ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ! – Kannada News
ಗುಡ್ಡ ಕುಸಿತ ತಡೆಗೋಡೆ ನಿರ್ಮಾಣ ಕಾಮಗಾರಿImage Credit source: tv9 ಕಾರವಾರ, ಜೂನ್ 10: ‘ಯುದ್ಧ ಕಾಲೇ ಶಸ್ತ್ರಾಭ್ಯಾಸ’ ಎಂಬ ಗಾದೆಯಂತೆ ಮುಂಗಾರು ಮಳೆ ಆರಂಭವಾದ ಬೆನ್ನಲ್ಲೇ ರಾಜ್ಯ ಸರ್ಕಾರ, ಗುಡ್ಡ ಕುಸಿತ ತಡೆಗೋಡೆ ನಿರ್ಮಾಣಕ್ಕಾಗಿ ಉತ್ತರ ಕನ್ನಡ (Uttara Kannada) ಜಿಲ್ಲೆಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ಜಿಲ್ಲೆಯಲ್ಲಿ ಈಗಾಗಲೇ ವರುಣಾರ್ಭಟ ತೀವ್ರಗೊಂಡಿರುವುದರಿಂದ ಹಣ ಕೈಯಲ್ಲಿದ್ದರೂ ಯಾವುದೇ ಪ್ರಮುಖ ಕಾಮಗಾರಿಗಳನ್ನು ನಡೆಸಲಾಗದ ಜಿಲ್ಲಾಡಳಿತ ಇಕ್ಕಟ್ಟಿಗೆ ಸಿಲುಕಿದೆ. ಮುಖ್ಯಾಂಶಗಳು ತಡೆಗೋಡೆ ನಿರ್ಮಾಣಕ್ಕೆ 100…