Category Archives: Blog

Your blog category

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌ 25 ರಂದು ಉತ್ತಮ ಆಡಳಿತ ದಿನವನ್ನು ಆಚರಿಸಲಾಗುತ್ತದೆ. ಈ ದಿನ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿಂತನೆಗಳು ಮತ್ತು ಆದರ್ಶಗಳಿಗೆ ಸಮರ್ಪಿತವಾಗಿದೆ.

ಉತ್ತಮ ಆಡಳಿತ ದಿನದ ಇತಿಹಾಸವೇನು?

ಭಾರತದ ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಜಯಂತಿಯಂದು ಭಾರತದಲ್ಲಿ ‘ಉತ್ತಮ ಆಡಳಿತ ದಿನ’ವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಸಂಪೂರ್ಣವಾಗಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಮರ್ಪಿಸಲಾಗಿದೆ. 2014 ರಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ‘ಉತ್ತಮ ಆಡಳಿತ ದಿನ’ವನ್ನು ಆಚರಿಸುವುದಾಗಿ ಘೋಷಿಸಿದರು. ಈ ದಿನದಂದು ಅಟಲ್ ಬಿಹಾರಿ ವಾಜಪೇಯಿ ಅವರ ಕೆಲಸವನ್ನು, ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.  ಸ್ಮರಿಸಲಾಗುತ್ತದೆ. ಅನೇಕ ಸ್ಥಳಗಳಲ್ಲಿ ವಿಚಾರ ಸಂಕಿರಣಗಳು ಮತ್ತು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತದೆ.

ಉತ್ತಮ ಆಡಳಿತ ದಿನದ ಆಚರಣೆಯ ಉದ್ದೇಶವೇನು?

ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಜಯಂತಿಯ ಪ್ರಯುಕ್ತ ಭಾರತ ಸರ್ಕಾರವು 2014 ರಲ್ಲಿ ಉತ್ತಮ ಆಡಳಿತ ದಿನವನ್ನು ಪ್ರಾರಂಭಿಸಿತು. ಇದರ ಉದ್ದೇಶವೆಂದರೆ,

  • ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಳ
  • ಜನ ಕೇಂದ್ರಿತ ನೀತಿಗಳನ್ನು ರೂಪಿಸುವುದು
  • ಸರ್ಕಾರಿ ಕೆಲಸವನ್ನು ಜವಾಬ್ದಾರಿಯುತವಾಗಿಸುವುದು
  • ನಾಗರಿಕರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು, ಸರ್ಕಾರಿ ಸೇವೆಗಳ ಗುಣಮಟ್ಟವನ್ನು ಸುಧಾರಿಸುವುದು, ಇ-ಆಡಳಿತವನ್ನು ಉತ್ತೇಜಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ಒಬ್ಬ ಜವಾಬ್ದಾರಿಯುತ ಗ್ರಾಹಕರಾಗಿ ನಿಮ್ಮ ಹಕ್ಕುಗಳೇನು, ತಿಳಿದುಕೊಳ್ಳಿ

ಅಟಲ್ ಬಿಹಾರಿ ವಾಜಪೇಯಿ ಒಬ್ಬ ಚೈತನ್ಯಶೀಲ ರಾಜಕಾರಣಿ:

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಡಿಸೆಂಬರ್ 25, 1924 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದರು. ಅವರು ಮೂರು ಬಾರಿ ಭಾರತದ ಪ್ರಧಾನಿಯಾದರು.  ಸರ್ಕಾರದ ಕೆಲಸವು ಕೇವಲ ಆಡಳಿತ ನಡೆಸುವುದಲ್ಲ, ಸೇವೆ ಸಲ್ಲಿಸುವುದು ಎಂದು ನಂಬಿದ್ದ ಅವರು  ತಮ್ಮ ಅಧಿಕಾರಾವಧಿಯಲ್ಲಿ ದೇಶದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದರು, ಮಹತ್ವದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದರು. ಅಜಾತಶತ್ರು ಎಂದೇ ಹೆಸರುವಾಸಿಯಾದ ಅವರು ನಿಷ್ಕಳಂಕ ಚಾರಿತ್ರ್ಯದ, ಮೇರು ವ್ಯಕ್ತಿತ್ವದ ಮಹಾನ್‌ ಜನನಾಯಕ. ತಮ್ಮ ಅತ್ಯುತ್ತಮ ಆಡಳಿದಿಂದ ಅಚ್ಚಳಿಯ ಛಾಪು ಮೂಡಿಸಿದ್ದ ವಾಜಪೇಯಿ ಅವರ ಜನ್ಮ ಜಯಂತಿಯಂದು ಉತ್ತಮ ಆಡಳಿತ ದಿನವನ್ನು ಆಚರಣೆ ಮಾಡುವ  ಮೂಲಕ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ – Kannada News | Chitradurga Bus Accident: PM Narendra Modi Expresses Condolences, Announces Rs 2 Lakh Ex Gratia

ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ನವದೆಹಲಿ, ಡಿಸೆಂಬರ್ 25: ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದೆ.

‘ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ’ ಎಂದು ಪ್ರಧಾನಿ ಕಾರ್ಯಾಲಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದೆ.

‘ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್‌)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು’ ಎಂದು ಪ್ರಧಾನಿ ತಿಳಿಸಿದ್ದಾರೆ.

ಪ್ರಧಾನಿ ಕಾರ್ಯಾಲಯ ಎಕ್ಸ್ ಸಂದೇಶ

ಗೊರ್ಲತ್ತು ಕ್ರಾಸ್ ಬಳಿ ಮುಂಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್​ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ.

ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್​ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಂತಾಪ

ಬಸ್ ದುರಂತದ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ. ಇನ್ನೂ ಹೆಚ್ಚಿನ ಸಾವು-ನೋವು ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಜೀವ ಚೆಲ್ಲಿದವರಿಗೆ ದೇವರು ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಹಾಗೂ ಅವರ ಚಿಕಿತ್ಸೆಗೆ ರಾಜ್ಯ ಸರಕಾರ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಿ. ಅಗಲಿದವರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9 ಜನ ಸಜೀವ ದಹನ

ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Source link

ಚಿತ್ರದುರ್ಗ ಬಸ್ ಅಪಘಾತ: ಬಸ್ ಹೊತ್ತಿ ಉರಿದ ಭಯಾನಕ ಘಟನೆ ಬಗ್ಗೆ ವಿವರಿಸಿದ ಕ್ಲೀನರ್ – Kannada News | Chitradurga Bus Accident: Cleaner Recounts Horror as Bus Catches Fire After Crash

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ಬಸ್ ಅಪಘಾತದ ಭಯಾನಕ ಕ್ಷಣಗಳ ಬಗ್ಗೆ ಬಸ್ ಕ್ಲೀನರ್ ಸಾಧಿಕ್ ಮಾಹಿತಿ ನೀಡಿದ್ದಾರೆ. ಈ ದುರ್ಘಟನೆ ತಡರಾತ್ರಿ ಸುಮಾರು 1.30 ರಿಂದ 2 ಗಂಟೆಯ ನಡುವೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ‘ರಾತ್ರಿ ನಾನು ಬಸ್‌ನಲ್ಲಿ ಮಲಗಿದ್ದೆ. ಅಷ್ಟರಲ್ಲಿ ಭಾರೀ ಡಿಕ್ಕಿ ಹೊಡೆದ ರಭಸಕ್ಕೆ ನಾನು ಬಸ್‌ನಿಂದ ಹೊರ ಬಿದ್ದೆ. ಏನಾಗಿದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿ ಇದ್ದೆ. ನೋಡ ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿಯತೊಡಗಿತು’ ಎಂದು ಸಾಧಿಕ್ ಆತಂಕದಿಂದ ಹೇಳಿದ್ದಾರೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಧಾವಿಸಿ ಬಂದು ನಮ್ಮ ಸಹಾಯಕ್ಕೆ ನಿಂತರು. ಆದರೆ ಅಪಘಾತವಾದ ಕ್ಷಣದಲ್ಲೇ ಎಲ್ಲರೂ ಶಾಕ್‌ಗೆ ಒಳಗಾಗಿದ್ದೆವು. ಏನಾಗಿದೆ, ಏನು ಮಾಡಬೇಕು ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಸಾಧಿಕ್ ವಿವರಿಸಿದ್ದಾರೆ. ಅಪಘಾತದ ವೇಳೆ ಬಸ್ ಚಾಲಕ ಕೂಡ ಹೊರ ಬಿದ್ದಿದ್ದು, ಆತನಿಗೆ ಕೈ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ.

ವಿವರಗಳಿಗೆ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ.

ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ ರೂ.ನಲ್ಲಿ ವೇತನ ಪಡೆಯುವ ಸ್ಟಾರ್ ಆಟಗಾರರು ದೇಶೀಯ ಅಂಗಳದಲ್ಲಿ ಸಾವಿರಗಳ ರೂಪದಲ್ಲಿ ಸಂಭಾವನೆ ಪಡೆಯಲಿದ್ದಾರೆ.

ವೇತನ ಎಷ್ಟು?

ವಿಜಯ ಹಝಾರೆ ಟೂರ್ನಿಯಲ್ಲಿ ಮೂರು ವಿಭಾಗಗಳಾಗಿ ವೇತನ ನೀಡಲಾಗುತ್ತದೆ. ಅಂದರೆ ಇಲ್ಲಿ ಅನುಭವಿ ಆಟಗಾರರಿಗೆ ಹೆಚ್ಚಿನ ವೇತನ, ಉಳಿದವರಿಗೆ ಕಡಿಮೆ ವೇತನ ನಿಗದಿ ಮಾಡಲಾಗಿದೆ.

  • 1 ರಿಂದ 20 ಪಂದ್ಯಗಳನ್ನಾಡಿದ ಆಟಗಾರರಿಗೆ ಪ್ರತಿ ಪಂದ್ಯಕ್ಕೆ 40 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.
  • 21 ರಿಂದ 40 ಮ್ಯಾಚ್​ಗಳನ್ನಾಡಿರುವ ಆಟಗಾರರು ಪ್ರತಿ ಪಂದ್ಯಕ್ಕೆ 50 ಸಾವಿರ ರೂ. ವೇತನ ಪಡೆಯಲಿದ್ದಾರೆ.
  • 41 ಕ್ಕಿಂತ ಹೆಚ್ಚಿನ ಪಂದ್ಯಗಳನ್ನಾಡಿರುವ ಆಟಗಾರರಿಗೆ ಪ್ರತಿ ಮ್ಯಾಚ್​ಗೆ 60 ಸಾವಿರ ರೂ. ವೇತನ ಸಿಗಲಿದೆ.

ಇದನ್ನೂ ಓದಿ: ಕರ್ನಾಟಕ ತಂಡದ ವಿಶ್ವ ದಾಖಲೆಯ ಚೇಸಿಂಗ್

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವೇತನ ಎಷ್ಟು?

ವಿಜಯ ಹಝಾರೆ ಟೂರ್ನಿಯು ಲಿಸ್ಟ್ ಎ ಕ್ರಿಕೆಟ್ ಟೂರ್ನಿ. ಹೀಗಾಗಿ ಲಿಸ್ಟ್ ಎ ಪಂದ್ಯಗಳ ಅನುಭವವನ್ನು ಇಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಹೀಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ 41 ಕ್ಕಿಂತ ಹೆಚ್ಚಿನ ಏಕದಿನ ಪಂದ್ಯಗಳನ್ನಾಡಿರುವ ಆಟಗಾರರು ಪ್ರತಿ ಮ್ಯಾಚ್​ಗೆ 60 ಸಾವಿರ ರೂ. ವೇತನ ಪಡೆಯಲಿದ್ದಾರೆ.

  • ವಿರಾಟ್ ಕೊಹ್ಲಿ ಲಿಸ್ಟ್​ ಎ ಕ್ರಿಕೆಟ್​ನಲ್ಲಿ 343 ಪಂದ್ಯಗಳನ್ನಾಡಿದ್ದಾರೆ. ಹೀಗಾಗಿ ಅವರು ವಿಜಯ ಹಝಾರೆ ಟೂರ್ನಿಯ ಒಂದು ಪಂದ್ಯಕ್ಕೆ 60 ಸಾವಿರ ರೂ, ವೇತನ ಪಡೆಯಲಿದ್ದಾರೆ.
  • ರೋಹಿತ್ ಶರ್ಮಾ ಲಿಸ್ಟ್ ಎ ಕ್ರಿಕೆಟ್​ನಲ್ಲಿ 351 ಮ್ಯಾಚ್​ಗಳನ್ನಾಡಿರುವ ಕಾರಣ ಅವರಿಗೂ ವಿಜಯ ಹಝಾರೆ ಟೂರ್ನಿಯ ಪ್ರತಿ ಪಂದ್ಯಕ್ಕೆ 60 ಸಾವಿರ ರೂ. ನೀಡಲಾಗುತ್ತದೆ.
  • ಕೆಎಲ್ ರಾಹುಲ್ ಲಿಸ್ಟ್ ಎ ಕ್ರಿಕೆಟ್​ನಲ್ಲಿ 143 ಪಂದ್ಯಗಳನ್ನಾಡಿದ್ದಾರೆ. ಹೀಗಾಗಿ ಅವರು ಸಹ ಒಂದು ಮ್ಯಾಚ್​ಗೆ 60 ಸಾವಿರ ರೂ. ವೇತನ ಪಡೆಯಲಿದ್ದಾರೆ.
  • ಶುಭ್​ಮನ್ ಗಿಲ್ ಈವರೆಗೆ 69 ಲಿಸ್ಟ್ ಎ ಕ್ರಿಕೆಟ್​ನಲ್ಲಿ 69 ಪಂದ್ಯಗಳನ್ನಾಡಿದ್ದು, ಅದರಂತೆ ಪ್ರತಿ ಪಂದ್ಯಕ್ಕೆ 60 ಸಾವಿರ ರೂ. ವೇತನ ಗಿಟ್ಟಿಸಿಕೊಳ್ಳಲಿದ್ದಾರೆ.
  • ರಿಷಭ್ ಪಂತ್ 68 ಲಿಸ್ಟ್ ಎ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಅವರು ಸಹ ಪ್ರತಿ ಮ್ಯಾಚ್​ಗೆ 60 ಸಾವಿರ ರೂ. ವೇತನ ಪಡೆಯಲಿದ್ದಾರೆ.

Source link

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ? – Kannada News | Devil Movie Screens Shrink: Mark and 45 Impact Kannada Film Collections

‘ದಿ ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ಅಬ್ಬರದಲ್ಲಿ ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಇಷ್ಟು ದಿನ ಸಿನಿಮಾಗೆ ಕನ್ನಡದಲ್ಲಿ ದೊಡ್ಡ ಸ್ಪರ್ಧೆ ಇರಲಿಲ್ಲ. ಆದರೆ, ಈಗ ಪರಿಸ್ಥಿತಿ ಬದಲಾಗಿ ಹೋಗಿದೆ. ಚಿತ್ರಕ್ಕೆ ಕನ್ನಡ ಚಿತ್ರಗಳಿಂದಲೇ ಸ್ಪರ್ಧೆ ಏರ್ಪಡುತ್ತಾ ಇವೆ. ಕನ್ನಡದಲ್ಲಿ ಇಂದು (ಡಿಸೆಂಬರ್ 25) ‘ಮಾರ್ಕ್’ (Mark Movie) ಹಾಗೂ ‘45’ ಸಿನಿಮಗಳು ರಿಲೀಸ್ ಆಗಿವೆ. ಇದರಿಂದ ‘ಡೆವಿಲ್’ ಚಿತ್ರಕ್ಕೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ನೂರಾರು ಶೋಗಳನ್ನು ಈ ಚಿತ್ರಕ್ಕೆ ನೀಡಲಾಗಿತ್ತು. ಈಗ ಅದು ಗಣನೀಯವಾಗಿ ಇಳಿಕೆ ಕಂಡಿದೆ.

ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ. ಇನ್ನು, ‘45’ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಈ ಚಿತ್ರ ಸಾವು ಹಾಗೂ ಬದುಕಿನ ಕಥೆಯನ್ನು ಹೇಳಲಿದೆ. ಈ ಚಿತ್ರದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ ಹಾಗೂ ಶಿವಣ್ಣ ನಟಿಸಿದ್ದಾರೆ.

ಈ ಎರಡೂ ಚಿತ್ರಗಳ ಅಬ್ಬರದಿಂದ ‘ಡೆವಿಲ್’ ಚಿತ್ರಕ್ಕೆ ದೊಡ್ಡ ಹೊಡೆತ ಉಂಟಾಗಿದೆ. ಈ ಸಿನಿಮಾಗೆ ಸಿಕ್ಕ ಶೋಗಳ ಸಂಖ್ಯೆ ಕಡಿಮೆ ಆಗಿದೆ. ಈ ಸಿನಿಮಾಗೆ ಬೆಂಗಳೂರಿನಲ್ಲಿ ಸಿಕ್ಕಿರುವುದು ಕೇವಲ 28 ಶೋಗಳು. ಶೋಗಳ ಸಂಖ್ಯೆಯಲ್ಲಿ ಕುಸಿತ ಕಂಡಿರುವುದರಿಂದ ಸಿನಿಮಾ ಕಲೆಕ್ಷನ್ ಕೂಡ ತೀವ್ರ ಗತಿಯಲ್ಲಿ ಕುಸಿಯುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಚಿತ್ರ 20-30 ಲಕ್ಷ ರೂಪಾಯಿ ಗಳಿಕೆ ಮಾಡುತ್ತಿದೆ. ಈಗ ಶೋ ಇಳಿಕೆ ಹಿನ್ನೆಲೆಯಲ್ಲಿ ಸಿನಿಮಾಗೆ ತೊಂದರೆ ಉಂಟಾಗಿದೆ.

ಇದನ್ನೂ ಓದಿ: ಈ ವಾರ ಅಖಾಡಕ್ಕೆ ‘ಮಾರ್ಕ್’, ‘45’: ಇನ್ನೂ ಕಡಿಮೆ ಆಗುತ್ತಾ ‘ದಿ ಡೆವಿಲ್’ ಕಲೆಕ್ಷನ್?

ಬಹುತೇಕ ಚಿತ್ರಮಂದಿರಗಳಿಂದ ‘ಡೆವಿಲ್’ ಸಿನಿಮಾವನ್ನು ತೆಗೆಯಲಾಗಿದೆ. ಸದ್ಯ ಮಾಗಡಿ ರಸ್ತೆಯಲ್ಲಿರುವ ವಿರೇಶ್ ಚಿತ್ರಮಂದಿರ ಹಾಗೂ ಬೆಂಗಳೂರಿನ ಗಾಂಧಿನಗರದಲ್ಲಿರುವ ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ ನಾಲ್ಕು ಆಟಗಳನ್ನು ನೀಡಲಾಗಿದೆ. ಉಳಿದಂತೆ ಮಲ್ಟಿಪ್ಲೆಕ್ಸ್​​ಗಳಲ್ಲಿ ದಿನಕ್ಕೆ ಒಂದು ಅಥವಾ ಎರಡು ಆಟ ನೀಡಲಾಗಿದೆ.ಇದರ ಮಧ್ಯೆಯೂ ಕೆಲವು ಕಡೆಗಳಲ್ಲಿ ಸಿನಿಮಾ ಹೌಸ್​​ಫುಲ್ ಆಗುವ ಲಕ್ಷಣ ಕಾಣಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Mark Movie First Half Review: ಇಂಟರ್​ವಲ್ ತನಕ ಎಷ್ಟು ಥ್ರಿಲ್ಲಿಂಗ್ ಆಗಿದೆ ‘ಮಾರ್ಕ್’ ಸಿನಿಮಾ? ಫಸ್ಟ್ ಹಾಫ್ ವಿಮರ್ಶೆ ನೋಡಿ – Kannada News | Mark Movie First Half Review Kichcha Sudeep breaks the norm, high action for fans

‘ಮ್ಯಾಕ್ಸ್’ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ (Kichcha Sudeep) ಮತ್ತು ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ‘ಮಾರ್ಕ್’ ಸಿನಿಮಾ (Mark Movie) ಮಾಡಿದ್ದಾರೆ. ಈ ಕಾಂಬಿನೇಷನ್ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಇಂದು (ಡಿಸೆಂಬರ್ 25) ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಮುಂಜಾನೆಯೇ ಫಸ್ಟ್ ಶೋ ಆರಂಭ ಆಗಿದೆ. ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಫಸ್ಟ್ ಡೇ ಫಸ್ಟ್ ಶೋ ನೋಡಿ ಸಂಭ್ರಮಿಸುತ್ತಿದ್ದಾರೆ. ಬಹುಭಾಷೆಯ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಸ್ ಅವತಾರದಲ್ಲಿ ಕಿಚ್ಚ ಸುದೀಪ್ ಅವರು ಮನರಂಜನೆ ನೀಡಿದ್ದಾರೆ. ಸುದೀಪ್ ಜೊತೆ ಯೋಗಿ ಬಾಬು, ಶೈನ್ ಟಾಮ್ ಚಾಕೋ, ಪ್ರತಾಪ್, ಅರ್ಚನಾ ಕೊಟ್ಟಿಗೆ, ರೋಶಿನಿ ಪ್ರಕಾಶ್ ಮುಂತಾದವರು ನಟಿಸಿರುವ ‘ಮಾರ್ಕ್’ ಸಿನಿಮಾದ ಫಸ್ಟ್ ಹಾಫ್ ವಿಮರ್ಶೆ (Mark Movie First Half Review) ಇಲ್ಲಿದೆ..

  1. ಕ್ರೈಮ್ ಥ್ರಿಲ್ಲರ್ ಕಥಾಹಂದರ ‘ಮಾರ್ಕ್’ ಸಿನಿಮಾದಲ್ಲಿ ಇದೆ. ಚಿತ್ರದ ಆರಂಭದಲ್ಲೇ ವಿಲನ್ ಡ್ರ್ಯಾಗನ್ ಮಂಜು ಅವರು ಅಬ್ಬರಿಸಿದ್ದಾರೆ.
  2. ‘ದಾದಾ ಯಾರ್ ಗೊತ್ತಾ’ ಹಾಡು ಸಿನಿಮಾದ ಶುರುವಿನಲ್ಲೇ ಇದೆ. ಈ ಸಾಂಗ್ ಮೂಲಕವೇ ಕಿಚ್ಚ ಸುದೀಪ್ ಅವರು ಮಾಸ್ ಎಂಟ್ರಿ ನೀಡುತ್ತಾರೆ.
  3. ಆ್ಯಕ್ಷನ್ ಇಷ್ಟ ಪಡುವವರಿಗೆ ಮಾರ್ಕ್ ಸಿನಿಮಾದ ಆರಂಭದಲ್ಲೇ ಮನರಂಜನೆ ಇದೆ. ಸಸ್ಪೆಂಡ್ ಆದ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಸುದೀಪ್ ನಟಿಸಿದ್ದಾರೆ.
  4. ಡ್ರಗ್ಸ್ ಮಾಫಿಯಾ, ಮಕ್ಕಳ ಅಪಹರಣ, ರಾಜಕೀಯ, ಫ್ಯಾಮಿಲಿ ಸೆಂಟಿಮೆಂಟ್ ಕೂಡ ಮಾರ್ಕ್ ಸಿನಿಮಾದ ಫಸ್ಟ್ ‌ಹಾಫ್‌ನಲ್ಲಿ ಇದೆ.
  5. ಬಿಡುಗಡೆಗೂ ಮುನ್ನ ವೈರಲ್ ಆದ ‘ಮಸ್ತ್ ಮಲೈಕಾ..’ ಹಾಡು ಸಹ ಈ ಸಿನಿಮಾದ ಮೊದಲಾರ್ಧದಲ್ಲೇ ಇದೆ. ನಿಶ್ವಿಕಾ ನಾಯ್ಡು, ಸುದೀಪ್‌ ಡ್ಯಾನ್ಸ್ ಸೂಪರ್.
  6. ನವೀನ್ ಚಂದ್ರ, ವಿಕ್ರಾಂತ್, ಶೈನ್ ಟಾಮ್ ಚಾಕೋ, ಯೋಗಿ ಬಾಬು, ಗುರು ಸೋಮಸುಂದರಂ ಸೇರಿದಂತೆ ಹಲವರು ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
  7. ಇಂಟರ್‌ವಲ್‌ಗಿಂತ ಮುನ್ನ ಬರುವ ಫೈಟಿಂಗ್ ಸೀನ್ ಅಭಿಮಾನಿಗಳಿಗೆ ಇಷ್ಟ ಆಗುತ್ತದೆ. ಮೊದಲಾರ್ಧದಲ್ಲಿ ಒಟ್ಟು ಮೂರು ಆ್ಯಕ್ಷನ್ ದೃಶ್ಯಗಳಿವೆ.
  8. ಬಹುತೇಕ ‘ಮ್ಯಾಕ್ಸ್’ ಸಿನಿಮಾದ ರೀತಿಯೇ ‘ಮಾರ್ಕ್’ ಚಿತ್ರ ಮೂಡಿಬಂದಿದೆ. ಕೆಲವೇ ಗಂಟೆಗಳಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.
  9. ಯಾವುದೇ ವಿಳಂಬ ಇಲ್ಲದೇ ಪಟಪಟನೇ ಕಥೆ ಸಾಗುತ್ತದೆ. ಮುಂದೇನು ಎಂಬ ಕುತೂಹಲ ಈ ಸಿನಿಮಾದ ಪ್ರತಿ ದೃಶ್ಯದಲ್ಲೂ ಮೂಡುತ್ತದೆ.
  10. ಸೆಕೆಂಡ್ ಹಾಫ್ ಮೇಲೆ ನಿರೀಕ್ಷೆ ಮೂಡುವ ರೀತಿಯಲ್ಲಿ ಇಂಟರ್‌ವಲ್ ಎದುರಾಗುತ್ತದೆ. ಸಾಕಷ್ಟು ಟ್ವಿಸ್ಟ್ ಕೂಡ ಮಾರ್ಕ್ ಸಿನಿಮಾದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:20 am, Thu, 25 December 25

Source link

Bengaluru Air Quality Alert: ಬಳ್ಳಾರಿ ಜನರಿಗೆ ಹೈ ಅಲರ್ಟ್​​​ ನೀಡಿದ ತಜ್ಞರು, ರಾಜ್ಯದಲ್ಲಿ ಗಾಳಿಯ ಮಟ್ಟ ಕಳಪೆ – Kannada News | Poor Air in Bengaluru: High AQI, Health Risks & Precautions for Cold

ಬೆಂಗಳೂರು, ಡಿ.25: ಇಂದು ಬೆಂಗಳೂರು (Bengaluru air quality) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆ ಎಂದು ಹೇಳಲಾಗಿದೆ. ಮುಂದಿನ 7 ದಿನ ಚಳಿ ಮತ್ತು ಮಂಜು ವಾತಾವರಣ ಇರುವ ಕಾರಣ, ಗಾಳಿಯ ಗುಣಮಟ್ಟದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳು ಆಗುವ ಸಾಧ್ಯತೆಗಳು ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟ ಅನಾರೋಗ್ಯಕರವಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಕಾರ, ಇಂದು ಗಾಳಿಯ ಗುಣಮಟ್ಟದಲ್ಲಿ ಕೆಟ್ಟ ಪರಿಣಾಮವನ್ನು ಉಂಟು ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಲಾಗಿದೆ. ನಗರದ ಸರಾಸರಿ AQI 184 (ಅನಾರೋಗ್ಯಕರ) ಮತ್ತು 221 (ತುಂಬಾ ಅನಾರೋಗ್ಯಕರ/ತೀವ್ರ) ನಡುವೆ ವರದಿಯಾಗಿದೆ . ಇನ್ನು PM2.5 ಮತ್ತು PM10 . PM2.5 ಮಟ್ಟಗಳು 96 µg/m³ ವರೆಗೆ ದಾಖಲಾಗಿದೆ. PM10 ಮಟ್ಟಗಳು ಸುಮಾರು 132 µg/m³ ರಷ್ಟಿವೆ .

ಇನ್ನು ಈ ಗಾಳಿಯ ಗುಣಮಟ್ಟದಲ್ಲಿ ವಾತಾವರಣಕ್ಕೆ ಅನುಗುಣವಾಗಿ ಬದಲಾವಣೆ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಭೋಗನಹಳ್ಳಿಯಲ್ಲಿ ಗಾಳಿಗುಣ ಮಟ್ಟ 225 ಇದೆ. ಇನ್ನು ಪಾಮ್ ಮೆಡೋಸ್​​ನಲ್ಲಿ 202, ಮತ್ತು ಬೆಳತ್ತೂರುನಲ್ಲಿ 204, ಅರೆಕೆರೆಯಲ್ಲಿ 194, ಕೃಷ್ಣರಾಜಪುರದಲ್ಲಿ 19 ಹಾಗೂ ಬೊಮ್ಮನಹಳ್ಳಿಯಲ್ಲಿ 187 ಗಾಳಿಯಮಟ್ಟ ಇದೆ. ಪ್ರಸ್ತುತ ಬೆಂಗಳೂರಿನ ಗಾಳಿಯ ಗುಣಮಟ್ಟದ ಸ್ಥಿತಿ ಕೆಟ್ಟಾಗಿದ್ದು, ಆರೋಗ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗುವ ಸಾಧ್ಯತೆ ಇದೆ. ಅದಕ್ಕಾಗಿ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲು ತಜ್ಞರು ಸಲಹೆ ನೀಡಿದ್ದಾರೆ.

ಮಕ್ಕಳು, ವೃದ್ಧರು ಮತ್ತು ಉಸಿರಾಟದ ಸಮಸ್ಯೆಗಳಿರುವ ಜನರು ಹೊರಗೆ ಬರದಂತೆ ಎಚ್ಚರಿಕೆ ನೀಡಿದ್ದಾರೆ. ಆರೋಗ್ಯವಂತ ವ್ಯಕ್ತಿಗಳು ಗಂಟಲಿನಲ್ಲಿ ಕಿರಿಕಿರಿ ಅಥವಾ ಉಸಿರಾಟದ ತೊಂದರೆ ಅನುಭವಿಸಬಹುದು. ಹೆಚ್ಚಿನ ಸಂಚಾರ ಅಥವಾ ಹೆಚ್ಚಿನ ಮಾಲಿನ್ಯ ಪ್ರದೇಶಗಳಲ್ಲಿ ಹೋಗುವ ಮುನ್ನ N95 ಮಾಸ್ಕ್ ಬಳಸಿ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ:

ಬೆಂಗಳೂರು: 186

ಮಂಗಳೂರು: 140

ಮೈಸೂರು: 130

ಬೆಳಗಾವಿ: 156

ಕಲಬುರ್ಗಿ: 97

ಶಿವಮೊಗ್ಗ: 68

ಬಳ್ಳಾರಿ : 210

ಹುಬ್ಬಳ್ಳಿ : 112

ಉಡುಪಿ :108

ವಿಜಯಪುರ: 88

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೂರು ವರ್ಷ, ಐದು ದೊಡ್ಡ ಸಿನಿಮಾ; ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಹಬ್ಬ – Kannada News | Allu Arjun’s 5 Mega Films: Pushpa 3, Atlee, Vanga and More Revealed

ಪುಷ್ಪ ಚಿತ್ರದ ಮೂಲಕ ಜಾಗತಿಕ ಮನ್ನಣೆ ಗಳಿಸಿದ ಅಲ್ಲು ಅರ್ಜುನ್ (Allu Arjun) ಈಗ ತಮ್ಮ ಮುಂದಿನ ಯೋಜನೆಗಳನ್ನು ಬಹಳ ಎಚ್ಚರಿಕೆಯಿಂದ ಯೋಜಿಸುತ್ತಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಬರಲಿರುವ ಅವರ ಐದು ದೊಡ್ಡ ಚಿತ್ರಗಳ ವಿವರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿವೆ. ಬನ್ನಿ ತೆಲುಗಿನಲ್ಲಿ ಮಾತ್ರವಲ್ಲದೆ ಪ್ಯಾನ್-ವರ್ಲ್ಡ್ ಮಟ್ಟದಲ್ಲಿಯೂ ತಮ್ಮ ಶಕ್ತಿಯನ್ನು ತೋರಿಸಲು ಸಿದ್ಧರಾಗಿದ್ದಾರೆ. ಆ ಕ್ರೇಜಿ ಸಿನಿಮಾಗಳು ಯಾವುವು ಎಂದು ನೋಡೋಣ.

ಅಟ್ಲೀ ನಿರ್ದೇಶನದ ಸಿನಿಮಾ (AA22) : ಅಲ್ಲು ಅರ್ಜುನ್ ಪ್ರಸ್ತುತ ಕಾಲಿವುಡ್ ಸ್ಟಾರ್ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಬೃಹತ್ ಪ್ಯಾನ್-ವರ್ಲ್ಡ್ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ಸುಮಾರು 800 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸುತ್ತಿದೆ. ಈ ಚಿತ್ರದಲ್ಲಿ ಬನ್ನಿ ಹಿಂದೆಂದೂ ಕಾಣದ ರೀತಿಯಲ್ಲಿ ಲುಕ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಲಿವುಡ್ ತಂತ್ರಜ್ಞರ ಮಾರ್ಗದರ್ಶನದಲ್ಲಿ ಚಿತ್ರೀಕರಣಗೊಳ್ಳುತ್ತಿರುವ ‘ಅಂಡರ್‌ವಾಟರ್’ ದೃಶ್ಯ ಕೂಡ ಇರಲಿದೆ. ಈ ಚಿತ್ರ 2027 ರ ಬೇಸಿಗೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಸಂದೀಪ್ ರೆಡ್ಡಿ ವಂಗಾ ಜೊತೆ ವೈಲ್ಡ್ ಆಕ್ಷನ್: ‘ಅನಿಮಲ್’ ಚಿತ್ರದ ಮೂಲಕ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಸಂಚಲನ ಮೂಡಿಸಿದ ಸಂದೀಪ್ ರೆಡ್ಡಿ ವಂಗಾ ಅವರೊಂದಿಗೆ ಅಲ್ಲು ಅರ್ಜುನ್ ಒಂದು ಚಿತ್ರಕ್ಕೆ ಕಮಿಟ್ ಆಗಿದ್ದಾರೆ. ಅವರಿಬ್ಬರ ಸಂಯೋಜನೆಯ ಘೋಷಣೆಯಾದಾಗಿನಿಂದ, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆಗಳಿವೆ. ಪ್ರಸ್ತುತ, ಸಂದೀಪ್ ಪ್ರಭಾಸ್ ಜೊತೆ ‘ಸ್ಪಿರಿಟ್’ ಚಿತ್ರದ ಕೆಲಸದಲ್ಲಿ ನಿರತರಾಗಿದ್ದಾರೆ. ಅದು ಪೂರ್ಣಗೊಂಡ ತಕ್ಷಣ, 2027 ರ ಕೊನೆಯಲ್ಲಿ ಅಥವಾ 2028 ರಲ್ಲಿ ಬನ್ನಿ ಜೊತೆ ಒಂದು ಚಿತ್ರ ಬರುವ ಸಾಧ್ಯತೆಯಿದೆ.

ಪ್ರಶಾಂತ್ ನೀಲ್, ಬೋಯಪತಿ ಶ್ರೀನು: ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಅಲ್ಲು ಅರ್ಜುನ್ ಗಾಗಿ ಒಂದು ಪವರ್‌ಫುಲ್ ಸ್ಕ್ರಿಪ್ಟ್ ಸಿದ್ಧಪಡಿಸಿದ್ದಾರೆ ಎಂಬ ವರದಿಗಳಿವೆ. ಇವರಿಬ್ಬರ ಕಾಂಬೊದಲ್ಲಿನ ಚಿತ್ರವು ಹೈ ವೋಲ್ಟೇಜ್ ಆಕ್ಷನ್ ಡ್ರಾಮಾ ಆಗಲಿದೆ. ಅಲ್ಲದೆ, ‘ಸರೈನೋಡು’ ನಂತಹ ಬ್ಲಾಕ್‌ಬಸ್ಟರ್ ನಂತರ, ಬನ್ನಿ ಬೋಯಪತಿ ಶ್ರೀನು ಅವರೊಂದಿಗೆ ಮತ್ತೊಂದು ಮಾಸ್ ಎಂಟರ್‌ಟೈನರ್ ಮಾಡಲು ಸಿದ್ಧರಿದ್ದಾರೆ. ಈ ಚಿತ್ರ ಗೀತಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಬರುವ ಸಾಧ್ಯತೆಯಿದೆ.

ಇದನ್ನೂ ಓದಿ:  ‘ಧುರಂಧರ್’ ಚಿತ್ರವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್

ಪುಷ್ಪ 3 – ದಿ ರಾಂಪೇಜ್..: ಎಲ್ಲಕ್ಕಿಂತ ಹೆಚ್ಚಾಗಿ, ಅಭಿಮಾನಿಗಳು ‘ಪುಷ್ಪ 3’ ಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಪುಷ್ಪ 2 ರ ನಂತರ ಈ ಸರಣಿ ಕೊನೆಗೊಳ್ಳುವುದಿಲ್ಲ ಮತ್ತು ಭಾಗ 3 ಕೂಡ ಇರುತ್ತದೆ ಎಂದು ತಂಡದವರು ಈಗಾಗಲೇ ಸುಳಿವು ನೀಡಿದ್ದಾರೆ. ಈ ಚಿತ್ರವನ್ನು 2028ರ ವೇಳೆಗೆ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಸುಕುಮಾರ್ ಅವರ ದೂರದೃಷ್ಟಿಯ ಪ್ರಕಾರ, ಅಂತರರಾಷ್ಟ್ರೀಯ ಕಳ್ಳಸಾಗಣೆ ಸಂದರ್ಭದಲ್ಲಿ ಈ ಮೂರನೇ ಭಾಗವು ಇನ್ನೂ ದೊಡ್ಡದಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಂದೇ ಒಂದು ರನ್​​ನೊಂದಿಗೆ ವರ್ಲ್ಡ್​ ರೆಕಾರ್ಡ್ ಮುರಿದ ವಿರಾಟ್ ಕೊಹ್ಲಿ – Kannada News | Virat Kohli Breaks Sachin Tendulkar’s List A Record

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ (Virat Kohli) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

Source link