Category Archives: Blog

Your blog category

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆದಿದ್ದರೂ ಮುಖ್ಯಮಂತ್ರಿಗಳು ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸಿಲ್ಲ ಎಂದು ಜೆಡಿಎಸ್​​ ಆರೋಪಿಸಿದೆ. ಅಲ್ಲದೆ, ಕೋಗಿಲು ಲೇಔಟ್‌ನಲ್ಲಿ ಮನೆಗಳನ್ನು ತೆರವುಗೊಳಿಸುವ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದ್ದು, ಇದು ಜನವಿರೋಧಿ ನೀತಿ ಎಂದು ಕರೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆ; ಕುಟುಂಬಕ್ಕೆ ಪ್ರಧಾನಿ ಮೋದಿಯ ಪತ್ರ ನೀಡಿದ ಸಚಿವ ಜೈಶಂಕರ್ – Kannada News | Khaleda Zia’s Funeral Minister Jaishankar Hands Over PM Modi’s Letter To BNP Leaders family

ನವದೆಹಲಿ, ಡಿಸೆಂಬರ್ 31: ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಮತ್ತು ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಂದು ಢಾಕಾದಲ್ಲಿ ಲಕ್ಷಾಂತರ ಜನರು ಸೇರಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದಾಗಿ ಖಲೀದಾ ಜಿಯಾ ಮಂಗಳವಾರ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಹಲವು ದಶಕಗಳಿಂದ ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದ್ದ ಖಲೀದಾ ಜಿಯಾ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದರು.

ರಾಷ್ಟ್ರೀಯ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಗಾಗಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಬೆಂಬಲಿಗರು ಢಾಕಾದ ಬೀದಿಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಅಂತ್ಯಕ್ರಿಯೆಗಾಗಿ ರಾಜಧಾನಿ ಢಾಕಾದಲ್ಲಿ ಭದ್ರತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: Khaleda Zia Death: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

1981ರಲ್ಲಿ ಹತ್ಯೆಗೀಡಾದ ಅವರ ಪತಿ ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಶೇರ್-ಎ-ಬಾಂಗ್ಲಾ ನಗರದ ಜಿಯಾ ಉದ್ಯಾನ್‌ನಲ್ಲಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ನಡೆದಿದೆ. ಈ ವೇಳೆ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

ಭಾರತವನ್ನು ಪ್ರತಿನಿಧಿಸಿ ಢಾಕಾದಲ್ಲಿ ನಡೆದ ಖಲೀದಾ ಜಿಯಾ ಅವರ ಅಂತಿಮ ಯಾತ್ರೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡ ಭಾಗವಹಿಸಿದ್ದರು. ಅಂತ್ಯಕ್ರಿಯೆಗೂ ಮೊದಲು ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಬರೆದ ವೈಯಕ್ತಿಕ ಪತ್ರವನ್ನು ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರಿಗೆ ಹಸ್ತಾಂತರಿಸಿದರು.

“ಢಾಕಾಗೆ ತೆರಳಿ ಬಿಎನ್‌ಪಿಯ ಕಾರ್ಯಕಾರಿ ಅಧ್ಯಕ್ಷೆ ಮತ್ತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರನ್ನು ಭೇಟಿಯಾದೆ. ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಪತ್ರವನ್ನು ಅವರಿಗೆ ಹಸ್ತಾಂತರಿಸಿದೆ. ಭಾರತ ಸರ್ಕಾರ ಮತ್ತು ಜನರ ಪರವಾಗಿ ತೀವ್ರ ಸಂತಾಪ ಸೂಚಿಸಿದೆ” ಎಂದು ವಿದೇಶಾಂಗ ಸಚಿವ ಜೈಶಂಕರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ನಾಳೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಭಾರತದ ಸಚಿವ ಜೈಶಂಕರ್

ಖಲೀದಾ ಜಿಯಾ ಅವರ ದೃಷ್ಟಿಕೋನ ಮತ್ತು ಮೌಲ್ಯಗಳು ಭಾರತದ ಅಭಿವೃದ್ಧಿ ಮತ್ತು ಬಾಂಗ್ಲಾದೇಶದ ಪಾಲುದಾರಿಕೆಗೆ ಮಾರ್ಗದರ್ಶನ ನೀಡುತ್ತವೆ ಎಂದು ಜೈಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 3:39 pm, Wed, 31 December 25

Source link

2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು? – Kannada News | Kannada Film Industry witnesses more failure than success in year 2025

2025ರಲ್ಲಿ ಗೆದ್ದ ಕನ್ನಡ ಸಿನಿಮಾಗಳ (Kannada Movies) ಸಂಖ್ಯೆ ಕಡಿಮೆ. ಸೋಲಿನ ಸಂಖ್ಯೆಯೇ ಬಹುಪಾಲು ಇದೆ. ಆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಕನ್ನಡ ಚಿತ್ರರಂಗ (Kannada Film Industry) ಎಲ್ಲಿ ಎಡವುತ್ತಿದೆ? ತಪ್ಪು ತಿದ್ದಿಕೊಳ್ಳಬೇಕಾಗಿದ್ದು ಯಾರು? ಯಾವ ರೀತಿ ಒಳ್ಳೆಯ ಸಿನಿಮಾ ಮಾಡಬೇಕು ಎಂಬ ಬಗ್ಗೆ ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ‘2025 ಕನ್ನಡ ಚಿತ್ರರಂಗದ ಪಾಲಿಗೆ ಸವಾಲಿನ ವರ್ಷವಾಗಿತ್ತು ಎಂಬುದನ್ನು ಭಾರವಾದ ಹೃದಯದಿಂದ ಹೇಳುತ್ತಿದ್ದೇವೆ’ ಎನ್ನುವ ಮೂಲಕ ಈ ಬರಹ ಆರಂಭಿಸಲಾಗಿದೆ.

‘250ಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆ ಆದರೂ, ಚಿತ್ರೋದ್ಯಮವು ಬಹಳ ಸೀಮಿತ ಯಶಸ್ಸನ್ನು ಕಂಡಿತು. ಕೇವಲ 4 ಅಥವಾ 5 ಸಿನಿಮಾಗಳನ್ನು ಹೊರತುಪಡಿಸಿ, ಬಹುತೇಕ ಎಲ್ಲಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಪರಿಣಾಮ ಬೀರಲು ವಿಫಲವಾದವು. ಇದು ಕಂಟೆಂಟ್ ಮತ್ತು ಪ್ರೇಕ್ಷಕರ ನಿರೀಕ್ಷೆಗಳ ನಡುವೆ ಹೆಚ್ಚುತ್ತಿರುವ ಅಂತರವನ್ನು ಸ್ಪಷ್ಟವಾಗಿ ತಿಳಿಸುತ್ತಿದೆ. ಒಳ್ಳೆಯ ಸ್ಕ್ರಿಪ್ಟ್‌ಗಳು, ಉತ್ತಮ ಯೋಜನೆ ಮತ್ತು ಹೆಚ್ಚು ಪ್ರಾಮಾಣಿಕ ಸಿನಿಮಾಗಳ ನಿರ್ಮಾಣ ಮಾಡುವುದು ತುರ್ತು ಅಗತ್ಯವಾಗಿದೆ.’

‘ದೊಡ್ಡ ಸ್ಟಾರ್ ಕಲಾವಿದರು, ಹೆಸರಾಂತ ನಿರ್ದೇಶಕರು, ಪ್ರಮುಖ ನಿರ್ಮಾಣ ಸಂಸ್ಥೆಗಳು ಮತ್ತು ಭರವಸೆಯ ಯುವ ಪ್ರತಿಭೆಗಳು ಕೂಡ ತಮ್ಮ ಅಹಂಕಾರವನ್ನು ಬದಿಗಿಟ್ಟು ಅರ್ಥಪೂರ್ಣ ಸಹಯೋಗದತ್ತ ಗಮನ ಹರಿಸಬೇಕು. ಆಗ ಮಾತ್ರ ನಾವು ನಿಜವಾಗಿಯೂ ಬಲವಾದ ಬಾಕ್ಸ್ ಆಫೀಸ್ ಸಂಖ್ಯೆಗಳನ್ನು ವೀಕ್ಷಿಸಬಹುದು. ಇನ್ನೂ ಹೆಚ್ಚು ಕಳವಳಕಾರಿ ಸಂಗತಿಯೆಂದರೆ, ಹಲವಾರು ದೊಡ್ಡ ಸಿನಿಮಾಗಳಿಗೆ ಒಟಿಟಿ ಮತ್ತು ಕಿರುತೆರೆ ಪ್ರಸಾರ ಹಕ್ಕುಗಳ ಮಾರಾಟ ಕೂಡ ಕಷ್ಟಕರವಾಗಿದೆ.’

‘ಟ್ರೆಂಡ್ ಫಾಲೋ ಮಾಡುವುದು ಬಿಟ್ಟು ಮೂಲಭೂತ ವಿಷಯಗಳಾದ ಕಠಿಣ ಪರಿಶ್ರಮ, ಪ್ರಾಮಾಣಿಕತೆ ಮತ್ತು ಪ್ರತಿಭೆ ಮೇಲಿನ ನಂಬಿಕೆಗೆ ಮರಳುವ ಸಮಯ ಇದು. ಪ್ರೇಕ್ಷಕರು ಯಾವಾಗಲೂ ಉತ್ತಮ ಸಿನಿಮಾ ನೋಡಲು ಸಿದ್ಧರಿರುತ್ತಾರೆ. ಸಿನಿಮಾವನ್ನು ಪಾಪರಾಜಿ ಸಂಸ್ಕೃತಿ, ಕೃತಕ ಖ್ಯಾತಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಫಾಲೋವರ್ಸ್​​ಗಳಿಂದ ಗೊಂದಲಗೊಳಿಸಬೇಡಿ. ಲೈಕ್‌ಗಳು, ವೀಕ್ಷಣೆಗಳು ಮತ್ತು ಕಾಮೆಂಟ್‌ಗಳನ್ನು ಖರೀದಿಸುವ ರೀತಿಯಲ್ಲಿ ನೀವು ಪ್ರೇಕ್ಷಕರನ್ನು ಖರೀದಿಸಲು ಸಾಧ್ಯವಿಲ್ಲ.’

ಇದನ್ನೂ ಓದಿ: ‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?

‘ನಿಜವಾದ ತಾರಾಪಟ್ಟವು ಸ್ಥಿರವಾದ ಪ್ರಯತ್ನ ಮತ್ತು ಗುಣಮಟ್ಟದ ಕಥೆ ಹೇಳುವಿಕೆಯ ಮೂಲಕ ನಿರ್ಮಿಸಲ್ಪಡುತ್ತದೆ. ಹೆಚ್ಚು ಕೆಲಸ ಮಾಡಿ, ಕಡಿಮೆ ಮಾತನಾಡಿ. ಒಂದು ಕಲಾ ಪ್ರಕಾರವಾಗಿ ಸಿನಿಮಾ ಗೌರವಕ್ಕೆ ಅರ್ಹವಾಗಿದೆ. ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿ, ಪ್ರಾಮಾಣಿಕ ಕಥೆಗಳನ್ನು ಹೇಳಿ ಮತ್ತು ಕೆಲಸವೇ ಮಾತನಾಡಲು ಬಿಡಿ. ಏಕೆಂದರೆ ಇತಿಹಾಸವು ನಮಗೆ ತೋರಿಸಿರುವ ಪ್ರಕಾರ, ಕಲ್ಪಿತ ಸ್ಟಾರ್​ಡಮ್ ಮತ್ತು ಬಾಹ್ಯ ಪ್ರಚಾರವು ದೊಡ್ಡ ನಿರ್ದೇಶಕರು ಮತ್ತು ನಿರ್ಮಾಪಕರನ್ನು ಸಹ ಕೆಡವಬಲ್ಲದು’ ಎಂದು ‘ಕರ್ನಾಟಕ ಬಾಕ್ಸ್ ಆಫೀಸ್’ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

KSRTC ಬಸ್​​-ಲಾರಿ ನಡುವೆ ಭೀಕರ ಅಪಘಾತ: ತುಂಡಾದ ಚಾಲಕನ ಕಾಲು; ಹಲವರು ಗಂಭೀರ – Kannada News | KSRTC Bus and Lorry Accident on the Outskirts of Lokapur, Bagalakot

ಬಾಗಲಕೋಟೆ, ಡಿಸೆಂಬರ್​​ 31: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ. ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು ಜನರ ದೋಚುತ್ತಿರುವ ‘ಜನ ನಾಯಕ’ ವಿಜಯ್ – Kannada News | Jana Nayagan movie advance booking open in Bengaluru with high ticket price

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾಕ್ಕೆ ‘ಜನ ನಾಯಗನ್’ ಎಂದು ಹೆಸರಿಟ್ಟಿದ್ದಾರೆ. ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದು, ಸಿನಿಮಾ ಅನ್ನು ತಮ್ಮ ರಾಜಕೀಯ ಅಜೆಂಡಕ್ಕೆ ಪ್ರಚಾರ ಕೊಡಲು ಟೂಲ್ ಆಗಿ ಬಳಸುತ್ತಿದ್ದಾರೆ. ವಿಪರ್ಯಾಸವೆಂದರೆ ‘ಜನ ನಾಯಗನ್’ (ಜನ ನಾಯಕ) ಎಂದು ಹೆಸರಿಟ್ಟುಕೊಂಡು ಬೆಂಗಳೂರಿನ ಸಿನಿಮಾ ಪ್ರೇಮಿಗಳ ಲೂಟಿಗೆ ಇಳಿದಿದ್ದಾರೆ ನಟ ವಿಜಯ್ ಮತ್ತು ‘ಜನ ನಾಯಗನ್’ ಚಿತ್ರತಂಡ. ಹೇಗದು? ವಿವರ ಇಲ್ಲಿದೆ ನೋಡಿ…

‘ಜನ ನಾಯಗನ್’ ತಮಿಳು (ಕನ್ನಡ ಡಬ್ ಇಲ್ಲ) ಸಿನಿಮಾ ಜನವರಿ 09 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭವಾಗಿದೆ. ಜನವರಿ 09ರ ಬೆಳಿಗ್ಗೆ 6:30ಕ್ಕೆ ವಿಶೇಷ ಶೋ ಪ್ರದರ್ಶನವಾಗುತ್ತಿದ್ದು, ಬೆಂಗಳೂರಿನಲ್ಲೂ ಮುಂಗಡ ಬುಕಿಂಗ್ ಓಪನ್ ಆಗಿದ್ದು, ಬೆಂಗಳೂರಿನಲ್ಲಿ ಪ್ರತಿ ಟಿಕೆಟ್ ದರ 1000 ರೂಪಾಯಿಗಳಿಗೂ ಹೆಚ್ಚಿದೆ. ಪ್ರಸ್ತುತ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಮಾತ್ರವೇ ಮುಂಗಡ ಬುಕಿಂಗ್ ಓಪನ್ ಆಗಿದ್ದು, ಸಿಂಗಲ್ ಸ್ಕ್ರೀನ್​​ಗಳಲ್ಲಿಯೇ ಟಿಕೆಟ್ ದರ 800 ರಿಂದ ಪ್ರಾರಂಭವಾಗುತ್ತಿದ್ದು, ಕೆಲವೆಡೆ 1200-1500 ರೂಪಾಯಿಗಳು ಸಹ ನಿಗದಿಪಡಿಸಲಾಗಿದೆ.

ಮಧ್ಯಮ ವರ್ಗದ ಚಿತ್ರಮಂದಿರಗಳು ಎನಿಸಿಕೊಂಡಿದ್ದ ವೀರೇಶ್, ನವರಂಗ ಅಂಥಹಾ ಚಿತ್ರಮಂದಿರಗಳಲ್ಲಿಯೂ ಸಹ ‘ಜನ ನಾಯಗನ್’ ಸಿನಿಮಾದ ಟಿಕೆಟ್​ನ ಆರಂಭಿಕ ದರವೇ 800 ರೂಪಾಯಿಗಳಿವೆ. ಬಾಲ್ಕನಿ ಟಿಕೆಟ್ ದರ 1000 ರೂಪಾಯಿಗಳಿದೆ. ಮಲ್ಟಿಪ್ಲೆಕ್ಸ್​​ಗಳಲ್ಲಿ ಮುಂಗಡ ಬುಕಿಂಗ್ ಇನ್ನೂ ಆರಂಭ ಆಗಿಲ್ಲ, ಸಿಂಗಲ್ ಸ್ಕ್ರೀನ್​​ಗಳಲ್ಲಿಯೇ 1000 ರೂಪಾಯಿ ಇರುವ ಟಿಕೆಟ್ ದರ ಮಲ್ಟಿಪ್ಲೆಕ್ಸ್​​ಗಳಲ್ಲಿ ದುಪ್ಪಟ್ಟಾಗುವ ಸಾಧ್ಯತೆ ಇದೆ. ಒಟ್ಟಾರೆ, ವಿಜಯ್, ಬೆಂಗಳೂರಿನ ಸಿನಿಮಾ ಪ್ರೇಮಿಗಳನ್ನು ದೋಚಲೆಂದೇ ಬಂದಂತಿದೆ.

ಇದನ್ನೂ ಓದಿ:ಕರೂರು ಘಟನೆಯಿಂದ ‘ಜನ ನಾಯಗನ್’ ರಿಲೀಸ್ ಮುಂದಕ್ಕೆ? ಇಲ್ಲಿದೆ ಹೊಸ ಅಪ್​ಡೇಟ್

ಲೂಟಿಗೆ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡಂತಿದೆ ‘ಜನ ನಾಯಗನ್’ ಚಿತ್ರತಂಡ, ಏಕೆಂದರೆ ಈ ಮುಂಗಡ ಬುಕಿಂಗ್, ವಿಶೇಷ ಶೋ ಸದ್ಯಕ್ಕೆ ಬೆಂಗಳೂರಿನಲ್ಲಿ ಮಾತ್ರ. ಚೆನ್ನೈ, ಹೈದರಾಬಾದ್​​ನಲ್ಲಿ ಇನ್ನೂ ಮುಂಗಡ ಬುಕಿಂಗ್ ಆರಂಭವೇ ಆಗಿಲ್ಲ. ಆರಂಭ ಆದರೂ ಸಹ ಚೆನ್ನೈನಲ್ಲಿ ತೀರ ಹೆಚ್ಚೆಂದರೆ 300 ರೂಪಾಯಿ ವಿಶೇಷ ಶೋಗೆ ಹಾಗೂ 100 ರೂಪಾಯಿ ಸಾಮಾನ್ಯ ಶೋಗೆ ಬೆಲೆ ಇರಲಿದೆ. ವಿಜಯ್ ಅವರ ಈ ಹಿಂದಿನ ಸಿನಿಮಾಗಳಿಗೆ ಚೆನ್ನೈನಲ್ಲಿ ಇಷ್ಟೆ ಟಿಕೆಟ್ ಬೆಲೆ ಇತ್ತು. ಹೈದರಾಬಾದ್​​ನಲ್ಲಿಯೂ ಸಹ ಇದೇ ಪರಿಸ್ಥಿತಿ ಇರಲಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ನಾಲ್ಕು ಪಟ್ಟು ಹೆಚ್ಚು ಬೆಲೆಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

‘ಜನ ನಾಯಗನ್’ ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ರಾಜಕೀಯ ಪಕ್ಷ ಕಟ್ಟಿರುವ ವಿಜಯ್, ‘ಜನ ನಾಯಗನ್’ ಬಳಿಕ ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ. ‘ಜನ ನಾಯಗನ್’ ಸಿನಿಮಾ ತೆಲುಗಿನ ‘ಭಗವಂತ್ ಕೇಸರಿ’ ಸಿನಿಮಾದ ರೀಮೇಕ್ ಆಗಿದ್ದು, ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿ, ಮಲಯಾಳಂ ನಟಿ ಮಮಿತಾ ಬಿಜು ಸಹ ನಟಿಸಿದ್ದಾರೆ. ಬಾಬಿ ಡಿಯೋಲ್ ವಿಲನ್. ಎಚ್ ವಿನೋದ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ಕೆವಿಎನ್ ಪ್ರೊಡಕ್ಷನ್ಸ್. ಕನ್ನಡದ ‘ಸಖತ್’, ‘ಬೈ ಟು ಲವ್’ ಸಿನಿಮಾಗಳನ್ನು ನಿರ್ಮಿಸಿರುವ ಕೆವಿಎನ್, ಪ್ರಸ್ತುತ ‘ಟಾಕ್ಸಿಕ್’, ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ – Kannada News | Drunken Prank Leads to Death: Youth Tragically Dies in Nelamangala

ನೆಲಮಂಗಲ, ಡಿಸೆಂಬರ್​​ 31: ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್​​ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಬಳಿಕ ತಮಾಷೆ ಮಾಡಲು ಹೋಗಿ ನೇಣಿನ ಕುಣಿಕೆಗೆ ಸಿಲುಕಿ ವಿಜಯ್ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 8 ಗಂಟೆಗೆ ಘಟನೆ ನಡೆದಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಲಿಫ್ಟ್​ ಕೊಡುವುದಾಗಿ ಹತ್ತಿಸಿಕೊಂಡು ಕಾರಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಇದೇ ರೀತಿ ಹಿಂದೆಯೂ ತಮಾಷೆ ಮಾಡಿದ್ದ ವಿಜಯ್​​

ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ವಿಜಯ್​​ಕುಮಾರ್​​ಗೆ ಮದುವೆ ಮಾಡಬೇಕೆಂದು ತಾಯಿ ಕನಸು ಕಂಡಿದ್ದರು. ಚೆನ್ನಾಗಿ ಮಾತನಾಡುತ್ತಾ ತಮಾಷೆಯ ಸ್ವಾಭಾವ ಹೊಂದಿದ್ದ ವಿಜಯ್​​ ಮದ್ಯಪಾನ ಮಾಡಿ ಬಂದಿದ್ದಕ್ಕೆ ತಾಯಿ ಬೈದಿದ್ದರು. ಆ ವೇಳೆ ಆಕೆಯನ್ನು ತಮಾಷೆಗೆ ಹೆದರಿಸಲು ಹೋಗಿ ವಿಜಯ್​​ ನೇಣಿನ ಕುಣಿಕೆಗೆ ಸಿಲುಕಿದ್ದು, ಮನೆಯವರಿಗೆ ಇದು ಗಮನಕ್ಕೆ ಬರುವಷ್ಟರಲ್ಲಿ ಆತನ​​ ಪ್ರಾಣಪಕ್ಷಿ ಹಾರಿ ಹೋಗಿತ್ತು. ಹೆತ್ತವರ ಬಳಿ ಇದೇ ರೀತಿ ಹಲವು ಬಾರಿ ಈತ ತಮಾಷೆ ಮಾಡಿದ್ದು, ಸಾವಿನ ವಿಚಾರದಲ್ಲಿ ತಮಾಷೆ ಮಾಡಬೇಡ ಕಣೋ ಎಂದು ಹಲವು ಬಾರಿ ತಾಯಿಯೂ ವಿಜಯ್​​ಗೆ ಬುದ್ಧಿ ಹೇಳಿದ್ದರು. ಆದರೂ ಅದೇ ಚಾಳಿ ಮುಂದುವರಿಸಿದ್ದ ಕಾರಣ ಈಗ ಮಗ ಪ್ರಾಣವನ್ನೇ ಕಳೆದುಕೊಂಡಿದ್ದಾನೆ ಎಂದು ಕುಟುಂಬಸ್ಥರು ಅಲವತ್ತುಕೊಂಡಿದ್ದಾರೆ.

ವರದಿ: ಮಂಜುನಾಥ್​​, ಡಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ – Kannada News | Bengaluru Majestic Metro: Security Guard Assaulted for Queue Instruction

ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ (Namma Metro) ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರೀನ್ ಲೈನ್ ರೈಲು ಹತ್ತುವಾಗ ಸರದಿಯಲ್ಲಿ ನಿಲ್ಲುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ಆರೋಪಿಗಳು ಸಿಬ್ಬಂದಿಯನ್ನು ಥಳಿಸಿದ್ದಾರೆ.

ಭದ್ರತಾ ಸಿಬ್ಬಂದಿಗೇ ಕಾಲಿನಿಂದ ಒದ್ದ ಪ್ರಯಾಣಿಕ

ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯ ಹೆಸರು ಇಂದ್ರಜಿತ್. ಮಧ್ಯಾಹ್ನ 12.45ರ ಸುಮಾರಿಗೆ ಗ್ರೀನ್ ಲೈನ್‌ನ ಪ್ಲಾಟ್‌ಫಾರ್ಮ್ 3ರಲ್ಲಿ ಈ ಘಟನೆ ನಡೆದಿದೆ. ಮಡವಾರದ ಕಡೆ ಪ್ರಯಾಣಿಸಲು ಬಂದಿದ್ದ ನಾಲ್ವರು ಯುವಕರು ಪ್ಲಾಟ್‌ಫಾರ್ಮ್‌ನಲ್ಲಿ ಸರದಿ ಪಾಲಿಸದೆ ರೈಲಿಗೆ ಏರಲು ಯತ್ನಿಸಿದರು. ಸುರಕ್ಷತೆಯ ದೃಷ್ಟಿಯಿಂದ ಖಾಲಿ ಸ್ಥಳದಲ್ಲಿ ಸರದಿ ರೂಪಿಸಿಕೊಳ್ಳುವಂತೆ ಇಂದ್ರಜಿತ್ ಸೂಚನೆ ನೀಡಿದರು. ಆದರೆ ಅವರು ಸೂಚನೆ ಪಾಲಿಸದೆ 12.47ಕ್ಕೆ ಬಂದ ರೈಲನ್ನು ತಪ್ಪಿಸಿಕೊಂಡರು.

ಇದನ್ನೂ ಓದಿ ಮೆಟ್ರೋ ಪ್ರಯಾಣಿಕರಿಗೆ ಶುಭಸುದ್ದಿ: ಹಸಿರು ಮಾರ್ಗಕ್ಕೆ ಸೇರ್ಪಡೆಗೊಳ್ಳಲಿವೆ 21 ಹೊಸ ರೈಲುಗಳು

ಮುಂದಿನ ರೈಲಿಗೆ ಸರದಿಯಲ್ಲಿ ನಿಲ್ಲುವಂತೆ ಪುನಃ ಹೇಳಿದಾಗ, ಆರೋಪಿಗಳಲ್ಲಿ ಒಬ್ಬರು ಇಂದ್ರಜಿತ್‌ಗೆ ಏಳು ಬಾರಿ ಕಪಾಳಮೋಕ್ಷ ಮಾಡಿದ್ದು, ಮತ್ತೊಬ್ಬರು ಕಾಲಿನಿಂದ ಒದ್ದಿದ್ದಾರೆ ಎನ್ನಲಾಗಿದೆ. ಹಲ್ಲೆಯ ಬಳಿಕ ಮೆಟ್ರೋ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಈ ವೇಳೆ ಇಬ್ಬರು ವಯೋವೃದ್ಧ ಪ್ರಯಾಣಿಕರು ಆರೋಪಿಗಳನ್ನು ಪ್ರಶ್ನಿಸಿ ಮುಂದಿನ ರೈಲಿಗೆ ಏರದಂತೆ ತಡೆದಿದ್ದಾರೆ. ಉಪ್ಪಾರಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುದೊಯ್ದಿದ್ದು, ಇಂದ್ರಜಿತ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಇಂದು ಸಂಜೆಯಿಂದ ಈ ರಸ್ತೆ ಬಂದ್ – Kannada News | Bengaluru: Electronic City Flyover Closed Tonight for New Year Safety

ಬೆಂಗಳೂರು, ಡಿ. 31: ಬೆಂಗಳೂರಿನ ಅತಿ ಉದ್ದದ ಪ್ಲೈ ಓವರ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಪ್ಲೈ ಓವರ್ ಇಂದು ಬಂದ್​​​ ಆಗಲಿದೆ. ಸಿಲ್ಕ್ ಬೋರ್ಡ್​​​ನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಇರುವ 9 ಕಿ.ಲೋ ಮೀಟರ್​​​​ ಉದ್ದವಾಗಿರುವ ಈ ಪ್ಲೈ ಓವರ್ ಹೊಸ ವರ್ಷದ ಪ್ರಯುಕ್ತ ಕ್ಲೋಸ್​​​ ಮಾಡಲಾಗುವುದು. ಇಂದು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಈ ಪ್ಲೈ ಓವರ್ ಬಂದ್​​​​ ಮಾಡಲಾಗುವುದು ಎಂದು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಪೊಲೀಸರು ಮನವಿ ಮಾಡಿದ್ದಾರೆ. ಬೈಕ್, ಕಾರು, ಬಸ್ ಟ್ರಕ್ ಎಲ್ಲಾ ವಾಹನಗಳಿಗೆ ನಿರ್ಬಂಧ ಮಾಡಲಾಗಿದೆ. ಹೊಸ ವರ್ಷಾಚರಣೆ ನಶೆಯಲ್ಲಿ ಅಪಘಾತಗಳು ಆಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಈ ಪ್ಲೈ ಓವರ್ ಬಂದ್​​ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್ – Kannada News | Bengaluru Police Commissioner Seemanth Kumar Singh reaction to Vijayalakshmi Darshan allegations

ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಮಾಡಿದವರ ವಿರುದ್ಧ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರು ದೂರು ನೀಡಿದ್ದರು. ಆದರೆ ಪೊಲೀಸರು ಈ ಬಗ್ಗೆ ಕ್ರಮ ತೆಗೆದಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ಆರೋಪಿಸಿದ್ದರು. ತಮ್ಮ ದೂರನ್ನು ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದರು. ಅದಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನನ್ನ ಪ್ರಕಾರ, ವಿಜಯಲಕ್ಷ್ಮಿ ಅವರ ಆರೋಪ ಸುಳ್ಳು. ಎಲ್ಲರಿಗೋಸ್ಕರ ನಾವು ಪೊಲೀಸರು ಇದ್ದೇವೆ. ಯಾವುದೇ ಒಂದು ವರ್ಗಕ್ಕಾಗಿ ಅಲ್ಲ. ನಾವು ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಈ ಪ್ರಕರಣದಲ್ಲಿ ಕೂಡ ನಮ್ಮವರು ತಕ್ಷಣ ಕೇಸ್ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಹಂತದಲ್ಲಿ ಮಾಡಿದ್ದೇವೆ. ಡಿಸಿಪಿ ಹಂತದಲ್ಲಿ ತನಿಖೆ ನಡೆಯುತ್ತಿದೆ. ಕೆಲವೊಮ್ಮೆ ತಕ್ಷಣಕ್ಕೆ ಸುಳಿವು ಸಿಗುತ್ತದೆ. ಕೆಲವೊಮ್ಮ ವಿಳಂಬ ಆಗುತ್ತದೆ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶ ಇಲ್ಲ. ಯಾವುದೇ ಕೇಸ್​​ನಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಮಾಡಿದರೆ ಅಂಥ ಅಧಿಕಾರಿಗಳ ಮೇಲೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಸೀಮಂತ್ ಕುಮಾರ್ (Seemanth Kumar Singh) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್ – Kannada News | Devdutt Padikkal and Mayank Agarwal Smashed Century in VHT

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು.

ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 113 ರನ್ ಬಾರಿಸಿ ದೇವದತ್ ಪಡಿಕ್ಕಲ್ ಔಟಾದರು.

ಇದಾಗ್ಯೂ ಮತ್ತೊಂದೆಡೆ ಇನಿಂಗ್ಸ್ ಕಟ್ಟುವ ಕಾಯಕ ಮುಂದುವರೆಸಿದ ಮಯಾಂಕ್ ಅಗರ್ವಾಲ್ 124 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ಗಳನ್ನು ಬಾರಿಸಿದರು. ಈ ಮೂಲಕ 132 ರನ್​ಗಳನ್ನು ಬಾರಿಸಿ ಮಯಾಂಕ್​​ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಕರುಣ್ ನಾಯರ್ ತಮ್ಮ ಅನುಭವಯನ್ನು ಧಾರೆಯೆದರು. ಈ ಮೂಲಕ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು.

ಇನ್ನು ಸ್ಮರಣ್ ರವಿಚಂದ್ರನ್ 21 ರನ್​ಗಳ ಕೊಡುಗೆ ನೀಡಿದರೆ, ಅಭಿನವ್ ಮನೋಹರ್ 6 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 21 ರನ್ ಬಾರಿಸಿದರು. ಈ ಮೂಲಕ ಕರ್ನಾಟಕ ತಂಡವು 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 363 ರನ್​ ಕಲೆಹಾಕಿದೆ.

ಪುದುಚೇರಿ (ಪ್ಲೇಯಿಂಗ್ XI): ಸಿದಕ್ ಸಿಂಗ್, ವಿಶಾಲ್ ಖೋಖರ್, ಅಜಯ್ ರೊಹೆರಾ (ವಿಕೆಟ್ ಕೀಪರ್), ನೆಯಾನ್ ಶ್ಯಾಮ್ ಕಂಗಾಯನ್, ಜಶ್ವಂತ್ ಶ್ರೀರಾಮ್, ಮೋಹಿತ್ ಕಾಳೆ, ಪಾರ್ಥ್ ವಘಾನಿ, ಅಮಾನ್ ಖಾನ್ (ನಾಯಕ), ಜಯಂತ್ ಯಾದವ್, ಸಾಗರ್ ಉದೇಶಿ, ವಿಕನೇಶ್ವರನ್ ಮರಿಮುತ್ತು.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಅಭಿನವ್ ಮನೋಹರ್, ಶ್ರೀಶ ಆಚಾರ್, ಅಭಿಲಾಷ್ ಶೆಟ್ಟಿ, ವಿಧ್ವತ್ ಕಾವೇರಪ್ಪ, ಮನ್ವಂತ್ ಕುಮಾರ್.

Source link