Category Archives: Blog

Your blog category

ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ – Kannada News | Husband Slits Wife’s Throat Over Loan Dispute in Hubballi, Surrenders to Police

ಹುಬ್ಬಳ್ಳಿ, ಫೆಬ್ರವರಿ 3: ಸಾಲದ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಂದ ಅಮಾನುಷ ಘಟನೆ ಹುಬ್ಬಳ್ಳಿಯ (Hubballi) ರಾಮಲಿಂಗೇಶ್ವರ ನಗರದಲ್ಲಿ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಎಂಬಾತ ಪತ್ನಿ ಮಾಸಬ್ಬಿಯನ್ನು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಭೀಕರ ಕೃತ್ಯದಿಂದ ಇಡೀ ಏರಿಯಾವೇ ಬೆಚ್ಚಿಬಿದ್ದಿದೆ. ಮಾಸಬ್ಬಿ ಮತ್ತು ಇರ್ಫಾನ್ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು ಇದ್ದರು. ಆದರೂ, ಮನೆಯೊಳಗಿನ ಸಾಲದ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಗಾರೆ ಕೆಲಸ ಮಾಡಿಕೊಂಡಿದ್ದ ಇರ್ಫಾನ್ ಸಾಲದ ಸುಳಿಯಲ್ಲಿ ಸಿಲುಕಿದ್ದು, ಪತ್ನಿಯ ಚಿನ್ನಾಭರಣಗಳನ್ನು ಅಡವಿಟ್ಟಿದ್ದ. ಇದೇ ವಿಚಾರಕ್ಕೆ ದಂಪತಿಯ ನಡುವೆ ನಿತ್ಯ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.

ಎಲ್ಲಿಂದಾದರೂ ಹಣ ತರಬೇಕು ಎಂದು ಪತ್ನಿಗೆ ನಿರಂತರವಾಗಿ ಒತ್ತಡ ಹೇರುತ್ತಿದ್ದ ಇರ್ಫಾನ್, ಸೋಮವಾರ ಮತ್ತೆ ಜಗಳಕ್ಕೆ ಇಳಿದಿದ್ದಾನೆ. ಮಾಸಬ್ಬಿಯ ಸಹೋದರ ಇತ್ತೀಚೆಗೆ 20 ಸಾವಿರ ರೂಪಾಯಿ ಹಣ ನೀಡಿ ಹೋಗಿದ್ದರೂ ಸಹ ತೃಪ್ತನಾಗದೆ ಮತ್ತಷ್ಟು ಹಣಕ್ಕೆ ಪೀಡಿಸಿದ್ದಾನೆ. ಈ ಜಗಳ ತಾರಕಕ್ಕೆ ಏರಿದ್ದು, ಆಕ್ರೋಶಗೊಂಡ ಇರ್ಫಾನ್ ಚಾಕುವಿನಿಂದ ಪತ್ನಿಯ ಕತ್ತು ಸೀಳಿದ್ದಾನೆ.

ರಕ್ತ ಮಡುವಿನಲ್ಲಿ ಹೊರಗೋಡಿ ಅಂಗಲಾಚಿದರೂ ಬಿಡದ ರಾಕ್ಷಸ

ರಕ್ತದ ಮಡುವಿನಲ್ಲೇ ಪ್ರಾಣ ಉಳಿಸಿಕೊಳ್ಳಲು ಮಾಸಬ್ಬಿ ಮನೆಯ ಹೊರಗೆ ಓಡಿ ಬಂದಿದ್ದಾಳೆ. ಮನೆಯ ಎದುರಲ್ಲೇ ಬಿದ್ದು ಒದ್ದಾಡುತ್ತಿದ್ದ ಮಾಸಬ್ಬಿಯನ್ನು ಹಿಂಬಾಲಿಸಿದ ಪಾಪಿ, ಮತ್ತೆ ಕತ್ತಿಗೆ ಚಾಕು ಇರಿದು ಸ್ಥಳದಲ್ಲೇ ಕೊಂದಿದ್ದಾನೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ದೃಶ್ಯಗಳು ಮನಕಲಕುವಂತಿದ್ದವು. ಮನೆ ಮಗಳನ್ನು ಕಳೆದುಕೊಂಡ ಕುಟುಂಬ ಕಣ್ಣೀರು ಸುರಿಸುತ್ತಿತ್ತು.

ಕ್ರೌರ್ಯ ಮೆರೆದು ಪೊಲೀಸ್ ಠಾಣೆಗೆ ಬಂದು ಶರಣಾದ ಆರೋಪಿ

ಪತ್ನಿಯನ್ನು ಕೊಂದು ಕ್ರೌರ್ಯ ಮೆರೆದ ಇರ್ಫಾನ್ ನಂತರ ಹುಬ್ಬಳ್ಳಿ ನಗರದ ಕೇಶ್ವಾಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಬಳಿಕ ಆತನನ್ನು ಗೋಕುಲ್ ರೋಡ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಇದನ್ನೂ ಓದಿ: ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ

ಒಂದೆಡೆ ಅಪ್ಪ ಜೈಲು ಪಾಲಾದರೆ, ಅಮ್ಮ ಶವವಾಗಿ ಮಲಗಿದ್ದಾಳೆ. ಪ್ರಪಂಚವೇ ಅರಿಯದ ಇಬ್ಬರು ಮುದ್ದಾದ ಮಕ್ಕಳು ಅನಾಥರಾಗಿದ್ದು, ಅವರ ಭವಿಷ್ಯ ಪ್ರಶ್ನಾರ್ಥಕವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಚೆನ್ನಾಗಿರಲ್ಲ’; ತಪ್ಪಾಗಿ ನಡೆದುಕೊಂಡವರಿಗೆ ಸುದೀಪ್ ಎಚ್ಚರಿಕೆ – Kannada News | Kichcha Sudeep’s Stern Warning to Fans: Prioritizing Decorum at Public Events

ಕಿಚ್ಚ ಸುದೀಪ್ (Sudeep) ಅವರು ಹೋದಲ್ಲಿ ಬಂದಲ್ಲಿ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಅವರು ಯಾವುದಾದರೂ ವೇದಿಕೆ ಏರಿದರೆ ಸಾಕು, ಬೇರೆಯವರಿಗೆ ಮಾತನಾಡಲು ಅವಕಾಶ ಕೂಡ ಕೊಡದೇ, ‘ಕಿಚ್ಚ ಕಿಚ್ಚ’ ಎಂದು ಘೋಷಣೆ ಕೂಗುತ್ತಾರೆ. ಈಗ ಸುದೀಪ್ ಅವರು ವಾರ್ನಿಂಗ್ ಒಂದನ್ನು ಕೊಟ್ಟಿದ್ದಾರೆ. ವೇದಿಕೆಯಲ್ಲಿ ಮಾತನಾಡುವಾಗ ತಪ್ಪಾಗಿ ನಡೆದುಕೊಂಡು, ತೊಂದರೆ ಕೊಟ್ಟವರಿಗೆ ಕಿಚ್ಚನ ಖಡಕ್ ವಾರ್ನಿಂಗ್ ಪಾಸ್ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ಸುದೀಪ್ ಅವರ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಂಘಟಿತ ಆಟ ಪ್ರದರ್ಶನ ನೀಡಿ ಸಿಸಿಎಲ್​​ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದೆ. ಕೊಯಮತ್ತೂರಿನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ನಮ್ಮವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಪಂದ್ಯದ ಬಳಿಕ ಸುದೀಪ್ ಅವರು ಜನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಎಲ್ಲರೂ ‘ಕಿಚ್ಚ ಕಿಚ್ಚ’ ಎಂದು ಕೂಗಿದ್ದಾರೆ.

ವೇದಿಕೆ ಏರಿ ಸುದೀಪ್ ಮಾತನಾಡಲು ಆರಂಭಿಸಿದರು. ಆಗ ಅಲ್ಲಿ ನೆರೆದ ಕೆಲವರು ಕಿಚ್ಚ ಕಿಚ್ಚ ಎಂದು ಕೂಗುತ್ತಾ ಮಾತನಾಡಲೂ ಕೊಡಲಿಲ್ಲ. ಇದು ಸುದೀಪ್ ಅವರ ಕೋಪಕ್ಕೆ ಕಾರಣ ಆಗಿದೆ. ಅವರು ‘ಚೆನ್ನಾಗಿರಲ್ಲ’ ಎಂದು ನೇರವಾಗಿ ಎಚ್ಚರಿಕೆ ನೀಡಿದರು. ಆ ಬಳಿಕ ಎಲ್ಲರೂ ಸೈಲೆಂಟ್ ಆದರು.

ಇದನ್ನೂ ಓದಿ: ‘ಔಟಾದೆ, ಹೋಗಪ್ಪ’; ಕಿಚ್ಚ ಸುದೀಪ್ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ಸುದೀಪ್ ಅವರು ಅನೇಕ ಕಾರ್ಯಕ್ರಮಗಳಲ್ಲಿ ಇದೇ ರೀತಿಯ ಎಚ್ಚರಿಕೆ ನೀಡಿದ ಉದಾಹರಣೆ ಇದೆ. ಬೇರೆಯವರು ಮಾತನಾಡಲೂ ಕೊಡದೇ ಕಿಚ್ಚ ಎಂಬ ಘೋಷಣೆ ಕೂಗುತ್ತಾರೆ. ಆ ಸಂದರ್ಭದಲ್ಲಿ ಸುದೀಪ್ ಅವರು ಎಚ್ಚರಿಕೆ ನೀಡುತ್ತಾರೆ. ಆಗ ಫ್ಯಾನ್ಸ್ ಸೈಲೆಂಟ್ ಆಗುತ್ತಾರೆ. ಅವರಿಗೆ ಅಭಿಮಾನಿಗಳ ಮೇಲೆ ತುಂಬಾನೇ ಪ್ರೀತಿ. ಅವರು ತಪ್ಪಿದ್ದಾಗ ತಿದ್ದುತ್ತಾರೆ.

ಸುದೀಪ್ ಅವರು ‘ಮಾರ್ಕ್’ ಬಳಿಕ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದು 30 ವರ್ಷಗಳು ಕಳೆದಿವೆ. ಈಗ ಅವರು ಹೊಸ ಸಿನಿಮಾ ಕೆಲಸದಲ್ಲಿ ತೊಡಗಿಕೊಳ್ಳಬೇಕಿದೆ. ರೋಮ್ ಕಾಮ್ ಸಿನಿಮಾ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್ – Kannada News | Corruption Deal In Karnataka Contractors’ Association Alleged Commission Against Karnataka Government, Audio Goes Viral

ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್Image Credit source: tv9

ಬೆಂಗಳೂರು, ಫೆಬ್ರವರಿ 3: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಹಾಗೂ ಸಚಿವರ ವಿರುದ್ಧ ಗುತ್ತಿಗೆದಾರರಿಂದ ಕಮಿಷನ್ ಆರೋಪ ಕೇಳಿಬಂದ ಬೆನ್ನಲ್ಲೇ, ಇದೀಗ ಅದೇ ಗುತ್ತಿಗೆದಾರರ ಸಂಘದೊಳಗೇ (Karnataka Contractors’ Association) ಭ್ರಷ್ಟಾಚಾರದ ಡೀಲ್ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೇ ಬಡ ಗುತ್ತಿಗೆದಾರರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದಲ್ಲದೇ, ಅದಕ್ಕೆ ಸಂಬಂಧಿಸಿದ ಆಡಿಯೋ ಸಹ ವೈರಲ್ ಆಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿವೆ.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಅವರ ಸಂಗಡಿಗರು ವಿವಿಧ ಸರ್ಕಾರಿ ಇಲಾಖೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗಿಯಾಗಿದ್ದು, ಬಡ ಗುತ್ತಿಗೆದಾರರಿಂದ ಕಮಿಷನ್ ವಸೂಲಿಗೆ ಇಳಿದಿದ್ದಾರೆ ಎನ್ನಲಾಗಿದೆ. ಲೋಕೋಪಯೋಗಿ ಇಲಾಖೆ, ಇಂಧನ ಇಲಾಖೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ಇಲಾಖೆಗಳ ಟೆಂಡರ್‌ಗಳಲ್ಲಿ ಗೋಲ್ಮಾಲ್ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಭ್ರಷ್ಟಾಚಾರದ ಡೀಲ್‌ನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ನಿರ್ದೇಶಕ ಮಂಡಳಿ ಗೌರವಾಧ್ಯಕ್ಷ ಜಗನ್ನಾಥ್ ಜಿ., ಶಿವಾಜಿ ಹಾಗೂ ನಿರ್ದೇಶಕ ಹೆಚ್.ಆರ್. ಚಿಂಚಳಿ ಅವರ ಹೆಸರುಗಳು ಕೇಳಿಬರುತ್ತಿವೆ. ಟೆಂಡರ್‌ಗೆ ಬಿಡ್ ಹಾಕಿರುವ ಬಡ ಗುತ್ತಿಗೆದಾರರಿಗೆ ಬಿಡ್ ವಾಪಸ್ ಪಡೆಯುವಂತೆ ಒತ್ತಡ ಹಾಕಲಾಗುತ್ತಿದ್ದು, ಇದಕ್ಕೆ ಒಪ್ಪದಿದ್ದರೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿವೆ.

ಅಲ್ಲದೆ, ತಾವು ಹಾಕಿದ್ದ ಬಿಡ್ ವಾಪಸ್ ಪಡೆಯಬೇಕಾದರೆ ಗುತ್ತಿಗೆ ಮೊತ್ತದಲ್ಲಿ ಮೊದಲಿಗೆ ಶೇ 3ರಷ್ಟು ಕಮಿಷನ್ ನೀಡಬೇಕು ಎಂಬ ಬೇಡಿಕೆ ಇಡಲಾಗಿತ್ತು. ನಂತರ ಮಾತುಕತೆ ನಡೆದು ಶೇ 2.5ರಷ್ಟು ಕಮಿಷನ್‌ಗೆ ಒಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ. ಗುತ್ತಿಗೆ ಸಿಕ್ಕ ಕೂಡಲೇ ಡೀಲಿಂಗ್ ಹಣವನ್ನು ನೀಡುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಲಾಗುತ್ತಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ

ಡೀಲಿಂಗ್‌ಗೆ ಸಂಬಂಧಿಸಿದ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಸಂಘದ ಪದಾಧಿಕಾರಿಯೇ ಭ್ರಷ್ಟಾಚಾರದ ಡೀಲ್ ಬಗ್ಗೆ ಮಾತನಾಡಿರುವುದು ಕೇಳಿಸಿದೆ. ಸರ್ಕಾರ ಹಾಗೂ ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿ ಹೋರಾಟ ನಡೆಸಿದ್ದ ಗುತ್ತಿಗೆದಾರರ ಸಂಘದೊಳಗೇ ಈ ರೀತಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪಗಳು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಂಘದ ವಿಶ್ವಾಸಾರ್ಹತೆ ಬಗ್ಗೆಯೇ ಸಂಶಯ ಮೂಡುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 03 February​: ಇಂದು ಈ ರಾಶಿಯವರಿಗೆ ಧನ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 03 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಬಿದಿಗೆ ತಿಥಿ, ಮಖಾ ನಕ್ಷತ್ರದಲ್ಲಿ ಚಂದ್ರ ಸಂಚರಿಸುತ್ತಿರುವ ಈ ದಿನದಂದು, ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಇರಲಿದೆ.

ಈ ದಿನದ ರಾಹುಕಾಲ ಮಧ್ಯಾಹ್ನ 3:27 ರಿಂದ 4:54ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಬೆಳಗ್ಗೆ 11:06 ರಿಂದ 12:33ರ ವರೆಗೆ ಇರಲಿದ್ದು, ಇದು ಶುಭ ಕಾರ್ಯಗಳಿಗೆ ಉತ್ತಮ ಸಮಯವಾಗಿದೆ. ಕೊಳ್ಳೇಗಾಲದಲ್ಲಿ ನಾರಾಯಣ ರಥೋತ್ಸವ, ಅಕ್ಕಿ ಹೆಬ್ಬಾಳಿನಲ್ಲಿ ನರಸಿಂಹ ರಥೋತ್ಸವ ಮತ್ತು ಉಳವಿ ಚನ್ನಬಸವೇಶ್ವರರ ರಥೋತ್ಸವಗಳು ಸಹ ಈ ದಿನ ನಡೆಯುತ್ತಿವೆ. ಈ ದಿನ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಡಾ. ಗುರೂಜಿ ಶುಭ ಕೋರಿದ್ದಾರೆ. ಪ್ರತಿಯೊಂದು ರಾಶಿಗೂ ಅನುಗುಣವಾಗಿ, ಹಣಕಾಸು, ವೃತ್ತಿ, ಆರೋಗ್ಯ ಮತ್ತು ವೈಯಕ್ತಿಕ ಸಂಬಂಧಗಳಲ್ಲಿನ ಪ್ರಮುಖ ಅಂಶಗಳ ಕುರಿತು ಮಾರ್ಗದರ್ಶನ ನೀಡಲಾಗಿದೆ. ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳನ್ನೂ ತಿಳಿಸಲಾಗಿದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Source link

Daily Devotional: ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ? – Kannada News | Daily Devotional: The Astrological Significance of a Longer Second Toe, Unveiling Personality and Fortune

ಬೆಂಗಳೂರು, ಫೆಬ್ರುವರಿ​ 03: ಅಂಗಶಾಸ್ತ್ರದ ಪ್ರಕಾರ, ನಮ್ಮ ದೇಹದ ಅಂಗಗಳು ವ್ಯಕ್ತಿತ್ವ ಮತ್ತು ಅದೃಷ್ಟದ ಬಗ್ಗೆ ಹಲವು ವಿಷಯಗಳನ್ನು ಹೇಳುತ್ತವೆ. ಅದರಲ್ಲೂ ಹೆಬ್ಬೆರಳಿಗಿಂತ ಉದ್ದವಾದ ಎರಡನೇ ಕಾಲ್ಬೆರಳನ್ನು ಹೊಂದಿರುವವರು ವಿಶೇಷ ಗುಣಗಳನ್ನು ಹೊಂದಿರುತ್ತಾರೆ. ಇಂತಹ ವ್ಯಕ್ತಿಗಳು ಸೂಕ್ಷ್ಮ ಬುದ್ಧಿಯುಳ್ಳವರಾಗಿರುತ್ತಾರೆ ಮತ್ತು ಸನ್ನಿವೇಶಗಳನ್ನು ಚೆನ್ನಾಗಿ ನಿಭಾಯಿಸುತ್ತಾರೆ. ಆದರೂ, ಇವರು ಸ್ವಲ್ಪ ಮುಂಗೋಪಿಗಳಾಗಿರಬಹುದು ಈ ಬಗ್ಗೆ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.

ಜೀವನದ ಅದೃಷ್ಟವನ್ನು ಗಮನಿಸಿದಾಗ, ಅವರಿಗೆ 50-50 ರಷ್ಟು ಅದೃಷ್ಟ ಇರುತ್ತದೆ. ಆರಂಭಿಕ 50% ಅವಧಿಯಲ್ಲಿ ವಿದ್ಯಾಭ್ಯಾಸ, ವಿವಾಹ ಅಥವಾ ಇತರ ಹೊಂದಾಣಿಕೆಗಳಲ್ಲಿ ಸಣ್ಣ ಮಟ್ಟದ ಸಮಸ್ಯೆಗಳನ್ನು ಎದುರಿಸಬಹುದು. ಆದರೆ ನಂತರದ 50% ಅವಧಿಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸುತ್ತಾರೆ. ಈ ಬೆರಳನ್ನು ಚಂದ್ರನ ಬೆರಳು ಎಂದೂ ಕರೆಯಲಾಗುತ್ತದೆ. ಇವರಿಗೆ ಪ್ರಯಾಣ, ಹೊಸ ಕ್ಷೇತ್ರಗಳ ಭೇಟಿ ಮತ್ತು ಕುತೂಹಲ ಹೆಚ್ಚು. ರಾಜಕೀಯ ಸ್ಥಾನಮಾನ ಮತ್ತು ಸತತ ಸಾಧಕರಾಗುವ ಯೋಗವೂ ಇರುತ್ತದೆ. ಇಂತಹ ವ್ಯಕ್ತಿಗಳು ಕೋಪ ಮತ್ತು ಊಹಾಪೋಹಗಳನ್ನು ನಿಯಂತ್ರಿಸಿದರೆ ಹೆಚ್ಚಿನ ಶುಭ ಫಲಗಳನ್ನು ಪಡೆಯುತ್ತಾರೆ ಎಂದು ಶಾಸ್ತ್ರಗಳು ಹೇಳುತ್ತವೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

ದಪ್ಪ ಆಗಿದ್ದಕ್ಕೆ ಬಾಡಿ ಶೇಮಿಂಗ್ ಅನುಭವಿಸಿದ ‘ಮಿಲನ’ ನಟಿ ಪಾರ್ವತಿ – Kannada News | Milana Actress Parvathy Thiruvothu Body Shamed for Weight Gain: Her Resilient Stance

ಚಿತ್ರರಂಗ ಎಷ್ಟು ಪ್ರೀತಿಯನ್ನು ನೀಡುತ್ತದೆಯೋ ಅಷ್ಟೇ ದ್ವೇಷವನ್ನು ಕೂಡ ಕೊಡುತ್ತದೆ. ಈ ರಂಗದಲ್ಲಿ ಲುಕ್ ಅನ್ನೋದಕ್ಕೆ ತುಂಬಾನೇ ಪ್ರಾಮುಖ್ಯತೆ ಕೊಡುತ್ತಾರೆ. ಹೀಗಾಗಿ ನಟ-ನಟಿಯರ ದೇಹದಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ಆ ಬಗ್ಗೆ ಚರ್ಚೆ ನಡೆಯುತ್ತದೆ. ಕೆಲವರು ಇದಕ್ಕೆ ಅಂಜುತ್ತಾರೆ. ಇನ್ನೂ ಕೆಲವರು ಧೈರ್ಯವಾಗಿ ಎದುರಿಸುತ್ತಾರೆ. ಕನ್ನಡದ ‘ಮಿಲನ’ ಸಿನಿಮಾದಲ್ಲಿ ನಟಿಸಿದ್ದ ಪಾರ್ವತಿ (Parvathy) ಅವರಿಗೆ ಬಾಡಿ ಶೇಮಿಂಗ್ ಆಗಿದೆ.

ಪಾರ್ವತಿ ಅವರು ಕೇರಳದ ಕೋಳಿಕ್ಕೋಡ್​ನವರು. ಅವರಿಗೆ ಈಗ 37 ವರ್ಷ. ಇನ್ನೂ ಅವರು ವಿವಾಹದ ಬಗ್ಗೆ ಚಿಂತೆ ಮಾಡಿಲ್ಲ. 2006ರಲ್ಲಿ ಅವರು ಚಿತ್ರರಂಗಕ್ಕೆ ಬಂದರು. ಆಗ ಅವರಿಗೆ ವಯಸ್ಸು 17 ವರ್ಷ. 2007ರಲ್ಲಿ ಮಾಡಿದ ‘ಮಿಲನ’ ಸಿನಿಮಾ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಪುನೀತ್ ಜೊತೆ ಅವರು ತೆರೆ ಹಂಚಿಕೊಂಡರು. ಆ ಬಳಿಕ ಕನ್ನಡದಲ್ಲಿ ‘ಪೃಥ್ವಿ’ ಸಿನಿಮಾ ಮಾಡಿದರು. ಹಿಟ್ ಜೋಡಿ ಎನಿಸಿಕೊಂಡಿದ್ದ ಪುನೀತ್ ಹಾಗೂ ಪಾರ್ವತಿ ಈ ಚಿತ್ರಕ್ಕಾಗಿ ಮತ್ತೆ ಒಂದಾದರು.

ಆ ಬಳಿಕ ಪಾರ್ವತಿ ‘ಅಂದರ್ ಬಾಹರ್’ ಬಿಟ್ಟು ಬೇರೆ ಯಾವುದೇ ಕನ್ನಡ ಸಿನಿಮಾ ಮಾಡಿಲ್ಲ. ಈಗ ಪಾರ್ವತಿ ಅವರು ಮಲಯಾಳಂ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅಲ್ಲಿಯೂ ಅವರು ಚ್ಯೂಸಿ ಆಗಿದ್ದು, ಅಲ್ಲೊಂದು ಇಲ್ಲೊಂದು ಚಿತ್ರ ಮಾಡುತ್ತಾ ಇದ್ದಾರೆ. ಅವರಿಗೆ ಈಗ ಕೇರಳಿಗರಿಂದ ಹೇಟ್ ಸಂದೇಶ, ಬಾಡಿ ಶೇಮಿಂಗ್ ಎದುರಾಗಿದೆ.

ಪಾರ್ವತಿ ಮೆನನ್ ಮೊದಲಿಗಿಂತ ದಪ್ಪ ಆಗಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಲುಕ್ ವಿಷಯ ಇಟ್ಟುಕೊಂಡು ಟೀಕೆ ಮಾಡಿದ್ದು ಸರಿ ಅಲ್ಲ ಎಂಬ ಮಾತು ಕೇಳಿ ಬಂದಿದೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಸಿನಿಮಾ ‘ಮಿಲನ’ ಸುಂದರಿ ಪಾರ್ವತಿ ಮೆನನ್ ಈಗೇನು ಮಾಡುತ್ತಿದ್ದಾರೆ ಗೊತ್ತಾ?

ಈ ಮೊದಲು ಕೂಡ ಪಾರ್ವತಿ ಮೆನನ್ ಅವರು ಇದೇ ರೀತಿಯ ತೊಂದರೆ ಅನುಭವಿಸಿದ ಉದಾಹರಣೆ ಇದೆ. ಆದರೆ, ಇದಕ್ಕೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಕೆಲ ನಟಿಯರು ಈ ರೀತಿ ಆದಾಗ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿದ ಉದಾಹರಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Horoscope 3rd February: ಇಂದು ಈ ರಾಶಿಯವರ ಕಾರ್ಯ ನಿರುಪಯುಕ್ತ ಎನಿಸುವುದು – Kannada News | Horoscope 3 February 2026 Dina Rashi Bhavishya Today, Work of these zodiac signs will seems useless

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಉದ್ವೇಗ, ಅಪರಿಚಿತರ ಕರೆ, ಆರ್ಥಿಕ ಬೇಡಿಕೆ, ಪ್ರಚಾರದ ಆಸೆ, ಅಧಿಕಾರದ ಗೊಂದಲ, ಯಂತ್ರ ಮಾರಾಟದಿಂದ ಲಾಭ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಆಯುಷ್ಮಾನ್, ಕರಣ : ಬಾಲವ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 23 pm, ಇಂದಿನ ಶುಭಾಶುಭ ಕಾಲ : ರಾಹು 15:31 – 16:57, ಯಮಗಂಡ ಕಾಲ 09:46 – 11:12, ಗುಳಿಕ ಕಾಲ 12:38 – 14:05

ಮೇಷ ರಾಶಿ :

ನಿಮಹೆ ಸಾಧ್ಯವಾದುದನ್ನು ಮಾತ್ರ ಒಪ್ಪಿಕೊಳ್ಳಿ. ಪ್ರತ್ಯುತ್ತರ ನೀಡಲು ಯಾರು ಎದುರಿನವರು ಎಂದು ತಿಳಿಯಿರಿ. ನಿಮಗೆ ಆಪ್ತರ ಜೊತೆ ಮಾತನಾಡದೇ ನೆಮ್ಮದಿಯು ಸಿಗದೇಹೋದೀತು. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಬರಲಿವೆ. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ. ಬೇಡದ ಕಡೆಗಳಲ್ಲಿ ಹಣವನ್ನು ವ್ಯಯಿಸುವಷ್ಟು ಒಳ್ಳೆಯ ಕಡೆ ಮಾಡಲಾರಿರಿ.

ವೃಷಭ ರಾಶಿ :

ನೀವು ಖರ್ಚು ಮಾಡುವುದಕ್ಕಿಂತ ಹೆಚ್ಚಿನದನ್ನು ಉಳಿಸುವುದು ಮತ್ತು ನೀವು ಹೂಡಿಕೆ ಮಾಡಿದರೆ ಸುರಕ್ಷತೆ ಬಗ್ಗೆ ಲಕ್ಷ್ಯವಿರಲಿ. ನಿಮಗೆ ಸಿಗುವ ಆಸ್ತಿಯ ಬಗ್ಗೆ ಕುತೂಹಲವಿರಲಿದೆ. ನೀವು ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗುವುದು. ಸಂಗಾತಿಯ ಜೊತೆ ವಾಗ್ವಾದ ಮಾಡುವಿರಿ.

ಮಿಥುನ ರಾಶಿ :

ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಗಳು ಬರಲಿವೆ. ನೀವು ಮಾಡಿದ ಕಠಿಣ ಪರಿಶ್ರಮ ಅಂತಿಮವಾಗಿ ಫಲ ನೀಡುತ್ತದೆ. ನಿಮ್ಮ ಹಣದ ಮೇಲೆ ನಿಗಾ ಇರಿಸಿ, ಯಾವುದೇ ಅಪಾಯಗಳನ್ನು ತೆಗೆದುಕೊಳ್ಳದಂತೆ ದೂರವಿರಿ. ಪ್ರೋತ್ಸಾಹವಿಲ್ಲದೇ ಏನನ್ನು ಮಾಡಲು ಮನಸ್ಸಾಗದು. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ತೋರಿಸಬಹುದು. ಸಾಮಾಜಿಕ ಕಾರ್ಯಗಳನ್ನು ಮಾಡಲು ನಿಮಗೆ ಇಂದು ಉತ್ಸಾಹ ಇರಲಿದೆ. ಸಜ್ಜನರ ಸಹವಾಸವು ಅನಿರೀಕ್ಷಿತವಾಗಿ ಸಿಗುವುದು.

ಕರ್ಕಾಟಕ ರಾಶಿ :

ಅದೃಷ್ಟವು ನಿಮ್ಮ ದಾರಿಯಲ್ಲಿ ಬರುತ್ತಿದೆ ಮತ್ತು ನಿಮ್ಮ ಕನಸುಗಳನ್ನು ನೀವು ನಂಬಿದರೆ, ನಿಮ್ಮ ಗುರಿಯಲ್ಲಿ ನಿರತರಾಗಿದ್ದರೆ, ನಿಮಗೆ ಯಶಸ್ಸು ಖಚಿತ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಸಂದೇಹಪಡಬಹುದು. ಅವಕಾಶಗಳನ್ನು ತೆಗೆದುಕೊಳ್ಳಲು ಹಿಂಜರಿಯದಿರಿ. ಹಿರಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗುವುದು. ಸ್ತ್ರೀಯರಿಗೆ ಮನೆಯ ಕೆಲಸವು ಸಾಕೆನಿಸಿ ಹೊರಗೆ ಹೋಗಬೇಕು ಎನಿಸಬಹುದು.

ಸಿಂಹ ರಾಶಿ :

ಮುಕ್ತವಾಗಿ ಸಂವಹನ ಮಾಡಿ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಮಯ ತೆಗೆದುಕೊಳ್ಳಿ. ಇಂದು ಕೆಲವು ಹೆಜ್ಜೆಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಿಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ಪ್ರಯೋಜನವಾಗಲಿದೆ. ನಿಮ್ಮ ಮನಸ್ಸಿನ ತಾದಾತ್ಮ್ಯದಿಂದ ನಿಮಗೆ ಕಷ್ಟದ ಪೂರ್ಣ ಪ್ರಭಾವವು ನಿಮ್ಮ‌ ಮೇಲೆ ಆಗದೇಹೋದೀತು. ಮಕ್ಕಳಿಗೆ ಶಿಸ್ತನ್ನು ಕಲಿಸಲು ನಿಮಗೆ ಆಗದೇ ಹೋದೀತು. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲ್ಲು ಪತ್ನಿಯಿಂದ ಪ್ರಚೋದಿತರಾಗುವಿರಿ.

ಕನ್ಯಾ ರಾಶಿ :

ಇಂದು ಹೆಚ್ಚಿದ ಭಾವನೆಗಳಿಂದ ನೀವು ನಿಮ್ಮವರ ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳುವಿರಿ. ನೀವು ಹೊಂದಿರುವ ಅಪಾರ ಧೈರ್ಯವು ಎಂತಹ ನಕಾರಾತ್ಮಕ ಸಂದರ್ಭವನ್ನೂ ತಡೆದುನಿಲ್ಲಿಸಬಹುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ಕೆಲವರ ಮಾತನ್ನು ನೀವು ನಿರ್ಲಕ್ಷಿಸುವುದೇ ಉತ್ತಮ. ನಿಮ್ಮ ನಿರೀಕ್ಷೆಯ ಸಮಯವು ಬಾರದೇ ನಿಮಗೆ ಬೇಸರವಾಗುವುದು.

ತುಲಾ ರಾಶಿ :

ನೀವು ಏನೇ ಮಾಡಿದರೂ ಸಂಗಾತಿಯ ಪೂರ್ಣ ಬೆಂಬಲ ನಿಮಗೆ ಸಿಗುತ್ತದೆ. ಉಳಿದೆಲ್ಲವೂ ನಿಮ್ಮ ಪರವಾಗಿ ಇರುತ್ತದೆ. ಇಂದು ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರುವಿರಿ. ಇಂದು ನಿಮ್ಮ ಪ್ರೀತಿಯನ್ನು ಇತರರಿಗೆ ವ್ಯಕ್ತಪಡಿಸಲು ಸುಲಭವಾದ ಮಾರ್ಗ ಸಿಗಲಿದೆ. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಕೇಳರು. ಹಣದ ವ್ಯವಹಾರವನ್ನು ಆಪ್ತರ ಜೊತೆ ಸೇರಿ ಮಾಡುವುದು ಉತ್ತಮ. ನಂಬಿಕಸ್ಥರನ್ನು ಮಾತ್ರ ನಿಮ್ಮ ಹತ್ತಿರ ಸೇರಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ :

ಇಂದು ನೀವು ಬಂಧುಗಳ ಜೊತೆ ಸಮಯ ಕಳೆಯಬಹುದು. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಆಸಕ್ತಿದಾಯಕ ಸುದ್ದಿಗಳನ್ನು ಪಡೆಯುತ್ತೀರಿ. ಇಂದಿನ ಕೆಲಸಗಳನ್ನು ಮುಂದೂಡುವು ಮನಸ್ಸಿನಿಂದ ಮಾಡುವುದು ಬೇಡ. ಯಾರನ್ನೂ ಅಂಧಾಭಿಮಾನದಿಂದ ನಂಬಬೇಡಿ. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ. ಅಧಿಕಾರಿಗಳಿಂದ ನಿಮಗೆ ಅಪಮಾನವೂ ಆದೀತು. ಆಹಾರ ಅಭಾವವಾಗಬಹುದು. ವಿದ್ಯಾಭ್ಯಾಸಕ್ಕೆ ಉಂಟಾದ ತೊಂದರೆಯನ್ನು ಮನೆಯಲ್ಲಿ ಮಾತನಾಡಿ ಬಗೆಹರಿಸಿಕೊಳ್ಳುವಿರಿ.

ಧನು ರಾಶಿ :

ಖರ್ಚಿನ ವಿಚಾರದಲ್ಲಿ ಔದಾರ್ಯ ಬೇಡ. ವಾಸಸ್ಥಳ ಬದಲಾವಣೆಯಿಂದ ಹೆಚ್ಚು ಸಂತೋಷ ಇರುವುದು. ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ನೀವು ಪ್ರವಾಸಕ್ಕೆ ಹೋಗುವ ದಿನ ಇಂದು. ನಿಮ್ಮ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ನೀವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ನೀವು ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಬಹುದು. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ಮಕ್ಕಳ ವಿವಾಹಕ್ಕಾಗಿ ಓಡಾಟ, ಮಾತುಕತೆಗಳನ್ನು ಮಾಡಬೇಕಾದೀತು.

ಇದನ್ನೂ ಓದಿ: ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸುವ ಸೂರ್ಯನಿಂದ ಯಾವ ರಾಶಿಗಳ ಅನಿಷ್ಟ ದೂರ?

ಮಕರ ರಾಶಿ :

ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಉತ್ಸಾಹವನ್ನು ನೀವು ನಿಯಂತ್ರಿಸಬೇಕು. ಇಂದು ನಿಮ್ಮ ಪ್ರೀತಿಪಾತ್ರರು ನಿಮ್ಮ ಮಾತನ್ನು ಕೇಳಲು ಬಯಸುವುದಿಲ್ಲ. ಉದ್ಯೋಗದಲ್ಲಿ ಇರುವವರು ಸವಾಲಿನ ಕೆಲಸಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು. ಆರ್ಥಿಕತೆಯ ಬೆಳವಣಿಗೆಯು ನಿಮಗೆ ಸಂತೋಷವನ್ನು ಕೊಡುವುದು.‌ ವೈದ್ಯರಿಗೆ ಉತ್ತಮ ಅವಕಾಶವು ಸಿಗಬಹುದು.

ಕುಂಭ ರಾಶಿ :

ಆದಾಯ ಮತ್ತು ಖರ್ಚಿನ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಬೇಕು. ನಿಮ್ಮ ಕುಟುಂಬದವರ ಆರೋಗ್ಯವನ್ನು ನೋಡಿಕೊಳ್ಳಬೇಕು. ಕೆಲಸದ ಜವಾಬ್ದಾರಿಗಳನ್ನು ಬಹಳ ಎಚ್ಚರಿಕೆಯಿಂದ ನಿರ್ವಹಿಸಿ. ನಿಮ್ಮ ನಿರ್ಮಾಣದ ಕಾರ್ಯಗಳು ನಿಧಾನವಾಗುವುದು. ನಿಮ್ಮ‌ ಮನೋಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಮಾಡುವರು. ನಿಮಗೆ ಆಪ್ತರಿಂದ ಬೆಂಬಲ ಸಿಗಲಿದೆ. ಪ್ರಯಾಣದಲ್ಲಿ ಬರುವ ತೊಂದರೆಯನ್ನು ದೂರಮಾಡಿಕೊಳ್ಳುವಿರಿ.

ಮೀನ ರಾಶಿ :

ಓದು ಮತ್ತು ಬರವಣಿಗೆಯಲ್ಲಿ ಸಮಯ ಕಳೆಯಿರಿ. ಆರೋಗ್ಯವು ಉತ್ತಮವಾಗಿರುತ್ತದೆ. ವ್ಯವಹಾರದ ಪರಿಸ್ಥಿತಿ ಬಲವಾಗಿರುತ್ತದೆ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ನಿಮ್ಮ ಕುಟುಂಬದವರ ಜೊತೆ ಅಧಿಕ‌ ಕಾಲವನ್ನು ಕಳೆಯುವಿರಿ. ಆರ್ಥಿಕತೆಯಲ್ಲಿ ಸ್ವಲ್ಪ ಚೇತರಿಕೆ ಇದ್ದು ನಿಮಗೆ ನೆಮ್ಮದಿಯೂ ಸಿಗಲಿದೆ. ನಿಮ್ಮ ವಸ್ತುಗಳನ್ನು ಜೋಪಾನವಾಗಿ ಇರಿಸಿಕೊಳ್ಳಿ. ಷೇರು ಮಾರುಕಟ್ಟೆಯ ನಾಡಿಯನ್ನು ಅರಿತು ಹೂಡಿಕೆ ಮಾಡುವಿರಿ.

-ಲೋಹಿತ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆ ಸಮಸ್ಯೆ ನಿವಾರಣೆ ಆಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದಲ್ಲಿ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕವಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನವ ವಿವಾಹಿತರಿಗೆ ಸಂತೋಷವಾಗಿ ಕಳೆಯುವಂಥ ಯೋಗ ಇದೆ. ಪ್ರೀತಿ- ಪ್ರೇಮದಲ್ಲಿ ಇರುವವರು ಮನೆಯಲ್ಲಿ ಈ ವಿಚಾರವನ್ನು ಪ್ರಸ್ತಾವ ಮಾಡುವ ಬಗ್ಗೆ ನಿರ್ಧಾರ ಮಾಡಲಿದ್ದೀರಿ. ವಿವಾಹಿತರು ಇದ್ದಲ್ಲಿ ಸಂಗಾತಿ ಮೂಲಕ ಹಣಕಾಸಿನ ನೆರವು ದೊರೆಯಲಿದೆ. ಕಲೆ, ಫ್ಯಾಷನ್, ಸೌಂದರ್ಯ, ವಿನ್ಯಾಸ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಶುಭ ಫಲ ಸಿಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸರಿ- ತಪ್ಪುಗಳ ಬಗ್ಗೆ ಆತ್ಮವಿಶ್ಲೇಷಣೆ ಮಾಡಿಕೊಳ್ಳುವುದಕ್ಕೆ ಸೂಕ್ತವಾದ ದಿನ ಇದಾಗಿರುತ್ತದೆ. ಗಂಭೀರವಾದ ಸಂಗತಿಗಳ ಬಗ್ಗೆ ಪ್ಲಾನಿಂಗ್- ಬಜೆಟ್ ಸಿದ್ಧ ಮಾಡಿಕೊಳ್ಳುವುದಕ್ಕಾಗಿ ನೀವು ಒಬ್ಬರೇ ದೂರದ ಪ್ರದೇಶಗಳಿಗೆ ಏಕಾಂಗಿಯಾಗಿ ತೆರಳುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯವನ್ನು ಹೀಗಳೆದು ಮಾತನಾಡುವುದರಿಂದ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ. ತುಂಬ ಮುಖ್ಯವಾದ ಕೆಲಸ ಮಾಡುತ್ತಿದ್ದೀರಿ ಅಂತಾದಲ್ಲಿ ದಿನ ಮಟ್ಟಿಗೆ ಅದನ್ನು ಮುಂದೂಡುವುದು ಕ್ಷೇಮ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ .

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಶಿಕ್ಷಣ, ತರಬೇತಿ, ಬರವಣಿಗೆ ಸಂಬಂಧಿತ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಉತ್ತಮವಾದ ಫಲ ಸಿಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಬಡ್ತಿ, ವೇತನ ಹೆಚ್ಚಳದ ಬಗ್ಗೆ ಇತರರ ಮೂಲಕ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಭಾವನಾತ್ಮಕ ದೃಷ್ಟಿಯಿಂದ ಏರುಪೇರಿನಿಂದ ಕೂಡಿರುವ ದಿನ ಇದಾಗಿರುತ್ತದೆ. ಸಣ್ಣ- ಪುಟ್ಟ ವಿಚಾರಗಳಿಗೂ ಮನಸ್ಸು ತೀವ್ರವಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಆದ್ದರಿಂದ ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿನ ಕೆಲವು ಗೊಂದಲಗಳು ಮಾತುಕತೆ ಮೂಲಕ ಬಗೆಹರಿಸಬಹುದು. ನೀವು ಉದ್ಯೋಗಸ್ಥರಾಗಿದ್ದಲ್ಲಿ ಸವಾಲಿನಿಂದ ಕೂಡಿದ ಪ್ರಾಜೆಕ್ಟ್ ಮುನ್ನಡೆಸುತ್ತಾ ಇದ್ದೀರಿ ಅಂತಾದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ನಿಮ್ಮಲ್ಲಿನ ನಾಯಕತ್ವ ಗುಣವು ಹೆಚ್ಚು ಪ್ರಚಾರಕ್ಕೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನ ಆಗಲಿದೆ. ಮೇಲಧಿಕಾರಿಗಳ ಗಮನ ನಿಮ್ಮತ್ತ ಸೆಳೆಯುವ ಸಾಧ್ಯತೆ ಇದೆ. ಹೊಸ ಜವಾಬ್ದಾರಿಗಳು ನಿಮಗೆ ವಹಿಸಬಹುದು. ನೀವು ಯಾವುದೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದರೂ ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಂಡುಬರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಭೂಮಿ ಸೂಕ್ತದ ಶ್ರವಣ ಮಾಡುವುದರಿಂದ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಅಥವಾ ಬೇರೆ ಯಾವುದಾದರೂ ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿನ ಅಡೆತಡೆಗಳು, ಸಮಸ್ಯೆಗಳು ದೂರವಾಗಲಿವೆ. ಇನ್ನು ಸೈಟು- ಜಮೀನು ಖರೀದಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದರಲ್ಲೂ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ ಸಹ ಪಡುವಂತೆ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಒತ್ತಡದ ಸನ್ನಿವೇಶಗಳನ್ನು ಎದುರಿಸುವಂತೆ ಆಗಲಿದೆ. ಚಿನ್ನ- ಬೆಳ್ಳಿ ಅಥವಾ ವಜ್ರಾಭರಣ ಖರೀದಿಗಾಗಿ ಹೆಚ್ಚಿನ ಖರ್ಚು ಮಾಡುವ ಯೋಗ ಇದೆ. ಒಂದು ವೇಳೆ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದಲ್ಲಿ ಖರ್ಚಿನ ಮೇಲೆ ಹಿಡಿತ ಇಟ್ಟುಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮಗೇನೋ ಅತಿ ಉತ್ಸಾಹ ಇರುತ್ತದೆ. ಆದರೆ ಸುತ್ತಮುತ್ತಲಿನವರ ಪರಿಸ್ಥಿತಿ, ಮನಸ್ಥಿತಿಯನ್ನು ಸಹ ಅರ್ಥ ಮಾಡಿಕೊಂಡು ಮಾತುಕತೆ ಆಡುವುದು ಒಳ್ಳೆಯದು. ಹಣಕಾಸಿನ ವಿಚಾರ ಮಾತನಾಡುತ್ತೀರಿ ಅಂತಾದಲ್ಲಿ ಸಾಧ್ಯಾಸಾಧ್ಯತೆ ಬಗ್ಗೆ ಸ್ಪಷ್ಟ ಚಿತ್ರಣ ಇರಬೇಕು. ಮನೆ ನಿರ್ಮಾಣ, ಆಸ್ತಿ ಖರೀದಿಯ ಮಾತುಕತೆಗೆ ತೆರಳುತ್ತಿದ್ದೀರಿ ಅಂತಾದಲ್ಲಿ ಮನೆ ದೇವರನ್ನು ಮನಸ್ಸಿನಲ್ಲಿ ಸ್ಮರಣೆ ಮಾಡಿಕೊಂಡು ಮುಂದುವರಿಯಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಶ್ರಮ ಹಾಗೂ ಶಿಸ್ತಿನ ಜೀವನಕ್ಕೆ ಪ್ರಾಮುಖ್ಯ ನೀಡುವ ದಿನ ಇದಾಗಿರುತ್ತದೆ. ನೀವು ಕೈಗೆತ್ತಿಕೊಂಡಿರುವ ಕೆಲಸ- ಕಾರ್ಯಗಳು ನಿಧಾನವಾಗಿ ಮುಂದಕ್ಕೆ ಸಾಗಿದರೂ ದೃಢವಾಗಿ ಗುರಿಯತ್ತ ತಲುಪುವ ಸೂಚನೆ ದೊರೆಯುತ್ತದೆ. ಸರ್ಕಾರಿ ಕೆಲಸಗಳು ಹಾಗೂ ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬ ಆಗಬಹುದು. ಆದರೆ ತಾಳ್ಮೆ- ಸಂಯಮದಿಂದ ಮುಂದುವರಿದಲ್ಲಿ ಯಶಸ್ವಿಯಾಗಿ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link