Category Archives: Blog

Your blog category

RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಫೆಬ್ರವರಿ 5ರಂದು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಆರ್​​ಸಿಬಿಗೆ ಡೆಲ್ಲಿ ತಂಡ 204 ರನ್​​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್​​ನ ಆರ್​​ಸಿಬಿ ಬೆನ್ನು ಹತ್ತಿತ್ತು. ಅಂತಿಮ ಓವರ್ ಸಮೀಪಿಸುವಾಗ ಆರ್​​ಸಿಬಿ 194 ರನ್​​​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆರು ಬಾಲ್​​ಗೆ ಬೇಕಿದ್ದಿದ್ದು 10 ರನ್​​ಗಳು.

ಕ್ರೀಜ್​ ಅಲ್ಲಿ ಇದ್ದ ರಾಧಾ ಯಾದವ್ ಮೊದಲ ಬಾಲ್​​ ಅಲ್ಲಿ ಸಿಂಗಲ್ ಕಲೆ ಹಾಕಿದರು. ಡಿ ಕ್ಲಾರ್ಕ್ ಕೂಡ ಒಂದು ರನ್ ತೆಗೆದು ರಾಧಾಗೆ ಸ್ಟ್ರೈಕ್ ನೀಡಿದರು. ಮೂರು ಹಾಗೂ ನಾಲ್ಕನೇ ಬಾಲ್​​ಗೆ ಫೋರ್ ಹೊಡೆದು ರಾಧಾ ಅವರು ಪಂದ್ಯವನ್ನು ಗೆಲುವಿನ ದಡ ತಲುಪಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ; ಮಂಗಳೂರಿನ ವಾಯು ಗುಣಮಟ್ಟ ಪಾತಾಳಕ್ಕೆ! – Kannada News | Bangalore Air Pollution Crisis: Bengaluru Air quality is slightly better, Mangaluru’s AQI is unhealthy

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ

ಬೆಂಗಳೂರು, ಫೆಬ್ರುವರಿ 06: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ ಏಕಾಏಕಿ ಸುಧಾರಣೆ ಕಂದುಬಂದಿದೆ. ಇದರ ಬದಲಾಗಿ ಮಂಗಳೂರಿನ ವಾಯು ಗುಣಮಟ್ಟ 200ರ ಗಡಿ ತಲುಪಿದ್ದು, ಆತಂಕ ಮೂಡಿಸಿದೆ. ಜೊತೆಗೆ ಬಳ್ಳಾರಿ ಮತ್ತು ಶಿವಮೊಗ್ಗದ ಪರಿಸ್ಥಿತಿಯೂ ಹದಗೆಟ್ಟಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 137ಕ್ಕೆ ತಲುಪಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ. ಮೂರು ನಾಲ್ಕು ದಿನಗಳ ಹಿಂದೆ 100ರ ಆಸು ಪಾಸಿದ್ದ ಮಂಗಳೂರಿನ AQI, ಇಂದು 199ಕ್ಕೆ ತಲುಪಿದ್ದು ಆಶ್ಚರ್ಯ ಉಂಟು ಮಾಡಿದೆ. ಈ ಹದಗೆಟ್ಟ ವಾತಾವರಣ ಹೀಗೆ ಮುಂದುವರೆದರೆ ದೆಹಲಿಯಂತೆಯೇ ಆಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಕಲುಷಿತ ಗಾಳಿಯಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ಸೂಕ್ಷ್ಮಾಣುಗಳಿಂದಲೂ ಜೀವಕ್ಕೆ ಹಾನಿ

PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇಂದಿನ ಅಂಕಿಅಂಶಗಳ ಪ್ರಕಾರ PM2.5 ಪ್ರಮಾಣ 84 ಆಗಿದ್ದು, PM10 109ಕ್ಕೆ ಏರಿಕೆಯಾಗಿದೆ. ಈ ಕಣಗಳು ನೇರವಾಗಿ ಉಸಿರಾಟ ವ್ಯವಸ್ಥೆಗೆ ಹೊಡೆತ ನೀಡುತ್ತವೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –137
  • ಮಂಗಳೂರು-199
  • ಮೈಸೂರು –144
  • ಬೆಳಗಾವಿ – 135
  • ಕಲಬುರ್ಗಿ-152
  • ಶಿವಮೊಗ್ಗ – 166
  • ಬಳ್ಳಾರಿ – 179
  • ಹುಬ್ಬಳ್ಳಿ- 97
  • ಉಡುಪಿ –164
  • ವಿಜಯಪುರ –154

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ – Kannada News | Hidden Camera Sting in Belagavi: Fake Journalists Blackmail Woman Officer for Rs 50 Lakh, Three Arrested

ಬೆಳಗಾವಿ, ಫೆಬ್ರವರಿ 6: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ಆರೋಪಿಗಳು.

ಆರೋಪಿಗಳು ಮಹಿಳಾ ಅಧಿಕಾರಿ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿದ್ದರು. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಸಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಬ್ಲ್ಯಾಕ್​ಮೇಲ್ ಬಗ್ಗೆ ಮಹಿಳಾ ಅಧಿಕಾರಿ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಆ ಬಳಿಕ ಕಮಿಷನರ್ ಸೂಚನೆಯಂತೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಮಾಳಮಾರುತಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಸ್ಯಾಮ್‌ಸಂಗ್ ಅಲ್ಟ್ರಾ ಮೊಬೈಲ್, ಒಂದು ವಿವೋ ಮೊಬೈಲ್, 64 ಜಿಬಿ ಪೆನ್‌ಡ್ರೈವ್, ಆರು ರಹಸ್ಯ ಕ್ಯಾಮರಾಗಳು, ಎರಡು ಓಟಿಜಿ ಸಾಧನಗಳು, ಹಲವು ಮೆಮೊರಿ ಕಾರ್ಡ್‌ಗಳು ಹಾಗೂ ಇನ್ನೋವಾ ಕ್ರಿಸ್ಟಾ ಕಾರನ್ನು ಜಪ್ತಿ ಮಾಡಲಾಗಿದೆ.

ಮನೆಯೊಳಗೆ ರಹಸ್ಯ ಕ್ಯಾಮರಾ ಅಳವಡಿಸಿದ್ಹೇಗೆ ಆರೋಪಿಗಳು?

ಪ್ರಕರಣದಲ್ಲಿ ಮಹಿಳಾ ಅಧಿಕಾರಿಯ ಮನೆ ಕೆಲಸದವನ ಪಾತ್ರವೂ ಬೆಳಕಿಗೆ ಬಂದಿದೆ. ಮನೆ ಕಿಟಕಿಯಲ್ಲಿ ಬೀಗದ ಕೀಲಿಕೈಯನ್ನು ಇಡುವ ವಿಚಾರವನ್ನು ತಿಳಿದಿದ್ದ ಆತ ಆರೋಪಿಗಳಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದೆ. ಎರಡು ತಿಂಗಳ ಹಿಂದೆ ಮಹಿಳಾ ಅಧಿಕಾರಿ ಕೀಲಿಕೈ ಕಿಟಕಿಯಲ್ಲಿ ಇಟ್ಟು ಹೋಗಿದ್ದಾಗ ಮನೆ ಕೆಲಸದಾತ ಆರೋಪಿಗಳಿಗೆ ಮಾಹಿತಿ ನೀಡಿದ್ದ. ಅದರಂತೆ, ಸಮಯ ನೋಡಿ ಮನೆಗೆ ನುಗ್ಗಿದ್ದ ಆರೋಪಿಗಳು ಬೆಡ್‌ರೂಮ್ ಹಾಗೂ ಹಾಲ್‌ನಲ್ಲಿ ರಹಸ್ಯ ಕ್ಯಾಮರಾಗಳನ್ನು ಅಳವಡಿಸಿದ್ದರು. ಆ ಮೂಲಕ ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು ಸೆರೆಹಿಡಿದು ನಂತರ ತೆಗೆದುಕೊಂಡು ಹೋಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಬೇರೊಬ್ಬರ ಹೆಂಡ್ತಿ ಜತೆ ಸಿಕ್ಕಿಬಿದ್ದು ಏಟು ತಿಂದ ಪ್ರಕರಣ: ಸ್ಫೋಟಕ ವಿಚಾರ ಬಿಚ್ಚಿಟ್ಟ ಮಹಿಳೆಯ ಗಂಡ!

ಬಳಿಕ ಖಾಸಗಿ ವಿಡಿಯೋ ಆಧರಿಸಿ ಮಹಿಳಾ ಅಧಿಕಾರಿ ಬಳಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ಪರಾರಿಯಾಗಿರುವ ಮನೆ ಕೆಲಸದವನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ.

ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಮತ್ತೊಂದೆಡೆ, ಜನನಾಯಗನ್ ಚಿತ್ರವನ್ನು ಮುಂದೂಡಿದ್ದರಿಂದ ಈ ಚಿತ್ರದ ವಿರುದ್ಧ ತೀವ್ರ ಟೀಕೆಗಳು ಕೇಳಿ ಬಂದವು. ‘ಜನ ನಾಯಗನ್’ ವಿರುದ್ಧದ ಪಿತೂರಿ ಇದೆ ತಂಡದ ಕಿತಾಪತಿ ಎಂದು ಹೇಳಲಾಯಿತು. ಆದಾಗ್ಯೂ ‘ಪರಾಶಕ್ತಿ’ ಸಿನಿಮಾ 100 ಕೋಟಿ ರೂ.ಗಳಿಗಿಂತ ಹೆಚ್ಚು ಗಳಿಸಿದೆ.

ಪರಾಶಕ್ತಿ ಚಿತ್ರ ಈಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಇದು ಫೆಬ್ರವರಿ 7 ರಿಂದ ಜನಪ್ರಿಯ ಒಟಿಟಿ ಪ್ಲಾಟ್‌ಫಾರ್ಮ್ ಜೀ5 ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಈ ಚಿತ್ರ ತೆಲುಗು, ಕನ್ನಡ, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಪ್ರಸಾರ ಕಾಣಲಿದೆ. ಶಿವಕಾರ್ತಿಕೇಯನ್ ಈಗಾಗಲೇ ರೆಮೋ, ಪ್ರಿನ್ಸ್ ಮತ್ತು ಅಮರನ್ ಚಿತ್ರಗಳ ಮೂಲಕ ಭಾರಿ ಕ್ರೇಜ್ ಸೃಷ್ಟಿಸಿದ್ದಾರೆ. ಹೀಗಾಗಿ ಅವರ ಫ್ಯಾನ್ಸ್ ‘ಪರಾಶಕ್ತಿ’ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಶ್ರೀಲೀಲಾ ಇದರಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಶ್ರೀಲೀಲಾ ಈ ಚಿತ್ರದ ಮೂಲಕ ತಮಿಳಿನಲ್ಲಿ ಪಾದಾರ್ಪಣೆ ಮಾಡಿದರು.

ಇದನ್ನೂ ಓದಿ: ‘ಪರಾಶಕ್ತಿ’ ಸಕ್ಸಸ್ ಮೀಟ್ ವೇದಿಕೆಯಲ್ಲಿ ನಾಯಕ-ನಿರ್ದೇಶಕಿ ಜಗಳ

ಈ ಚಿತ್ರವು 1965 ರಲ್ಲಿ ತಮಿಳುನಾಡಿನಲ್ಲಿ ನಡೆದ ಹಿಂದಿ ವಿರೋಧಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿದೆ. ಆ ಸಮಯದಲ್ಲಿ, ಭಾರತೀಯ ಕೇಂದ್ರ ಸರ್ಕಾರವು ತಮಿಳರ ಮೇಲೆ ಹಿಂದಿ ಭಾಷೆಯನ್ನು ಹೇರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದರು. ಈ ಆಂದೋಲನವು ಚೆಜಿಯನ್ ಮತ್ತು ಚಿನ್ನದುರೈ ಎಂಬ ಇಬ್ಬರು ಸಹೋದರರ ಮೇಲೆ ಹೇಗೆ ಪರಿಣಾಮ ಬೀರಿತು ಎಂಬುದನ್ನು ಚಿತ್ರವು ಚಿತ್ರಿಸುತ್ತದೆ. ರಾಣಾ ದಗ್ಗುಬಾಟಿ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:18 am, Fri, 6 February 26

Source link

‘ಧುರಂಧರ್ 2’ ಚಿತ್ರದ ಒಟಿಟಿ ಹಕ್ಕಿಗೆ ಡಬಲ್ ಹಣ ಕೊಟ್ಟ ಜಿಯೋ ಹಾಟ್​​ಸ್ಟಾರ್ – Kannada News | Dhurandhar 2: Ranveer Singh’s Sequel OTT Rights Soar; Netflix and Hotstar’s Mega Deals Revealed

ಆದಿತ್ಯ ಧಾರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಟಿಸಿದ ‘ಧುರಂಧರ್’ ಜನವರಿ 30, 2026 ರಂದು ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಚಿತ್ರವು ಬಿಡುಗಡೆಯಾದ ತಕ್ಷಣ ನೆಟ್‌ಫ್ಲಿಕ್ಸ್‌ನಲ್ಲಿ ನಂಬರ್ 1 ಸ್ಥಾನದಲ್ಲಿದೆ. ಇದೆಲ್ಲದರ ನಡುವೆ, ‘ಧುರಂಧರ್ 2: ದಿ ರಿವೆಂಜ್’ನ ಮೊದಲ ಟೀಸರ್ ಅನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಈ ಚಿತ್ರದ ಒಟಿಟಿ ಹಕ್ಕು ದೊಡ್ಡ ಮೊತ್ತಕ್ಕೆ ಮಾರಾಟ ಆಗಿದೆ ಎನ್ನಲಾಗುತ್ತಿದೆ.

ಬಾಲಿವುಡ್ ಹಂಗಾಮಾ ವರದಿಯ ಪ್ರಕಾರ, ‘ಧುರಂಧರ್’ ಚಿತ್ರದ ಎರಡೂ ಭಾಗಗಳ ಸ್ಟ್ರೀಮಿಂಗ್ ಹಕ್ಕುಗಳನ್ನು ನೆಟ್​​ಫ್ಲಿಕ್ಸ್ ಖರೀದಿ ಮಾಡಿತ್ತು. ನೆಟ್‌ಫ್ಲಿಕ್ಸ್ ಎರಡೂ ಭಾಗಗಳನ್ನು ಒಟ್ಟಿಗೆ ಪಡೆಯಲು 170 ಕೋಟಿ ನೀಡಲು ರೆಡಿ ಇತ್ತು. ಆದರೆ, ನಂತರ ಡೀಲ್ ಕ್ಯಾನ್ಸಲ್ ಮಾಡಿ ಹಾಟ್​​ಸ್ಟಾರ್ ಇದರ ಹಕ್ಕನ್ನು ಪಡೆದುಕೊಂಡಿದೆ.

ವರದಿಯ ಪ್ರಕಾರ, ಮೊದಲ ಪಾರ್ಟ್​​ಗಾಗಿ ನೆಟ್​​ಫ್ಲಿಕ್ಸ್​​ 85 ಕೋಟಿ ರೂ ನೀಡಿದೆ. ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳು ಸಿನಿಮಾ ಖರೀದಿಗೆ ಇತ್ತೀಚೆಗೆ ಕಡಿಮೆ ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗಿದೆ. ಆದರೆ ‘ಧುರಂಧರ್’ ಚಿತ್ರದ ದೊಡ್ಡ ಯಶಸ್ಸು ಮತ್ತು ಪ್ರೇಕ್ಷಕರಿಂದ ಬಂದ ಬೇಡಿಕೆಯಿಂದಾಗಿ ಅವರು ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಬೇಕಾಯಿತು. ಈಗ ಜಿಯೋ ಹಾಟ್​​ಸ್ಟಾರ್ 170 ಕೋಟಿ ರೂಪಾಯಿ ಕೊಟ್ಟು ಎರಡನೇ ಭಾಗದ ಸ್ಟ್ರೀಮಿಂಗ್ ಹಕ್ಕು ಖರೀದಿಸಿದೆ ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ‘ಧುರಂಧರ್’ ಬಗ್ಗೆ ಹೃತಿಕ್ ಹೇಳಿದ ಮಾತಿಗೆ ಪ್ರತಿಕ್ರಿಯಿಸಿದ ಆದಿತ್ಯ ಧಾರ್

ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹಿಂದಿನ ಭಾಗದಲ್ಲಿ ರೆಹಮಾನ್ ಡಕಾಯಿತ್ (ಅಕ್ಷಯ್ ಖನ್ನಾ) ಅವರ ಮರಣದ ನಂತರ, ಎರಡನೇ ಭಾಗವು ಹಮ್ಜಾ ಅಲಿ (ರಣವೀರ್ ಸಿಂಗ್) ಅವರ ಪಾತ್ರ ಹೈಲೈಟ್ ಆಗೋ ಸಾಧ್ಯತೆ ಇದೆ. ಈ ಚಿತ್ರದಲ್ಲಿ ಸಂಜಯ್ ದತ್, ಅರ್ಜುನ್ ರಾಂಪಾಲ್, ಆರ್. ಮಾಧವನ್, ರಾಕೇಶ್ ಬೇಡಿ ಮತ್ತು ಸಾರಾ ಅರ್ಜುನ್ ಕೂಡ ನಟಿಸಿದ್ದಾರೆ. ಈ ಚಿತ್ರವು ಮಾರ್ಚ್ 19, 2026 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫೇಕ್ ನ್ಯೂಸ್, ದ್ವೇಷ ಹರಡುವ ಕಂಟೆಂಟ್ ತಡೆಗೆ ಬರಲಿದೆ ಎಐ ಸಾಫ್ಟ್​ವೇರ್: 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ – Kannada News | Karnataka Cabinet Approves Rs 67 Cr AI Software to Track Fake News and Hate Content on Social Media

ಬೆಂಗಳೂರು, ಫೆಬ್ರವರಿ 6: ನಕಲಿ ಸುದ್ದಿ ಮತ್ತು ಸಮಾಜ ವಿರೋಧಿ ಅಂಶಗಳುಳ್ಳ ಡಿಜಿಟಲ್ ಕಂಟೆಂಟ್​ಗಳನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಿ ಬಳಕೆ ಮಾಡುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಸುಮಾರು 67.26 ಕೋಟಿ ರೂ. ವೆಚ್ಚದಲ್ಲಿ ‘ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್ (Social media analytics solutions)’ ಎಂಬ ಸಾಫ್ಟ್​ವೇರ್ ಅಭಿವೃದ್ಧಿಪಡಿಸಿ ಯೋಜನೆ ಜಾರಿಗೊಳಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​​​ಕೆ ಪಾಟೀಲ್, ಸಾಂಪ್ರದಾಯಿಕ ವಿಧಾನಗಳ ಮೂಲಕ ನಕಲಿ ಸುದ್ದಿಗಳನ್ನು ತಡೆಯಲು ಆಗುತ್ತಿಲ್ಲ. ಹೀಗಾಗಿ, ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನವನ್ನು ಬಳಸುವ ಅಗತ್ಯ ಎದುರಾಗಿದೆ ಎಂದು ತಿಳಿಸಿದರು.

ಫೇಕ್​ ನ್ಯೂಸ್ ತಡೆಗೆ ಎಐ ಆಧಾರಿತ ತಂತ್ರಜ್ಞಾನ ಹೇಗೆ ಕೆಲಸ ಮಾಡುತ್ತೆ?

‘ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್’ ಸಾಫ್ಟ್‌ವೇರ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಡಿಜಿಟಲ್ ಕಂಟೆಂಟ್​​ಗಳನ್ನು ವಿಶ್ಲೇಷಿಸಲಿದೆ. ಭಯೋತ್ಪಾದನೆ, ದ್ವೇಷ ಭಾಷಣ, ಕೋಮು ಹಿಂಸಾಚಾರಕ್ಕೆ ಪ್ರಚೋದನೆ, ಮಕ್ಕಳ ಅಪಹರಣ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವ ಸಮಾಜ ವಿರೋಧಿ ಚಟುವಟಿಕೆಗಳನ್ನು ಗುರುತಿಸಲಿದೆ. ಅಲ್ಲದೆ, ನಕಲಿ ಸುದ್ದಿಗಳ ಮೂಲವನ್ನು ಪತ್ತೆಹಚ್ಚುವ ಸಾಮರ್ಥ್ಯವೂ ಈ ತಂತ್ರಜ್ಞಾನಕ್ಕಿರಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಅಧಿಕಾರಿಗೆ ಬರುತ್ತೆ ನೋಟಿಫಿಕೇಶನ್

ಗೃಹ ಇಲಾಖೆಯ ಅಧೀನದಲ್ಲಿ ಈ ಯೋಜನೆಯನ್ನು ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಜಾರಿಗೆ ತರಲಾಗುತ್ತದೆ. ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ (ಟ್ವಿಟರ್), ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದ್ವೇಷ ಮತ್ತು ತಪ್ಪು ಮಾಹಿತಿಯನ್ನು ಹರಡುವ ಪೋಸ್ಟ್‌ಗಳನ್ನು ಪತ್ತೆಹಚ್ಚುವ ಎಐ ಆಧಾರಿತ ತಂತ್ರಜ್ಞಾನ, ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡುತ್ತದೆ.

ಮತ್ತೊಂದೆಡೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ–2026ಕ್ಕೆ ಪ್ರಸ್ತಾಪಿಸಿದ ಬದಲಾವಣೆಗಳಿಗೂ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಂತೆ, ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲಿ ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಯನ್ನು ಜಾರಿಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದ್ದು, ಅದನ್ನು ಗ್ರಾಮ ಪಂಚಾಯತ್ ಮಟ್ಟಕ್ಕೂ ವಿಸ್ತರಿಸಲಾಗುತ್ತದೆ ಎಂದು ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ಬ್ಯಾಲೆಟ್ ಪೇಪರ್​​ನಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್: ಸಚಿವ ಸಂಪುಟ ಮಹತ್ವದ ನಿರ್ಧಾರ

ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (SIR) ಕುರಿತ ಚರ್ಚೆಯನ್ನು ಮುಂದೂಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತ-ಅಮೆರಿಕ ಒಪ್ಪಂದದಿಂದ ಗಾಬರಿಗೊಂಡ ಯೂನಸ್, ಟ್ರಂಪ್ ಜತೆ ರಹಸ್ಯ ಒಪ್ಪಂದಕ್ಕೆ ಯತ್ನ – Kannada News | Bangladesh Alarmed: Yunus Secret US Trade Deal Raises Fears Amid Elections and India US Pact

ಢಾಕಾ, ಫೆಬ್ರವರಿ 06: ಭಾರತ ಹಾಗೂ ಅಮೆರಿಕ ನಡುವಿನ ಬಹು ಚರ್ಚಿತ ವ್ಯಾಪಾರ ಒಪ್ಪಂದವು ಬಾಂಗ್ಲಾದೇಶ(Bangladesh) ಸರ್ಕಾರದೊಳಗೆ ಕಳವಳವನ್ನು ಹುಟ್ಟುಹಾಕಿದೆ. ಡೊನಾಲ್ಡ್​ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಬಳಿಕ, ಬಾಂಗ್ಲಾದೇಶ ಕೂಡ ಅಮೆರಿಕದೊಂದಿಗೆ ಸಾಧ್ಯವಾದಷ್ಟು ಬೇಗ ಒಪ್ಪಂದವನ್ನು ಮಾಡಿಕೊಳ್ಳಲು ಬಯಸುತ್ತಿದೆ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಫೆಬ್ರವರಿ 12ರ ಚುನಾವಣೆಗೆ ಮೊದಲು ಅದನ್ನು ಮುಕ್ತಾಯಗೊಳಿಸುವ ಆಶಯದೊಂದಿಗೆ ಅಮೆರಿಕದೊಂದಿಗಿನ ಈ ವ್ಯಾಪಾರ ಒಪ್ಪಂದವನ್ನು ರಹಸ್ಯವಾಗಿಟ್ಟಿದೆ.

ಅಮೆರಿಕದ ಒಪ್ಪಂದಕ್ಕೆ ಸಂಬಂಧಿಸಿದಂತೆ ಯೂನಸ್ ಅವರ ಗೌಪ್ಯತೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಒಪ್ಪಂದವನ್ನು ತಲುಪಲು ಯೂನಸ್ ಏಕೆ ಇಷ್ಟು ಆತುರದಲ್ಲಿದ್ದಾರೆ ಮತ್ತು ಚುನಾವಣೆಯ ನಂತರ ರಚನೆಯಾಗುವ ಸರ್ಕಾರಕ್ಕೆ ಅದನ್ನು ಏಕೆ ಬಿಡುತ್ತಿಲ್ಲ ಎಂದು ತಜ್ಞರು ಕೇಳುತ್ತಿದ್ದಾರೆ.

ಅಮೆರಿಕದೊಂದಿಗಿನ ಯೂನಸ್ ಅವರ ಒಪ್ಪಂದದ ಸುತ್ತಲಿನ ಗೌಪ್ಯತೆಯು ರಫ್ತು ಸಂಸ್ಥೆಗಳು ಮತ್ತು ಬಾಂಗ್ಲಾದೇಶದ ಜವಳಿ ವಲಯದ ಪಾಲುದಾರರನ್ನು ಚಿಂತೆಗೀಡು ಮಾಡಿದೆ. ಬಾಂಗ್ಲಾದೇಶದಿಂದ ಅಮೆರಿಕಕ್ಕೆ ಸಾಗಿಸಲಾಗುವ ಸರಕುಗಳಲ್ಲಿ ರೆಡಿಮೇಡ್ ಉಡುಪುಗಳು ಮತ್ತು ಜವಳಿ ಶೇ.90 ರಷ್ಟಿದೆ.
ಕಳೆದ ವರ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳಿಂದ ದೇಶದ ಜವಳಿ ಉದ್ಯಮ ದುರ್ಬಲಗೊಂಡಿದೆ ಎಂದು ಬಾಂಗ್ಲಾದೇಶದ ಉದ್ಯಮಿಗಳು ಹೇಳುತ್ತಾರೆ.

ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಈ ಕಷ್ಟದ ಸಮಯದಲ್ಲಿ ರಹಸ್ಯ ಒಪ್ಪಂದವು ಈ ವಲಯವನ್ನು ಮತ್ತಷ್ಟು ದುರ್ಬಲಗೊಳಿಸಿದರೆ, ಅದು ಬಾಂಗ್ಲಾದೇಶದ ಆರ್ಥಿಕತೆಯನ್ನು ಸಂಪೂರ್ಣವಾಗಿ ಹಳಿತಪ್ಪಿಸಬಹುದು. ಟ್ರಂಪ್ ತಮ್ಮ ದೇಶದ ಪ್ರಮುಖ ಸಿದ್ಧ ಉಡುಪು ವ್ಯಾಪಾರದ ಮೇಲೆ ತಮ್ಮ ದೃಷ್ಟಿ ನೆಟ್ಟಿದ್ದಾರೆ ಎಂದು ಬಾಂಗ್ಲಾದೇಶದ ಉದ್ಯಮಿಗಳ ವಾದ.
ಶೇಖ್ ಹಸೀನಾ ಸರ್ಕಾರ ಪತನವಾದ ನಂತರ ಮುಹಮ್ಮದ್ ಯೂನಸ್​ನನ್ನು ಮಧ್ಯಂತರ ಸರ್ಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.

ಮಧ್ಯಂತರ ಸರ್ಕಾರದ ಪ್ರಾಥಮಿಕ ಕಾರ್ಯವೆಂದರೆ ದೇಶದಲ್ಲಿ ಚುನಾವಣೆಗಳನ್ನು ನಡೆಸುವುದು. ಬಹಳ ವಿಳಂಬದ ನಂತರ, ಅವರು ಅಂತಿಮವಾಗಿ ಫೆಬ್ರವರಿ 12 ರಂದು ಚುನಾವಣೆ ನಡೆಸುವುದಾಗಿ ಘೋಷಿಸಿದರು. ಚುನಾವಣಾ ಸಮಯದಲ್ಲಿ ಒಪ್ಪಂದದಲ್ಲಿ ಅವರ ಆಸಕ್ತಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಫೆಬ್ರವರಿ 9ರಂದು ಅಮೆರಿಕ-ಬಾಂಗ್ಲಾದೇಶ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ. ಮೂರು ದಿನಗಳ ನಂತರ ಅಂದರೆ 12ರಂದು ಬಾಂಗ್ಲಾದೇಶದಲ್ಲಿ ಚುನಾವಣೆಗಳು ನಡೆಯಲಿವೆ.

ಬಾಂಗ್ಲಾದೇಶವು ಅಮೆರಿಕದೊಂದಿಗೆ ಮಾಡಿಕೊಂಡಿರುವ ರಹಸ್ಯ ಒಪ್ಪಂದದ ಅನುಮಾನ ಮೂಡಿದೆ. ಚುನಾವಣೆಗೆ ಕೆಲವೇ ದಿನಗಳ ಮೊದಲು ಯೂನಸ್ ಬಂದರನ್ನು ಗುತ್ತಿಗೆ ನೀಡಲು ಮತ್ತು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು ಬಾಂಗ್ಲಾದೇಶದ ಅರ್ಥಶಾಸ್ತ್ರಜ್ಞ ಅನು ಮೊಹಮ್ಮದ್ ಹೇಳುತ್ತಾರೆ. ಇದು ಅಮೆರಿಕದೊಂದಿಗೆ ರಹಸ್ಯ ಒಪ್ಪಂದದ ಬಗ್ಗೆ ಅನುಮಾನವನ್ನು ಹೆಚ್ಚಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಿದರೆ ಏನಾಗುತ್ತೆ ಗೊತ್ತಾ? – Kannada News | Daily Devotional: Know why Husband and wife should not eat from the same plate

ಬೆಂಗಳೂರು, ಫೆಬ್ರುವರಿ​ 06: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಿದರೆ ಏನಾಗುತ್ತೆ ಎಂಬುದನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಅವರು ಹೇಳುವಂತೆ ನಮ್ಮ ಸನಾತನ ಧರ್ಮದಲ್ಲಿ ಋಣಾನುಬಂಧವು ಜೀವನದ ಎಲ್ಲ ಸಂಬಂಧಗಳಿಗೆ ಆಧಾರವಾಗಿದೆ. ಆಹಾರವು ಕೇವಲ ಹಸಿವನ್ನು ನೀಗಿಸದೆ, ದೇಹ, ಮನಸ್ಸು, ಭಾವನೆಗಳು ಮತ್ತು ಆಲೋಚನೆಗಳ ಮೇಲೆ ಆಳವಾದ ಪ್ರಭಾವ ಬೀರುತ್ತದೆ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರವೂ ನಾವು ಸೇವಿಸುವ ಆಹಾರವು ನಮ್ಮ ಶಾಂತಿ ಮತ್ತು ನೆಮ್ಮದಿಯ ಮೇಲೆ ಪರಿಣಾಮ ಬೀರುತ್ತದೆ.

ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ ಮತ್ತು ಪ್ರಾಚೀನ ಕಾಲದಲ್ಲಿ ಆಹಾರ ಸೇವನೆಗೆ ಅನೇಕ ನಿಯಮಗಳಿದ್ದವು. ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡುವುದು ಅಷ್ಟು ಶುಭ ಅಥವಾ ಸಮಂಜಸವಲ್ಲ ಎಂದು ತಿಳಿಸಲಾಗಿದೆ. ಬದಲಿಗೆ, ಗಂಡ ಊಟ ಮಾಡಿದ ನಂತರ ಹೆಂಡತಿ ಅದೇ ತಟ್ಟೆಯಲ್ಲಿ ಊಟ ಮಾಡುವ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವುದು ಹೆಚ್ಚು ಸೂಕ್ತ. ಒಂದೇ ತಟ್ಟೆಯಲ್ಲಿ ಊಟ ಮಾಡುವುದರಿಂದ ದಂಪತಿಗಳಿಗೆ ಅಷ್ಟು ಶ್ರೇಯಸ್ಕರವಾಗುವುದಿಲ್ಲ ಮತ್ತು ಅನ್ನಪೂರ್ಣಾ ದೇವಿಗೂ ಸಮಾಧಾನವಾಗುವುದಿಲ್ಲ ಎಂಬ ನಂಬಿಕೆಯಿದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

Source link

Horoscope Today 06 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for February​ 6th 2025: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 06, 2026, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿ, ಹಸ್ತ ನಕ್ಷತ್ರ, ಧೃತಿ ಯೋಗ ಮತ್ತು ಕೌಲವ ಕರಣಗಳನ್ನೊಳಗೊಂಡಿದೆ.

ಇದು ಮಹಾಲಕ್ಷ್ಮಿಯ ಆರಾಧನೆಗೆ ಪ್ರಶಸ್ತ್ಯವಾದ ಶುಭ ದಿನವಾಗಿದ್ದು, ಸಂಕಲ್ಪಗಳನ್ನು ಈಡೇರಿಸಿಕೊಳ್ಳಲು, ಲಲಿತಾ ಸಹಸ್ರನಾಮ ಅಥವಾ ಮಹಾಲಕ್ಷ್ಮಿ ಅಷ್ಟಕ ಪಾರಾಯಣಕ್ಕೆ ಉತ್ತಮವಾಗಿದೆ. ಔದುಂಬರ ಪಂಚಮಿಯಾಗಿರುವುದರಿಂದ ಅತ್ತಿ ಮರದ ಪೂಜೆ ಅಥವಾ ದತ್ತಾತ್ರೇಯನ ಸ್ತೋತ್ರ ಪಠಿಸುವುದು ಶ್ರೇಯಸ್ಕರ. ಧನಿಷ್ಠ ಮಳೆ ಪ್ರಾರಂಭ, ಉಳ್ಳಾಲತಿ ಜಾತ್ರೆ, ಪಂಚಲಿಂಗೇಶ್ವರ ರಥೋತ್ಸವ ಮತ್ತು ಬಸರೀಕಟ್ಟೆಯಲ್ಲಿ ಜನಾರ್ಧನ ರಥೋತ್ಸವದಂತಹ ಪರ್ವ ದಿನವೂ ಆಗಿದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

Source link