Category Archives: Blog

Your blog category

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು! – Kannada News | Bengaluru Tragedy: Teen Dies After Company Serves Alcohol to Minors; JJ Act Filed

15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ!

ಬೆಂಗಳೂರು, ಫೆಬ್ರುವರಿ 03: ನಗರದ ಸಂಸ್ಥೆಯೊಂದು ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿದ್ದು, ಅಪ್ರಾಪ್ತನೊಬ್ಬ (Minor) ತನ್ನ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ಉರುಳಿ ಬಿದ್ದು ಸಾವನ್ನಪ್ಪಿರುವ​ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ (RR Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಉಲ್ಲೇಖಿಸಿದಂತೆ ಕಳೆದ ತಿಂಗಳು ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.

ಜೆಜೆ ಆ್ಯಕ್ಟ್ ಅಡಿ ಪ್ರಕರಣ ದಾಖಲು

ಜನವರಿ 31ರ ರಾತ್ರಿ ಸುಮಾರು 9 ಗಂಟೆ 40 ನಿಮಿಷಕ್ಕೆ ಈ ಘಟನೆ ನಡೆದಿದ್ದು, ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿಯಾಗಿರುವ ಮೃತನ ಪಾಲಕರು ಅದೇ ದಿನ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ಹಲವು ಆಯಾಮಗಳನ್ನಿಟ್ಟುಕೊಂಡು ತನಿಖೆ ನಡೆಸಿದ್ದಾರೆ. ಈ ವೇಳೆ ಸತ್ಯಾಂಶ ಹೊರಬಂದಿದ್ದು, 15 ವರ್ಷದ ಬಾಲಕನಿಗೆ ಸಂಸ್ಥೆಯೊಂದು ಸಿರಗೇಟ್ ಮತ್ತು ಮದ್ಯಪಾನ ಮಾಡಿಸಿದೆ ಎಂದು ತಿಳಿದುಬಂದಿದೆ.

ಮೃತ ಬಾಲಕ ಮತ್ತು ಸ್ನೇಹಿತರು ಸ್ಥಳೀಯ ಕಂಪನಿಯಲ್ಲಿದ್ದಾಗ ಈ ಕೃತ್ಯ ನಡೆದಿದ್ದು, ಸಂಸ್ಥೆಯು ಅಪ್ರಾಪ್ತರಿಗೆ ಮದ್ಯ ಕುಡಿಸಿರುವ ಆರೋಪದ ಮೇಲೆ, ಕಂಪನಿಯ ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ (JJ Act) ಮತ್ತು ಕರ್ನಾಟಕ ಮದ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ANI ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಪೋಸ್ಟ್ ಇಲ್ಲಿದೆ.

ಸಾರ್ವಜನಿಕರಿಗೆ ಖಾಕಿ ವಾರ್ನಿಂಗ್

ಪೊಲೀಸರು ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸುತ್ತಿದ್ದು, ಸಂಸ್ಥೆಯ ಮೇಲಿನ ಕ್ರಮ ಕೈಗೊಳ್ಳುವುದರ ಜೊತೆಗೆ ಕೃತ್ಯವೆಸಗಿದವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:26 am, Tue, 3 February 26

Source link

ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್ – Kannada News | Sri Lanka vs England, 2nd T20I Highlights

ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಪಲ್ಲೆಕೆಲ್ಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿದ್ದರು.

190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ 16.4 ಓವರ್​ಗಳಲ್ಲಿ 173 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಮೂರು ಪಂದ್ಯದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಇಂಗ್ಲೆಂಡ್ ತಂಡವು ಶ್ರೀಲಂಕಾ ವಿರುದ್ಧದ ಸತತ 10 ಟಿ20 ಪಂದ್ಯಗಳನ್ನು ಗೆದ್ದ ಸಾಧನೆಯನ್ನು ಸಹ ಮಾಡಿದೆ.

 

Source link

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ (Rishab Shetty Remuneration) ಬಗ್ಗೆ ಈಗೊಂದು ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.

‘ಜೈ ಹನುಮಾನ್’, ‘ಛತ್ರಪತಿ ಶಿವಾಜಿ ಮಹಾರಾಜ್’ ಮುಂತಾದ ಸಿನಿಮಾಗಳಲ್ಲಿ ರಿಷಬ್ ಶೆಟ್ಟಿ ಅವರು ನಟಿಸುತ್ತಿದ್ದಾರೆ. ಇವೆಲ್ಲವೂ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿವೆ. ಈಗ ರಿಷಬ್ ಶೆಟ್ಟಿ ಅವರ ಮಾರುಕಟ್ಟೆ ಹಿರಿದಾಗಿದೆ. ಅದಕ್ಕೆ ತಕ್ಕಂತೆ ಅವರು ಸಂಭಾವನೆ ಕೇಳುತ್ತಿದ್ದಾರೆ. ವರದಿಗಳ ಪ್ರಕಾರ, ರಿಷಬ್ ಶೆಟ್ಟಿ ಬರೋಬ್ಬರಿ 80 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದಾರೆ.

ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ ಅವರ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ನಿರ್ದೇಶಕನಾಗಿ ‘ಕಿರಿಕ್ ಪಾರ್ಟಿ’, ‘ಕಾಂತಾರ’, ‘ಕಾಂತಾರ: ಚಾಪ್ಟರ್ 1’, ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮುಂತಾದ ಸಿನಿಮಾಗಳಲ್ಲಿ ಅವರು ಯಶಸ್ಸು ಕಂಡಿದ್ದಾರೆ. ನಟನಾಗಿಯೂ ಅವರು ಜನರ ಮನ ಗೆದ್ದಿದ್ದಾರೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆ ಏರಿಕೆ ಆಗುತ್ತಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ: ಚಾಪ್ಟರ್ 2’ ಸಿನಿಮಾಗೆ ಬಾಕ್ಸ್ ಆಫೀಸ್​​ನಲ್ಲಿ 850 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಆಗಿದೆ. ಅವರನ್ನು ನಂಬಿಕೊಂಡು ಹಣ ಹೂಡುವ ನಿರ್ಮಾಪಕರಿಗೆ ನಷ್ಟ ಆಗುವುದಿಲ್ಲ ಎಂಬುದು ಚಿತ್ರರಂಗದಲ್ಲಿ ಖಚಿತ ಆಗಿದೆ. ಆದ್ದರಿಂದ ರಿಷಬ್ ಶೆಟ್ಟಿ ಅವರು ಪ್ರತಿ ಸಿನಿಮಾಗೆ 80 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ

ಸದ್ಯಕ್ಕೆ ಈ ಮಾಹಿತಿ ಕೇವಲ ಅಂತೆ-ಕಂತೆಯ ಹಂತದಲ್ಲಿ ಇದೆ. ಯಾವುದೇ ಚಿತ್ರತಂಡದವರು ಖಚಿತಪಡಿಸಿಲ್ಲ. ರಿಷಬ್ ಶೆಟ್ಟಿ ಅವರು ಸಾರ್ವಜನಿಕವಾಗಿ ತಮ್ಮ ಸಂಭಾವನೆ ಬಗ್ಗೆ ಮಾತನಾಡಿಲ್ಲ. ಪರಭಾಷೆಯ ಕೆಲವು ಮಾಧ್ಯಮಗಳು ಈ ಕುರಿತು ಸುದ್ದಿ ಪ್ರಕಟ ಮಾಡಿವೆ. ರಿಷಬ್ ಶೆಟ್ಟಿ ಅವರ ಸಂಭಾವನೆ 80 ಕೋಟಿ ರೂಪಾಯಿಗೆ ಏರಿಕೆ ಆಗಿದೆ ಎಂದು ವರದಿ ಮಾಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!: ಸತ್ಯ ತಿಳಿಯಲು ಈ ವಿಡಿಯೋ ನೋಡಿ – Kannada News | BJP Member Sadanandan Master Placed His Artificial Legs on the Bench During His First Speech in Rajya Sabha Session

ನವದೆಹಲಿ, ಫೆಬ್ರವರಿ 03: ರಾಜ್ಯಸಭೆಯಲ್ಲಿ ಚೊಚ್ಚಲ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ. ಸದಾನಂದನ್ ಮಾಸ್ಟರ್  ತಮ್ಮ ಕೃತಕ ಕಾಲುಗಳನ್ನು ಸದನದ ಬೆಂಚ್​​ ಮೇಲೆ ಪ್ರದರ್ಶಿಸಿ, ತಾವು ಕಾಲುಗಳನ್ನು ಕಳೆದುಕೊಂಡಿದ್ದೇಗೆ ಎಂಬ ಬಗ್ಗೆ ವಿವರಣೆ ನೀಡಿದ ಪ್ರಸಂಗ ನಡೆದಿದೆ. ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯ, ಸಹಿಷ್ಣುತೆಯ ಬಗ್ಗೆ ಮಾತನಾಡುವ ಎಡಪಂಥೀಯ ರಾಜಕೀಯ ಪಕ್ಷಗಳು ತಮ್ಮ ಸೈದಾಂತಿಕ ವಿರೋಧಿಗಳಿಗೆ ಎಂತಾ ಹಿಂಸೆ ನೀಡಿವೆ ನೋಡಿ ಎಂದು ಅವರು ಹೇಳಿರೋದು ರಾಜ್ಯ ಸಭೆಯಲ್ಲಿ ಕೆಲ ಕಾಲ ಗದ್ದಲಕ್ಕೂ ಕಾರಣವಾಗಿದೆ. 1994ರ ಜನವರಿ 25ರಂದು ಸಿಪಿಐಎಂ ಕಾರ್ಯಕರ್ತರು ಎಂದು ಹೇಳಲಾದ ಗುಂಪು ಇವರ ಮೇಲೆ ದಾಳಿ ನಡೆಸಿತ್ತು. ಕಾಲುಗಳನ್ನು ಕತ್ತರಿಸಿ ಮತ್ತೆ ಜೋಡಣೆಗೆ ಸಿಗಬಾರದೆಂದು ಅಡಗಿಸಿಟ್ಟಿತ್ತು. ಬಳಿಕ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಇವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ? ಅಂಪೈರ್ ಹೇಳಿದ್ದೇನು? – Kannada News | Umpire Anil Chaudhary on Pakistan’s Usman Tariq’s bowling action

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಚರ್ಚೆಗೆ ಕಾರಣವಾಗಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಉಸ್ಮಾನ್ ತಾರಿಖ್ ಎಸೆತದಲ್ಲಿ ಆಸ್ಟ್ರೇಲಿಯಾ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳೆನ್ನೆತ್ತಿದ್ದರು.

ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲೂ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿ ಬಗ್ಗೆ ಚರ್ಚೆ ಶುರುವಾಗಿತ್ತು. ಇದೀಗ ಈ ಚರ್ಚೆಗಳಿಗೆ ಭಾರತದ ಅಂಪೈರ್ ಅನಿಲ್ ಚೌಧರಿ ತೆರೆ ಎಳೆದಿದ್ದಾರೆ.

ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಮಾತನಾಡಿದ ಅನಿಲ್ ಚೌಧರಿ, ಅವರ ಬೌಲಿಂಗ್​ನಲ್ಲಿ ಯಾವುದೇ ತಪ್ಪು ಅಥವಾ ಅನುಮಾನಾಸ್ಪದತೆಯನ್ನು ಕಂಡು ಬರುತ್ತಿಲ್ಲ. ತಾರಿಕ್ ಅವರ ಬೌಲಿಂಗ್ ಶೈಲಿ ಸ್ವಲ್ಪ ಸೈಡ್-ಆರ್ಮ್ ಆಗಿದ್ದು, ಅವರು ಚೆಂಡನ್ನು ಎಸೆಯಲು ತುಸು ವಿಳಂಬ ಮಾಡುತ್ತಿದ್ದಾರೆ ಅಷ್ಟೇ. ಆದಾಗ್ಯೂ, ಅವರು ಎಲ್ಲಾ ಚೆಂಡುಗಳನ್ನು ಒಂದೇ ರೀತಿಯಲ್ಲಿ ಬೌಲ್ ಮಾಡುತ್ತಿದ್ದಾರೆ.

ಐಸಿಸಿ ಬೌಲಿಂಗ್ ಮಾರ್ಗಸೂಚಿಗಳ ಪ್ರಕಾರ, ತಮ್ಮ ತೋಳನ್ನು ಬಗ್ಗಿಸುವುದಿಲ್ಲವಾದ್ದರಿಂದ, ಬೌಲಿಂಗ್ ಶೈಲಿ ಸರಿಯಾಗಿದೆ. ಬೌಲಿಂಗ್ ಶೈಲಿ ಸ್ವಲ್ಪ ವಿಭಿನ್ನವಾಗಿದ್ದರೂ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಂಪೈರ್ ಅನಿಲ್ ಚೌಧರಿ ಹೇಳಿದ್ದಾರೆ.

 

Source link

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು – Kannada News | Kamalakar Bhat Guruji’s Illicit Affair: Complaint Leads to Fatal Assault, One Dead in Siddapura, Uttara Kannada

ಆರೋಪಿಗಳು ಮತ್ತು ಮೃತ ವ್ಯಕ್ತಿImage Credit source: Tv9 Kannada

ಕಾರವಾರ, ಫೆಬ್ರವರಿ 03: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಏನು?

ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದರು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಕಮಲಾಕರ್​​ ಗುರೂಜಿ, ಸುಚಿತ್ರಾ, ಸುಚಿತ್ರಾ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ್ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇದನ್ನೂ ಓದಿ: 10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು; ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚಾಮರಾಜನಗರ: ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ? – Kannada News | Neem Tree in Chamarajanagar Oozes Sugary White Liquid

ಚಾಮರಾಜನಗರ, ಫೆಬ್ರುವರಿ 03: ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಒಂದು ಬೇವಿನ ಮರದಿಂದ ಬಿಳಿ ಬಣ್ಣದ ಸಿಹಿ ದ್ರವ ಸ್ರವಿಸುತ್ತಿದ್ದು, ಇದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಕುತೂಹಲವನ್ನು ಮೂಡಿಸಿದೆ. ಕಹಿ ಗುಣದ ಬೇವಿನ ಮರದಿಂದ ಜೇನುತುಪ್ಪದಂತಹ ಸಿಹಿ ದ್ರವ ಬರುತ್ತಿರುವುದು ವಿಸ್ಮಯಕ್ಕೆ ಕಾರಣವಾಗಿದೆ. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಮುನಿಸಿದ್ದ, ಮರದಿಂದ ಹೊರಬಂದ ಈ ದ್ರವ ಹಾಲಿನಂತೆ ಕಾಣುತ್ತದೆ ಮತ್ತು ರುಚಿಯಲ್ಲಿ ಸಕ್ಕರೆಯಂತೆ ಸಿಹಿಯಾಗಿರುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮಸ್ಥರು ಈ ಅಸಾಮಾನ್ಯ ವಿದ್ಯಮಾನವನ್ನು ದೈವಿಕ ಸೂಚನೆ ಎಂದು ವ್ಯಾಖ್ಯಾನಿಸುತ್ತಿದ್ದಾರೆ. ಈ ಬೇವಿನ ಮರದಿಂದ ಸಿಹಿ ದ್ರವ ಯಾಕೆ ಬರುತ್ತಿದೆ ಎಂಬುದರ ಬಗ್ಗೆ ಯಾರಿಗೂ ಸ್ಪಷ್ಟ ಕಾರಣ ತಿಳಿದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ – Kannada News | Opposition Leader R Ashok Displays Pen Drive in Karnataka Assembly, Makes Serious Corruption Allegations

ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪImage Credit source: tv9

ಬೆಂಗಳೂರು, ಫೆಬ್ರವರಿ 3: ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಅವರು ಅಬಕಾರಿ ಇಲಾಖೆಯಲ್ಲಿ (Excise department) ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ಆಡಿಯೋ ಸಾಕ್ಷ್ಯ ತಮ್ಮ ಬಳಿ ಇದೆ ಎಂದರು. ಅಲ್ಲದೆ, ಅದಕ್ಕೆ ಸಂಬಂಧಿಸಿದ ಪೆನ್​ಡ್ರೈವ್ ಅನ್ನೂ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಪ್ರದರ್ಶಿಸಿದ ಅವರು, ಸರ್ಕಾರ ಮತ್ತು ಇಲಾಖೆಯ ಉನ್ನತ ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅಬಕಾರಿ ಸಚಿವ ಆರ್​​ಬಿ ತಿಮ್ಮಾಪುರ ‘ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆದಿದೆ’ ಎಂದಿದ್ದಾರೆ. ಅವರ ಹೇಳಿಕೆಯೇ ಅಬಕಾರಿ ಇಲಾಖೆಯಲ್ಲಿನ ಅಕ್ರಮಗಳಿಗೆ ಸಾಕ್ಷಿಯಾಗಿದೆ ಎಂದು ಅಶೋಕ್ ಹೇಳಿದರು. ತಿಮ್ಮಾಪುರ ಅವರಿಗೆ ಪಾಲು ಕೊಡಬೇಕೆಂಬ ಆಡಿಯೋ ವೈರಲ್ ಆಗಿದೆ ಎಂದು ಹೇಳಿದ ಅಶೋಕ್, ಆ ಆಡಿಯೋ ದಾಖಲೆ ಪೆನ್‌ಡ್ರೈವ್‌ನಲ್ಲಿ ಇದೆ ಎಂದು ಸದನಕ್ಕೆ ತಿಳಿಸಿದರು.

ಅಬಕಾರಿ ಇಲಾಖೆ ಜಂಟಿ ಆಯುಕ್ತ ನಾಗರಾಜಪ್ಪ ಹಾಗೂ ವಕೀಲ ರಮೇಶ್ ನಡುವಿನ ಮಾತುಕತೆಯ ವಿವರ ಪೆನ್‌ಡ್ರೈವ್‌ನಲ್ಲಿ ಇದೆ ಎಂದು ಅಶೋಕ್ ಆರೋಪಿಸಿದರು. ಆಡಿಯೋದಲ್ಲಿ ನಾಗರಾಜಪ್ಪ ಅವರು 18 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದರು. ಸಚಿವರು ಅಥವಾ ಅವರ ಮಗನ ಕಡೆಯಿಂದ ಸಂದೇಶ ಬಂದ ನಂತರವೇ ಕೆಲಸ ಆಗುತ್ತದೆ ಎಂದು ನಾಗರಾಜಪ್ಪ ಹೇಳಿರುವುದೂ ಆಡಿಯೋದಲ್ಲಿ ಇದೆ ಎಂದು ಅಶೋಕ್ ವಿವರಿಸಿದರು.

ಅಶೋಕ್ ಮಾತಿನ ವಿಡಿಯೋ ಇಲ್ಲಿ ನೋಡಿ


ಇನ್ನೂ ಅಬಕಾರಿ ಅಂಗಡಿಗಳಿಂದ ಪ್ರತೀ ತಿಂಗಳು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಪ್ರತಿ ಅಂಗಡಿಯಿಂದ ತಿಂಗಳಿಗೆ 10ರಿಂದ 15 ಸಾವಿರ ರೂ. ಸಂಗ್ರಹಿಸಲಾಗುತ್ತಿದೆ ಎಂದರು. ಈ ಮೂಲಕ ತಿಂಗಳಿಗೆ ಒಟ್ಟು ಸುಮಾರು 21 ಕೋಟಿ ರೂ. ಹಾಗೂ ವರ್ಷಕ್ಕೆ 252 ಕೋಟಿ ರೂ. ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅಂಕಿಅಂಶ ಸಮೇತ ಆರೋಪಿಸಿದರು.

ಇದನ್ನೂ ಓದಿ: ಸಚಿವರ ಬುಡಕ್ಕೆ ಅಬಕಾರಿ ಡಿಸಿ ಲಂಚ ಪ್ರಕರಣ: ಆರ್​​ಬಿ ತಿಮ್ಮಾಪುರಗೆ ಸಂಕಷ್ಟ

ಮದ್ಯದ ಅಂಗಡಿಗಳಿಗೆ ಪ್ರತೀ ತಿಂಗಳು ಕಮಿಷನ್ ಮೊತ್ತವನ್ನು ಫಿಕ್ಸ್ ಮಾಡಲಾಗಿದೆ ಎಂದು ಹೇಳಿದ ಆರ್.ಅಶೋಕ್, ಈ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಅವರ ಆರೋಪಗಳಿಂದಾಗಿ ವಿಧಾನಸಭೆಯಲ್ಲಿ ಕೆಲಕಾಲ ತೀವ್ರ ಗದ್ದಲವೂ ಉಂಟಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ? – Kannada News | Will India keep agriculture and dairy sector out of trade deal with US

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ (India US trade deal) ಏರ್ಪಡುವುದು ನಿಶ್ಚಿತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೇ ಈ ಡೀಲ್ ಕುದುರಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಭಾರತಕ್ಕೆ ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸಲಾಗುತ್ತದೆ. ಭಾರತವು ಟ್ಯಾರಿಫ್ ಅನ್ನು ಶೂನ್ಯಕ್ಕೆ ಇಳಿಸುತ್ತದೆ. ಕೃಷಿ ಇತ್ಯಾದಿ ಕ್ಷೇತ್ರದ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿಗುತ್ತದೆ ಎಂಬರ್ಥದಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದು ಭಾರತೀಯ ಕೃಷಿ ವಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಗೆ ಕಾರಣವಾಗಿರುವುದು ಹೌದು. ಆದರೆ, ಕೃಷಿ ವಿಚಾರದ ಬಗ್ಗೆ ಭಾರತ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳಲ್ಲಿ ವರದಿಯಾಗಿದೆ.

‘ಯಾವುದೇ ವ್ಯಾಪಾರ ಒಪ್ಪಂದದಲ್ಲೂ ಭಾರತದ ಸೂಕ್ಷ್ಮ ಸೆಕ್ಟರ್​ಗಳಾದ ಕೃಷಿ ಮತ್ತು ಡೈರಿಯನ್ನು ರಕ್ಷಿಸುವುದು ಭಾರತದ ನಿಲುವು. ಇದು ಬದಲಾಗುವುದಿಲ್ಲ. ಬ್ರಿಟನ್, ನ್ಯೂಜಿಲ್ಯಾಂಡ್ ಮತ್ತು ಯೂರೋಪಿಯನ್ ಯೂನಿಯನ್ ಜೊತೆಗಿನ ಒಪ್ಪಂದದಲ್ಲೂ ಈ ಕ್ಷೇತ್ರವನ್ನು ರಕ್ಷಿಸಲಾಗಿದೆ. ಅಮೆರಿಕದೊಂದಿಗಿನ ಒಪ್ಪಂದದಲ್ಲೂ ಇದೇ ಆಗುವುದು’ ಎಂದು ಮೂಲಗಳು ಹೇಳಿವೆ ಎಂದು ಮನಿಕಂಟ್ರೋಲ್ ವೆಬ್ಸೈಟ್ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು…

ಈಗಾಗಿರುವ ಬೆಳವಣಿಗೆಯಲ್ಲಿ, ಅಮೆರಿಕವು ಭಾರತದ ಸರಕುಗಳ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಸಲಿದೆ. ರಷ್ಯನ್ ತೈಲ ಖರೀದಿಗೆ ದಂಡವಾಗಿ ವಿಧಿಸಿದ್ದ ಶೇ. 25 ಟ್ಯಾರಿಫ್ ಅನ್ನು ಕೈಬಿಡುತ್ತಿದೆ. ಒಟ್ಟಾರೆ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಯುತ್ತದೆ. ಕೆಲವೇ ಕೆಲವು ದೇಶಗಳಿಗೆ ಮಾತ್ರ ಅಮೆರಿಕ ಇದಕ್ಕಿಂತ ಕಡಿಮೆ ಟ್ಯಾರಿಫ್ ವಿಧಿಸುತ್ತಿರುವುದು.

ಅಮೆರಿಕದ ಟ್ಯಾರಿಫ್ ಇಳಿಕೆಗೆ ಪ್ರತಿಯಾಗಿ ಭಾರತವೂ ಸುಂಕ ಕಡಿಮೆ ಮಾಡಬಹುದು. ಭಾರತದ ಟ್ಯಾರಿಫ್ ಶೂನ್ಯ ಇರುತ್ತದೆ ಎಂದು ಅಮೆರಿಕ ಹೇಳಿದೆ. ಆದರೆ, ಈ ಬಗ್ಗೆ ಭಾರತದಿಂದ ಸ್ಪಷ್ಟನೆ ಬಂದಿಲ್ಲ. ಯಾವ ದೇಶಕ್ಕೂ ಅಮೆರಿಕ ಟ್ಯಾರಿಫ್ ವಿನಾಯಿತಿ ಕೊಟ್ಟಿಲ್ಲವಾದ್ದರಿಂದ ಭಾರತದ ರಫ್ತು ಸ್ಪರ್ಧಾತ್ಮಕತೆಗೆ ಧಕ್ಕೆ ಆಗುವ ಸಾಧ್ಯತೆ ಕಡಿಮೆ.

ಇದನ್ನೂ ಓದಿ: ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ

ಟ್ಯಾರಿಫ್ ಹೇಗೆ ಕೆಲಸ ಮಾಡುತ್ತದೆ?

ಅಮೆರಿಕವು ಭಾರತದ ಮೇಲೆ ಟ್ಯಾರಿಫ್ ಹಾಕುತ್ತಿದೆ ಎಂದರೆ, ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳಿಗೆ ಈ ಟ್ಯಾರಿಫ್ ಹಾಕಲಾಗುತ್ತದೆ ಎಂದರ್ಥ. ಈ ಟ್ಯಾರಿಫ್ ಅನ್ನು ಭಾರತೀಯ ರಫ್ತುದಾರರು ಪಾವತಿಸುವುದಿಲ್ಲ. ಬದಲಾಗಿ, ಭಾರತದ ಸರಕುಗಳನ್ನು ಆಮದು ಮಾಡಿಕೊಳ್ಳುವ ಅಮೆರಿಕನ್ ಸಂಸ್ಥೆಗಳು ಟ್ಯಾರಿಫ್ ಪಾವತಿಸಬೇಕಾಗುತ್ತದೆ. ಹೀಗಾಗಿ, ಆಮದಿತ ಸರಕುಗಳ ಬೆಲೆ ಅಮೆರಿಕದಲ್ಲಿ ಸಹಜವಾಗಿ ಏರಿಕೆ ಆಗುತ್ತದೆ. ಅಮೆರಿಕದಲ್ಲಿ ಉತ್ಪಾದನಾ ಕ್ಷೇತ್ರವನ್ನು ಬೆಳೆಸಲು ಮತ್ತು ದೇಶೀಯ ಉತ್ಪನ್ನಗಳಿಗೆ ಆದ್ಯತೆ ಕೊಡಲು ಅಮೆರಿಕವು ಟ್ಯಾರಿಫ್ ಹಾಕುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Silver Jewellery: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು! – Kannada News | Astrology: Which Zodiac Signs Should Wear Silver for Prosperity and Health?

ಜ್ಯೋತಿಷ್ಯದಲ್ಲಿ ಬೆಳ್ಳಿಯನ್ನು ಬಹಳ ಮುಖ್ಯ ಮತ್ತು ವಿಶೇಷವೆಂದು ಪರಿಗಣಿಸಲಾಗುತ್ತದೆ. ಬೆಳ್ಳಿ ಚಂದ್ರ ಮತ್ತು ಶುಕ್ರನೊಂದಿಗೆ ಸಂಬಂಧ ಹೊಂದಿದೆ. ಜ್ಯೋತಿಷ್ಯದ ಪ್ರಕಾರ, ಜಾತಕದಲ್ಲಿ ಚಂದ್ರನ ಸ್ಥಾನ ಬಲವಾಗಿದ್ದರೆ ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿರುತ್ತಾನೆ ಮತ್ತು ಅವರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಮೇಲುಗೈ ಸಾಧಿಸುತ್ತದೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ಜನರು ತಮ್ಮ ಕೈಗಳಿಗೆ ಬೆಳ್ಳಿ ಉಂಗುರಗಳು ಅಥವಾ ಬಳೆಗಳನ್ನು ಧರಿಸುತ್ತಾರೆ. ಹಾಗಾದರೆ, ಯಾವ ರಾಶಿಗಳಿಗೆ ಬೆಳ್ಳಿ ಬಳೆ ಶುಭವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ, ಯಾವ ರಾಶಿಯವರು ಬೆಳ್ಳಿ ಬಳೆ ಧರಿಸುವುದನ್ನು ತಪ್ಪಿಸಬೇಕು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಈ ಮೂರು ರಾಶಿಗಳಿಗೆ ಬೆಳ್ಳಿ ತುಂಬಾ ಶುಭ:

ಜ್ಯೋತಿಷ್ಯದ ಪ್ರಕಾರ, ಕರ್ಕಾಟಕ, ವೃಶ್ಚಿಕ ಮತ್ತು ಮೀನ ರಾಶಿಯ ಅಡಿಯಲ್ಲಿ ಜನಿಸಿದವರು ಖಂಡಿತವಾಗಿಯೂ ಬೆಳ್ಳಿಯ ಧರಿಸಬೇಕು. ಬೆಳ್ಳಿ ಈ ಮೂರು ರಾಶಿಗಳಿಗೆ ವಿಶೇಷ ಪ್ರಯೋಜನಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಈ ಮೂರೂ ರಾಶಿಗಳನ್ನು ನೀರಿನ ಅಂಶಕ್ಕೆ ಸೇರಿದವು ಎಂದು ಪರಿಗಣಿಸಲಾಗುತ್ತದೆ. ಬೆಳ್ಳಿಯು ನೀರಿನ ಅಂಶದೊಂದಿಗೆ ಸಹ ಸಂಬಂಧಿಸಿದೆ. ಆದ್ದರಿಂದ, ಈ ಮೂರು ರಾಶಿಗಳ ಅಡಿಯಲ್ಲಿ ಜನಿಸಿದವರಿಗೆ ಬೆಳ್ಳಿ ಧರಿಸುವುದು ಶುಭ ಮತ್ತು ಫಲಪ್ರದವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಜೋಡಿ ಒಂಟೆಯ ಪ್ರತಿಮೆ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಬೆಳ್ಳಿಯು ಚಂದ್ರ ಮತ್ತು ಶುಕ್ರನೊಂದಿಗೆ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ. ಚಂದ್ರನನ್ನು ಮನಸ್ಸು, ಆಲೋಚನೆಗಳು ಮತ್ತು ಮಾನಸಿಕ ಶಾಂತಿಯ ಅಂಶವೆಂದು ಪರಿಗಣಿಸಲಾಗುತ್ತದೆ. ಮತ್ತೊಂದೆಡೆ, ಶುಕ್ರವು ಸಂತೋಷ, ಸೌಂದರ್ಯ ಮತ್ತು ಸಮೃದ್ಧಿಯನ್ನು ಸಂಕೇತಿಸುತ್ತದೆ. ಈ ಎರಡು ಗ್ರಹಗಳು ವ್ಯಕ್ತಿಯ ಜಾತಕದಲ್ಲಿ ಬಲವಾಗಿದ್ದರೆ, ಜೀವನದಲ್ಲಿ ಶಾಂತಿ ಮತ್ತು ಸಮತೋಲನವು ಆಳುತ್ತದೆ ಎಂದು ಹೇಳಲಾಗುತ್ತದೆ.

ಯಾವ ರಾಶಿಯವರು ಬೆಳ್ಳಿ ಧರಿಸಬಾರದು?

ಜ್ಯೋತಿಷ್ಯದ ಪ್ರಕಾರ, ಮೇಷ, ಸಿಂಹ ಮತ್ತು ಧನು ರಾಶಿಯ ಅಡಿಯಲ್ಲಿ ಜನಿಸಿದವರು ಬೆಳ್ಳಿ ಬಳೆ ಅಥವಾ ಅದರಿಂದ ಮಾಡಿದ ಆಭರಣ ಧರಿಸುವುದನ್ನು ತಪ್ಪಿಸಬೇಕು. ಬೆಳ್ಳಿ ಧರಿಸುವುದರಿಂದ ಮಾನಸಿಕ ಒತ್ತಡ, ಆರ್ಥಿಕ ನಷ್ಟ ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು, ಆದ್ದರಿಂದ ಈ ಮೂರು ರಾಶಿಗಳಲ್ಲಿ ಜನಿಸಿದವರು ಬೆಳ್ಳಿ ಬಳೆ ಅಥವಾ ಇತರ ಬೆಳ್ಳಿ ಆಭರಣಗಳನ್ನು ಧರಿಸುವುದನ್ನು ತಪ್ಪಿಸಬೇಕು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link