Category Archives: Blog

Your blog category

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆ ಸಮಸ್ಯೆ ನಿವಾರಣೆ ಆಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದಲ್ಲಿ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕವಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ನವ ವಿವಾಹಿತರಿಗೆ ಸಂತೋಷವಾಗಿ ಕಳೆಯುವಂಥ ಯೋಗ ಇದೆ. ಪ್ರೀತಿ- ಪ್ರೇಮದಲ್ಲಿ ಇರುವವರು ಮನೆಯಲ್ಲಿ ಈ ವಿಚಾರವನ್ನು ಪ್ರಸ್ತಾವ ಮಾಡುವ ಬಗ್ಗೆ ನಿರ್ಧಾರ ಮಾಡಲಿದ್ದೀರಿ. ವಿವಾಹಿತರು ಇದ್ದಲ್ಲಿ ಸಂಗಾತಿ ಮೂಲಕ ಹಣಕಾಸಿನ ನೆರವು ದೊರೆಯಲಿದೆ. ಕಲೆ, ಫ್ಯಾಷನ್, ಸೌಂದರ್ಯ, ವಿನ್ಯಾಸ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಶುಭ ಫಲ ಸಿಗುತ್ತದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಸರಿ- ತಪ್ಪುಗಳ ಬಗ್ಗೆ ಆತ್ಮವಿಶ್ಲೇಷಣೆ ಮಾಡಿಕೊಳ್ಳುವುದಕ್ಕೆ ಸೂಕ್ತವಾದ ದಿನ ಇದಾಗಿರುತ್ತದೆ. ಗಂಭೀರವಾದ ಸಂಗತಿಗಳ ಬಗ್ಗೆ ಪ್ಲಾನಿಂಗ್- ಬಜೆಟ್ ಸಿದ್ಧ ಮಾಡಿಕೊಳ್ಳುವುದಕ್ಕಾಗಿ ನೀವು ಒಬ್ಬರೇ ದೂರದ ಪ್ರದೇಶಗಳಿಗೆ ಏಕಾಂಗಿಯಾಗಿ ತೆರಳುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ಸಾಮರ್ಥ್ಯವನ್ನು ಹೀಗಳೆದು ಮಾತನಾಡುವುದರಿಂದ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ. ತುಂಬ ಮುಖ್ಯವಾದ ಕೆಲಸ ಮಾಡುತ್ತಿದ್ದೀರಿ ಅಂತಾದಲ್ಲಿ ದಿನ ಮಟ್ಟಿಗೆ ಅದನ್ನು ಮುಂದೂಡುವುದು ಕ್ಷೇಮ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ .

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಶಿಕ್ಷಣ, ತರಬೇತಿ, ಬರವಣಿಗೆ ಸಂಬಂಧಿತ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಉತ್ತಮವಾದ ಫಲ ಸಿಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಬಡ್ತಿ, ವೇತನ ಹೆಚ್ಚಳದ ಬಗ್ಗೆ ಇತರರ ಮೂಲಕ ಸುಳಿವು ದೊರೆಯಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಭಾವನಾತ್ಮಕ ದೃಷ್ಟಿಯಿಂದ ಏರುಪೇರಿನಿಂದ ಕೂಡಿರುವ ದಿನ ಇದಾಗಿರುತ್ತದೆ. ಸಣ್ಣ- ಪುಟ್ಟ ವಿಚಾರಗಳಿಗೂ ಮನಸ್ಸು ತೀವ್ರವಾಗಿ ಪ್ರತಿಕ್ರಿಯಿಸುವ ಸಾಧ್ಯತೆ ಇದೆ. ಆದ್ದರಿಂದ ನಿರ್ಧಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿನ ಕೆಲವು ಗೊಂದಲಗಳು ಮಾತುಕತೆ ಮೂಲಕ ಬಗೆಹರಿಸಬಹುದು. ನೀವು ಉದ್ಯೋಗಸ್ಥರಾಗಿದ್ದಲ್ಲಿ ಸವಾಲಿನಿಂದ ಕೂಡಿದ ಪ್ರಾಜೆಕ್ಟ್ ಮುನ್ನಡೆಸುತ್ತಾ ಇದ್ದೀರಿ ಅಂತಾದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ನಿಮ್ಮಲ್ಲಿನ ನಾಯಕತ್ವ ಗುಣವು ಹೆಚ್ಚು ಪ್ರಚಾರಕ್ಕೆ ಬರುತ್ತವೆ. ಉದ್ಯೋಗ ಸ್ಥಳದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರಿಗೆ ಮಾರ್ಗದರ್ಶನ ಆಗಲಿದೆ. ಮೇಲಧಿಕಾರಿಗಳ ಗಮನ ನಿಮ್ಮತ್ತ ಸೆಳೆಯುವ ಸಾಧ್ಯತೆ ಇದೆ. ಹೊಸ ಜವಾಬ್ದಾರಿಗಳು ನಿಮಗೆ ವಹಿಸಬಹುದು. ನೀವು ಯಾವುದೇ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದರೂ ಹಣಕಾಸಿನ ವಿಷಯದಲ್ಲಿ ಸ್ಥಿರತೆ ಕಂಡುಬರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಭೂಮಿ ಸೂಕ್ತದ ಶ್ರವಣ ಮಾಡುವುದರಿಂದ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಅಥವಾ ಬೇರೆ ಯಾವುದಾದರೂ ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿನ ಅಡೆತಡೆಗಳು, ಸಮಸ್ಯೆಗಳು ದೂರವಾಗಲಿವೆ. ಇನ್ನು ಸೈಟು- ಜಮೀನು ಖರೀದಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದರಲ್ಲೂ ಅನುಕೂಲ ಆಗಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ ಸಹ ಪಡುವಂತೆ ಆಗಲಿದೆ. ಉದ್ಯೋಗ ಸ್ಥಳದಲ್ಲಿ ಒತ್ತಡದ ಸನ್ನಿವೇಶಗಳನ್ನು ಎದುರಿಸುವಂತೆ ಆಗಲಿದೆ. ಚಿನ್ನ- ಬೆಳ್ಳಿ ಅಥವಾ ವಜ್ರಾಭರಣ ಖರೀದಿಗಾಗಿ ಹೆಚ್ಚಿನ ಖರ್ಚು ಮಾಡುವ ಯೋಗ ಇದೆ. ಒಂದು ವೇಳೆ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದಲ್ಲಿ ಖರ್ಚಿನ ಮೇಲೆ ಹಿಡಿತ ಇಟ್ಟುಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮಗೇನೋ ಅತಿ ಉತ್ಸಾಹ ಇರುತ್ತದೆ. ಆದರೆ ಸುತ್ತಮುತ್ತಲಿನವರ ಪರಿಸ್ಥಿತಿ, ಮನಸ್ಥಿತಿಯನ್ನು ಸಹ ಅರ್ಥ ಮಾಡಿಕೊಂಡು ಮಾತುಕತೆ ಆಡುವುದು ಒಳ್ಳೆಯದು. ಹಣಕಾಸಿನ ವಿಚಾರ ಮಾತನಾಡುತ್ತೀರಿ ಅಂತಾದಲ್ಲಿ ಸಾಧ್ಯಾಸಾಧ್ಯತೆ ಬಗ್ಗೆ ಸ್ಪಷ್ಟ ಚಿತ್ರಣ ಇರಬೇಕು. ಮನೆ ನಿರ್ಮಾಣ, ಆಸ್ತಿ ಖರೀದಿಯ ಮಾತುಕತೆಗೆ ತೆರಳುತ್ತಿದ್ದೀರಿ ಅಂತಾದಲ್ಲಿ ಮನೆ ದೇವರನ್ನು ಮನಸ್ಸಿನಲ್ಲಿ ಸ್ಮರಣೆ ಮಾಡಿಕೊಂಡು ಮುಂದುವರಿಯಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಶ್ರಮ ಹಾಗೂ ಶಿಸ್ತಿನ ಜೀವನಕ್ಕೆ ಪ್ರಾಮುಖ್ಯ ನೀಡುವ ದಿನ ಇದಾಗಿರುತ್ತದೆ. ನೀವು ಕೈಗೆತ್ತಿಕೊಂಡಿರುವ ಕೆಲಸ- ಕಾರ್ಯಗಳು ನಿಧಾನವಾಗಿ ಮುಂದಕ್ಕೆ ಸಾಗಿದರೂ ದೃಢವಾಗಿ ಗುರಿಯತ್ತ ತಲುಪುವ ಸೂಚನೆ ದೊರೆಯುತ್ತದೆ. ಸರ್ಕಾರಿ ಕೆಲಸಗಳು ಹಾಗೂ ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬ ಆಗಬಹುದು. ಆದರೆ ತಾಳ್ಮೆ- ಸಂಯಮದಿಂದ ಮುಂದುವರಿದಲ್ಲಿ ಯಶಸ್ವಿಯಾಗಿ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ – Kannada News | PM Modi thanks Donald Trump for reducing tariffs says His leadership vital for global peace

ನವದೆಹಲಿ, ಫೆಬ್ರವರಿ 2: ಭಾರತದ ಮೇಲಿನ ಶೇ. 25ರಷ್ಟು ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಅಲ್ಲದೆ, ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ ನಮ್ಮ ಮುಂದಿದೆ ಎಂದು ಕೂಡ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಿದ್ದಕ್ಕಾಗಿ ಭಾರತದ 1.4 ಬಿಲಿಯನ್ ಜನರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಭಾರತದಲ್ಲಿ ತಯಾರಾದ ಉತ್ಪನ್ನಗಳು ಈಗ ಶೇ. 18ರಷ್ಟು ಕಡಿಮೆ ಸುಂಕವನ್ನು ಹೊಂದಿರುವುದು ಸಂತೋಷದ ಸಂಗತಿಯಾಗಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

“ನನ್ನ ಆತ್ಮೀಯ ಗೆಳೆಯರಾದ ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಇಂದು ಮಾತನಾಡಿ ಸಂತೋಷವಾಯಿತು. ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು ಈಗ ಶೇ. 25ರ ಬದಲು ಶೇ. 18ರಷ್ಟು ಸುಂಕವನ್ನು ಮಾತ್ರ ಹೊಂದುತ್ತಿರುವುದು ಸಂತೋಷ ತಂದಿದೆ. ಈ ಅದ್ಭುತ ಘೋಷಣೆಗಾಗಿ ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

“ಎರಡು ದೊಡ್ಡ ಆರ್ಥಿಕತೆಗಳು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳು ಒಟ್ಟಾಗಿ ಕೆಲಸ ಮಾಡಿದಾಗ ಅದು ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಅಲ್ಲದೆ ಪರಸ್ಪರ ಅಪಾರ ಅವಕಾಶಗಳನ್ನು ತೆರೆಯುತ್ತದೆ. ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯಗತ್ಯ. ಶಾಂತಿಗಾಗಿ ಅವರ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ

ವ್ಯಾಪಾರ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ರಷ್ಯಾದ ತೈಲ ಖರೀದಿಯನ್ನು ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇಂದು ಟ್ರಂಪ್ ತಮ್ಮ ಘೋಷಣೆಯ ವೇಳೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ವಿಷಯವನ್ನು ಮಾತ್ರವಲ್ಲದೆ ಭಾರತ ರಷ್ಯಾದ ಬದಲು ಅಮೆರಿಕ ಹಾಗೂ ವೆನೆಜುವೆಲಾದಿಂದ ತೈಲ ಖರೀದಿ ಮಾಡಲಿದೆ ಎಂದು ಕೂಡ ಹೇಳಿದ್ದರು. ಆದರೆ, ಈ ಬಗ್ಗೆ ಭಾರತ ಸರ್ಕಾರದಿಂದ ಯಾವುದೇ ಸ್ಪಷ್ಟನೆ ದೊರೆತಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್ – Kannada News | Donald Trump announces trade deal with India after talks with PM Modi tariffs lowered to 18 percent

ನವದೆಹಲಿ, ಫೆಬ್ರವರಿ 2: ತನ್ನ ಆಪ್ತ ಸ್ನೇಹಿತನಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫೋನ್​ನಲ್ಲಿ ಮಾತುಕತೆ ನಡೆಸಿದ ಅಮೆರಿಕ ಅಧ್ಯಕ್ಷ ಸರ್​ಪ್ರೈಸ್​ ನೀಡಿದ್ದಾರೆ. ಭಾರತ ಯುರೋಪ್ ಮತ್ತು ಅರಬ್ ಲೀಗ್ ಟ್ರೇಡ್ ಲೀಗ್ ಮಾಡಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಡೊನಾಲ್ಡ್ ಟ್ರಂಪ್ ಭಾರತದ ಜೊತೆಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ ದುಬಾರಿ ಸುಂಕವನ್ನು ಕಡಿಮೆ ಮಾಡಿದ್ದು, ಶೇ. 25ರಷ್ಟಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಿದ್ದಾರೆ. ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಬಹಳ ಮಹತ್ವದ್ದಾಗಿದೆ.

Published On – 10:49 pm, Mon, 2 February 26

Source link

ಆ ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar talks about her land dispute in Hassan

ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಶ್ (Yash) ತಾಯಿ ಪಷ್ಪಾ ಅರುಣ್ ಕುಮಾರ್ ಅವರು ಕಾನೂನಿನ ಹೋರಾಟ ಮುಂದುವರಿಸಿದ್ದಾರೆ. ಯಶ್ ಅವರು ಕೋಟ್ಯಂತರ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಅವರಿಗೆ ಈ ಚಿಕ್ಕ ಸೈಟ್ ಏನೇನೂ ಅಲ್ಲ. ಹಾಗಿದ್ದರೂ ಕೂಡ ಪುಷ್ಪಾ ಅವರು ಹಠ ಹಿಡಿದಿರುವುದು ಯಾಕೆ ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಅದಕ್ಕೆ ಅವರೇ ಈಗ ಉತ್ತರ ನೀಡಿದ್ದಾರೆ. ‘ನಾನು ಅರುಣ್ ಕುಮಾರ್ ಹೆಂಡತಿ ಆಗಿ ಮಾತನಾಡುತ್ತಿದ್ದೇನೆ. ಯಶ್ ಅಮ್ಮನಾಗಿ ಮಾತನಾಡುತ್ತಿಲ್ಲ. ಯಶ್ ಇಂದು ಕೋಟಿಗಟ್ಟಲೆ ದುಡಿಯುತ್ತಿರಬಹುದು. ಅವನಿಗೆ ಇದು ಚಿಕ್ಕದು ಆಗಿರಬಹುದು. ಆದರೆ ಎಲ್ಲ ಸಾರ್ವಜನಿಕರಿಗೆ ಇದು ಗೊತ್ತಾಗಬೇಕು. ಯಾರೂ ಕೂಡ ಹೆದರಿಕೊಂಡು ಬಿಟ್ಟುಬರಬಾರದು. ನಾನು ಹೆದರಿಕೊಂಡು ಬಿಟ್ಟುಹೋದರೆ ಎಲ್ಲರೂ ಇದೇ ರೀತಿ ಹೆದರಿಕೊಂಡು ಬಿಟ್ಟು ಹೋಗಬೇಕಾಗುತ್ತದೆ’ ಎಂದು ಪುಷ್ಪಾ ಅರುಣ್​ ಕುಮಾರ್ (Pushpa Arun Kumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ – Kannada News | Suniel Shetty Roopesh Shetty starrer Kannada Tulu language Jai movie OTT release

‘ಬಿಗ್ ಬಾಸ್ ಕನ್ನಡ 9’ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರ ನಟ ಮತ್ತು ನಿರ್ದೇಶಕ ಕೂಡ ಹೌದು. ಅವರು ಅಭಿನಯಿಸಿ, ನಿರ್ದೇಶನ ಮಾಡಿರುವ ‘ಜೈ’ ಸಿನಿಮಾ (Jai Movie) ಇತ್ತೀಚೆಗೆ ಬಿಡುಗಡೆ ಆಗಿತ್ತು. ತುಳು ಮತ್ತು ಕನ್ನಡ ಭಾಷೆಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಚಿತ್ರಮಂದಿರದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಬರುತ್ತಿದೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಫೆಬ್ರವರಿ 6ರಿಂದ ಜೀ5 ಒಟಿಟಿ (OTT) ಮೂಲಕ ‘ಜೈ’ ಸಿನಿಮಾ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಅವರು ನಟಿಸಿದ್ದಾರೆ ಎಂಬುದು ವಿಶೇಷ.

‘ಜೈ’ ಸಿನಿಮಾದಲ್ಲಿ ನಾಯಕನಾಗಿ ರೂಪೇಶ್ ಶೆಟ್ಟಿ ಅಭಿನಯಿಸಿದ್ದಾರೆ. ಅವರ ಜೊತೆ ರಾಜ್ ದೀಪಕ್ ಶೆಟ್ಟಿ, ಅದ್ವಿತಿ ಶೆಟ್ಟಿ, ದೇವದಾಸ್ ಕಾಪಿಕಾಡ್, ಅರವಿಂದ್ ಬೋಲಾರ್, ನವೀನ್ ಡಿ. ಪಡೀಲ್, ಭೋಜರಾಜ್ ವಮಂಜೂರ್ ಮುಂತಾದ ಕಲಾವಿದರು ನಟಿಸಿದ್ದಾರೆ. ಹಿಂದಿ ಚಿತ್ರರಂಗದ ಸ್ಟಾರ್ ನಟ ಸುನೀಲ್ ಶೆಟ್ಟಿ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸುನೀಲ್ ಶೆಟ್ಟಿ ಅವರ ಮಾತೃಭಾಷೆ ಕೂಡ ತುಳು. ಆ ಭಾಷೆಯ ಮೇಲಿನ ಪ್ರೀತಿಯಿಂದಾಗಿ ಅವರು ‘ಜೈ’ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದರು. ಅವರಿಂದಾಗಿ ಚಿತ್ರತಂಡಕ್ಕೆ ದೊಡ್ಡ ಬಲ ಬಂದಿತ್ತು. ಅವರ ಪಾತ್ರದ ಎಂಟ್ರಿ ದೃಶ್ಯವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗಿತ್ತು. ಸುನೀಲ್ ಶೆಟ್ಟಿ ಅವರು ಈ ಚಿತ್ರದಲ್ಲಿ ನಟಿಸಿದ್ದು ಮಾತ್ರವಲ್ಲದೇ ಪ್ರಚಾರದಲ್ಲಿ ಕೂಡ ಭಾಗಿ ಆಗಿದ್ದರು.

ಇದು ಸುನೀಲ್ ಶೆಟ್ಟಿ ಅವರು ನಟಿಸಿದ ಮೊದಲ ತುಳು ಸಿನಿಮಾ ಎಂಬುದು ಇನ್ನೊಂದು ವಿಶೇಷ. ಚಿತ್ರದ ಒಟಿಟಿ ರಿಲೀಸ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಈ ಸಿನಿಮಾವನ್ನು ಒಪ್ಪಿಕೊಳ್ಳಲು ನನಗೆ ಪ್ರೇರಣೆ ಆಗಿದ್ದು ಈ ತಂಡದ ಪ್ರಾಮಾಣಿಕತೆ ಹಾಗೂ ಈ‌ ಕಥೆಗಿರುವ ಶಕ್ತಿ. ತುಳು ಸಿನಿಮಾ, ಸಂಸ್ಕೃತಿಯನ್ನು ಮೆರೆಯುತ್ತದೆ. ಇಂತಹ ಒಂದು ವಿಶೇಷವಾದ ಚಿತ್ರವು ಜೀ5ನಲ್ಲಿ ರಿಲೀಸ್ ಆಗುವುದರಿಂದ ಭಾಷೆಯ ಗೆರೆಯನ್ನು ದಾಟಿ ಎಲ್ಲರ ಗಮನ ಸೆಳೆಯಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟ ವಿನ್ ಆಗಿದ್ದಕ್ಕೆ ರೂಪೇಶ್ ಶೆಟ್ಟಿಗೆ ಬೇಸರವಾಯ್ತಾ?

ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಮಾತನಾಡಿ, ‘ಈ ಸಿನಿಮಾ ನಮ್ಮ ಮಣ್ಣಿನ ಕಥೆಯನ್ನು ಹೇಳುತ್ತದೆ. ದಕ್ಷಿಣ ಕರ್ನಾಟಕದ ಸಾಹಿತ್ಯ, ಸಂಸ್ಕೃತಿ ಮುಂತಾದವುಗಳನ್ನು ಈ ಸಿನಿಮಾ ಒಳಗೊಂಡಿದೆ. ಇದು ನನ್ನ ಬದುಕಿಗೆ ಬಹಳ ಹತ್ತಿರವಾದ ಕಥೆ ಆಗಿದೆ. ಇದು ಕನ್ನಡ ಹಾಗೂ ತುಳುವಿನಲ್ಲಿ ಜೀ5ನಲ್ಲಿ ಪ್ರಸಾರ ಆಗಲಿರುವುದು ಮತ್ತೊಂದು ಪ್ರಮುಖ ಸಂಗತಿ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್ – Kannada News | Wild buffalo forcefully entered bike showroom in kannur watch viral video

ತಿರುವನಂತಪುರಂ, ಫೆಬ್ರವರಿ 2: ಕೇರಳದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋವೊಂದು ಭಾರೀ ವೈರಲ್ (Viral Video) ಆಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ. ಆ ಕಾಡುಕೋಣ ನುಗ್ಗಿದ್ದರಿಂದ ಶೋರೂಂನ ಗಾಜುಗಳು ಪುಡಿ-ಪುಡಿಯಾಗಿವೆ. ಈ ಆಘಾತಕಾರಿ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು – Kannada News | Charmadi Forest Fire: Western Ghats Grasslands Ablaze in Chickmagalur

ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ: ಸಿಡಿದೆದ್ದ ಬಿಜೆಪಿ, ಸದನದಲ್ಲಿ ಕೋಲಾಹಲ – Kannada News | Heated Argument Between BJP And Congress Over MLC Naseer Ahmed calls Narendra Modi traitor In session

ಬೆಂಗಳೂರು, (ಫೆಬ್ರವರಿ 02): ವಿಧಾನಪರಿಷತ್ ಕಲಾಪದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ , ಪರಿಷತ್ ಸದಸ್ಯ ನಜೀರ್ ಅಹ್ಮದ್  (Congress MLC Naseer Ahmed ) ವಿವಾದ ಸೃಷ್ಟಿಸಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸುತ್ತಿದ್ದ ವೇಳೆ ಕಾಂಗ್ರೆಸ್ ಪರಿಷತ್ ಸದಸ್ಯ ನಜೀರ್ ಅಹ್ಮದ್​ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ದೇಶದ್ರೋಹಿ ಎಂದು ಹೇಳಿ ವಿವಾದಕ್ಕೀಡಾಗಿದ್ದಾರೆ. ನಜೀರ್ ಅಹ್ಮದ್ ಅವರ ಮಾತಿಗೆ ಕೆರಳಿದ ಬಿಜೆಪಿ ಸದಸ್ಯರು, ಬಾವಿಗಿಳಿದು ಧರಣಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ಹೊರಹಾಕಿದರು.

ಅಲ್ಲದೇ ನಜೀರ್ ಅಹ್ಮದ್​​ ಕ್ಷಮೆ ಕೇಳಬೇಕು ಎಂದು ವಿಪಕ್ಷಗಳ ಸದಸ್ಯರು ಪಟ್ಟು ಹಿಡಿದಿದ್ದು, ಸದಸ್ಯರ ವಾಗ್ವಾದ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕೂಡಲೇ ಎಚ್ಚೆತ್ತ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ನಾಳೆ(ಫೆ.03) 11ಕ್ಕೆ ಮುಂದೂಡಿದರು. ಆದರೂ ಪಟ್ಟು ಸಡಿಸದ ಬಿಜೆಪಿ ಸದಸ್ಯರು ಧರಣಿ ಮುಂದುವರೆಸಿದ್ದಾರೆ.

ಇದನ್ನೂ ನೋಡಿ: ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ನಜೀರ್ ಅಹ್ಮದ್ ಹೇಳಿದ್ದೇನು?

ಇನ್ನು ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಜೀರ್ ಅಹ್ಮದ್, ಸದನದಲ್ಲಿ ಅಂಥದ್ದೇನೂ ಮಾತಾಡಿಲ್ಲ. ಪರಿಷತ್​ನಲ್ಲಿ ಆಗಿದ್ದನ್ನೆಲ್ಲ ಹೊರಗೆ ಹೇಳೋಕೆ ಆಗುವುದಿಲ್ಲ ಎಂದಷ್ಟೇ ಹೇಳಿ ತೆರಳಿದರು. ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಹ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟು ಹೋದರು.

ಪ್ರಧಾನಿಗೆ ನಿಂದಿನೆ ಸಹಿಸುವುದಿಲ್ಲ

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿಯನ್ನ ದೇಶ ದ್ರೋಹಿ ಅನ್ನೋ ರೀತಿ ನಿಂದಿಸಿದ್ದಾರೆ. ಸುಮಾರು 10 ಬಾರಿ ಹೇಳಿದ್ದಾರೆ. ಪ್ರಧಾನಿಯ ಕಾಲು ಧೂಳಿಗೂ ನಜೀರ್ ಅಹ್ಮದ್ ಸಮರಲ್ಲ. ಸಭಾಪತಿಗಳು ಅದನ್ನ ಕಡತದಿಂದ ತೆಗೆಯಿರಿ ಎಂದು ಹೇಳಿದ್ದಾರೆ. ಕ್ಷಮೆ ಕೇಳಿ ಅಂದ್ರೂ ಇನ್ನೂ 10 ಬಾರಿ ಘೋಷಣೆ ಕೂಗಿದ್ರು. ಅದೂ ಸಿಎಂ ಸಮ್ಮುಖದಲ್ಲೇ ಕೂಗಿದ್ದಾರೆ. ನಾಳೆ ಅವರನ್ನ ಸದನದಿಂದ ಅಮಾನತುಗೊಳಿಸುವಂತೆ ಒತ್ತಾಯಿಸಿದ್ದೇವೆ. ಕ್ರಮ ಆಗಲೇಬೇಕು, ಇಲ್ಲವಾದ್ರೆ ಸದನ ನಡೆಯಲು ನಾವು ಬಿಡಲ್ಲ ಎಂದರು.

ನಮ್ಮನ್ನೂ ಬೇಕಿದ್ರೆ ಹೊರ ಹಾಕಲಿ. ಪ್ರಧಾನಿಗಳ ನಿಂದಿಸಿರುವುದನ್ನು ನಾವು ಸಹಿಸಲ್ಲ. ಏನು ಮಾತಾಡಿಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಲಿ ನೋಡೋಣ. ಭ್ರಷ್ಟಾಚಾರ ವಿಚಾರ ಬಂದಾಗ ನಾವೂ ಮುಖ್ಯಮಂತ್ರಿ ವಿರುದ್ಧ ಮಾತನಾಡುತ್ತೇವೆ. ಆದ್ರೆ ನಿಂದಿಸುವ ಕೆಲಸ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link