Category Archives: Blog

Your blog category

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಮುಖ ದಾಖಲೆಗಳು ವಶಕ್ಕೆ

ಲಂಚ ಆರೋಪ ಹಿನ್ನೆಲೆ ದೂರು ದಾಖಲಿಸಿಕೊಂಡು ಬೆಂಗಳೂರಿನಲ್ಲಿರುವ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂ ನಗದು ಸೇರಿದಂತೆ ಯುಎಸ್, ಹಾಂಗ್ ಕಾಂಗ್, ಸಿಂಗಾಪುರ್ ಡಾಲರ್, ಇಂಡೋನೇಷ್ಯಾ ರುಪಿಯಾ,
ಮಲೇಷಿಯನ್ ರಿಂಗಿಟ್, ಯುರೋ ಸೇರಿ ಯುವಾನ್ ವಿದೇಶಿ‌ ಕರೆನ್ಸಿ ಮನೆಯಲ್ಲಿ ಪತ್ತೆ ಆಗಿದೆ. ಜೊತೆಗೆ ಆಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಜಾರಾಮ್ ಜೊತೆಗೆ ಅತುಲ್ ಖನ್ನಾ ಬಂಧನ

ಇನ್ನು ರಾಜಾರಾಮ್ ಮೋಹನ್ ರಾವ್ ಜೊತೆಗೆ ಸುಧೀರ್ ಗ್ರೂಪ್ ಆಫ್ ಕಂಪನಿಯ ನಿರ್ದೇಶಕನಾಗಿರುವ ಅತುಲ್ ಖನ್ನಾ ಕೂಡ ಬಂಧನವಾಗಿದೆ. ಸುಧೀರ್ ಗ್ರೂಪ್ ಆಫ್ ಕಂಪನಿ ಉತ್ಪಾದಿಸುವ ವಿದ್ಯುತ್ ಉಪಕರಣಗಳಿಗೆ ಅನುಕೂಲಕರ ಪರೀಕ್ಷಾ ವರದಿಗಳನ್ನ ನೀಡಲು ಲಂಚ ಪಡೆದ ಆರೋಪ ಹಿನ್ನೆಲೆ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾ ದಾಳಿ: ತಬ್ಬಿಬ್ಬಾದ ಸಿಬ್ಬಂದಿ

ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಶಿವಮೊಗ್ಗ ನಗರ ಪಾಲಿಕೆ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ವಿಭಾಗದ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ದಾಳಿ ವೇಳೆ ಮಹಾನಗರ ಪಾಲಿಕೆ ಸಿಬ್ಬಂದಿ ತಬ್ಬಿಬ್ಬಾದರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ

ವಿಲೇವಾರಿಯಾಗದೇ ಇರುವ ಅರ್ಜಿಗಳನ್ನ ಅಧಿಕಾರಿಗಳು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೆಳಗ್ಗೆ 11 ಗಂಟೆಯಾದರೂ ಅಧಿಕಾರಿಗಳು ಕಚೇರಿಗಳ ಬೀಗ ಹುಡುಕುತ್ತಿರುವುದು ನೋಡಿ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡರು. ಮಹಾನಗರ ಪಾಲಿಕೆ ಸಿಬ್ಬಂದಿ ಐಡಿ ಕಾರ್ಡ್ ಹಾಕದೆ ಇರುವುದಕ್ಕೂ ತರಾಟೆ ತೆಗೆದುಕೊಂಡರು. ದಿನನಿತ್ಯ ನಿರ್ವಹಿಸುವ ಕಾರ್ಯದ ಬಗ್ಗೆ ಮಾಹಿತಿ ಇಲ್ಲದೆ ಸಿಬ್ಬಂದಿ ಪರದಾಡಿದರು. ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಗೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Mysuru: ತವರಿಗೆ ಬಂದ್ರೂ ತಪ್ಪಲಿಲ್ಲ ಪತಿ ಕಾಟ; ಬಡಿದು ಪತ್ನಿಯನ್ನೇ ಕೊಂದ ಕುಡುಕ ಗಂಡ! – Kannada News | Husband Arrested for Brutally Killing Wife Over Domestic Dispute in Nanjangud, Mysuru

ಮೈಸೂರು, ಜನವರಿ 09: ತನ್ನಿಂದ ದೂರವಾಗಿ ತವರು ಮನೆ ಸೇರಿದ್ದ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಸುಧಾ ಮೃತ ಮಹಿಳೆಯಾಗಿದ್ದು, ಮರದ ತುಂಡಿನಿಂದ ಹೊಡೆದು ಮರ್ಡರ್​​ ಮಾಡಿರುವ ಆರೋಪಿ ಮಹೆಶ್​​ನನ್ನು ಪೊಲೀಸರು ಬಂಧಿಸಿದ್ದಾರೆ. ತಾಳಿ ಕಟ್ಟಿದ ಪತಿಯೇ ಪತ್ನಿಯನ್ನು ಕೊಲೆ ಮಾಡಿರೋದು ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.

ಘಟನೆ ಏನು?

13 ವರ್ಷಗಳ ಹಿಂದೆ ಮಲ್ಲಹಳ್ಳಿ ಗ್ರಾಮದ ಮಹೇಶ್ ಜೊತೆ ವಿವಾಹವಾಗಿದ್ದ ಸುಧಾ ಎರಡು ವರ್ಷಗಳ ಹಿಂದೆ ಪತಿಯಿಂದ ದೂರವಾಗಿದ್ದು, ತನ್ನ ತವರಿಗೆ ಬಂದಿದ್ದಳು. ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ಜೀವನ ನಡೆಸಿಕೊಂಡಿದ್ದಳು. ಆದ್ರೆ , ಮನೆಗೆ ಬಾ ಎಂದು ಸುಧಾಳನ್ನು ಮಹೇಶ ಹಲವು ಬಾರಿ ಒತ್ತಾಯಿಸಿದ್ದ. ಕಳೆದ ವಾರವೂ ಮನೆಗೆ ಹಿಂದಿರುಗಿ ಬಾ ಎಂದು ಕೇಳಿಕೊಂಡಿದ್ದ. ಆದರೆ ಸುಧಾ ಇದಕ್ಕೆ ಒಪ್ಪಿರಲಿಲ್ಲ. ಹೀಗಾಗಿ ಕೋಪಗೊಂಡ ಮಹೇಶ ಪತ್ನಿ ಜೊತೆ ಜಗಳ ಆರಂಭಿಸಿದ್ದಾನೆ. ಗಲಾಟೆ ವಿಕೋಪಕ್ಕೆ ಹೋಗಿ ಮರದ ತುಂಡಿನಿಂದ ಸುಧಾಳ ತಲೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ. ಗಂಡ ಹೊಡೆದ ಏಟಿಗೆ ಸುಧಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ಕುಟುಂಬಗಳ ನಡುವೆ ಆಸ್ತಿ ವಿವಾದ; ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​

ಮದ್ಯವ್ಯಸನಿಯಾಗಿದ್ದ ಮಹೇಶ್​​

ಆರೋಪಿ ಮಹೇಶ್​​ ಮದ್ಯಕ್ಕೆ ದಾಸನಾಗಿದ್ದ. ಜೊತೆಗೆ ಇತರ ದುಶ್ಚಟಗಳಿಗೆ ಬಲಿಯಾಗಿ ಹೆಂಡತಿಗೆ ಹಿಂಸೆ ಕೊಡುತ್ತಿದ್ದ. ಇಸ್ಪೀಟ್​​ ಆಡಿ ವಿಪರೀತವಾಗಿ ಸಾಲ ಕೂಡ ಮಾಡಿಕೊಂಡಿದ್ದ. ಇದೇ ಕಾರಣಕ್ಕೆ ಸುಧಾ ಗಂಡನ ಮನೆ ಬಿಟ್ಟು ತನ್ನಿಬ್ಬರ ಮಕ್ಕಳ ಜೊತೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ಇನ್ನು ಘಟನೆ ಬಳಿಕ ಎಸ್ಕೇಪ್​​ ಆಗಿದ್ದ ಮಹೇಶ್​​ನನ್ನು ನಂಜನಗೂಡು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಗದ ಕಾರಣ, ಆ ಬಗ್ಗೆ ತನಿಖೆ ನಡೆಯುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ – Kannada News | Iran will not back down Supreme Leader Ayatollah Khamenei vows

ಟೆಹ್ರಾನ್, ಜನವರಿ 9: ಇಂದು ಇರಾನ್​ ದೇಶವನ್ನುದ್ದೇಶಿಸಿ ಮಾತನಾಡಿದ ಇರಾನ್​​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Khamenei), ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ಗೆ ಎಚ್ಚರಿಕೆ ನೀಡಿದ್ದಾರೆ. ದುರಹಂಕಾರ ಮತ್ತು ಹೆಮ್ಮೆಯಿಂದ ಕುಳಿತು ಇಡೀ ಪ್ರಪಂಚದ ಮೇಲೆ ತೀರ್ಪು ನೀಡುವ ಟ್ರಂಪ್ ಬಗ್ಗೆ ಹೇಳುವುದಾದರೆ, ಸಾಮಾನ್ಯವಾಗಿ ವಿಶ್ವದ ನಿರಂಕುಶಾಧಿಕಾರಿಗಳು ಮತ್ತು ದುರಹಂಕಾರಿ ಶಕ್ತಿಗಳಾದ ಫರೋ, ನಿಮ್ರೋಡ್, ರೆಜಾ ಖಾನ್, ಮೊಹಮ್ಮದ್ ರೆಜಾ ಮತ್ತು ಅವರಂಥವರು ದುರಹಂಕಾರದ ಉತ್ತುಂಗದಲ್ಲಿದ್ದಾಗಲೇ ಅವರ ಪತನವಾಯಿತು ಎಂಬುದನ್ನು ಟ್ರಂಪ್ ತಿಳಿಯುವುದು ಒಳ್ಳೆಯದು. ಅದೇ ರೀತಿ ಟ್ರಂಪ್ ಅವರನ್ನೂ ಅಧಿಕಾರದಿಂದ ಉರುಳಿಸಲಾಗುತ್ತದೆ ಎಂದು ಹೇಳಿದ್ದಾರೆ.

“ಇಸ್ಲಾಮಿಕ್ ಗಣರಾಜ್ಯವು ಲಕ್ಷಾಂತರ ಜನರ ರಕ್ತದಿಂದ ಅಧಿಕಾರಕ್ಕೆ ಬಂದಿತು. ನಮ್ಮ ದೇಶ ಟ್ರಂಪ್ ರೀತಿಯ ವಿಧ್ವಂಸಕರ ಮುಂದೆ ಎಂದಿಗೂ ಹಿಂದೆ ಸರಿಯುವುದಿಲ್ಲ” ಎಂದು ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ ದೊಡ್ಡ ತಪ್ಪು ಮಾಡಿದೆ, ತಕ್ಕ ಶಿಕ್ಷೆ ಅನುಭವಿಸಲಿದೆ: ಇರಾನ್ ಸುಪ್ರೀಂ ನಾಯಕ ಖಮೇನಿ

ಪ್ರತಿಭಟನಾಕಾರರು ಟ್ರಂಪ್ ಅವರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಖಮೇನಿ, “ಪ್ರತಿಭಟನಾಕಾರರು ಟ್ರಂಪ್ ಅವರನ್ನು ಸಂತೋಷಪಡಿಸಲು ಬಯಸುತ್ತಾರೆ. ಟ್ರಂಪ್​ಗೆ ದೇಶವನ್ನು ಹೇಗೆ ನಡೆಸಬೇಕೆಂದು ತಿಳಿದಿದ್ದರೆ ಅವರು ತಮ್ಮದೇ ಆದ ದೇಶವನ್ನು ನಡೆಸುತ್ತಿದ್ದರು. ಬೇರೆ ದೇಶಕ್ಕೆ ನುಗ್ಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇರಾನ್‌ನ ಕರೆನ್ಸಿ ರಿಯಾಲ್ ಯುಎಸ್ ಡಾಲರ್ ವಿರುದ್ಧ ದಾಖಲೆಯ ಕನಿಷ್ಠ ಮಟ್ಟವನ್ನು ತಲುಪಿದ ನಂತರ ಡಿಸೆಂಬರ್ 28ರಂದು ಭುಗಿಲೆದ್ದ ಪ್ರತಿಭಟನೆಗಳು ರಾಷ್ಟ್ರವ್ಯಾಪಿ ಹರಡಿವೆ ಮತ್ತು ಹಿಂಸಾತ್ಮಕವಾಗಿವೆ. ಈ ಘಟನೆಯಿಂದ 42 ಜನರು ಸಾವನ್ನಪ್ಪಿದ್ದಾರೆ ಮತ್ತು 2,270ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ದಿ ರಾಜಾ ಸಾಬ್’ಗೂ ಎದುರಾಯ್ತು ಕಂಟಕ: ಅಡಕತ್ತರಿಯಲ್ಲಿ ನಿರ್ಮಾಪಕ – Kannada News | Courts slams Telangana Government for permitting ticket price hike for The Raja Saab

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇಂದು (ಜನವರಿ 09) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ನಿನ್ನೆ (ಜನವರಿ 08) ಸಿನಿಮಾದ ಫ್ಯಾನ್ಸ್ ಶೋ ಅನ್ನು ಸಹ ಹಲವು ಚಿತ್ರಮಂದಿರಗಳಲ್ಲಿ ಆಯೋಜನೆ ಮಾಡಲಾಗಿತ್ತು. ಸಿನಿಮಾ ಬಿಡುಗಡೆ ಮುಂಚೆ ಆಂಧ್ರ ಮತ್ತು ತೆಲಂಗಾಣ ಎರಡೂ ಸರ್ಕಾರಗಳಿಂದ ಅನುಮತಿ ಪಡೆದು ಟಿಕೆಟ್ ದರಗಳನ್ನು ಸಹ ಹೆಚ್ಚಳ ಮಾಡಲಾಗಿದ್ದು, ಇದೀಗ ಹೈದರಾಬಾದ್​​ನಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ಟಿಕೆಟ್ ದರ 450-550 ರೂಪಾಯಿಗಳಿದೆ. ಆದರೆ ಇದೀಗ ಸಿನಿಮಾಕ್ಕೆ ನ್ಯಾಯಾಲಯ ಶಾಕ್ ನೀಡಿದೆ.

ನಿನ್ನೆ ಹರಿದಾಡಿದ್ದ ಸುದ್ದಿಯ ಪ್ರಕಾರ, ತೆಲಂಗಾಣ ನ್ಯಾಯಾಲಯವೇ ‘ದಿ ರಾಜಾ ಸಾಬ್’ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡಿದೆ ಎನ್ನಲಾಗಿತ್ತು. ಆದರೆ ಇದೀಗ ತೆಲಂಗಾಣ ಹೈಕೋರ್ಟ್, ‘ದಿ ರಾಜಾ ಸಾಬ್’ ಸಿನಿಮಾದ ಟಿಕೆಟ್ ಹೆಚ್ಚಳವನ್ನು ಟೀಕೆ ಮಾಡಿದ್ದು, ಸರ್ಕಾರಿ ಆದೇಶ 120ರ ಪ್ರಕಾರ ಸಿನಿಮಾದ ಟಿಕೆಟ್ ದರ 350ಕ್ಕೂ ಹೆಚ್ಚಿರಬಾರದು ಎಂದಿದೆ. ಅಲ್ಲದೆ, ‘ದಿ ರಾಜಾ ಸಾಬ್’ ಸಿನಿಮಾಕ್ಕೆ ನೀಡಲಾಗಿರುವ ಅನುಮತಿಯನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ.

ಈ ಹಿಂದೆ ‘ಅಖಂಡ 2’ ಸಿನಿಮಾದ ಬಿಡುಗಡೆ ಸಮಯದಲ್ಲಿ ತೆಲಂಗಾಣದಲ್ಲಿ ಸರ್ಕಾರವು ಟಿಕೆಟ್ ಹೆಚ್ಚಳಕ್ಕೆ ಅನುಮತಿ ನೀಡಿತ್ತು, ಅದನ್ನು ಖಂಡಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡುವಂತಿಲ್ಲ ಎಂದಿತ್ತು. ಒಂದೊಮ್ಮೆ ಟಿಕೆಟ್ ದರ ಹೆಚ್ಚಿಸಬೇಕಾಗಿದ್ದರೂ 350 ರೂಪಾಯಿಗಳಿಗೆ ಹೆಚ್ಚಿಲ್ಲದಂತೆ ಮಾತ್ರವೇ ಟಿಕೆಟ್ ದರ ಹೆಚ್ಚಿಸಬೇಕು ಎಂದಿತ್ತು. ಆದರೆ ಈಗ ಪ್ರಭಾಸ್ ಸಿನಿಮಾದ ಟಿಕೆಟ್ ದರ 450 ರಿಂದ 510 ರೂಪಾಯಿಗಳಿವೆ.

ಇದನ್ನೂ ಓದಿ:ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ

‘ದಿ ರಾಜಾ ಸಾಬ್’ ಸಿನಿಮಾಕ್ಕೆ ಮೊದಲ ಕೆಲವು ಶೋಗಳಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಆದರೆ ಸಿನಿಮಾದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿಲ್ಲ. ಸಿನಿಮಾ ಚೆನ್ನಾಗಿಲ್ಲವೆಂದು ಹಲವು ವಿಮರ್ಶಕರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಿನಿಮಾದ ಕಲೆಕ್ಷನ್ ನಾಳೆಯಿಂದ ಕಡಿಮೆ ಆಗುವ ಸಾಧ್ಯತೆ ಇದೆ. ಅಂಥಹುದರಲ್ಲಿ ನ್ಯಾಯಾಲಯ ಸಹ ಟಿಕೆಟ್ ದರವನ್ನು ಕಡಿಮೆಗೊಳಿಸುವಂತೆ ಆದೇಶ ನೀಡಿರುವುದು ಸಿನಿಮಾದ ನಿರ್ಮಾಪಕರಿಗೆ ಭಾರಿ ಹೊಡೆತ ನೀಡುವ ಸಾಧ್ಯತೆ ಇದೆ.

‘ದಿ ರಾಜಾ ಸಾಬ್’ ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್, ರಿಧಿ ಕುಮಾರ್ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಸಂಜಯ್ ದತ್, ಬೊಮನ್ ಇರಾನಿ ಅವರುಗಳು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಅನ್ನು ಮಾರುತಿ ನಿರ್ದೇಶನ ಮಾಡಿದ್ದು, ಪೀಪಲ್ಸ್ ಮೀಡಿಯಾ ಫ್ಯಾಕ್ಟರ್ ನಿರ್ಮಾಣ ಮಾಡಿದೆ. ಇದು ಹಾರರ್ ಕಾಮಿಡಿ ಜಾನರ್​​ನ ಸಿನಿಮಾ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಪರ 6 ಆಟಗಾರ್ತಿಯರು ಪಾದಾರ್ಪಣೆ – Kannada News | WPL 2026: MI vs RCB Opening Match Toss! RCB Bowls First in Navi Mumbai

ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ನಾಲ್ಕನೇ ಸೀಸನ್ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಹರ್ಮನ್‌ಪ್ರೀತ್ ಕೌರ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಸ್ಮೃತಿ ಮಂಧಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಮುಂಬೈ ಮತ್ತು ಆರ್‌ಸಿಬಿ ಎರಡೂ ಚಾಂಪಿಯನ್ ತಂಡಗಳಾಗಿದ್ದು, ಮುಂಬೈ 2 ಬಾರಿ ಟ್ರೋಫಿ ಗೆದ್ದಿದ್ದರೆ, ಆರ್‌ಸಿಬಿ 1 ಬಾರಿ ಗೆದ್ದಿದೆ. ಇನ್ನು ಈ ಉದ್ಘಾಟನಾ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಮೇಲೆ ಹೇಳಿದಂತೆ 2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಮುಂಬೈನಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವುದರಿಂದ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್‌ ಮಾಡುವ ತಂಡಕ್ಕೆ ಅನುಕೂಲಕರವಾಗಿರುತ್ತದೆ. ಹೀಗಾಗಿ ಮೊದಲು ಬೌಲಿಂಗ್ ಮಾಡುವುದಾಗಿ ಮಂಧಾನ ಹೇಳಿದರು. ಇತ್ತ ಹರ್ಮನ್‌ಪ್ರೀತ್ ಕೂಡ ಟಾಸ್ ಗೆದ್ದಿದ್ದರೆ ತಾವು ಕೂಡ ಮೊದಲು ಬೌಲಿಂಗ್ ಮಾಡುವುದಾಗಿ ಹೇಳಿದರು. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಆರ್​ಸಿಬಿ ತಂಡದ ಪರ ಆರು ಆಟಗಾರ್ತಿಯರು ಪದಾರ್ಪಣೆ ಮಾಡುತ್ತಿದ್ದಾರೆ ಎಂದರು.

Source link

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ – Kannada News | Dhruvanth overacting in front of Ashwini Gowda in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರು ಬಗೆಬಗೆಯ ಎಕ್ಸ್​ಪ್ರೆಷನ್ ನೀಡುವ ಮೂಲಕ ಹೈಲೈಟ್ ಆಗುತ್ತಾರೆ. ರಕ್ಷಿತಾ ಶೆಟ್ಟಿಯ ಹಾವಭಾವವನ್ನು ಧ್ರುವಂತ್ ಅನುಕರಣೆ ಮಾಡುತ್ತಾರೆ. ಈಗ ಅಶ್ವಿನಿ ಗೌಡ ಎದುರಲ್ಲಿ ಧ್ರುವಂತ್ ಬೇಕಂತಲೇ ಓವರ್ ಆ್ಯಕ್ಟಿಂಗ್ ಮಾಡಿದ್ದಾರೆ. ಸದ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 8 ಜನರು ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರ ಎಲಿಮಿನೇಷನ್ ಆಗಲಿದೆ. ಆಗ ಕೇವಲ 6 ಜನರು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ ಗೌಡ (Ashwini Gowda) ಹೇಳಿದ್ದಾರೆ. ಅದನ್ನು ಕೇಳಿ ಧ್ರುವಂತ್ ಅವರು ಕಣ್ಣೀರು ಹಾಕಿದಂತೆ ನಟಿಸಿದ್ದಾರೆ. ಜನವರಿ 9ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ.

60 ದಿನಗಳ ವಿರಾಮ

ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇಡಬೇಕೆಂಬುದನ್ನು ಆಯಾ ಪ್ರದೇಶದ ಆಡಳಿತದ ರಾಜ್ಯ ಸರ್ಕಾರ ನಿರ್ಧರಿಸಬಹುದು. ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ಲು ಅವಧಿಗೆ ನೋಡಿ ಇದನ್ನು ನಿರ್ಧರಿಸಬಹುದು.

ಹಿಂದೆ ಶರದ್ ಪವಾರ್ ಅವರು ಕೃಷಿ ಸಚಿವರಾಗಿದ್ದಾಗ, ವರ್ಷಕ್ಕೆ ಕನಿಷ್ಠ ಮೂರು ತಿಂಗಳಾದರೂ ವಿರಾಮ ಅವಧಿ ಕೊಡಬೇಕು ಎಂದು ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಹೀಗಾಗಿ, ಹೊಸ ಕಾಯ್ದೆಯಲ್ಲಿ 60 ದಿನಗಳ ವಿರಾಮ ಅವಧಿ ನಿಗದಿ ಮಾಡಿರುವುದು ಅಚ್ಚರಿ ಅನಿಸುವುದಿಲ್ಲ.

ರಾಜ್ಯಗಳಿಗೆ ಹೆಚ್ಚಿನ ಹಣಕಾಸು ಬಾಧ್ಯತೆ

ಹಿಂದೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ, ಮನ್ರೇಗಾ ಯೋಜನೆಯ ವೆಚ್ಚದಲ್ಲಿ ರಾಜ್ಯಗಳೂ ನಿರ್ದಿಷ್ಟ ಪ್ರಮಾಣದ ವೆಚ್ಚವನ್ನು ಭರಿಸಬೇಕೆಂದು ಬಯಸಿದ್ದರು. ಆಗ ಸಾಮಗ್ರಿ ವೆಚ್ಚದಲ್ಲಿ ಕೇಂದ್ರ ಸರ್ಕಾರ ಶೇ.75 ಮತ್ತು ರಾಜ್ಯಗಳು ಶೇ. 25 ಹೊತ್ತುಕೊಂಡಿದ್ದವು. ಯೋಜನೆಗಳನ್ನು ಜವಾಬ್ದಾರಿಯಾಗಿ ನಿರ್ವಹಿಸುವುದು ರಾಜ್ಯಗಳ ಕೆಲಸ. ರಾಜ್ಯಗಳ ಹಣದ ಪಾಲುದಾರಿಕೆ ಹೆಚ್ಚಾದಂತೆ, ಯೋಜನೆಗಳ ಮಾಲೀಕತ್ವ ಕೂಡ ಬಲವಾಗುತ್ತದೆ. ಆಸ್ತಿ ಯೋಜನೆ, ನಿರ್ವಹಣೆ ಹಾಗು ಅನುಷ್ಠಾನದಲ್ಲಿ ಹೆಚ್ಚಿನ ಜವಾಬ್ದಾರಿ ಬರುತ್ತದೆ.

ಇದನ್ನೂ ಓದಿ: 2025ರಲ್ಲಿ ಸರ್ಕಾರ ತೆಗೆದುಕೊಂಡ ಪ್ರಮುಖ ಸುಧಾರಣೆಗಳಿವು…

ಬೇಡಿಕೆ ಬದಲು ಪೂರೈಕೆ ಆಧಾರಿತ ಕೆಲಸ ಹಂಚಿಕೆ

ಬೇಡಿಕೆ ಆಧಾರದ ಮೇಲೆ ಕೆಲಸ ಹಂಚಿಕೆ ಮುಕ್ತವಾಗಿತ್ತು, ಆದರೆ, ಅದು ಸರ್ಕಾರದ ಬಜೆಟ್‌ನ ಮಿತಿಯಲ್ಲೇ ಇರಬೇಕಿತ್ತು. ಈಗ ಪೂರೈಕೆ ಆಧಾರಿತ ವ್ಯವಸ್ಥೆ ಹೆಚ್ಚು ಯೋಜಿತವಾಗಿದೆ. ‘ವಿಕಸಿತ ಗ್ರಾಮ ಪಂಚಾಯತ್ ಯೋಜನೆ’ಗಳ ಮೂಲಕ ಕೆಲಸವನ್ನು ಬ್ಲಾಕ್, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಯೋಜನೆ ಮಾಡಿ ವಿಕಸಿತ ಭಾರತ್ ರಾಷ್ಟ್ರೀಯ ಗ್ರಾಮೀಣ ಮೂಲಸೌಕರ್ಯ ಸ್ಟಾಕ್‌ಗೆ ಸೇರಿಸಲಾಗುತ್ತದೆ. ಈಗ, ನಿರ್ದಿಷ್ಟ, ಅನುಮೋದಿತ ಕಾರ್ಯಭಾರ ಇದ್ದಾಗ ಮಾತ್ರ ಕೆಲಸ ನೀಡುತ್ತಾರೆ. ರಾಜ್ಯಗಳು ಕನಿಷ್ಠ 125 ದಿನಗಳ ಕೆಲಸ ಕೊಡಬೇಕು. ಸಾಮರ್ಥ್ಯ ಇದ್ದರೆ ಅವು ಹೆಚ್ಚು ದಿನ ನೀಡಬಹುದು. 15 ದಿನಗಳಲ್ಲಿ ಕೆಲಸ ಸಿಗದಿದ್ದರೆ, ಭತ್ಯೆ ಕೊಡುತ್ತಾರೆ. ಈ ಕಾಯ್ದೆಯ ಮೂಲಕ ಕಾರ್ಮಿಕರು ಮತ್ತಷ್ಟು ಬಲಿಷ್ಠರಾಗಿದ್ದಾರೆ.

ಕೆಲಸ ಸಿಗದಿದ್ದರೆ ನಿರುದ್ಯೋಗ ಭತ್ಯೆ

ಕೆಲಸಗಾರನು ಕೆಲಸ ಕೇಳಿದರೂ ನಿಗದಿತ ಅವಧಿಯಲ್ಲಿ ಕೆಲಸ ಸಿಗದಿದ್ದರೆ, ಅವನಿಗೆ ನಿರುದ್ಯೋಗ ಭತ್ಯೆ ಸಿಗುತ್ತದೆ. ಒಂದು ರಾಜ್ಯವು ನಿರ್ದಿಷ್ಟ ಹಂಚಿಕೆಗೆ ಮೀರಿ ಕೆಲಸ ನೀಡಿದರೆ, ಅದು ಆ ರಾಜ್ಯದ ನೀತಿ ಆಯ್ಕೆಯಾಗಿರುತ್ತದೆ, ಹಾಗಂತ ಯಾವುದೇ ಕಾನೂನು ಒತ್ತಾಯವಿಲ್ಲ. ಹಾಗೆ ಮಾಡಿದರೂ ಕಾರ್ಮಿಕರ ಹಕ್ಕುಗಳಿಗೆ ಯಾವುದೇ ಚ್ಯುತಿ ಬರದಂತೆ ಕಾಪಾಡಲಾಗುತ್ತದೆ.

ರಾಷ್ಟ್ರೀಯ ಗ್ರಾಮೀಣ ಮೂಲಸೌಕರ್ಯ ವ್ಯವಸ್ಥೆ ಅಡಿಯಲ್ಲಿ ಕೆಲಸ ಹಂಚಿಕೆ ಹೆಚ್ಚು ವ್ಯವಸ್ಥಿತವಾಗಿದೆ. ಡೇಟಾ ಆಧಾರಿತ ಹಂಚಿಕೆ ವಂಚನೆ ಮತ್ತು ಸ್ಥಳೀಯ ಭ್ರಷ್ಟಾಚಾರಕ್ಕೆ ಅವಕಾಶ ಕಡಿಮೆ ಮಾಡುತ್ತದೆ. ಇದರಿಂದ ಯೋಜನೆ ಹೆಚ್ಚು ಪಾರದರ್ಶಕವಾಗಿ ಹಾಗೂ ನಿಯಂತ್ರಿತವಾಗಿ ನಡೆಯುತ್ತದೆ.

ಇದನ್ನೂ ಓದಿ: ಜಲಶಕ್ತಿ ಸುಜಲಾಂ ಭಾರತ್: ನೀರಿನ ಸಮಸ್ಯೆ, ಸಂರಕ್ಷಣೆ ಮತ್ತು ಸಮುದಾಯ ಸಹಭಾಗಿತ್ವ

ಬಯೋಮೆಟ್ರಿಕ್ ಹಾಜರಾತಿಯಿಂದ ಏನು ಉಪಯೋಗ?

ಗ್ರಾಮೀಣ ಬಡತನ 2011-12ರಲ್ಲಿ ಶೇ 25.7 ರಷ್ಟಿತ್ತು. 2023-24ಕ್ಕೆ ಅದು ಶೇ. 4.86 ಕ್ಕೆ ಇಳಿದಿದೆ. ಹೀಗಾಗಿ ಉದ್ಯೋಗ ವ್ಯವಸ್ಥೆಯನ್ನು ಪುನರ್‌ರಚನೆ ಮಾಡಬೇಕಾಗುತ್ತಿದೆ. ಸಾವು, ವಲಸೆ ಇತ್ಯಾದಿ ಕಾರಣದಿಂದ ಹಲವಾರು ಫಲಾನುಭವಿಗಳ ಜಾಬ್ ಕಾರ್ಡ್​ಗಳು ನಿಷ್ಕ್ರಿಯವಾಗುತ್ತಿವೆ. ಇವನ್ನು ದುರುಪಯೋಗಪಡಿಸಿಕೊಳ್ಳುವ ಅವಕಾಶ ಇರುತ್ತದೆ. ಹೀಗಾಗಿ, ಕೆಲಸದ ಸ್ಥಳದಲ್ಲಿ ಬಯೋಮೆಟ್ರಿಕ್ ಹಾಜರಾತಿ ನಿಯಮಗಳನ್ನು ಜಾರಿ ಮಾಡಲಾಗುತ್ತದೆ. ಇದರಿಂದ ಫಂಡ್ ಹಣ ಪೋಲಾಗುವುದು ತಪ್ಪುತ್ತದೆ.

ಗಾಂಧೀಜಿ ಹೆಸರು ಇಲ್ಲವೆಂದಾಕ್ಷಣ ಕಾಯ್ದೆ ಬದಲಾಗಿಲ್ಲ…

ಈ ಕಾಯ್ದೆಯಲ್ಲಿ ಹೆಸರು ಮಾತ್ರವೇ ಬದಲಾಗಿದೆ. ಉದ್ಯೋಗ ಖಾತರಿ, ಕಾರ್ಮಿಕರ ಹಕ್ಕುಗಳು, ಕುಂದುಕೊರತೆ ಪರಿಹಾರ ಅಥವಾ ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕುವುದರಿಂದ ನೈತಿಕ ಅಧಿಕಾರ ದುರ್ಬಲಗೊಳ್ಳುತ್ತದೆ ಎಂದು ಕೇಳಿಬರುತ್ತಿರುವ ಟೀಕೆಗಳು ಗಂಭೀರ ಎನಿಸುವುದಿಲ್ಲ.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೆ ಹೊಸ ಕಾಯಿದೆ

ಹಿಂದೆ ಈ ವ್ಯವಸ್ಥೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿತ್ತು. ಫಲಾನುಭವಿಗಳಿಗೆ ಬಂದ ಹಣವನ್ನು ಮಧ್ಯವರ್ತಿಗಳೇ ನುಂಗಿ ಹಾಕುತ್ತಿದ್ದರು. ಕೇವಲ 76 ಲಕ್ಷ ಕಾರ್ಮಿಕರ ಆಧಾರ್ ಸೀಡಿಂಗ್‌ ಮಾಡಲಾಗಿತ್ತು. ಈಗ ವ್ಯವಸ್ಥೆ ಸುಧಾರಣೆಯಾಗಿದೆ. ರಾಷ್ಟ್ರೀಯ ಎಲೆಕ್ಟ್ರಾನಿಕ್ ನಿಧಿ ನಿರ್ವಹಣಾ ವ್ಯವಸ್ಥೆ 28 ರಾಜ್ಯ ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ಬಂದಿದೆ. ಈಗ ವೇತನ ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಹೋಗುತ್ತದೆ.

ಇದನ್ನೂ ಓದಿ: ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ

ವೇತನ ಮೇಲೇರದೇ ವಿಧಿಯಿಲ್ಲ…

ವೇತನದ ದರವು ಪ್ರಸ್ತುತ ದರಕ್ಕಿಂತ ಕಡಿಮೆ ಇರಲು ಸಾಧ್ಯವಿಲ್ಲ. ಹೀಗಾಗಿ, ವೇತನ ದರ ಮೇಲೇರಬೇಕೆ ಹೊರತು ಕಡಿಮೆ ಆಗಲು ಸಾಧ್ಯವಾಗದಂತೆ ಮಾಡಿದೆ ಈ ಪರಿಷ್ಕೃತ ಕಾಯ್ದೆ. ಹಾಗಾಗಿ, ಕಾರ್ಮಿಕರಿಗೆ ವೇತನ ಕಡಿಮೆ ಆಗುವ ಆತಂಕವಿಲ್ಲ. ವೇತನ ದರವನ್ನು ಸಮರ್ಪಕವಾಗಿ ನಿಗದಿ ಮಾಡಲು ಕೇಂದ್ರ ಸರ್ಕಾರ ಹೆಚ್ಚು ನಿಖರವಾದ ಹಣದುಬ್ಬರ ಸೂಚ್ಯಂಕಗಳನ್ನು ಬಳಸಬಹುದು. ಹೀಗೆ ಮಾಡಲು ಪದೇ ಪದೇ ಕಾಯ್ದೆಗೆ ತಿದ್ದುಪಡಿ ತರುವ ಅವಶ್ಯಕತೆ ಇರುವುದಿಲ್ಲ.

ಉದ್ಯೋಗ ಖಾತರಿ ದಿನಗಳ ಸಂಖ್ಯೆ ಹೆಚ್ಚಳ

ಕಾಯಿದೆಯು ಉದ್ಯೋಗ ಖಾತರಿಯನ್ನು ವಾರ್ಷಿಕವಾಗಿ 100 ರಿಂದ 125 ದಿನಗಳಿಗೆ ಹೆಚ್ಚಿಸುತ್ತದೆ, ಗ್ರಾಮೀಣ ಜೀವನೋಪಾಯ ಭದ್ರತೆಯನ್ನು ಬಲಪಡಿಸುತ್ತದೆ.

ಕಾಯಿದೆಯಡಿಯಲ್ಲಿನ ಪ್ರಸ್ತುತ ಬದಲಾವಣೆ ಜವಾಬ್ದಾರಿಯುತ ಬಳಕೆ, ಹಣಕಾಸಿನ ಶಿಸ್ತು ಮತ್ತು ಫಲಿತಾಂಶ ಆಧಾರಿತ ಖರ್ಚನ್ನು ಉತ್ತೇಜಿಸುತ್ತದೆ. ರಾಜ್ಯ, ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೆಲಸಗಳ ಉತ್ತಮ ಯೋಜನೆ ಮತ್ತು ಅನುಕ್ರಮವನ್ನು ಸಕ್ರಿಯಗೊಳಿಸುತ್ತದೆ. ಸಾರ್ವಜನಿಕ ಹಣವನ್ನು ಉತ್ಪಾದಕವಾಗಿ, ಪಾರದರ್ಶಕವಾಗಿ ಮತ್ತು ಬಾಳಿಕೆ ಬರುವ ಕಾರ್ಯಕ್ರಮ ರೂಪಿಸಲು ಬಳಸುವುದನ್ನು ಖಚಿತಪಡಿಸುತ್ತದೆ. ಕಾಯಿದೆಯಡಿ ಪ್ರಧಾನ ಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್‌ನ ಏಕೀಕರಣವು ಸ್ಥಳೀಯ ಅಭಿವೃದ್ಧಿಯ ಸಮಗ್ರ ಮತ್ತು ಸಮಗ್ರ ನೋಟವನ್ನು ಖಚಿತಪಡಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಕಾಪಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ವಿಡಿಯೋ ನೋಡಿ – Kannada News | Forest Department Staff Rescues Leopard From Well at At Ramanagara

ರಾಮನಗರ, (ಜನವರಿ 09): ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿ ಸಿಂಗರಾಜಿಪುರ ಗ್ರಾಮದ 30 ಅಡಿ ಆಳದ ಬಾವಿಗೆ ಚಿರತೆ ಬಿದ್ದು ಒದ್ದಾಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡಾಯಿಸಿ ಚಿರತೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ – Kannada News | Land Compensation Row: Dharwad NHAI Office and Hassan DC Car Seized by Court Order

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಜಪ್ತಿ

ಧಾರವಾಡ/ಹಾಸನ: ರೈತರಿಗೆ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಲಯದ ಆದೇಶದ ಅನ್ವಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧಾರವಾಡ ಕಚೇರಿ ಜಪ್ತಿ ಮಾಡಲಾಗಿದೆ. ರೈತರಿಗೆ ನೀಡಬೇಕಿದ್ದ 10 ಕೋಟಿ ರೂ. ಬಡ್ಡಿ ಹಣ ಪಾವತಿ ಮಾಡದ ಕಾರಣ, ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಷ್ಟ್ರೀಯ ಹೆದ್ದಾರಿ 63ಕ್ಕೆಂದು 2012ರಲ್ಲಿ ಗದಗ ನಗರದ ಹೊರಭಾಗದಲ್ಲಿನ ಜಮೀನು ಸ್ವಾಧೀನ ಪ್ರಕ್ರಿಯೆ ನಡೆದಿತ್ತು. ಸ್ವಾಧೀನಪಡಿಸಿಕೊಂಡಿದ್ದ ಕೃಷಿಯೇತರ ಜಮೀನಿನ ಪ್ರತಿ ಚದರ್​​ ಮೀಟರ್‌ಗೆ 1,800 ರೂ. ದರವನ್ನು ನಿಗದಿಪಡಿಸಲಾಗಿತ್ತು. ಇದನ್ನು ಪ್ರಶ್ನಿಸಿ 20 ರೈತರು ಜಿಲ್ಲಾ ದಂಡಾಧಿಕಾರಿಗಳ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ಪ್ರತಿ ಚದರ್​​ ಮೀಟರ್‌ಗೆ 3,400 ರೂ. ನೀಡುವಂತೆ ಆದೇಶಿಸಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಆದೇಶವನ್ನು ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರೂ ಕೋರ್ಟ್​​, ಡಿಸಿ ಕೋರ್ಟ್​​ ತೀರ್ಪನ್ನು ಎತ್ತಿ ಹಿಡಿದಿತ್ತು. ಕೋರ್ಟ್​​ ಆದೇಶದ ಅನ್ವಯ ಹೆದ್ದಾರಿ ಪ್ರಾಧಿಕಾರ ಪರಿಹಾರದ ಹಣವನ್ನು ನೀಡಿದ್ದರೂ 2012ರಿಂದ ಬಡ್ಡಿ ಹಣ ನೀಡಲು ಹಿಂದೇಟು ಹಾಕಿತ್ತು. ಹೀಗಾಗಿ ಇದನ್ನು ಪ್ರಶ್ನಿಸಿ ರೈತರು ಮತ್ತೆ ಕೋರ್ಟ್​​ ಮೊರೆ ಹೋಗಿದ್ದರು.

ಇದನ್ನೂ ಓದಿ: ಹಳೆ ವಾಹನ ಹೊಂದಿರುವವರಿಗೆ ಶಾಕ್​​ ಕೊಟ್ಟ ಸಾರಿಗೆ ಸಚಿವರು; 15 ವರ್ಷ ಮೀರಿದ ವೆಹಿಕಲ್ಸ್​​ ಜಪ್ತಿ

ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ

ಜಪ್ತಿ ಮಾಡಲಾದ ಕಾರು

ಇತ್ತ ಹಾಸನದಲ್ಲೂ ಭೂ ಪರಿಹಾರ ನೀಡದ ಹಿನ್ನೆಲೆ ಹಿರಿಯ ಸಿವಿಲ್ ನ್ಯಾಯಾಧೀಶರ ಆದೇಶದಂತೆ ಜಿಲ್ಲಾಧಿಕಾರಿ ಅವರ ಕಾರು ಜಪ್ತಿ ಮಾಡಲಾಗಿದೆ. ಸುಮಾರು‌ 20 ವರ್ಷಗಳ ಹಿಂದೆ ಯಗಚಿ ನಾಲೆಗಾಗಿ ಕಳೆದುಕೊಂಡಿದ್ದ ಭೂಮಿಗೆ 11 ಲಕ್ಷ 22 ಸಾವಿರ ಪರಿಹಾರದ ಮೊತ್ತ ಬಾಕಿ ಇರುವ ಕಾರಣ, ಸಂತ್ರಸ್ತರು ಕೋರ್ಟ್ ಮೆಟ್ಟಿಲೇರಿದ್ದರು.​ ಗುಂಟೆಗೆ 40 ಸಾವಿರದಂತೆ 10.5 ಗುಂಟೆಗೆ ಪರಿಹಾರ ನಿಗದಿಯಾಗಿತ್ತು. ಪರಿಹಾರ ನೀಡುವಂತೆ 2 ವರ್ಷದ ಹಿಂದೆಯೇ ಕೋರ್ಟ್ ಆದೇಶಿಸಿದ್ದರೂ ಹಣ ನೀಡದ ಹಿನ್ನೆಲೆ ಡಿಸಿ ಕಾರು ಜಪ್ತಿ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:22 pm, Fri, 9 January 26

Source link

RCB vs MI Live Score, WPL 2026: ಕೆಲವೇ ಕ್ಷಣಗಣಲ್ಲಿ ಉದ್ಘಾಟನಾ ಸಮಾರಂಭ ಆರಂಭ

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಸೀಸನ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಮೆಗಾ ಹರಾಜಿನ ನಂತರ ಎಲ್ಲಾ ತಂಡಗಳು ಪ್ರಮುಖ ಬದಲಾವಣೆಗಳಾಗಿದ್ದು ಕೆಲವು ತಂಡಗಳು ಹೊಸ ನಾಯಕಿಯರನ್ನು ನೇಮಿಸಿವೆ. ಇದರೊಂದಿಗೆ ಈ ಸೀಸನ್ ಹಲವು ವಿಧಗಳಲ್ಲಿ ವಿಶೇಷವಾಗಿದ್ದು, ಅದರಲ್ಲಿ ಪ್ರಮುಖವಾಗಿ ಇದೇ ಮೊದಲ ಬಾರಿಗೆ ಜನವರಿ-ಫೆಬ್ರವರಿಯಲ್ಲಿ ನಡೆಯುತ್ತಿದೆ. ಲೀಗ್​ನ ಮೊದಲ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ.

Source link