Category Archives: Blog

Your blog category

ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO – Kannada News | Davangere ZP CEO’s Morning Village Visits: Gitte Madhav Rao Solves Public Problems

ದಾವಣಗೆರೆ, ಡಿಸೆಂಬರ್​ 28: ಸರ್ಕಾರಿ ಅಧಿಕಾರಿಗಳು (Government officer) ಅಂದರೆ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹೋಗಿ, ಸಂಜೆ 5 ಗಂಟೆಗೆ ಮನೆಗೆ ಹೋಗುತ್ತಾರೆ ಎನ್ನುವ ಮಾತು ಎಲ್ಲೆಡೆ ಕೇಳಿಬರತ್ತೆ. ಆದರೆ ಇಲ್ಲೊಬ್ಬರು ಅಧಿಕಾರಿ ಬೆಳ್ಳಂಬೆಳಗ್ಗೆ ಎದ್ದು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ ಗ್ರಾಮದ ವೀಕ್ಷಣೆ ಬಳಿಕ ಬೆಳಗ್ಗೆ 10 ಗಂಟೆಗೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸುತ್ತಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್, ಅಭಿವೃದ್ಧಿಗೆ ಹೊಸ ಭಾಷೆ ಬರೆಯಲು ಮುಂದಾಗಿದ್ಧಾರೆ. ಅಧಿಕಾರಿಗಳ ಬೆಳಗಿನ ನಡೆ, ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳ್ಳಂಬೆಳಗ್ಗೆ ಗ್ರಾಮಗಳಿಗೆ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ.

ಇದನ್ನೂ ಓದಿ: ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ

ದಿನಕ್ಕೆ ಎರಡರಿಂದ ಮೂರು ಪಂಚಾಯಿತಿಗಳಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರ ಜೊತೆ ಔಪಚಾರಿಕ ಸಭೆ ನಡೆಸಿ ಪಂಚಾಯಿತಿಯ ಕುಂದು, ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಗ್ರಂಥಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ.

ಇನ್ನು ಸ್ವಚ್ಛತಾ ಕಾರ್ಯ ಹೇಗೆ ನಡೆಯುತ್ತಿದೆ, ಪ್ರತಿನಿತ್ಯ ತ್ಯಾಜ್ಯ ವಿಲೇವಾರಿ ವಾಹನ ಬರುತ್ತಿದೆಯಾ, ಗ್ರಾಮದಲ್ಲಿ ಏನೇನು ಸಮಸ್ಯೆ ಇದೆ ಅಂತ ಗ್ರಾಮಸ್ಥರ ಬಳಿ ಮಾಹಿತಿ ಪಡೆದುಕೊಂಡು ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕಾರ್ಯ ಕೂಡ ಮಾಡುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠಲ್ ರಾವ್ ಈಗಾಗಲೇ ಮಾಯಕೊಂಡ, ಅಣಜಿ, ನರಗನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದು, ನಿತ್ಯ ಬೆಳಗ್ಗೆ 6 ಗಂಟೆಯಿಂದ‌ ಅವರ ದಿನಚರಿ ಶುರುವಾಗುತ್ತದೆ. ಗ್ರಾಮ ಪಂಚಾಯತಿಗಳನ್ನು ಭೇಟಿ ಮಾಡೋದು, ಸರ್ಕಾರಿ ವಸತಿ ಶಾಲೆ ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಅವರ ಜೊತೆಯೇ ಊಟ, ಉಪಹಾರ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ

ಯಾವ ದಿನ, ಯಾವ ಗ್ರಾಮಕ್ಕೆ ಹೋಗುತ್ತಾರೆ ಎನ್ನುವುದು ಮೊದಲೇ ನಿಗದಿಯಾಗಿರುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಸಿಇಒ ಅವರಿಗೆ ಹೋಗಬೇಕೆನಿಸಿದ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಜಿಲ್ಲಾ ಕೇಂದ್ರದಿಂದ ನೂರಾರು ದೂರದಲ್ಲಿರುವ ಗ್ರಾಮಕ್ಕೂ ಕೂಡ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಬಗೆಹರಿಸಲಿದ್ದಾರೆ. ಅಲ್ಲದೆ ಜನರು ಅಧಿಕಾರಿಗಳನ್ನು ಹುಡುಕಿ ಕಚೇರಿ ಅಲೆಯುವುದಲ್ಲ ಅಧಿಕಾರಿಗಳೇ ಜನರ ಬಳಿ ಹೋಗಬೇಕು ಎನ್ನುವ ಉದ್ದೇಶ ಇವರದ್ದಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ನಡೆ ಬಗ್ಗೆ ಜನರು ಸಾಕಷ್ಟು ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಮಟ್ಟದ ಓರ್ವ ಅಧಿಕಾರಿ ಹೀಗೆ ಗ್ರಾಮಗಳಿಗೆ ಭೇಟಿ ನೀಡಿದಾಗ ಸ್ಥಳೀಯ ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡುತ್ತಾರೆ. ಅಲ್ಲದೆ ಸಾಮಾನ್ಯ ಜನರಿಗೂ ಜಿಲ್ಲಾ ಮಟ್ಟದ ಅಧಿಕಾರಿ ಅಂದರೆ ಯಾರು, ಅವರ ಕಾರ್ಯ ಏನು ಅನ್ನೋದು ಗೊತ್ತಾಗುತ್ತದೆ. ಅಧಿಕಾರಿಗಳಿಗೂ ಗ್ರೌಂಡ್ ಲೆವೆಲ್ ಮಾಹಿತಿ ಲಭ್ಯ ಆಗುತ್ತದೆ. ಗಿತ್ತೆ ಮಾಧವ್ ವಿಠಲ್ ರಾವ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಇವರ ಕಾರ್ಯ ಇತರೆ ಅಧಿಕಾರಿಗಳಿಗೂ ಮಾದರಿ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 28: ಹಲವರಿಂದ ಹಣ ಪಡೆದು ಓರ್ವ ಅಲ್ಲಿ ಶೆಡ್​ ಹಾಕಿದ್ದಾನೆ. ಹೀಗಾಗಿ ತೀರ್ಮಾನ ತೆಗೆದುಕೊಂಡು ನೋಟಿಸ್ ಕೊಟ್ಟಿದ್ದೇವೆ. ಅವರು ಸ್ಥಳೀಯರೇ ಆಗಿದ್ದರೆ ಪರಿಹಾರದ ಬಗ್ಗೆ ಚರ್ಚೆ ನಡೀತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ, ಆದ್ರೆ ವೇಣುಗೋಪಾಲ್ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?

2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ  ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ:

  • ಜನವರಿ 1, 2026 – ಹೊಸ ವರ್ಷ
  • ಜನವರಿ 1, 2026 – ಜಾಗತಿಕ ಕುಟುಂಬ ದಿನ
  • ಜನವರಿ 2, 2026 – ವಿಶ್ವ ಅಂತರ್ಮುಖಿ ದಿನ
  • ಜನವರಿ 4, 2026 – ವಿಶ್ವ ಬ್ರೈಲ್ ದಿನ
  • ಜನವರಿ 5, 2026 – ರಾಷ್ಟ್ರೀಯ ಪಕ್ಷಿ ದಿನ
  • ಜನವರಿ 6, 2026 – ವಿಶ್ವ ಯುದ್ಧ ಅನಾಥರ ದಿನ
  • ಜನವರಿ 6, 2026 – ಗುರು ಗೋಬಿಂದ್ ಸಿಂಗ್ ಜಯಂತಿ
  • ಜನವರಿ 8, 2026 – ಭೂಮಿಯ ತಿರುಗುವಿಕೆ ದಿನ
  • ಜನವರಿ 10, 2026 – ವಿಶ್ವ ಹಿಂದಿ ದಿನ
  • ಜನವರಿ 10, 2026 – ವಿಶ್ವ ತರ್ಕ ದಿನ
  • ಜನವರಿ 11, 2026 – ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನ
  • ಜನವರಿ 12, 2026 – ರಾಷ್ಟ್ರೀಯ ಯುವ ದಿನ
  • ಜನವರಿ 15, 2026 – ಭಾರತೀಯ ಸೇನಾ ದಿನ
  • ಜನವರಿ 16, 2026 – ರಾಷ್ಟ್ರೀಯ ನವೋದ್ಯಮ ದಿನ
  • ಜನವರಿ 17, 2026 – ವಿಶ್ವ ಧರ್ಮ ದಿನ
  • ಜನವರಿ 20, 2026 – ಪೆಂಗ್ವಿನ್ ಜಾಗೃತಿ ದಿನ
  • ಜನವರಿ 23, 2026 – ಪರಾಕ್ರಮ ದಿವಸ
  • ಜನವರಿ 23, 2026 – ಕೈಬರಹ ದಿನ
  • ಜನವರಿ 24, 2026 – ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
  • ಜನವರಿ 24, 2026 – ಅಂತರರಾಷ್ಟ್ರೀಯ ಶಿಕ್ಷಣ ದಿನ
  • ಜನವರಿ 25, 2026 – ರಾಷ್ಟ್ರೀಯ ಮತದಾರರ ದಿನ
  • ಜನವರಿ 25, 2026 – ರಾಷ್ಟ್ರೀಯ ಪ್ರವಾಸೋದ್ಯಮ ದಿನ
  • ಜನವರಿ 26, 2026 – ಗಣರಾಜ್ಯೋತ್ಸವ
  • ಜನವರಿ 26, 2026 – ಅಂತರರಾಷ್ಟ್ರೀಯ ಕಸ್ಟಮ್ಸ್ ದಿನ
  • ಜನವರಿ 27, 2026 – ರಾಷ್ಟ್ರೀಯ ಭೌಗೋಳಿಕ ದಿನ
  • ಜನವರಿ 29, 2026 – ಭಾರತೀಯ ಪತ್ರಿಕಾ ದಿನ
  • ಜನವರಿ 30, 2026 – ವಿಶ್ವ ಕುಷ್ಠರೋಗ ದಿನ
  • ಜನವರಿ 30, 2026 – ಅಂತಾರಾಷ್ಟ್ರೀಯ ಜೀಬ್ರಾ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:23 pm, Sun, 28 December 25

Source link

ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಭಾಗಿ – Kannada News | PM Modi Blesses Neeraj Chopra Himani Mor: Viral Wedding Reception Videos

2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ ಮೋದಿ ದಂಪತಿಗಳಿಗೆ ಉಡುಗೊರೆಗಳನ್ನು ನೀಡುತ್ತಿರುವುದು ಮತ್ತು ಅವರೊಂದಿಗೆ ಫೋಟೋಶೂಟ್‌ಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದಾಗಿದೆ. ಆ ಬಳಿಕ ದಂಪತಿಗಳನ್ನು ಆಶೀರ್ವದಿಸಿರುವ ಮೋದಿ ಅವರೊಂದಿಗೆ ಕೆಲ ಸಮಯ ಮಾತನಾಡಿ ಅಲ್ಲಿಂದ ತೆರಳಿದ್ದಾರೆ.

Source link

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ – Kannada News | IGP boralingaiah talks about Hunsur Sky Gold And Diamonds Jewelry Shop Robbery

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಐಜಿಪಿ ಬೋರಲಿಂಗಯ್ಯ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ ಆರೋಗ್ಯ ಎಚ್ಚರಿಕೆಯನ್ನು ಹಂಚಿಕೊಂಡಿದ್ದಾರೆ.

ಭಾರತದ ಯುವ ಜನರು ದೇಶದ ಅತಿದೊಡ್ಡ ಭರವಸೆಯ ಮೂಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನವರಿ 12ರಂದು ರಾಷ್ಟ್ರೀಯ ಯುವ ದಿನ ಹಾಗೂ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ವಿಕಸಿತ ಭಾರತ ಯುವ ನಾಯಕರ ಸಂವಾದದ ಎರಡನೇ ಆವೃತ್ತಿ ನಡೆಯಲಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ

ಈ ವೇಳೆ ಆರೋಗ್ಯದ ಬಗ್ಗೆ ಗಮನಹರಿಸಿದ ಪ್ರಧಾನಿ ಮೋದಿ, “ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳು (ಯುಟಿಐ) ನಂತಹ ರೋಗಗಳ ವಿರುದ್ಧ ಪ್ರತಿಜೀವಕಗಳು (ಆ್ಯಂಟಿಬಯೋಟಿಕ್) ಕಡಿಮೆ ಪರಿಣಾಮಕಾರಿಯಾಗುತ್ತಿವೆ ಎಂದು ಎಚ್ಚರಿಸುವ ಇತ್ತೀಚಿನ ಐಸಿಎಂಆರ್ ವರದಿಯನ್ನು ಪ್ರಧಾನಿ ಬಹಿರಂಗಪಡಿಸಿದ್ದಾರೆ. ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್​ಗಳನ್ನು ಬಳಸದಂತೆ ಅವರು ಜನರ ಬಳಿ ಮನವಿ ಮಾಡಿದ್ದಾರೆ. ಇವುಗಳ ಅತಿಯಾದ ಬಳಕೆ ಅಥವಾ ಯಾವುದೇ ವೈದ್ಯಕೀಯ ಸಲಹೆಯಿಲ್ಲದ ಬಳಕೆಯು ಅವುಗಳ ಪರಿಣಾಮಕಾರಿತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದ್ದಾರೆ. ಆ್ಯಂಟಿಬಯೋಟಿಕ್ ಔಷಧಿಯನ್ನು ತೆಗೆದುಕೊಳ್ಳುವ ಮುನ್ನ ವೈದ್ಯರ ಸಲಹೆ ಪಡೆಯಲೇಬೇಕು” ಎಂದು ಅವರು ಎಚ್ಚರಿಸಿದ್ದಾರೆ.

ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳು (ಯುಟಿಐ) ನಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ ಆ್ಯಂಟಿಬಯೋಟಿಕ್​​ಗಳು ಹೆಚ್ಚು ನಿಷ್ಪರಿಣಾಮಕಾರಿಯಾಗುತ್ತಿವೆ ಎಂದು ಐಸಿಎಂಆರ್ ವರದಿಯು ಕಂಡುಹಿಡಿದಿದೆ. ಇದು ತುಂಬಾ ಆತಂಕಕಾರಿ ಸಂಗತಿ. ವೈದ್ಯಕೀಯ ಸಲಹೆಯಿಲ್ಲದೆ ಜನರು ಆ್ಯಂಟಿಬಯೋಟಿಕ್​ಗಳನ್ನು ಸೇವಿಸುವ ಅಭ್ಯಾಸವು ಬೆಳೆಯುತ್ತಿರುವುದು ಆತಂಕಕಾರಿ ಸಂಗತಿ. ಪ್ರತಿಜೀವಕಗಳು ಹಾಗೆ ಯಾರು ಬೇಕಾದರೂ ಹೇಗೆ ಬೇಕಾದರೂ ತೆಗೆದುಕೊಳ್ಳಬಹುದಾದ ಔಷಧಿಗಳಲ್ಲ. ಅವುಗಳನ್ನು ವೈದ್ಯರ ಸಲಹೆಯ ನಂತರ ಮಾತ್ರ ಬಳಸಬೇಕು” ಎಂದು ಮೋದಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Mann Ki Baat: ಬೆಂಗಳೂರಿನ ಐಐಎಸ್​ಸಿಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ

“ಇದು 2025ರ ಮನ್ ಕಿ ಬಾತ್​​ನ ಕೊನೆಯ ಕಂತು. 2026ರಲ್ಲಿ ನಾವು ಮತ್ತೆ ಭೇಟಿಯಾಗುತ್ತೇವೆ. ಹೊಸ ಕಂತುಗಳು, ಹೊಸ ಸಮಸ್ಯೆಗಳೊಂದಿಗೆ ನಾವು ಅದೇ ಉತ್ಸಾಹ, ಶಕ್ತಿ ಮತ್ತು ಒಗ್ಗಟ್ಟಿನ ಭಾವನೆಯೊಂದಿಗೆ ಹಿಂತಿರುಗುತ್ತೇವೆ” ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್​​ನ ಕೊನೆಯಲ್ಲಿ ಹೇಳಿದ್ದಾರೆ. ಚಳಿಗಾಲದಲ್ಲಿ ಜನರು ಹೆಚ್ಚು ಆರೋಗ್ಯದ ಬಗ್ಗೆ ಗಮನ ಹರಿಸಲು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:59 pm, Sun, 28 December 25

Source link

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ ಮಾಡಿದರು ಎಂದು ತಿಳಿಸಿದ್ದಾರೆ. ಇನ್ನು ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ಹೇಳಿದ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ

Source link

KHPT Recruitment 2025: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗೆ ನೇಮಕಾತಿ – Kannada News | KHPT Recruitment 2025: Nurse and Counselor Jobs in Karnataka; Apply Online Now!

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬಳ್ಳಾರಿ, ವಿಜಯನಗರ, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 02 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

ಕೆಎಚ್‌ಪಿಟಿ ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ( KHPT)
  • ಹುದ್ದೆಗಳ ಸಂಖ್ಯೆ: 2
  • ಉದ್ಯೋಗ ಸ್ಥಳ: ಬಳ್ಳಾರಿ, ವಿಜಯನಗರ, ಬೆಂಗಳೂರು
  • ಹುದ್ದೆಯ ಹೆಸರು: ನರ್ಸ್ ಮತ್ತು ಕೌನ್ಸಿಲರ್

ಶೈಕ್ಷಣಿಕ ಅರ್ಹತೆ:

KHPT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ GNM, B.Sc , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ KHPT ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • KHPT ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • KHPT ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
    ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಸೀಸ್ ಲೆಜೆಂಡರಿ ವೇಗಿ ಬ್ರೆಟ್​ ಲೀಗೆ ಹಾಲ್​ ಆಫ್ ​ಫೇಮ್ ಗೌರವ

Source link

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses

ಬೆಂಗಳೂರು, ಡಿಸೆಂಬರ್​ 28: ನಗರದ ಕೋಗಿಲು (kogilu) ಲೇಔಟ್​​ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed)​​ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

180 ಮನೆ ನೀಡಲು ಒಪ್ಪಿಗೆ

ಬೈಯಪ್ಪನಹಳ್ಳಿ ಬಳಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ 1200 ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ಆ ಮನೆಗಳಲ್ಲಿ ಇಲ್ಲಿರುವ ನಿವಾಸಿಗಳಿಗೆ ಮನೆಗಳನ್ನು ನೀಡಲು ಸರ್ಕಾರ ತಿರ್ಮಾನಿಸಿದೆ. ಹೋರಾಟಗಾರರು 250 ಮನೆಗಳನ್ನು ಕೇಳಿದ್ದರು. ಆದರೆ ವಸತಿ ಇಲಾಖೆಯಿಂದ 180 ಮನೆ ನೀಡಲು ಒಪ್ಪಿಗೆ ನೀಡಲಾಗಿದ್ದು, ರಿಜಿಸ್ಟರ್ ಮಾಡಿಕೊಡುವುದಾಗಿಯೂ ಭರವಸೆ ನೀಡಲಾಗಿದೆ.

ಕೇರಳ ಸಿಎಂ ಪಿಣರಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​ ತಿರುಗೇಟು

ಸದ್ಯ ಕೋಗಿಲು ಲೇಔಟ್ ತೆರವು ಪ್ರಕರಣ ಕರ್ನಾಟಕ ಮತ್ತು ಕೇರಳ ಸರ್ಕಾರದ ಮಧ್ಯೆ ವಾಗ್ಯುದ್ಧಕ್ಕೆ ಕಾರಣವಾಗಿದೆ. ಕೇರಳ ಸಿಎಂ ಪಿಣರಾಯಿ ಕರ್ನಾಟಕ ಸರ್ಕಾರವನ್ನು ಬುಲ್ಡೋಜರ್ ಸರ್ಕಾರ ಎಂದಿದ್ದರು. ಕೇರಳ ಸಿಎಂ ಪಿಣರಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. ಈ ವಿಷಯದಲ್ಲಿ ಮೂಗು ತೂರಿಸಬೇಡಿ. ಈ ಮಧ್ಯೆ ಕರ್ನಾಟಕ ಸರ್ಕಾರಕ್ಕೆ ವೇಣುಗೋಪಾಲ್ ಸಲಹೆ ನೀಡಿದ್ದರು. ವೇಣುಗೋಪಾಲ್ ಸಲಹೆ ನೀಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ.

ಸರ್ಕಾರದ ವಿರುದ್ಧ ಸಿ.ಟಿ.ರವಿ ಕಿಡಿ

ಇನ್ನು ಈ ವಿಚಾರವಾಗಿ ಬಿಜೆಪಿ MLC ಸಿ.ಟಿ.ರವಿ ಮಾತನಾಡಿದ್ದು, ಕೇರಳ ಸಂಸದ ಇಲ್ಲಿ ಬಂದು ನಮಗೆ ಪಾಠ ಹೇಳುವ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಕನ್ನಡಿಗರ, ಕನ್ನಡದ ಹಿತಾಸಕ್ತಿ ಒತ್ತೆ ಇಡಬೇಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಕೋಗಿಲು ಲೇಔಟ್​ನಲ್ಲಿ ಅಕ್ರಮ ಮನೆಗಳ ತೆರವಾಗಿದೆ. ಈಗ ಯಾಕೆ ನೀವು ಆ ಅಕ್ರಮವನ್ನು ಸಮರ್ಥಿಸುತ್ತಿದ್ದೀರಿ? ಅಕ್ರಮ‌ ಅಂದ್ಮೇಲೆ ಅದನ್ನ ಸಮರ್ಥನೆ ಮಾಡುವ ಅಗತ್ಯವಿಲ್ಲ. ಅಕ್ರಮ ಯಾರು ಮಾಡಿದರೂ ಅಕ್ರಮವೇ. ಸಿಎಂ ಹಾಗೂ ಡಿಸಿಎಂ ಕನ್ನಡ, ಕರ್ನಾಟಕವನ್ನು ಕಡೆಗಣಿಸಿ, ರಾಜಕಾರಣ ಮಾಡಿದರೆ ಕರ್ನಾಟಕದ ಜನರು ಕ್ಷಮಿಸಲ್ಲ. ನಿಮ್ಮ ರಾಜಕೀಯಕ್ಕೆ ರಾಜ್ಯದ ಸ್ವಾಭಿಮಾನ ಒತ್ತೆ ಇಡಬೇಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:14 pm, Sun, 28 December 25

Source link