Headlines

ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು? – Kannada News | Vijayapura Chain Snatching: Woman Ear Severed, Gold Stolen

ವಿಜಯಪುರ, ಡಿಸೆಂಬರ್​ 27: ವಿಜಯಪುರ ನಗರದಲ್ಲಿ ಸರಗಳ್ಳರ (Chain Snatching) ಹಾವಳಿ ಮುಂದುವರಿದಿದೆ. ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ (woman) ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುವಂತಹ ಘಟನೆ ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದದ್ದೇನು? ಕಲಾವತಿ ಗಾಯ್ಕವಾಡ್​​ ಹಾಲು ತರಲು ಅಂಗಡಿಗೆ ತೆರಳುತ್ತಿದ್ದರು. ಈ…

Read More

ಅವರೇ ಮೇಳದಲ್ಲಿ ಮಹಿಳೆಯೊಬ್ಬರು ಡಿಕೆಶಿಗೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ – Kannada News | DCM Sir When You CM? Woman Asks Question To DK Shivakumar In Bengaluru

ಬೆಂಗಳೂರು, (ಡಿಸೆಂಬರ್ 27): ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುತ್ತಿದ್ದಾರೆ. ಇದರ ನಡುವೆ ಮಹಿಳೆಯೊಬ್ಬರು, ಡಿಸಿಎಂ ಸರ್‌ ಯಾವಾಗ ಸಿಎಂ ಆಗ್ತೀರಾ ಎಂದು ಡಿಕೆಶಿಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ. ಹೌದು…ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಡಿಕೆ ಶಿವಕುಮಾರ್ ಭಾಷಣ…

Read More

ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ಧರಾಮಯ್ಯ – Kannada News | Bengaluru Kogilu Demolition: Unauthorised Structures Razed, Migrants to Receive Aid

ಬೆಂಗಳೂರು, ಡಿ.27: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಹಲವು ಕುಟುಂಬಗಳನ್ನು ನಿರ್ಗತಿಕರನ್ನಾಗಿ ಮಾಡಿದೆ. 2021ರಿಂದಲೂ ಈ ಪ್ರದೇಶದಲ್ಲಿನ ನಿವಾಸಿಗಳು ಅನಧಿಕೃತವಾಗಿ ನೆಲೆಸಿದ್ದರು. ಈ ವಸತಿಗಳು ಐದು ಎಕರೆ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದ ಕಾರಣ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತಿದ್ದವು. ನಿವಾಸಿಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದರೂ, ಅವರು ಜಾಗ ಖಾಲಿ ಮಾಡಿರಲಿಲ್ಲ. ಇದಾದ ಬಳಿಕ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಮಿಷನರ್ ಮತ್ತು…

Read More

Ambedkar University Delhi: ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ 71 ಪ್ರಾಧ್ಯಾಪಕ ಮತ್ತು ಇತರೆ ಹುದ್ದೆಗಳಿಗೆ ನೇಮಕಾತಿ – Kannada News | Ambedkar University Delhi Jobs: Professor Vacancy, 71 Posts | Apply Before Jan 9

ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯ (AUD) ಪ್ರಾಧ್ಯಾಪಕ ಹುದ್ದೆ ಸೇರಿದಂತೆ ಹಲವಾರು ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ಒಟ್ಟು 71 ಹುದ್ದೆಗಳಿಗೆ ನೇಮಕಾತಿ ಲಭ್ಯವಿದೆ. ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜನವರಿ 9 ವರೆಗೆ ಇರಲಿದೆ. ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆದಾಗ್ಯೂ, ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಜನವರಿ 16 ರವರೆಗೆ ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯಕ್ಕೆ ಸಲ್ಲಿಸಬಹುದು. ದೆಹಲಿಯ ಅಂಬೇಡ್ಕರ್ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳಿಗೆ ಜನವರಿ 9…

Read More

Gold Rate Today Bangalore: ಮೈಝುಮ್ಮೆನಿಸುವಷ್ಟು ಜಿಗಿದ ಚಿನ್ನ, ಬೆಳ್ಳಿ ಬೆಲೆ – Kannada News | Gold Price Today on 27th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 27: ಚಿನ್ನ, ಬೆಳ್ಳಿ ಬೆಲೆಗಳ ಸತತ ಏರಿಕೆ ಮುಂದುವರಿಯುತ್ತಲೇ ಇದೆ. ಶನಿವಾರ ಚಿನ್ನದ ಬೆಲೆ (Gold Rate) 110 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ ಚೆನ್ನೈನಲ್ಲಿ 13,000 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಂದು ಏರಿದೆ. ಬೆಳ್ಳಿ ಬೆಲೆಯಂತೂ ಜಿಗಿಜಿಗಿದು ಓಡುವುದು ಮುಂದುವರಿದಿದೆ. ಶನಿವಾರ ಒಂದು ಗ್ರಾಮ್ ಬೆಳ್ಳಿ ಬೆಲೆ 11 ರೂ ಹೆಚ್ಚಳಗೊಂಡು 251 ರೂ ಮುಟ್ಟಿದೆ. ಚೆನ್ನೈನಲ್ಲಂತೂ ಇದರ ಬೆಲೆ 274 ರೂಗೆ ಏರಿದೆ. ವರ್ಷದ ಹಿಂದೆ…

Read More

ನಪುಂಸಕ, ಗಂಡಸೇ ಅಲ್ಲ: ಹೆಂಡ್ತಿ ಕುಟುಂಬಸ್ಥರ ಆರೋಪ, ಮನನೊಂದು ಪತಿ ಸಾವಿಗೆ ಶರಣು – Kannada News | Bengaluru Husband Suraj Also Commits Suicide In nagpur after Wife Ganvi Death In bengaluru

ಬೆಂಗಳೂರು, (ಡಿಸೆಂಬರ್ 27): ರಾಮಮೂರ್ತಿ ನಗರದಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್‌, ಜಯಂತಿ, ಸೂರಜ್‌ ಸಹೋದರ ಸಂಜಯ್‌ ಮಹಾರಾಷ್ಟ್ರದ ನಾಗ್ಪುರಕ್ಕೆ(Nagpura) ತೆರಳಿದ್ದು ನಿನ್ನೆ ಸಂಜೆ ಜಯಂತಿ, ಸೂರಜ್ ಸೋನೆಗಾಂವ್‌ನಲ್ಲಿರುವ ರಾಯಲ್‌ ವಿಲ್ಲಾ ಹೋಟೆಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಸೂರಜ್‌ ಮೃತಪಟ್ಟಿದ್ದರೆ, ಜಯಂತಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸೂರಜ್…

Read More

Video: 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್ – Kannada News | CCTV Captures Cow Theft: Lakshman’s 3 Cows Vanish from Bengaluru Plot

ಬೆಂಗಳೂರು, ಡಿ.27: ಮನೆ ಬಳಿಯ ಖಾಲಿ ಜಾಗದಲ್ಲಿದ್ದ ಹಸುಗಳ ಕಳ್ಳತನ ಮಾಡಿರುವ ಘಟನೆ ನಗರದ ಸಂಪಿಗೇಹಳ್ಳಿಯ ಮಂಜುನಾಥ ಲೇಔಟ್​​​​ನಲ್ಲಿ ನಡೆದಿದೆ. 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ ಮಾಡಲಾಗಿದೆ. ಲಕ್ಷ್ಮಣ್ ಎಂಬುವರಿಗೆ ಸೇರಿದ್ದ ಮೂರು ಹಸುಗಳು ಎಂದು ಹೇಳಲಾಗಿದೆ. ಗುರುವಾರ (ಡಿ.25) ರಾತ್ರಿ 1.20ಕ್ಕೆ ಧನಗಳನ್ನು ಕಳ್ಳತನ ಮಾಡಲಾಗಿದೆ ಎಂದು ಹೇಳಲಾಗಿದೆ. ಮಿನಿ ಟೆಂಪೋದಲ್ಲಿ ಬಂದ ಐದು ಜನ ಹಸುಗಳ ಕಳ್ಳತನ ಮಾಡಿದ್ದಾರೆ. ಖಾಲಿ ಜಾಗದಲ್ಲಿ ಹಸುಗಳನ್ನು ಕಟ್ಟಿದ್ದ ಲಕ್ಷ್ಮಣ್, ಬೆಳಿಗ್ಗೆ ಬಂದು ನೋಡಿದ್ರೆ…

Read More

ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ – Kannada News | Year 2025: The Turning Point in India’s Technological Self Determination

2025ರ ವರ್ಷವು ಭಾರತದ ವೈಜ್ಞಾನಿಕ ಮತ್ತು ತಂತ್ರಜ್ಞಾನ ಪ್ರಯಾಣದಲ್ಲಿ ಪ್ರಮುಖ ಟರ್ನಿಂಗ್ ಪಾಯಿಂಟ್ ಎನಿಸಿದೆ. ಪ್ರಮುಖ ಕ್ಷೇತ್ರಗಳಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ದೇಶ ಮುನ್ನಡೆದಿದೆ. ಜಾಗತಿಕ ಮಾನ ಸನ್ಮಾನ ಗಿಟ್ಟಿಸಿದೆ. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್​ಗಳಿಂದ ಹಿಡಿದು ಬಾಹ್ಯಾಕಾಶ ಅನ್ವೇಷಣೆ, ಪರಮಾಣ ಶಕ್ತಿ, ಪ್ರಮುಖ ಖನಿಜಗಳವರೆಗೆ ಭಾರತ ಜಾಗತಿಕ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿರುವುದು ಮಾತ್ರ, ಹೊಸ ತಂತ್ರಜ್ಞಾನ ರೂಪಿಸುವ ಸಾಮರ್ಥ್ಯವನ್ನೂ ತೋರಿದೆ. ಭಾರತದ ಸ್ವತಂತ್ರ ಇತಿಹಾಸದಲ್ಲಿ ಮೊದಲ ಬಾರಿಗೆ ತಂತ್ರಜ್ಞಾನ ಸ್ವಾವಂಬನೆ (Technological self-determination) ಎಂಬುದು ಕನಸಾಗಿ…

Read More

ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ – Kannada News | Big Shock for Karnataka Residents: Health Department Plans to Merge Doctors

ಬೆಂಗಳೂರು, ಡಿಸೆಂಬರ್​ 27: ಶಿಕ್ಷಕರ ಕೊರತೆ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಇತ್ತೀಚೆಗೆ ಮುಂದಾಗಿತ್ತು. ಇದೀಗ ಆರೋಗ್ಯ ಇಲಾಖೆ (Health Department) ಸರದಿ. ವೈದ್ಯರ ವಿಲೀನ ಪ್ರಕ್ರಿಯೆಗೆ ಆರೋಗ್ಯ ಇಲಾಖೆ ಕೈ ಹಾಕಿದ್ದು, 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು (doctors) ತಾಲೂಕಾಸ್ಫತ್ರೆಗೆ ಸ್ಥಳಾಂತರಿಸುವುದಕ್ಕೆ ಪ್ಲ್ಯಾನ್​​ ಮಾಡಲಾಗುತ್ತಿದೆ. ಆ ಮೂಲಕ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಬಿಗ್ ಶಾಕ್ ನೀಡಿದೆ. ಕರ್ನಾಟಕದಲ್ಲಿ ಸುಮಾರು 270ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳಿವೆ. ಈ ಆಸ್ಫತ್ರೆಗಳಲ್ಲಿ…

Read More

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ – Kannada News | ’45’ Film: Shivarajkumar Team Warns FIR, Strict Action Against Defamation

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಹಾಗೂ ಉಪೇಂದ್ರ ನಟನೆಯ ‘45’ ಸಿನಿಮಾಗೆ (45 Movie) ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್ ಕೂಡ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಸಿನಿಮಾ ಬಗ್ಗೆ ನೆಗೆಟಿವ್ ಹಬ್ಬಿಸೋವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ‘45’ ತಂಡ ನೀಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿದೆ. ‘45 ಚಿತ್ರತಂಡ ಬೆಂಗಳೂರು 9ನೇ ಅಪರ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮಧ್ಯಂತರ ಆದೇಶವನ್ನು…

Read More