Category Archives: Blog

Your blog category

HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ – Kannada News | HSL General Manager Recruitment 2025: Apply Online for 11 Govt Jobs

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 13ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಖಾಲಿ ಹುದ್ದೆಗಳ ಅಧಿಸೂಚನೆ:

  • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (Hindustan Shipyard)
  • ಹುದ್ದೆಗಳ ಸಂಖ್ಯೆ: 11
  • ಉದ್ಯೋಗ ಸ್ಥಳ: ವಿಶಾಖಪಟ್ಟಣಂ – ಆಂಧ್ರಪ್ರದೇಶ
  • ಹುದ್ದೆ ಹೆಸರು: ಜನರಲ್ ಮ್ಯಾನೇಜರ್
  • ಸಂಬಳ: ತಿಂಗಳಿಗೆ 50,000 – 2,60,000 ರೂ.

ಶೈಕ್ಷಣಿಕ ಅರ್ಹತೆ:

ಹಿಂದೂಸ್ತಾನ್ ಶಿಪ್‌ಯಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ICAI, ICWAI, ಡಿಪ್ಲೊಮಾ, BE/ B.Tech, ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ಹಿಂದೂಸ್ತಾನ್ ಶಿಪ್‌ಯಾರ್ಡ್ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಹಿಂದೂಸ್ತಾನ್ ಶಿಪ್‌ಯಾರ್ಡ್ ಜನರಲ್ ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ ಸಲ್ಲಿಸು ಬಟನ್ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:16 pm, Fri, 26 December 25

Source link

ಮೊಳಕೆಯೊಡೆದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಈ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Sprouted Onions: When to Discard & Health Tips

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿಯೂ ಈರುಳ್ಳಿ (Onions) ಪ್ರಮುಖ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಸಸ್ಯಾಹಾರಿಗಳಿಂದ ಮಾಂಸಾಹಾರಿಗಳ ವರೆಗೆ ಎಲ್ಲರೂ ಸಹ ಈರುಳ್ಳಿಯನ್ನು ಸೇವನೆ ಮಾಡಿಯೇ ಮಾಡುತ್ತಾರೆ. ಏಕೆಂದರೆ ಈರುಳ್ಳಿ ಇಲ್ಲದೆ, ಭಕ್ಷ್ಯಗಳ ಪರಿಮಳ ಹೆಚ್ಚಾಗಲು ಸಾಧ್ಯವಿಲ್ಲ. ಅದಕ್ಕಾಗಿಯೇ ಮನೆಗಳಲ್ಲಿ ಅವುಗಳನ್ನು ಖಾಲಿಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ಅವು ಮೊಳಕೆಯೊಡೆದಾಗ ಅವುಗಳನ್ನು ತಿನ್ನುವುದು ಸುರಕ್ಷಿತವೇ ಎಂಬ ಅನುಮಾನ ಮೂಡುತ್ತದೆ. ಕೆಲವರು ಈ ರೀತಿ ಮೊಳಕೆಯೊಡೆದ ಈರುಳ್ಳಿಯನ್ನು ಸೇವನೆ ಮಾಡಬಾರದು ಎಂದು ಹೇಳುತ್ತಾರೆ. ಆದರೆ ಇನ್ನು ಕೆಲವರು ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಇದನ್ನು ಸೇವನೆ ಮಾಡುವುದರಿಂದ ಯಾವುದೇ ರೀತಿಯ ತೊಂದರೆ ಇಲ್ಲ ಎನ್ನುತ್ತಾರೆ. ಹಾಗಾದರೆ ಇದು ಒಳ್ಳೆಯದೋ, ಅಲ್ಲವೋ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈರುಳ್ಳಿಗೆ ಬರುವ ಹಸಿರು ಮೊಳಕೆ ವಿಷಕಾರಿಯಲ್ಲ. ವಾಸ್ತವವದಲ್ಲಿ, ಈರುಳ್ಳಿ ಹಳೆಯದಾದಾಗ ಮತ್ತು ಸ್ವಲ್ಪ ತೇವಾಂಶ ಪಡೆದುಕೊಂಡಾಗ ಅದು ಮತ್ತೆ ಮೊಳಕೆಯೊಡೆಯಲು ಪ್ರಾರಂಭಿಸುತ್ತದೆ. ದಿನಗಳು ಕಳೆದಂತೆ, ಅದರಿಂದ ಹಸಿರು ಎಲೆ ಹೊರಹೊಮ್ಮುತ್ತದೆ. ಈ ಎಲೆಯ ಸೇವನೆ ಮಾಡುವುದು ಒಳ್ಳೆಯದು. ಭಯಪಡುವ ಯಾವುದೇ ಅವಶ್ಯಕತೆ ಇಲ್ಲ. ಆದರೆ ಈರುಳ್ಳಿ ತಿನ್ನಲು ಸುರಕ್ಷಿತವಾಗಿದ್ದರೂ, ಅವುಗಳ ಗುಣಲಕ್ಷಣಗಳಲ್ಲಿ ಕೆಲವು ಬದಲಾವಣೆಗಳು ಸಂಭವಿಸುತ್ತವೆ. ಈರುಳ್ಳಿ ಮೊಳಕೆಯೊಡೆದಾಗ, ಒಳಭಾಗವು ಸ್ವಲ್ಪ ಮೃದು ಅಥವಾ ಕೋಮಲವಾಗುತ್ತದೆ.

ಇದನ್ನೂ ಓದಿ: ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ

ಇನ್ನು ಈ ಈರುಳ್ಳಿ ಸಾಮಾನ್ಯ ಈರುಳ್ಳಿಯಂತೆ ರುಚಿ ಕೊಡದಿರಬಹುದು. ಸ್ವಲ್ಪ ಕಹಿ ರುಚಿಯನ್ನು ಹೊಂದಿರಬಹುದು. ನೀವು ಅಡುಗೆ ಮಾಡುವಾಗ ಮೊಳಕೆಗಳನ್ನು ಕತ್ತರಿಸಿ ಸಲಾಡ್‌ ಅಥವಾ ಇನ್ನಿತರ ಆಹಾರಗಳಲ್ಲಿ ಬಳಸಬಹುದು. ಏಕೆಂದರೆ ಅವು ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವುದರಿಂದ ಇದರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಆದರೆ ಮೊಳಕೆಯೊಡೆದ ಈರುಳ್ಳಿಯನ್ನು ಒತ್ತಿದಾಗ ತುಂಬಾ ಮೃದುವಾಗಿದ್ದರೆ ಅಥವಾ ತುಂಬಾ ಒಣಗಿದ್ದರೆ ಅಥವಾ ಅದರ ಮೇಲೆ ಕಪ್ಪು ಕಲೆಗಳಿದ್ದರೆ, ಅದನ್ನು ಬಳಸಬೇಡಿ. ಅಂತಹ ಈರುಳ್ಳಿ ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾರ್ಕ್, 45, ಡೆವಿಲ್ ಬಂದರೂ ತಗ್ಗಿಲ್ಲ ‘ಧುರಂಧರ್’ ಹವಾ; 21ನೇ ದಿನವೂ 26 ಕೋಟಿ ರೂ. ಗಳಿಕೆ – Kannada News | Dhurandhar box office collection on December 25 amid new releases

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ (Dhurandhar) ಸಿನಿಮಾ ಬಿಡುಗಡೆ ಆಗಿ 22 ದಿನಗಳು ಕಳೆದಿವೆ. ಈ ಚಿತ್ರ ತೆರೆಕಂಡ ಬಳಿಕ ಸ್ಟಾರ್ ನಟರ ಹಲವು ಸಿನಿಮಾಗಳು ಬಿಡುಗಡೆ ಆದವು. ಹಾಗಿದ್ದರೂ ಕೂಡ ‘ಧುರಂಧರ್’ ಚಿತ್ರದ ಹವಾ ಕಡಿಮೆ ಆಗಿಲ್ಲ. ಇಂದಿಗೂ ಕೂಡ ಈ ಸಿನಿಮಾ ಪ್ರತಿ ದಿನ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಈಗಾಗಲೇ ಭಾರತದಲ್ಲಿ ಈ ಸಿನಿಮಾದ ಕಲೆಕ್ಷನ್ 633 ಕೋಟಿ ರೂಪಾಯಿ ಕೋಟಿ ಆಗಿದೆ. ಇನ್ನೂ ಹಲವು ದಿನಗಳ ಕಾಲ ಕಲೆಕ್ಷನ್ (Dhurandhar Box Office Collection) ಅಬ್ಬರ ಮುಂದುವರಿಯಲಿದೆ.

ಪ್ರತಿ ವೀಕೆಂಡ್​​ನಲ್ಲಿ ‘ಧುರಂಧರ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಾ ಬಂದಿದೆ. ಕ್ರಿಸ್ಮಸ್ ದಿನವೂ ಈ ಚಿತ್ರ ಅತ್ಯುತ್ತಮವಾಗಿ ಕಮಾಯಿ ಮಾಡಲಿದೆ ಎಂದು ನಿರೀಕ್ಷಿಸಲಾಗಿತ್ತು. ಅದು ನಿಜವಾಗಿದೆ. ಕ್ರಿಸ್ಮಸ್ ಹಬ್ಬದ ದಿನ, ಅಂದರೆ ಡಿಸೆಂಬರ್ 25ರಂದು ಸರ್ಕಾರಿ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದಾರೆ. ಅದು ‘ಧುರಂಧರ್’ ಸಿನಿಮಾಗೆ ಪ್ಲಸ್ ಆಗಿದೆ.

ಡಿಸೆಂಬರ್ 25ರಂದು ‘ಧುರಂಧರ್’ ಚಿತ್ರಕ್ಕೆ ಬರೋಬ್ಬರಿ 26 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಿಡುಗಡೆ ಆಗಿ 21ನೇ ದಿನಕ್ಕೆ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡುವುದು ಎಂದರೆ ತಮಾಷೆಯೇ ಅಲ್ಲ. ಇದೇ ದಿನ ಕನ್ನಡ ಮತ್ತು ತಮಿಳಿನಲ್ಲಿ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಿದೆ. ‘45’ ಚಿತ್ರ ಕೂಡ ತೆರೆಕಂಡಿದೆ. ಆ ಸಿನಿಮಾಗಳ ಪೈಪೋಟಿ ನಡುವೆಯೂ ‘ಧುರಂಧರ್’ ಮೇಲುಗೈ ಸಾಧಿಸಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ಅಂದುಕೊಂಡ ಮಟ್ಟದಲ್ಲಿ ಕಲೆಕ್ಷನ್ ಮಾಡಿಲ್ಲ. ಕರ್ನಾಟಕದಲ್ಲಿ ‘ದಿ ಡೆವಿಲ್’, ‘ಮಾರ್ಕ್’, ‘45’ ಸಿನಿಮಾಗಳು ಪ್ರದರ್ಶನ ಕಾಣುತ್ತಿರುವಾಗಲೇ ‘ಧುರಂಧರ್’ ಕೂಡ ಪೈಪೋಟಿ ನೀಡುತ್ತಿದೆ. ಕರ್ನಾಟಕದಲ್ಲಿ ಈ ಚಿತ್ರದ ನೂರಾರು ಶೋಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ ಎಂಬುದು ವಿಶೇಷ. ವಾರಾಂತ್ಯ ಮಾತ್ರವಲ್ಲದೇ ಬಾಕಿ ದಿನಗಳಲ್ಲಿ ಕೂಡ ‘ಧುರಂಧರ್’ ಸಿನಿಮಾವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

ಡಿಸೆಂಬರ್ 27ರ ಶನಿವಾರ ಹಾಗೂ ಡಿ.28ರ ಭಾನುವಾರ ‘ಧುರಂಧರ್’ ಸಿನಿಮಾ ಸಿಕ್ಕಾಪಟ್ಟೆ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಅನಾಯಾಸವಾಗಿ 750 ಕೋಟಿ ರೂಪಾಯಿ ಗಳಿಸಲಿದೆ. ವಿದೇಶದ ಕಲೆಕ್ಷನ್ ಕೂಡ ಸೇರಿದರೆ ಈಗಾಗಲೇ 1000 ಕೋಟಿ ರೂಪಾಯಿ ದಾಟಿದೆ. ಆದಿತ್ಯ ಧಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ: ಜಾನ್ಹವಿ ಆಕ್ರೋಶ – Kannada News | Janhvi Kapoor angry post on killing Hindu in Bangladesh

ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ (Deepu Das) ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ವಿಶೇಷವಾಗಿ ನಟಿ ಜಾನ್ಹವಿ ಕಪೂರ್, ದೀಪು ದಾಸ್ ಹತ್ಯೆಯ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಮೌನ ವಹಿಸಿರುವುದನ್ನು ‘ಹಿಪಾಕ್ರಸಿ’ (ಬೂಟಾಟಿಕೆ) ಎಂದು ಕರೆದಿದ್ದಾರೆ.

ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಟಿ ಜಾನ್ಹವಿ ಕಪೂರ್, ‘ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಅನಾಗರಿಕ. ಇದು ನರಮೇಧ. ಎಲ್ಲ ಘಟನೆಗಳಲ್ಲಿ ಒಂದು ಎಂಬಂತೇನಲ್ಲ. ಈ ಅಮಾನವೀಯ ಸಾರ್ವಜನಿಕ ಗುಂಪು ಹತ್ಯೆಯ ಬಗ್ಗೆ ನಿಮಗೆ ತಿಳಿದಿಲ್ಲದೇ ಇದ್ದರೆ, ಅದರ ಬಗ್ಗೆ ಓದಿ, ವೀಡಿಯೊಗಳನ್ನು ನೋಡಿ, ಪ್ರಶ್ನೆಗಳನ್ನು ಕೇಳಿ. ಇದೆಲ್ಲದರ ಹೊರತಾಗಿಯೂ ನಿಮಗೆ ಕೋಪ ಬರದಿದ್ದರೆ, ನಮಗೆ ತಿಳಿಯುವ ಮೊದಲೇ ನಮ್ಮನ್ನು ನಾಶಮಾಡುವ ಪ್ರಕ್ರಿಯೆಯ ದಾಳವಾಗಿದ್ದೀರಿ ಎಂದರ್ಥ. ನಮ್ಮ ಸ್ವಂತ ಸಹೋದರ ಸಹೋದರಿಯರು ಸುಟ್ಟು ಸಾಯುತ್ತಿರುವಾಗ ನಾವು ಪ್ರಪಂಚದಾದ್ಯಂತ ನಡೆಯುತ್ತಿರುವ ಬೇರೆ ವಿಷಯಗಳ ಬಗ್ಗೆ ಅಳುತ್ತಲೇ ಇರುತ್ತೇವೆ. ನಾವು ಸಂತ್ರಸ್ತರಾಗಲಿ ಅಥವಾ ಅಪರಾಧಿಗಳಾಗಲಿ, ಕೋಮು ಹಿಂಸಾಚಾರ ಮತ್ತು ತೀವ್ರಗಾಮಿತನವನ್ನು ಮೊದಲು ಖಂಡಿಸಬೇಕು. ನಾವು ಅದೃಶ್ಯ ರೇಖೆಯ ಎರಡೂ ಬದಿಗಳಲ್ಲಿ ವಾಸಿಸುತ್ತಿದ್ದೇವೆ ಎಂದು ನಂಬುವ ಪ್ಯಾದೆಗಳು. ಇದನ್ನು ಗುರುತಿಸಿ. ಮತ್ತು ಈ ಕೋಮು ಘರ್ಷಣೆಯಲ್ಲಿ ನಿರಂತರವಾಗಿ ಕಳೆದುಹೋಗುವ ಮತ್ತು ಭಯಭೀತರಾಗುವ ಮುಗ್ಧ ಜೀವಗಳ ಪರವಾಗಿ ನಿಲ್ಲಲು ಜ್ಞಾನದಿಂದ ನಿಮ್ಮನ್ನು ಸಜ್ಜುಗೊಳಿಸಿ’ ಎಂದಿದ್ದಾರೆ ಜಾನ್ಹವಿ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಸಿನಿಮಾವ ಕೊಂಡಾಡಿದ ಬಾಲಿವುಡ್ ನಟಿ ಜಾನ್ಹವಿ ಕಪೂರ್

ಜಾನ್ಹವಿ ಕಪೂರ್ ಅವರು ಮಾತ್ರವಲ್ಲದೆ ನಟಿ ಕಾಜಲ್ ಅಗರ್ವಾಲ್ ಸಹ ಈ ವಿಷಯದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ವ್ಯಕ್ತಿಯೊಬ್ಬನ ಮರಕ್ಕೆ ಕಟ್ಟಿ ಸುಡುತ್ತಿರುವ ಚಿತ್ರವನ್ನು ಹಂಚಿಕೊಂಡಿರುವ ನಟಿ ಕಾಜೊಲ್, ‘ಆಲ್ ಐಸ್ ಆನ್ ಬಾಂಗ್ಲಾದೇಶಿ ಹಿಂದೂ’ ಎಂದಿದ್ದಾರೆ. ‘ದಯವಿಟ್ಟು ಎದ್ದೇಳಿ ಹಿಂದೂಗಳೆ, ಮೌನ ನಿಮ್ಮನ್ನು ಕಾಪಾಡಲಾರದು’ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಜಾರಿಯಲ್ಲಿದೆ. ಈ ಹಿಂದೆ ಕೆಲವು ಬಾಲಿವುಡ್ ನಟಿಯರು ಗಾಜಾ, ಇಸ್ರೇಲ್ ಇನ್ನಿತರೆ ದೇಶಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪೋಸ್ಟ್​​ಗಳನ್ನು ಹಂಚಿಕೊಂಡಿದ್ದರು, ಆದರೆ ಈಗ ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಪೋಸ್ಟ್ ಹಂಚಿಕೊಂಡಿಲ್ಲ, ಇದು ಅವರ ಕಪಟತನವನ್ನು ತೋರುತ್ತದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಜಾನ್ಹವಿ ಹಾಗೂ ಕಾಜಲ್ ಅವರನ್ನು ಅಭಿನಂದಿಸಿದ್ದಾರೆ ಸಹ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:35 pm, Fri, 26 December 25

Source link

ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ? – Kannada News | Saurabh Mukherjea says middle class Indians’ 12 billion USD outflow through F&O trading loss

ನವದೆಹಲಿ, ಡಿಸೆಂಬರ್ 26: ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಟ್ರೇಡಿಂಗ್ (F & O- Futures and Options) ಎನ್ನುವ ಮಾಯಾಜಿಂಕೆಯನ್ನು ಹಿಡಿಯಲು ಹೋಗುವ ಭಾರತೀಯರಲ್ಲಿ ಹೆಚ್ಚಿನವರಿಗೆ ಅದು ಸಿಕ್ಕೋದೇ ಇಲ್ಲ. ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಶೇ. 90ರಷ್ಟು ರೀಟೇಲ್ ಹೂಡಿಕೆದಾರರು ಹಣ ಕಳೆದುಕೊಳ್ಳುತ್ತಾರಂತೆ. ಈ ರೀಟೇಲ್ ಹೂಡಿಕೆದಾರರಲ್ಲಿ ಬಹಳ ಸಂಖ್ಯೆಯಲ್ಲಿ ಜನರು ಸಣ್ಣ ಪಟ್ಟಣಗಳಿಂದ ಬಂದ ಯುವಜನರೇ ಅಧಿಕವಂತೆ.

ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಮಾರುಕಟ್ಟೆಯನ್ನು ಬುಗುರಿಯಂತೆ ಆಡಿಸುವವರು ದೊಡ್ಡ ಸಾಂಸ್ಥಿಕ ಹೂಡಿಕೆದಾರರು. ಇವರ ಬಳಿ ಎಐ ಶಕ್ತ ಅಲ್ಗಾರಿದಂ ಇತ್ಯಾದಿ ಆಧುನಿಕ ಪರಿಕರಗಳಿರುತ್ತವೆ. ರೀಟೇಲ್ ಹೂಡಿಕೆದಾರರ ಬಳಿ ಕೇವಲ ಆಸೆ, ಭರವಸೆ, ಅದೃಷ್ಟ ನಿರೀಕ್ಷೆ, ಹಾಗೂ ಸ್ವಲ್ಪ ಮಟ್ಟಿಗೆ ಮಾರುಕಟ್ಟೆ ಜ್ಞಾನ ಇರುತ್ತದೆ. ಆದರೆ, ದೊಡ್ಡ ದೊಡ್ಡ ಪರಿಣಿತರ ಪಡೆಗಳನ್ನೇ ಹೊಂದಿರುವ ಸಾಂಸ್ಥಿಕ ಹೂಡಿಕೆದಾರರ ಮುಂದೆ ರೀಟೇಲ್ ಹೂಡಿಕೆದಾರರ ಆಟ ನಡೆಯುವುದು ಬಹಳ ಕಡಿಮೆ. ಹೀಗಾಗಿ, ಎಫ್ ಅಂಡ್ ಒ ಟ್ರೇಡಿಂಗ್​ನಲ್ಲಿ ಇನ್ಸ್​ಟಿಟ್ಯೂಶನಲ್ ಇನ್ವೆಸ್ಟರ್​ಗಳು ಹಣ ಬಾಚಿಕೊಳ್ಳುತ್ತಾರೆ.

ಇದನ್ನೂ ಓದಿ: 2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು?

ಮಾರುಕಟ್ಟೆ ತಜ್ಞ ಸೌರಭ್ ಮುಖರ್ಜಿಯಾ ಪ್ರಕಾರ, ಭಾರತದಲ್ಲಿ ಟ್ರೇಡಿಂಗ್ ಮಾಡುವ ಹೆಚ್ಚಿನ ಸಾಂಸ್ಥಿಕ ಹೂಡಿಕೆದಾರರು ಅಮೆರಿಕದವರೇ ಆಗಿದ್ದಾರೆ. ರೀಟೇಲ್ ಹೂಡಿಕೆದಾರರಲ್ಲಿ ಹೆಚ್ಚಿನವರು ಸಣ್ಣ ಪಟ್ಟಣದಿಂದ ಬಂದ 30-40ರ ವಯಸ್ಸಿನ ಮಧ್ಯಮ ವರ್ಗದ ಜನರೇ ಆಗಿರುತ್ತಾರೆ. ಇವರು ಒಂದು ವರ್ಷದಲ್ಲಿ ಎಫ್ ಅಂಡ್ ಒ ಟ್ರೇಡಿಂಗ್ ಮೂಲಕ ಮಾಡಿಕೊಳ್ಳುವ ನಷ್ಟ 12 ಬಿಲಿಯನ್ ಡಾಲರ್. ಅಂದರೆ ಸುಮಾರು ಒಂದು ಲಕ್ಷ ಕೋಟಿ ರೂ.

ಮಧ್ಯಮ ಮತ್ತು ಕೆಳ ಮಧ್ಯಮ ಭಾರತೀಯರಿಂದ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ ಹಣವು ಅಮೆರಿಕಕ್ಕೆ ಹೋಗುತ್ತದೆ ಎನ್ನುತ್ತಾರೆ ಸೌರಭ್ ಮುಖರ್ಜಿ. ಹೀಗೆನ್ನುತ್ತಾ ಅವರು ಷೇರು ಮಾರುಕಟ್ಟೆಯ ಕಹಿ ಚಿತ್ರ ಬಿಚ್ಚಿಟ್ಟಿದ್ದಾರೆ.

ಎಕ್ಸ್​ನಲ್ಲಿ ಬಂದ ಇವರ ಒಂದು ವಿಡಿಯೋ

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್

ಅವರು ಸಂದರ್ಶನವೊಂದರಲ್ಲಿ ಈ ವಿಚಾರವಾಗಿ ಮಾತನಾಡಿರುವ ವಿಡಿಯೋ ತುಣಕನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಲಾಗಿದೆ. ಅದಕ್ಕೆ ಪ್ರತಿಕ್ರಿಯಿಸಿದವರಲ್ಲಿ ಕೆಲವರು ಸೌರಭ್ ಮುಖರ್ಜಿ ಅವರ ವಾದವನ್ನು ಒಪ್ಪಿಲ್ಲ. ಎಫ್ ಅಂಡ್ ಒ ಮಾರುಕಟ್ಟೆಯು ಒಟ್ಟಾರೆ ಷೇರು ಮಾರುಕಟ್ಟೆಗೆ ವಿಮೆ ರೀತಿ ಇರುತ್ತದೆ. ಇಡೀ ವ್ಯವಸ್ಥೆಯ ಪ್ರಮಾಣಕ್ಕೆ ಹೋಲಿಸಿದರೆ ಇದರಲ್ಲಿನ ನಷ್ಟ ದೊಡ್ಡದೆನಿಸುವುದಿಲ್ಲ ಎಂದು ಕೆಲವರು ವಾದಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು

ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ ಬರುತ್ತಿದ್ದಂತೆ ಭೂಗಳ್ಳರು ಪರಾರಿ ಆಗಿರುವಂತಹ ಘಟನೆ ಮೈಸೂರಿನ ಪಶ್ಚಿಮ ಉಪ ನೋಂದಣಿ ಕಚೇರಿಯಲ್ಲಿ ನಡೆದಿದೆ.

ನಡೆದದ್ದೇನು?

ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೇರ್ಗಳ್ಳಿ ಗ್ರಾಮ ಮತ್ತು ಚಾಮುಂಡಿ ಸೂರು ನಗರ ಬಡಾವಣೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ ವಿವಿಧ ಸರ್ವೆ ನಂಬರ್​ಗಳಲ್ಲಿ 22 ನಿವೇಶನಗಳಿವೆ.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಖದೀಮರು ಸಿದ್ಧರಾಜು ಅವರ ನಕಲಿ ಫೋಟೋ ಒಳಗೊಂಡ ಆಧಾರ್​ ಕಾರ್ಡ್​​​, ಪಾನ್ ಕಾರ್ಡ್, ಮನೆ ವಿಳಾಸ ಬದಲಿಸಿ ಮೋಸ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಬೋಗಾದಿ ಪಟ್ಟಣ ಪಂಚಾಯ್ತಿಯಲ್ಲಿ ಇ ಖಾತಾ ಪಡೆಯಲಾಗಿತ್ತು. ಅದೇ ಪ್ರತಿ ಸಲ್ಲಿಸಿ 22 ನಿವೇಶನಗಳನ್ನು ಜಿಪಿಎ ನೊಂದಣಿ ಮಾಡಿಸಲು ಭೂಗಳ್ಳರು ಮುಂದಾಗಿದ್ದರು.

ಡಿ.23 ರಂದು ಪಶ್ಚಿಮ ಉಪನೋಂದಣಾಧಿಕಾರಿ ಕಚೇರಿಗೆ ನಿವೇಶನ ನೋಂದಣಿಗೆ ಅರ್ಜಿ ಸಲ್ಲಿಸಲಾಗಿತ್ತು. ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿಯೊಬ್ಬರು ಮಾಜಿ ಎಂಎಲ್​​ಸಿ ಸಿದ್ದರಾಜು ದಾಖಲೆಗಳನ್ನ ಗಮನಿಸಿ ಅವರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೇಕ್ ಇನ್ ಇಂಡಿಯಾ ಬಲಪಡಿಸಲು ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದ ಯೂನಿಟಿ ಮಾಲ್​​​ಗೆ ವಿಘ್ನ

ಇತ್ತ ಉಪನೋಂದಣಾಧಿಕಾರಿ ಕಚೇರಿಗೆ ಸಿದ್ಧರಾಜು ಬೆಂಬಲಿಗರೊಂದಿಗೆ ಆಗಮಿಸುತ್ತಿದ್ದಂತೆ ಭೂಗಳ್ಳರು ಪರಾರಿ ಆಗಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಮಾರಾಟ ಮಾಡಲು ಬಂದಿದ್ದ ಭೂಗಳ್ಳರನ್ನ ಸಿಸಿಟಿವಿ ದೃಶ್ಯಾವಳಿ ಹಾಗೂ ದಾಖಲೆಗಳ ಪ್ರತಿ ನೀಡುವಂತೆ ಸಿದ್ದರಾಜು ಮನವಿ ಮಾಡಿದ್ದಾರೆ. ಪ್ರಕರಣ ಸಂಬಂಧ ಕಂದಾಯ ಸಚಿವರಿಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ – Kannada News | Menopause Health Tips from Dr. Samhita

Menopause Health Tips From Dr. Samhita

ಮಹಿಳೆಯರ ಜೀವನದಲ್ಲಿ ಮೆನೋಪಾಸ್ (Menopause) ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ನಿಮಗೂ ತಿಳಿದಿರಬಹುದು ಮೆನೋಪಾಸ್ ಎಂದರೆ ಋತುಚಕ್ರ (Menstrual Cycles) ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಸಾಮಾನ್ಯವಾಗಿ 45- 55 ವರ್ಷದೊಳಗಿನ ಅವಧಿಯಲ್ಲಿ ಋತು ಚಕ್ರ ನಿಲ್ಲುತ್ತದೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗಳಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸ್ಥಿತಿಗಳಲ್ಲಿ ಹಲವು ಪರಿವರ್ತನೆಗಳು ಕಂಡುಬರುತ್ತದೆ. ಇಂತಹ ಸಂದರ್ಭದಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಆರೈಕೆಯಿಂದ ಈ ಹಂತವನ್ನು ಸುಲಭವಾಗಿ ಎದುರಿಸಬಹುದು. ಈ ಕುರಿತು, ಬೆಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸಂಹಿತಾ ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಂಹಿತಾ ಉಲ್ಲೋಡು ಅವರು ಟಿವಿ9 ಕನ್ನಡ ಜೊತೆ ಹಂಚಿಕೊಂಡಿದ್ದು ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಡಾ. ಸಂಹಿತಾ ಉಲ್ಲೋಡು ಅವರು ಹೇಳುವ ಪ್ರಕಾರ, ಮೆನೋಪಾಸ್ ಸಮಯದಲ್ಲಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಲವು ರೀತಿಯ ಬದಲಾವಣೆಗಳು ಉಂಟಾಗುತ್ತದೆ. ಹಾಗಂತ ಇದಕ್ಕೆ ಭಯಪಡುವ ಅವಶ್ಯಕತೆಯೂ ಇರುವುದಿಲ್ಲ. ಇದಕ್ಕೆ ಹಲವು ಪರಿಹಾರಗಳಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು.

ಆಹಾರದಲ್ಲಿ ಸಮತೋಲನ:

ಮೆನೋಪಾಸ್ ನಂತರ ಎಲುಬುಗಳ ಸಾಂದ್ರತೆ ಕಡಿಮೆಯಾಗುವ ಅಪಾಯ ಹೆಚ್ಚಾಗಿರುತ್ತದೆ. ಆದ್ದರಿಂದ ಕ್ಯಾಲ್ಸಿಯಂ ಮತ್ತು ವಿಟಮಿನ್- ಡಿಯುಕ್ತ ಆಹಾರಗಳನ್ನು ಅಂದರೆ ಹಾಲು, ಮೊಸರು, ಎಳ್ಳು, ಹಸಿರು ಸೊಪ್ಪುಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಅಗತ್ಯ. ಜೊತೆಗೆ ಪ್ರೋಟೀನ್ ಯುಕ್ತ ಆಹಾರಗಳಾದ, ಹಣ್ಣು- ತರಕಾರಿ, ಧಾನ್ಯಗಳನ್ನು ದೈನಂದಿನ ಆಹಾರದಲ್ಲಿ ಸೇವನೆ ಮಾಡಬೇಕು. ಅತಿಯಾದ ಸಕ್ಕರೆ, ಉಪ್ಪು, ಪ್ಯಾಕೇಜ್ಡ್ ಮತ್ತು ತೈಲಯುಕ್ತ ಆಹಾರಗಳನ್ನು ಕಡಿಮೆ ಮಾಡುವುದು ಒಳಿತು.

ನಿಯಮಿತ ವ್ಯಾಯಾಮ:

ಮೆನೋಪಾಸ್ ಸಮಯದಲ್ಲಿ ತೂಕ ಹೆಚ್ಚಳ ಮತ್ತು ಎಲುಬು- ಸಂಧಿ ನೋವು ಸಾಮಾನ್ಯ. ಹಾಗಾಗಿ ಪ್ರತಿದಿನ 30 ರಿಂದ 40 ನಿಮಿಷಗಳ ಕಾಲ ನಡೆಯುವುದು, ಯೋಗ, ಪ್ರಾಣಾಯಾಮ, ಲಘು ಶಕ್ತಿ ಅಭ್ಯಾಸಗಳು ದೇಹದ ಮೆಟಾಬಾಲಿಸಂ ಸುಧಾರಿಸಿ, ಮನೋಸ್ಥಿತಿ ಸರಿಪಡಿಸುತ್ತವೆ. ಯೋಗದಲ್ಲಿ ಬದ್ಧಕೋಣಾಸನ, ಭುಜಂಗಾಸನ, ವಜ್ರಾಸನ, ಶವಾಸನ ಹಂತಗಳು ವಿಶೇಷವಾಗಿ ಸಹಾಯಕವಾಗುತ್ತದೆ.

ಮಾನಸಿಕ ಆರೈಕೆ:

ದಿನನಿತ್ಯ 10- 15 ನಿಮಿಷ ಧ್ಯಾನ, ಪ್ರಾಣಾಯಾಮ, ಮನಸ್ಸನ್ನು ಪ್ರಸನ್ನವಾಗಿಡುವ ಹವ್ಯಾಸಗಳು ಅಂದರೆ ಪಠಣ, ಸಂಗೀತ, ತೋಟಗಾರಿಕೆ ಮಾಡುವುದು ಉಪಯುಕ್ತ. ಅಗತ್ಯವಿದ್ದರೆ ಪರಿಣಿತರಿಂದ ಕೌನ್ಸೆಲಿಂಗ್ ಪಡೆಯುವುದು ಉತ್ತಮ.

ಇದನ್ನೂ ಓದಿ: ಹೆರಿಗೆ ನಂತರ ಮುಟ್ಟು ಯಾವಾಗ ಬರಬೇಕು ಎಂಬುದು ತಿಳಿದಿದೆಯೇ?

ರಾತ್ರಿ ಬೆವರುವಿಕೆ:

ಇದಕ್ಕೆ ಎಳನೀರು, ಶತಾವರಿ ಹಾಲು ಉಪಯುಕ್ತ ಅದರ ಜೊತೆಗೆ ತಂಪಾದ ಪರಿಸರದಲ್ಲಿ ವಾಯುವಿಹಾರ, ಕಾಫಿ/ ಚಹಾ/ಮಸಾಲೆ ಹೆಚ್ಚಿರುವ ಆಹಾರಗಳ ಬಳಕೆಯನ್ನು ಕಡಿಮೆ ಮಾಡುವುದು ಈ ಲಕ್ಷಣಗಳನ್ನು ತಗ್ಗಿಸುತ್ತದೆ. ಇದೆಲ್ಲದರ ಜೊತೆಗೆ ಸಾಕಷ್ಟು ನೀರು ಕುಡಿಯುವುದು ಅಗತ್ಯ.

ಜನನಾಂಗ ಮತ್ತು ಮೂತ್ರನಾಳ ಆರೈಕೆ:

ಈ ಅವಧಿಯಲ್ಲಿ ಯೋನಿ ಸುರಕ್ಷತೆ ಮತ್ತು ಸೋಂಕಿನ ಸಮಸ್ಯೆಗಳು ಹೆಚ್ಚಳವಾಗಬಹುದು. ಹಾಗಾಗಿ ನೀರು ಹೆಚ್ಚು ಕುಡಿಯುವುದು, ಸ್ವಚ್ಛತೆ ಕಾಪಾಡುವುದು, ಕೊಬ್ಬರಿ ಎಣ್ಣೆ ಬಳಕೆ ಮಾಡಬಹುದು ಅವಶ್ಯಕ.

ನಿಯಮಿತ ಆರೋಗ್ಯ ತಪಾಸಣೆ:

ರಕ್ತದ ಒತ್ತಡ, ಸಕ್ಕರೆ, ಲಿಪಿಡ್ ಪ್ರೊಫೈಲ್, ಥೈರಾಯ್ಡ್, ಮ್ಯಾಮೋಗ್ರಾಫಿ, ಪ್ಯಾಪ್ ಸ್ಮಿಯರ್ ಮುಂತಾದ ಮೂಲ ಪರಿಶೀಲನೆಗಳನ್ನು ವರ್ಷಕ್ಕೊಮ್ಮೆ ಮಾಡಿಸಿಕೊಳ್ಳುವುದು ಅತ್ಯವಶ್ಯಕ. ಆದರೆ ನಿರಂತರ ರಕ್ತಸ್ರಾವ, ತೀವ್ರ ನೋವು, ಅನಿರೀಕ್ಷಿತ ತೂಕ ಬದಲಾವಣೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು.

ಸಮರ್ಪಕ ನಿದ್ರೆ ಮತ್ತು ಒತ್ತಡ ನಿರ್ವಹಣೆ:

ರಾತ್ರಿ ಚೆನ್ನಾಗಿ ನಿದ್ರೆ ಮಾಡಿ ಒತ್ತಡ ಕಡಿಮೆ ಮಾಡಿಕೊಂಡರೆ ಮೆನೋಪಾಸ್ ನಿಂದ ಆಗುವ ಹಲವಾರು ತೊಂದರೆಗಳನ್ನು ತಡೆಯಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅರಮನೆ ಮೈದಾನದಲ್ಲಿ ರಿಸೆಪ್ಷನ್: ಶ್ರೀಲಂಕಾ ಹನಿಮೂನ್ ಟ್ರಿಪ್​ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ – Kannada News | Newly married Bengaluru Ganavi Suicide: Grandmother Alleged On Husband Family

ಬೆಂಗಳೂರು, (ಡಿಸೆಂಬರ್ 26): ಬೆಂಗಳೂರಿನ (Bengaluru) ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ (Ramamurthy Nagar) ಈ ಘಟನೆ ನಡೆದಿದ್ದು, 26 ವರ್ಷದ ಗಾನವಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದ್ರೆ, ಅಲ್ಲಿ ಅದೇನಾಯ್ತೋ ಏನೋ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು. ಬಳಿಕ ನೇಣಿಗೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಈ ಬಗ್ಗೆ ಮೃತ ಗಾನವಿ ದೊಡ್ಡಮ್ಮ ಮಾತನಾಡಿದ್ದು, ಗಾನವಿ ಗಂಡ ಸೂರಜ್​​​ ಗಂಡಸ್ತನದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹನಿಮೂನ್​​ಗೆಂದು ಶ್ರೀಲಂಕಾಕ್ಕೆ ಹೋಗಿದ್ದರು. ಆದ್ರೆ, ಅಲ್ಲಿ ಹೆಂಡ್ತಿನ ಟಚ್​​ ಸಹ ಮಾಡಿಲ್ಲ. ನಪುಂಸಕ ಮಗನಿಗೆ ಮದುವೆ ಯಾಕೆ ಮಾಡಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ – Kannada News | BEML Manager Recruitment 2025: 27 Vacancies in Karnataka Apply Now!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

BEML ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML )
  • ಹುದ್ದೆಗಳ ಸಂಖ್ಯೆ: 27
  • ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು
  • ಹುದ್ದೆಯ ಹೆಸರು: ಮ್ಯಾನೇಜರ್
  • ಸಂಬಳ: ತಿಂಗಳಿಗೆ 50,000 – 2,80,000 ರೂ.

ಶೈಕ್ಷಣಿಕ ಅರ್ಹತೆ:

BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA. CMA, ಪದವಿ, BE/ B.Tech, MBA, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MA, PGDM ಅನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/ PwD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ:

  • ಸಂದರ್ಶನ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ BEML ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • BEML ಮ್ಯಾನೇಜರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • BEML ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • BEML ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಗೆ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಾನವಿ ಸಾವು ಪ್ರಕರಣ: ‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು!’

ಬೆಂಗಳೂರು, ಡಿ.26: ಬೆಂಗಳೂರು, ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ. ಗಾನವಿ ಅವರ ಚಿಕ್ಕಪ್ಪ ಕಾರ್ತಿಕ್ ನೀಡಿರುವ ಹೇಳಿಕೆ ಪ್ರಕಾರ, ಮದುವೆಯಾದ ಮರುದಿನದಿಂದಲೇ ಗಾನವಿ ಪತಿ ಸೂರಜ್ ಆಭರಣ, ಆಸ್ತಿ ಹಾಗೂ ಕಾರಿಗಾಗಿ ನಿರಂತರ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಸೂರಜ್ ಅವರು ಗಾನವಿ ಜೊತೆ ದೈಹಿಕ ಸಂಪರ್ಕ ಹೊಂದಲು ನಿರಾಕರಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಕಾರ್ತಿಕ್ ಆರೋಪಿಸಿದ್ದಾರೆ. ಮದುವೆಗೂ ಮುನ್ನ ವರದಕ್ಷಿಣೆ ಕೇಳಿರಲಿಲ್ಲ, ಆದರೆ ಮದುವೆಯ ನಂತರ ಕಿರುಕುಳ ಶುರುವಾಗಿದೆ. ಗಾನವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪತಿ ಸೂರಜ್, ಅವರ ಅಣ್ಣ ಸಂಜಯ್ ಮತ್ತು ತಾಯಿ ಜಯಂತಿ ವಿರುದ್ಧ ದೂರು ದಾಖಲಾಗಿದ್ದು, ಮೂವರೂ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link