Category Archives: Blog

Your blog category

ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ! – Kannada News | Danish Kaneria Slams Pakistan’s T20 World Cup 2026 boycott

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ನಡೆಯನ್ನು ಪಾಕ್​ನ ಮಾಜಿ ಆಟಗಾರ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಈ ಬಗ್ಗೆ ಖಾಸಗಿ ಚಾನೆಲ್​ ಜೊತೆ ಮಾತನಾಡಿರುವ ಅವರು, ಪಾಕ್​ನ ಈ ನಿರ್ಧಾರದಿಂದ ಎಲ್ಲರೂ ನಮ್ಮ ತಂಡ ಭಾರತದ ವಿರುದ್ಧ ಆಡಲು ಹೆದರುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ಇದೀಗ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಹೇಳುತ್ತಿದೆ. ಇದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕನೇರಿಯಾ ಹೇಳಿದ್ದಾರೆ.

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತೆಗೆದುಕೊಂಡಿರುವ ಈ ನಿರ್ಧಾರದಿಂದ, ಪಾಕಿಸ್ತಾನವು ಭಾರತವನ್ನು ಎದುರಿಸಲು ಹೆದರುತ್ತಿದೆ ಎಂದು ಜನರು ಭಾವಿಸುತ್ತಿದ್ದಾರೆ. ಅಂತಹದೊಂದು ಸಂದೇಶ ರವಾನೆ ಆಗುತ್ತಿದೆ. ಭಯದ ಕಾರಣದಿಂದಲೇ ಅವರು ಆಡಲು ನಿರಾಕರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಪಿಸಿಬಿ ತನ್ನ ನಿರ್ಧಾರವನ್ನು ಬದಲಿಸಬೇಕೆಂದು ದಾನಿಶ್ ಕನೇರಿಯಾ ಆಗ್ರಹಿಸಿದ್ದಾರೆ.

ಪಾಕ್ ಕ್ರಿಕೆಟ್ ಮಂಡಳಿಯು, ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿರುವ ಬಾಂಗ್ಲಾದೇಶ್​ಗೆ ಬೆಂಬಲವಾಗಿ ಪಂದ್ಯ ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡಿದೆ. ಇದರ ಬದಲು ಪಿಸಿಬಿ ತನ್ನದೇ ಆದ ಕ್ರಿಕೆಟ್ ಅಭಿವೃದ್ಧಿಗೆ ಆದ್ಯತೆ ನೀಡಬೇಕು.

ಹೀಗಾಗಿ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಕಣಕ್ಕಿಳಿಯಬೇಕು. ಬಹಿಷ್ಕಾರದಂತಹ ನಿರ್ಧಾರದಿಂದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಿಂದೆ ಸರಿಯಬೇಕು ಎಂದು ದಾನಿಶ್ ಕನೇರಿಯಾ ಆಗ್ರಹಿಸಿದ್ದಾರೆ.

ಬಹಿಷ್ಕಾರದಿಂದ ಯಾರಿಗೆ ಲಾಭ?

ಪಾಕಿಸ್ತಾನ್ ತಂಡವು ಪಂದ್ಯ ಬಹಿಷ್ಕರಿಸಿದರೆ ಭಾರತ ತಂಡಕ್ಕೆ ಸಂಪೂರ್ಣ 2 ಅಂಕಗಳು ದೊರೆಯಲಿದೆ. ಇದರಿಂದ ಪಾಕಿಸ್ತಾನ್ ತಂಡದ ನೆಟ್ ರನ್ ರೇಟ್ ಮೇಲೆ ಪರಿಣಾಮ ಬೀರಲಿದೆ. ಇದಾಗ್ಯೂ ಐಸಿಸಿ ಹಾಗೂ ಬಿಸಿಸಿಐ ಆದಾಯಕ್ಕೆ ಹೊಡೆತ ನೀಡುವ ಸಲುವಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪಂದ್ಯ ಬಹಿಷ್ಕರಿಸುವ ಬೆದರಿಕೆಯೊಡ್ಡಿದೆ.

ಇದನ್ನೂ ಓದಿ: 19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!

ಈ ಬೆದರಿಕೆ ಬೆನ್ನಲ್ಲೇ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಐಸಿಸಿ ಸೂಚಿಸಿದೆ. ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದರೆ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Source link

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್ ಖನ್ನಾ ಪಾತ್ರ ಸಾಯುತ್ತದೆ. ಹಾಗಾದರೆ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಹೇಗೆ ಇರಲು ಸಾಧ್ಯ? ಅದಕ್ಕೆ ಈಗ ಉತ್ತರ ಸಿಕ್ಕಿದೆ.

‘ಧುರಂಧರ್ 2’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರ ಪಾತ್ರ ಇರುತ್ತದೆ ಎಂಬುದು ಖಚಿತವಾಗಿದೆ. ಪಾಕಿಸ್ತಾನದ ಲಿಯಾರಿ ಪ್ರಾಂತ್ಯದ ಗ್ಯಾಂಗ್​ಸ್ಟರ್ ರೆಹಮಾನ್ ಡಕಾಯಿತ್ ಅಲಿಯಾಸ್ ರೆಹಮಾನ್ ಬಲೋಚ್ ಎಂಬ ಪಾತ್ರವನ್ನು ಅಕ್ಷಯ್ ಖನ್ನಾ ‘ಧುರಂಧರ್’ ಸಿನಿಮಾದಲ್ಲಿ ನಿಭಾಯಿಸಿದ್ದರು. ಕ್ಲೈಮ್ಯಾಕ್ಸ್​​ನಲ್ಲಿ ಆ ಪಾತ್ರ ಅಂತ್ಯವಾಗಿದ್ದರೂ ಕೂಡ ಈಗ ಸೀಕ್ವೆಲ್​​ನಲ್ಲಿ ಫ್ಲ್ಯಾಶ್​​ನಬ್ಯಾಕ್ ದೃಶ್ಯಗಳ ಮೂಲಕ ಮತ್ತೆ ಅವರನ್ನು ತೋರಿಸಲಾಗುವುದು.

ಇಂದು (ಫೆಬ್ರವರಿ 3) ‘ಧುರಂಧರ್ 2’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅಲ್ಲದೇ, ಟೀಸರ್ ಕೂಡ ರಿಲೀಸ್ ಆಗಲಿದೆ. ಇದನ್ನು ತಿಳಿಸಲು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಅದರಲ್ಲಿ ಚಿತ್ರತಂಡದ ಪ್ರಮುಖ ಕಲಾವಿದರು ಮತ್ತು ತಂತ್ರಜ್ಞರನ್ನು ಟ್ಯಾಗ್ ಮಾಡಲಾಗಿದೆ. ಅಕ್ಷಯ್ ಖನ್ನಾ ಅವರ ಹೆಸರನ್ನೂ ಕೂಡ ಹ್ಯಾಶ್​ಟ್ಯಾಗ್ ಮೂಲಕ ಪ್ರಸ್ತಾಪಿಸಲಾಗಿದೆ.

ಅಕ್ಷಯ್ ಖನ್ನಾ ಅವರು ‘ಧುರಂಧರ್ 2’ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದು ಖಚಿತ ಆದ್ದರಿಂದಲೇ ಅವರ ಹೆಸರನ್ನು ಈ ಪೋಸ್ಟ್​ನಲ್ಲಿ ಬರೆಯಲಾಗಿದೆ. ಇದರಿಂದ ಅಭಿಮಾನಿಗಳಿಗೆ ಖುಷಿ ಆಗಿದೆ. ಮಾರ್ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದೇ ದಿನ ‘ಟಾಕ್ಸಿಕ್’ ಕೂಡ ಬಿಡುಗಡೆ ಆಗಲಿದೆ. ಹಾಗಾಗಿ ಭಾರಿ ಪೈಪೋಟಿ ಏರ್ಪಡಲಿದೆ.

ಇದನ್ನೂ ಓದಿ: 2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ

2025ರ ಡಿಸೆಂಬರ್ 5ರಂದು ರಿಲೀಸ್ ಆಗಿದ್ದ ‘ಧರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದ್ದರಿಂದ ಸೀಕ್ವೆಲ್ ಮೇಲೆ ಬಹಳ ನಿರೀಕ್ಷೆ ಮನೆ ಮಾಡಿದೆ. ಆದಿತ್ಯ ಧಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:45 am, Tue, 3 February 26

Source link

‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ – Kannada News | Toxic vs Dhurandhar 2: Yash Film Faces Box Office Clash, Kannada Release Strategy

ಮಾರ್ಚ್ 19ರಂದು ಕನ್ನಡದ ‘ಟಾಕ್ಸಿಕ್’ (Toxic Movie) ಹಾಗೂ ಹಿಂದಿಯ ‘ಧುರಂಧರ್ 2’ ಮಧ್ಯೆ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡುತ್ತಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ತನ್ನನ್ನು ತಾನು ಸಾಬೀತು ಮಾಡಿಕೊಂಡಿದೆ. ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ, ‘ಧುರಂಧರ್ 2’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ಕಿರೋ ಹೈಪ್ ಕಡಿಮೆ ಏನು ಇಲ್ಲ. ಈ ಎಲ್ಲಾ ಕಾರಣದಿಂದ ಎರಡೂ ಸಿನಿಮಾಗಳಲ್ಲಿ ಯಾವುದು ಗೆಲ್ಲುತ್ತದೆ ಎಂಬ ಕುತೂಹಲ ಮೂಡಿದೆ. ಈಗ ‘ಟಾಕ್ಸಿಕ್’ ಚಿತ್ರಕ್ಕೆ ಸೆಡ್ಡು ಹೊಡೆಯಲು ‘ಧುರಂಧರ್’ ತಂಡ ದೊಡ್ಡ ಪ್ಲ್ಯಾನ್ ಮಾಡಿದೆ.

‘ಧುರಂಧರ್’ ಸಿನಿಮಾ ಥಿಯೇಟರ್​​​ನಲ್ಲಿ ರಿಲೀಸ್ ಆಗಿದ್ದು ಹಿಂದಿಯಲ್ಲಿ ಮಾತ್ರ. ಹಿಂದಿ ಭಾಷೆ ಅರ್ಥವಾಗದೇ ಇದ್ದವರು ಕೂಡ ತೆರಳಿ ಸಿನಿಮಾ ನೋಡಿದ್ದಾರೆ. ಆದರೆ, ಕೆಲವರು ಹಿಂದಿ ಬರುವುದಿಲ್ಲ ಎಂಬ ಕಾರಣದಿಂದಲೇ ಸಿನಿಮಾ ನೋಡದೇ ಇದ್ದಿರಬಹುದು. ಈ ಪ್ರೇಕ್ಷಕರನ್ನು ಸೆಳೆಯಲು ಒಟಿಟಿಯಲ್ಲಿ ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ‘ಧುರಂಧರ್’ ಪ್ರಸಾರ ಕಂಡಿತು. ಆದರೆ, ಕನ್ನಡ ವರ್ಷನ್ ಇಲ್ಲದೆ ಇರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈಗ ತಪ್ಪನ್ನು ತಿದ್ದಿಕೊಂಡಿದ್ದಾರೆ ನಿರ್ದೇಶಕ ಆದಿತ್ಯ ಧಾರ್.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಟೀಸರ್​​ನಲ್ಲಿ ಅಶ್ಲೀಲತೆ: ಸಿಬಿಎಫ್​​ಸಿ ಮುಖ್ಯಸ್ಥ ಹೇಳಿದ್ದೇನು?

‘ಟಾಕ್ಸಿಕ್’ ಸಿನಿಮಾ ಕನ್ನಡದಲ್ಲಿ ದೊಡ್ಡ ಮಾರುಕಟ್ಟೆ ಪಡೆದುಕೊಳ್ಳೋದು ಫಿಕ್ಸ್. ಇದರ ಜೊತೆಗೆ ಪರಭಾಷೆಯಲ್ಲೂ ಸಿನಿಮಾಗೆ ಸಾಕಷ್ಟು ಕ್ರೇಜ್ ಇದೆ. ಇದು ಎಲ್ಲಾ ರೀತಿಯಲ್ಲೂ ‘ಧುರಂದರ್’ ಚಿತ್ರಕ್ಕೆ ತೊಂದರೆ ತಂದೊಡ್ಡಬಹುದು. ಈಗ ‘ಧುರಂಧರ್ 2’ ಚಿತ್ರವನ್ನು ಕನ್ನಡದಲ್ಲೂ ರಿಲೀಸ್ ಮಾಡೋದಾಗಿ ನಿರ್ದೇಶಕ ಆದಿತ್ಯ ಧಾರ್ ತಿಳಿಸಿದ್ದಾರೆ. ‘ಟಾಕ್ಸಿಕ್’ ಚಿತ್ರಕ್ಕೆ ಸೆಡ್ಡು ಹೊಡೆದು, ಈ ಚಿತ್ರದ ಮಾರುಕಟ್ಟೆಯನ್ನು ಕನ್ನಡಕ್ಕೂ ವಿಸ್ತರಿಸೋ ಆಲೋಚನೆ ಅವರದ್ದು.

‘ಟಾಕ್ಸಿಕ್’ ಸಿನಿಮಾದ ಟೀಸರ್ ಸೃಷ್ಟಿಸಿದ ಸಂಚಲನ ತುಂಬಾನೇ ದೊಡ್ಡದು. ಈ ಚಿತ್ರದ ಟೀಸರ್ ಸಾಕಷ್ಟು ಸದ್ದು ಮಾಡಿತು. ಈಗ ‘ಧುರಂಧರ್ 2’ ಟೀಸರ್ ಯಾವ ರೀತಿಯಲ್ಲಿ ಗಮನ ಸೆಳೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:39 am, Tue, 3 February 26

Source link

ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ – Kannada News | Was CJ Roy the Second Vijay Mallya? Luxury Lifestyle, Financial Losses and other Revelations Behind his death

ಬೆಂಗಳೂರು, ಫೆಬ್ರವರಿ 3: ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ.

ಬ್ಯಾಂಕ್ ಸಾಲವಿಲ್ಲ: ಆದರೂ ನಷ್ಟ ಹೇಗೆ?

ಪೊಲೀಸ್ ಮೂಲಗಳ ಪ್ರಕಾರ, ಸಿಜೆ ರಾಯ್ ತಮ್ಮ ವ್ಯವಹಾರಕ್ಕಾಗಿ ಯಾವುದೇ ಬ್ಯಾಂಕ್ ಸಾಲ ಪಡೆದಿರಲಿಲ್ಲ. ಕರ್ನಾಟಕ, ಕೇರಳ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಅವರ ವ್ಯವಹಾರ ವಿಸ್ತಾರಗೊಂಡಿತ್ತು. ಆದರೆ ಹೊಸ ಪ್ರಾಜೆಕ್ಟ್‌ಗಳಿಗೆ ಬ್ಯಾಂಕ್ ಹಣದ ಬದಲು ಕೆಲವು ರಾಜಕಾರಣಿಗಳಿಂದಲೇ ಹೂಡಿಕೆ ಬಂದಿತ್ತು. ಆ ಹಣದಲ್ಲಿ ಬಹುಪಾಲು ಅಕ್ರಮ ಹಣ (ಬ್ಲ್ಯಾಕ್ ಮನಿ) ಆಗಿರಬಹುದೆಂಬ ಅನುಮಾನವೂ ತನಿಖಾ ಸಂಸ್ಥೆಗಳಿಗೆ ಮೂಡಿತ್ತು ಎನ್ನಲಾಗಿದೆ.

ಆದರೆ ರಾಯ್ ಕೈಗೊಂಡ ಹೊಸ ಯೋಜನೆಗಳು ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಇತ್ತ ಬಂದ ಆದಾಯದ ದೊಡ್ಡ ಭಾಗವನ್ನು ಅವರು ಐಷಾರಾಮಿ ಜೀವನಶೈಲಿಗೆ ಖರ್ಚು ಮಾಡುತ್ತಿದ್ದರು. ಪರಿಣಾಮವಾಗಿ ಹಣಕಾಸು ನಿರ್ವಹಣೆಯಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ರಾಜಕಾರಣಿಗಳಿಂದ ಹಣ ವಾಪಸ್ ಒತ್ತಡ, ಏಜೆನ್ಸಿಗಳ ತನಿಖೆಯಿಂದ ಕುಗ್ಗಿದ್ದ ಉದ್ಯಮಿ?

ಪ್ರಾಜೆಕ್ಟ್‌ಗಳು ನಷ್ಟಕ್ಕೆ ತಿರುಗುತ್ತಿದ್ದಂತೆಯೇ, ಹೂಡಿಕೆ ಮಾಡಿದ ಕೆಲ ರಾಜಕಾರಣಿಗಳು ಹಣ ವಾಪಸ್ ಕೇಳತೊಡಗಿದ್ದರು. ಇದರ ನಡುವೆ ಕೇಂದ್ರ ತನಿಖಾ ಸಂಸ್ಥೆಗಳು ಸಿಜೆರಾಯ್ ಅವರ ವ್ಯವಹಾರಗಳತ್ತ ಗಮನಹರಿಸಿದ್ದವು. ಬ್ಯಾಂಕ್ ಸಾಲವಿಲ್ಲದೆ ಇಷ್ಟು ದೊಡ್ಡ ಮಟ್ಟದ ವ್ಯವಹಾರಕ್ಕೆ ಹಣ ಎಲ್ಲಿಂದ ಬಂತು ಎಂಬ ಪ್ರಶ್ನೆಯೇ ತನಿಖೆಯ ಮೂಲವಾಗಿತ್ತು.

ಒಂದೆಡೆ ಹಣ ಹೂಡಿದವರ ಒತ್ತಡ, ಮತ್ತೊಂದೆಡೆ ಆದಾಯ ತೆರಿಗೆ ಹಾಗೂ ಇತರೆ ಏಜೆನ್ಸಿಗಳ ಪ್ರಶ್ನೆಗಳು, ಇವೆಲ್ಲದಕ್ಕೂ ಉತ್ತರ ನೀಡಲು ಸಾಧ್ಯವಾಗದೆ ಸಿಜೆ ರಾಯ್ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಮಾನಸಿಕ ಒತ್ತಡ ಹಾಗೂ ಖಿನ್ನತೆ

ಆರ್ಥಿಕವಾಗಿ ಸಂಪೂರ್ಣ ಕುಸಿತ ಕಂಡಿದ್ದ ರಾಯ್, ಮಾನಸಿಕವಾಗಿ ಕೂಡ ಕುಗ್ಗಿಹೋಗಿದ್ದರು. ಕಳೆದ ಕೆಲ ತಿಂಗಳುಗಳಿಂದ ತೀವ್ರ ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದರು. ತನಿಖೆಯಿಂದ ತಮ್ಮ ವ್ಯವಹಾರಗಳ ಎಲ್ಲಾ ಅಂಶಗಳು ಬಹಿರಂಗವಾಗುತ್ತವೆ ಎಂಬ ಭಯವೂ ಅವರನ್ನು ಕಾಡತೊಡಗಿತ್ತು. ಈ ಎಲ್ಲಾ ಒತ್ತಡಗಳು ಒಂದೇ ಸಮಯದಲ್ಲಿ ಎದುರಾದ ಪರಿಣಾಮ ಅವರು ಆತ್ಮಹತ್ಯೆಯ ಕಠಿಣ ನಿರ್ಧಾರಕ್ಕೆ ಬಂದಿರಬಹುದೆಂದು ಪೊಲೀಸ್ ಮೂಲಗಳು ಶಂಕಿಸಿವೆ.

ಇದನ್ನೂ ಓದಿ: ಸಿಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಸದ್ಯ, ಆತ್ಮಹತ್ಯೆ ಹಿಂದಿನ ನಿಖರ ಕಾರಣಗಳನ್ನು ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ – Kannada News | Stray Dogs Breach Security at Kempegowda International Airport Runway, Major Mishap Averted

ದೇವನಹಳ್ಳಿ, ಫೆಬ್ರವರಿ 3: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ರನ್‌ವೇ ಪ್ರದೇಶಕ್ಕೆ ಎರಡು ಬೀದಿ ನಾಯಿಗಳು ನುಗ್ಗಿದ್ದು, ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಮಾನಗಳ ಹಾರಾಟದ ಸಮಯದಲ್ಲೇ ಎರಡು ಬೀದಿ ನಾಯಿಗಳು ರನ್‌ವೇಗೆ ಪ್ರವೇಶಿಸಿದ್ದು, ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹರಸಾಹಸಪಟ್ಟು ಬೀದಿನಾಯಿಗಳನ್ನು ಸೆರೆಹಿಡಿದರು. ಅದೃಷ್ಟವಶಾತ್ ಆ ಸಮಯದಲ್ಲಿ ರನ್‌ವೇ ಮೇಲೆ ಯಾವುದೇ ವಿಮಾನಗಳು ಇರದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.

ಟರ್ಮಿನಲ್–2ಕ್ಕೆ ಸಂಬಂಧಿಸಿದ ಹೊಸ ರನ್‌ವೇ ಪ್ರದೇಶಕ್ಕೆ ನುಗ್ಗಿದ ಬೀದಿ ನಾಯಿಗಳು, ಅಲ್ಲಿದ್ದ ವಿಮಾನಗಳ ಸಮೀಪದಲ್ಲೇ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಇದರಿಂದ ಕೆಲ ಸಮಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು! – Kannada News | Pakistan keeper Khawaja Nafay makes foolish stumping error

ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಖ್ವಾಜಾ ನಫಾಯ್ ಮಾಡಿದ ಮೋಸದಾಟ ತಡವಾಗಿ ಬೆಳಕಿಗೆ ಬಂದಿದೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 207 ರನ್​ ಕಲೆಹಾಕಿದ್ದರು.

ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 13ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. 14ನೇ ಓವರ್​ನಲ್ಲಿ ದಾಳಿಗಿಳಿದ ಸ್ಪಿನ್ನರ್ ಮೊಹಮ್ಮದ್ ನವಾಝ್ 3ನೇ ಎಸೆತದಲ್ಲಿ ಜೋಶ್ ಫಿಲಿಪೆ ವಿಕೆಟ್ ಕಬಳಿಸಿದ್ದರು. ಇನ್ನು 5ನೇ ಎಸೆತದಲ್ಲಿ ಮುನ್ನುಗ್ಗಿ ಹೊಡೆಯಲು ಮುಂದಾದ ಕೂಪರ್ ಕೊನೊಲಿ ಸ್ಟಂಪ್ ಔಟ್ ಆಗಿ ಹೊರ ನಡೆದಿದ್ದರು.

ಆದರೆ ಇದು ನಾಟೌಟ್ ಆಗಿತ್ತು ಎಂಬುದು ಇದೀಗ ಬಹಿರಂಗವಾಗಿದೆ. ಏಕೆಂದರೆ ಪಾಕಿಸ್ತಾನ್ ವಿಕೆಟ್ ಕೀಪರ್ ತನ್ನ ಬಲಗೈನಲ್ಲಿ ಚೆಂಡನ್ನು ಹಿಡಿದು ಎಡಗೈನಲ್ಲಿ ಸ್ಟಂಪ್ ಔಟ್ ಮಾಡಿದ್ದರು. ಅಂದರೆ ಇಲ್ಲಿ ಚೆಂಡು ಹಾಗೂ ವಿಕೆಟ್​ಗೆ ಯಾವುದೇ ಕಾಂಟಾಕ್ಟ್ ಇರಲಿಲ್ಲ.

ಇದಾಗ್ಯೂ ಪಾಕಿಸ್ತಾನ್ ವಿಕೆಟ್ ಕೀಪರ್ ಖ್ವಾಜಾ ನಫಾಯ್ ಔಟ್ ಎಂದು ಸಂಭ್ರಮಿಸಿದ್ದರು. ಅಷ್ಟೇ ಅಲ್ಲದೆ ಫೀಲ್ಡ್ ಅಂಪೈರ್ ಹಾಗೂ ಮೂರನೇ ಅಂಪೈರ್ ಸಹ ಸ್ಟಂಪ್ ಔಟ್ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಇದೀಗ ಈ ಮಹಾ ಮೋಸದಾಟದ ವಿಡಿಯೋ ವೈರಲ್ ಆಗಿದ್ದು, ಅಂಪೈರ್ ಹಾಗೂ ಪಾಕ್ ಆಟಗಾರರ ಕಳ್ಳಾಟದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ 208 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 16.5 ಓವರ್​ಗಳಲ್ಲಿ 96 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪಾಕಿಸ್ತಾನ್ ತಂಡ 111 ರನ್​ಗಳ ಭರ್ಜರಿ ಜಯ ಸಾಧಿಸಿದೆ.

 

Source link

ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು – Kannada News | Ashwini Vaishnaw Hits Back With Data: Rs 7748 Crore Railway Allocation for Karnataka in Union Budget 2026 27

ಬೆಂಗಳೂರು, ಫೆಬ್ರವರಿ 3: ಕರ್ನಾಟಕದ (Karnataka) ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ 2026–27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) 7,748 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನೀಡಿರುವುದು ದಾಖಲೆ ಮಟ್ಟದ ಬಜೆಟ್ ಆಗಿದ್ದು, ಕರ್ನಾಟಕದಲ್ಲಿ ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಿದೆ ಎಂದರು. ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 52,950 ಕೋಟಿ ರೂ. ಮೌಲ್ಯದ ರೈಲ್ವೆ ಯೋಜನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ. ಈ ಯೋಜನೆಗಳಲ್ಲಿ ಹೊಸ ರೈಲು ಹಳಿಗಳ ನಿರ್ಮಾಣ, ನಿಲ್ದಾಣಗಳ ಸಮಗ್ರ ಪುನರಾಭಿವೃದ್ಧಿ, ಹಾಗೂ ಪ್ರಮುಖ ಸುರಕ್ಷತಾ ನವೀಕರಣಗಳು ಸೇರಿವೆ ಎಂದು ವೈಷ್ಣವ್ ವಿವರಿಸಿದರು.

ಹೈಸ್ಪೀಡ್ ರೈಲಿನಿಂದ ಬೆಂಗಳೂರು–ಚೆನ್ನೈ ಪ್ರಯಾಣಕ್ಕೆ ಸಾಕು ಒಂದು ಗಂಟೆ!

ಬಜೆಟ್‌ನಲ್ಲಿ ಘೋಷಿಸಲಾದ ಬೆಂಗಳೂರು–ಚೆನ್ನೈ ಹಾಗೂ ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಕಾರಿಡಾರ್‌ಗಳು ಬೆಂಗಳೂರಿನ ಜನಜೀವನದಲ್ಲಿ ದೊಡ್ಡ ಬದಲಾವಣೆ ತರಲಿವೆ ಎಂದು ರೈಲ್ವೆ ಸಚಿವರು ಹೇಳಿದರು.
ಬೆಂಗಳೂರು–ಚೆನ್ನೈ ನಡುವಿನ ಪ್ರಯಾಣದ ಸಮಯ ಕೇವಲ 1 ಗಂಟೆ 13 ನಿಮಿಷಗಳಿಗೆ ಇಳಿಯಲಿದ್ದು, ಬೆಂಗಳೂರು–ಹೈದರಾಬಾದ್ ಪ್ರಯಾಣ ಕೇವಲ 2 ಗಂಟೆಗಳಲ್ಲಿ ಸಾಧ್ಯವಾಗಲಿದೆ. ಇದರಿಂದ ಉತ್ಪಾದನೆ, ವಿನ್ಯಾಸ ಮತ್ತು ಐಟಿ ಸೇವೆಗಳ ವೃದ್ಧಿಗೆ ದೊಡ್ಡ ಮಟ್ಟದಲ್ಲಿ ಸಹಕಾರವಾಗಲಿದೆ ಎಂದರು.

ಅಮೃತ್ ನಿಲ್ದಾಣ ಯೋಜನೆ: ಕರ್ನಾಟಕದ 61 ನಿಲ್ದಾಣಗಳ ಪುನರಾಭಿವೃದ್ಧಿ

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿಯಲ್ಲಿ ರಾಜ್ಯದ 61 ರೈಲು ನಿಲ್ದಾಣಗಳನ್ನು 2,110 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ಪುನರಾಭಿವೃದ್ಧಿ ಮಾಡಲು ಗುರುತಿಸಲಾಗಿದೆ. ಇವುಗಳಲ್ಲಿ ಬಾಗಲಕೋಟೆ, ಧಾರವಾಡ, ಗದಗ, ಗೋಕಾಕ್ ರಸ್ತೆ ಹಾಗೂ ಮುನಿರಾಬಾದ್ ನಿಲ್ದಾಣಗಳ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಬಾದಾಮಿ, ಅಳ್ನಾವರ, ಕೊಪ್ಪಳ ಮತ್ತು ಬಂಟ್ವಾಳ ನಿಲ್ದಾಣಗಳು ಉದ್ಘಾಟನೆಗಾಗಿ ಸಿದ್ಧವಾಗಿವೆ.

ಕರ್ನಾಟಕದ ರೈಲ್ವೆ ಜಾಲದಲ್ಲಿ ಭಾರೀ ವಿಸ್ತರಣೆ

2014ರಿಂದ ಈವರೆಗೆ ರಾಜ್ಯದಲ್ಲಿ ಸುಮಾರು 1,750 ಕಿಲೋಮೀಟರ್ ಹೊಸ ರೈಲು ಹಳಿಗಳನ್ನು ನಿರ್ಮಿಸಲಾಗಿದೆ. ರಾಜ್ಯದ ಒಟ್ಟು ರೈಲ್ವೆ ಜಾಲದಲ್ಲಿ 3,368 ರೂಟ್ ಕಿಲೋಮೀಟರ್‌ಗಳಷ್ಟು (ಸುಮಾರು 97%) ಮಾರ್ಗಗಳನ್ನು ವಿದ್ಯುದ್ದೀಕರಣಗೊಳಿಸಲಾಗಿದೆ. ಜೊತೆಗೆ 707 ಫ್ಲೈಓವರ್‌ಗಳು ಹಾಗೂ ಅಂಡರ್‌ಪಾಸ್‌ಗಳನ್ನು ನಿರ್ಮಿಸಲಾಗಿದೆ.

ಬೆಂಗಳೂರು-ಮೈಸೂರು ಮಾರ್ಗದಲ್ಲಿ ಆಟೋಮ್ಯಾಟಿಕ್ ಸಿಗ್ನಲ್

138 ಕಿಮೀ ಉದ್ದದ ಕೆಎಸ್‌ಆರ್ ಬೆಂಗಳೂರು–ಮೈಸೂರು ಮಾರ್ಗದಲ್ಲಿ 72.76 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಸಿಗ್ನಲ್ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಈ ಯೋಜನೆಗೆ 2025ರ ಡಿಸೆಂಬರ್ 9 ರಂದು ಸ್ವೀಕೃತಿ ಪತ್ರ ನೀಡಲಾಗಿದೆ.

ಹೊಸ ಮಾರ್ಗಗಳು, ಜೋಡಿ ಹಳಿಗಳಿಗೆ ಸಾವಿರಾರು ಕೋಟಿ ಕೊಡುಗೆ

ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ 3,085 ಕೋಟಿ ರೂ. ಹಾಗೂ ಜೋಡಿ ಹಳಿಗಳ ನಿರ್ಮಾಣಕ್ಕೆ 1,534 ಕೋಟಿ ರೂ. ಮೊತ್ತವನ್ನು ಹಂಚಿಕೆ ಮಾಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಿ. ಸೋಮಣ್ಣ ಟೀಕಿಸಿದ್ದಾರೆ. ಅವರು ಕ್ಷುಲ್ಲಕ ರಾಜಕೀಯ ಮಾಡುವುದು ಬಿಟ್ಟು ಅಭಿವೃದ್ಧಿ ಕೆಲಸಗಳತ್ತ ಗಮನಹರಿಸಬೇಕು. ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಮನ್ವಯದಿಂದ ಕೆಲಸ ಮಾಡಿದರೆ ಕರ್ನಾಟಕಕ್ಕೆ ಇನ್ನಷ್ಟು ಲಾಭವಾಗಲಿದೆ ಎಂದು ಸೋಮಣ್ಣ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ! – Kannada News | Karnataka Price Hike: Rice, Dal, Chili Costs,check new price

ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್

ಬೆಂಗಳೂರು, ಫೆಬ್ರುವರಿ 03: ಈಗಾಗಲೇ ರಾಜ್ಯದಲ್ಲಿ ತರಕಾರಿ, ಹಣ್ಣು, ಚಿನ್ನ, ಬೆಳ್ಳಿ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸರಗೊಂಡಿದ್ದಾರೆ. ಈಗ ದಿನನಿತ್ಯದ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಮೆಣಸಿನಕಾಯಿ ಬೆಲೆಯಲ್ಲಿ ಹೆಚ್ಚಳವಾಗಿರುವುದು (Price Hike) ಜನಸಾಮಾನ್ಯರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಬ್ಯಾಡಗಿ ಮೆಣಸಿನ ಕಾಯಿ, ಸೋನಾ ಮಸೂರಿ ಅಕ್ಕಿ ಸೇರಿ ಹಲವು ಬೇಳೆ, ಕಾಳುಗಳ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ.

ಆದಾಯ ಬರುವ ಮುನ್ನವೇ ರೈತರಿಕೆ ಆತಂಕ

ಪ್ರಮುಖವಾಗಿ ಬೇರೆ ಬೇರೆ ದೇಶಗಳಿಗೆ ಅಕ್ಕಿ ರಫ್ತು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಅಕ್ಕಿಯ ಬೆಲೆ ಕೆ.ಜಿ.ಗೆ 5–6 ರೂಪಾಯಿ ಏರಿಕೆಯಾಗಿದೆ. ಕಡಲೆಬೀಜ, ಮೆಣಸಿನಕಾಯಿ ಇಳುವಳಿಯಲ್ಲಿ ಇಳಿಕೆಯಾಗದ ಕಾರಣ ಬೆಲೆ 50 ರೂಪಾಯಿ ಎತ್ತರಕ್ಕೆ ತಲುಪಿದೆ. ಇತರ ಬೇಳೆ, ಕಾಳುಗಳ ಬೆಲೆಯೂ 10–20 ರೂಪಾಯಿ ಏರಿಕೆಯಾಗಿದೆ. ಬೇಸಿಗೆ ಇನ್ನೂ ಆರಂಭವಾಗಿಲ್ಲ, ಈಗಲೇ ಬೆಲೆ ತಾರಕಕ್ಕೇರಿರುವುದರಿಂದ ಸಾಮಾನ್ಯ ಜನರ ಜೀವನ ಖರ್ಚಿಗೆ ಮತ್ತೊಂದು ಹೊಡೆತವಾಗಿದೆ.

ಕೆ.ಜಿಗೆ ದವಸ-ಧಾನ್ಯಗಳ ಬೆಲೆಯೇರಿಕೆಯ ಪಟ್ಟಿ ಇಲ್ಲಿದೆ

ಒಟ್ಟಾರೆ ಹೊಸ ಬೆಳೆ ಬರುವವರೆಗೂ ಈ ಬೆಲೆ ಏರಿಕೆ ಮುಂದುವರೆಯಲ್ಲಿದ್ದು, ಜನಸಾಮಾನ್ಯರ ಜೇಬು ಸುಡಲಿದೆ.

ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು – Kannada News | If Kichcha Sudeep Know Abou Chakravarthy Chandrachud he will not Allow him to stay Say K Manju

ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿ ಇದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ ಆಗಿದೆ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳಲ್ಲ’ ಎಂದಿದ್ದಾರೆ ಮಂಜು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..! – Kannada News | Team India’s Head To Head Record With T20 World Cup 2026 Teams

ಇನ್ನು ಐರ್ಲೆಂಡ್ ವಿರುದ್ಧ 8 ಪಂದ್ಯಗಳಲ್ಲಿ ಮತ್ತು, ನೇಪಾಳ, ನೆದರ್​ಲೆಂಡ್ಸ್, ಯುಎಸ್​ಎ ಮತ್ತು ಸ್ಕಾಟ್ಲೆಂಡ್ ವಿರುದ್ಧ ಆಡಿದ ತಲಾ ಒಂದೊಂದು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಾಗ್ಯೂ ಭಾರತ ತಂಡ ಗೆಲ್ಲದಿರುವುದು ಇಟಲಿ ಮತ್ತು ಕೆನಡಾ ವಿರುದ್ಧ ಮಾತ್ರ. ಈ ಎರಡು ತಂಡಗಳ ವಿರುದ್ಧ ಭಾರತ ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಗೆಲುವಿನ ಖಾತೆ ತೆರೆಯಲು ಅವಕಾಶ ಸಿಕ್ಕಿಲ್ಲ. ಇದಾಗ್ಯೂ ಈ ಬಾರಿಯ ವಿಶ್ವಕಪ್​ನ ದ್ವಿತೀಯ ಸುತ್ತಿನಲ್ಲಿ ಕೆನಡಾ ಮತ್ತು ಇಟಲಿ ತಂಡವನ್ನು ಎದುರಿಸುವ ಅವಕಾಶ ಟೀಮ್ ಇಂಡಿಯಾಗೆ ಸಿಗಲಿದೆಯಾ ಕಾದು ನೋಡಬೇಕಿದೆ.

Source link