Category Archives: Blog

Your blog category

ದೆಹಲಿಯಿಂದ ಬಂಗಾಳಕ್ಕೆ ಬುಲೆಟ್ ರೈಲು ಯೋಜನೆ ಘೋಷಿಸಿದ ಕೇಂದ್ರ – Kannada News

ಕೋಲ್ಕತ್ತಾ, ಜೂನ್ 07: ಭಾರತೀಯ ರೈಲ್ವೆ ವಲಯದಲ್ಲಿ ಹೊಸ ಕ್ರಾಂತಿ ಹಾಗೂ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪಶ್ಚಿಮ ಬಂಗಾಳಕ್ಕೆ ಅತ್ಯಂತ ಐತಿಹಾಸಿಕ ಮತ್ತು ಭರವಸೆಯ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಮುಂಬೈ-ಅಹಮದಾಬಾದ್ ಕಾರಿಡಾರ್ ಯಶಸ್ಸಿನ ನಂತರ, ದೇಶದ ಎರಡನೇ ಅತ್ಯಾಧುನಿಕ ಬುಲೆಟ್ ರೈಲು(Bullet Train) ಯೋಜನೆಯು ದೆಹಲಿ ಮತ್ತು ಪಶ್ಚಿಮ ಬಂಗಾಳದ ಸಿಲಿಗುರಿ ನಡುವೆ ಚಲಿಸಲಿದೆ ಎಂದು ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಈ ಮಹತ್ವಾಕಾಂಕ್ಷೆಯ ಯೋಜನೆಯು ಉತ್ತರ ಭಾರತವನ್ನು ಈಶಾನ್ಯ ಭಾರತದೊಂದಿಗೆ ಅತ್ಯಂತ ವೇಗವಾಗಿ ಜೋಡಿಸಲಿದ್ದು, ಬಂಗಾಳದ ರೈಲ್ವೆ ಯೋಜನೆಗಳಿಗಾಗಿ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಹೂಡಿಕೆ ಮಾಡಲಾಗುತ್ತಿದೆ. ಈ ರೈಲು ಲಕ್ನೋ, ವಾರಾಣಸಿ ಮತ್ತು ಪಾಟ್ನಾ ಮೂಲಕ ಪಶ್ಚಿಮ ಬಂಗಾಳವನ್ನು ಸಂಪರ್ಕಿಸುತ್ತದೆ.

ಕೇವಲ 6 ಗಂಟೆಗಳಲ್ಲಿ 1,500 ಕಿಲೋಮೀಟರ್ ಪ್ರಯಾಣ
ಪ್ರಸ್ತುತ ದೆಹಲಿಯಿಂದ ಸಿಲಿಗುರಿಗೆ ರಾಜಧಾನಿ ಅಥವಾ ಡುರೊಂಟೊ ಎಕ್ಸ್‌ಪ್ರೆಸ್ ರೈಲುಗಳ ಮೂಲಕ ಪ್ರಯಾಣಿಸಲು ಸುಮಾರು 18 ರಿಂದ 20 ಗಂಟೆಗಳ ಸುದೀರ್ಘ ಸಮಯ ಬೇಕಾಗುತ್ತದೆ. ಆದರೆ, ಗಂಟೆಗೆ 250 ರಿಂದ300ಕಿಲೋಮೀಟರ್ ವೇಗದಲ್ಲಿ ಚಲಿಸುವ ಈ ನೂತನ ಬುಲೆಟ್ ರೈಲು ಕಾರಿಡಾರ್ ಪೂರ್ಣಗೊಂಡ ನಂತರ ಈ ಇಡೀ ಪ್ರಯಾಣದ ಸಮಯ ಕೇವಲ ೬ ಗಂಟೆಗಳಿಗೆ ಕುಸಿಯಲಿದೆ!

ಪ್ರಮುಖ ನಗರಗಳ ಮಹಾ ಸಮ್ಮಿಲನ: ಈ ಬುಲೆಟ್ ರೈಲು ನವದೆಹಲಿಯಿಂದ ಪ್ರಾರಂಭವಾಗಿ ನೋಯ್ಡಾದ ಜೇವರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಥುರಾ, ಆಗ್ರಾ, ಇಟಾವಾ, ಲಕ್ನೋ, ಪ್ರಯಾಗ್‌ರಾಜ್, ವಾರಾಣಸಿ, ಘಾಜಿಪುರ, ಪಾಟ್ನಾ ಮೂಲಕ ಸಾಗಿ ಸಿಲಿಗುರಿಯ ನ್ಯೂ ಜಲ್ಪೈಗುರಿಯನ್ನು ತಲುಪಲಿದೆ.

ಈ ಕಾರಿಡಾರ್ ಮೂಲಕ ದೆಹಲಿಯಿಂದ ಸಾಂಸ್ಕೃತಿಕ ನಗರಿ ವಾರಣಾಸಿಗೆ ಕೇವಲ3.5 ಗಂಟೆಗಳಲ್ಲಿ ಮತ್ತು ವಾರಣಾಸಿಯಿಂದ ಸಿಲಿಗುರಿಗೆ 3ಗಂಟೆಗಿಂತ ಕಡಿಮೆ ಅವಧಿಯಲ್ಲಿ ತಲುಪಬಹುದಾಗಿದೆ. ಭವಿಷ್ಯದಲ್ಲಿ ಈ ಮಾರ್ಗವನ್ನು ಅಸ್ಸಾಂನ ಗುವಾಹಟಿಗೂ ವಿಸ್ತರಿಸುವ ಅದ್ಭುತ ಯೋಜನೆ ಇದೆ.

ಸಿಲಿಗುರಿಯು ಭಾರತದ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ತಂತ್ರಜ್ಞಾನ ವಲಯವಾದ ‘ಚಿಕನ್ ನೆಕ್’ ಕಾರಿಡಾರ್ ಅನ್ನು ಒಳಗೊಂಡಿದೆ, ಇದು ಈಶಾನ್ಯ ರಾಜ್ಯಗಳನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಹೆಬ್ಬಾಗಿಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಬಹುಮುಖಿ ಲಾಭಗಳು: ಈ ಹೈ-ಸ್ಪೀಡ್ ರೈಲು ಜಾಲವು ಉತ್ತರ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ಮುಕ್ತ ವ್ಯಾಪಾರ ಮತ್ತು ಲಾಜಿಸ್ಟಿಕ್ಸ್ ವ್ಯವಸ್ಥೆಯನ್ನು ಗಣನೀಯವಾಗಿ ಸುಧಾರಿಸಲಿದೆ. ಜೊತೆಗೆ, ಗಡಿ ಭಾಗಗಳಲ್ಲಿ ಭಾರತೀಯ ಸೇನೆಯ ಮಿಲಿಟರಿ ಚಲನವಲನಗಳನ್ನು ಅತ್ಯಂತ ವೇಗವಾಗಿ ಮತ್ತು ಸುಲಭಗೊಳಿಸಲು ಇದು ದೇಶಕ್ಕೆ ರಕ್ಷಣಾತ್ಮಕವಾಗಿ ದೊಡ್ಡ ಶಕ್ತಿಯನ್ನು ನೀಡಲಿದೆ.

ಬಂಗಾಳದ ಅಭಿವೃದ್ಧಿಗೆ ಭರಪೂರ ನಿಧಿ ಹಂಚಿಕೆ
ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಸಾರಿಗೆ ವ್ಯವಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸಂಪೂರ್ಣ ಬದ್ಧವಾಗಿದೆ. ಈ ಹಿಂದೆ ಬಂಗಾಳಕ್ಕೆ ರೈಲ್ವೆಯಿಂದ ಕೇವಲ 4,000 ಕೋಟಿ ಸಿಗುತ್ತಿತ್ತು, ಆದರೆ ಪ್ರಸ್ತುತ ಎನ್‌ಡಿಎ (NDA) ಸರ್ಕಾರದ ಅಡಿಯಲ್ಲಿ 2026-27ರ ಸಾಲಿಗೆ ದಾಖಲೆಯ 14,205 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.

ಕೋಲ್ಕತ್ತಾ ಮೆಟ್ರೋಗೆ 60 ಅತ್ಯಾಧುನಿಕ ‘ನೆಕ್ಸ್ಟ್ ಜನರೇಷನ್’ ರೈಲುಗಳನ್ನು ಪರಿಚಯಿಸಲಾಗುತ್ತಿದ್ದು, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 100 ಕ್ಕೂ ಹೆಚ್ಚು ರೈಲ್ವೆ ಯೋಜನೆಗಳಿಗೆ ಹೊಸ ಉತ್ತೇಜನ ನೀಡಲಾಗುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಈ ಎಲ್ಲಾ ರೈಲು ಯೋಜನೆಗಳಿಗೆ ಆರಂಭಿಕ ಅನುಮೋದನೆ ಸೇರಿದಂತೆ ರಾಜ್ಯ ಸರ್ಕಾರದ ಕಡೆಯಿಂದ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ.

ಉತ್ತರ ಭಾರತದ ಜನನಿಬಿಡ ರಾಜ್ಯಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಚಿಕನ್ ನೆಕ್ ಪ್ರದೇಶದ ಕಠಿಣ ಭೂಪ್ರದೇಶ, ಭಾರೀ ಮಳೆಯಂತಹ ಪರಿಸ್ಥಿತಿಗಳಲ್ಲಿ ಹಳಿಗಳನ್ನು ಹಾಕುವುದು ಅತ್ಯಂತ ಸವಾಲಿನ ಕೆಲಸವಾಗಿದೆ. ಆದರೆ, ಭಾರತೀಯ ರೈಲ್ವೆಯ ತಾಂತ್ರಿಕ ತಜ್ಞರು ಮತ್ತು ಎಂಜಿನಿಯರ್‌ಗಳು ಆಧುನಿಕ ತಂತ್ರಜ್ಞಾನದ ಮೂಲಕ ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಭದ್ರವಾದ ವಿನ್ಯಾಸಗಳನ್ನು ಸಿದ್ಧಪಡಿಸುತ್ತಿದ್ದಾರೆ.

ದೆಹಲಿ ಮತ್ತು ವಾರಾಣಸಿಯಲ್ಲಿ ಭೂಸ್ವಾಧೀನ ಕಾರ್ಯವು ಶೀಘ್ರದಲ್ಲೇ ಅತ್ಯಂತ ವೇಗವಾಗಿ ಪ್ರಾರಂಭವಾಗಲಿದ್ದು, 2028 ರಲ್ಲಿ ಈ ಯೋಜನೆಯ ಭೂಮಿ ಪೂಜೆ ನೆರವೇರಲಿದೆ. ಈ ಬುಲೆಟ್ ರೈಲು ಭಾರತದ ಇತಿಹಾಸದಲ್ಲಿ ಪ್ರಗತಿ ಮತ್ತು ಆಧುನಿಕತೆಯ ಹೊಸ ಶಕೆಯನ್ನು ಬರೆಯುವುದು ನಿಶ್ಚಿತವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ.. – Kannada News

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ, ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಯಾವ ರೀತಿ ಅಪ್​ಲೋಡ್ ಮಾಡಬೇಕು ಎಂಬುದನ್ನು ಈ ವಿಡಿಯೋದಲ್ಲಿ ಹಂತ ಹಂತವಾಗಿ ವಿವರಿಸಲಾಗಿದೆ. ಈ ಆಡಿಷನ್ ಮೂಲಕ ಆಯ್ಕೆ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಚಾನ್ಸ್ ಸಿಗಲಿದೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಕಿಚ್ಚ ಸುದೀಪ್ ಅವರೇ ಈ ಸಲ ಕೂಡ ಬಿಗ್ ಬಾಸ್ ಶೋ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬರೀ ಸಿಕ್ಸ್ ಸಿಕ್ಸ್ ಸಿಕ್ಸ್​… ಐಪಿಎಲ್ ಬಗ್ಗೆ ಲಿವಿಂಗ್‌ಸ್ಟೋನ್ ಅಸಮಾಧಾನ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​​ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಇದೀಗ ಐಪಿಎಲ್ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ‘ಸ್ಟಿಕ್ ಟು ಕ್ರಿಕೆಟ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿರುವ ಅವರು, ಐಪಿಎಲ್ ಸಂಪೂರ್ಣವಾಗಿ ಬ್ಯಾಟರ್‌ಗಳ ಆಟವಾಗಿ ಬದಲಾಗಿದ್ದು, ಬೌಲರ್‌ಗಳಿಗೆ ಯಾವುದೇ ಗೌರವ ಇಲ್ಲದಂತಾಗಿದೆ ಎಂದು ಮುಕ್ತವಾಗಿ ಹೇಳಿಕೆ ನೀಡಿದ್ದಾರೆ.

ಬರೀ ಸಿಕ್ಸ್ ಸಿಕ್ಸ್​:

ಪಂದ್ಯಾವಳಿಯಲ್ಲಿ ಕೇವಲ ರನ್‌ಗಳ ಮಳೆ ಹರಿಸುವುದನ್ನೇ ಗುರಿಯಾಗಿಸಿಕೊಂಡಿರುವುದರ ಬಗ್ಗೆ ಲಿವಿಂಗ್‌ಸ್ಟೋನ್ ಬೇಸರ ವ್ಯಕ್ತಪಡಿಸಿದ್ದಾರೆ. “ಬ್ಯಾಟರ್‌ಗಳು ಕೇವಲ 6, 6, 6 ಎಂದು ಸಿಕ್ಸರ್‌ಗಳನ್ನು ಹೊಡೆಯುತ್ತಿರುವುದನ್ನು ನೋಡುವುದು ಈಗ ನಿಜಕ್ಕೂ ಬೋರಿಂಗ್ ಅನಿಸುತ್ತಿದೆ. ಇದರಲ್ಲಿ ಕ್ರಿಕೆಟ್‌ನ ನೈಜ ಮಜಾ ಸಿಗುತ್ತಿಲ್ಲ”.

“ಪಿಚ್‌ಗಳು ಸಂಪೂರ್ಣವಾಗಿ ಬ್ಯಾಟಿಂಗ್‌ಗೆ ಪೂರಕವಾಗಿ , ಅಂದರೆ ಫ್ಲಾಟ್ ಆಗಿ ಇರುವುದರಿಂದ ಬ್ಯಾಟರ್‌ಗಳಿಗೆ ರನ್ ಗಳಿಸುವುದು ತುಂಬಾ ಸುಲಭವಾಗಿದೆ. ಬೌಲರ್‌ಗಳು ಎಷ್ಟೇ ಉತ್ತಮವಾಗಿ ಬೌಲಿಂಗ್ ಮಾಡಿದರೂ ರನ್ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಪಂದ್ಯದಲ್ಲಿ ಕೌಶಲ್ಯಕ್ಕಿಂತ ಹೆಚ್ಚಾಗಿ ಕೇವಲ ಬಲಪ್ರಯೋಗಕ್ಕೆ ಮಾತ್ರ ಪ್ರಾಮುಖ್ಯತೆ ಸಿಗುತ್ತಿದೆ” ಎಂದು ಲಿಯಾಮ್ ಲಿವಿಂಗ್‌ಸ್ಟೋನ್ ಅಭಿಪ್ರಾಯಪಟ್ಟಿದ್ದಾರೆ.

‘ಇಂಪ್ಯಾಕ್ಟ್ ಪ್ಲೇಯರ್’ ಅಸಮತೋಲನ:

ಐಪಿಎಲ್‌ನಲ್ಲಿ ಜಾರಿಯಲ್ಲಿರುವ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವು ಬ್ಯಾಟರ್‌ಗಳಿಗೆ ಮತ್ತಷ್ಟು ಲಗಾಮಿಲ್ಲದ ಸ್ವಾತಂತ್ರ್ಯ ನೀಡಿದೆ ಎಂದು ಲಿಯಾಮ್ ಲಿವಿಂಗ್‌ಸ್ಟೋನ್ ಆರೋಪಿಸಿದ್ದಾರೆ. ಈ ನಿಯಮದಿಂದಾಗಿ ತಂಡದ ಬ್ಯಾಟಿಂಗ್ ಲೈನಪ್ ದೊಡ್ಡದಾಗುತ್ತದೆ. ಹೀಗಾಗಿ ವಿಕೆಟ್ ಉರುಳುವ ಭಯವಿಲ್ಲದೆ ಬ್ಯಾಟರ್‌ಗಳು ಮೊದಲ ಎಸೆತದಿಂದಲೇ ಮನಬಂದಂತೆ ಬ್ಯಾಟ್ ಬೀಸುತ್ತಿದ್ದಾರೆ. ಇದು ಕ್ರಿಕೆಟ್‌ನ ಮೂಲ ಆಟದ ಸಮತೋಲನವನ್ನು ಕೆಡಿಸಿದೆ ಎಂದು ಲಿವಿಂಗ್‌ಸ್ಟೋನ್ ಅಭಿಪ್ರಾಯಪಟ್ಟಿದ್ದಾರೆ.

ಒಂದೇ ಪಿಚ್‌ನ ಮರುಬಳಕೆ:

ಸನ್‌ರೈಸರ್ಸ್ ಹೈದರಾಬಾದ್ ತಂಡವು ಒಂದೇ ಪಿಚ್‌ನಲ್ಲಿ ಸತತವಾಗಿ 5 ರಿಂದ 6 ಪಂದ್ಯಗಳನ್ನು ಆಡಬೇಕಾಗಿ ಬಂದಿದ್ದನ್ನು ಅವರು ಇದೇ ವೇಳೆ ನೆನಪಿಸಿಕೊಂಡಿದ್ದಾರೆ. ಪಿಚ್‌ಗಳನ್ನು ಪದೇ ಪದೇ ಮರುಬಳಕೆ ಮಾಡುವುದರಿಂದ ಅವು ಸಂಪೂರ್ಣವಾಗಿ ಜೀವಹೀನವಾಗಿ, ಕೇವಲ ಬ್ಯಾಟಿಂಗ್ ಸ್ನೇಹಿಯಾಗಿ ಬದಲಾಗುತ್ತಿವೆ. ಅಂದರೆ ಇಲ್ಲಿ ಗುಣಮಟ್ಟಕ್ಕೆ ಯಾವುದೇ ಬೆಲೆ ಇಲ್ಲ ಎಂದು ಲಿಯಾಮ್ ಲಿವಿಂಗ್‌ಸ್ಟೋನ್ ಲೀಗ್‌ನ ನಿರ್ವಹಣೆಯನ್ನು ಪ್ರಶ್ನಿಸಿದ್ದಾರೆ.

ವಾಂಖೆಡೆ ಪಂದ್ಯದ ಉದಾಹರಣೆ:

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯವೊಂದನ್ನು ಉದಾಹರಿಸಿದ ಅವರು, ಎದುರಾಳಿ ತಂಡ ನೀಡಿದ್ದ 230ಕ್ಕೂ ಅಧಿಕ ರನ್‌ಗಳ ಬೃಹತ್ ಗುರಿಯನ್ನು ತಮ್ಮ ತಂಡ ಕೇವಲ 18 ಓವರ್‌ಗಳಲ್ಲೇ ಬೆನ್ನಟ್ಟಿದ್ದನ್ನು ನೆನಪಿಸಿಕೊಂಡರು. ಟಿ20 ಕ್ರಿಕೆಟ್‌ನಲ್ಲಿ 230 ರನ್‌ಗಳು ಕೂಡ ಸುರಕ್ಷಿತವಲ್ಲ ಎಂದರೆ ಬೌಲರ್‌ಗಳ ಪರಿಸ್ಥಿತಿ ಏನಾಗಬೇಡ ಎಂದು ಲಿಯಾಮ್ ಲಿವಿಂಗ್‌ಸ್ಟೋನ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಈ ಕಟು ವಿಮರ್ಶೆಯು ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕ್ರಿಕೆಟ್ ಕೇವಲ ಬ್ಯಾಟರ್‌ಗಳ ರನ್ ಗಳಿಸುವ ಯಂತ್ರವಾಗಿ ಬದಲಾಗಬಾರದು ಮತ್ತು ಬೌಲರ್‌ಗಳಿಗೂ ಸಮಾನ ಅವಕಾಶ ಸಿಗಬೇಕು ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿ ಬರಲಾರಂಭಿಸಿದೆ. ಹೀಗಾಗಿ ಮುಂದಿನ ಸೀಸನ್​​ನಲ್ಲಾದರೂ ಬಿಸಿಸಿಐ ಸಮತೋಲಿತ ಪಿಚ್ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

Source link

ಧಾರಾಕಾರ ಮಳೆಗೆ ಕುಸಿದ ಮನೆ‌ ಮೇಲ್ಚಾವಣಿ: ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು – Kannada News

ಕುಸಿದ ಮನೆ‌ ಮೇಲ್ಚಾವಣಿ, ಬೆಕ್ಕುImage Credit source: tv9 kannada

ಬಾಗಲಕೋಟೆ, ಜೂನ್​​ 07: ಮುಂಗಾರು ಮಳೆ (Rain) ಸಮರ್ಪಕವಾಗಿ ಆಗಿಲ್ಲ ಎಂದು ರೈತರು ಕಣ್ಣೀರು ಹಾಕುತ್ತಿರುವ ಬೆನ್ನಲ್ಲೇ, ಬಾಗಲಕೋಟೆಯಲ್ಲಿ ಸುರಿದ ಧಾರಾಕಾರ ಮಳೆ ಒಂದು ಕಡೆ ಆತಂಕ ಉಂಟುಮಾಡಿದ್ದರೆ, ಮತ್ತೊಂದೆಡೆ ಪವಾಡಸದೃಶ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಿನ್ನೆ ವಲ್ಲಭಬಾಯಿ ನಗರದಲ್ಲಿ ಆರ್ಭಟಿಸಿದ ಮಳೆಗೆ ಮನೆಯೊಂದರ ಇಡೀ ಮೇಲ್ಛಾವಣಿಯೇ ಕುಸಿದಿದೆ. ಆದರೆ ಸಾಕು ಬೆಕ್ಕಿನಿಂದಾಗಿ (Cat) ತಂದೆ ಮತ್ತು ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದೆ.

ಮುಖ್ಯಾಂಶಗಳು

  • ಧಾರಾಕಾರ ಮಳೆಗೆ ಕುಸಿದುಬಿದ್ದ ಮನೆ ಮೇಲ್ಛಾವಣಿ
  • ಬಾಗಲಕೋಟೆಯಲ್ಲಿ ತಪ್ಪಿದ ಭಾರೀ ದುರಂತ
  • ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು

ನಡೆದಿದ್ದೇನು?

ತಂದೆ ಶಬ್ಬೀರ್ ಬಾಗವಾನ್ ಮತ್ತು ಮಗ ಆರ್ಬಾಜ್ ಬಾಗವಾನ್​​ ಬಾಗಲಕೋಟೆಯ ವಲ್ಲಭಬಾಯಿ ನಗರದ ನಿವಾಸಿಗಳಾಗಿದ್ದು, ಹಣ್ಣಿನ ವ್ಯಾಪಾರ ಮಾಡುತ್ತಾರೆ. ನಿನ್ನೆ ತಂದೆ ಮತ್ತು ಮಗ ಮನೆಯಲ್ಲಿದ್ದಾಗ ಮಳೆಯ ತೀವ್ರತೆಗೆ ಮೇಲ್ಛಾವಣಿಯಿಂದ ಸಣ್ಣದಾಗಿ ಮಣ್ಣಿನ ತುಕಡಿಗಳು ಉದುರಲು ಆರಂಭಿಸಿದೆ. ಹೀಗಾಗಿ ಸಾಕು ಬೆಕ್ಕು ಹೊರಗೆ ಓಡಿದಿದೆ. ಇನ್ನು ಇದೇ ವೇಳೆ ಬೆಕ್ಕಿಗೆ ಹಸಿವು ಕೂಡ ಆಗಿತ್ತಂತೆ. ಹೀಗಾಗಿ ಅದಕ್ಕೆ ಏನಾದರೂ ತಿನ್ನಿಸಬೇಕು ಎನ್ನುವ ಕಾಳಜಿಯಿಂದ ಶಬ್ಬೀರ್​​ ಬೆಕ್ಕನ್ನು ಹಿಡಿಯಲು ಅದರ ಹಿಂದೆಯೇ ಹೊರಗೆ ಧಾವಿಸಿದ್ದಾರೆ. ತಂದೆಯನ್ನು ಕಂಡು ಆರ್ಬಾಜ್ ಕೂಡ ಅವರ ಬೆನ್ನ ಹಿಂದೆ ಮನೆಯಿಂದ ಆಚೆ ಬಂದಿದ್ದಾರೆ. ಇವರಿಬ್ಬರು ಮನೆಯ ಹೊಸ್ತಿಲು ದಾಟಿ ಹೊರಗೆ ಬರುತ್ತಿದ್ದಂತೆಯೇ ಇಡೀ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ.

ಬೆಕ್ಕಿನಿಂದಲೇ ನಮ್ಮ ಪ್ರಾಣ ಉಳಿಯಿತು ಎಂದ ಆರ್ಬಾಜ್ 

‘ಮನೆಯ ಮೇಲ್ಛಾವಣಿಯ ಮಣ್ಣು ಬೀಳುತ್ತಿದ್ದಂತೆ ಬೆಕ್ಕು ಹೊರಗೆ ಓಡಿತು, ಅದಕ್ಕೆ ಹಸಿವಾಗಿದ್ದರಿಂದ ಏನಾದರೂ ತಿನ್ನಿಸಲು ತಂದೆ ಅದನ್ನು ಹಿಡಿಯಲು ಹೋದರು, ನಾನು ಅವರ ಹಿಂದೆ ಹೋದೆ. ನಾವು ಹೊರಬಂದ ತಕ್ಷಣ ಇಡೀ ಮೇಲ್ಛಾವಣಿ ಕುಸಿಯಿತು. ಬೆಕ್ಕಿನಿಂದಲೇ ನಮ್ಮ ಪ್ರಾಣ ಉಳಿಯಿತು, ಇಲ್ಲದಿದ್ದರೆ ನಾವು ಜೀವ ಸಹಿತ ಉಳಿಯುತ್ತಿರಲಿಲ್ಲ’ ಎಂದು ಆರ್ಬಾಜ್ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ

ಇನ್ನು ಅದೃಷ್ಟವಶಾತ್ ಮನೆಯಲ್ಲಿ ನಡೆಯಬೇಕಿದ್ದ ಮದುವೆಯ ಕಾರ್ಯಕ್ರಮವೊಂದರ ನಿಮಿತ್ತ ಕುಟುಂಬದ ಉಳಿದ ಸದಸ್ಯರೆಲ್ಲರೂ ವಿಜಯಪುರಕ್ಕೆ ತೆರಳಿದ್ದರು. ಹೀಗಾಗಿ ಕೇವಲ ತಂದೆ-ಮಗ ಮಾತ್ರ ಮನೆಯಲ್ಲಿದ್ದು, ಸಾಕುಪ್ರಾಣಿಯ ಕಾರಣದಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಲಕ್ಷಾಂತರ ರೂ ಮೌಲ್ಯದ ಮಾವಿನ ಹಣ್ಣು ಮಣ್ಣು ಪಾಲು

ಒಂದೆಡೆ ಪ್ರಾಣ ಉಳಿದರೆ, ಬಡ ವ್ಯಾಪಾರಿಯ ಬದುಕಿಗೆ ಮಳೆರಾಯ ದೊಡ್ಡ ಹೊಡೆತವನ್ನೇ ನೀಡಿದ್ದಾನೆ. ಮೇಲ್ಛಾವಣಿ ಕುಸಿದ ಪರಿಣಾಮ ಮನೆಯಲ್ಲಿದ್ದ ಪಾತ್ರೆ-ಪಗಡೆಗಳು, ದವಸ ಧಾನ್ಯಗಳು ಹಾಗೂ ವ್ಯಾಪಾರಕ್ಕಾಗಿ ತಂದಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮಾವಿನ ಹಣ್ಣು ಸಂಪೂರ್ಣವಾಗಿ ಮಣ್ಣು ಪಾಲಾಗಿದೆ. ಸದ್ಯ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ವ್ಯಾಪಾರಿ ಶಬ್ಬೀರ್ ಬಾಗವಾನ್​, ಜಿಲ್ಲಾಡಳಿತ ಹಾಗೂ ಸರ್ಕಾರ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸ್ಪೇಸ್​ಎಕ್ಸ್ ಕಂಪ್ಯೂಟಿಂಗ್ ಬಳಸಲು ತಿಂಗಳಿಗೆ 9,000 ಕೋಟಿ ರೂ ಬಾಡಿಗೆ ಪಾವತಿಸುವ ಗೂಗಲ್ – Kannada News

ಕ್ಯಾಲಿಫೋರ್ನಿಯಾ, ಜೂನ್ 7: ಗೂಗಲ್ ಮತ್ತು ಸ್ಪೇಸ್‌ಎಕ್ಸ್ (SpaceX) ನಡುವೆ ಒಂದು ಬೃಹತ್ ಒಪ್ಪಂದ ನಡೆದಿದೆ. ಸ್ಪೇಸ್​ಎಕ್ಸ್​ನ ಎಐ ಕಂಪ್ಯೂಟಿಂಗ್ ಸೌಲಭ್ಯ ಬಳಸಲು ಗೂಗಲ್ ಈ ಡೀಲ್ ಮಅಡಿಕೊಂಡಿದೆ. ಅದರಂತೆ, ಗೂಗಲ್ ಸಂಸ್ಥೆಯು ಸ್ಪೇಸ್‌ಎಕ್ಸ್‌ಗೆ ಪ್ರತಿ ತಿಂಗಳು $920 ಮಿಲಿಯನ್ (ಸುಮಾರು 8,700 ಕೋಟಿ ರುಪಾಯಿ) ಹಣವನ್ನು ಪಾವತಿಸಲಿದೆ. ಈ ಒಪ್ಪಂದವು ಒಟ್ಟು 32 ತಿಂಗಳುಗಳ ಕಾಲ (ಈ ವರ್ಷದ ಅಕ್ಟೋಬರ್‌ನಿಂದ ಜೂನ್ 2029 ರವರೆಗೆ) ಚಾಲ್ತಿಯಲ್ಲಿರಲಿದೆ. ಇಲಾನ್ ಮಸ್ಕ್ (Elon Musk) ಅವರ AI ಕಂಪನಿಯಾದ xAI ಡೇಟಾ ಸೆಂಟರ್‌ಗಳಲ್ಲಿನ ಕೃತಕ ಬುದ್ಧಿಮತ್ತೆ (AI) ಕಂಪ್ಯೂಟಿಂಗ್ ಸೌಲಭ್ಯವನ್ನು (Compute Capacity) ಬಾಡಿಗೆಗೆ ಪಡೆಯಲು ಗೂಗಲ್ ಈ ಒಪ್ಪಂದ ಮಾಡಿಕೊಂಡಿದೆ.

ಗೂಗಲ್ ಏಕೆ ಈ ಒಪ್ಪಂದ ಮಾಡಿಕೊಂಡಿದೆ?

ಗೂಗಲ್ ತನ್ನ ದೊಡ್ಡ ಉದ್ಯಮ ಗ್ರಾಹಕರಿಗಾಗಿ ಪರಿಚಯಿಸಿರುವ ‘ಜೆಮಿನಿ ಎಂಟರ್‌ಪ್ರೈಸ್’ (Gemini Enterprise) ಎಂಬ AI ಪ್ಲಾಟ್‌ಫಾರ್ಮ್‌ಗೆ ಜಾಗತಿಕವಾಗಿ ನಿರೀಕ್ಷೆಗಿಂತಲೂ ಹೆಚ್ಚಿನ ಬೇಡಿಕೆ ಬಂದಿದೆ. ಈ ಗ್ರಾಹಕರ ಬೇಡಿಕೆಯನ್ನು ತಕ್ಷಣವೇ ಪೂರೈಸಲು ಗೂಗಲ್‌ಗೆ ಬೃಹತ್ ಮಟ್ಟದ ತಾಂತ್ರಿಕ ಮೂಲಸೌಕರ್ಯದ (Infrastructure) ಅಗತ್ಯವಿತ್ತು. ಅದಕ್ಕಾಗಿ ಸ್ಪೇಸ್‌ಎಕ್ಸ್‌ನ ಡೇಟಾ ಸೆಂಟರ್‌ಗಳನ್ನು ಬಳಸಿಕೊಳ್ಳಲು ಗೂಗಲ್ ನಿರ್ಧರಿಸಿದೆ.

ಇದನ್ನೂ ಓದಿ: ಎಲ್ ನಿನೊ ಪರಿಣಾಮ; ಭಾರತದ ಆರ್ಥಿಕತೆಗೆ 1 ಬಿಲಿಯನ್ ಡಾಲರ್ ಗಂಡಾಂತರ? ಇದು ಹೇಗೆ ಸಾಧ್ಯ?

ಗೂಗಲ್ ಏನನ್ನು ಬಳಸಿಕೊಳ್ಳಲಿದೆ?

ಈ ಒಪ್ಪಂದದ ಪ್ರಕಾರ, ಸ್ಪೇಸ್‌ಎಕ್ಸ್‌ನ ಡೇಟಾ ಸೆಂಟರ್‌ಗಳಲ್ಲಿರುವ ಸುಮಾರು 1,10,000 ಎನ್‌ವಿಡಿಯಾ (Nvidia) ಗ್ರಾಫಿಕ್ಸ್ ಪ್ರೊಸೆಸಿಂಗ್ ಯುನಿಟ್‌ಗಳನ್ನು (GPUs) ಹಾಗೂ ಇತರ ಸೆಂಟ್ರಲ್ ಪ್ರೊಸೆಸರ್‌ಗಳು ಮತ್ತು ಮೆಮೊರಿ ಘಟಕಗಳನ್ನು ಗೂಗಲ್ ಬಳಸಿಕೊಳ್ಳಲಿದೆ. ಸೆಪ್ಟೆಂಬರ್ 30, 2026 ರೊಳಗೆ ಸ್ಪೇಸ್‌ಎಕ್ಸ್ ಈ ಭರವಸೆ ನೀಡಿದಷ್ಟು ಜಿಪಿಯು (GPU) ಸಾಮರ್ಥ್ಯವನ್ನು ಒದಗಿಸಲು ವಿಫಲವಾದರೆ, ಗೂಗಲ್ ಈ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವ ಹಕ್ಕನ್ನು ಹೊಂದಿದೆ.

ಸ್ಪೇಸ್‌ಎಕ್ಸ್‌ಗೆ ಇದರಿಂದ ಏನು ಲಾಭ?

ಸ್ಪೇಸ್‌ಎಕ್ಸ್ ಸಂಸ್ಥೆಯು ಮುಂದಿನ ವಾರವಷ್ಟೇ ಷೇರು ಮಾರುಕಟ್ಟೆಯಲ್ಲಿ ತನ್ನ ಐಪಿಒ (IPO – Initial Public Offering) ಬಿಡುಗಡೆ ಮಾಡಲು ಸಜ್ಜಾಗುತ್ತಿದೆ. ಕಂಪನಿಯು ಸಾರ್ವಜನಿಕವಾಗಿ ಲಿಸ್ಟ್ ಆಗುವ ಮುನ್ನವೇ ಇಂತಹ ಬೃಹತ್ ಒಪ್ಪಂದ ಮಾಡಿಕೊಂಡಿರುವುದು ಹೂಡಿಕೆದಾರರಲ್ಲಿ ಭಾರಿ ನಂಬಿಕೆ ಮೂಡಿಸಿದೆ. ಅಲ್ಲದೆ, ಫೆಬ್ರವರಿಯಲ್ಲಿ ಇಲಾನ್ ಮಸ್ಕ್ ಅವರ AI ಸ್ಟಾರ್ಟ್‌ಅಪ್ ‘xAI’ ಅನ್ನು ಸ್ಪೇಸ್‌ಎಕ್ಸ್‌ನೊಂದಿಗೆ ವಿಲೀನಗೊಳಿಸಲಾಗಿತ್ತು. ಆ ಡೇಟಾ ಸೆಂಟರ್‌ಗಳಿಂದ ಆದಾಯ ಗಳಿಸಲು ಸ್ಪೇಸ್‌ಎಕ್ಸ್‌ಗೆ ಈ ಒಪ್ಪಂದ ದೊಡ್ಡ ನೆರವಾಗಿದೆ. ಗೂಗಲ್‌ಗಿಂತ ಮುಂಚೆ, ಮೇ ತಿಂಗಳಲ್ಲಿ ‘ಆಂಥ್ರೋಪಿಕ್’ (Anthropic) ಕಂಪನಿಯೂ ಸಹ ಸ್ಪೇಸ್‌ಎಕ್ಸ್ ಜೊತೆ ಇಂತಹುದೇ ಒಪ್ಪಂದ ಮಾಡಿಕೊಂಡಿತ್ತು.

ಇದನ್ನೂ ಓದಿ: ಸಿಮ್ ಸ್ವಾಪಿಂಗ್ ಹುಷಾರ್..! ದಿಢೀರನೇ ಸಿಮ್ ಡೀಆ್ಯಕ್ಟಿವೇಟ್ ಆಯ್ತು, ನೋಡನೋಡುತ್ತಿದ್ದಂತೆ ಬ್ಯಾಂಕ್ ಖಾತೆಯಿಂದ ಹಣ ಮಾಯ ಆಯ್ತು

ಗೂಗಲ್ ಮತ್ತು ಇಲಾನ್ ಮಸ್ಕ್ ಸಂಬಂಧ

ವಿಶೇಷವೆಂದರೆ, ಗೂಗಲ್‌ನ ಪೋಷಕ ಸಂಸ್ಥೆಯಾದ ಆಲ್ಫಾಬೆಟ್ (Alphabet), 2015 ರಲ್ಲೇ ಸ್ಪೇಸ್‌ಎಕ್ಸ್ ಕಂಪನಿಯಲ್ಲಿ ಹೂಡಿಕೆ ಮಾಡಿತ್ತು. ಆಗ ಸ್ಪೇಸ್‌ಎಕ್ಸ್ ಮೌಲ್ಯ ಕೇವಲ $12 ಬಿಲಿಯನ್ ಆಗಿತ್ತು. ಆದರೆ ಮುಂದಿನ ವಾರ ಐಪಿಒ ಬರಲಿರುವ ಸ್ಪೇಸ್‌ಎಕ್ಸ್ ಕಂಪನಿಯ ಒಟ್ಟು ಮೌಲ್ಯ ಈಗ $1.75 ಟ್ರಿಲಿಯನ್ (165 ಲಕ್ಷ ಕೋಟಿ ರೂ) ದಾಟುವ ನಿರೀಕ್ಷೆಯಿದೆ. ಇದರಿಂದಾಗಿ ಗೂಗಲ್‌ಗೆ ಹಳೆಯ ಹೂಡಿಕೆಯಿಂದಲೂ ಭಾರಿ ಲಾಭ ಸಿಕ್ಕಂತಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಮೈಕ್ರೋಸಾಫ್ಟ್, ಓಪನ್ಎಐ ಮತ್ತು ಮೆಟಾ ಕಂಪನಿಗಳಿಗೆ ತೀವ್ರ ಪೈಪೋಟಿ ನೀಡಲು ಗೂಗಲ್ ತನ್ನ AI ತಂತ್ರಜ್ಞಾನದ ಮೇಲಿನ ವೆಚ್ಚವನ್ನು ಈ ವರ್ಷ ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: ಕಾರ್ಪೊರೇಟ್ ಜೀವನವು ನನ್ನನ್ನು ಒತ್ತಡಕ್ಕೆ ಸಿಲುಕಿಸಿದೆ; ಯುವತಿ ಹೀಗೆಂದಿದ್ದೇಕೆ? – Kannada News

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಡಬಲ್ ಆಗಿರುತ್ತದೆ. ಹೀಗಾಗಿ ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡೋದಕ್ಕೆ ಈ ಕಾರ್ಪೋರೇಟ್ ಉದ್ಯೋಗಿಗಳು ಒದ್ದಾಡ್ತಾರೆ. ಇದೀಗ ಕೆಲಸ ಮುಗಿದ ನಂತರವು ಕಾರ್ಪೊರೇಟ್ ಜೀವನವು ತನ್ನನ್ನು ಒತ್ತಡದಲ್ಲಿರಿಸಿದೆ ಎಂದು ಯುವತಿಯೂ ಹೇಳಿದ್ದಾಳೆ. ಈ ವಿಡಿಯೋ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯ ಬಗ್ಗೆ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ವಂಶಿಕಾ ರಥಿ (vanshika_recording) ಎಂಬ ಯುವತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾಳೆ. ಈ ವಿಡಿಯೋದ ಶೀರ್ಷಿಕೆಯಲ್ಲಿ ನನ್ನ ಮೆದುಳು ಲಾಗ್ ಔಟ್ ಆಗಲು ನಿರಾಕರಿಸುತ್ತದೆ ಎಂದು ಬರೆದುಕೊಂಡಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಈ ಕ್ಲಿಪಿಂಗ್‌ನಲ್ಲಿ ಕಚೇರಿ ಸಮಯದ ನಂತರವೂ ಕೆಲಸಕ್ಕೆ ಸಂಬಂಧಿಸಿದ ಆಲೋಚನೆಗಳು ಹೇಗೆ ಮುಂದುವರಿಯುತ್ತವೆ ಎಂಬುದರ ಕುರಿತು ಮಾತನಾಡಿದ್ದಾಳೆ. ನಾವು ಕಾರ್ಪೊರೇಟ್ ಕಂಪನಿಗೆ ಸೇರಿದಾಗಿನಿಂದ, ನಾವು ಯಾವಾಗಲೂ ಯಾವುದೇ ಕಾರಣವಿಲ್ಲದೆ ಒತ್ತಡದಲ್ಲಿದ್ದೇನೆ ಎಂದು ನೀವು ಎಂದಾದರೂ ಗಮನಿಸಿದ್ದೀರಾ?. ನನ್ನ ಮೆದುಳು ನಾಳೆಯ ಕೆಲಸವನ್ನು ಇಂದೇ ಮಾಡು, ನಾಳೆ ನಾನು ಕೂಲ್ ಆಗಿರಲು ಹೇಳುತ್ತಿದೆ ಎಂಬುದರ ಅರ್ಥವೇನು?. ಆದರೆ ಆ ರೀತಿ ಮಾಡಲು ಸಾಧ್ಯವಿಲ್ಲ ಎಂದು ಎಲ್ಲರಿಗೂ ತಿಳಿದಿದೆ. ನಾನು ನಾಳೆ ಲಾಗಿನ್ ಆದ ನಂತರ ನಾನು ಏನು ಮಾಡಬೇಕೆಂದು ನಿರಂತರವಾಗಿ ಯೋಚಿಸುತ್ತಲೇ ಇರುತ್ತೇನೆ. ಕಾರ್ಪೊರೇಟ್ ಕಂಪನಿಯಿಂದ ಹೊರಬರದೆ ನಾನು ಈ ರೀತಿ ಒತ್ತಡದಿಂದ ಹೇಗೆ ಹೊರಬರುವುದು? ಎಂದು ಕೇಳಿದ್ದಾಳೆ.

ಇದನ್ನೂ ಓದಿ: ಬೆಂಗಳೂರಲ್ಲಿ 1.4 ಲಕ್ಷ ರೂ ಸಂಬಳ ಇದ್ರೂ , ಊರಲ್ಲಿ ಸಿಗುವ 40 ಸಾವಿರದಲ್ಲೇ ನಾನು ಶ್ರೀಮಂತ; ಯುವಕ ಹೀಗೆಂದಿದ್ದೇಕೆ?

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ನನ್ನ ಮಾನಸಿಕ ಆರೋಗ್ಯಕ್ಕಾಗಿ ಇಂದು ರಜೆ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಮತ್ತೊಬ್ಬರು ಕಾಮೆಂಟ್ ನಲ್ಲಿ, ನಾನು ಯಾವುದಕ್ಕೂ ಹೆಚ್ಚು ತಲೆಗೆ ಹಚ್ಚಿಕೊಳ್ಳಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು, ಹೆಚ್ಚು ಒತ್ತಡ ಅನಿಸಿದರೆ ಬೇರೆ ಕೆಲಸದ ಹುಡುಕಾಟದತ್ತ ಗಮನ ಹರಿಸಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಣಕ್ಕಿಳಿದಿಲ್ಲ, ಸ್ಪರ್ಧಾತ್ಮಕ ಪಂದ್ಯವಾಡಿಲ್ಲ: ಹರ್ಷಿತ್ ರಾಣಾ ಆಯ್ಕೆ ನ್ಯಾಯವೇ? – Kannada News

ಕಳೆದ ನಾಲ್ಕು ತಿಂಗಳುಗಳಿಂದ ಸ್ಪರ್ಧಾತ್ಮಕ ಪಂದ್ಯಗಳನ್ನು ಆಡದ ಆಟಗಾರನನ್ನು ನೇರವಾಗಿ ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುವುದು ಎಷ್ಟು ತಾರ್ಕಿಕ? ಬಿಸಿಸಿಐ (BCCI) ಇತ್ತೀಚೆಗೆ ಪ್ರಕಟಿಸಿದ ಭಾರತೀಯ ಟಿ20 ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರ ಸೇರ್ಪಡೆ ಈ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಹರ್ಷಿತ್ ರಾಣಾ ಕೊನೆಯ ಬಾರಿ ಕಣಕ್ಕಿಳಿದದ್ದು ಫೆಬ್ರವರಿ ತಿಂಗಳಲ್ಲಿ. ಇದಾದ ಬಳಿಕ ಅವರು ಒಂದೇ ಒಂದು ಪಂದ್ಯವಾಡಿಲ್ಲ.

ನೇರ ಆಯ್ಕೆ ನ್ಯಾಯವೇ?

ಹರ್ಷಿತ್ ರಾಣಾ ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಆ ನಂತರ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಸುದೀರ್ಘ ಕಾಲ ಕ್ರಿಕೆಟ್‌ನಿಂದ ದೂರು ಉಳಿದಿದ್ದರು. ಇದರ ಪರಿಣಾಮವಾಗಿ ಅವರು ಇಡೀ ಟಿ20 ವಿಶ್ವಕಪ್ ಮತ್ತು ಐಪಿಎಲ್ 2026 ಹೊರಗುಳಿಯಬೇಕಾಯಿತು.

ಯಾವುದೇ ಒಬ್ಬ ಆಟಗಾರ ತಂಡಕ್ಕೆ ಮರಳಬೇಕಾದರೆ ಕನಿಷ್ಠ ಪಕ್ಷ ದೇಶಿ ಕ್ರಿಕೆಟ್ ಅಥವಾ ಯಾವುದೇ ಲೀಗ್ ಪಂದ್ಯಗಳಲ್ಲಿ ತನ್ನ ಫಿಟ್‌ನೆಸ್ ಮತ್ತು ಲಯವನ್ನು ಸಾಬೀತುಪಡಿಸಬೇಕು. ಆದರೆ, ರಾಣಾ ಅವರ ವಿಷಯದಲ್ಲಿ ಈ ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಕೇವಲ ಎನ್‌ಸಿಎ ಫಿಟ್‌ನೆಸ್ ಸರ್ಟಿಫಿಕೇಟ್ ಆಧಾರದ ಮೇಲೆ ಅವರನ್ನು ನೇರವಾಗಿ ಆಯ್ಕೆ ಮಾಡಿರುವುದು ಇತರೆ ಆಟಗಾರರಿಗೆ ಮಾಡಿದ ಅನ್ಯಾಯ ಎನ್ನದೇ ವಿಧಿಯಿಲ್ಲ.

ಯುವ ಪ್ರತಿಭೆಗಳಿಗೆ ಅನ್ಯಾಯ:

ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನ ನೀಡಿ, ನಿರಂತರವಾಗಿ ವಿಕೆಟ್ ಪಡೆದು ಫಿಟ್ ಆಗಿರುವ ಹಲವು ಯುವ ವೇಗದ ಬೌಲರ್‌ಗಳು ದೇಶದಲ್ಲಿದ್ದಾರೆ. ದೇಶಿ ಟೂರ್ನಿಗಳಲ್ಲಿ ಬೆವರಿಳಿಸಿ ಕಾಯುತ್ತಿರುವ ಆಟಗಾರರನ್ನು ಬದಿಗೊತ್ತಿ, ತಿಂಗಳುಗಳಿಂದ ಮೈದಾನಕ್ಕೇ ಇಳಿಯದ ಆಟಗಾರನಿಗೆ ಮಣೆ ಹಾಕಿರುವುದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಇದು ಅತ್ಯುತ್ತಮ ಲಯದಲ್ಲಿರುವ ಇತರ ಬೌಲರ್‌ಗಳ ಆತ್ಮವಿಶ್ವಾಸವನ್ನು ಕುಗ್ಗಿಸುವ ಆಯ್ಕೆಯಾಗಿದೆ.

ಏಕೆಂದರೆ ಈ ಬಾರಿಯ ಐಪಿಎಲ್​​ನಲ್ಲಿ ಆರ್​ಸಿಬಿ ವೇಗಿ ರಾಸಿಖ್ ಸಲಾಂ ಬರೋಬ್ಬರಿ 18 ವಿಕೆಟ್ ಪಡೆದು ಮಿಂಚಿದ್ದರು. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡದ ಯುವ ವೇಗಿ ಅಶೋಕ್ ಶರ್ಮಾ 22 ವಿಕೆಟ್ ಕಬಳಿಸಿದ್ದರು. ಹಾಗೆಯೇ ಕೆಕೆಆರ್ ತಂಡದ ವೇಗಿ ಕಾರ್ತಿಕ್ ತ್ಯಾಗಿ ಕೂಡ 18 ವಿಕೆಟ್ ಉರುಳಿಸಿದ್ದರು.

ಹೀಗೆ ಐಪಿಎಲ್​​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹಲವು ಆಟಗಾರರಿದ್ದರೂ, ಕಳೆದ ನಾಲ್ಕು ತಿಂಗಳುಗಳಿಂದ ಒಂದೇ ಒಂದು ಪಂದ್ಯವಾಡದ ಆಟಗಾರನಿಗೆ ನೇರವಾಗಿ ಟೀಮ್ ಇಂಡಿಯಾದಲ್ಲಿ ಅವಕಾಶ ಕಲ್ಪಿಸುವುದು ಎಷ್ಟು ಸರಿ ಎಂಬುದೇ ಪ್ರಶ್ನೆ.

ಇದನ್ನೂ ಓದಿ: ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಒಟ್ಟರೆಯಾಗಿಹರ್ಷಿತ್ ರಾಣಾ ಅವರ ಪ್ರತಿಭೆಯ ಬಗ್ಗೆ ಯಾರಿಗೂ ಸಂಶಯವಿಲ್ಲ. ಅವರಲ್ಲಿರುವ ವೇಗ ಮತ್ತು ವಿಕೆಟ್ ಪಡೆಯುವ ಕೌಶಲ್ಯ ಭಾರತೀಯ ಕ್ರಿಕೆಟ್‌ಗೆ ದೊಡ್ಡ ಆಸ್ತಿ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಗಾಯದ ನಂತರ ಯಾವುದೇ ಮ್ಯಾಚ್ ಪ್ರ್ಯಾಕ್ಟೀಸ್ ಇಲ್ಲದೆ ಅವರನ್ನು ನೇರವಾಗಿ ಅಂತರರಾಷ್ಟ್ರೀಯ ಸರಣಿಗೆ ಆಯ್ಕೆ ಮಾಡಿರುವುದು ಬಿಸಿಸಿಐ ಮಾಡಿದ ತಪ್ಪು ಆಯ್ಕೆ ಎಂದೇ ಹೇಳಬಹುದು.

Source link

ವಾರ ಭವಿಷ್ಯ: ಜೂನ್ 8 ರಿಂದ 14 ರ ವರೆಗಿನ ದ್ವಾದಶ ರಾಶಿಗಳ ಫಲಾಫಲ – Kannada News

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಜೂನ್ 8 ರಿಂದ ಜೂನ್ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಈ ವಾರದಲ್ಲಿ ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ ಮತ್ತು ಚತುರ್ದಶಿ ಸೇರಿದಂತೆ ಪ್ರಮುಖ ತಿಥಿಗಳು ಬರಲಿವೆ. ಜ್ಯೋತಿಷ್ಯದ ಪ್ರಕಾರ, ಈ ಅವಧಿಯು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷದಲ್ಲಿ ನಡೆಯುತ್ತದೆ. ಈ ಗ್ರಹಗತಿಗಳು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಡಾ. ಗುರೂಜಿ ವಿವರಿಸಿದ್ದಾರೆ.

ವಿಶೇಷವಾಗಿ, ಈ ವಾರದಲ್ಲಿ ವಿಶ್ವ ಸಾಗರದ ದಿನ, ಸರ್ವತ್ರ ಏಕಾದಶಿ, ಪ್ರದೋಷ ಮತ್ತು ಮಾಸಿಕ ಶಿವರಾತ್ರಿಯಂತಹ ಆಚರಣೆಗಳು ಇವೆ. ಈ ಶುಭದಿನಗಳು ಮತ್ತು ತಿಥಿಗಳ ಮಹತ್ವ, ಅವುಗಳ ಆಚರಣೆಯ ವಿಧಾನ ಹಾಗೂ ದ್ವಾದಶ ರಾಶಿಗಳ ವ್ಯಕ್ತಿಗಳ ಮೇಲೆ ಅವುಗಳ ಪ್ರಭಾವದ ಕುರಿತು ಗುರೂಜಿ ಸಮಗ್ರ ಮಾಹಿತಿ ಒದಗಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗೆ ಇಲ್ಲಿ ಕ್ಲಿಕ್​​ ಮಾಡಿ.

Source link

CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ ! – Kannada News

ಬೆಂಗಳೂರು, ಜೂನ್ 07: ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್‌ಸಿಎಲ್‌ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು.

ಮುಖ್ಯಮಂತ್ರಿಗಳನ್ನು ಮೆಟ್ರೋದಲ್ಲಿ ಕಂಡ ಸಾರ್ವಜನಿಕರು ಹಾಗೂ ಸಹಪ್ರಯಾಣಿಕರು ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸಿದರು. ಅನೇಕ ಮೆಟ್ರೋ ಪ್ರಯಾಣಿಕರು ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ರೈಲಿನಲ್ಲಿದ್ದ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿದ ಡಿ.ಕೆ. ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು. ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣದವರೆಗೆ ಮೆಟ್ರೋದಲ್ಲಿಯೇ ತೆರಳಿದ ಮುಖ್ಯಮಂತ್ರಿಗಳು, ಅಲ್ಲಿಂದ ಮುಂದೆ ರಸ್ತೆ ಮಾರ್ಗವಾಗಿ ಕನಕಪುರಕ್ಕೆ ಪ್ರಯಾಣ ಬೆಳೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ (Janhvi Kapoor) ನಟನೆಯ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದ್ದರೂ, ಚಿತ್ರದಲ್ಲಿ ಮಹಿಳೆಯರನ್ನು ಬಿಂಬಿಸಿರುವ ರೀತಿಯ ಬಗ್ಗೆ ತೀವ್ರ ವಿವಾದ ವ್ಯಕ್ತವಾಗಿದೆ. ಈ ವಿವಾದದ ಬೆನ್ನಲ್ಲೇ ನಿರ್ದೇಶಕ ಬುಚ್ಚಿ ಬಾಬು ಸನಾ (Buchi Babu Sana) ಇತ್ತೀಚೆಗಷ್ಟೇ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಆದರೆ, ಇದೀಗ ಜಾನ್ವಿ ಕಪೂರ್ ಅವರು ತಮ್ಮ ಫ್ಯಾನ್ ಕ್ಲಬ್‌ಗಳೊಂದಿಗೆ ನಡೆಸಿರುವ ಆಘಾತಕಾರಿ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳು ಇಂಟರ್ನೆಟ್‌ನಲ್ಲಿ ಲೀಕ್ ಆಗಿದ್ದು, ಸಂಚಲನ ಮೂಡಿಸಿವೆ.

ಚಿತ್ರದಲ್ಲಿ ತಮ್ಮ ಪಾತ್ರವನ್ನು ಆಕ್ಷೇಪಾರ್ಹವಾಗಿ ತೋರಿಸಲಾಗುತ್ತಿದೆ ಎಂದು ಶೂಟಿಂಗ್ ಹಂತದಲ್ಲೇ ಜಾನ್ವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬುದನ್ನು ಈ ಲೀಕ್ ಆದ ಮೆಸೇಜ್‌ಗಳು ಸಾಬೀತುಪಡಿಸುತ್ತಿವೆ. ಅಕ್ಟೋಬರ್ 30ರಂದು ನಡೆದಿರುವ ಚಾಟ್‌ನಲ್ಲಿ ಜಾನ್ವಿ ಕಪೂರ್, ಚಿತ್ರೀಕರಣದ ವೇಳೆ ತಮಗೆ ಮುಜುಗರ ತರುವಂತಹ ಆ್ಯಂಗಲ್‌ಗಳನ್ನು ಬಳಸದಂತೆ ನಿರ್ದೇಶಕರಿಗೆ ಖಡಕ್ ಆಗಿ ಹೇಳಿದ್ದಾಗಿ ಬರೆದುಕೊಂಡಿದ್ದಾರೆ.

‘ನಾನು ನಿರ್ದೇಶಕರಿಗೆ ನನ್ನ ಎದೆ ಮತ್ತು ಸೊಂಟದ ಭಾಗದ ಕ್ಲೋಸಪ್ ಶಾಟ್‌ಗಳನ್ನು ತೆಗೆದುಕೊಳ್ಳಬೇಡಿ ಎಂದು ಸ್ಪಷ್ಟವಾಗಿ ಹೇಳಿದ್ದೆ’ ಎಂದು ಜಾನ್ವಿ ಕಪೂರ್ ಉಲ್ಲೇಖಿಸಿದ್ದಾರೆ. ಇದೇ ಚಾಟ್‌ನಲ್ಲಿ ಜಾನ್ವಿ ಕಪೂರ್ ಅವರು ನಟ ರಾಮ್ ಚರಣ್ ಅವರ ನಡೆಗೆ ಧನ್ಯವಾದ ತಿಳಿಸಿದ್ದಾರೆ. ‘ರಾಮ್ ಸರ್ ತುಂಬಾ ಒಳ್ಳೆಯವರು. ಅವರು ನನ್ನ ಪರವಾಗಿ ನಿಂತು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಬೈದಿದ್ದರು. ಇನ್ನೊಮ್ಮೆ ಆಕೆಯ ಇಂತಹ ಆ್ಯಂಗಲ್‌ಗಳನ್ನು ಶೂಟ್ ಮಾಡಬೇಡಿ ಅಂತ ಗದರಿಸಿದ್ದರು. ಇದರಿಂದಾಗಿ ನಿರ್ದೇಶಕರು ಬೇಸರ ಮಾಡಿಕೊಂಡಿದ್ದರು’ ಎಂದು ಜಾನ್ವಿ ಮೆಸೇಜ್‌ನಲ್ಲಿ ತಿಳಿಸಿದ್ದಾರೆ.

ಜಾನ್ವಿ ಕಪೂರ್ ವೈರಲ್ ಚಾಟ್:

‘ಗೇಮ್ ಚೇಂಜರ್’ ಚಿತ್ರದಲ್ಲಿ ನಟಿ ಕಿಯಾರಾ ಅಡ್ವಾಣಿ ಎದುರಿಸಿದ ಇಂತಹದೇ ಪರಿಸ್ಥಿತಿಯನ್ನು ಅಭಿಮಾನಿಯೊಬ್ಬರು ನೆನಪಿಸಿದಾಗ, ಜಾನ್ವಿ ಬೇಸರದಿಂದಲೇ ಪ್ರತಿಕ್ರಿಯಿಸಿದ್ದಾರೆ. ‘ಇಲ್ಲ, ಪೆದ್ದಿ ಸಿನಿಮಾದಲ್ಲಿ ಅವರು ಶೂಟ್ ಮಾಡುತ್ತಿದ್ದ ಆ್ಯಂಗಲ್‌ಗಳು ಅದಕ್ಕಿಂತಲೂ ಕೆಟ್ಟದಾಗಿದ್ದವು. ಆದರೆ ರಾಮ್ ಸರ್ ತಡೆದರು. ಸೌತ್ ಇಂಡಸ್ಟ್ರಿಯಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ’ ಎಂದು ಜಾನ್ವಿ ಅವರು ದಕ್ಷಿಣದ ಚಿತ್ರರಂಗದ ಬಗ್ಗೆ ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ನಟಿಯನ್ನು ಕೀಳಾಗಿ ತೋರಿಸೋ ಉದ್ದೇಶವಿರಲಿಲ್ಲ’; ಜಾನ್ವಿ ಹೊಕ್ಕುಳ ಪ್ರದರ್ಶನದ ಬಗ್ಗೆ ನಿರ್ದೇಶಕರ ಸ್ಪಷ್ಟನೆ

ಕೆಲವು ನಟಿಯರ ಪೋಷಕರು ಶೂಟಿಂಗ್ ಸೆಟ್‌ಗೆ ಬರುವ ಬಗ್ಗೆ ಫ್ಯಾನ್ಸ್ ಪ್ರಸ್ತಾಪಿಸಿದ್ದಾರೆ. ಆದಕ್ಕೆ ಜಾನ್ವಿ ಈ ರೀತಿ ಉತ್ತರಿಸಿದ್ದಾರೆ. ‘ಒಂದು ವೇಳೆ ನನ್ನ ತಂದೆ ಬೋನಿ ಕಪೂರ್ ಸೆಟ್‌ಗೆ ಬಂದರೆ ಪರಿಸ್ಥಿತಿ ಉಗ್ರ ರೂಪ ಪಡೆದುಕೊಳ್ಳುತ್ತದೆ’ ಎಂದಿದ್ದಾರೆ. ಈ ರೀತಿಯ ಘಟನೆಯಿಂದ ಜಾನ್ವಿ ಕಪೂರ್ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂಬುದು ಚಾಟ್ಸ್‌ನಿಂದ ತಿಳಿಯುತ್ತದೆ. ‘ನಾನು ಇವರೊಂದಿಗೆ ವಾದ ಮಾಡಿ ಸಾಕಾಗಿಹೋಗಿದೆ. ಇನ್ನು ಸಾಕು, ಇನ್ಮುಂದೆ ಸಿನಿಮಾವೇ ಬೇಡ’ ಎಂದು ಜಾನ್ವಿ ಭಾವುಕರಾಗಿ ಮೆಸೇಜ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link