Category Archives: Blog

Your blog category

ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ – Kannada News

ರಾಯಚೂರು, ಜೂ.9: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿರುವ ‘ಹಿಂದೂ ಮಹೋತ್ಸವ’ ಸಮಾರಂಭಕ್ಕೆ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಗಮಿಸಬೇಕಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಜಿಲ್ಲಾ ಪೊಲೀಸರು ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಅಷ್ಟೇ ಅಲ್ಲದೆ, ಮಂತ್ರಾಲಯಕ್ಕೂ ಬಂದಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಅಲ್ಲೇ ತಡೆದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಹಟ್ಟಿ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯ ನೇತೃತ್ವದಲ್ಲಿ ಇಂದು ಬೃಹತ್ ಹಿಂದೂ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುನೀತ್ ಕೆರೆಹಳ್ಳಿ ಅವರು ಆಗಮಿಸುತ್ತಿದ್ದರು. ಆದರೆ, ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯು ಅವರಿಗೆ ರಾಯಚೂರು ಜಿಲ್ಲೆಗೆ ಆಗಮಿಸದಂತೆ ಖಡಕ್ ನಿರ್ಬಂಧ ವಿಧಿಸಿದೆ. ಮಂತ್ರಾಲಯದಲ್ಲಿ ತಮಗೆ ಪೊಲೀಸರು ತಡೆ ಒಡ್ಡಿ ನೋಟಿಸ್ ನೀಡಿದ ತಕ್ಷಣ ರಾಯಚೂರು ಪೊಲೀಸರ ನಡೆಗೆ ಪುನೀತ್ ಕೆರೆಹಳ್ಳಿ ತೀವ್ರವಾಗಿ ಗರಂ ಆಗಿದ್ದಾರೆ. “ನಾನು ಮಂತ್ರಾಲಯಕ್ಕೆ ದರ್ಶನಕ್ಕಾಗಿ ಬಂದಿದ್ದೇನೆ. ಇಲ್ಲಿಗೆ ಬಂದು ನನ್ನನ್ನು ತಡೆದು, ಕಾರ್ಯಕ್ರಮಕ್ಕೆ ಬರದಂತೆ ಕಾನೂನುಬಾಹಿರವಾಗಿ ನಿರ್ಬಂಧ ವಿಧಿಸುತ್ತಿದ್ದೀರಿ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ಗೃಹ ಸಚಿವ ಪ್ರಿಯಾಂಕ ಖರ್ಗೆಗೂ ಎಚ್ಚರಿಕೆಯನ್ನು ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ ಸೀಟು ಕಳ್ಳತನ ಮಾಡಿದೆ; ರಾಜ್ಯಸಭೆ ನಾಮಪತ್ರ ರದ್ದಾಗಿದ್ದಕ್ಕೆ ಮೀನಾಕ್ಷಿ ನಟರಾಜನ್ ಆಕ್ರೋಶ – Kannada News

ಭೋಪಾಲ್, ಜೂನ್ 9: ಮಧ್ಯಪ್ರದೇಶದ 3 ರಾಜ್ಯಸಭಾ ಸ್ಥಾನಗಳ ಪೈಕಿ ಒಂದಕ್ಕೆ ಸಲ್ಲಿಕೆಯಾಗಿದ್ದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಕಾನೂನು ಪ್ರಕರಣವೊಂದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ವಜಾಗೊಳಿಸಲಾಗಿದೆ. ಈ ಕಾರಣದಿಂದಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ನಾಮಪತ್ರ ತಿರಸ್ಕಾರದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೀನಾಕ್ಷಿ ನಟರಾಜನ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಆಡಳಿತಾರೂಢ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದಾಗಲೇ ಅವರ ಸಂಚು ನಮಗೆ ಅರ್ಥವಾಗಿತ್ತು. ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಹತ್ತಿಕ್ಕುವ ರಾಜಕಾರಣ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಏಕಪಕ್ಷೀಯ ವ್ಯವಸ್ಥೆ ಮತ್ತು ಸರ್ವಾಧಿಕಾರವನ್ನು ಹೇರುವ ಪ್ರಯತ್ನವಾಗಿದೆ. ಇದು ಪ್ರಜಾಪ್ರಭುತ್ವದ ಹಗಲು ದರೋಡೆಯಾಗಿದೆ” ಎಂದು ಟೀಕಿಸಿದ್ದಾರೆ.

“ಇದು ಒಗ್ಗಟ್ಟಿನಿಂದ ಕೂಡಿದ ಮನೆ ಎಂದು ಅವರಿಗೆ ತಿಳಿದಾಗ, ಕಾನೂನುಬದ್ಧವಾಗಿ ಪರಿಗಣನೆಗೆ ಬಾರದ ನ್ಯಾಯಾಲಯದ ನೋಟಿಸ್ ಅನ್ನು ನೆಪವಾಗಿಟ್ಟುಕೊಂಡು ನಮ್ಮ ನಾಮಪತ್ರವನ್ನು ರದ್ದು ಮಾಡಿದರು. ನಮ್ಮ ಇಬ್ಬರೂ ವಕೀಲರು ಮಂಡಿಸಿದ ವಾದಗಳನ್ನು ಆಲಿಸದೆಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಚುನಾವಣಾ ದರೋಡೆಯನ್ನು ನಾವು ಕಾನೂನಾತ್ಮಕವಾಗಿ ಪ್ರಶ್ನಿಸುತ್ತೇವೆ.” ಎಂದು ಮೀನಾಕ್ಷಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

(Video Source: ANI)

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ರಾಜಧಾನಿ ಬೆಂಗಳೂರಿನಲ್ಲಿ ಕಸದ (bengaluru garbage) ಸಮಸ್ಯೆ ಮತ್ತೆ ತಲೆದೂರಿದೆ. ನಗರದ ಹಲವೆಡೆ ರಸ್ತೆಯುದ್ಧಕ್ಕೂ ಕಸದ ರಾಶಿಯೇ ಕಾಣಿಸುತ್ತಿದೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ವಿಲೇವಾರಿಯಾಗದ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ತಿಂಗಳುಗಳಿಂದ ಕಸ ಸಾಗಿಸದ ಕಾರಣ, ತ್ಯಾಜ್ಯ ರಸ್ತೆ ಮಧ್ಯಕ್ಕೆ ಬಂದು ವಾಹನ ಸವಾರರಿಗೂ ತೊಂದರೆಯಾಗುತ್ತಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು
  • ಎರಡು ತಿಂಗಳು ಕಳೆದ್ರು ಕಸ ತಗೆಯದೆ ನಿರ್ಲಕ್ಷತೋರುತಿರೋ GBA
  • 5,445ಕ್ಕೆ ಏರಿಕೆಯಾದ ಕಸದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ

ಇನ್ನು ಅಚ್ಚರಿಯ ವಿಷಯ ಅಂದ್ರೆ, ಸ್ವಚ್ಛತೆ ಕಾಪಾಡುವುದಕ್ಕಾಗಿ GBA ಕಡೆಯಿಂದ ಮಾರ್ಷಲ್ ಗಳನ್ನು ನಿರ್ಮಿಸದ್ದಾರೆ. ಅದ್ರೆ ಮಾರ್ಷಲ್ ಗಳು ಇದರ ಬಗ್ಗೆ ಗಮನವನ್ನು ಅರಿಸುತ್ತಿಲ್ಲ.ಇಡೀ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳು ರಸ್ತೆಯಲ್ಲೇ ಬೇಕಾಬಿಟ್ಟಿ ಕಸವನ್ನು ಎಸೆದು ಹೋಗುತ್ತಿದ್ದಾರೆ.

ಇದನ್ನೂ ಓದಿ: Bengaluru Air Quality: ಬೆಂಗಳೂರಿನಲ್ಲಿ ಗಣನೀಯವಾಗಿ ಸುಧಾರಿಸಿದ ಗಾಳಿಯ ಗುಣಮಟ್ಟ

ಇನ್ನು ಕಳೆದ ಎರಡು ತಿಂಗಳಿನಿಂದ ಟಿಪ್ಪರ್‌ಗಳು ಸರಿಯಾಗಿ ಬರ್ತಿಲ್ಲ. ಮನೆಯಲ್ಲೇ ಕಸದ ರಾಶಿ ಬೀಳ್ತಿದೆ. ಹಸಿ ಕಸದ ವಾಸನೆಯಿಂದ ಸೊಳ್ಳೆ ಕಾಟ ಜಾಸ್ತಿಯಾಗಿದೆ. ಅಧಿಕಾರಿಗಳು ಇದನ್ನ ಅರ್ಥ ಮಾಡ್ಕೋಬೇಕು ಸರಿಯಾಗಿ ಕಸದ ಆಟೋಗಳು ಮನೆ ಬಳಿ ಬರ್ತಿಲ್ಲ. ಇದರಿಂದ ಜನರು ರಸ್ತೆಯಲ್ಲೇ ಕಸವನ್ನು ಎಸೆಯುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.

ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ

‘ಕಸಾ ಪೋರ್ಟಲ್’ ನೀಡಿರುವ ಅಂಕಿಅಂಶಗಳ ಪ್ರಕಾರ, ಒಂದು ತಿಂಗಳ ಹಿಂದೆ 3,200 ರಷ್ಟಿದ್ದ ಸಕ್ರಿಯ ಬ್ಲ್ಯಾಕ್ ಸ್ಪಾಟ್‌ಗಳ ಸಂಖ್ಯೆ ಈಗ ಬರೋಬ್ಬರಿ 5,445 ಕ್ಕೆ ಏರಿಕೆಯಾಗಿದೆ. ಇದರಿಂದ ಉದ್ಯಾನ ನಗರಿ ಈಗ ಕಸದ ನಗರಿಯಾಗುತ್ತಿದೆಯೇ ಎಂಬ ಆತಂಕ ಶುರುವಾಗಿದೆ.

ಕಸದ ಸಮಸ್ಯೆಗೆ ಪ್ರಮುಖ ಕಾರಣಗಳೇನು?

ಕಳೆದ 13 ವರ್ಷಗಳಿಂದ ಕಸ ಸಂಗ್ರಹಣೆ ಟೆಂಡರ್‌ಗಳನ್ನು ಅಂತಿಮಗೊಳಿಸದಿರುವುದು, ಟಿಪ್ಪರ್‌ ಮತ್ತು ಸಿಬ್ಬಂದಿಯ ಕೊರತೆ, ಸಿಬ್ಬಂದಿಯ ಅನಿಯಮಿತ ಲಭ್ಯತೆ, ಸಂಬಳ ಪಾವತಿಯಲ್ಲಿ ವಿಳಂಬ ಮತ್ತು ಕಸ ರವಾನಿಸುವ ವಾಹನಗಳ ರಿಪೇರಿಯಿಂದಾಗಿ ನಗರದಲ್ಲಿ ಕಸ ಸಂಗ್ರಹಣಾ ವ್ಯವಸ್ಥೆ ಸಂಪೂರ್ಣವಾಗಿ ಕುಸಿಯಲು ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ವರದಿ: ಅರುಣ್ ಕುಮಾರ್ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸನ್ನಿ ಡಿಯೋಲ್, ಪ್ರೀತಿ ಜಿಂಟಾ ನಟನೆಯ ‘ಲಾಹೋರ್ 1947’ ಚಿತ್ರದ ಶೀರ್ಷಿಕೆ ಬದಲು; ಹೊಸ ಟೈಟಲ್ ಏನು? – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಲಾಹೋರ್ 1947’ (Lahore 1947) ಚಿತ್ರ ಕೂಡ ಇದೆ. ಆದರೆ ಈ ಸಿನಿಮಾದಲ್ಲಿ ಈಗ ದೊಡ್ಡ ಬದಲಾವಣೆಗೆ ಆಗಿದೆ. ನಟ ಸನ್ನಿ ಡಿಯೋಲ್ (Sunny Deol) ಮತ್ತು ನಟಿ ಪ್ರೀತಿ ಜಿಂಟಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದ ಹೆಸರನ್ನೇ ಅಧಿಕೃತವಾಗಿ ಬದಲಾಯಿಸಲಾಗಿದೆ. ಹೊಸ ಶೀರ್ಷಿಕೆ ಏನು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿದೆ. ‘ಲಾಹೋರ್ 1947’ ಬದಲು ಈಗ ‘ಬಂಟ್ವಾರಾ 1947’ (Batwara 1947) ಎಂದು ಮರುನಾಮಕರಣ ಮಾಡಲಾಗಿದೆ.

ಮಂಗಳವಾರ (ಜೂನ್ 9) ಚಿತ್ರತಂಡವು ಸಿನಿಮಾದ ಮೊದಲ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹೊಸ ಶೀರ್ಷಿಕೆ ಹಾಗೂ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಸಂತೋಷಿ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ನಟ, ನಿರ್ಮಾಪಕ ಆಮಿರ್ ಖಾನ್ ಅವರು ಬಂಡವಾಳ ಹೂಡಿದ್ದಾರೆ.

ನಟ ಸನ್ನಿ ಡಿಯೋಲ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಂಟ್ವಾರಾ 1947’ ಚಿತ್ರದ ಮೋಷನ್ ಪೋಸ್ಟರ್ ಹಂಚಿಕೊಂಡಿದ್ದಾರೆ. ‘ದ್ವೇಷ ಮತ್ತು ಭಯದ ಸಮಯದಲ್ಲಿ, ಅವನು ಧೈರ್ಯವನ್ನು ಆರಿಸಿಕೊಂಡ. 2026ರ ಆಗಸ್ಟ್ 14ರಿಂದ ಚಿತ್ರಮಂದಿರಗಳಲ್ಲಿ ಬಂಟ್ವಾರಾ 1947 ಸಿನಿಮಾ ವೀಕ್ಷಿಸಿ’ ಎಂದು ಈ ಪೋಸ್ಟ್​ಗೆ ಅವರು ಕ್ಯಾಪ್ಷನ್ ನೀಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ವಿಭಜನೆಯ ಸಂದರ್ಭದಲ್ಲಿದ್ದ ಭಯ, ಅನಿಶ್ಚಿತತೆ ಮತ್ತು ಹಿಂಸಾಚಾರದ ಕರಾಳ ದಿನಗಳನ್ನು ಈ ಪೋಸ್ಟರ್ ನೆನಪಿಸುವಂತಿದೆ. ದಟ್ಟ ಹೊಗೆ, ಜ್ವಾಲೆ ಮತ್ತು ಗದ್ದಲದ ಹಿನ್ನೆಲೆಯಲ್ಲಿ ಮೂಡಿಬಂದಿರುವ ಪೋಸ್ಟರ್ ನೋಡಿದರೆ ಚಿತ್ರದ ಮೇಲಿನ ಕುತೂಹಲ ದುಪ್ಪಟ್ಟು ಆಗುತ್ತದೆ. ಸೆಪಿಯಾ ಟೋನ್‌ನಲ್ಲಿರುವ ಈ ಪೋಸ್ಟರ್‌ನಲ್ಲಿ ಸನ್ನಿ ಡಿಯೋಲ್ ಮತ್ತು ಶಬಾನಾ ಅಜ್ಮಿ ವಿಭಜನೆಯಿಂದ ದೂರಾಗುತ್ತಿರುವ ದೃಶ್ಯವಿದೆ. ಮತ್ತೊಂದು ದೃಶ್ಯದಲ್ಲಿ ಸನ್ನಿ ಅವರು ಕೈಯಲ್ಲಿ ಉರಿಯುತ್ತಿರುವ ಪಂಜನ್ನು ಹಿಡಿದು ನಿಂತಿದ್ದರೆ, ಅವರ ಹಿಂದೆ ಭಯಭೀತರಾಗಿರುವ ಪ್ರೀತಿ ಜಿಂಟಾ ಹಾಗೂ ಆತಂಕದಿಂದ ನೋಡುತ್ತಿರುವ ಕರಣ್ ಡಿಯೋಲ್ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹನುಮಂತನ ಪಾತ್ರ ಮಾಡ್ತಾರಾ ಸನ್ನಿ ಡಿಯೋಲ್​? ‘ರಾಮಾಯಣ’ ಚಿತ್ರದ ಬಗ್ಗೆ ಬಿಗ್​ ನ್ಯೂಸ್​

‘ಬಾಲಿವುಡ್ ಹಂಗಾಮಾ’ ವರದಿಯ ಪ್ರಕಾರ, ‘ಬಂಟ್ವಾರಾ’ ಎಂಬ ಶೀರ್ಷಿಕೆಯ ಹಕ್ಕುಗಳು ಈ ಹಿಂದೆ 1989ರಲ್ಲಿ ಅದೇ ಹೆಸರಿನ ಚಿತ್ರವನ್ನು ನಿರ್ಮಿಸಿದ್ದ ದಿವಂಗತ ನಿರ್ಮಾಪಕ ಸಲೀಂ ಅಖ್ತರ್ ಅವರ ಕುಟುಂಬದ ಬಳಿ ಇತ್ತು. ಆಮಿರ್ ಖಾನ್ ಅವರು ಖುದ್ದಾಗಿ ಆ ಕುಟುಂಬವನ್ನು ಭೇಟಿ ಮಾಡಿ, ಮಾತುಕತೆ ನಡೆಸಿ ಈ ಶೀರ್ಷಿಕೆಯ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಿಒಕೆಯಲ್ಲಿ ಕಾಶ್ಮೀರಿಗಳ ಹತ್ಯಾಕಾಂಡಕ್ಕೆ ಪಾಕಿಸ್ತಾನವೇ ಹೊಣೆ; ಭಾರತ ಖಂಡನೆ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಆರ್ಥಿಕ ಮತ್ತು ರಾಜಕೀಯ ಕುಂದುಕೊರತೆಗಳ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪ್ರಮುಖ ನಾಗರಿಕ ಸಮಾಜದ ಒಕ್ಕೂಟವಾದ ‘ಜಾಯಿಂಟ್ ಅವಮಿ ಆಕ್ಷನ್ ಕಮಿಟಿ’ಯನ್ನು (JAAC) ಅಧಿಕಾರಿಗಳು ನಿಷೇಧಿಸಿದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ತೀವ್ರ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದ್ದು, ಈ ಘಟನೆಗೆ ಪಾಕಿಸ್ತಾನವೇ ನೇರ ಹೊಣೆ ಎಂದು ಆರೋಪಿಸಿದೆ. ಹಾಗೇ, ಪಿಒಕೆಯಲ್ಲಿ ಕಾಶ್ಮೀರಿಗಳ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಪಾಕಿಸ್ತಾನ ಮಾಡುತ್ತಿರುವ ದುಷ್ಕೃತ್ಯಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನ ದೇಶವನ್ನು ಹೊಣೆಗಾರರನ್ನಾಗಿ ಮಾಡಲಿದೆ ಎಂದು ನಾವು ನಂಬುತ್ತೇವೆ ಎಂದು ಭಾರತ ಭರವಸೆ ವ್ಯಕ್ತಪಡಿಸಿದೆ. ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “ಈ ಸಂದರ್ಭದಲ್ಲಿ ಪಾಕಿಸ್ತಾನದಿಂದ ವ್ಯವಸ್ಥಿತವಾಗಿ ಹರಡಲಾಗುತ್ತಿರುವ ಸುಳ್ಳು ಸುದ್ದಿ ಮತ್ತು ವೀಡಿಯೊಗಳ ಸರಣಿಯನ್ನು ನಾವು ಗಮನಿಸುತ್ತಿದ್ದೇವೆ. ಇದು ತನ್ನದೇ ಆದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತು ತನ್ನ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಜಗತ್ತಿನ ಗಮನವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನ ಮಾಡುತ್ತಿರುವ ಹತಾಶ ಪ್ರಯತ್ನವಾಗಿದೆ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್

ಪಿಒಕೆಯಲ್ಲಿ ನಡೆಯುತ್ತಿರುವ ಪೊಲೀಸ್ ದಬ್ಬಾಳಿಕೆಯ ಬಗ್ಗೆ ಮಾತನಾಡಿದ ರಣಧೀರ್ ಜೈಸ್ವಾಲ್, “ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭೀಕರ ಪೊಲೀಸ್ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ವರದಿಗಳು ಬಂದಿವೆ. ಇದರಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನದ ದುಷ್ಕೃತ್ಯಗಳು ಮತ್ತು ದೌರ್ಜನ್ಯಗಳ ವಿರುದ್ಧ ಅದನ್ನು ಹೊಣೆಗಾರರನ್ನಾಗಿ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದಿದ್ದಾರೆ.

“ಪಾಕಿಸ್ತಾನ ಸರ್ಕಾರವು ರಾವಲಕೋಟ್‌ನಲ್ಲಿ ನಮ್ಮ ಜನರ ಮಾರಣಹೋಮವನ್ನು ಪ್ರಾರಂಭಿಸಿದೆ” ಎಂದು ಜೆಎಎಸಿ (JAAC) ನಾಯಕ ಶೌಕತ್ ನವಾಜ್ ಮಿರ್ ಎಕ್ಸ್ (ಟ್ವಿಟ್ಟರ್) ನಲ್ಲಿ ಬಿಡುಗಡೆ ಮಾಡಿದ ವೀಡಿಯೊ ಸಂದೇಶದಲ್ಲಿ ಆರೋಪಿಸಿದ್ದಾರೆ. ಇಂದು ಸಂಪೂರ್ಣ ಲಾಕ್‌ಡೌನ್ ಯಶಸ್ವಿಗೊಳಿಸಲು ತಮ್ಮ ಗುಂಪು ಒಗ್ಗಟ್ಟಾಗಿರಲಿದೆ ಎಂದು ಅವರು ಪ್ರತಿಜ್ಞೆ ಮಾಡಿದ್ದರು.

ಇದನ್ನೂ ಓದಿ: ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನದಿಂದ ಗುಂಡಿನ ದಾಳಿ; 30 ಜನ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ

ರಾವಲಕೋಟ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಭೀಕರ ದಮನಕಾಂಡದ ನಂತರವೂ ಉದ್ವಿಗ್ನತೆ ಮುಂದುವರಿದಿದ್ದು, ತನ್ನ ಮಾನವ ಹಕ್ಕುಗಳ ಉಲ್ಲಂಘನೆಯಿಂದ ಜಗತ್ತಿನ ಗಮನವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನವು ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಗಳನ್ನು ಹರಡುತ್ತಿದೆ ಎಂದು ಭಾರತ ಇಂದು ಆರೋಪಿಸಿದೆ.

ಇತ್ತೀಚಿನ ಪ್ರತಿಭಟನೆಗಳ ವೇಳೆ ಪಾಕಿಸ್ತಾನಿ ಪಡೆಗಳು ಜಾಯಿಂಟ್ ಅವಮಿ ಆಕ್ಷನ್ ಕಮಿಟಿ (JAAC) ಗೆ ಸೇರಿದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದು, 30 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಜೆಎಎಸಿ ಕಾರ್ಯಕರ್ತರು ಕಿರಿದಾದ ಗಲ್ಲಿಗಳಿಂದ ಬಂದೂಕುಗಳು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಬಳಸಿ “ಗೆರಿಲ್ಲಾ ಮಾದರಿ” ದಾಳಿ ನಡೆಸಿದ್ದರಿಂದ ತಾವು ಈ ಕ್ರಮ ಕೈಗೊಂಡಿರುವುದಾಗಿ ಪಾಕಿಸ್ತಾನಿ ಪಡೆಗಳು ಸಮರ್ಥಿಸಿಕೊಂಡಿವೆ.

ಪಾಕಿಸ್ತಾನ ಸರ್ಕಾರವು ಪ್ರತಿಭಟನೆಯನ್ನು ಹತ್ತಿಕ್ಕಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದರೂ, ಪ್ರತಿಭಟನೆಗಳು ಮೀರ್‌ಪುರ, ಮುಜಾಫರಾಬಾದ್, ಗಿಲ್ಗಿಟ್-ಬಾಲ್ಟಿಸ್ತಾನ್, ದಡಿಯಾಲ್, ರಾವಲಕೋಟ್, ಸುಧ್ನೋತಿ ಮತ್ತು ತಟ್ಟಾಪಾನಿ ಭಾಗಗಳಿಗೆ ವ್ಯಾಪಿಸಿವೆ. ಈ ಪ್ರತಿಭಟನೆಯ ಕಿಚ್ಚು ಬ್ರಿಟನ್ ವರೆಗೂ ತಲುಪಿದ್ದು, ಅಲ್ಲಿನ ಕಾಶ್ಮೀರಿ ವಲಸಿಗರು ಲಂಡನ್‌ನಲ್ಲಿರುವ ಪಾಕಿಸ್ತಾನಿ ರಾಯಭಾರ ಕಚೇರಿಯ ಹೊರಗೆ ಜಮಾಯಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. 30 ಬ್ರಿಟಿಷ್ ಸಂಸದರು ಬ್ರಿಟನ್ ಸರ್ಕಾರಕ್ಕೆ ಪತ್ರ ಬರೆದಿದ್ದು, “ರಾಜತಾಂತ್ರಿಕ ಮಾರ್ಗಗಳನ್ನು ಬಳಸಿ ಈ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸಲು ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನಕ್ಕೆ ಪ್ರೋತ್ಸಾಹ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಬುದ್ಧಿವಂತ ಮಹಿಳೆ ಮಾತ್ರ ಈ ವಿಶೇಷ ಗುಣಗಳನ್ನು ಹೊಂದಿರುವುದಂತೆ – Kannada News

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಜೀವನದ ಎಲ್ಲ ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಹೌದು ಶ್ರೀಮಂತಿಕೆ, ಯಶಸ್ಸು, ಬಡತನ, ದಾಂಪತ್ಯ ಜೀವನ, ಹಿತಶತ್ರುಗಳು, ಸ್ನೇಹಿತರು ಹೀಗೆ ನಮ್ಮ ಜೀವನದ ಪ್ರತಿಯೊಂದು ವಿಚಾರದ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಮಹಿಳೆಯರ ಜೀವನಕ್ಕೂ ಸಂಬಂಧಿಸಿದ ವಿಚಾರಗಳ ಬಗ್ಗೆ ವಿವರಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಬುದ್ಧಿವಂತ ಮಹಿಳೆಯ ಲಕ್ಷಣಗಳೇನು, ಆಕೆ ಯಾವೆಲ್ಲಾ ಗುಣಗಳನ್ನು ಹೊಂದಿರುತ್ತಾಳೆ ಎಂಬುದನ್ನು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಬುದ್ಧಿವಂತ ಮಹಿಳೆಯ ಗುಣಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಬುದ್ಧಿವಂತ ಮಹಿಳೆಯ ಲಕ್ಷಣಗಳೇನು?

ಸ್ವತಂತ್ರ ಚಿಂತನೆ: ಬುದ್ಧಿವಂತ, ಬಲಿಷ್ಠ ಮಹಿಳೆ ತನ್ನದೇ ಆದ ಆಲೋಚನೆಗಳನ್ನು ರೂಪಿಸಿಕೊಳ್ಳುತ್ತಾಳೆ. ಅವಳು ಇತರರ ಅಭಿಪ್ರಾಯಗಳನ್ನು ಕೇಳುತ್ತಾಳೆ, ಆದರೆ ಅವಳು ತನ್ನದೇ ತೀರ್ಪಿನ ಆಧಾರದ ಮೇಲೆ ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾಳೆ.

ಇತರರ ಮಿತಿಗಳನ್ನು ಅರ್ಥಮಾಡಿಕೊಳ್ಳುವುದು: ಬುದ್ಧಿವಂತ ಮಹಿಳೆಗೆ ಎಲ್ಲಿ ಹೇಗಿರಬೇಕು ಎಂಬುದು ತಿಳಿದಿರುತ್ತದೆ. ಆಕೆ ಇತರರ ಮಿತಿಗಳನ್ನು ಅರ್ಥಮಾಡಿಕೊಂಡು ಜೀವನ ಸಾಗಿಸುತ್ತಾರೆ. ಇತರರ ವಿಚಾರದಲ್ಲಿ ಹೆಚ್ಚು ಮೂಗು ತುರಿಸುವುದಿಲ್ಲ.

ಭಾವನೆಗಳನ್ನು ನಿಯಂತ್ರಿಸುವುದು: ಬುದ್ಧಿವಂತ ಮಹಿಳೆ ಯಾವತ್ತೂ ಅತಿಕೇರದ ವರ್ತನೆಯನ್ನು ತೋರುವುದಿಲ್ಲ, ಆಕೆಗೆ ತನ್ನ ಭಾವನೆಗಳನ್ನು ಹೇಗೆ ನಿಯಂತ್ರಿಸಬೇಕು ಎಂಬುದು ಚೆನ್ನಾಗಿ ತಿಳಿದಿರುತ್ತದೆ. ಆಕೆ ಎಲ್ಲಾ ಸಂದರ್ಭಗಳನ್ನು ಸಹ ಶಾಂತವಾಗಿ ನಿಭಾಯಿಸುತ್ತಾಳೆ.

ಚಿಂತನಶೀಲ ಮನಸ್ಥಿತಿ: ನೀತಿವಂತಿಕೆಯ ಮಾರ್ಗವನ್ನು ಅನುಸರಿಸುವ ಮತ್ತು ತನ್ನ ಮೌಲ್ಯಗಳನ್ನು ಗೌರವಿಸುವ ಮಹಿಳೆ ಬುದ್ಧಿವಂತಳಾಗಿರುತ್ತಾರೆ. ಜೊತೆಗೆ ಕಷ್ಟದ ಸಮಯದಲ್ಲೂ ವಿಚಲಿತರಾಗದೆ ಮತ್ತು ಸಂದರ್ಭಗಳನ್ನು ಚಿಂತನಶೀಲವಾಗಿ ನಿಭಾಯಿಸುವ ಮಹಿಳೆ ಕೂಡ ಬುದ್ಧಿವಂತ ಮಹಿಳೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.

ಭವಿಷ್ಯದ ಬಗ್ಗೆ ಯೋಚಿಸುವ ಮಹಿಳೆ: ಮನೆಯ ಸಂಪನ್ಮೂಲಗಳು ಮತ್ತು ಹಣಕಾಸು ವಿಚಾರಗಳನ್ನು ಸಮರ್ಥವಾಗಿ ನಿರ್ವಹಿಸುವ, ವ್ಯರ್ಥ ಖರ್ಚುಗಳನ್ನು ತಪ್ಪಿಸುವ ಮತ್ತು ಭವಿಷ್ಯಕ್ಕಾಗಿ ಉಳಿತಾಯ ಮಾಡುವ ಮಹಿಳೆ ತುಂಬಾನೇ ಬುದ್ಧಿವಂತೆ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.

ಇದನ್ನೂ ಓದಿ: ಅಭ್ಯಾಸಗಳಿದ್ದರೆ ನೀವು ಜೀವನಪರ್ಯಂತ ಬಡವರಾಗಿಯೇ ಉಳಿಯುತ್ತೀರಿ ಜೋಕೆ!

ಸಮಯದ ಮಹತ್ವ ತಿಳಿದಿರುವಾಕೆ: ಸಮಯ ಎನ್ನುವಂತಹದ್ದು ಅತ್ಯಮೂಲ್ಯವಾದದ್ದು, ಅದರ ಮಹತ್ವವನ್ನು ತಿಳಿದಿರುವ ಮಹಿಳೆಯೇ ನಿಜವಾದ ಬುದ್ಧಿವಂತೆ ಎನ್ನುತ್ತಾರೆ ಚಾಣಕ್ಯ. ಸಮಯದ ಮಹತ್ವ ತಿಳಿದಿರುವವರು ನಿಷ್ಪ್ರಯೋಜಕ ವಿಷಯಗಳಿಗೆ ಸಮಯ ವ್ಯರ್ಥ ಮಾಡುವುದಿಲ್ಲ ಮತ್ತು ತನ್ನ ಅಭಿವೃದ್ಧಿಯತ್ತ ಗಮನಹರಿಸುತ್ತಾರೆ.

ಮನೆಯನ್ನು ಸಮರ್ಥವಾಗಿ ನಿಭಾಸುವ ಕಲೆ: ಒಳ್ಳೆಯ ನಡವಳಿಕೆಯೊಂದಿಗೆ ಮನೆ ಮತ್ತು ಮನೆಯವರನ್ನು ಅಚ್ಚುಕಟ್ಟಾಗಿ ನಿಭಾಯಿಸುವ, ಮನೆಯ ಸುಖ, ಶಾಂತಿಯನ್ನು ಕಾಪಾಡಿಕೊಳ್ಳುವ ಕಲೆಯನ್ನು ತಿಳಿದಿರುವ ಮಹಿಳೆ ಕೂಡ ಬುದ್ಧಿವಂತೆ ಎನ್ನುತ್ತಾರೆ ಚಾಣಕ್ಯ.

ಗುಣಗಳು ಯಾವುದೇ ಮಹಿಳೆಯನ್ನು ಬುದ್ಧಿವಂತಳನ್ನಾಗಿ ಮಾಡುವುದು ಮಾತ್ರವಲ್ಲದೆ, ಆಕೆಯನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ, ಸಮಾಜದಲ್ಲಿ ಆಕೆಯ ಗೌರವ, ಘನತೆಯನ್ನು ಹೆಚ್ಚಿಸುತ್ತದೆ ಎಂದಿದ್ದಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ – Kannada News

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಪದೇಪದೇ ಮೈಗ್ರೇನ್ (Migraine) ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ತಲೆನೋವು ಎಂದು ಇದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದೀಗ ಹೊಸ ಅಧ್ಯಯನವೊಂದು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವೆ ಸಂಬಂಧ ಇರಬಹುದೆಂಬ ಸೂಚನೆ ನೀಡಿದೆ. ಹೌದು, ಸಾಮಾನ್ಯವಾಗಿ ಮೈಗ್ರೇನ್ ಅನ್ನು ತಲೆನೋವಿನ ಸಮಸ್ಯೆಯಾಗಿ ಪರಿಗಣಿಸಲಾಗುತ್ತದೆ. ಆದರೆ ಇದರ ಪರಿಣಾಮ ಕೇವಲ ತಲೆನೋವಿನಲ್ಲೇ ಸೀಮಿತವಾಗಿರುವುದಿಲ್ಲ. ಮೈಗ್ರೇನ್ ಮತ್ತು ದೇಹದ ಇತರ ಆರೋಗ್ಯ ಸಮಸ್ಯೆಗಳ ನಡುವಿನ ಸಂಬಂಧವನ್ನು ತಿಳಿಯಲು ಹಲವು ಅಧ್ಯಯನಗಳು ನಡೆದಿವೆ. ಸ್ಪ್ರಿಂಗರ್ ನೇಚರ್ ಪ್ರಕಟಿಸಿರುವ ಅಧ್ಯಯನದ ಪ್ರಕಾರ, ಪದೇಪದೇ ಮೈಗ್ರೇನ್ ಸಮಸ್ಯೆ ಇರುವವರಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿರಬಹುದು ಎಂದು ಹೇಳಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮಾಹಿತಿ ಸ್ಟೋರಿಯಲ್ಲಿದೆ.

ಮೈಗ್ರೇನ್ ವೇಳೆ ತೀವ್ರ ತಲೆನೋವು, ವಾಂತಿ ಬರುವ ಭಾವನೆ, ಬೆಳಕು ಅಥವಾ ಶಬ್ದಕ್ಕೆ ಹೆಚ್ಚು ಕಿರಿಕಿರಿಯಾಗುವುದು. ಮತ್ತೆ ಕೆಲವರಲ್ಲಿ ಇದು ದಿನನಿತ್ಯದ ಜೀವನ ಮತ್ತು ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಜಿ ಈ ರೀತಿಯ ಲಕ್ಷಣ ಕಂಡುಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆ ಸರಿಯಾಗಿ ಆರೈಕೆ ಮಾಡಿಕೊಳ್ಳುವುದು ಒಳ್ಳೆಯದು.

ಅಧ್ಯಯನ ಹೇಳುವುದೇನು?

ಅಧ್ಯಯನದಲ್ಲಿ ಸಂಶೋಧಕರು ಮೈಗ್ರೇನ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ನಡುವಿನ ಸಂಬಂಧವನ್ನು ವಿಶ್ಲೇಷಿಸಿದ್ದಾರೆ. ಮೈಗ್ರೇನ್ ಇರುವವರಲ್ಲಿ ಕಾರ್ಡಿಯೋವಾಸ್ಕುಲರ್ ಡಿಸೀಸ್ (CVD), ಕೊರೊನರಿ ಹೃದಯರೋಗ ಮತ್ತು ಇಸ್ಕೆಮಿಕ್ ಸ್ಟ್ರೋಕ್ ಅಪಾಯ ಹೆಚ್ಚಿರುವುದು ಕಂಡುಬಂದಿದೆ. ವಿಶೇಷವಾಗಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ಇದು ಹೆಚ್ಚು ಸ್ಪಷ್ಟವಾಗಿ ಕಂಡುಬಂದಿದೆ. ಜೊತೆಗೆ ಧೂಮಪಾನ, ಒಬೆಸಿಟಿ, ಹೈ ಬ್ಲಡ್ ಪ್ರೆಶರ್ ಅಥವಾ ಇತರ ಹೃದಯ ಸಂಬಂಧಿ ಅಪಾಯಕಾರಕ ಅಂಶಗಳಿದ್ದರೆ ಅಪಾಯ ಇನ್ನಷ್ಟು ಹೆಚ್ಚಾಗಬಹುದು ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಹಸಿವಾದಾಗ ಸಿಕ್ಕಾಪಟ್ಟೆ ಕೋಪ ಬರೋದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ?

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ತಲೆನೋವು ಸಡನ್ ಆಗಿ ತುಂಬಾ ತೀವ್ರವಾಗುವುದು, ಮಾತಾಡಲು ತೊಂದರೆ, ದೇಹದ ಒಂದು ಭಾಗದಲ್ಲಿ ದುರ್ಬಲತೆ, ತಲೆ ಸುತ್ತುವುದು, ಕಣ್ಣು ಮಸುಕಾಗುವುದು ಅಥವಾ ಪ್ರಜ್ಞೆ ತಪ್ಪುವಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಮೈಗ್ರೇನ್ ದೈನಂದಿನ ಚಟುವಟಿಕೆಗೆ ಅಡ್ಡಿಯಾಗುತ್ತಿದ್ದರೆ ಅಥವಾ ಔಷಧಿಗಳ ನಂತರವೂ ಸಮಸ್ಯೆ ಮುಂದುವರಿದರೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಮೈಗ್ರೇನ್ ನಿಯಂತ್ರಣಕ್ಕೆ ಏನು ಮಾಡಬೇಕು?

ಸಾಕಷ್ಟು ನಿದ್ರೆ, ನಿಯಮಿತ ಜೀವನಶೈಲಿ ಮತ್ತು ಒತ್ತಡ ನಿಯಂತ್ರಣ ಮೈಗ್ರೇನ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಮೈಗ್ರೇನ್ ಹೆಚ್ಚಿಸುವ ಕಾರಣಗಳನ್ನು ಗುರುತಿಸುವುದು ಕೂಡ ಮುಖ್ಯ. ಉದಾಹರಣೆಗೆ ತೀವ್ರ ಬೆಳಕು, ನಿದ್ರಾಹೀನತೆ ಅಥವಾ ಕೆಲವು ಆಹಾರ ಪದಾರ್ಥಗಳು ಸಮಸ್ಯೆಯನ್ನು ಹೆಚ್ಚಿಸಬಹುದು. ಪರ್ಯಾಯವಾಗಿ ಸಾಕಷ್ಟು ನೀರು ಕುಡಿಯುವುದು, ಸಮತೋಲನಯುತ ಆಹಾರ ಸೇವಿಸುವುದು ಮತ್ತು ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳುವುದು ಉತ್ತಮ. ಸಮಸ್ಯೆ ಮುಂದುವರಿದರೆ ತಜ್ಞರ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ವಿರುದ್ಧ ಗೆದ್ದು ಚಿನ್ನದ ಪದಕ ಮುಡಿಗೇರಿಸಿಕೊಂಡ ಬೆಂಗಳೂರು ASI ಪುತ್ರ – Kannada News

ಬೆಂಗಳೂರು, (ಜೂನ್ 09): ಪ್ರತಿಷ್ಠಿತ ಮುಯ್ ಥಾಯ್ (Muay Thai)  ಕ್ರೀಡಾಕೂಟದಲ್ಲಿ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣೆ ಎಎಸ್ಐ ಪುತ್ರ ಕಾಂತರಾಜು ಪುತ್ರ ಶ್ರೀಹರ್ಷ ಬಿ.ಕೆ. ವಿಶೇಷ ಸಾಧನೆ ಮಾಡಿದ್ದಾರೆ. ಹೌದು…ಶ್ರೀಲಂಕದ ನೆಗೊಂಬೋದಲ್ಲಿ ನಡೆದ ಮುಯ್ ಥಾಯ್ಸಮರ ಕಲೆಯ ಕ್ರೀಡಾಕೂಟದಲ್ಲಿ ಶ್ರೀಹರ್ಷ ಬಿ.ಕೆ ಅವರು ಪಾಕಿಸ್ತಾನದ ಸ್ಪರ್ಧಿಯನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ವಂತ ಪರಿಶ್ರಮದಿಂದ ಈ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅಭಿನಂದನೆ ತಿಳಿಸಿದ್ದು, ಶ್ರೀಹರ್ಷ ಅವರನ್ನ ಕಚೇರಿಗೆ ಕರೆಸಿ ಸನ್ಮಾನಿಸಿದ್ದಾರೆ.

ಮುಖ್ಯಾಂಶಗಳು

  • ಮುಯ್ ಥಾಯ್ ಗೇಮ್ ನಲ್ಲಿ ಚಿನ್ನದ ಪದಕ‌ ಗೆದ್ದ ಬೆಂಗಳೂರು ಎಸ್​​​ಐ ಪುತ್ರ
  • ಬೆಂಗಳೂರಿನ ಬನಶಂಕರಿ ಠಾಣೆ ಎಎಸ್ಐ ಕಾಂತರಾಜು ಪುತ್ರ ಶ್ರೀಹರ್ಷ ಬಿ.ಕೆ.
  • ಶ್ರೀಲಂಕದಲ್ಲಿ ಮುಯ್ ಥಾಕ್ ಕ್ರೀಡೆಯಲ್ಲಿ ಪಾಕಿಸ್ತಾನ ಸೋಲಿಸಿ ಚಿನ್ನದ ಪದಕ ಗೆದ್ದ ಶ್ರೀಹರ್ಷ

ಇಂಟರ್ ನ್ಯಾಷನಲ್ ಥಾಯ್ ಮಾರ್ಷಲ್ ಆರ್ಟ್ಸ್ (ITMA) ಸಂಸ್ಥೆಯು ಶ್ರೀಲಂಕಾದಲ್ಲಿ ಏರ್ಪಡಿಸಿದ್ದ ‘ಇಂಟರ್ ನ್ಯಾಷನಲ್ ಆಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026’ (ITMA Asian Games 2026) ಕ್ರೀಡಾಕೂಟದಲ್ಲಿ ಶ್ರೀಹರ್ಷ ಭಾರತವನ್ನು ಪ್ರತಿನಿಧಿಸಿದ್ದರು. 57 ಕೆಜಿ ವಿಭಾಗದ ತೀವ್ರ ಹಣಾಹಣಿಯ ಮುಯ್ ಥಾಯ್ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಇವರು, ಫೈನಲ್ ಪಂದ್ಯದಲ್ಲಿ ಭಾರತದ ಸಾಂಪ್ರದಾಯಿಕ ಎದುರಾಳಿಪಾಕಿಸ್ತಾನದ ಸ್ಪರ್ಧಿಯ ವಿರುದ್ಧ ಸೆಣಸಾಡಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Air Quality: ಬೆಂಗಳೂರಿನಲ್ಲಿ ಗಣನೀಯವಾಗಿ ಸುಧಾರಿಸಿದ ಗಾಳಿಯ ಗುಣಮಟ್ಟ

ಮೂಲತಃ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನವರಾದ ಶ್ರೀಹರ್ಷ ಅವರಿಗೆ ಈ ಹಂತಕ್ಕೆ ತಲುಪಲು ಯಾವುದೇ ಸರ್ಕಾರಿ ನೆರವು ಅಥವಾ ಪ್ರೋತ್ಸಾಹ ಸಿಕ್ಕಿರಲಿಲ್ಲ. ಆರ್ಥಿಕ ಮುಗ್ಗಟ್ಟು ಮತ್ತು ಸೌಲಭ್ಯಗಳ ಕೊರತೆಯ ನಡುವೆಯೂ ಕೇವಲ ತಮ್ಮ ಕಠಿಣ ಪರಿಶ್ರಮ, ತಂದೆಯ ಬೆಂಬಲ ಮತ್ತು ಅಚಲ ಛಲದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನ ಗೆದ್ದು ಬೀಗಿದ್ದಾರೆ. ಈ ಮೂಲಕ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರಿಂದ ವಿಶೇಷ ಸನ್ಮಾನ

ಬೆಂಗಳೂರು ಪೊಲೀಸ್ ಕುಟುಂಬದ ಯುವಕನೊಬ್ಬ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿರುವುದನ್ನು ಗುರುತಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಶ್ರೀಹರ್ಷ ಅವರನ್ನು ತಮ್ಮ ಕಚೇರಿಗೆ ಆಹ್ವಾನಿಸಿ ಅಭಿನಂದನೆ ತಿಳಿಸಿದ್ದಾರೆ. ಶ್ರೀಹರ್ಷ ಮತ್ತು ಅವರ ತಂದೆ ಎಎಸ್‌ಐ ಕಾಂತರಾಜು ಅವರಿಗೆ ನೆನಪಿನ ಕಾಣಿಕೆ ನೀಡಿ ವಿಶೇಷವಾಗಿ ಸನ್ಮಾನಿಸಿ ಶುಭ ಹಾರೈಸಿದರು.

ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸುವ ಕನಸು

ಇನ್ನು ಈ ಸಾಧನೆ ಬಗ್ಗೆ ಶ್ರೀಹರ್ಷ ಮಾತನಾಡಿದ್ದು,ಪಾಕಿಸ್ತಾನದ ವಿರುದ್ಧದ ಪಂದ್ಯಾವಳಿ ಯಾವಾಗಲೂ ಸವಾಲಿನಿಂದ ಕೂಡಿರುತ್ತದೆ. ದೇಶಕ್ಕಾಗಿ ಚಿನ್ನ ಗೆದ್ದಿರುವುದು ಅಪಾರ ಸಂತಸ ತಂದಿದೆ. ಯಾವುದೇ ಸರ್ಕಾರದ ಸಹಾಯವಿಲ್ಲದೆ ಇಲ್ಲಿಯವರೆಗೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರಬೇಕೆಂಬ ಆಸೆಯಿದೆ. ಸರ್ಕಾರ ನನ್ನಂತಹ ಕ್ರೀಡಾಪಟುಗಳಿಗೆ ಆರ್ಥಿಕ ನೆರವು ನೀಡಿದರೆ ಇನ್ನು ಹೆಚ್ಚಿನ ಸಾಧನೆ ಮಾಡಬಹುದು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 8:23 pm, Tue, 9 June 26

Source link

ಜೂನ್ 12ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್‌ನ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲಾ’ (Bhooth Bangla) ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಈಗ ಈ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಥಿಯೇಟರ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ ಯಶಸ್ಸು ಕಂಡ ಈ ಸಿನಿಮಾ, ಜೂನ್ 12ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್‌ ಮೂಲಕ ಡಿಜಿಟಲ್ ಪ್ರಸಾರ ಆರಂಭಿಸಲಿದೆ. ಇದರಿಂದ ಅಕ್ಷಯ್ ಕುಮಾರ್ (Akshay Kumar) ಅಭಿಮಾನಿಗಳು ಖುಷಿ ಆಗಿದ್ದಾರೆ.

ಏಪ್ರಿಲ್ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ‘ಭೂತ್ ಬಂಗ್ಲಾ’ ಚಿತ್ರವು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಆದಾಗ್ಯೂ, ಪ್ರೇಕ್ಷಕರು ಚಿತ್ರದ ಕಾಮಿಡಿ ಹಾಗೂ ಹಾರರ್ ಅಂಶ‌ಗಳನ್ನು ಮೆಚ್ಚಿಕೊಂಡಿದ್ದರಿಂದ ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಭರ್ಜರಿ ಕಮಾಯಿ ಮಾಡಿತು. ಸುಮಾರು 120 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ, ವಿಶ್ವಾದ್ಯಂತ 246.55 ಕೋಟಿ ರೂ.ಗಳನ್ನು ಬಾಚಿಕೊಳ್ಳುವ ಮೂಲಕ 2026ರಲ್ಲಿ ಹೆಚ್ಚು ಗಳಿಕೆ ಮಾಡಿದ ಟಾಪ್ ಹಿಂದಿ ಸಿನಿಮಾಗಳ ಸಾಲಿಗೆ ಸೇರಿದೆ.

‘ಹೇರಾ ಫೇರಿ’ ಮತ್ತು ‘ಭೂಲ್ ಭುಲಯ್ಯ’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಅಕ್ಷಯ್ ಕುಮಾರ್ ಹಾಗೂ ಪ್ರಿಯದರ್ಶನ್ ಜೋಡಿ, ಬರೋಬ್ಬರಿ 14 ವರ್ಷಗಳ ನಂತರ ಈ ಚಿತ್ರದ ಮೂಲಕ ಒಂದಾಗಿದೆ. ಮಂಗಳಪುರ ಎಂಬ ಕಾಲ್ಪನಿಕ ಹಳ್ಳಿಯ ಹಿನ್ನೆಲೆಯಲ್ಲಿ ಸಾಗುವ ಈ ಕಥೆ, ಶಾಪಗ್ರಸ್ತ ಅರಮನೆ ಮತ್ತು ‘ವಧುಸೂರ್’ ಎಂಬ ರಾಕ್ಷಸನ ಸುತ್ತ ಸುತ್ತುತ್ತದೆ.

ಚಿತ್ರದಲ್ಲಿ ಪರೇಶ್ ರಾವಲ್, ಟಬು, ರಾಜ್‌ಪಾಲ್ ಯಾದವ್, ವಾಮಿಕಾ ಗಬ್ಬಿ, ಜಿಶು ಸೇನ್‌ಗುಪ್ತ, ಅಸ್ರಾನಿ, ಮನೋಜ್ ಜೋಶಿ ಮತ್ತು ಮಿಥಿಲಾ ಪಾಲ್ಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಕ್ಷಯ್ ಕುಮಾರ್, ಏಕ್ತಾ ಕಪೂರ್ ಮತ್ತು ಶೋಭಾ ಕಪೂರ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಪ್ರೀತಮ್ ಸಂಗೀತ ನೀಡಿದ್ದಾರೆ. ಸದ್ಯ ಒಟಿಟಿಯಲ್ಲಿ ಹಾರರ್ ಕಾಮಿಡಿ ಸಿನಿಮಾಗಳಿಗೆ ಭಾರಿ ಬೇಡಿಕೆ ಇರುವುದರಿಂದ, ನೆಟ್‌ಫ್ಲಿಕ್ಸ್‌ನಲ್ಲೂ ಈ ಸಿನಿಮಾ ದಾಖಲೆಯ ವೀಕ್ಷಣೆ ಪಡೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: 1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್

ಕಳೆದ ಕೆಲವು ವರ್ಷಗಳಿಂದ ಅಕ್ಷಯ್ ಕುಮಾರ್ ಅವರಿಗೆ ಬಾಕ್ಸ್ ಆಫೀಸ್‌ನಲ್ಲಿ ಸಕ್ಕತ್ ಹಿನ್ನಡೆಯಾಗಿತ್ತು. ಅವರು ನಟಿಸಿದ್ದ ‘ಬಡೆ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಹಾಗೂ ‘ಖೇಲ್ ಖೇಲ್ ಮೇ’ ಮುಂತಾದ ದೊಡ್ಡ ಬಜೆಟ್ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಹೀನಾಯವಾಗಿ ಸೋತಿದ್ದವು. ಇದರಿಂದಾಗಿ ಅವರ ಮಾರುಕಟ್ಟೆ ಮೌಲ್ಯದ ಮೇಲೂ ಪರಿಣಾಮ ಬೀರಿತ್ತು. ಆದರೆ, ಈಗ ‘ಭೂತ್ ಬಂಗ್ಲಾ’ ಚಿತ್ರದ ಭರ್ಜರಿ ಯಶಸ್ಸು ಅಕ್ಷಯ್ ಕುಮಾರ್ ಅವರ ಕೆರಿಯರ್ ಗ್ರಾಫ್‌ಗೆ ಹೊಸ ಜೀವ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಕುಮಾರ್​ಗಾಗಿ ಇನ್ನಷ್ಟು ತಿಂಗಳು ಕಾಯಬೇಕು ರಾಮ್ ಚರಣ್

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾನಲ್ಲಿ ನಾಯಕಿ ಜಾನ್ಹವಿಯನ್ನು ಅತಿಯಾದ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ ಎಂಬ ಟೀಕೆ ಕೇಳಿ ಬಂದ ಬೆನ್ನಲ್ಲೆ ಸಿನಿಮಾದ ಆ ದೃಶ್ಯಗಳಿಗೆ ನಿರ್ದೇಶಕರು ಕತ್ತರಿ ಹಾಕಿದ್ದು, ಹೊಸ ಆವೃತ್ತಿ ಇದೇ ವಾರಾಂತ್ಯಕ್ಕೆ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ‘ಪೆದ್ದಿ’ ಸಿನಿಮಾ ಮೂಲಕ ರಾಮ್ ಚರಣ್ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಂಡಿದ್ದಾರೆ. ಆದರೆ ಅವರ ಮುಂದಿನ ಸಿನಿಮಾ ಸಖತ್ ಕುತೂಹಲಕಾರಿಯಾಗಿದೆ. ಆದರೆ ಶೂಟಿಂಗ್ ಶುರುವಾಗಲು ರಾಮ್ ಚರಣ್ ಇನ್ನೂ ಕೆಲ ತಿಂಗಳು ಕಾಯಬೇಕಿದೆ.

ರಾಮ್ ಚರಣ್ ಅವರ ಮುಂದಿನ ಸಿನಿಮಾ ಅನ್ನು ‘ಪುಷ್ಪ’ ನಿರ್ದೇಶಕ ಸುಕುಮಾರ್ ನಿರ್ದೇಶಿಸಲಿದ್ದಾರೆ. ‘ಪುಷ್ಪ 2’ ಸಿನಿಮಾದ ಶೂಟಿಂಗ್ ವೇಳೆಯೇ ಈ ಸುದ್ದಿ ಹೊರಬಿದ್ದಿತ್ತು. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ಸಿನಿಮಾದ ಚಿತ್ರೀಕರಣ ಮುಂದೂಡಲ್ಪಟ್ಟಿದೆಯಂತೆ. ಸಿನಿಮಾದ ಚಿತ್ರಕತೆಯ ಮೇಲೆ ಇನ್ನಷ್ಟು ಕೆಲಸ ಮಾಡಬೇಕಿರುವ ಕಾರಣ ಸುಕುಮಾರ್ ಅವರು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದ್ದು, ರಾಮ್ ಚರಣ್ ಅವರು ಅನಿವಾರ್ಯವಾಗಿ ಕಾಯಲೇ ಬೇಕಾಗಿದೆ.

ರಾಮ್ ಚರಣ್ ಹಾಗೂ ಸುಕುಮಾರ್ ಈ ಹಿಂದೆ ‘ರಂಗಸ್ಥಲಂ’ ಸಿನಿಮಾಕ್ಕೆ ಒಂದಾಗಿದ್ದರು. ಆ ಸಿನಿಮಾ ರಾಮ್ ಚರಣ್ ಅವರಿಗೆ ಒಂದು ರೀತಿ ಮರು ಜೀವನ ನೀಡಿದ ಸಿನಿಮಾ ಆಗಿತ್ತು. ರಾಮ್ ಚರಣ್ ಅದ್ಭುತವಾದ ನಟನೆಯನ್ನು ಆ ಸಿನಿಮಾನಲ್ಲಿ ತೋರಿಸಿದ್ದರು. ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ಅದೇ ರೀತಿ ಮತ್ತೊಂದು ಹಳ್ಳಿ ಗಾಡಿನ ಕತೆಯನ್ನು ರಾಮ್ ಚರಣ್ ಅವರಿಗಾಗಿ ಸುಕುಮಾರ್ ರೆಡಿ ಮಾಡಿದ್ದಾರಂತೆ. ಆದರೆ ಸಿನಿಮಾದ ಚಿತ್ರೀಕರಣದ ಮೇಲೆ ಇನ್ನಷ್ಟು ಕೆಲಸ ಮಾಡಬೇಕಿರುವ ಕಾರಣ ಸುಕುಮಾರ್ ಇನ್ನಷ್ಟು ಕಾಲಾವಕಾಶವನ್ನು ಕೇಳಿದ್ದಾರೆ. ‘ಪುಷ್ಪ’ ಮತ್ತು ‘ಪುಷ್ಪ 2’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಸುಕುಮಾರ್. ಅದೇ ಯಶಸ್ಸನ್ನು ಮುಂದುವರೆಸುವ ನಿಟ್ಟಿನಲ್ಲಿ ಈ ಸಿನಿಮಾದ ಕತೆಯ ಮೇಲೆ ಹೆಚ್ಚು ಫೋಕಸ್ ಹಾಕಿದ್ದಾರೆ.

ಇದನ್ನೂ ಓದಿ:200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು

ಸುಕುಮಾರ್ ಅವರು ವಿಜಯ್ ದೇವರಕೊಂಡ ನಟನೆಯ ಸಿನಿಮಾ ನಿರ್ದೇಶನ ಮಾಡುತ್ತಾರೆ. ಅದು ‘ಆರ್ಯ 3’ ಆಗಿರಲಿದೆ ಎಂಬ ಸುದ್ದಿಗಳು ಈ ಹಿಂದೆ ಹರಿದಾಡಿದ್ದವು. ‘ಆರ್ಯ 3’ ಸಿನಿಮಾಕ್ಕೆ ಅಲ್ಲು ಅರ್ಜುನ್ ಬಂಡವಾಳ ಹೂಡಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಅದು ಸುಳ್ಳಾಗಿದ್ದು, ರಾಮ್ ಚರಣ್ ಜೊತೆಗೆ ಸುಕುಮಾರ್ ಕೈ ಜೋಡಿಸಿದ್ದಾರೆ. ರಾಮ್ ಚರಣ್ ಜೊತೆಗಿನ ಸಿನಿಮಾ ಮುಗಿದ ಬಳಿಕ ಸುಕುಮಾರ್ ಅವರು ‘ಪುಷ್ಪ 3’ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ.

ಇನ್ನು ರಾಮ್ ಚರಣ್ ಅವರ ಬಳಿಕ ಸುಕುಮಾರ್ ಸಿನಿಮಾ ಬಿಟ್ಟರೆ ಬೇರೆ ಯಾವುದೇ ಆಫರ್ ಇಲ್ಲ ಎನ್ನಲಾಗುತ್ತಿದೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ ನಟಿಸಿದ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳು ಸೋಲುಂಡಿದ್ದವು. ಆದರೆ ‘ಪೆದ್ದಿ’ ಸಿನಿಮಾ ಮೂಲಕ ಗೆದ್ದಿರುವ ರಾಮ್ ಚರಣ್, ಸುಕುಮಾರ್ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link