇಂದು ಸಂತೋಷವು ಇರಲಿದೆ. ‌ಅನುಕಂಪದಿಂದ ಏನನ್ನಾದರೂ ಸಾಧಿಸಿಕೊಳ್ಳುವಿರಿ.

ವೃಷಭ ರಾಶಿ :

ಇಂದಿನ ಪರಿಸ್ಥಿಗೆ ತಕ್ಕಹಾಗೆ ಮನಃಸ್ಥಿತಿಯಲ್ಲಿ ಏರಿಳಿತಗಳಿರಬಹುದು. ಉದ್ಯೋಗ ಸಂದರ್ಶನದಿಂದ ಆತಂಕ ದೂರಾಗುವುದು. ನಿಮ್ಮ ಆಕರ್ಷಕ ರೂಪಕ್ಕೆ ಮನವು ಸೋಲಬಹುದು. ಬರುವ ಯೋಜನೆಗಳನ್ನು ಸಕಾರಾತ್ಮಕವಾಗಿ ಪಡೆಯುವಿರಿ. ರಾಜಕೀಯದಿಂದ ನಿಮಗೆ ಬೇರೆ ಯಾವ ಸೌಕರ್ಯಗಳೂ ಇರಲಾರವು. ಸ್ವಾರ್ಥವನ್ನು ಬಿಟ್ಟು ಬೇರೆ ಕಡೆ ಯೋಚನೆಯನ್ನು ಮಾಡಲಾರಿರಿ. ಅಭದ್ರತೆಯನ್ನು ನೀವು ದೂರಮಾಡಿಕೊಳ್ಳುವುದು ಉತ್ತಮ.

ಮಿಥುನ ರಾಶಿ:

ಹಿರಿಯರು ಆಡಿದ ನಿಮ್ಮ ವಿವಾಹದ ಮಾತುಕತೆಯಿಂದ‌ ಸಂತೋಷ. ನೀವು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ. ಅಜಾಗರೂಕತೆಯಿಂದ ನಿಮಗೆ ನಷ್ಟ ಮಾಡಿಕೊಳ್ಳುವಿರಿ. ಕಳೆದುಕೊಂಡ ವಸ್ತುಗಳನ್ನು ಪುನಃ ಸಂಪಾದಿಸುವ ಮಾನಸಿಕ ಸ್ಥಿತಿಯನ್ನು ಹೊಂದಿರುವಿರಿ. ಕೆಲವು ಒಳ್ಳೆಯ ಅಭ್ಯಾಸಗಳು ಕೈತಪ್ಪಿಹೋಗಬಹುದು. ವಿಷಮಸ್ಥಿತಿಯನ್ನು ಸಮಸ್ಥಿಯನ್ನಾಗಿ ಮಾಡಿಕೊಳ್ಳುವ ವಿಧಾನವು ಗೊತ್ತಿದೆ.

ಕರ್ಕಾಟಕ ರಾಶಿ:

ಆಸ್ತಿಯ ವಿಚಾರದಲ್ಲಿ ನಿಮ್ಮರಿಗೆ ಸುಳ್ಳು ಹೇಳಿದ್ದು ಗೊತ್ತಾಗುವುದು. ಗೌಪ್ಯ ಸಂಗತಿಗಳನ್ನು ಹೊರಹಾಕುವಿರಿ. ಮನೆಯ ಸ್ವಚ್ಛತೆಗೆ ಗಮನ ಕೊಡಿ. ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವುದು. ಉದ್ಯೋಗದಲ್ಲಿ ಹೊಸ ವಿಚಾರಗಳನ್ನು ನೀವು ಕಲಿಯಬೇಕಾಗುವುದು. ‌ಅಪರಿಚರ ಜೊತೆ ವ್ಯವಹಾರವು ಸರಿಯಾಗಿ ಇರಲಿ. ತಂದೆಯ ಮೇಲೆ‌ ನಿಮಗೆ ಬೇಸರ ಬರಬಹುದು. ಸಂಗಾತಿಯ ಮಾತುಗಳು ನಿಮಗೆ ನೋವನ್ನು ತರಬಹುದು.

ಸಿಂಹ ರಾಶಿ:

ನಿಮ್ಮ ಕಾರ್ಯಗಳಿಗೆ ಆದ್ಯತೆ ನೀಡಿ. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು. ನಿಮಗೆ ಸ್ಥಾನವಿಲ್ಲದ ಕಡೆ ಇರಲು ಇಷ್ಟವಾಗದು. ಸಿಟ್ಟಿನಿಂದ ಎಲ್ಲರನ್ನೂ ದೂರಮಾಡಿಕೊಳ್ಳುವಿರಿ. ಮನೆಯಲ್ಲಿನ ಅಶಾಂತಿಯ ವಾತಾವರಣವು ಸರಿಮಾಡಿಕೊಳ್ಳಿ. ಆತ್ಮವಿಶ್ವಾಸದ‌ ಕೊರತೆಯನ್ನು ಸ್ನೇಹಿತರು ತುಂಬುವರು. ಸಂಶೋಧಕರು ಒತ್ತಡದಲ್ಲಿ‌ ಕಾರ್ಯವನ್ನು ಕಾರ್ಯವನ್ನು ಮಾಡುವರು.

ಕನ್ಯಾ ರಾಶಿ:

ಇಂದು ನೀವು ಕಚೇರಿಯಲ್ಲಿ ಸಹೋದ್ಯೋಗಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ಸಾಲ ಕೊಟ್ಟವರ ಎದುರು ತಲೆ ಮೆರೆಸಿಕೊಂಡು ಓಡಾಡುವಿರಿ. ರಾಜಕೀಯವಾಗಿ ಹಿನ್ನಡೆಯಾಗಬಹುದು. ಸಿಟ್ಟಾಗುವ ಸಂದರ್ಭದಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳಿ. ಹಳೆಯ ನೋವುಗಳು ನಿಮ್ಮನ್ನು ಕಾಡುವುಸು. ಶುಭ ಸುದ್ದಿಯ ನಿರೀಕ್ಷೆಯು ಇಂದು ಕೇವಲ ನಿರೀಕ್ಷೆಯಾಗಿಯೇ ಇರುವುದು.

ತುಲಾ ರಾಶಿ:

ಸಕಾರಾತ್ಮಕ ಮನಃಸ್ಥಿತಿಯೊಂದಿಗೆ ಯಶಸ್ಸನ್ನು ಸಾಧಿಸಲು ಪ್ರಯತ್ನಿಸುತ್ತಿರಿ. ಆನಾರೋಗ್ಯವನ್ನು ನಿರ್ಲಕ್ಷಿಸುವಿರಿ. ಮನಃಸ್ಥಿತಿಯು ಸರಿ ಇಲ್ಲದ ಕಾರಣ ಯಾವ ಕೆಲಸವನ್ನೂ ಖುಷಿಯಿಂದ ಮಾಡುವುದಿಲ್ಲ. ಉದ್ಯೋಗವನ್ನು ಬಿಟ್ಟು ಭೂಮಿಯ ವ್ಯವಹಾರದಲ್ಲಿ ತೊಡಗಿಕೊಳ್ಳುವಿರಿ. ನಕಾರಾತ್ಮಕ ಚಿಂತನೆಯನ್ನು ಹೆಚ್ಚಿಸಲು ನಿಮ್ಮ ಸುತ್ತ ಅಂತಹ ವಾತಾವರಣವು ಇರುವುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ.

ವೃಶ್ಚಿಕ ರಾಶಿ:

ಸಂಗಾತಿಗೆ ನಿಮ್ಮ ಉಡುಗೊರೆಯು ಇಷ್ಟವಾಗದು.‌ ಮಹಿಳೆಯರು ಸಮಾರಂಭಗಳಿಗೆ ಮನೆಗೆ ಹೋಗುವ ಸಾಧ್ಯತೆ ಇದೆ. ಇಂದಿನ ಆತಂಕವನ್ನು ನೀವು ಸುಲಭವಾಗಿ ಎದುರಿಸುವಿರಿ. ಅಲ್ಪ ಹಣವನ್ನೂ ಸಾಲವಾಗಿ ಪಡೆಯುವುದನ್ನು ತಪ್ಪಿಸಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ. ಆಪ್ತರ ಬಗೆಗಿನ ಊಹೆಯು ವ್ಯತ್ಯಾಸವಾದೀತು. ವಾಹನವನ್ನು ಸರಿ ಮಾಡಿಸಲು ಹಣವು ಖರ್ಚಾಗಲಿದೆ.

ಧನು ರಾಶಿ:

ನಿಮ್ಮ ಕಂಡು ಅಸೂಯೆ ಪಡುವವರಿಗೆ ಇನ್ನಷ್ಟು ತುಪ್ಪ ಸುರಿಯುವಿರಿ. ಕಛೇರಿಯಲ್ಲಿ ದಿನದಂತೆ ಎಲ್ಲವೂ ಇರದು. ಸಂದರ್ಭಗಳು ಪ್ರತಿಕೂಲವಾಗಿರಲಿವೆ. ಸಮಯವನ್ನು ನೋಡಿ ಕಾರ್ಯವನ್ನು ಮಾಡಿಸಿಕೊಳ್ಳಿ. ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಿ. ನಿಮ್ಮ ಇಂದಿನ ತುರ್ತು ಕಾರ್ಯಗಳನ್ನು ಮುಂದೂಡುವಿರಿ. ಒತ್ತಡದ ಕಾರ್ಯದಿಂದ ನೀವು ದೂರ ಉಳಿಯುವಿರಿ. ಇಂದು ಯಾರ ಮಾತನ್ನೂ ಪೂರ್ಣವಾಗಿ ನಂಬಲು ಆಗದು.

ಮಕರ ರಾಶಿ:

ಮನಸ್ಸಿನ ಚಾಂಚಲ್ಯವನ್ನು ಧ್ಯಾನದಿಂದ ಸರಿ ಮಾಡಿಕೊಳ್ಳಿ. ತಪ್ಪನ್ನು ಮರೆಮಾಚುವಿರಿ. ಆದರೂ ಗೊತ್ತಾಗುವುದು. ಮನೆಯಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಬಹುದು. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ. ಸರ್ಕಾರದ ಕಡೆಯಿಂದ ನಿಮ್ಮ ಕೆಲಸಕ್ಕೆ ಒಪ್ಪಿಗೆ ಸಿಗುವುದು. ಉದ್ಯೋಗದಲ್ಲಿ ಉದ್ವೇಗಕ್ಕೆ ಒಳಗಾಗುವ ಸಾಧ್ಯತೆ ಇದೆ.‌ ಉದ್ಯೋಗದ ಮಿತ್ರರು ಇಂದು ಸಿಗವರು.

ಕುಂಭ ರಾಶಿ:

ಅತಿಯಾದ ಕೋಪ ಬೇಡ, ಶಾಂತ ಮನಸ್ಸಿನಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ವಿದೇಶೀ ವ್ಯವಹಾರದಿಂದ ನಿಮಗೆ ಲಾಭವಿದೆ. ಕುಟುಂಬದಲ್ಲಿ ನೆಮ್ಮದಿಯ ತಂದುಕೊಳ್ಳುವಿರಿ. ಇಷ್ಟಮಿತ್ರರ ಭೇಟಿಯಿಂದ ಖುಷಿಯು ಹೆಚ್ಚಾಗುವುದು. ಬಹಳ ದಿನಗಳ ಸಂತಾನದ ಸುಖದ ನಿರೀಕ್ಷೆಯಲ್ಲಿ ಸಫಲರಾಗುವುದು.‌ ಸಾಹಸದ‌ ಕಾರ್ಯಗಳಲ್ಲಿ ಜಾಗರೂಕತೆ ಅವಶ್ಯಕ.

ಮೀನ ರಾಶಿ:

ಸಹೋದರ ನಡುವೆ ನಡೆಯುತ್ತಿರುವ ಹಣಕಾಸಿನ ವಿವಾದಗಳನ್ನು ಪರಿಹರಿಸಲು ಸಾಧ್ಯ. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಟದಿಂದ ನೀವು ಸಿಟ್ಟಾಗುವಿರಿ. ಬಂಧುಗಳ ಸಲಹೆಯು ನಿಮ್ಮನ್ನು ದಾರಿ ತಪ್ಪಿಸಬಹುದು. ಆರ್ಥಿಕ ವ್ಯವಹಾರವನ್ನು ಮೊದಲೇ ಸರಿಮಾಡಿಕೊಳ್ಳುವುದು ಉತ್ತಮ. ಪ್ರೇಮದಲ್ಲಿ ದುಡುಕಿ, ಒಂಟಿಯಾಗುವಿರಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಸುಕರ್ಮ, ಕರಣ : ಕೌಲವ, ಸೂರ್ಯೋದಯ – 06 – 52 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 09:45- 11:12, ಯಮಗಂಡ ಕಾಲ 14:05 – 15:32, ಗುಳಿಕ ಕಾಲ 06:52 – 08:19

-ಲೋಹಿತ ಹೆಬ್ಬಾರ್ – 8762924271 (what’s app only)

Source link

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಲಿದೆ.

ಲೀಗ್ ಹಂತದಲ್ಲಿ ಪ್ರತಿ ದಿನ 3 ಪಂದ್ಯಗಳು

ಈ ಬಾರಿಯ ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಪ್ರತಿ ದಿನ ಮೂರು ಪಂದ್ಯಗಳು ನಡೆಯಲಿವೆ. ಅಂದರೆ ಲೀಗ್ ಹಂತ ನಡೆಯಲಿರುವ 13 ದಿನಗಳಲ್ಲಿ ಪ್ರತಿದಿನ 3 ಪಂದ್ಯಗಳನ್ನು ಆಡಲಾಗುವುದು. ಪಂದ್ಯಾವಳಿಯ ಮೊದಲ ದಿನದಿಂದ (ಫೆಬ್ರವರಿ 7) ಫೆಬ್ರವರಿ 19 ರವರೆಗೆ, ಅಭಿಮಾನಿಗಳು ಪ್ರತಿದಿನ 3 ಪಂದ್ಯಗಳನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.

ಅದರಂತೆ ಪಂದ್ಯಾವಳಿಯ ಮೊದಲ ದಿನದಂದು ಒಟ್ಟು 6 ತಂಡಗಳು ಗೆಲುವಿಗಾಗಿ ಹೋರಾಡಲಿವೆ. ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನೆದರ್ಲ್ಯಾಂಡ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಳಿಗ್ಗೆ 11 ಗಂಟೆಗೆ ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಹಾಗೆಯೇ ದಿನದ ಎರಡನೇ ಪಂದ್ಯ ವೆಸ್ಟ್ ಇಂಡೀಸ್ ಮತ್ತು ಸ್ಕಾಟ್ಲೆಂಡ್ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಈ ಎರಡು ಪಂದ್ಯಗಳ ಬಳಿಕ ದಿನದ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ.

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಹಾಗೂ ಅಮೆರಿಕ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?

ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಅಮೆರಿಕ ತಂಡ: ಮೊನಾಂಕ್ ಪಟೇಲ್ (ನಾಯಕ), ಜೆಸ್ಸಿ ಸಿಂಗ್, ಆಂಡ್ರೀಸ್ ಗೌಸ್, ಶೆಹನ್ ಜಯಸೂರ್ಯ, ಮಿಲಿಂದ್ ಕುಮಾರ್, ಶಯಾನ್ ಜಹಾಂಗೀರ್, ಸೈತೇಜ ಮುಕ್ಕಮಲ, ಸಂಜಯ್ ಕೃಷ್ಣಮೂರ್ತಿ, ಹರ್ಮೀತ್ ಸಿಂಗ್, ನೋಸ್ತೂಶ್ ಕೆಂಜಿಗೆ, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸೌರಭ್ ನೇತ್ರವಾಲ್ಕರ್, ಅಲಿ ಖಾನ್, ಮೊಹಮ್ಮದ್ ಮೊಹ್ಸಿನ್, ಶುಭಮ್ ರಂಜಾನೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ – Kannada News | Intensity of the suicide bomb Blast in Islamabad Pakistan Watch Video

ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (Pakistan Bomb Blast) ರಾಜಧಾನಿ ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ – Kannada News | Man throws pregnant lover out of moving car for refusing abortion

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ ಸ್ನೇಹಿತನ ಸಹಾಯದಿಂದ ಆಕೆಯನ್ನು ಕಾರಿನಿಂದ ಹೊರಗೆಸೆದಿದ್ದಾನೆ.

ಇದನ್ನೂ ಓದಿ: ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

“ಆರೋಪಿಯೊಂದಿಗೆ ಸುಮಾರು 2 ವರ್ಷಗಳಿಂದ ಸಂಬಂಧ ಹೊಂದಿರುವುದಾಗಿ ಯುವತಿ ತಿಳಿಸಿದ್ದಾಳೆ. ಆಕೆ 2 ತಿಂಗಳ ಗರ್ಭಿಣಿಯಾಗಿದ್ದಳು. ಆರೋಪಿಯು ಗರ್ಭಪಾತ ಮಾಡಿಸಿಕೊಳ್ಳುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದನು” ಎಂದು ಪೊಲೀಸರು ಹೇಳಿದ್ದಾರೆ.

ಆ ಯುವತಿ ಆರ್ಕೆಸ್ಟ್ರಾ ಗುಂಪಿನೊಂದಿಗೆ ಕೆಲಸ ಮಾಡಲು ಉತ್ತರ ಪ್ರದೇಶದ ಕುಶಿನಗರಕ್ಕೆ ಬಂದಿದ್ದಳು. ಆ ಅವಧಿಯಲ್ಲಿ ಅಮ್ಜದ್ ಎಂಬ ಯುವಕನನ್ನು ಭೇಟಿಯಾಗಿದ್ದಳು. ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿತ್ತು. ಗರ್ಭಪಾತಕ್ಕಾಗಿ ಒತ್ತಾಯಿಸುತ್ತಿದ್ದ ಆತ ಆಕೆಯನ್ನು ಕಾರಿನಲ್ಲಿ ಫಾಜಿಲ್‌ನಗರಕ್ಕೆ ಕರೆದೊಯ್ಯುತ್ತಿದ್ದಾಗ ಆಕೆ ಗಲಾಟೆ ಮಾಡಿದ್ದಳು. ಹೀಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ಕಾರಿನಿಂದ ಹೊರಗೆ ತಳ್ಳಲಾಯಿತು.

ಇದನ್ನೂ ಓದಿ: ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ!

“ಆಕೆಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸರು ಹೇಳಿದ್ದಾರೆ. ತನಿಖೆಯ ನಂತರ ದೂರಿನ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ – Kannada News | Upendra and Thriller Manju travel together for a function

ನಟ ಉಪೇಂದ್ರ ಹಾಗೂ ಫೈಟ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರು ಒಟ್ಟಿಗೆ ಪ್ರಯಾಣ ಮಾಡಿದ್ದಾರೆ. ಎಲ್ಲಿಗೆ ಎಂಬುದನ್ನು ಥ್ರಿಲ್ಲರ್ ಮಂಜು ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ಆತ್ಮೀಯ ಆಹ್ವಾನವನ್ನು ಸ್ವೀಕರಿಸಿ ಬಂದಿದ್ದಕ್ಕೆ ಉಪೇಂದ್ರ (Upendra) ಅವರಿಗೆ ಥ್ರಿಲ್ಲರ್ ಮಂಜು ಧನ್ಯವಾದ ತಿಳಿಸಿದ್ದಾರೆ. ‘ಒಂದು ಸಮಾರಂಭಕ್ಕೆ ಉಪ್ಪಿ ಸರ್ ನನ್ನ ಜೊತೆ ಬರುತ್ತಿದ್ದಾರೆ. ನನ್ನ ಸಂಬಂಧಿಯ ಮದುವೆಗೆ ಒಂದೇ ಮಾತು ಕರೆದಿದ್ದಕ್ಕೆ ಬಂದಿದ್ದಾರೆ. ಅವರ ಅಮೂಲ್ಯವಾದ ಸಮಯವನ್ನು ನೀಡಿದ್ದಾರೆ’ ಎಂದು ಥ್ರಿಲ್ಲರ್ ಮಂಜು (Thriller Manju) ಹೇಳಿದ್ದಾರೆ. ಅದಕ್ಕೆ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ‘ಮಾಸ್ಟರ್ ಕರೆದರೆ ಆಗಲ್ಲ ಅಂತ ಹೇಳೋಕೆ ಆಗತ್ತಾ? ನಮ್ಮ ಮತ್ತು ಇವರ ಸಂಬಂಧ 35 ವರ್ಷಗಳಷ್ಟು ಹಳೆಯದು. ಅಂದಿನಿಂದ ನಮಗೆ ಎಂಥೆಂಥಾ ಒಳ್ಳೊಳ್ಳೆಯ ಫೈಟ್ಸ್ ಕೊಟ್ಟಿದ್ದಾರೆ. ‘ಶ್’ ಸಿನಿಮಾ ಹಿಟ್ ಆಗಲು ಫೈಟ್ಸ್ ಕಾರಣ. ಅದನ್ನು ಮರೆಯೋಕೆ ಆಗಲ್ಲ. ಅವರು ಕರೆದಾಗ ಇಲ್ಲ ಅಂತ ಹೇಗೆ ಹೇಳಲಿ. ನಿಮ್ಮ ಜೊತೆ ಬರುತ್ತಿರುವುದು ತುಂಬಾ ಸಂತೋಷ’ ಎಂದು ಉಪೇಂದ್ರ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೆಟ್ರೋ ಟಿಕೆಟ್ ದರ ಏರಿಕೆ ಜಟಾಪಟಿ: ದಾಖಲೆ ಸಮೇತ ಸಿಎಂಗೆ ಟಾಂಗ್ ಕೊಟ್ಟ ತೇಜಸ್ವಿ ಸೂರ್ಯ – Kannada News | Bengaluru Metro Fare Hike: CM Blames Centre, Tejasvi Surya spark on State Over BMRCL Cost

ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರಿಗೆ ಒಂದು ಕಾಲದಲ್ಲಿ ವರದಾನವಾಗಿದ್ದ ನಮ್ಮ ಮೆಟ್ರೋ (Namma Metro​) ಇಂದು ದೇಶದಲ್ಲಿ ಅತೀ ದುಬಾರಿ ಸಾರಿಗೆ ಆಗಿದೆ. ಒಂದು ಲೆಕ್ಕದಲ್ಲಿ ಆಟೋ ಪ್ರಯಾಣಿಕ್ಕಿಂತಲೂ ದುಬಾರಿ ಆಗಿದೆ. ಕಳೆದ ವರ್ಷವಷ್ಟೇ ಟಿಕೆಟ್ ದರ ಹೆಚ್ಚಿಸಿದ್ದ ಬಿಎಂಆರ್​​ಸಿಎಲ್ (BMRCL) ಇದೀಗ ಮತ್ತೆ ಟಿಕೆಟ್‌ ದರ ಹೆಚ್ಚಿಸಿದೆ. ಸದ್ಯ ಇದು ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಕೇಂದ್ರದ ಕಡೆ ಬೊಟ್ಟು ಮಾಡಿದ್ದಾರೆ. ಈ ವಿಚಾರವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಖಲೆಯೊಂದಿಗೆ ತಿರುಗೇಟು ನೀಡಿದ್ದಾರೆ.

ಮೆಟ್ರೋ ಟಿಕೆಟ್​​​ ದರ ಏರಿಕೆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ. ಜೊತೆಗೆ ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ರಚಿಸಿರುವ ಸ್ವತಂತ್ರ ದರ ನಿಗದಿ ಕಮಿಟಿ ನಿರ್ಧರಿಸುತ್ತದೆ ಎಂದಿದ್ದಾರೆ. ಸದ್ಯ ಇದೇ ವಿಚಾರವಾಗಿ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​​

ಈ ಬಗ್ಗೆ ಟ್ವೀಟ್​ ಮಾಡಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಕಾರಣಗಳು ಕೇಳಿ ಜನತೆ ಬೇಸತ್ತು ಹೋಗಿದ್ದಾರೆ. ಈ ವಿಷಯವನ್ನು ಔಪಚಾರಿಕವಾಗಿ ಕೈಗೆತ್ತಿಕೊಳ್ಳಲು ನೀವು ಕಾಯುತ್ತಿರುವ ವೇಳೆಯಲ್ಲೇ, ಬೆಂಗಳೂರು ಜನತೆ ಸುಮಾರು ಒಂದು ವರ್ಷ ಕಾಲ ಭಾರೀ ದರ ಏರಿಕೆಯ ಹೊರೆ ಹೊತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್

ನಿರಂತರ ಸಾರ್ವಜನಿಕ ವಿರೋಧ ಮತ್ತು ಕಳೆದ ಒಂದು ವರ್ಷದಿಂದ ಈ ವಿಚಾರಕ್ಕೆ ಗಮನ ಸೆಳೆಯಲು ನಡೆದ ಪ್ರಯತ್ನಗಳ ಬಳಿಕ ಇದೀಗ ಸರ್ಕಾರ ಎಚ್ಚೆತ್ತುಕೊಂಡಂತೆ ಕಾಣುತ್ತಿದೆ. ರಾಜ್ಯ ಸರ್ಕಾರದ ನಗರಾಭಿವೃದ್ಧಿ ಹಾಗೂ ಹಣಕಾಸು ಇಲಾಖೆಗಳಿಂದ ಬಿಎಂಆರ್‌ಸಿಎಲ್‌ಗೆ ಕಳುಹಿಸಿರುವ ಪತ್ರಗಳಲ್ಲಿ, ದರ ಪರಿಷ್ಕರಣೆಯನ್ನು ರಾಜ್ಯ ಸರ್ಕಾರದ ಹಣಕಾಸು ಹೊರೆ ಕಡಿಮೆ ಮಾಡಲು ‘ಅನಿವಾರ್ಯ’ ಎಂದು ಪರಿಗಣಿಸಲಾಗಿತ್ತು. ಅಂದರೆ ಹಣಕಾಸು ಒತ್ತಡ ತಗ್ಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಒತ್ತಾಯ ಆರಂಭವಾದದ್ದು ರಾಜ್ಯ ಸರ್ಕಾರದಿಂದಲೇ ಎಂಬುವುದು ಸ್ಪಷ್ಟ. ಹೀಗಾಗಿ, ರಾಜ್ಯ ಸರ್ಕಾರ ಈ ವಿಷಯದಲ್ಲಿ ತಾನು ಅಸಹಾಯಕ ಪ್ರೇಕ್ಷಕ ಎಂಬಂತೆ ವರ್ತಿಸುವುದು ಸರಿಯಲ್ಲ ಎಂದಿದ್ದಾರೆ.

ದರ ನಿಗದಿ ಸಮಿತಿ ಕಾನೂನುಬದ್ಧ ಸಂಸ್ಥೆಯಾಗಿರಬಹುದು. ಆದರೆ ಅದರ ಮುಂದೆ ಸಲ್ಲಿಸಲಾಗುವ ಮಾಹಿತಿಗಳು, ಉದ್ದೇಶಗಳು ಮತ್ತು ದರ ಭರಿಸುವ ಸಾಮರ್ಥ್ಯದ ದೃಷ್ಟಿಕೋನ ಎಲ್ಲವೂ ರಾಜ್ಯ ಸರ್ಕಾರದಿಂದಲೇ ಬರುತ್ತವೆ. ಇದನ್ನು ಯಾವುದೇ ಸುಳ್ಳುಗಳಿಂದ ಮರೆಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮೆಟ್ರೊ ಟಿಕೆಟ್ ದರ ಏರಿಕೆ ಬಗ್ಗೆ ಕೊನೆಗೂ ಮೌನಮುರಿದ ಸಿದ್ದರಾಮಯ್ಯ ಹೇಳಿದ್ದಿಷ್ಟು

ಇನ್ನಾದರೂ ಕಾಯ್ದೆಯ ಹಿಂದೆ ಅಡಗಿಕೊಳ್ಳುವುದನ್ನು ನಿಲ್ಲಿಸಿ, ದರ ಏರಿಕೆಯನ್ನು ಶೀಘ್ರವಾಗಿ ಹಿಂಪಡೆಯಲು ಕ್ರಮಕೈಗೊಳ್ಳಬೇಕು. ಹೊಸ ದರ ನಿಗದಿ ಸಮಿತಿಯನ್ನು ರಚಿಸಿ, ಸಮಯಬದ್ಧವಾಗಿ ದರ ಸಮೀಕರಣಕ್ಕೆ ಸೂಚನೆ ನೀಡಬೇಕು. ಬೆಂಗಳೂರಿಗೆ ಬೇಕಿರುವುದು ಹೊಣೆಗಾರಿಕೆ ಮತ್ತು ಕ್ರಮಕೈಗೊಳ್ಳುವಿಕೆ ಹೊರತು ನಾಟಕೀಯ ಆಕ್ರೋಶವಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:24 pm, Fri, 6 February 26

Source link

ಇದು ನನ್ನ ಜಾಗ; ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ – Kannada News | Wild elephant attempts to charge a vehicle on forest road in Dhenkanal

ಭುವನೇಶ್ವರ, ಫೆಬ್ರವರಿ 6: ಕಾಂಕ್ರೀಟ್ ಕಾಡು ಹೆಚ್ಚಾಗುತ್ತಿದ್ದಂತೆ ಅರಣ್ಯ ನಾಶವಾಗುತ್ತಿದೆ. ಇದರಿಂದ ವನ್ಯಜೀವಿಗಳು ಆಹಾರಕ್ಕಾಗಿ ಊರಿನೊಳಗೆ ಬರುವಂತಾಗಿದೆ. ಕಾಡಾನೆಯೊಂದು (Elephant) ಅರಣ್ಯದ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಬಳಿ ಹೋಗಿ ಆಕ್ರೋಶದಿಂದ ವರ್ತಿಸಿದೆ. ಒಡಿಶಾದ ಧೆಂಕನಲ್‌ನಲ್ಲಿ ಅರಣ್ಯದ ರಸ್ತೆಯಲ್ಲಿ ಕಾಡಾನೆಯೊಂದು ವಾಹನವನ್ನು ಎತ್ತಲು ಪ್ರಯತ್ನಿಸಿದೆ. ಈ ವೇಳೆ ಆಚೀಚೆ ರಸ್ತೆಗಳಲ್ಲಿ ಇದ್ದವರು ಜೋರಾಗಿ ಕಿರುಚಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆನೆ ಆ ಕಾರನ್ನು ಬಿಟ್ಟು ಜನರತ್ತ ಧಾವಿಸಿದೆ. ಅರಣ್ಯ ಕಾರಿಡಾರ್‌ಗಳ ಬಳಿ ಸಂಚಾರ ಹೆಚ್ಚುತ್ತಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಯಾವ ಮಟ್ಟಿಗೆ ಆತಂಕಕಾರಿಯಾಗಿ ಮಾರ್ಪಟ್ಟಿದೆ ಎಂಬುದಕ್ಕೆ ಇದೊಂದು ನಿದರ್ಶನವಷ್ಟೇ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

U19 World Cup 2026: ಚಾಂಪಿಯನ್ ಭಾರತಕ್ಕೆ ಐಸಿಸಿಯಿಂದ ನಯಾಪೈಸೆ ಸಿಗಲಿಲ್ಲ – Kannada News | India U19 Champions 2026 BCCI Prize Money Expectation

ವರ್ಷಕ್ಕೊಂದು ಐಸಿಸಿ (ICC) ಟ್ರೋಫಿಯನ್ನು ಗೆಲ್ಲುವುದನ್ನು ಟೀಂ ಇಂಡಿಯಾ (Team India) ಅಭ್ಯಾಸ ಮಾಡಿಕೊಂಡಿದೆ. ಇದೀಗ 2026 ರ ಆರಂಭದಲ್ಲಿ ಭಾರತ ಯುವ ಪಡೆ 19 ವರ್ಷದೊಳಗಿನವರ ವಿಶ್ವಕಪ್ (U19 World Cup 2026) ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್‌ ಪಂದ್ಯವನ್ನು 100 ರನ್​ಗಳಿಂದ ಗೆದ್ದಿಕೊಳ್ಳುವ ಮೂಲಕ ಟೀಂ ಇಂಡಿಯಾ ಆರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಭಾರತ ತಂಡ ಅತಿ ಹೆಚ್ಚು ಬಾರಿ ವಿಶ್ವಕಪ್ ಗೆದ್ದ ತಂಡ ಎನಿಸಿಕೊಂಡಿದೆ. ಈ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡ ಅಜೇಯ ತಂಡವಾಗಿ ಫೈನಲ್​ಗೇರಿದ್ದು ಮಾತ್ರವಲ್ಲದೆ ಚಾಂಪಿಯನ್ ಕೂಡ ಆಯಿತು.

ಭಾರತಕ್ಕೆ ಐತಿಹಾಸಿಕ ಗೆಲುವು

ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು 50 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 411 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಭಾರತದ ಪರ ಆರಂಭಿಕ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್‌ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಭರ್ಜರಿ ಆರಂಭ ಒದಗಿಸಿಕೊಟ್ಟರು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಕೂಡ ಉತ್ತಮ ಹೋರಾಟ ನೀಡಿತ್ತಾದರೂ ಬೃಹತ್ ಗುರಿಯ ಒತ್ತಡಕ್ಕೆ ಸಿಲುಕಿ 50 ಓವರ್​ಗಳನ್ನು ಪೂರ್ಣಗೊಳಿಸಲಾಗದೆ ಸೋಲೊಪ್ಪಿಕೊಂಡಿತು. ಈ ಮೂಲಕ 28 ವರ್ಷಗಳ ಬಳಿಕ ವಿಶ್ವಕಪ್ ಗೆಲ್ಲಬೇಕೆನ್ನುವ ಇಂಗ್ಲೆಂಡ್ ತಂಡದ ಕನಸು ಕನಸಾಗಿಯೇ ಉಳಿಯಿತು.

ಐಸಿಸಿಯಿಂದ ನಗದು ಬಹುಮಾನವಿಲ್ಲ

ಈ ಐತಿಹಾಸಿಕ ಗೆಲುವಿನ ಹೊರತಾಗಿಯೂ ಟೀಂ ಇಂಡಿಯಾ ಐಸಿಸಿಯಿಂದ ಯಾವುದೇ ಅಧಿಕೃತ ಬಹುಮಾನದ ಹಣವನ್ನು ಪಡೆಯುವುದಿಲ್ಲ. ಏಕೆಂದರೆ 19 ವರ್ಷದೊಳಗಿನ ಪುರುಷರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಐಸಿಸಿ ಯಾವುದೇ ನಗದು ಬಹುಮಾನವನ್ನು ನೀಡುವುದಿಲ್ಲ. ಈ ಪಂದ್ಯಾವಳಿಯು ಯುವ ಕ್ರಿಕೆಟಿಗರಿಗೆ ಅಭಿವೃದ್ಧಿ, ಅನುಭವ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಒದಗಿಸಲು ವಿನ್ಯಾಸಗೊಳಿಸಲಾದ ಅಭಿವೃದ್ಧಿ ಪಂದ್ಯಾವಳಿಯಾಗಿದೆ. ಹೀಗಾಗಿ ವಿಜೇತ ತಂಡಕ್ಕಾಗಲಿ ಅಥವಾ ರನ್ನರ್ ಅಪ್ ತಂಡಕ್ಕಾಗಲಿ ಟ್ರೋಫಿಯನ್ನು ಹೊರತುಪಡಿಸಿ ಯಾವುದೇ ನಗದು ಬಹುಮಾನ ಸಿಗುವುದಿಲ್ಲ. ಹಿಂದಿನ ಆವೃತ್ತಿಯಲ್ಲೂ ಐಸಿಸಿ ಯಾವುದೇ ಬಹುಮಾನದ ಹಣವನ್ನು ನೀಡಲಿಲ್ಲ.

U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಬಹುಮಾನ ನೀಡಲಿರುವ ಬಿಸಿಸಿಐ

ಐಸಿಸಿಯಿಂದ ಯಾವುದೇ ನಗದು ಬಹುಮಾನ ಸಿಗದಿದ್ದರೂ, ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಬಿಸಿಸಿಐನಿಂದ ಯುವ ಭಾರತ ತಂಡಕ್ಕೆ ನಗದು ಬಹುಮಾನ ಸಿಗಲಿದೆ. ಈ ಹಿಂದೆಯೂ ಬಿಸಿಸಿಐ ಅಂಡರ್ 19 ವಿಶ್ವಕಪ್ ಗೆದ್ದ ತಂಡಗಳಿಗೆ ನಗದು ಬಹುಮಾನ ಘೋಷಿಸಿತ್ತು. ಉದಾಹರಣೆಗೆ, 2024 ರ ಅಂಡರ್ 19 ವಿಶ್ವಕಪ್‌ ಗೆದ್ದ ಭಾರತ ತಂಡದ ಪ್ರತಿಯೊಬ್ಬ ಆಟಗಾರನಿಗೆ ಬಿಸಿಸಿಐ ತಲಾ 30 ಲಕ್ಷ ರೂ. ಬಹುಮಾನ ನೀಡಿತ್ತು. ಅದೇ ರೀತಿ, 2025 ರ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ ಗೆದ್ದಿದ್ದ ವನಿತಾ ಪಡೆಗೆ ಬಿಸಿಸಿಐ 5 ಕೋಟಿ ರೂ. ಬಹುಮಾನ ನೀಡಿತ್ತು. ಅದರಂತೆ ಈ ಬಾರಿಯೂ ಸಹ ಬಿಸಿಸಿಐ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ತರಬೇತಿ ತಂಡಕ್ಕೆ ನಗದು ಬಹುಮಾನ ಘೋಷಣೆ ಮಾಡುವ ನಿರೀಕ್ಷೆಯಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link