Category Archives: Blog

Your blog category

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು – Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu Shiva Murder Case

ಬೆಂಗಳೂರು, (ಡಿಸೆಂಬರ್ 26): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrathi Basavaraj) ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು (ಡಿಸೆಂಬರ್ 26) ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಹೈಕೋರ್ಟ್​​ ಪೀಠ, ಬೈರತಿ ಬಸವರಾಜ್​​ಗೆ ಮಧ್ಯಂತ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ. ಹೀಗಾಗಿ ಬೈರತಿ ಬಸವರಾಜ್​​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

Source link

ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ – Kannada News | Pranaya Payana new Kannada Music Video to be released on PRK Audio

ಹೊಸ ಪ್ರತಿಭೆಗಳಿಗೆ ಪುನೀತ್ ರಾಜ್​​ಕುಮಾರ್ ಅವರು ಯಾವಾಗಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜ್​​ಕುಮಾರ್ (Ashwini Puneeth Rajkumar) ಅವರು ಮಾಡುತ್ತಿದ್ದಾರೆ. ‘ಪಿಆರ್​ಕೆ ಪ್ರೊಡಕ್ಷನ್ಸ್’ ಮತ್ತು ‘ಪಿಆರ್​ಕೆ ಆಡಿಯೋ’ ಕಂಪನಿ ಮೂಲಕ ಹೊಸಬರ ಬೆನ್ನುತಟ್ಟುತ್ತಿದ್ದಾರೆ. ಅದಕ್ಕೆ ಹೊಸ ಉದಾಹರಣೆ ಇಲ್ಲಿದೆ. ಅರ್ಜುನ್ ಕಿಶೋರ್ ಚಂದ್ರ ಅವರು ಸಿದ್ಧಪಡಿಸಿದ ಹೊಸ ವಿಡಿಯೋ ಸಾಂಗ್​ ಅನ್ನು ‘ಪಿಆರ್​ಕೆ ಆಡಿಯೋ’ (PRK Audio) ಮೂಲಕ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.

ಅರ್ಜುನ್ ಕಿಶೋರ್ ಚಂದ್ರ ಅವರು ‘ಲೈಫ್ 360’ ಸಿನಿಮಾದಲ್ಲಿ ನಾಯಕನಾಗಿ ನಟಿಸಿ, ನಿರ್ದೇಶನ ಕೂಡ ಮಾಡಿದ್ದರು. ಬಳಿಕ ಉದ್ಯೋಗ ಅರಸಿ ವಿದೇಶಕ್ಕೆ ತೆರಳಿದ್ದರು. ಆದರೂ ಕೂಡ ಅವರ ಮನಸ್ಸು ಮಾತ್ರ ಬಣ್ಣದ ಲೋಕದತ್ತ ಸೆಳೆಯುತ್ತಿತ್ತು. ಬಿಡುವಿನ ಸಮಯದಲ್ಲಿ ಏನಾದರೂ ಮಾಡಬೇಕು ಎಂಬ ತುಡಿತ ಅವರಲ್ಲಿ ಇತ್ತು. ಅದರ ಫಲವಾಗಿ ಹೊಸ ಸಾಂಗ್ ಮಾಡಿದ್ದಾರೆ.

ಹೊಸ ಗೀತೆಗೆ ‘ಪ್ರಣಯ ಪಯಣ’ ಎಂದು ಶೀರ್ಷಿಕೆ ಇಡಲಾಗಿದೆ. Loving & Travelling ಎಂಬ ಅಡಿಬರಹ ಇದೆ. ಇದು 5 ನಿಮಿಷ ಅವಧಿಯ ವಿಡಿಯೋ ಸಾಂಗ್. ಅರ್ಜುನ್ ಕಿಶೋರ್ ಚಂದ್ರ ಅವರೇ ಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆ ಕೂಡ ನಿಭಾಯಿಸಿದ್ದಾರೆ. ರಂಗಭೂಮಿ ನಟಿ ಎಡೆಲ್ ಆಶ್ಲಿಂಗ್ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

‘ಪ್ರಣಯ ಪಯಣ’ ಲಿರಿಕಲ್ ವಿಡಿಯೋ:

ಹಿರಿಯ ಉದ್ಯಮಿ ರಾಜಶೇಖರ್ ಎಸ್. ಅವರು ‘ಶ್ರೀಸಾಯಿ ಗಗನ್ ಪ್ರೊಡಕ್ಷನ್ಸ್’ ಮೂಲಕ ಹಾಡನ್ನು ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೇ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಅವರು ಈ ಹಾಡನ್ನು ವೀಕ್ಷಿಸಿ ಇಷ್ಟಪಟ್ಟಿದ್ದಾರೆ. ತಮ್ಮದೇ ‘ಪಿಆರ್‌ಕೆ ಆಡಿಯೋ’ ಕಂಪನಿಯಿಂದ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ನಿರ್ದೇಶಕ ಹಾಗೂ ನಿರ್ಮಾಪಕರನ್ನು ಕಚೇರಿಗೆ ಕರೆಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್​ಕುಮಾರ್ ಹಾರೈಕೆಯಿಂದ ಸೆಟ್ಟೇರಿತು ‘ರಕ್ಕಿ’ ಸಿನಿಮಾ

ಅಜೇಶ್ ಎಂ.ಸಿ. ಅವರು ಈ ಹಾಡಿಗೆ ಸಂಗೀತ ನೀಡಿದ್ದಾರೆ. ಟಲೋ ಕೆನಡಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಶ್ರೀಪಾದ್ ಜೋಶಿ ಅವರು ಚಿತ್ರಕಥೆ ಬರೆದಿದ್ದಾರೆ. ಸಿದ್ದಾರ್ಥ್ ಬೆಲ್‌ಮಣ್ಣು ಅವರ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದೆ. ಅದ್ವಿಕ್-ವಿನೋದ್ ಅವರು ಸಂಕಲನ ಮಾಡಿದ್ದಾರೆ. ಅನಿಲ್‌ಕುಮಾರ್ ಕೆ. ಅವರು ಕಲರಿಸ್ಟ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಐರ‍್ಲೆಂಡ್ ದೇಶದ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ – Kannada News | 8 people killed more than 20 injured as massive blast hits mosque during Friday prayers in Syria

ನವದೆಹಲಿ, ಡಿಸೆಂಬರ್ 26: ಸಿರಿಯಾದ ಹೋಮ್ಸ್ ಮಸೀದಿಯಲ್ಲಿ ಇಂದು ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಸ್ಫೋಟದಲ್ಲಿ (Syria Blast) 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ಸ್ಫೋಟ ಸಂಭವಿಸಿ 8 ಜನರು ಸಾವನ್ನಪ್ಪಿದ್ದಾರೆ. ಸರ್ಕಾರಿ ನಿಯಂತ್ರಿತ ಜಿಲ್ಲೆಯಾದ ವಾಡಿ ಅಲ್-ದಹಾಬ್ ನೆರೆಹೊರೆಯಲ್ಲಿರುವ ಮಸೀದಿಯೊಳಗೆ ಸ್ಫೋಟ ಸಂಭವಿಸಿದೆ ಎಂದು ಸಿರಿಯನ್ ಅರಬ್ ಸುದ್ದಿ ಸಂಸ್ಥೆ (SANA) ವರದಿ ಮಾಡಿದೆ.

ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಪ್ರದೇಶವನ್ನು ಸುರಕ್ಷಿತಗೊಳಿಸಲು ತುರ್ತು ಪ್ರತಿಕ್ರಿಯೆ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಗಿದೆ. ತನಿಖಾಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲಿಸಲು ಭದ್ರತಾ ಪಡೆಗಳು ಮಸೀದಿಯನ್ನು ಸುತ್ತುವರೆದಿವೆ. ಈ ಸ್ಫೋಟದ ಸ್ವರೂಪ ಮತ್ತು ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಾಹುತಿ ದಾಳಿಯ ಶಂಕೆಯೂ ವ್ಯಕ್ತವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು

ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದದ್ದೇನು?

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಹರೀಶ್ (39), ಪತ್ನಿ ಮೈತ್ರಿ (32), ಮಗಳು ಸಿರಿ (10), ತಂದೆ ವೀರಭದ್ರ (88), ತಾಯಿ ಗೌರಮ್ಮ (62) ಹಾಗೂ ಪುಟ್ಟ ಬಾಲಕಿ ಹರೀಶ್ ಅಕ್ಕನ ಮಗಳು ವಂದನಾ (8) ಇವರು ಗುರುವಾರ ದಾಸರಹಳ್ಳಿಯಲ್ಲಿರುವ ಸ್ವಂತ ಮನೆಯಿಂದ ಹುಟ್ಟೂರು ಗೌರಿಬಿದನೂರಿಗೆ ತೆರಳಿದ್ದರು. ಹುಟ್ಟೂರಿನಲ್ಲಿ ಜಮೀನು ನೋಡಿಕೊಂದು ಕುಟುಂಬದವರ ಜೊತೆ ಸಮಯ ಕಳೆದು ವಾಪಸ್ ಆಗುತ್ತಿದ್ದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ

ಸಂಜೆ 6ಗಂಟೆಗೆ ಗೌರಿಬಿದನೂರಿನಿಂದ ಹೊರಟಿದ್ದ ಕುಟುಂಬ, ಹರೀಶ್ ಡ್ರೈವಿಂಗ್ ಮಾಡುತ್ತಿದ್ದರು. ರೈಲ್ವೆ ಗೊಲ್ಲಹಳ್ಲಿಯಿಂದ ಹೆಸರಘಟ್ಟ ಮಾರ್ಗವಾಗಿ ದಾಸರಹಳ್ಳಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ತೋಟದ ಗುಡ್ಡದಹಳ್ಳಿ ಟರ್ನಿಂಗ್ ಬಳಿ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಎದುರಗಡೆ ಬಂದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಲಭಾಗಕ್ಕೆ ಎಳೆದಿದ್ದಾರೆ.

ಸಂಜೆ 7:30 ಆಗಿದ್ದರಿಂದ ಕತ್ತಲಲ್ಲಿ ಎದುರಿಗೆ ಇದ್ದ ಮರಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಹರೀಶ್ ಹಾಗೂ ತಂದೆ ವೀರಭದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೈತ್ರಿ, ಗೌರಮ್ಮ, ಸಿರಿ, ವಂದನಾ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.

ಜಮೀನಿನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನ

ಜಮೀನಿನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನವಾಗಿರುವಂತಹ ಘಟನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ(55) ಮೃತ ರೈತ.

ಇದನ್ನೂ ಓದಿ: ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು

ಜಮೀನಿನಲ್ಲಿದ್ದ ಹುಲ್ಲಿನ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ರೈತ ಬೆಂಕಿ ನಂದಿಸಲು ಮುಂದಾಗಿದ್ದ. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ರೈತ ಕೃಷ್ಣಪ್ಪ ಸಾವನ್ನಪ್ಪಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ​

ವರದಿ: ಮಂಜುನಾಥ್ ಟಿವಿ9 ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನ ದೇಶಭಕ್ತಿಗೆ ವಿಶೇಷ ಪುರಸ್ಕಾರ – Kannada News | Armys youngest civil warrior Shravan Singh Honoured With Pradhan Mantri Bal Puraskar

ನವದೆಹಲಿ, ಡಿಸೆಂಬರ್ 26: ಪಂಜಾಬ್​ನ ಫಿರೋಜ್‌ಪುರದ ಚಕ್ ತರಣ್ ವಾಲಿ ಗ್ರಾಮದ 10 ವರ್ಷದ ಶ್ರವಣ್ ಸಿಂಗ್ (Shravan Singh) ಆಪರೇಷನ್ ಸಿಂಧೂರ್ ಸಮಯದಲ್ಲಿ ಹೆಚ್ಚಿನ ಅಪಾಯದ ಗಡಿ ಪೋಸ್ಟ್‌ಗಳಲ್ಲಿ ಸೇವಾ ನಿರತರಾಗಿದ್ದ ಸೈನಿಕರಿಗೆ ಚಹಾ, ಲಸ್ಸಿ, ನೀರು ನೀಡುವ ಮೂಲಕ ಅವರ ದಾಹ ನೀಗಿಸುತ್ತಿದ್ದ. ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ದಾಳಿ ನಡೆಯುತ್ತಿದ್ದುದರಿಂದ ಅದು ಅಪಾಯದ ಸ್ಥಳವಾಗಿದ್ದರೂ ಶ್ರವಣ್ ನಿಸ್ವಾರ್ಥವಾಗಿ ಭಾರತೀಯ ಸೇನಾ ಸಿಬ್ಬಂದಿಗೆ ನೀರು, ಹಾಲು ಮತ್ತು ಚಹಾವನ್ನು ನೀಡುತ್ತಿದ್ದ. ಆ ಸಮಯದಲ್ಲಿ ದೊಡ್ಡವರು ಕೂಡ ಮನೆಯಿಂದ ಹೊರಬರಲು ಹೆದರುತ್ತಿದ್ದರು. ಹೀಗಾಗಿ, ಆ ಬಾಲಕನ ಧೈರ್ಯ ಮತ್ತು ದೇಶಭಕ್ತಿಯನ್ನು ಮೆಚ್ಚಿ ಆತನಿಗೆ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ.

10 ವರ್ಷದ ಶ್ರವಣ್ ಸಿಂಗ್ ಪಂಜಾಬ್​ನ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಪ್ರದೇಶಗಳಲ್ಲಿ ನಿಯೋಜಿಸಲಾದ ಭಾರತದ ಸೇನಾ ಸಿಬ್ಬಂದಿಗೆ ನೀರು, ಚಹಾ, ಹಾಲು, ಲಸ್ಸಿ ಮತ್ತು ಐಸ್ ಒದಗಿಸಿ ತಮ್ಮ ದೇಶಭಕ್ತಿ ಪ್ರದರ್ಶಿಸಿದ್ದ. ಅಂತಹ ಅಪಾಯಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈನಿಕರಿಗೆ ಆ ಹುಡುಗ ಸಹಾಯ ಮಾಡಿದ್ದ. ಅಷ್ಟೇ ಅಲ್ಲದೆ, ಆ ಸೈನಿಕರಿಗೆ ಉಳಿದುಕೊಳ್ಳಲು ತನ್ನ ಮನೆಯಲ್ಲಿ ಜಾಗ ನೀಡಲು ಆತ ತನ್ನ ಅಪ್ಪನನ್ನು ಒಪ್ಪಿಸಿದ್ದ. ಹೀಗಾಗಿ, ಸೇನೆಯಿಂದ ಆ ಬಾಲಕನಿಗೆ ವಿಶೇಷ ಉಡುಗೊರೆಗಳನ್ನು ಸಹ ನೀಡಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ – Kannada News | India Women vs Sri Lanka Women 3rd T20: IND W Aims to Seal Series, Playing XI and Toss

ಭಾರತ ಮತ್ತು ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಈ ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ 2-0 ಅಂತರದ ಮುನ್ನಡೆ ಸಾಧಿಸಿದ್ದು, ಇದೀಗ ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಇನ್ನೇರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲು ನೋಡುತ್ತಿದೆ. ಇತ್ತ ಮೊದಲೆರಡು ಪಂದ್ಯಗಳಲ್ಲಿ ಏಕಪಕ್ಷೀಯ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ನೋಡುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಏಕದಿನ ವಿಶ್ವಕಪ್​ಗೂ ಮುನ್ನ ಸತತ ಟಾಸ್ ಸೋತು, ಟಾಸ್ ಸೋಲುವುದನ್ನೇ ಕಾಯಕ ಮಾಡಿಕೊಂಡಿದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್​ ಕೌರ್​ ಅವರ ಲಕ್ ಬದಲಾಗಿದೆ. ಶ್ರೀಲಂಕಾ ವಿರುದ್ಧದ ಈ ಸರಣಿಯ ಮೊದಲ 3 ಪಂದ್ಯಗಳಲ್ಲೂ ಹರ್ಮನ್ ಟಾಸ್ ಗೆದ್ದಿದ್ದಾರೆ. ಅಂದರೆ ಈ ಪಂದ್ಯದಲ್ಲೂ ಟಾಸ್ ಗೆದ್ದಿರುವ ಟೀಂ ಇಂಡಿಯ ನಾಯಕಿ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ತಂಡದಲ್ಲಿ 2 ಬದಲಾವಣೆ

ಟಾಸ್ ಗೆದ್ದ ಬಳಿಕ ಮಾತನಾಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ಭಾರತದ ಪ್ಲೇಯಿಂಗ್ 11 ರಲ್ಲಿ ಎರಡು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಆ ಪ್ರಕಾರ, ಸ್ನೇಹ್ ರಾಣಾ ಮತ್ತು ಅರುಂಧತಿ ರೆಡ್ಡಿ ಬದಲಿಗೆ ರೇಣುಕಾ ಠಾಕೂರ್ ಮತ್ತು ದೀಪ್ತಿ ಶರ್ಮಾ ತಂಡಕ್ಕೆ ಮರಳಿದ್ದಾರೆ. ಏತನ್ಮಧ್ಯೆ, ಶ್ರೀಲಂಕಾದ ನಾಯಕಿ ಚಾಮರಿಅಟಾಪಟ್ಟು ಕೂಡ ಪ್ಲೇಯಿಂಗ್ 11 ರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ.

ಉಭಯ ತಂಡಗಳು

ಶ್ರೀಲಂಕಾ ತಂಡ: ಚಾಮರಿ ಅಟಾಪಟು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿಕಾ ಸಿಲ್ವಾ, ಇಮೇಶಾ ದುಲಾನಿ, ಕೌಶಿನಿ ನುತ್ಯಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಮಲ್ಕಿ ಮಾದರ, ಮತ್ತು ನಿಮಾಶಾ ಮೀಪಗೆ.

ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್, ದೀಪ್ತಿ ಶರ್ಮಾ, ಅಮನ್‌ಜೋತ್ ಕೌರ್, ವೈಷ್ಣವಿ ಶರ್ಮಾ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್ ಮತ್ತು ಶ್ರೀ ಚರಣಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:41 pm, Fri, 26 December 25

Source link

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು – Kannada News | Bigg Boss Kannada: Raghu became emotion after seeing his family

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ ರಘು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ – Kannada News | Why Akshay Kumar changed his name from Rajiv to Akshay

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​ನ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಅತ್ಯಂತ ಬ್ಯುಸಿ ಸ್ಟಾರ್ ನಟರೆಂದರು ಅದು ಅಕ್ಷಯ್ ಕುಮಾರ್. ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್​ಫಾದರ್​​ಗಳಿಲ್ಲದೆ ಚಿತ್ರರಂಗಕ್ಕೆ ಬಂದ ಅಕ್ಷಯ್ ಕುಮಾರ್, ಸ್ಟಾರ್ ನಟರಾಗಿ ಬೆಳೆದು ನಿಂತಿದ್ದಾರೆ. ಅಂದಹಾಗೆ ಅಕ್ಷಯ್ ಕುಮಾರ್ ಅವರ ನಿಜ ಹೆಸರು ಅದಲ್ಲ ಬದಲಿಗೆ ಅವರ ಹೆಸರು ರಾಜೀವ್ ಎಂದಾಗಿತ್ತು. ಆದರೆ ಅದು ಬದಲಾಗಿದ್ದು ಹೇಗೆ ಗೊತ್ತೆ?

ಬಹುತೇಕರಿಗೆ ಗೊತ್ತಿರುವಂತೆ ಅಕ್ಷಯ್ ಕುಮಾರ್ ಅವರು ಮಾರ್ಷಲ್ ಆರ್ಟ್ಸ್ ಟೀಚರ್ ಆಗಿದ್ದರು. ಸಮರ ಕಲೆಗಳ ಬಗ್ಗೆ ವಿಪರೀತ ಆಸಕ್ತಿ ಇದ್ದ ಅಕ್ಷಯ್, ವಿದ್ಯಾರ್ಥಿಗಳಿಗೆ ಸಮರ ಕಲೆಗಳನ್ನು ಕಲಿಸುತ್ತಿದ್ದರು. ಆಗ ಅವರ ಹೆಸರು ರಾಜೀವ್ ಹರಿ ಓಂ ಭಾಟಿಯಾ ಎಂದಾಗಿತ್ತು. ಅಕ್ಷಯ್ ಅವರಿಗೆ ಒಂದು ಹಿಂದಿ ಸಿನಿಮಾನಲ್ಲಿ ನಟಿಸುವ ಅವಕಾಶ ದೊರೆತಿತು, ಅದು ಬಹಳ ಸಣ್ಣ ಪಾತ್ರ. ಸಿನಿಮಾನಲ್ಲಿ ನಾಯಕಿಗೆ ಅಕ್ಷಯ್ ಸಮರ ಕಲೆ ಕಲಿಸಬೇಕಿತ್ತು.

ಇದನ್ನೂ ಓದಿ:‘ಇದು ಸಮಾಜಕ್ಕೂ ಅಪಾಯಕಾರಿ’; ಅಕ್ಷಯ್ ಕುಮಾರ್ ವಿಡಿಯೋ ಬಗ್ಗೆ ಕೋರ್ಟ್ ಕಳವಳ

ಅದಾಗಲೇ ಸಿನಿಮಾಕ್ಕೆ ಬರುವ ಮನಸ್ಸು ಮಾಡಿದ್ದ ಅಕ್ಷಯ್ ಅವರು ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಬರೋಬ್ಬರಿ ಎಂಟು ಸೆಕೆಂಡುಗಳಷ್ಟೆ ಅವರು ತೆರೆ ಮೇಲೆ ಕಾಣಿಸಿಕೊಳ್ಳುವ ಪಾತ್ರ ಅದು. ಸಿನಿಮಾದ ಹೆಸರು ‘ಆಜ್’. ಮಹೇಶ್ ಭಟ್ ಅವರು ಆ ಸಿನಿಮಾದ ನಿರ್ದೇಶಕ. ಸಿನಿಮಾದ ನಾಯಕನ ಪಾತ್ರದಲ್ಲಿ ನಟಿಸಿದ್ದು ಆಗಿನ ಸ್ಟಾರ್ ನಟರಲ್ಲಿ ಒಬ್ಬರಾದ ಕುಮಾರ್ ಗೌರವ್. ಆ ಸಿನಿಮಾನಲ್ಲಿ ನಾಯಕನ ಪಾತ್ರ ಹೆಸರು ಅಕ್ಷಯ್ ಎಂದಿತ್ತು.

ಅಕ್ಷಯ್ ಅವರಿಗೆ ಕುಮಾರ್ ಗೌರವ್ ಮೇಲೆ ಅಭಿಮಾನ ಇತ್ತು. ‘ನನಗೆ ಸಿನಿಮಾನಲ್ಲಿ ಬರುವ ಆಸೆ ಇದೆ, ನಾನು ನಟಿಸಿದ ಮೊದಲ ಸಿನಿಮಾನಲ್ಲಿ ನಾಯಕನ ಹೆಸರು ಅಕ್ಷಯ್ ಹಾಗಾಗಿ ನಾನು ಅದೇ ಹೆಸರು ಇಟ್ಟುಕೊಳ್ಳುತ್ತೇನೆ ಎಂದುಕೊಂಡು ತಮ್ಮ ಹೆಸರನ್ನು ತಾವೇ ಅಕ್ಷಯ್ ಎಂದು ಬದಲಾಯಿಸಿಕೊಂಡರಂತೆ ಅಕ್ಷಯ್ ಕುಮಾರ್.

ಅಕ್ಷಯ್ ಕುಮಾರ್ ಪ್ರಸ್ತುತ ‘ವೆಲ್​​ಕಮ್​ ಟು ಜಂಗಲ್’, ‘ಭೂತ್ ಬಂಗ್ಲಾ’, ‘ಹೈವಾನ್’, ‘ಜಾಲಿ ಎಲ್​​ಎಲ್​​ಬಿ 4’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕೆಲ ಸಿನಿಮಾಗಳ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಒಂದು ರಿಯಾಲಿಟಿ ಶೋ ಸಹ ನಡೆಸಿಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳು ಸಿಗುತ್ತದೆ, ಇದನ್ನು ಯಾವ ಸಮಯದಲ್ಲಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ದೆಹಲಿಯ ಆಯುರ್ವೇದ ತಜ್ಞ ಡಾ. ಚಂಚಲ್ ಶರ್ಮಾ ಅವರು ಹೇಳುವ ಪ್ರಕಾರ, ಸಾಮಾನ್ಯವಾಗಿ ಹುರಿದ ಖರ್ಜೂರವು ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಅದರಲ್ಲಿಯೂ ಈ ರೀತಿಯ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸಿದಾಗ, ನಿಮ್ಮ ಫಲವತ್ತತೆ ಸುಧಾರಿಸುತ್ತದೆ ಮತ್ತು ಹಾರ್ಮೋನುಗಳು ಸಮತೋಲನದಲ್ಲಿರುತ್ತವೆ. ಖರ್ಜೂರವು ಕಬ್ಬಿಣ ಮತ್ತು ಖನಿಜಗಳಂತಹ ವಿವಿಧ ಪೋಷಕಾಂಶಗಳನ್ನು ಹೊಂದಿರುವುದರಿಂದ ದೇಹದಲ್ಲಿ ಹಾರ್ಮೋನ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ಇವುಗಳ ಸೇವನೆ ಮಹಿಳೆಯರಿಗೂ ಪ್ರಯೋಜನಕಾರಿಯಾಗಿದೆ, ಏಕೆಂದರೆ ಇದರ ಸೇವನೆ ಅಂಡೋತ್ಪತ್ತಿಗೆ ಸಹಾಯ ಮಾಡುವ ಮೂಲಕ ಗರ್ಭಧಾರಣೆಯನ್ನು ಸುಲಭಗೊಳಿಸುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಖರ್ಜೂರವನ್ನು ಹೆಚ್ಚೆಚ್ಚು ಸೇವನೆ ಮಾಡಬೇಕು? ಇದರ ಹಿಂದಿದೆ ಮಹತ್ವದ ಕಾರಣ

ಪುರುಷರ ಫಲವತ್ತತೆಯನ್ನು ಸುಧಾರಿಸುತ್ತದೆ

ಡಾ. ಚಂಚಲ್ ಅವರು ಹೇಳುವ ಪ್ರಕಾರ ಹುರಿದ ಖರ್ಜೂರವನ್ನು ತಿನ್ನುವುದರಿಂದ ಪುರುಷರ ಫಲವತ್ತತೆ ಸುಧಾರಿಸುತ್ತದೆ. ಇದು ವೀರ್ಯದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಬಂಜೆತನದ ಅಪಾಯವನ್ನು ಕಡಿಮೆ ಮಾಡುತ್ತದೆ. ದೇಹವು ರಾತ್ರಿಯಲ್ಲಿ ತನ್ನನ್ನು ತಾನೇ ಸರಿಪಡಿಸಿಕೊಳ್ಳುವುದರಿಂದ ರಾತ್ರಿ ಮಲಗುವ ಮೊದಲು ಹುರಿದ ಖರ್ಜೂರವನ್ನು ತಿನ್ನಬೇಕು. ಮಲಗುವ ಮೊದಲು ನೀವು ಇವುಗಳನ್ನು ಸ್ವಲ್ಪ ಬೆಚ್ಚಗಿನ ಹಾಲಿನೊಂದಿಗೆ ಅಥವಾ ಹುರಿದು ಆ ಬಳಿಕ ಸೇವನೆ ಮಾಡಬಹುದು.

ಯಾರಿಗೆ ಒಳ್ಳೆಯದಲ್ಲ?

ಹೊಟ್ಟೆ ನೋವು, ಪಿತ್ತಜನಕಾಂಗದ ಕಾಯಿಲೆ ಅಥವಾ ಅನಿಯಂತ್ರಿತ ಮಧುಮೇಹ ಇರುವವರು ಹುರಿದ ಖರ್ಜೂರವನ್ನು ತಿನ್ನಬಾರದು ಎಂದು ಡಾ. ಚಂಚಲ್ ಹೇಳುತ್ತಾರೆ. ಏಕೆಂದರೆ ಅದು ಅವರ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಈ ಯಾವುದೇ ಸಮಸ್ಯೆಗಳು ಇಲ್ಲದಿದ್ದರೆ ಮಾತ್ರ ನೀವು ಹುರಿದ ಖರ್ಜೂರವನ್ನು ತಿನ್ನಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ? – Kannada News | Devdutt Padikkal’s Vijay Hazare Century Spree: Is an India Call Up Next?

ಕಳೆದ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಕೆಲವೇ ಕೆಲವು ಇನ್ನಿಂಗ್ಸ್​ಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕನ್ನಡಿಗ ದೇವದತ್ ಪಡಿಕ್ಕಲ್‌, ಇದೀಗ ದೇಶಿ ಅಂಗಳದಲ್ಲಿ ಶತಕಗಳ ಮಳೆ ಸುರಿಸುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ 147 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದ ಪಡಿಕ್ಕಲ್, ಕರ್ನಾಟಕ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ಈ ಟೂರ್ನಿಯ ಎರಡನೇ ಪಂದ್ಯದಲ್ಲೂ ಮಿಂಚಿರುವ ದೇವದತ್ ಸತತ ಎರಡನೇ ಶತಕ ಸಿಡಿಸಿದ್ದಾರೆ. ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 118 ಎಸೆತಗಳಲ್ಲಿ 147 ರನ್ ಬಾರಿಸಿದ್ದ ಪಡಿಕ್ಕಲ್ ಇದೀಗ ಕೇರಳ ವಿರುದ್ಧದ ಪಂದ್ಯದಲ್ಲಿ 116 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಕೇರಳ ವಿರುದ್ಧದ ಈ ಪಂದ್ಯದಲ್ಲಿ 137 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 3 ಸಿಕ್ಸರ್‌ಗಳು ಮತ್ತು 12 ಬೌಂಡರಿಗಳ ಸಹಿತ 124 ರನ್ ಬಾರಿಸಿದ್ದಾರೆ.

ದೇವದತ್ ಪಡಿಕ್ಕಲ್ ಇಷ್ಟೊಂದು ಉತ್ತಮ ಫಾರ್ಮ್‌ನಲ್ಲಿರುವುದು ಇದೇ ಮೊದಲಲ್ಲ. ಈ ಎಡಗೈ ಬ್ಯಾಟ್ಸ್‌ಮನ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಭಾರತದ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂಬುದನ್ನು ಅವರ ಅಂಕಿ ಅಂಶಗಳೇ ಹೇಳುತ್ತವೆ. ಪಡಿಕ್ಕಲ್ ಕೇವಲ 34 ಇನ್ನಿಂಗ್ಸ್‌ಗಳಲ್ಲಿ 11 ಶತಕಗಳು ಮತ್ತು 12 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇದರರ್ಥ ಅವರು ಬಹುತೇಕ ಎಲ್ಲಾ ಪಂದ್ಯಗಳಲ್ಲಿ ಶತಕ ಅಥವಾ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ.

ಲಿಸ್ಟ್ ಎ ಕ್ರಿಕೆಟ್​ನಲ್ಲಿ 34 ಇನ್ನಿಂಗ್ಸ್‌ಗಳನ್ನಾಡಿರುವ ಪಡಿಕ್ಕಲ್ 82 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 2342 ರನ್ ಗಳಿಸಿದ್ದಾರೆ. ಪಡಿಕ್ಕಲ್ ಅವರ ಸ್ಟ್ರೈಕ್ ರೇಟ್ ಕೂಡ 92 ಕ್ಕಿಂತ ಹೆಚ್ಚಾಗಿದೆ. ಈ ರೀತಿಯ ಅಂಕಿಅಂಶಗಳ ಹೊರತಾಗಿಯೂ, ಪಡಿಕ್ಕಲ್‌ಗೆ ಟೀಂ ಇಂಡಿಯಾ ಏಕದಿನ ತಂಡದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

ಪಡಿಕ್ಕಲ್‌ ಇಲ್ಲಿಯವರೆಗೆ ಭಾರತ ತಂಡದ ಪರ ಎರಡು ಟೆಸ್ಟ್ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್‌ನಲ್ಲಿ ಒಂದು ಅರ್ಧಶತಕ ಸೇರಿದಂತೆ 30 ಸರಾಸರಿಯಲ್ಲಿ 90 ರನ್ ಗಳಿಸಿರುವ ಪಡಿಕ್ಕಲ್ ಟಿ20ಯಲ್ಲಿ 19 ರ ಸರಾಸರಿಯಲ್ಲಿ 38 ರನ್ ಗಳಿಸಿದ್ದಾರೆ. ಆದಾಗ್ಯೂ ಪಡಿಕ್ಕಲ್ ಅವರಿಗೆ ಇನ್ನೂ ಪೂರ್ಣ ಅವಕಾಶ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.

2025 ರ ವರ್ಷ ದೇವದತ್ ಪಡಿಕ್ಕಲ್ ಅವರಿಗೆ ವಿಶೇಷವಾಗಿತ್ತು. ಕಳೆದ ಆವೃತ್ತಿಯ ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್-ಫೈನಲ್ ಮತ್ತು ಸೆಮಿಫೈನಲ್‌ಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದ ಪಡಿಕ್ಕಲ್, ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ 309 ರನ್ ಬಾರಿಸಿದ್ದರು, ಈಗ ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿರುವ ಪಡಿಕ್ಕಲ್​ಗೆ ಭಾರತ ತಂಡದಲ್ಲಿ ಯಾವಾಗ ಅವಕಾಶ ಸಿಗಲಿದೆ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

Published On – 6:20 pm, Fri, 26 December 25

Source link