Headlines

Parliament Session: ಇಂದು ಪ್ರಧಾನಿ ಮೋದಿ ಭಾಷಣ ರದ್ದು; ವಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪ ನಾಳೆಗೆ ಮುಂದೂಡಿಕೆ – Kannada News | Parliament Budget Session No PM Modi Speech Today Lok Sabha adjourned till tomorrow

ನವದೆಹಲಿ, ಫೆಬ್ರವರಿ 4: ಲೋಕಸಭಾ ಅಧಿವೇಶನದಲ್ಲಿ (Parliament Budget Session) ಇಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಗಳು ಭಾಷಣ ಮಾಡಬೇಕಿತ್ತು. ಆದರೆ, ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಗದ್ದಲದಿಂದಾಗಿ ಇಂದಿನ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ, ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ (PM Modi Speech) ಭಾಷಣ ಕೂಡ ನಾಳೆಗೆ ಮುಂದೂಡಲ್ಪಟ್ಟಿದೆ. ಬಜೆಟ್ ಅಧಿವೇಶನದಲ್ಲಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ವಿರೋಧ ಪಕ್ಷದ ಸದಸ್ಯರು ಭಾರೀ ಘೋಷಣೆಗಳನ್ನು ಕೂಗಿದ ನಂತರ ಇಂದು ಲೋಕಸಭೆ…

Read More

ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್ – Kannada News | Scan Scam: In Bengaluru victoria hospital: Staff Swap QR Codes, Loot Money from patients

ಬೆಂಗಳೂರು, (ಫೆಬ್ರವರಿ 04): ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದ್ರೆ, ಕೆಲ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಕಂಡಕ್ಟರ್​​ಗಳನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (Bengaluru victoria hospital) ಸರದಿ. ಹೌದು…ಆಸ್ಪತ್ರೆಯ ಕೆಲ…

Read More

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಶಾಸಕ ಶಿವಲಿಂಗೇಗೌಡ – Kannada News | Congress MLA shivalingegowda Hits out at BJP Leaders In Assembly Session

ಬೆಂಗಳೂರು, (ಫೆಬ್ರವರಿ 04): ವಿಧಾನಸಭೆ ಕಲಾಪದಲ್ಲಿಂದು (Karnataka Assembly Session) ಅರಸಿಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ (Congress MLA shivalingegowda )ಹಾಗೂ ಬಿಜೆಪಿ ಶಾಸಕರ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಈ ವೇಳೆ ದೇವೇಗೌಡ್ರಿಗೆ ಚೂರಿ ಹಾಕಿದ ಶಿವಲಿಂಗೇಗೌಡ ಅವರಿಗೆ ಧಿಕ್ಕಾರ, ಕಾಯಿ ಕಳ್ಳ, ಕೊಬ್ಬರಿ ಕಳ್ಳ ಎಂದು ಬಿಜೆಪಿ ಸದಸ್ಯರು ಕೂಗಾಡಿದ್ದು, ಇದು ವೈಯಕ್ತಿಕ ಆರೋಪ ಪ್ರತ್ಯಾರೋಪಕ್ಕೆ ತಿರುಗಿದೆ. ಚಿಂಚೋಳಿಯಲ್ಲಿ ನಿನ್ನ ಹೆಂಡತಿಯನ್ನು ತಹಶೀಲ್ದಾರ್ ಬಿಟ್ಟುಕೊಂಡು ಎಷ್ಟು ದುಡ್ಡು ಹೊಡೆದಿದ್ದೀಯಾ ಎಂದು ಗೊತ್ತಿದೆ. ನಿಮಗೆ ಮಾನ,…

Read More

ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ – Kannada News | Tumakuru copra Price Soars Record High: Farmers not getting any profit

ತುಮಕೂರು, ಫೆಬ್ರವರಿ 04: ಕಲ್ಪತರು ನಾಡು ಎಂದೇ ಹೆಸರಾದ ತುಮಕೂರಿನ (Tumakuru) ಕೊಬ್ಬರಿಗೆ (Coconut) ಇದೀಗ ಎಲ್ಲಿಲ್ಲದ ಬೆಂಬಲ ಬೆಲೆ ಸಿಕ್ಕಿದೆ. ಹಿಂದೆಂದು ಕಂಡರಿಯದ ದಾಖಲೆ ಮೊತ್ತ ದತ್ತ ಕೊಬ್ಬರಿ ಸಮೀಪಿಸಿದೆ. ಹೀಗಿದ್ದರೂ ರೈತರ ಮೊಗದಲ್ಲಿ ಮಂದಹಾಸ ಬದಲಿಗೆ ಬೇಸರ ಮನೆಮಾಡಿದೆ. ತೆಂಗು ಬೆಳೆಗೆ ತಲೆದೂರಿದ ನಾನಾ ಕಾಯಿಲೆಗಳು ಇಳುವರಿ ಕಡಿಮೆ ಮಾಡಿದೆ. ಇದರಿಂದ ಆದಾಯಕ್ಕೆ ತಕ್ಕ ಪ್ರತಿಫಲ‌‌ ಸಿಕ್ಕರೆ ಹೆಚ್ಚು ಎಂಬುವಂತಾಗಿದೆ ರೈತರ ಬದುಕು. ರೈತರ ಕನಸಿಗೆ ತಣ್ಣೀರೆರಚಿದ ರೋಗ ಬಾಧೆ  ಕಲ್ಪತರು ನಾಡಿನ ಹೆಮ್ಮೆಯ…

Read More

VSKUB Recruitment 2026: ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ 139 ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ – Kannada News | VSKUB Professor Recruitment 2026: 139 Vacancies in Ballari; Apply by Feb 13!

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB), ಅಧಿಕೃತ ಅಧಿಸೂಚನೆ ಮೂಲಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು ಲಭ್ಯವಿದ್ದು, ಉದ್ಯೋಗ ಸ್ಥಳ ಬಳ್ಳಾರಿ ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ತಿಂಗಳಿಗೆ 57,700 ರಿಂದ 2,18,200…

Read More

ಪವನ್ ಕಲ್ಯಾಣ್ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Pawan Kalyan’s Ustaad Bhagat Singh movie to release on March 26

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಟಾಲಿವುಡ್​ನ ಸ್ಟಾರ್ ನಟರೂ ಸಹ ಹೌದು. ಪವನ್ ಕಲ್ಯಾಣ್ ಸಕ್ರಿಯ ರಾಜಕೀಯಕ್ಕೆ ಇಳಿದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎನ್ನಲಾಗಿತ್ತು. ಆದರೆ ಪವನ್ ಅವರು ಆಂಧ್ರ ಡಿಸಿಎಂ ಆದ ಬಳಿಕ ಅವರ ನಟನೆಯ ಎರಡು ಸಿನಿಮಾಗಳು ಬಿಡುಗಡೆ ಆಗಿವೆ. ಇದೀಗ ಮತ್ತೊಂದು ಸಿನಿಮಾ ಬಿಡುಗಡೆ ಆಗಲಿದ್ದು, ಇಂದಷ್ಟೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. ಪವನ್ ಕಲ್ಯಾಣ್ ಡಿಸಿಎಂ ಆದ ಬಳಿಕ ಅವರ ನಟನೆಯ…

Read More

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ? – Kannada News | T20 World Cup History: Players With Most Ducks Unwanted Batting Records

ತಮ್ಮ ವೃತ್ತಿಜೀವನದಲ್ಲಿ ನೆದರ್ಲ್ಯಾಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ಸೇರಿದಂತೆ ಎರಡು ರಾಷ್ಟ್ರೀಯ ತಂಡಗಳ ಪರ ಕ್ರಿಕೆಟ್ ಆಡಿದ್ದ ಆರ್.ಇ. ವ್ಯಾನ್ ಡೆರ್ ಮೆರ್ವೆ ಕೂಡ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಎರಡೂ ದೇಶಗಳನ್ನು ಪ್ರತಿನಿಧಿಸಿದ್ದ ವ್ಯಾನ್ ಡೆರ್ ಮೆರ್ವೆ, 2009 ರಿಂದ 2022 ರವರೆಗೆ ನಡೆದ ಟಿ20 ವಿಶ್ವಕಪ್‌ಗಳಲ್ಲಿ 21 ಪಂದ್ಯಗಳನ್ನು ಆಡಿದ್ದು, 4 ಬಾರಿ ಡಕ್ ಔಟ್ ಆಗುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. Source link

Read More

ಎಸ್​ಐಆರ್ ಒತ್ತಡದಿಂದ ಬಂಗಾಳದಲ್ಲಿ 150 ಜನ ಸಾವು; ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿ ವಾದ – Kannada News | 150 people dead in West Bengal due to SIR pressure CM Mamata Banerjee Tells in Supreme Court

ನವದೆಹಲಿ, ಫೆಬ್ರವರಿ 4: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಇಂದು ಸುಪ್ರೀಂ ಕೋರ್ಟ್​ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಾದ ಮಂಡಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ರಾಜ್ಯವನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಎಸ್​ಐಆರ್ ನೆಪದಲ್ಲಿ ಒತ್ತಡ ಹೇರಲಾಗುತ್ತಿದೆ ದೀದಿ ಹೇಳಿದ್ದಾರೆ. ಹೀಗೆ ಹಾಲಿ ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ವಾದ ಮಂಡನೆ ಮಾಡಿದ ಅಪರೂಪದ ಘಟನೆ ಇಂದು ನಡೆಯಿತು. ಎಸ್​ಐಆರ್ ಪ್ರಕ್ರಿಯೆಯ ಒತ್ತಡದಿಂದಾಗಿ…

Read More

ಮಧ್ಯ, ಉತ್ತರ ಕರ್ನಾಟಕ ಜಿಲ್ಲೆಯ ಜನತೆಗೆ ಮತ್ತೊಂದು ಗುಡ್​​​ನ್ಯೂಸ್ ಕೊಟ್ಟ ಕೇಂದ್ರ – Kannada News | Ashwini Vaishnaw positive response To pralhad joshi Request about Bengaluru pune high speed rail corridor

ನವದೆಹಲಿ, (ಫೆಬ್ರವರಿ 04): ಕರ್ನಾಟಕಕ್ಕೆ (Karnataka) ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ (high speed rail corridor) ಕೊಡುಗೆಯ ಶುಭ ಸೂಚನೆ ಸಿಕ್ಕಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ “ಬೆಂಗಳೂರು ಮತ್ತು ಪುಣೆ” ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಒಂದು ವೇಳೆ…

Read More

ಅಕ್ರಮ ವಲಸಿಗರನ್ನ ತೋರಿಸಿದ್ರೂ ಕೇಸ್ ಹಾಕ್ತೀರಿ: ಪೊಲೀಸರಿಗೆ ಕೋರ್ಟ್ ಕ್ಲಾಸ್, ಪುನೀತ್ ಕೆರೆಹಳ್ಳಿಗೆ ರಿಲೀಫ್ – Kannada News | High Court Questions government on Illegal Immigrants, Stays Case Against Puneeth Kerehalli

ಬೆಂಗಳೂರು, ಫೆಬ್ರವರಿ 04: ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಎರಡೆರಡು ಕೇಸ್​ಗಳು ದಾಖಲಾಗಿದ್ದವು. ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಪುನೀತ್ ಕೆರೆಹಳ್ಳಿ ವಿರುದ್ಧದ ಒಂದು ಪ್ರಕರಣಕ್ಕೆ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಆ ಮೂಲಕ ಹಿಂದೂ ಕಾರ್ಯಕರ್ತನಿಗೆ ಕೊಂಚ್​​ ರಿಲೀಫ್ ಸಿಕ್ಕಂತಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಮಾಡಿದ್ದು, ಎಲ್ಲೆಡೆ ಅಕ್ರಮ ವಲಸಿಗರು ಬಂದು ಸೇರಿದ್ದಾರೆ. ಅಕ್ರಮ ವಲಸಿಗರಿದ್ದಾರೆಂದು…

Read More