Category Archives: Blog

Your blog category

ಹುಡುಗಿಯರು ಹಗ್​ ಮಾಡುವಾಗ ಹುಡುಗರ ಈ ಭಾಗದ ವಾಸನೆ ನೋಡ್ತಾರೆ – Kannada News | Hug Psychology: 7 Things Girls Notice for Deeper Connection and Appeal

ಹುಡುಗಿಯರು ಹಗ್ (ಅಪ್ಪುಗೆ) ಮಾಡುವಾಗ ಕೆಲವು ವಿಷಯಗಳನ್ನು ಅರಿವಿಲ್ಲದೆಯೇ ಗಮನಿಸುತ್ತಾರೆ ಎಂಬುದು ಮನೋವಿಜ್ಞಾನ ಮತ್ತು ದೈನಂದಿನ ಜೀವನದ ಅವಲೋಕನಗಳಿಂದ ತಿಳಿದುಬಂದಿದೆ. ಸಾಮಾನ್ಯವಾಗಿ ಅಪ್ಪುಗೆ ಎನ್ನುವುದು ಪ್ರೀತಿ ಮತ್ತು ಭದ್ರತೆಯ ಸಂಕೇತ. ಆ ಸಮಯದಲ್ಲಿ ಹುಡುಗಿಯರು ಹೆಚ್ಚಾಗಿ ಗಮನಿಸುತ್ತಾರೆ. ಹಗ್ ಮಾಡುವಾಗ ಹುಡುಗಿಯ ಮುಖವು ಹುಡುಗನ ಭುಜ ಅಥವಾ ಕುತ್ತಿಗೆಯ ಹತ್ತಿರ ಇರುತ್ತದೆ. ಆ ಸಮಯದಲ್ಲಿ ಹುಡುಗನ ದೇಹದಿಂದ ಬರುವ ಆಹ್ಲಾದಕರವಾದ ಪರ್ಫ್ಯೂಮ್ ಅಥವಾ ಸೋಪಿನ ಸುವಾಸನೆಯು ಅವರಿಗೆ ತುಂಬಾ ಇಷ್ಟವಾಗುತ್ತದೆ. ಇದು ಅವರಿಗೆ ಒಂದು ರೀತಿಯ ಸಮಾಧಾನ (Comfort) ನೀಡುತ್ತದೆ.

ಹುಡುಗಿಯರು ಹಗ್ ಮಾಡುವಾಗ ಹುಡುಗ ಎಷ್ಟು ಆತ್ಮವಿಶ್ವಾಸದಿಂದ ಮತ್ತು ಪ್ರೀತಿಯಿಂದ ಅಪ್ಪಿಕೊಳ್ಳುತ್ತಾನೆ ಎಂಬುದನ್ನು ಗಮನಿಸುತ್ತಾರೆ. ಹುಡುಗನ ತೋಳುಗಳ ನಡುವೆ ತಮಗೆ ಸುರಕ್ಷತೆ ಸಿಗುತ್ತಿದೆ ಎಂದು ಅನ್ನಿಸಿದರೆ ಅವರು ಅದನ್ನು ಹೆಚ್ಚು ಇಷ್ಟಪಡುತ್ತಾರೆ. ಅಪ್ಪಿಕೊಂಡಾಗ ಕೇಳಿಸುವ ಹೃದಯದ ಬಡಿತ ಅಥವಾ ಹುಡುಗನ ತೋಳುಗಳ ಬಲವು ಅವರು ಎಷ್ಟರ ಮಟ್ಟಿಗೆ ಈ ಸಂಬಂಧದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ಸಾಂಕೇತಿಕವಾಗಿ ತಿಳಿಸುತ್ತದೆ. ಇದರ ಜತೆಗೆ ಹುಡುಗರು ಅತಿಯಾದ ಸ್ಟ್ರಾಂಗ್ ಪರ್ಫ್ಯೂಮ್ ಬಳಸುವ ಬದಲು, ಲಘು ಮತ್ತು ಆಹ್ಲಾದಕರವಾದ ಸುಗಂಧ ದ್ರವ್ಯ ಬಳಸಿ ಎಂದು ಹೇಳಲಾಗಿದೆ.

ಇನ್ನು ಹುಡುಗಿಯರು ಬಟ್ಟೆಗಳು ಮತ್ತು ಕುತ್ತಿಗೆಯ ಭಾಗ ಸ್ವಚ್ಛವಾಗಿರುವುದು ಮುಖ್ಯ. ಹಗ್ ಮಾಡುವಾಗ ಎದುರಿಗಿನ ವ್ಯಕ್ತಿಗೆ ಮುಜುಗರವಾಗದಂತೆ ಗೌರವಯುತವಾಗಿ ಅಪ್ಪಿಕೊಳ್ಳುವುದು ಅತ್ಯಂತ ಅಗತ್ಯ. ನೀವು ಎಷ್ಟೇ ಬೆಲೆಬಾಳುವ ಬಟ್ಟೆ ತೊಟ್ಟರೂ, ಮುಖದಲ್ಲಿ ನಗು ಇಲ್ಲದಿದ್ದರೆ ನಿಮ್ಮ ಆಕರ್ಷಣೆ ಶೂನ್ಯ. ನಗು ನಿಮ್ಮನ್ನು ಹೆಚ್ಚು ಸಮೀಪಿಸಬಲ್ಲ ವ್ಯಕ್ತಿಯನ್ನಾಗಿ ಮಾಡುತ್ತದೆ. ಅನೇಕರು ಮುಖವನ್ನು ಗಮನಿಸುತ್ತಾರೆ ಎಂದು ಭಾವಿಸುತ್ತಾರೆ, ಆದರೆ ಸಂಶೋಧನೆಗಳ ಪ್ರಕಾರ ಜನರು ಮೊದಲು ಗಮನಿಸುವುದು ನಿಮ್ಮ ಕೈಗಳನ್ನು. ಉಗುರುಗಳು ಕತ್ತರಿಸಲ್ಪಟ್ಟಿರಲಿ ಮತ್ತು ಸ್ವಚ್ಛವಾಗಿರಲಿ.

ಇದನ್ನೂ ಓದಿ: ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ

ವ್ಯಕ್ತಿಯ ಗುಣವನ್ನು ಅವನ ಪಾದರಕ್ಷೆ ನೋಡಿ ಹೇಳಬಹುದು ಎಂಬ ಮಾತಿದೆ. ನಿಮ್ಮ ಶೂಗಳು ಅಥವಾ ಚಪ್ಪಲಿಗಳು ಧೂಳಿಲ್ಲದೆ ಶುಚಿಯಾಗಿರುವುದು ನಿಮ್ಮ ಶಿಸ್ತನ್ನು ಪ್ರತಿಬಿಂಬಿಸುತ್ತದೆ. ನೀವು ಒಬ್ಬರ ಜೊತೆ ಮಾತನಾಡುವಾಗ ಅವರ ಕಣ್ಣನ್ನು ನೋಡಿ ಮಾತನಾಡಿದರೆ, ಅವರು ನಿಮ್ಮನ್ನು ಹೆಚ್ಚು ನಂಬುತ್ತಾರೆ ಮತ್ತು ನೀವು ಹೆಚ್ಚು ಆತ್ಮವಿಶ್ವಾಸವುಳ್ಳವರು ಎಂದು ಭಾವಿಸುತ್ತಾರೆ. ಸಂಶೋಧನೆಯ ಪ್ರಕಾರ, ಒಬ್ಬ ವ್ಯಕ್ತಿಗೆ ಜಗತ್ತಿನಲ್ಲಿ ಅತ್ಯಂತ ಪ್ರಿಯವಾದ ಶಬ್ದ ಎಂದರೆ ಅವರ ಸ್ವಂತ ಹೆಸರು. ಸಂಭಾಷಣೆಯ ನಡುವೆ ಅವರ ಹೆಸರನ್ನು ಬಳಸಿ ಮಾತಾಡಿದರೆ ಅವರಿಗೆ ನಿಮ್ಮ ಮೇಲೆ ಬೇಗನೆ ಗೌರವ ಮತ್ತು ಪ್ರೀತಿ ಮೂಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉದ್ಯೋಗದ ವೇಳೆ ಲವ್; ಮದುವೆಯಲ್ಲಿ ತಮ್ಮ ಕಂಪನಿಗೆ ಡಿಫರೆಂಟಾಗಿ ಥ್ಯಾಂಕ್ಸ್ ಹೇಳಿದ ವಧು! – Kannada News | Girl Met Her Groom At Amazon Gets Company Logo On Mehendi At Her Wedding Watch Video

ನವದೆಹಲಿ, ಫೆಬ್ರವರಿ 16: ಕಂಪನಿಗಳಲ್ಲಿ ಅನೇಕ ಲವ್ ಸ್ಟೋರಿಗಳು ನಡೆಯುತ್ತಿರುತ್ತವೆ, ಕೆಲವೊಮ್ಮೆ ಅಲ್ಲೇ ಇರುವ ಸಹೋದ್ಯೋಗಿಗಳಿಗೂ ಈ ವಿಷಯ ಗೊತ್ತಾಗುವುದಿಲ್ಲ. ಅಮೆಜಾನ್‌ (Amazon) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಅಲ್ಲೇ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸಿದಳು. ಆತನ ಜೊತೆ ಮದುವೆಯೂ ನಿಶ್ಚಯವಾಯಿತು. ಆಕೆ ತನಗೆ ಬಾಳ ಸಂಗಾತಿಯನ್ನು ಕೊಟ್ಟ ಕಂಪನಿಯಾದ ಅಮೆಜಾನ್​​ನ ಲೋಗೋವನ್ನು ತನ್ನ ಮೆಹಂದಿ ಶಾಸ್ತ್ರದಲ್ಲಿ ಕೈಯಲ್ಲಿ ಚಿತ್ರಿಸಿಕೊಳ್ಳುವ ಮೂಲಕ ತಮ್ಮಿಬ್ಬರ ಪರಿಚಯಕ್ಕೆ ಕೊಂಡಿಯಾದ ಸಂಸ್ಥೆಗೆ ಧನ್ಯವಾದ ತಿಳಿಸಿದ್ದಾಳೆ.

ವಧು ಪ್ರಿಯಾಂಶಿ ಶ್ರೀಮಲ್ ತನ್ನ ಪ್ರಿಯಕರನ ಜೊತೆ ಅದ್ದೂರಿಯಾಗಿ ವಿವಾಹವಾಗಿದ್ದಾಳೆ. ಈ ವೇಳೆ ಮೆಹಂದಿ ಶಾಸ್ತ್ರದಲ್ಲಿ ತನ್ನ ಕೈಗಳ ಮೇಲೆ ಅಮೆಜಾನ್ ಕಂಪನಿಯ ಲೋಗೋ ಡಿಸೈನ್ ಹಾಕಿಸಿಕೊಳ್ಳುವ ಮೂಲಕ ತಮ್ಮ ಪ್ರೇಮಕತೆಗೆ ನಾಂದಿ ಹಾಡಿದ ಸ್ಥಳಕ್ಕೂ ತನ್ನ ಮದುವೆಯಲ್ಲಿ ವಿಶೇಷ ಸ್ಥಾನ ನೀಡಿದ್ದಾಳೆ. ಈ ವಿಡಿಯೋ ಇನ್​ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಡಿವೋರ್ಸ್​​​ ಸಿಕ್ಕ ಖುಷಿಗೆ ಕೈ ತುಂಬಾ ಮೆಹಂದಿ ಹಚ್ಚಿ ಸಂಭ್ರಮಿಸಿದ ಮಹಿಳೆ

@insideamazon Instagram ಎಂಬ ಖಾತೆಯಿಂದ ಹಂಚಿಕೊಳ್ಳಲಾದ ಈ ವಿಡಿಯೋ ಪ್ರಿಯಾಂಶಿಯ ಕೈಗಳ ಮೇಲೆ ಮೆಹಂದಿಯ ವೇಳೆ ಅಮೆಜಾನ್ ಲೋಗೋವನ್ನು ಹಾಕಿಸಿಕೊಂಡಿರುವುದನ್ನು ನೋಡಬಹುದು. ಈ ಖಾತೆಯು ಅಮೆಜಾನ್‌ನಲ್ಲಿನ ಜೀವನ ಮತ್ತು ಕೆಲಸದ ಬಗ್ಗೆ ತೆರೆಮರೆಯ ಕಥೆಗಳನ್ನು ಹೈಲೈಟ್ ಮಾಡುತ್ತದೆ. ಈ ಖಾತೆಯನ್ನು ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಸಹ ಫಾಲೋ ಮಾಡುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೆಕ್ ಬೌನ್ಸ್ ಕೇಸ್; ಜಾಮೀನು ಪಡೆದು ನಿಟ್ಟುಸಿರು ಬಿಟ್ಟ ರಾಜ್​ಪಾಲ್ ಯಾದವ್ – Kannada News | Actor Rajpal Yadav gets bail in Cheque Bounce case

ಹಿಂದಿ ಚಿತ್ರರಂಗದ ಖ್ಯಾತ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ತಿಹಾರ್ ಜೈಲು ಸೇರಿದ್ದರು. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದುಕೊಂಡಿದ್ದಾರೆ. ಇಂದು (ಫೆಬ್ರವರಿ 16) ರಾಜ್​ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು (Bail) ನೀಡಿದೆ. ಮಧ್ಯಾಹ್ನ 3 ಗಂಟೆ ಒಳಗೆ 1.3 ಕೋಟಿ ರೂಪಾಯಿ ಹಣವನ್ನು ಪಾವತಿ ಮಾಡುವಂತೆ ಸೂಚಿಸಲಾಗಿತ್ತು. ಹಣ ಹೊಂದಿಸಿದ ಬಳಿಕ ಅವರಿಗೆ ಜಾಮೀನು ನೀಡಲಾಯಿತು.

ಸಂಬಂಧಿಕರ ಮದುವೆ ಇದೆ ಎಂಬ ಕಾರಣವನ್ನು ನೀಡಿ ರಾಜ್​ಪಾಲ್ ಯಾದವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಸೋಮವಾರಕ್ಕೆ (ಫೆ.16) ಅವರ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿತ್ತು. ಇಂದು (ಫೆ.16) ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದರಿಂದಾಗಿ ರಾಜ್​ಪಾಲ್ ಯಾದವ್ ಮತ್ತು ಅವರ ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾರ್ಚ್ 18ರ ತನಕ ರಾಜ್​ಪಾಲ್ ಯಾದವ್ ಅವರು ಜೈಲಿನಿಂದ ಹೊರಗೆ ಇರಲಿದ್ದಾರೆ. ಅಂದು ಮತ್ತೆ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಸಿನಿಮಾ ನಿರ್ಮಾಣ ಮಾಡುವ ಸಲುವಾಗಿ ಅವರು ಹಲವು ವರ್ಷಗಳ ಹಿಂದೆ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದರು. ಸಿನಿಮಾ ಸೋತ ಬಳಿಕ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಅಲ್ಲದೇ, ಹಲವು ಬಾರಿ ಚೆಕ್ ಬೌನ್ಸ್ ಆಗಿದ್ದರಿಂದ ಪ್ರಕರಣ ದಾಖಲಿಸಲಾಗಿತ್ತು.

ರಾಜ್​ಪಾಲ್ ಯಾದವ್ ಅವರಿಗೆ ಈ ಮೊದಲು ಅನೇಕ ಬಾರಿ ಕಾಲಾವಕಾಶ ನೀಡಲಾಗಿತ್ತು. ಆದರೆ ಪ್ರತಿ ಬಾರಿಯೂ ಅವರು ಹಣ ಹಿಂದಿರುಗಿಸಲು ಹಿಂದೇಟು ಹಾಕುತ್ತಿದ್ದರು. ಅದರಿಂದಾಗಿ ಕೆಲವೇ ದಿನಗಳ ಹಿಂದೆ ಅವರಿಗೆ ಜೈಲು ಶಿಕ್ಷೆ ನೀಡಲಾಯಿತು. ಆ ಬಳಿಕ ರಾಜ್​ಪಾಲ್​ ಯಾದವ್ ಅವರು ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗಿದ್ದರು.

ಇದನ್ನೂ ಓದಿ: ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ?

ರಾಜ್​ಪಾಲ್ ಯಾದವ್ ಅವರು ಬಹುಬೇಡಿಕೆಯ ಹಾಸ್ಯ ನಟ. ‘ಚುಪ್ ಚುಪ್​ ಕೆ’, ‘ಭೂಲ್ ಭುಲಯ್ಯ’ ಮುಂತಾದ ಸಿನಿಮಾಗಳ ಮೂಲಕ ಅವರು ಜನರನ್ನು ನಗಿಸಿದ್ದಾರೆ. ಸಾಲದ ಸುಳಿಯಿಂದಾಗಿ ಅವರು ಜೈಲುವಾಸ ಅನುಭವಿಸುವಂತಾಯಿತು. ಅವರು ಜೈಲು ಸೇರಿದ ಬಳಿಕ ಸೋನು ಸೂದ್ ಸೇರಿದಂತೆ ಹಲವರು ಅವರ ನೆರವಿಗೆ ಧಾವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ – Kannada News | Karnataka High Court Invalidates bagepalli Congress MLA Subba Reddy elect

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ (bagepalli Congress MLA Subba Reddy )ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. ಇನ್ನು ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಿದೆ.

ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು ಕೋರ್ಟ್ ಮೆಟ್ಟಿಲೇರಿದ್ದರು. ಇನ್ನೊಂದೆಡೆ ಸುಬ್ಬಾರೆಡ್ಡಿ ಸಹ ತಮ್ಮ ಅರ್ಜಿ ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ಚುನಾವಣಾ ತಕರಾರು ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಅದನ್ನು ವಜಾಗೊಳಿಸಬೇಕೆಂದು ಸುಬ್ಬಾರೆಡ್ಡಿ ಮನವಿ ಮಾಡಿದ್ದರು. ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಕೋರ್ಟ್, ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿದೆ. ಆದ್ರೆ, ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜು ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.

ಇದನ್ನೂ ಓದಿ: Bengaluru ED Raid: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆಗಳು ಸೇರಿ ಬೆಂಗಳೂರಿನ 5 ಕಡೆ ಇಡಿ ದಾಳಿ

ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ

ಮೇಲ್ಮನವಿ ಸಲ್ಲಿಕೆವರೆಗೆ ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಲು ಎಸ್.ಎನ್.ಸುಬ್ಬಾರೆಡ್ಡಿ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ಮನವಿ ಮಾಡಿದ್ದಾರೆ. ಆದ್ರೆ, ಈ ಮನವಿಗೆ ಅರ್ಜಿದಾರರ ಪರ ಹಿರಿಯ ವಕೀಲೆ ನಳಿನಾ ಮಾಯಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಕೋರ್ಟ್, ಅಸಿಂಧು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೀಗಾಗಿ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದ್ದು, ಸುಪ್ರೀಂಕೋರ್ಟ್ ಮೊರೆ ಹೋಗುವುದೊಂದೇ ಸುಬ್ಬಾರೆಡ್ಡಿಗೆ ಉಳಿದ ಮಾರ್ಗ.  ಇನ್ನು ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ 6 ತಿಂಗಳೊಳಗಾಗಿ ತಡೆಯಾಜ್ಞೆ ನೀಡದಿದ್ದರೆ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಬೇಕಾಗುತ್ತೆ.  ಹೀಗಾಗಿ ಸುಪ್ರೀಂಕೋರ್ಟ್ ಯಾವ ತೀರ್ಪು ನೀಡುತ್ತೆ ಎನ್ನುವುದೇ ಕುತೂಹಲ ಮೂಡಿಸಿದೆ.

ಪ್ರಕರಣದ ಹಿನ್ನೆಲೆ

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಎಸ್‌.ಎನ್‌. ಸುಬ್ಬಾರೆಡ್ಡಿ ಗೆಲುವು ಸಾಧಿಸಿದ್ದರು. ಆದ್ರೆ, ಬಿಜೆಪಿಯಿಂದ ಸ್ಪರ್ಧೆ ಮಾಡಿ ಸೋಲುಕಂಡಿದ್ದ ಮುನಿರಾಜು, ಸುಬ್ಬಾರೆಡ್ಡಿ ನಾಮಪತ್ರ ಕ್ರಮವಾಗಿಲ್ಲ. ಚುನಾವಣೆಯಲ್ಲಿ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಜತೆಗೆ ಆಸ್ತಿಗಳ ತೆರಿಗೆ ಪಾವತಿ ಬಾಕಿ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ. ಹಾಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕೆಂದು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಇನ್ನೊಂದೆಡೆ ಆ ಅರ್ಜಿಯನ್ನು ವಜಾಗೊಳಿಸಲು ಎಸ್‌.ಎನ್‌. ಸುಬ್ಬಾರೆಡ್ಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್, ಅಂತಿಮವಾಗಿ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದು, ಕಾನೂನು ಹೋರಾಟದದಲ್ಲಿ ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜುಗೆ ಗೆಲುವು ಸಿಕ್ಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:06 pm, Mon, 16 February 26

Source link

Bidar: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು – Kannada News | Karanja Dam Tragedy: Father, Son Drown in Bidar Canal After Rescue Attempt

ಕಾಲುವೆಯಿಂದ ಮೃತ ದೇಹ ಹೊರ ತೆಗೆಯುತ್ತಿರುವುದುImage Credit source: Tv9 Kannada

ಬೀದರ್​​, ಫೆಬ್ರವರಿ 16: ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ(50) ಮತ್ತು ಅಮರೇಶ(23) ಮೃತ ದುರ್ದೈವಿಗಳಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮೃತ ದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಾಲುವೆಯಿಂದ ಹೊರ ತೆಗೆದಿದ್ದಾರೆ.

ಮಗನ ಉಳಿಸಲು ಹೋಗಿ ತಂದೆಯೂ ಸಾವು!

ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ ವಾಪಸ್ ಊರಿನತ್ತ ತಂದೆ-ಮಗ ಇಬ್ಬರೂ ಪ್ರಯಾಣ ಬೆಳೆಸಿದ್ದರು. ಈ ವೇಳೆ ನೀರು ಕಂಡ ಹಿನ್ನೆಲೆ ಅಮರೇಶ್ ಕೈಕಾಲು ತೊಳೆದುಕೊಳ್ಳಲೆಂದು ಕಾಲುವೆಗೆ ಇಳಿದಿದ್ದ. ಆ ಸಂದರ್ಭ ಕಾಲು ಜಾರಿ ಕಾರಂಜಾ ಡ್ಯಾಂನ ಕಾಲುವೆಗೆ ಆತ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಂದೆ ವಿಶ್ವನಾಥ ಜಮಾದಾರ್ ಕೂಡಲೇ ಆತನ ರಕ್ಷಣೆಗೆಂದು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್​​ ತಂದೆ-ಮಗ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು!

ಅಂಗಡಿ ಮುಂಭಾಗ ಶವ ಪತ್ತೆ

ಜಮಖಂಡಿ ನಗರದಲ್ಲಿ ಧನ್ವಂತರಿ ಆಸ್ಪತ್ರೆ ಸಮೀಪ ಅಂಗಡಿಯೊಂದರ ಮುಂಭಾಗ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಜಂಬಗಿ ಗ್ರಾಮದ ನಿವಾಸಿ ಉಮೇಶ್​​ ತೋಟದ(45) ಎಂದು ಗುರುತಿಸಲಾಗಿದ್ದು,ಅನಾರೋಗ್ಯದ ಹಿನ್ನೆಲೆ ರಾತ್ರಿ ಮಲಗಿದ್ದ ಸ್ಥಳದಲ್ಲೇ ಈತ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಮಖಂಡಿ ನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ: ಓರ್ವ ಸಾವು

ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಮಗುಚಿ ಬಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೇರೂರು ಬ್ರೀಡ್ಜ್ ಮೇಲೆ ನಡೆದಿದೆ. ಕೆಂಪೇಗೌಡ ಮೃತ ವ್ಯಕ್ತಿಯಾಗಿದ್ದು, ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿದ್ದಾರೆ. ಮೃತದೇಹ ಕುಣಿಗಲ್ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಐದು ವರ್ಷದಲ್ಲಿ ಐಟಿ ಉದ್ಯೋಗಗಳೇ ಇರೋದಿಲ್ಲ ಎಂದಿದ್ದಾರೆ ವಿನೋದ್ ಖೋಸ್ಲಾ; ಎಐನಿಂದ ಭಾರತವೇನು ಮಾಡಬೇಕು? – Kannada News | AI impact on the world, not IT service and BPO jobs in 5 years, says Vinod Khosla

ನವದೆಹಲಿ, ಫೆಬ್ರುವರಿ 16: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದಿನೇ ದಿನೇ ವೇಗವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಮನುಷ್ಯರ ಬಹುತೇಕ ಉದ್ಯೋಗಗಳು ಇಲ್ಲವಾಗುತ್ತವೆ ಎಂದು ಅನೇಕ ಟೆಕ್ ಪಂಡಿತರು ಹೇಳುತ್ತಿದ್ದಾರೆ. ಅಮೆರಿಕದಲ್ಲಿ ಹೆಸರಾಂತ ಉದ್ಯಮಿ ಮತ್ತು ಹೂಡಿಕೆದಾರರಾಗಿರುವ ಭಾರತ ಮೂಲದ ವಿನೋದ್ ಖೋಸ್ಲಾ (Vinod Khosla) ಕೂಡ ಇದೇ ಅಭಿಪ್ರಾಯ ಪುನರುಚ್ಚರಿಸಿದ್ದಾರೆ. ಇವರ ಪ್ರಕಾರ ಮುಂದಿನ ಐದು ವರ್ಷದಲ್ಲಿ ಐಟಿ ಸರ್ವಿಸ್ ಮತ್ತು ಬಿಪಿಒ ಕೆಲಸಗಳು ಬಹುತೇಕ ಪೂರ್ಣವಾಗಿ ಕಾಣೆಯಾಗುತ್ತವಂತೆ.

‘ಐಟಿ ಮತ್ತು ಬಿಪಿಒ ಸೇವೆಗಳು ಮುಂದಿನ ಐದು ವರ್ಷದಲ್ಲಿ ಮರೆಯಾಗುವುದು ಖಚಿತ. ಆ ನಂತರದ ಐದು ವರ್ಷದಲ್ಲಿ ಎಲ್ಲಾ ಕೆಲಸಗಳಲ್ಲೂ ಮತ್ತು ಎಲ್ಲಾ ವಿಷಯಗಳಲ್ಲೂ ಮನುಷ್ಯರಿಗಿಂತ ಎಐ ಉತ್ತಮ ಎನಿಸುತ್ತದೆ. ಯಂತ್ರಕ್ಕಿಂತ ಮನುಷ್ಯ ಚೆನ್ನಾಗಿ ಕೆಲಸ ಮಾಡುತ್ತಾನೆ ಎಂದು ಹೇಳಿಕೊಳ್ಳಲು ಹೆಚ್ಚೇನೂ ಇರದು’ ಎಂದು ಸನ್ ಮೈಕ್ರೋಸಿಸ್ಟಮ್ಸ್​ನ ಸಹ-ಸಂಸ್ಥಾಪಕರಾದ ಖೋಸ್ಲಾ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: AI Impact Summit: ಜನಕಲ್ಯಾಣಕ್ಕೆ ಎಐ ಬಳಕೆ, ಇದು ಭಾರತಕ್ಕಿರುವ ಬದ್ಧತೆ: ಅಶ್ವಿನಿ ವೈಷ್ಣವ್

‘ಎಐ ಏಜೆಂಟ್​ಗಳು ಅಕೌಂಟಿಂಗ್ ಮಾಡಬಲ್ಲವು. ಮಾನವ ಅಕೌಂಟೆಂಟ್​ಗಳಿಗಿಂತ ಈ ಯಂತ್ರಗಳಿಗೆ ಕ್ಷಮತೆ ಹೆಚ್ಚು. ಎಐ ಏಜೆಂಟ್ ಒಬ್ಬ ವೈದ್ಯನಾಗಬಹುದು, ಕ್ಯಾನ್ಸರ್ ರೋಗ ತಜ್ಞನಾಗಬಹುದು, ಮಾನಸಿಕ ಚಿಕಿತ್ಸಕನಾಗಬಹುದು. ಇವತ್ತು 25 ವರ್ಷದೊಳಗಿನ ವಯಸ್ಸಿನಲ್ಲಿರುವವರು 40ರ ಪ್ರಾಯಕ್ಕೆ ಬರುವಷ್ಟರಲ್ಲಿ ಭೂಮಿಯ ಮೇಲೆ ಬಹಳ ಕಡಿಮೆ ಉದ್ಯೋಗಗಳಿರುತ್ತವೆ’ ಎಂದು ಹೇಳುವ ವಿನೋದ್ ಖೋಸ್ಲಾ, ಆಟೊಮೇಶನ್ ಬಳಿಕ ಭೌತಿಕ ರೋಬೋಟಿಕ್ ಕಾರ್ಮಿಕರ ಆಗಮನ ಹೆಚ್ಚಾಗುತ್ತದೆ ಎಂದೂ ಭವಿಷ್ಯ ನುಡಿದಿದ್ದಾರೆ.

ಎಐ ಸೆಕ್ಟರ್​ನಲ್ಲಿ ಭಾರತಕ್ಕೇನಿದೆ ಅವಕಾಶ?

ಭಾರತ ಐಟಿ ಸರ್ವಿಸ್ ಮೇಲೆ ಅವಲಂಬಿತವಾಗಿದ್ದಂತಹ ದೇಶ. ಈಗ ಎಐ ಬಂದು ಐಟಿ ಸೆಕ್ಟರ್ ದೊಡ್ಡ ಅಲೆಯಲ್ಲಿ ಕೊಚ್ಚಿಕೊಂಡು ಹೋಗುವಂತಿದೆ. ಈ ಪರಿಸ್ಥಿತಿಯಲ್ಲಿ ಭಾರತವೇನು ಮಾಡಬೇಕು? ವಿನೋದ್ ಖೋಸ್ಲಾ ಅವರು ಎಐ ಅಧಾರಿತ ಉತ್ಪನ್ನ ಮತ್ತು ಸೇವೆಗಳನ್ನು ಜಗತ್ತಿಗೆ ರಫ್ತು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

‘ಪ್ರತಿಯೊಬ್ಬ ಭಾರತೀಯನಿಗೂ ಖರ್ಚೇ ಇಲ್ಲದೆ ವೈದ್ಯರ ಸೇವೆ ನೀಡಬಹುದು. ಪ್ರತೀ ಮಗುವಿಗೂ ಎಐನಿಂದ ಉಚಿತವಾಗಿ ಪಾಠ ಮಾಡಿಸಬಹುದು. ಪ್ರತಿಯೊಬ್ಬರಿಗೂ ವಕೀಲರ ಸೇವೆ ಸಿಗುವಂತೆ ಮಾಡಬಹುದು’ ಎಂದು ವಿನೋದ್ ಖೋಸ್ಲಾ ಅವರು ಎಐ ಉಪಯುಕ್ತತೆಯ ಅವಕಾಶವನ್ನು ವಿವರಿಸಿದ್ಧಾರೆ.

ಇದನ್ನೂ ಓದಿ: ಭಾರತದ ಎಐ ಇಂಪ್ಯಾಕ್ಟ್ ಸಮಿಟ್​ಗೆ ಇಡೀ ಜಗತ್ತು ಆಕರ್ಷಿತವಾಗಿರುವುದು ಯಾಕೆ? ಅಂಥದ್ದೇನು ವಿಶೇಷತೆ ಇದೆ?

ಅಮೆರಿಕ ಮತ್ತು ಚೀನಾದ ಪ್ರಾಬಲ್ಯದಿಂದ ತಪ್ಪಿಸಲು ಭಾರತವು ಸ್ವಂತವಾದ ಎಐ ಮಾಡಲ್​ಗಳನ್ನು ಅಭಿವೃದ್ದಿಪಡಿಸಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ವಿನೋದ್ ಖೋಸ್ಲಾ ಅವರು ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಖೋಸ್ಲಾ ಸಲಹೆ ಕೊಟ್ಟಿರುವ ರೀತಿಯಲ್ಲಿ ಭಾರತ ಸರ್ಕಾರ ಕೂಡ ಸಾರ್ವಭೌಮವಾದ ಎಐ ಮಾಡಲ್​ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಎಐ ಪ್ರಾಡಕ್ಟ್ ಮತ್ತು ಸೇವೆಗಳನ್ನು ನಿರ್ಮಿಸಿ ಜಗತ್ತಿಗೆ ಕೊಡಲು ಬೇಕಾದ ಕ್ರಮ ತೆಗೆದುಕೊಳ್ಳುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ತಾಜಾ ಮೆಂತ್ಯ ಸೊಪ್ಪು ಸಿಕ್ರೆ ಮನೆಯಲ್ಲಿಯೇ ಈ ರೀತಿ ಕಸೂರಿ ಮೇಥಿ ತಯಾರಿಸಿ – Kannada News | Make fresh Kasuri Methi at home from fenugreek leaves

ಗಿಡಮೂಲಿಯಾಗಿರುವ ಒಣಗಿದ ಮೆಂತ್ಯೆ ಅಥವಾ ಕಸೂರಿ ಮೇಥಿ (kasuri methi) ಅಡುಗೆಯ ರುಚಿ, ಘಮ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಸಖತ್‌ ಪ್ರಯೋಜನಕಾರಿ. ಹೌದು ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್‌ ಎ ಮತ್ತು ಸಿ ಯಂತಹ ಅಗತ್ಯವಾದ ಪೋಷಕಾಂಶಗಳಿದ್ದು, ಜೀರ್ಣಕ್ರಿಯೆಗೆ, ಮಧುಮೇಹ ನಿಯಂತ್ರಣಕ್ಕೆ,  ತೂಕ ನಷ್ಟಕ್ಕೆ, ಹೃದಯದ ಆರೋಗ್ಯಕ್ಕೆ ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಸಾಮಾನ್ಯವಾಗಿ ಬಹುತೇಕ ಎಲ್ಲರೂ ಈ ಕಸೂರಿ ಮೇಥಿಯನ್ನು ಅಂಗಡಿಯಿಂದ ಕೊಂಡುಕೊಳ್ಳುತ್ತಾರೆ. ಇದರ ಬದಲು ತಾಜಾ ಮೆಂತ್ಯ ಎಲೆಗಳನ್ನು ಬಳಸಿ ಶುದ್ಧ ಹಾಗೂ ಕಲಬೆರಕೆಯಿಲ್ಲದ ಕಸೂರಿ ಮೇಥಿಯನ್ನು ಮನೆಯಲ್ಲೇ ತಯಾರಿಸಬಹುದು. ಅದು ಹೇಗೆ ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ತಾಜಾ ಮೆಂತ್ಯ ಸೊಪ್ಪಿನಿಂದ ಕಸೂರಿ ಮೇಥಿ ಮಾಡುವುದು ಹೇಗೆ?

ಹಂತ- 1: ಕಸೂರಿ ಮೇಥಿ ತಯಾರಿಸಲು, ತಾಜಾ ಮತ್ತು ಹಸಿರಾದ ಮೆಂತ್ಯ ಸೊಪ್ಪು ಬೇಕಾಗುತ್ತವೆ.  ಇದಕ್ಕಾಗಿ ಮಾರುಕಟ್ಟೆಯಿಂದ ತಾಜಾ ಮೆಂತ್ಯ ಸೊಪ್ಪಿನ ಕಟ್ಟನ್ನು ತನ್ನಿ. ನಂತರ ಉತ್ತಮ ಗುಣಮಟ್ಟದ ಎಲೆಗಳನ್ನು ತೊಟ್ಟಿನಿಂದ ಬೇರ್ಪಡಿಸಿ, ಎಲೆಗಳನ್ನು ಮಾತ್ರವೇ ಸಂಗ್ರಹಿಸಿ. ತೊಟ್ಟಿನಿಂದ ಬೇರ್ಪಡಿಸಿದ ಎಲೆಗಳನ್ನು ಸ್ವಚ್ಛ ನೀರಿನಿಂದ ಎರಡು ಮೂರು ಬಾರಿ ತೊಳೆಯಿರಿ.

ಹಂತ- 2: ತೊಳೆದ ಮೆಂತ್ಯ ಸೊಪ್ಪನ್ನು ನೀರಿನ ಅಂಶ ಇಲ್ಲದ ರೀತಿಯಲ್ಲಿ ಚೆನ್ನಾಗಿ ಒಣಗಿಸಿ. ಎಲೆಗಳು ಸಂಪೂರ್ಣವಾಗಿ ಒಣಗಿದ ಬಳಿಕ ಮೈಕ್ರೋವೇವ್- ಟ್ರೇ ತೆಗೆದುಕೊಂಡು ಅವುಗಳನ್ನು ಟ್ರೇ ಮೇಲೆ ಸಮವಾಗಿ ಹರಡಿ. ಟ್ರೇ ಅನ್ನು ಮೈಕ್ರೋವೇವ್‌ನಲ್ಲಿ ಇರಿಸಿ 3 ನಿಮಿಷಗಳ ಕಾಲ ಬಿಸಿ ಮಾಡಿ. ನಂತರ ತಟ್ಟೆಯನ್ನು ಹೊರ ತೆಗೆದು ಎಲೆಗಳನ್ನು ತಿರುಗಿಸಿ ಮತ್ತೆ ಬಿಸಿ ಮಾಡಿ. ಈ ಪ್ರಕ್ರಿಯೆಯನ್ನು ಎರಡು ಅಥವಾ ಮೂರು ಬಾರಿ ಪುನರಾವರ್ತಿಸಿ.

 ಹಂತ – 3: ಮೈಕ್ರೋವೇವ್‌ನಿಂದ ಮೆಂತ್ಯ ಎಲೆಗಳನ್ನು ತೆಗೆದ ನಂತರ, ಅವುಗಳನ್ನು ತಣ್ಣಗಾಗಿಸಿ, ಬಳಿಕ ಆ ಒಣಗಿದ ಎಲೆಗಳನ್ನು ಕೊಂಚ ದೊಡ್ಡ ಕಣಗಳಿರುವ ಹಾಗೆ ಅಂಗೈನಿಂದ ಪುಡಿ ಮಾಡಿ. ಹೀಗೆ ಮಾಡಿದರೆ ಕಸೂರಿ ಮೇಥಿ ಸಿದ್ಧ, ತಯಾರಾದ ಈ ಕಸೂರಿ ಮೇಥಿಯನ್ನು ಗಾಳಿಯಾಡದ ಗಾಜಿನ ಡಬ್ಬಿಯಲ್ಲಿ ಸಂಗ್ರಹಿಸಿಡಿ. ಈ ವಿಧಾನವನ್ನು ಬಳಸಿಕೊಂಡು, ನೀವು ಕಸೂರಿ ಮೇಥಿಯನ್ನು ತಯಾರಿಸಿದರೆ ವರ್ಷಗಳ ವರೆಗೆ ಅದರ ಸುವಾಸನೆ ಮತ್ತು ತಾಜಾತನ ಹಾಗೆಯೇ ಇರುತ್ತದೆ.

ಇದನ್ನೂ ಓದಿ: ನೆಲದ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಟಿಪ್ಸ್‌ ಪಾಲಿಸಿ

 ಈ ವಿಧಾನವನ್ನು ಬಳಸಿಯೂ ಕಸೂರಿ ಮೇಥಿ ತಯಾರಿಸಬಹುದು:

ನೀವು ಮೈಕ್ರೋವೇವ್ ಬಳಸದೆಯೂ ಕಸೂರಿ ಮೇಥಿ ತಯಾರಿಸಬಹುದು. ಮೆಂತ್ಯ ಎಲೆಗಳನ್ನು ಸ್ವಚ್ಛಗೊಳಿಸಿದ ನಂತರ, ಅವುಗಳನ್ನು ವೃತ್ತಪತ್ರಿಕೆ ಅಥವಾ ಕಾಟನ್‌ ಬಟ್ಟೆಯ ಮೇಲೆ ಹರಡಿ, ಅದನ್ನು ಫ್ಯಾನ್ ಗಾಳಿಯಲ್ಲಿ ಒಣಗಿಸಿ ಮತ್ತು ಎಲೆಗಳು ಒಣಗಿದ ನಂತರ ಅವು ಗರಿಗರಿಯಾಗುವವರೆಗೆ ಬಿಸಿಲಿನಲ್ಲಿ ಒಣಗಿಸಿ. ನಂತರ, ಅವುಗಳನ್ನು ಕೈಗಳಿಂದ ಪುಡಿಮಾಡಿ ಗಾಳಿಯಾಡದ ಪಾತ್ರೆಯಲ್ಲಿ ಸಂಗ್ರಹಿಸಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಕೇಸ್​: ಹಂತಕ ಫಯಾಜ್​​ಗೆ ಮತ್ತೆ ಜೈಲೇ ಗತಿ – Kannada News | Neha Hiremath Murder: Fayaz Bail Rejected by Dharwad High Court

ನೇಹಾ ಹಿರೇಮಠ, ಆರೋಪಿ ಫಯಾಜ್Image Credit source: google

ಹುಬ್ಬಳ್ಳಿ, ಫೆಬ್ರವರಿ 16: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ (Neha Hiremath Murder Case) ದೇಶಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಸದ್ಯ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು 3ನೇ ಬಾರಿಗೆ ಧಾರವಾಡ ಹೈಕೋರ್ಟ್​ ಪೀಠ (Dharwad High Court) ತಿರಸ್ಕರಿಸಿ ಇಂದು ಆದೇಶ ಹೊರಡಿಸಿದೆ. ಆ ಮೂಲಕ ಫಯಾಕ್​​ಗೆ ಮತ್ತೆ ಜೈಲೇ ಗತಿ ಆಗಿದೆ.

ಪ್ರಕರಣ ಹಿನ್ನೆಲೆ

2024 ಏಪ್ರಿಲ್ 18ರಂದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಕ್ಯಾಂಪಸ್​ನಲ್ಲಿ‌ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆಯಾಗಿತ್ತು. ಫಯಾಜ್ ಅನ್ನೋ ಆಕೆಯ ಸಹಪಾಠಿ ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. ಈ ಪ್ರಕರಣ ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅನೇಕ ಕಡೆ ಹೋರಾಟಗಳು ನಡೆದಿದ್ದವು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸರ್ಕಾರ, ಆದಷ್ಟು ಬೇಗ ಪ್ರಕರಣದ ತನಿಖೆ ಮುಗಿಸಿ ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುತ್ತೇವೆ ಎಂದಿತ್ತು. ಇನ್ನು ಘಟನೆ ನಂತರ ಹುಬ್ಬಳ್ಳಿ ವಿದ್ಯಾನಗರ ಠಾಣೆ ಪೊಲೀಸರು ಆರೋಪಿ ಫಯಾಜ್​​ನನ್ನು ಬಂಧಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣ: ಹಂತಕ ಫಯಾಜ್ ಜಾಮೀನು ಅರ್ಜಿ ವಜಾ

ಇನ್ನು ಕಳೆದ ಆಗಸ್ಟ್​ನಲ್ಲಿ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆರೋಪಿ ಫಯಾಜ್ ಜಾಮೀನು ಅರ್ಜಿ ಸಲ್ಲಿಸಿದ್ದ. ಆದರೆ ನ್ಯಾಯಾಲಯ ಆತನ ಜಾಮೀನು ಅರ್ಜಿ ತಿರಸ್ಕಾರ ಮಾಡಿತ್ತು. ನಂತರ ಆತ ಹೈಕೋರ್ಟ್ ಮೆಟ್ಟಿಲೇರಿದ್ದ. ಅಲ್ಲಿ ಕೂಡ ಆತನ ಜಾಮೀನು ಅರ್ಜಿ ತಿರಸ್ಕಾರವಾಗಿತ್ತು. ಸದ್ಯ ಆರೋಪಿ ಜೈಲಿನಲ್ಲಿದ್ದಾನೆ.

ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಇನ್ನು ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ಸರ್ಕಾರ ವಿಶೇಷ ಸರ್ಕಾರಿ ಅಭಿಯೋಜಕರನ್ನು ಕೂಡ ನಿಯೋಜಿಸಿದೆ. ಆದರೆ ಪ್ರಕರಣದ ತನಿಖೆ ಮಾತ್ರ ಆರಂಭವಾಗಿರಲಿಲ್ಲ. ಇತ್ತೀಚೆಗೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸಂತ್ರ ನ್ಯಾಯಾಧೀಶರು, ಟ್ರಯಲ್​ಗೆ ದಿನಾಂಕ್ ಫಿಕ್ಸ್​ ಮಾಡಿದ್ದರು. ಅದರಂತೆ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ಇನ್ನು ಕಳೆದ ತಿಂಗಳು ಹುಬ್ಬಳ್ಳಿಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಟ್ರಯಲ್ ಆರಂಭಿಸಿದ್ದರು. ಸಾಕ್ಷಿಗಳ ವಿಚಾರಣೆ ನ್ಯಾಯಾಲಯದಲ್ಲಿ ಆರಂಭವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸುಳ್ಳು ಕೇಸ್​​, ಸುದೀರ್ಘ ಹೋರಾಟ: ಸರ್ಕಾರಿ ನೌಕರಿಯಲ್ಲಿದ್ದ ಮಹಿಳೆಗೆ ಬಾಕಿ ಭತ್ಯೆ ಸಿಕ್ಕಿದ್ದು ಸತ್ತು 3 ವರ್ಷಗಳ ಬಳಿಕ! – Kannada News | Mysuru Govt Officer Malinis 200 Bribery Case: Justice After 17 Years; Pending Salary Released 3 Years After Her Death

ಮೈಸೂರು, ಫೆಬ್ರವರಿ 16: ತಮ್ಮದಲ್ಲದ ತಪ್ಪಿಗೆ, ತಾವು ಮಾಡದ 200 ರೂ. ಲಂಚದ ಆರೋಪದಿಂದ 17 ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಡಿದ ಮೈಸೂರಿನ ಪ್ರಾಮಾಣಿಕ ಮಹಿಳಾ ಸರ್ಕಾರಿ ಅಧಿಕಾರಿ ಮಾಲಿನಿ ಪ್ರಕರಣ ಇದೀಗ ಮತ್ತೆ ಚರ್ಚೆಗೆ ಬಂದಿದೆ. ಲೋಕಾಯುಕ್ತ ಮಾಡಿದ ಲಂಚದ ಆರೋಪದಿಂದಾಗಿ ಅಮಾನತು, ಉದ್ಯೋಗ ಕಳೆದುಕೊಳ್ಳುವಿಕೆ, ಆರೋಗ್ಯ ಸಮಸ್ಯೆಗಳು ಸೇರಿದಂತೆ ಹಲವು ಸಂಕಷ್ಟಗಳನ್ನು ಅನುಭವಿಸಿದ ಬಳಿಕ ಹಲವು ವರ್ಷಗಳ ನಂತರ ನ್ಯಾಯಾಲಯದಿಂದ ನಿರಪರಾಧಿ ಎಂದು ಘೋಷಿಸಲ್ಪಟ್ಟರೂ ಅವರ ಬದುಕಿಗೆ ಆಗಿದ್ದ ಗಂಭೀರ ಹಾನಿಗೆ ಮಾತ್ರ ನ್ಯಾಯ ಸಿಗಲೇ ಇಲ್ಲ. ಮಾಲಿನಿ ಮೃತಪಟ್ಟು ಮೂರು ವರ್ಷಗಳ ನಂತರ ಸರ್ಕಾರದಿಂದ ಬಾಕಿ ಹಣ ಬಿಡುಗಡೆ ಮಾಡಿರುವುದು ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತಂದಿದೆ.

200 ರೂ. ಆರೋಪದಿಂದ ಆರಂಭವಾದ ಸಂಕಷ್ಟ

ಮೈಸೂರಿನ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಾಲಿನಿ ವಿರುದ್ಧ 200 ರೂಪಾಯಿ ಲಂಚದ ಆರೋಪ ಕೇಳಿಬಂದಿತ್ತು. ಅಲ್ಪಸಂಖ್ಯಾತರ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ನಿಯಮಾನುಸಾರ ಅರ್ಜಿ ತಿರಸ್ಕರಿಸಿದ್ದ ಹಿನ್ನೆಲೆ, ಬಳಿಕ ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಈ ಪ್ರಕರಣ ತೀವ್ರತೆ ಪಡೆದಿತ್ತು. ಲಂಚ ಸ್ವೀಕರಿಸಿದ್ದ ವ್ಯಕ್ತಿ ಬೇರೆ ಆಗಿದ್ದರೂ, ತನಿಖೆಯಲ್ಲಿ ಮಾಲಿನಿ ಅವರನ್ನು ಸಹ ಆರೋಪಿಯಾಗಿ ಸೇರಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌

ಲಂಚ ಪ್ರಕರಣದಿಂದಾಗಿ ಅಮಾನತು, ಸೇವೆಯಿಂದ ವಜಾ

ಪ್ರಕರಣದ ನಂತರ ಮಾಲಿನಿ ಅಮಾನತುಗೊಂಡು, ಪದೋನ್ನತಿ ಹಾಗೂ ವೇತನ ಹೆಚ್ಚಳ ನಿಂತುಹೋಯಿತು. 2007ರಲ್ಲಿ ಸರ್ಕಾರಿ ಸೇವೆಯಿಂದಲೇ ವಜಾಗೊಂಡರು. ಈ ನಡುವೆ ಕುಟುಂಬ ಆರ್ಥಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಯಿತು.

ಸುದೀರ್ಘ ಕಾನೂನು ಹೋರಾಟ

ಸ್ಥಳೀಯ ನ್ಯಾಯಾಲಯ ಅವರನ್ನು ಅಪರಾಧಿ ಎಂದೇ ಘೋಷಿಸಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ಮಾಲಿನಿ ಹಾಗೂ ಅವರ ಪತಿ ದೇವ ಪ್ರಕಾಶ್, ಹಲವು ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಟ ನಡೆಸಿದರು. ಪ್ರಕರಣದಲ್ಲಿ 300ಕ್ಕೂ ಹೆಚ್ಚು ವಿಚಾರಣೆಗಳು ನಡೆದಿದ್ದು, ದಶಕಕ್ಕಿಂತ ಹೆಚ್ಚು ಕಾಲ ಕಾನೂನು ಪ್ರಕ್ರಿಯೆ ಮುಂದುವರಿಯಿತು.

ಹೈಕೋರ್ಟ್‌ನಲ್ಲಿ ನಿರಪರಾಧಿ ಎಂದು ತೀರ್ಪು!

ಕೊನೆಗೆ ಕರ್ನಾಟಕ ಹೈಕೋರ್ಟ್ 2012ರಲ್ಲಿ ನೀಡಿದ ತೀರ್ಪಿನಲ್ಲಿ, ಮಾಲಿನಿ ವಿರುದ್ಧ ಲಂಚ ಪಡೆದ ಅಥವಾ ಕೇಳಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿ ಅವರನ್ನು ನಿರಪರಾಧಿ ಎಂದು ಘೋಷಿಸಿತು. ಈ ತೀರ್ಪಿನ ಬಳಿಕ ಅವರ ಉದ್ಯೋಗ, ಬಡ್ತಿ ಹಾಗೂ ಸಂಬಳ ಸೇರಿದಂತೆ ಹಲವಾರು ಹಕ್ಕುಗಳನ್ನು ಮರುಸ್ಥಾಪಿಸುವಂತೆ ಆದೇಶಿಸಲಾಗಿತ್ತು.

ಆರೋಗ್ಯ ಹದಗೆಟ್ಟು ಮರಣ

ಪ್ರಕರಣದಿಂದ ಉಂಟಾದ ಮಾನಸಿಕ ಒತ್ತಡದಿಂದ ಮಾಲಿನಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದರು. ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಅನೇಕ ಬಾರಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು. ಬಳಿಕ ಅವರು 2023ರಲ್ಲಿ ನಿಧನರಾದರು.

ಸಾವಿನ ವರೆಗೂ ಬಾರದ ಬಾಕಿ ಹಣ!

ನ್ಯಾಯಾಲಯದ ತೀರ್ಪಿನ ನಂತರವೂ ಬಾಕಿ ಉಳಿದಿದ್ದ ಸಂಬಳ ಹಾಗೂ ಭತ್ಯೆಗಳನ್ನು ಸರ್ಕಾರ ವರ್ಷಗಳ ನಂತರ, ಅವರ ಸಾವಿನ ಬಳಿಕ ಬಿಡುಗಡೆ ಮಾಡಿದೆ. ಇನ್ನೂ ಕೆಲವು ಭತ್ಯೆಗಳು ಬಾಕಿಯಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಈ ಪ್ರಕರಣವು ಸುಳ್ಳು ಆರೋಪ ಮತ್ತು ದೀರ್ಘ ಕಾನೂನು ಪ್ರಕ್ರಿಯೆ ಸರ್ಕಾರಿ ನೌಕರರ ಜೀವನದ ಮೇಲೆ ಯಾವ ರೀತಿಯ ಪರಿಣಾಮ ಉಂಟು ಮಾಡಬಹುದು ಎಂಬ ಚರ್ಚೆ ಹುಟ್ಟುಹಾಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:08 pm, Mon, 16 February 26

Source link

Ranji Trophy Semifinal: ಸ್ಮರಣ್ ಶತಕ; ಬೃಹತ್​ ಮೊತ್ತದತ್ತ ಕರ್ನಾಟಕ – Kannada News | Ranji Semifinal 2026:Smaran Ravichandran Century Lead Karnataka’s Mammoth Total

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಮೊದಲ ದಿನ ತಂಡದ ಪರ ಎರಡು ಶತಕಗಳು ದಾಖಲಾದರೆ, ಎರಡನೇ ದಿನವೂ ಎರಡು ಶತಕಗಳು ಸಿಡಿದವು. ಮೊದಲ ದಿನ ಕೆಎಲ್ ರಾಹುಲ್ 141 ರನ್ ಬಾರಿಸಿದರೆ, ನಾಯಕ ದೇವದತ್ ಪಡಿಕ್ಕಲ್ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದರು. ಎರಡನೇ ದಿನ ಬ್ಯಾಟಿಂಗ್‌ ಮುಂದುವರೆಸಿದ ಪಡಿಕ್ಕಲ್ ದಾಖಲೆಯ ದ್ವಿಶತಕ ಬಾರಿಸಿದರೆ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸ್ಮರಣ್ ರವಿಚಂದ್ರನ್ ಕೂಡ ಸ್ಮರಣೀಯ ಶತಕ ಸಿಡಿಸಿದರು.

ಎರಡನೇ ದಿನದಾಟದಲ್ಲಿ ಕರುಣ್ ನಾಯರ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ಸ್ಮರಣ್, ನಾಯಕ ದೇವದತ್ ಪಡಿಕ್ಕಲ್ ಜೊತೆ ಸೇರಿ ಉತ್ತಮ ಜೊತೆಯಾಟ ಕಟ್ಟಿದರು. ಇವರಿಬ್ಬರು 59 ರನ್​ಗಳ ಜೊತೆಯಾಟ ಕಟ್ಟಿದರು. ನಾಯಕ ಪಡಿಕ್ಕಲ್ ಔಟಾದ ಬಳಿಕವೂ ತಮ್ಮ ತಾಳ್ಮೆಯ ಆಟವನ್ನು ಮುಂದುವರೆಸಿದ ಸ್ಮರಣ್ 85 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆ ಬಳಿಕ 150 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದ ಸ್ಮರಣ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 5ನೇ ಶತಕವನ್ನು ದಾಖಲಿಸಿದರು.

ಇದು ಈ ಆವೃತ್ತಿಯಲ್ಲಿ ಸ್ಮರಣ್ ಅವರ ಮೂರನೇ ಶತಕವಾಗಿದ್ದು, ಎರಡು ದ್ವಿಶತಕಗಳನ್ನು ಬಾರಿಸಿದ್ದಾರೆ. ಸ್ಮರಣ್ ಅವರ ಈ ಶತಕದಿಂದಾಗಿ ಕರ್ನಾಟಕ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 600 ರನ್​ಗಳ ಗಡಿ ದಾಟಿದ್ದು, ಪಂದ್ಯದ ಮೇಲೆ ಹಿಡಿತ ಸಾಧಿಸಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಕರ್ನಾಟಕ ತಂಡ ಎರಡನೇ ದಿನದಾಟದ ಟೀ ವಿರಾಮದ ವೇಳೆಗೆ 6 ವಿಕೆಟ್​ಗಳನ್ನು ಕಳೆದುಕೊಂಡು 661 ರನ್ ಕಲೆಹಾಕಿದೆ. ಸ್ಮರಣ್ 104 ರನ್​ಗಳೊಂದಿಗೆ ಬ್ಯಾಟಿಂಗ್‌ ಮುಂದುವರೆಸಿದ್ದಾರೆ.

Source link