Category Archives: Blog

Your blog category

U19 World Cup: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಯುವ ಭಾರತ ತಂಡ ಇತಿಹಾಸ ಸೃಷ್ಟಿಸಿದೆ. ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಬರೋಬ್ಬರಿ 100 ರನ್​ಗಳಿಂದ ಸೋಲಿಸಿತು. ಇದರೊಂದಿಗೆ, ಭಾರತ ಆರನೇ ಬಾರಿಗೆ ಅಂಡರ್ 19 ವಿಶ್ವಕಪ್ ಎತ್ತಿಹಿಡಿಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 411 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 311 ರನ್​ಗಳಿಗೆ ಆಲೌಟ್ ಆಗುವ ಮೂಲಕ 100 ರನ್​ಗಳಿಂದ ಸೋಲೊಪ್ಪಿಕೊಂಡಿತು. ಭಾರತದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್​ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ವೈಭವ್ ಅವರ ಈ ಇನ್ನಿಂಗ್ಸ್‌ನಲ್ಲಿ 15 ಸಿಕ್ಸರ್‌ಗಳು ಮತ್ತು 15 ಬೌಂಡರಿಗಳು ಸೇರಿದ್ದವು.

Source link

ಬಡವರ ಬಾದಾಮಿ ಬೆಳೆದ ರೈತರಿಗೀಗ ಸಂಕಷ್ಟ: ದಲ್ಲಾಳಿ-ಕಮಿಷನ್ ಏಜೆಂಟ್ ಮೋಸದಿಂದ ಕಂಗಾಲು – Kannada News | Yadgir Groundnut Farmers Protest Price Drop: APMC Agents Accused of Exploitation

ಶೇಂಗಾ, ರೈತರ ಪ್ರಭಟನೆImage Credit source: tv9 kannada

ಯಾದಗಿರಿ, ಫೆಬ್ರವರಿ 06: ರೈತ ದೇಶದ ಬೆನ್ನೆಲಬು ಅಂತಾರೆ, ಆದರೆ ರೈತರು ಬೆಳೆಗೆ ಸರಿಯಾದ ಬೆಲೆ ಸಿಗುವುದಿಲ್ಲ. ಇದೆ ಕಾರಣಕ್ಕೆ ರೈತರು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತೆ. ಏಕೆಂದರೆ ಯಾದಗಿರಿ ಜಿಲ್ಲೆಯ ರೈತರು ಸಾವಿರಾರು ರೂ. ಖರ್ಚು ಮಾಡಿ ಕಷ್ಟ ಪಟ್ಟು ಶೇಂಗಾ (Groundnut) ಬೆಳೆಯನ್ನ ಬೆಳೆದರೆ ಸರಿಯಾದ ಬೆಲೆ ಸಿಗುತ್ತಿಲ್ಲ. ದಲ್ಲಾಳಿ ಹಾಗೂ ಕಮಿಷನ್ ಏಜೆಂಟ್​ಗಳ ಮೋಸಕ್ಕೆ ಕಂಗಲಾಗಿ ಹೋಗಿದ್ದಾರೆ. ಹೀಗಾಗಿ ಕೊನೆಗೂ ರೊಚ್ಚಿಗೆದ್ದ ರೈತರು ಸರ್ಕಾರ ಹಾಗೂ ಕಮಿಷನ್ ಏಜೆಂಟ್​ಗಳ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಯಾದಗಿರಿ ನಗರದ ಎಪಿಎಂಸಿ ಮುಂದೆ ಇಂದು ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ ತಮಗೆ ಆಗುತ್ತಿರುವ ಅನ್ಯಾಯವನ್ನ ತೋಡಿಕೊಂಡಿದ್ದಾರೆ. ರೈತರು ಈ ರೀತಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡುವುದಕ್ಕೆ ಕಾರಣವೇ ಶೇಂಗಾ ಬೆಳೆಯ ದರ ಕುಸಿತ.

ಕ್ವಿಂಟಲ್​ಗೆ ಕೇವಲ 4 ರಿಂದ 6 ಸಾವಿರ ರೂ

ಜಿಲ್ಲೆಯಲ್ಲಿ ಸದ್ಯ ಶೇಂಗಾ ಬೆಳೆಯ ರಾಶಿ ನಡೆಯುತ್ತಿದೆ. ಹೀಗಾಗಿ ರೈತರು ತಾವು ಬೆಳೆದ ಸಾವಿರಾರು ಕ್ವಿಂಟಲ್ ಶೇಂಗಾ ಬೆಳೆಯನ್ನ ನಗರದ ಕೃಷಿ ಮಾರುಕಟ್ಟೆ ತೆಗೆದುಕೊಂಡು ಬರುತ್ತಿದ್ದಾರೆ. ಆದರೆ ಶೇಂಗಾ ಮಾರಾಟಕ್ಕೆ ಮುಂದಾದ ರೈತರಿಗೆ ಶಾಕ್ ಎದುರಾಗಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ದಿಢೀರ್ ಶೇಂಗಾ ಬೆಳೆಯ ದರ ಕುಸಿತವಾಗಿದೆ. ಕ್ವಿಂಟಲ್​ಗೆ 12 ಸಾವಿರಕ್ಕೆ ಮಾರಾಟವಾಗುತ್ತಿದ್ದ ಬೆಳೆ ಈಗ ಏಕಾಏಕಿ ಕ್ವಿಂಟಲ್​ಗೆ ಕೇವಲ 4 ರಿಂದ 6 ಸಾವಿರಕ್ಕೆ ಮಾರಾಟವಾಗುತ್ತಿದೆ. ಇದು ರೈತರಿಗೆ ಶಾಕ್ ಕೊಟ್ಟಿದೆ. ಕಷ್ಟಪಟ್ಟು ಸಾವಿರಾರು ರೂ. ಖರ್ಚು ‌ಮಾಡಿ ಬೆಳೆ ತಂದು ಮಾರಾಟ ಮಾಡಲು ಬಂದರೆ ಬೆಳೆಗೆ ಬೆಲೆನೇ ಕೊಡ್ತಾಯಿಲ್ಲ. ಹೀಗಾಗಿ ನಾವೆಲ್ಲಾ ವಿಷ ಕುಡಿದು ಸಾಯುವುದು ಒಂದೇ ಉಳಿದಿದೆ ಅಂತ ರೈತ ಮಲ್ಲಿಕಾರ್ಜುನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ

ಇನ್ನು ರೈತರು ಕಳೆದ ಮೂರು ತಿಂಗಳ ಹಿಂದೆ ಶೇಂಗಾ ಬೆಳೆಯನ್ನ ಬೆಳೆಯುವುದಕ್ಕೆ ಇದೆ ಎಪಿಎಂಸಿಯ ಕಮಿಷನ್ ಏಜೆಂಟ್​ಗಳಿಂದ ಕ್ವಿಂಟಲ್​ಗೆ 12 ಸಾವಿರ ರೂ. ಕೊಟ್ಟು ಶೇಂಗಾ ಬೀಜವನ್ನ ಖರೀದಿ ಮಾಡಿದ್ದರು. ಆದರೆ ಅದೇ ರೈತರು ಬೆಳೆದ ಶೇಂಗಾ ಬೆಳೆಯನ್ನ ಮಾರಾಟ ಮಾಡಲು ಬಂದರೆ ದಿಢೀರ್ ದರವನ್ನ ಇಳಿಸಲಾಗಿದೆ.

ಏಜೆಂಟ್​ರಿಂದ ರೈತರಿಗೆ ಮೋಸ

ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಶೇಂಗಾ ಖರೀದಿ ಮಾಡುವುದಕ್ಕೆ ವ್ಯಾಪಾರಸ್ಥರು ಬಂದಿದ್ದರೂ, ಇದೆ ಎಪಿಎಂಸಿ ಯಾರ್ಡ್​ನ ವರ್ತಕರು ಹಾಗೂ ಕಮಿಷನ್ ಏಜೆಂಟ್​ಗಳು ಬೇರೆ ಕಡೆಯಿಂದ ಬಂದಿದ್ದ ವ್ಯಾಪಾರಸ್ಥರನ್ನ ವಾಪಸ್ ಕಳುಹಿಸುವ ಕೆಲಸ ಮಾಡಿದ್ದಾರೆ. ಏಕೆಂದರೆ ಹೊರಗಿನಿಂದ ಬಂದಿದ್ದ ವ್ಯಾಪಾರಸ್ಥರು ಕ್ವಿಂಟಲ್​ಗೆ 11 ರಿಂದ 13 ಸಾವಿರ ರೂ ಕೊಟ್ಟು ಖರೀದಿ ಮಾಡಲು ಮುಂದಾಗಿದ್ದರು. ಇದು ಸ್ಥಳೀಯ ಕಮಿಷನ್ ಏಜೆಂಟ್​ಗಳಿಗೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಖರೀದಿ ಮಾಡಲು ಬಿಡದೆ ವಾಪಸ್ ಕಳುಹಿಸಿದ್ದಾರೆ. ಆ ಮೂಲಕ ರೈತರಿಗೆ ಮೋಸ ಮಾಡಿದ್ದಾರೆ.

ಹೊರಗಿನಿಂದ ಬಂದ ವ್ಯಾಪಾರಸ್ಥರು ಹೆಚ್ಚಿನ ದರಕ್ಕೆ ಖರೀದಿ ಮಾಡಿದರೆ ರೈತರಿಗೆ ಲಾಭವಾಗುತ್ತಿತ್ತಿ. ಆದರೆ ಸ್ಥಳೀಯ ಏಜೆಂಟ್​ಗಳಿಂದ ದೋಖಾ ಆಗಿದೆ. ಇದೆ ಕಾರಣಕ್ಕೆ ಇಂದು ಎಪಿಎಂಸಿ ಮುಂದೆ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಸಂಘಟನೆ ನೇತೃತ್ವದಲ್ಲಿ ನೂರಾರು ರೈತರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ. ರೈತರ ಪ್ರತಿಭಟನೆಯಿಂದ ಎರಡು ಗಂಟೆ ಕಿ.ಮೀ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು

ಒಟ್ಟಿನಲ್ಲಿ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದಂತಾಗಿದೆ. ಮೊದಲೇ ಪ್ರವಾಹದಿಂದ ಮುಂಗಾರು ಬೆಳೆ ಕಳೆದುಕೊಂಡು ಕಂಗಲಾದ ಅನ್ನದಾರಿಗೆ ಹಿಂಗಾರು ಬೆಳೆಯಾಗಿ ಶೇಂಗಾ ಬೆಳೆ ಕೈಹಿಡಿದಿತ್ತು. ಆದರೆ ಈಗ ದಿಢೀರ್ ದರ ಕುಸಿತ ಆಗಿದ್ದಕ್ಕೆ ರೈತರು ಕಂಗಲಾಗುವಂತೆ ಮಾಡಿದೆ. ಹೀಗಾಗಿ ಅಧಿಕಾರಿಗಳು ಹಾಗೂ ಸರ್ಕಾರ ಮಧ್ಯಪ್ರವೇಶಿಸುವಂತೆ ಒತ್ತಾಯಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಂತ್ರಸ್ತರ ಸೂರಿಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ – Kannada News | Hindu Workers Angry for Illegal mosque Build In Navanagar Bagalkot

ಬಾಗಲಕೋಟೆ , (ಫೆಬ್ರವರಿ 06): ಬಾಗಲಕೋಟೆ  ಜನರು ಆಲಮಟ್ಟಿ ಜಲಾಶಯಕ್ಕೆ ಮನೆ ಮಠ ಆಸ್ತಿ ಪಾಸ್ತಿ ಹಿರಿಯರ ಕನಸು ಎಲ್ಲವನ್ನು ಕೃಷ್ಣಾರ್ಪಣೆ ಮಾಡಿ ಊರು ಬಿಟ್ಟವರು. ಆ ಸಂತ್ರಸ್ತರ ಪುನರ್ವಸತಿಗೆ ನಿರ್ಮಾಣವಾದ ನಗರವೇ ನವನಗರ. ಮನೆಗಳ‌ ನಿರ್ಮಾಣಕ್ಕೆ ಅಂತ‌ ಇರುವ ಜಾಗದಲ್ಲೂ ಮಸೀದಿ (mosque) ನಿರ್ಮಾಣ ಕಾಮಗಾರಿ ನಡೆಯುತ್ತಿವೆ. ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ.

ನವನಗರದಲ್ಲಿ ಮನೆಗಳಿಗೆ ಅಂತ ಸಂತ್ರಸ್ತರಿಗೆ ನೀಡಿದ ಜಾಗವನ್ನು ಹೆಚ್ಚಿನ ಹಣ ಕೊಟ್ಟು ‌ಖರೀದಿಸಲಾಗತ್ತಿದ್ದು, ನಂತರ ಆ ಜಾಗದಲ್ಲಿ‌ ಸದ್ದಿಲ್ಲದೇ ಮಸೀದಿ ಕಟ್ಟಡ ‌ಕಾಮಗಾರಿಗಳು ಶುರುವಾಗ್ತಿವೆ.ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ.ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ.ಎಲ್ಲೆಂದರಲ್ಲಿ ಮಸೀದಿ ಕಟ್ಟಿಸಿ ಸ್ಪೀಕರ್ ಅಳವಡಿಸಿ ಆಜಾನ್ ಕೂಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ವೃದ್ದರ ಆರೋಗ್ಯದ ಮೇಲೆ ತೊಂದರೆಯಾಗುತ್ತದೆ.ಕೂಡಲೆ ಇಂತಹ ಕೃತ್ಯಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ?

ಚಂಡಿಗಢ ಮಾದರಿಯಲ್ಲಿ ನವನಗರವನ್ನು ನಿರ್ಮಾಣ ಮಾಡಿ ಸಂತ್ರಸ್ತರಿಗೆ ನಿವೇಶನಗಳನ್ನ ಹಂಚಿಕೆ ಮಾಡಿದೆ.ಇನ್ನೂ ಹಲವು ಸಂತ್ರಸ್ತರಿಗೆ ನಿವೇಷನಗಳ ಹಂಚಿಕೆ ಆಗಬೇಕಿದೆ.ಇದರ ನಡುವೆಯೇ ಈಗ ಸೆಕ್ಟರ್ ಮಾದರಿಯಲ್ಲಿ ನಿರ್ಮಾಣಗೊಂಡಿರುವ ನವನಗರದಲ್ಲಿ ಬಾಗಲಕೋಟೆ ಪಟ್ಟಣದ ಅಭಿವೃದ್ಧಿ ಪ್ರಾಧಿಕಾರ ಅನಧಿಕೃತ ಮಸೀಸಿಗಳಿಗೆ ಸ್ಥಾಪನೆಗೆ ಪರವಾನಿಗೆ ನೀಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿ ಅಕ್ರೋಶ ಹೊರ ಹಾಕಿದ್ದಾರೆ.

ಈ ಸಂಬಮಧ ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಎರಡು ದಿನದ ಹಿಂದೆ ಪ್ರತಿಭಟನೆ ನಡೆಸಿದ್ದು, ರಾಜಕೀಯ ಒತ್ತಡಕ್ಕೆ ಮಣಿದು ನಿಯಮಾವಳಿಗಳನ್ನು ಗಾಳಿಗೆ ತೂರಿ ಅಧಿಕಾರಿಗಳು ಬೇಕಾಬಿಟ್ಟಿ ಪರವಾನಗಿ ನೀಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ‌ಇದೇ ರೀತಿ ನಿವೇಶನ ಜಾಗದಲ್ಲಿ ಹಳೆ ಬಾಗಲಕೋಟೆಯಲ್ಲೂ ಮಸೀದಿ ನಿರ್ಮಾಣ ಹಿನ್ನೆಲೆ ಕಳೆದ ವರ್ಷ ಜುಲೈ ನಲ್ಲಿ ನಗರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು.ಈಗ ಬಿಟಿಡಿಎ ಎದುರು ನಡೆಸಲಾಗಿದೆ.ಇಷ್ಟಾದರೂ ಅಲ್ಲಲ್ಲಿ ಮಸೀದಿ ನಿರ್ಮಾಣ ಕಾರ್ಯ ನಡೆಯುತ್ತಲೇ ಇವೆ.

ಈ ಬಗ್ಗೆ ಮಾತಾಡಿದ ಬಾಗಲಕೋಟೆಯ ಮಾಜಿ ಶಾಸಕ ವೀರಣ್ಣ ಚರಂತಿಮಠ, ಇದಕ್ಕೆ ಬೇರೆ ಕಡೆಯಿಂದ ಫಂಡಿಂಗ್ ಆಗುತ್ತಿದೆ.ಫಂಡಿಂಗ್ ಆಗುತ್ತಿರೋದರಿಂದಲೇ ಮನೆ‌ ಜಾಗ ಖರೀದಿ ಮಾಡಿ ಮಸೀದಿ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಬಿಟಿಡಿಎ ಆರ್ ಒ‌ ಪ್ರತಿಕ್ರಿಯಿಸಿದ್ದು, ಒಂದೊಂದು ಸೆಕ್ಟರ್ ನಲ್ಲಿ ಧಾರ್ಮಿಕ ಉದ್ದೇಶಕ್ಕಾಗಿ ಕಾರ್ನರ್ ಸೈಟ್ ಬಿಡಲಾಗಿದೆ. ಹಿಂದೆ‌ ಬಿಟಿಡಿಎ ಆಡಳಿತ ‌ಮಂಡಳಿ ನಿರ್ಧಾರ ಕೈಗೊಂಡಿದೆ.ನಿವೇಶನಕ್ಕಾಗಿ ನೀಡಿದ ಜಾಗದಲ್ಲಿ ‌ಮಸೀದಿ ಕಟ್ಟಡ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಕಟ್ಟಡ ಅನುಮತಿ ‌ಪಡೆದು ಕಟ್ಟಬೇಕು.ಇಂಜಿನಿಯರಿಂಗ್ ಸೆಕ್ಷನ್ ಅಧಿಕಾರಿಗಳನ್ನು ಕಳಿಸಿ ಪರಿಶೀಲನೆ ‌ನಡೆಸಿ ಬಿಟಿಡಿಎ ಮುಖ್ಯ ಇಂಜಿನಿಯರ್ ಅವರಿಗೆ ಮಾಹಿತಿ‌ ನೀಡುವುದಾಗಿ ತಿಳಿಸಿದ್ದಾರೆ.

ಒಟ್ಟಾರೆ ಅನಧಿಕೃತ ಮಸೀದಿಗಳ ತೆರವುಗೊಳಿಸಲು ಸ್ಥಳೀಯರು ಪಟ್ಟು ಹಿಡಿದಿದ್ದು,ಕ್ರಮ ಜರುಗಿಸದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮುಂದೆ ಇದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Pariksha Pe Charcha 2026: ಇಂದು ನಾನು ಕಷ್ಟಪಟ್ಟು ‘ವಿಕಸಿತ ಭಾರತ’ದ ಬುನಾದಿ ಹಾಕುತ್ತಿರುವುದು ನಿಮಗಾಗಿ

ದೆಹಲಿ,ಫೆ.6: ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೇ ಚರ್ಚಾ’ 2026 ರ ಸಂವಾದದಲ್ಲಿ ವಿದ್ಯಾರ್ಥಿಗಳನ್ನು ಕೇವಲ ಓದುವ ಮಕ್ಕಳಂತೆ ನೋಡದೆ, ದೇಶದ ಭವಿಷ್ಯದ ನಿರ್ಧಾರಕರು ಎಂಬಂತೆ ಮಾತನಾಡಿದ್ದಾರೆ. ಅವರ ಭಾಷಣದ ಈ ಭಾಗವು ಅತ್ಯಂತ ಸ್ಪೂರ್ತಿದಾಯಕವಾಗಿದ್ದು, ದೇಶಪ್ರೇಮ ಮತ್ತು ಭವಿಷ್ಯದ ದೃಷ್ಟಿಕೋನವನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. “ಭಾರತವು ಸ್ವಾತಂತ್ರ್ಯದ ನೂರನೇ ವರ್ಷವನ್ನು (2047) ಆಚರಿಸುವಾಗ ನೀವು 35 ರಿಂದ 40 ವರ್ಷದವರಾಗಿರುತ್ತೀರಿ. ಅಂದರೆ ವಿಕಸಿತ ಭಾರತದ ಫಲವನ್ನು ಉಣ್ಣುವವರು ಮತ್ತು ಅದನ್ನು ಮುನ್ನಡೆಸುವವರು ನೀವೇ. ಇಂದು ನಾನು ಕಷ್ಟಪಟ್ಟು ‘ವಿಕಸಿತ ಭಾರತ’ದ ಬುನಾದಿ ಹಾಕುತ್ತಿರುವುದು ನಿಮಗಾಗಿ. ಹಾಗಿದ್ದ ಮೇಲೆ, ನಿಮ್ಮ ಭವಿಷ್ಯಕ್ಕಾಗಿ ನೀವು ಈಗಿನಿಂದಲೇ ಶ್ರಮಿಸಬೇಡವೇ?” ಎಂದು ಪ್ರಧಾನಿ ಮೋದಿ ಅವರು ವಿದ್ಯಾರ್ಥಿಗಳಲ್ಲಿ ಕೇಳಿದ್ದಾರೆ. ನಾವು ಬಳಸುವ ವಸ್ತುಗಳು, ಆಟಿಕೆಗಳು ಅಥವಾ ತಂತ್ರಜ್ಞಾನ ಇರಲಿ, ಸಾಧ್ಯವಾದಷ್ಟು ಭಾರತೀಯ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Pariksha Pe Charcha: ಹಿಂದಿ, ನೇಪಾಳಿ, ಬಂಗಾಳಿ ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ – Kannada News | Sikkim Student sings song in Hindi Nepali and Bengali in front of a PM Modi during Pariksha Pe Charcha

ನವದೆಹಲಿ, ಫೆಬ್ರವರಿ 6: ಇಂದು ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ (Pariksha Pe Charcha) ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಯ ಮುಂದೆ ಸಿಕ್ಕಿಂನ ಹುಡುಗಿಯೊಬ್ಬಳು ಹಿಂದಿ, ನೇಪಾಳಿ ಮತ್ತು ಬಂಗಾಳಿ ಭಾಷೆಗಳಲ್ಲಿ ತಾನೇ ಬರೆದ ‘ಹಮಾರ ಭಾರತ್ ಭೂಮಿ’ ಎಂಬ ದೇಶಭಕ್ತಿ ಗೀತೆಯೊಂದನ್ನು ಹಾಡುವ ಮೂಲಕ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ತಾನು 3 ಭಾಷೆಗಳಲ್ಲಿ ಹಾಡು ಬರೆದಿದ್ದೇನೆ ಎಂದು ಆಕೆ ಹೇಳಿದಾಗ ಸಂತೋಷಗೊಂಡ ಪ್ರಧಾನಿ ಮೋದಿ, ‘ನಿನಗೆ ಕವಿತೆ ಬರೆಯುವ ಅಭ್ಯಾಸವಿದೆಯೇ? ನಿನಗೆ ಬರವಣಿಗೆ ಎಂದರೆ ಇಷ್ಟವೇ?’ ಎಂದು ಕೇಳಿದರು. ಅದಕ್ಕೆ ಹೌದು ಎಂದ ಆ ಬಾಲಕಿ ಸುಶ್ರಾವ್ಯವಾಗಿ ತಾನು ಬರೆದ ಹಾಡನ್ನು ಹಾಡಿದಾಗ ಮೋದಿ ಹಾಗೂ ಇತರೆ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟುತ್ತಾ ಆಕೆಯನ್ನು ಪ್ರೋತ್ಸಾಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಇಂದು ಪರೀಕ್ಷಾ ಪೆ ಚರ್ಚಾ 9ನೇ ಆವೃತ್ತಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಜೊತೆ ಅನೌಪಚಾರಿಕ ಸಂವಾದ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್ ಕೂಡ ನಿರ್ಮಾಪಕ ಅಲ್ವಾ? ನಿರ್ಮಾಪಕರ ಬಗ್ಗೆ ಚಂದ್ರಚೂಡ್ ಈ ರೀತಿ ಮಾತನಾಡಿದ್ದು ಸುದೀಪ್ ಅವರಿಗೆ ಗೊತ್ತಾದರೆ ಸುಮ್ಮನೆ ಇರುತ್ತಾರಾ? ಆ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪು ಏನಿದೆ’ ಎಂದು ಕೆ. ಮಂಜು (K Manju) ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರೇಯಸಿ ಜೊತೆ ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ – Kannada News | 15 year old boy hangs from high tension wire demanding marriage to girlfriend

ಪ್ರತಾಪ್‌ಗಢ, ಫೆಬ್ರವರಿ 6: ಪ್ರತಾಪಗಢದಲ್ಲಿ 15 ವರ್ಷದ ಬಾಲಕನೊಬ್ಬ ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆ (Wedding) ಮಾಡಿಸುವುದಾದರೆ ಮಾತ್ರ ಕೆಳಗೆ ಇಳಿಯುತ್ತೇನೆ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡುತ್ತಿದ್ದ. ಒಲೀಸರು ಆತ ಇಷ್ಟಪಟ್ಟ ಹುಡುಗಿಯ ಜೊತೆ ಮದುವೆ ಮಾಡಿಸುವುದಾಗಿ ಮನವೊಲಿಸಿದ ನಂತರ ಆತ ಕೆಳಗೆ ಇಳಿಯಲು ಒಪ್ಪಿಕೊಂಡ.

ಕೊನೆಗೆ ಏಣಿಯನ್ನು ಹಾಕಿ ಅವನನ್ನು ಸುರಕ್ಷಿತವಾಗಿ ಕೆಳಗೆ ತರಲಾಯಿತು. 40 ನಿಮಿಷಗಳ ಕಾಲ ಆತ ವಿದ್ಯುತ್ ತಂತಿ ಹಿಡಿದು ನೇತಾಡುತ್ತಿದ್ದ. ಕೆಳಗೆ ಬಂದ ತಕ್ಷಣ ಆತ ಅಳಲು ಪ್ರಾರಂಭಿಸಿದನು. ಆತ 13 ವರ್ಷದ ಹುಡುಗಿಯನ್ನು ಪ್ರೀತಿಸುತ್ತಿದ್ದ. 1 ವರ್ಷದಿಂದ ಅವರಿಬ್ಬರೂ ಪ್ರೀತಿಸುತ್ತಿದ್ದರು. ಆಕೆಯ ಜೊತೆ ಮದುವೆ ಮಾಡಲು ಮನೆಯವರು ಒಪ್ಪಿರಲಿಲ್ಲ. ಹೀಗಾಗಿ, ಆತ ಈ ನಾಟಕವಾಡಿದ್ದ. ನಂತರ ಪೊಲೀಸರು ಹುಡುಗನನ್ನು ಪೊಲೀಸ್ ಠಾಣೆಗೆ ಕರೆದೊಯ್ದು, ಅವನಿಗೆ ಸಲಹೆ ನೀಡಿ ಅವನ ಕುಟುಂಬಕ್ಕೆ ಒಪ್ಪಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ – Kannada News | Ghooskhor Pandat Controversy Netflix deletes teaser after backlash

ಬಾಲಿವುಡ್ ನಟ ಮನೋಜ್ ಬಾಜಪೇಯಿ ಅಭಿನಯದ ‘ಘೂಸ್‌ಖೋರ್ ಪಂಡತ್’ (Ghooskhor Pandat) ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿ ಮಾಡಿದೆ. ತೀವ್ರ ವಿರೋಧ ಹಾಗೂ ಕಾನೂನು ಸಂಘರ್ಷದ ಬೆನ್ನಲ್ಲೇ ಇಂಟರ್ನೆಟ್‌ನಿಂದ ಈ ಸಿನಿಮಾದ ಟೀಸರ್ ಹಾಗೂ ಎಲ್ಲ ಪ್ರಚಾರದ ಕಂಟೆಂಟ್​​ಗಳನ್ನು ತೆಗೆದು ಹಾಕಲು ನೆಟ್‌ಫ್ಲಿಕ್ಸ್ ಹಾಗೂ ಚಿತ್ರತಂಡ ನಿರ್ಧರಿಸಿದೆ. ಕೇಂದ್ರ ಸರ್ಕಾರವು ನೆಟ್‌ಫ್ಲಿಕ್ಸ್ (Netflix) ಸಂಸ್ಥೆಗೆ ಚಿತ್ರದ ಟೀಸರ್ ತೆಗೆದುಹಾಕುವಂತೆ ಸೂಚನೆ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಮತ್ತು ಜಾತಿ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ‘ಘೂಸ್‌ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ಮತ್ತು ಕಥಾವಸ್ತು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮುನ್ನ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದರು. ಅಲ್ಲದೆ, ಚಿತ್ರದ ಬಿಡುಗಡೆಗೆ ತಡೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನೂ ಸಲ್ಲಿಸಲಾಗಿತ್ತು.

ನಿರ್ದೇಶಕ ನೀರಜ್ ಪಾಂಡೆ ಸ್ಪಷ್ಟನೆ: ಹೆಚ್ಚುತ್ತಿರುವ ಆಕ್ರೋಶವನ್ನು ಗಮನಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ನಿರ್ದೇಶಕ ನೀರಜ್ ಪಾಂಡೆ, ‘ನಮ್ಮ ಚಿತ್ರವು ಒಂದು ಕಾಲ್ಪನಿಕ ಪೊಲೀಸ್ ಡ್ರಾಮಾ ಆಗಿದೆ. ‘ಪಂಡತ್’ ಎಂಬ ಪದವನ್ನು ಕೇವಲ ಒಂದು ಕಾಲ್ಪನಿಕ ಪಾತ್ರದ ಆಡುಭಾಷೆಯ ಹೆಸರಾಗಿ ಬಳಸಲಾಗಿದೆ. ಆದರೆ, ಈ ಶೀರ್ಷಿಕೆಯಿಂದ ಕೆಲವು ವೀಕ್ಷಕರ ಭಾವನೆಗಳಿಗೆ ನೋವಾಗಿದೆ ಎಂಬುದು ನಮಗೆ ಅರ್ಥವಾಗಿದೆ’ ಎಂದು ತಿಳಿಸಿದ್ದಾರೆ.

ಮನೋಜ್ ಬಾಜಪೇಯಿ ಪ್ರತಿಕ್ರಿಯೆ: ಈ ಸಿನಿಮಾದಲ್ಲಿ ‘ಪಂಡತ್’ ಎಂಬ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿರುವ ನಟ ಮನೋಜ್ ಬಾಜಪೇಯಿ, ‘ಯಾವುದೇ ಸಮುದಾಯಕ್ಕೆ ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ಇದೊಂದು ದೋಷಪೂರಿತ ವ್ಯಕ್ತಿಯ ಆತ್ಮಸಾಕ್ಷಿಯ ಪಯಣದ ಕಥೆಯಾಗಿದೆ. ಜನರ ಭಾವನೆಗಳು ಮತ್ತು ಕಳಕಳಿಗಳನ್ನು ನಾನು ಗೌರವಿಸುತ್ತೇನೆ’ ಎಂದು ಎಕ್ಸ್ (ಟ್ವಿಟರ್) ಖಾತೆಯ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ

ಚಿತ್ರದ ಶೀರ್ಷಿಕೆಯಲ್ಲಿ ಪಂಡತ್ (ಪಂಡಿತ್) ಎಂಬ ಹೆಸರು ಬಳಕೆ ಆಗಿರುವುದರಿಂದ ಬ್ರಾಹ್ಮಣ ಸಮುದಾಯಕ್ಕೆ ನೋವುಂಟಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕಾರಣದಿಂದಲೇ ಇಷ್ಟೆಲ್ಲ ವಿವಾದ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

T20 World Cup: 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ; ಟಿ20 ವಿಶ್ವಕಪ್ ವೇಳಾಪಟ್ಟಿ ಹೀಗಿದೆ – Kannada News | T20 World Cup 2026: Full Schedule, Groups, Venues and India’s Fixtures

10ನೇ ಆವೃತ್ತಿಯ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರ ಶನಿವಾರದಿಂದ ಪ್ರಾರಂಭವಾಗಲಿದೆ. ಈ ಬಾರಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್‌ನಲ್ಲಿ ಒಟ್ಟು 20 ತಂಡಗಳು ಸ್ಪರ್ಧಿಸಲಿವೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಭಾರತ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಅದಕ್ಕೂ ಮುನ್ನ ಟಿ20 ವಿಶ್ವಕಪ್​ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

20 ತಂಡಗಳ 4 ಗುಂಪು

ಗುಂಪು ಎ: ಭಾರತ, ಪಾಕಿಸ್ತಾನ, ಅಮೆರಿಕ, ನೆದರ್‌ಲ್ಯಾಂಡ್ಸ್, ನಮೀಬಿಯಾ.

ಗುಂಪು ಬಿ: ಆಸ್ಟ್ರೇಲಿಯಾ, ಶ್ರೀಲಂಕಾ, ಜಿಂಬಾಬ್ವೆ, ಐರ್ಲೆಂಡ್, ಓಮನ್.

ಗುಂಪು ಸಿ: ವೆಸ್ಟ್ ಇಂಡೀಸ್, ಇಂಗ್ಲೆಂಡ್, ಇಟಲಿ, ನೇಪಾಳ, ಸ್ಕಾಟ್ಲೆಂಡ್.

ಗುಂಪು ಡಿ: ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಕೆನಡಾ, ಯುಎಇ.

ಆತಿಥ್ಯದ ಸ್ಥಳಗಳು

ಭಾರತ

  • ಈಡನ್ ಗಾರ್ಡನ್ಸ್- ಕೋಲ್ಕತ್ತಾ
  • ವಾಂಖೆಡೆ ಸ್ಟೇಡಿಯಂ- ಮುಂಬೈ
  • ಎಂಎ ಚಿದಂಬರಂ ಸ್ಟೇಡಿಯಂ- ಚೆನ್ನೈ
  • ನರೇಂದ್ರ ಮೋದಿ ಕ್ರೀಡಾಂಗಣ- ಅಹಮದಾಬಾದ್‌
  • ಅರುಣ್ ಜೇಟ್ಲಿ ಕ್ರೀಡಾಂಗಣ- ದೆಹಲಿ

ಶ್ರೀಲಂಕಾ

  • ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್- ಕೊಲಂಬೊ
  • ಆರ್.ಪ್ರೇಮದಾಸ ಕ್ರೀಡಾಂಗಣ- ಕೊಲಂಬೊ
  • ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ- ಪಲ್ಲೆಕೆಲೆ

ಟಿ20 ವಿಶ್ವಕಪ್ ಗುಂಪು ಹಂತದ ಸಂಪೂರ್ಣ ಪಟ್ಟಿ

* ಫೆಬ್ರವರಿ 7 (ಶನಿವಾರ)

ಪಾಕಿಸ್ತಾನ vs ನೆದರ್ಲ್ಯಾಂಡ್ಸ್ — ಕೊಲಂಬೊ — ಬೆಳಿಗ್ಗೆ 11:00

ವೆಸ್ಟ್ ಇಂಡೀಸ್ vs ಸ್ಕಾಟ್ಲೆಂಡ್ – ಕೋಲ್ಕತ್ತಾ – ಮಧ್ಯಾಹ್ನ 3:00

ಭಾರತ vs ಅಮೆರಿಕ – ಮುಂಬೈ – ಸಂಜೆ 7:00

* ಫೆಬ್ರವರಿ 8 (ಭಾನುವಾರ)

ನ್ಯೂಜಿಲೆಂಡ್ vs ಅಫ್ಘಾನಿಸ್ತಾನ – ಚೆನ್ನೈ – ಬೆಳಿಗ್ಗೆ 11:00

ಇಂಗ್ಲೆಂಡ್ vs ನೇಪಾಳ – ಮುಂಬೈ – ಮಧ್ಯಾಹ್ನ 3:00

ಶ್ರೀಲಂಕಾ vs ಐರ್ಲೆಂಡ್ – ಕೊಲಂಬೊ- ಸಂಜೆ 7:00

* ಫೆಬ್ರವರಿ 9 (ಸೋಮವಾರ)

ಸ್ಕಾಟ್ಲೆಂಡ್ vs ಇಟಲಿ — ಕೋಲ್ಕತ್ತಾ — ಬೆಳಿಗ್ಗೆ 11:00

ಜಿಂಬಾಬ್ವೆ vs ಓಮನ್ – ಕೊಲಂಬೊ – ಮಧ್ಯಾಹ್ನ 3:00

ದಕ್ಷಿಣ ಆಫ್ರಿಕಾ vs ಕೆನಡಾ – ಅಹಮದಾಬಾದ್ – ಸಂಜೆ 7:00

* ಫೆಬ್ರವರಿ 10 (ಮಂಗಳವಾರ)

ನೆದರ್ಲ್ಯಾಂಡ್ಸ್ vs ನಮೀಬಿಯಾ — ದೆಹಲಿ — ಬೆಳಿಗ್ಗೆ 11:00

ನ್ಯೂಜಿಲೆಂಡ್ vs ಯುಎಇ – ಚೆನ್ನೈ – ಮಧ್ಯಾಹ್ನ 3:00

ಪಾಕಿಸ್ತಾನ vs ಅಮೆರಿಕ — ಕೊಲಂಬೊ— ಸಂಜೆ 7:00

* ಫೆಬ್ರವರಿ 11 (ಬುಧವಾರ)

ದಕ್ಷಿಣ ಆಫ್ರಿಕಾ vs ಅಫ್ಘಾನಿಸ್ತಾನ – ಅಹಮದಾಬಾದ್ – ಬೆಳಿಗ್ಗೆ 11:00

ಆಸ್ಟ್ರೇಲಿಯಾ vs ಐರ್ಲೆಂಡ್ – ಕೊಲಂಬೊ – ಮಧ್ಯಾಹ್ನ 3:00

ಇಂಗ್ಲೆಂಡ್ vs ವೆಸ್ಟ್ ಇಂಡೀಸ್ – ಮುಂಬೈ – ಸಂಜೆ 7:00 ಗಂಟೆಗೆ

* ಫೆಬ್ರವರಿ 12 (ಗುರುವಾರ)

ಶ್ರೀಲಂಕಾ vs ಓಮನ್ — ಕ್ಯಾಂಡಿ — ಬೆಳಿಗ್ಗೆ 11:00

ನೇಪಾಳ vs ಇಟಲಿ — ಮುಂಬೈ — ಮಧ್ಯಾಹ್ನ 3:00

ಭಾರತ vs ನಮೀಬಿಯಾ — ದೆಹಲಿ — ಸಂಜೆ 7:00

* ಫೆಬ್ರವರಿ 13 (ಶುಕ್ರವಾರ)

ಆಸ್ಟ್ರೇಲಿಯಾ vs ಜಿಂಬಾಬ್ವೆ — ಕೊಲಂಬೊ— ಬೆಳಿಗ್ಗೆ 11:00

ಕೆನಡಾ vs ಯುಎಇ — ದೆಹಲಿ — ಮಧ್ಯಾಹ್ನ 3:00

ಅಮೆರಿಕ vs ನೆದರ್ಲ್ಯಾಂಡ್ಸ್ — ಚೆನ್ನೈ — ಸಂಜೆ 7:00

* ಫೆಬ್ರವರಿ 14 (ಶನಿವಾರ)

ಐರ್ಲೆಂಡ್ vs ಓಮನ್ — ಕೊಲಂಬೊ — ಬೆಳಿಗ್ಗೆ 11:00

ಇಂಗ್ಲೆಂಡ್ vs ಸ್ಕಾಟ್ಲೆಂಡ್ – ಕೋಲ್ಕತ್ತಾ – ಮಧ್ಯಾಹ್ನ 3:00

ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ – ಅಹಮದಾಬಾದ್ – ಸಂಜೆ 7:00

* ಫೆಬ್ರವರಿ 15 (ಭಾನುವಾರ)

ವೆಸ್ಟ್ ಇಂಡೀಸ್ vs ನೇಪಾಳ – ಮುಂಬೈ – ಬೆಳಿಗ್ಗೆ 11:00

ಅಮೆರಿಕ vs ನಮೀಬಿಯಾ — ಚೆನ್ನೈ — 3:00 PM

ಭಾರತ vs ಪಾಕಿಸ್ತಾನ – ಕೊಲಂಬೊ- ಸಂಜೆ 7:00

* ಫೆಬ್ರವರಿ 16 (ಸೋಮವಾರ)

ಅಫ್ಘಾನಿಸ್ತಾನ vs ಯುಎಇ — ದೆಹಲಿ — ಬೆಳಿಗ್ಗೆ 11:00

ಇಂಗ್ಲೆಂಡ್ vs ಇಟಲಿ – ಕೋಲ್ಕತ್ತಾ – ಮಧ್ಯಾಹ್ನ 3:00

ಆಸ್ಟ್ರೇಲಿಯಾ vs ಶ್ರೀಲಂಕಾ – ಕ್ಯಾಂಡಿ – ಸಂಜೆ 7:00

* ಫೆಬ್ರವರಿ 17 (ಮಂಗಳವಾರ)

ನ್ಯೂಜಿಲೆಂಡ್ vs ಕೆನಡಾ – ಚೆನ್ನೈ – ಬೆಳಿಗ್ಗೆ 11:00

ಐರ್ಲೆಂಡ್ vs ಜಿಂಬಾಬ್ವೆ – ಕ್ಯಾಂಡಿ – ಮಧ್ಯಾಹ್ನ 3:00

ಸ್ಕಾಟ್ಲೆಂಡ್ vs ನೇಪಾಳ – ಮುಂಬೈ – ಸಂಜೆ 7:00 ಗಂಟೆಗೆ.

* ಫೆಬ್ರವರಿ 18 (ಬುಧವಾರ)

ದಕ್ಷಿಣ ಆಫ್ರಿಕಾ vs ಯುಎಇ — ದೆಹಲಿ — ಬೆಳಿಗ್ಗೆ 11:00

ಪಾಕಿಸ್ತಾನ vs ನಮೀಬಿಯಾ – ಕೊಲಂಬೊ – ಮಧ್ಯಾಹ್ನ 3:00

ಭಾರತ vs ನೆದರ್ಲ್ಯಾಂಡ್ಸ್ – ಅಹಮದಾಬಾದ್ – ಸಂಜೆ 7:00

* ಫೆಬ್ರವರಿ 19 (ಗುರುವಾರ)

ವೆಸ್ಟ್ ಇಂಡೀಸ್ vs ಇಟಲಿ — ಕೋಲ್ಕತ್ತಾ — ಬೆಳಿಗ್ಗೆ 11:00

ಶ್ರೀಲಂಕಾ vs ಜಿಂಬಾಬ್ವೆ – ಕೊಲಂಬೊ – ಮಧ್ಯಾಹ್ನ 3:00

ಅಫ್ಘಾನಿಸ್ತಾನ vs ಕೆನಡಾ — ಚೆನ್ನೈ — ಸಂಜೆ 7:00

* ಫೆಬ್ರವರಿ 20 (ಶುಕ್ರವಾರ)

ಆಸ್ಟ್ರೇಲಿಯಾ vs ಓಮನ್ – ಕ್ಯಾಂಡಿ – ಸಂಜೆ 7:00

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆಟ್ರೊ ಟಿಕೆಟ್ ದರ ಏರಿಕೆ ಬಗ್ಗೆ ಕೊನೆಗೂ ಮೌನಮುರಿದ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Bengaluru Metro Fare Hike: CM Siddaramaiah Assures Talks With Central Government

ಸಿಎಂ ಸಿದ್ದರಾಮಯ್ಯ, ಮೆಟ್ರೋ Image Credit source: tv9 kannada

ಬೆಂಗಳೂರು, ಫೆಬ್ರವರಿ 06: ಬೆಂಗಳೂರಿಗರ ಜೀವನಾಡಿ ಮೆಟ್ರೋ (Metro) ಪ್ರಯಾಣ ದರ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ಏರಿಕೆ ಆಗಲಿದೆ. ಜನರ ವಿರೋಧದ ನಡುವೆ ಟಿಕೆಟ್​​ ದರ ಹೆಚ್ಚಿಸಲಾಗಿದ್ದು, BMRCL ವಿರುದ್ಧ ಆಕ್ರೋಶದ ಕಟ್ಟೆಯೊಡಿದಿದೆ. ಸಾಮಾಜಿಕ ಜಾಲತಾಣದಲ್ಲಿ ಮೆಟ್ರೋ ಬಾಯ್ಕಾಟ್ ಕ್ಯಾಂಪೇನ್ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೆ ಈ ವಿಚಾರ ರಾಜ್ಯ ಸರ್ಕಾರ ಮತ್ತು ಬಿಜೆಪಿ ಮಧ್ಯೆ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಕೇಂದ್ರ ಸರ್ಕಾರದ ಜೊತೆ ಚರ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಮೆಟ್ರೋ ಟಿಕೆಟ್​​​ ದರ ಏರಿಕೆ ಬಗ್ಗೆ ಕೇಂದ್ರದ ಜತೆ ಚರ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೆಟ್ರೋ ದರಗಳನ್ನು ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ. ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ರಚಿಸಿರುವ ಸ್ವತಂತ್ರ ದರ ನಿಗದಿ ಕಮಿಟಿ ನಿರ್ಧರಿಸುತ್ತದೆ. ದರ ನಿಗದಿ ಸಮಿತಿ ನಿಗದಿತ ಅವಧಿಯೊಳಗೆ ಶಿಫಾರಸು ಸಲ್ಲಿಸಬೇಕು. ಸೆಕ್ಷನ್ 37ರ ಅಡಿಯಲ್ಲಿ ಈ ಶಿಫಾರಸುಗಳನ್ನ ಮೆಟ್ರೋ ಆಡಳಿತ ಶಿಫಾರಸು ಒಪ್ಪಿ ಜಾರಿ ಮಾಡಬೇಕಿದೆ ರಾಜ್ಯ ಸರ್ಕಾರಕ್ಕೆ ಅಥವಾ ಬಿಎಂಆರ್​ಸಿಎಲ್​ಗೆ ಅಧಿಕಾರವಿಲ್ಲ. ಶಿಫಾರಸು ರದ್ದುಗೊಳಿಸುವ, ಉಲ್ಲಂಘಿಸುವ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​​

ಈ ದರ ನಿಗದಿ ಕಮಿಟಿಯನ್ನು ಕೇಂದ್ರ ಸರ್ಕಾರ ರಚಿಸುತ್ತದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವ ವಹಿಸಿರುತ್ತಾರೆ. ಕೇಂದ್ರದ ನಿಯಮಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುತ್ತೆ. ಸಂಸತ್ತಿನಲ್ಲಿ ತಾವೇ ಈ ಶಿಫಾರಸುಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಮಾಡಿ ಈಗ ನಮ್ಮ ಸರ್ಕಾರದ ಮೇಲೆ ಬೆಲೆ ಏರಿಕೆ ನಿರ್ಧಾರದ ಆರೋಪ ಹೊರಿಸುವುದು ಅಪ್ರಾಮಾಣಿಕ ನಡೆ ಮಾತ್ರವಲ್ಲ, ಜನರನ್ನು ಉದ್ದೇಶಪೂರ್ವಕವಾಗಿ ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ. ದರ ಪರಿಷ್ಕರಣೆಯ ಹೊಣೆಯನ್ನು ನಮ್ಮ ಸರ್ಕಾರದ ತಲೆಗೆ ಕಟ್ಟುವುದು ದುಷ್ಟತನ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್

ಕಾನೂನು ದರ ಪರಿಷ್ಕರಣೆಯ ಎಲ್ಲಾ ಪ್ರಕ್ರಿಯೆಗಳನ್ನು ನಿಗದಿಪಡಿಸುತ್ತದೆಯಾದರೂ, ಜನಹಿತದ ವಿಚಾರದಲ್ಲಿ ನಮ್ಮ ಬದ್ಧತೆಯೂ ಕಾನೂನಿನ ಗಡಿಗಳನ್ನು ಮೀರಿದೆ. ನಾವು ನಿಮ್ಮೊಂದಿಗೆ ದೃಢವಾಗಿ ಇರುತ್ತೇವೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಎಲ್ಲರಿಗೂ ಲಭ್ಯವಾಗುವಂತೆ ಕೈಗೆಟುಕುವ ದರದಲ್ಲಿರಬೇಕು. ದೈನಂದಿನ ಬದುಕಿಗೆ ಬಲ ತುಂಬುವಂತಿರಬೇಕು. ಬೆಂಗಳೂರಿನ ಬೆಳವಣಿಗೆಯೂ ಪ್ರಯಾಣಿಕರಿಗೆ ಹೊರೆಯಾಗಬಾರದು. ನಾನು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲಿದ್ದೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link