Headlines

Daily Devotional: ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಗೊತ್ತಾ ? – Kannada News | Daily Devotional: Rahu grastha Solar Eclipse: Understanding Its Impact and Remedies

ಬೆಂಗಳೂರು, ಫೆಬ್ರವರಿ​ 17: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದು ರಾಹುಗ್ರಸ್ತ ಸೂರ್ಯಗ್ರಹಣ, ಏನೇನು ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಇದು 2026ರ ಮೊದಲ ಗ್ರಹಣವಾಗಿದ್ದು, ಕುಂಭ ರಾಶಿಯ ಧನಿಷ್ಠಾ ನಕ್ಷತ್ರದ ನಾಲ್ಕನೇ ಪಾದದಲ್ಲಿ ನಡೆಯಲಿದೆ. ಇದನ್ನು “ರಿಂಗ್ ಆಫ್ ಫೈರ್” ಎಂದೂ ಕರೆಯಲಾಗುತ್ತದೆ. ಭಾರತದಲ್ಲಿ ಗೋಚರಿಸದಿದ್ದರೂ, ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಲ್ಲಿ ಗೋಚರಿಸಲಿದೆ. ಈ ಗ್ರಹಣದ ಸಮಯದಲ್ಲಿ ಐದು ಗ್ರಹಗಳು (ರವಿ, ಬುಧ, ಶುಕ್ರ, ರಾಹು, ಚಂದ್ರ) ಒಂದೇ ಮನೆಯಲ್ಲಿ ಇರುವುದು ವಿಶೇಷ….

Read More

ಸಲ್ಮಾನ್ ಖಾನ್​​ಗೆ ಇಷ್ಟ ಆಯ್ತು ಸಾನ್ವಿ ಸುದೀಪ್ ಕಂಠ; ಮೆಚ್ಚುಗೆ ಸೂಚಿಸಿದ ನಟ – Kannada News | Salman Khan Praises Sanvi Sudeep’s Mast Malaika Song from Mark Movie

ಕನ್ನಡದಲ್ಲಿ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆದ ‘ಮಾರ್ಕ್’ ಸಿನಿಮಾ ಸಾಕಷ್ಟು ಮೆಚ್ಚುಗೆ ಪಡೆಯಿತು. ಈ ಚಿತ್ರವವನ್ನು ಜನರು ಸಾಕಷ್ಟು ಕೊಂಡಾಡಿದರು. ಈ ಚಿತ್ರದ ‘ಮಸ್ತ್ ಮಲೈಕಾ’ (Mast Malaika) ಹಾಡನ್ನು ಅನೇಕರು ಬಹುವಾಗಿ ಇಷ್ಟಪಟ್ಟಿದ್ದಾರೆ. ಈ ಹಾಡಿನ ವಿಡಿಯೋ ಸಾಂಗ್ ಈವರೆಗೆ 33 ಮಿಲಿಯನ್ ಅಂದರೆ 3.3 ಕೋಟಿ ವೀಕ್ಷಣೆ ಕಂಡಿದೆ. ಸಾನ್ವಿ ಸುದೀಪ್ ಕಂಠದಲ್ಲಿ ಮೂಡಿಬಂದ ಈ ಹಾಡು ಬಾಲಿವುಡ್ ನಟ ಸಲ್ಮಾನ್ ಖಾನ್​​ಗೂ ಸಾಕಷ್ಟು ಇಷ್ಟ ಆಗಿದೆ. ಈ ಹಾಡಿನ ಬಗ್ಗೆ ಅವರು ಮೆಚ್ಚುಗೆ…

Read More

ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ – Kannada News | Tension in Chikkamagaluru After Stone Pelting on Hindu House; Bajrang Dal–SDPI Face Off Near Police Station

ಚಿಕ್ಕಮಗಳೂರು ಉದ್ವಿಗ್ನImage Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸದ್ಯ ಪ್ರಕರಣದ ತನಿಖೆಯನ್ನು…

Read More

Horoscope Today 17 February : ಇಂದು ಈ ರಾಶಿಯವರ ದಿಕ್ಕನ್ನು ಇನ್ನೊಬ್ಬರು ಬದಲಿಸುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಮಂಗಳವಾರ ಅಪರಿಚಿತರಿಂದ ಎಚ್ಚರಿಕೆ, ಕ್ರೀಡಾ ಮನೋಭಾವ, ಅನಾರೋಗ್ಯ ಉಲ್ಬಣ, ವರ್ಗಾವಣೆಯ ಆತಂಕ, ಅನಪೇಕ್ಷಿತ ಕಾರ್ಯ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 17ರ ದಿನಭವಿಷ್ಯ

ಮೂರು ಬೊಗಸೆ ಕರಿಎಳ್ಳು ಹಾಗೂ ಅದರ ಮೇಲೆ ಬೆಲ್ಲದ ಅಚ್ಚು ಹಾಗೂ ಇದನ್ನು ಒಂದು ನೀಲಿ ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಇದನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅಂತ ಕೊಡಿ. ಶತ್ರುಕಾಟದಿಂದ ಮುಕ್ತಿ ಸಿಗುತ್ತದೆ ಹಾಗೂ ಪ್ರಭಾವಿಗಳ ಬೆಂಬಲ ನಿಮಗೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಕುಟುಂಬದವರ ವಿಚಾರದಲ್ಲಿ ಹೆಚ್ಚು ಅರ್ಥ ಮಾಡಿಕೊಳ್ಳುವ ಸಮಯವನ್ನು ನೀಡಿ. ಅದರಲ್ಲೂ ವಿಶೇಷವಾಗಿ ಹಿರಿಯರ ಮಾತು ಕೇಳುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತವೆ. ಪ್ರೀತಿಯಲ್ಲಿ ಅನುಮಾನ-…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 17ರ ದಿನಭವಿಷ್ಯ

ಹರಿಯುವ ನೀರಿನಲ್ಲಿ ಬಾದಾಮಿ, ಒಣಹಣ್ಣು ಹಾಗೂ ಆರು ನಾಣ್ಯಗಳನ್ನು ಬಿಡುವುದರಿಂದ ವಿಳಂಬವಾದ ಕಾರ್ಯಗಳಿಗೆ ವೇಗ ದೊರೆಯುತ್ತದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳು ಬಾಕಿ ಉಳಿದಿದ್ದಲ್ಲಿ ಅದು ಪೂರ್ಣವಾಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹಣಕಾಸಿನ ಹರಿವಿಗೆ ಯಾವುದೇ ಅಭಾವ ಇರುವುದಿಲ್ಲ. ಆದರೆ ಅದನ್ನು ಉಳಿಸಿಕೊಳ್ಳುವುದೇ ಮುಖ್ಯ. ಕುಟುಂಬದಲ್ಲಿ ಯಾರಾದರೂ ನಿಮ್ಮ ಸಲಹೆ ಕೇಳಬಹುದು— ತರ್ಕಬದ್ಧವಾಗಿ ಆಲೋಚಿಸಿದ ನಂತರ ಮಾತನಾಡಿರಿ. ಪ್ರೀತಿಯಲ್ಲಿ ಅನುಮಾನ ಅಥವಾ ಶಂಕೆ ಬೇಡ;…

Read More

ಕೋರ್ಟ್ ತೀರ್ಪಿನ ಬಳಿಕ ಖಡಕ್ ನಿರ್ಧಾರ ತೆಗೆದುಕೊಂಡ ಯಶ್ ತಾಯಿ ಪುಷ್ಪಾ – Kannada News | Yash mother reaction after court order in Hassan property issue

‘ರಾಕಿಂಗ್ ಸ್ಟಾರ್’ ಯಶ್ (Yash) ಅವರ ತಾಯಿ ಹಾಸನದಲ್ಲಿ ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲು ಏರಿದ್ದರು. ಅಲ್ಲಿ ಅವರ ಪರವಾಗಿ ಆದೇಶ ಬಂದಿದೆ. ಆ ಬಳಿಕ ಅವರು ಮಾಧ್ಯಮದ ಎದುರು ಪ್ರತಿಕ್ರಿಯೆ ನೀಡಿದ್ದಾರೆ. ‘ನ್ಯಾಯಾಲಯ ನಮ್ಮ ಪರವಾಗಿ ಆದೇಶ ನೀಡಿದೆ ಅಂತ ನಾನು ಸುಮ್ಮನೆ ಇರಲ್ಲ. ಇದನ್ನು ನಾನು ಇಲ್ಲಿಗೆ ಬಿಡಲ್ಲ. ನಾನು ಕಷ್ಟಪಟ್ಟು ಕಟ್ಟಿದ ಮನೆಯಲ್ಲಿ ಒಡೆದಿದ್ದಾರೆ. ಅದರ ವಿರುದ್ಧ ಕ್ರಮ ತೆಗೆದುಕೊಳ್ಳಲೇ ಬೇಕು. ಇಂದಿನ ತನಕ ಜೆಸಿಬಿ ಸೀಜ್ ಆಗಿಲ್ಲ. ನನಗೆ ಅವಮಾನ…

Read More

ಪಂಚಾಯ್ತಿ ಡಿ ಗ್ರೂಪ್​ ನೌಕರ ಆತ್ಮಹತ್ಯೆ: ಸಹೋದರಿಯರ ಗಲಾಟೆಗೆ ಪ್ರಾಣ ಕಳೆದುಕೊಂಡ್ರಾ? – Kannada News | Koppal: GP D Group employee committed suicide by hanging himself

ಕೊಪ್ಪಳ, ಫೆಬ್ರವರಿ 16: ಗ್ರಾಮ ಪಂಚಾಯತ್​ ಡಿ ಗ್ರೂಪ್ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ ತಾಲೂಕಿನ ಜಮಲಾಪೂರ ಗ್ರಾಮದಲ್ಲಿ ನಡೆದಿದೆ. ರಮೇಶ್ ದಂಡಿನ (35) ಆತ್ಮಹತ್ಯೆ ಮಾಡಿರುವ ನೌಕರ. ಇಂದು ನಸುಕಿನ ಜಾವ ನೇಣುಬಿಗಿದುಕೊಂಡು ಗ್ರಾಮ ಪಂಚಾಯತ್​​ನಲ್ಲೇ ಸಾವಿಗೀಡಾಗಿದ್ದಾರೆ. ಸದ್ಯ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ  ರಮೇಶ್​ ವೈಯಕ್ತಿಕ ಕಾರಣದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆಸ್ತಿ ವಿಚಾರಕ್ಕೆ…

Read More

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ಸಿಸಿಟಿವಿ ವಿಡಿಯೋ ವೈರಲ್ – Kannada News | Rajasthan Bhiwadi chemical factory explosion Watch Viral CCTV footage

ಭಿವಾಡಿ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯ ರಾಸಾಯನಿಕ ಕಾರ್ಖಾನೆಯಲ್ಲಿ (Chemical Factory) ಸ್ಫೋಟ ಉಂಟಾಗಿ 8 ಕಾರ್ಮಿಕರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಅವರಲ್ಲಿ ಹಲವರು ಅಸ್ಥಿಪಂಜರಗಳಾಗಿ ಹೋಗಿದ್ದಾರೆ. ಅವರ ದೇಹದ ಭಾಗಗಳು ತುಂಡುಗಳಾಗಿ ಬಿದ್ದಿವೆ. 4 ಮಂದಿಯ ಸ್ಥಿತಿ ಗಂಭೀರವಾಗಿದೆ. ಇಲ್ಲಿ ಪಟಾಕಿಗಳನ್ನು ಅಕ್ರಮವಾಗಿ ತಯಾರಿಸಲಾಗುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಈ ಘಟನೆಯ ಮತ್ತೊಂದು ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More