Headlines

ಆ್ಯಂಬುಲೆನ್ಸ್​ಗೆ ಕಾದು ಕಾದು ಸಾಕಾಗಿ ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ! – Kannada News | Madhya Pradesh Woman Delivers Baby On Roadside After Ambulance Fails To Arrive At Her Village

ನವದೆಹಲಿ, ಫೆಬ್ರವರಿ 2: ಆ ಮಹಿಳೆ ಹೊಟ್ಟೆ ನೋವಿನಿಂದ ಒದ್ದಾಡುತ್ತಿದ್ದರು. ಅವರು ಅಂದುಕೊಂಡದ್ದಕ್ಕಿಂತ ಮೊದಲೇ ಹೆರಿಗೆ ನೋವು (Delivery Pain) ಕಾಣಿಸಿಕೊಂಡಿದ್ದರಿಂದ ತಕ್ಷಣ ತಮ್ಮ ಹಳ್ಳಿಯಿಂದ ಆಸ್ಪತ್ರೆಗೆ ಹೋಗಲೇಬೇಕಾಗಿತ್ತು. ಆದರೆ, ಆ ಊರಿಗೆ ರಸ್ತೆ ಸರಿ ಇಲ್ಲದ ಕಾರಣದಿಂದ ಆ್ಯಂಬುಲೆನ್ಸ್​ (Ambulance) ಬರುವುದೇ ಕಷ್ಟವಾಗಿತ್ತು. ಆದರೂ ಅನಿವಾರ್ಯವಾದ್ದರಿಂದ ಹಾಗೂ ಬೇರೆ ವಾಹನಗಳಲ್ಲಿ ಅವರನ್ನು ಕರೆದುಕೊಂಡು ಹೋಗಲಾಗದ ಸ್ಥಿತಿ ಇದ್ದುದರಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್​ ಕಳುಹಿಸಲು ಮನವಿ ಮಾಡಲಾಗಿತ್ತು. ಆದರೆ, ಈಗ ಬರುತ್ತೇವೆಂದು ಆ್ಯಂಬುಲೆನ್ಸ್​ನವರು ಹೇಳಿದ್ದರಿಂದ ಆ…

Read More

ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ? – Kannada News | Class 8 student gets pregnant in Government Hostel Gave Birth to Child

ನವದೆಹಲಿ, ಫೆಬ್ರವರಿ 2: ಆಕೆಗೆ ಕೇವಲ 13 ವರ್ಷ. ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು. ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು….

Read More

ಬೆಂಗಳೂರಿನಲ್ಲಿ ಈ ಎರಡು ದಿನ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಯಾವಾಗ-ಎಲ್ಲೆಲ್ಲಿ? – Kannada News | Bengaluru to face 2 day Cauvery water disruption on Feb 5 And 6 due to BWSSB emergency pipeline works

ಬೆಂಗಳೂರು, (ಫೆಬ್ರವರಿ 02): ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಇದೇ ಫೆಬ್ರವರಿ 5 ಮತ್ತು 6ರಂದು ಬೆಂಗಳೂರು ನಗರದ ವಿವಿಧೆಡೆ ಕಾವೇರಿ ನೀರು (Cauvery water )ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ನಾಗರಿಕರು ಮುಂಜಾಗ್ರತೆಯಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸೂಚಿಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900…

Read More

ಭಾರತ-ಅಮೆರಿಕ ಟ್ರೇಡ್ ಡೀಲ್ ಮಾತುಕತೆ ಬಹುತೇಕ ಪೂರ್ಣ: ವಾಣಿಜ್ಯ ಕಾರ್ಯದರ್ಶಿ – Kannada News | India US trade deal talks near completion, says commerce secretary Rajesh Agarwal

ನವದೆಹಲಿ, ಫೆಬ್ರುವರಿ 2: ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ (India US trade deal) ಅಂತಿಮ ಹಂತದಲ್ಲಿದ್ದು, ಬಹುತೇಕ ಪೂರ್ಣಗೊಂಡಿದೆ ಎಂದು ವಾಣಿಜ್ಯ ಕಾರ್ಯದರ್ಶಿ ಹಾಗೂ ಈ ಡೀಲ್​ಗೆ ಭಾರತದ ಮುಖ್ಯ ಸಂಧಾನಕಾರರಾದ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಡೀಲ್ ಮುಗಿದೇ ಹೋಯಿತು ಎಂದು ಆಗಾಗ್ಗೆ ಮಿಂಚಿ ಮಾಯವಾಗುತ್ತಿದ್ದ ಭರವಸೆಗೆ ರಾಜೇಶ್ ಅಗರ್ವಾಲ್ ಜೀವ ತುಂಬಿದ್ದಾರೆ. ಎರಡು ದೇಶಗಳ ನಡುವೆ ವ್ಯಾಪಾರ ಸಂಧಾನ ಸರಿಯಾದ ದಿಸೆಯಲ್ಲಿದೆ ಎನ್ನುವ ಸುಳಿವನ್ನು ಅವರು ನೀಡಿದ್ದಾರೆ. ದೊಡ್ಡ ಡೀಲ್​ಗೆ…

Read More

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

ಸೋಲಾರ್ ಪ್ಲಾಂಟ್ ಹೆಸರಲ್ಲಿ ಗುಡ್ಡ ಅಗೆದು ಮರಗಳ ಮಾರಣಹೋಮ: ಇದರ ಹಿಂದೆ ‘ಲಕ್ಷ್ಮೀ’ ಕೃಪಾಕಟಾಕ್ಷ? – Kannada News | Belagavi Forest Destruction: Illegal Sandalwood Felling for Solar Plant Outrages Locals

ಬೆಳಗಾವಿ, ಫೆಬ್ರವರಿ 02: ಅದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ ತವರು ಕ್ಷೇತ್ರ. ಸಂಗೊಳ್ಳಿ ರಾಯಣ್ಣ ಕೂಡ ಈ ಕೌರಿ ಗುಡ್ಡದಲ್ಲಿ ಉಳಿದಿದ್ದ ಅನ್ನೋದು ಇತಿಹಾಸ. ಈ ಗುಡ್ಡದಲ್ಲಿ ಶ್ರೀಗಂಧದ ಮರ ಸೇರಿದಂತೆ ಹಲವು ಬಗೆಯ ಗಿಡಗಳು, ಪ್ರಾಣಿ-ಪಕ್ಷಿಗಳು ವಾಸವಾಗಿವೆ. ಆದರೆ ಇದೀಗ ಸೋಲಾರ್ ಪ್ಲಾಂಟ್ ಹೆಸರಿನಲ್ಲಿ  ಗುಡ್ಡವನ್ನೇ ಅಗೆಯಲಾಗಿದ್ದು, ಸಾವಿರಾರು ಮರಗಳ (tree) ಮಾರಣಹೋಮವೇ ನಡೆದಿದೆ. ಸದ್ಯ ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ತಾಲೂಕಿನ ಬಡಲಾ ಅಂಕಲಗಿ ಗ್ರಾಮದಲ್ಲಿ ಕಳೆದ ಒಂದೂವರೆ…

Read More

ರಾತ್ರಿ ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರಗೆ ಭಂಗ ತರಬಹುದು ಎಚ್ಚರ! – Kannada News | Never make these mistakes before going to bed at night

ದೇಹಾರೋಗ್ಯಕ್ಕೆ ಆಹಾರದಂತೆ ನಿದ್ರೆಯೂ (sleep) ಅತೀ ಅವಶ್ಯಕ. ಅದರಲ್ಲೂ ಪ್ರತಿಯೊಬ್ಬ ವ್ಯಕ್ತಿಯೂ ಕನಿಷ್ಟ ಏಳರಿಂದ ಎಂಟು ಗಂಟೆಗಳ ಕಾಲ ನಿದ್ರೆ ಮಾಡಲೇಬೇಕು. ನಾವು ಸಾಕಷ್ಟು ನಿದ್ರೆ ಮಾಡಿದಾಗ, ನಮ್ಮ ದೇಹವು ದಿನದ ಆಯಾಸದಿಂದ ಚೇತರಿಸಿಕೊಳ್ಳುತ್ತದೆ ಮತ್ತು ಮನಸ್ಸು ಉಲ್ಲಾಸಗೊಳ್ಳುತ್ತದೆ. ಅದೇ ಏಳೆಂಟು ಗಂಟೆ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವುದಲ್ಲದೆ, ದೈನಂದಿನ ಚಟುವಟಿಕೆಯ ಮೇಲೂ ಇದು ಪರಿಣಾಮ ಬೀರುತ್ತದೆ. ಹೀಗೆ ಸರಿಯಾಗಿ ನಿದ್ರೆ ಬಾರದಿರಲು, ನಿದ್ರಾಹೀನತೆ ನಾವು ಮಾಡುವ ಕೆಲವು ತಪ್ಪುಗಳು ಸಹ…

Read More

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ – Kannada News | Producer K Manju reaction on Chakravarthy Chandrachud controversy

ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಇತ್ತೀಚೆಗೆ ನಿರ್ಮಾಪಕರ ಬಗ್ಗೆ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿದೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಅಂತ ಚಂದ್ರಚೂಡ್ ಹೇಳಿದ್ದಾರೆ. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಅಲ್ಲದೇ, ಚಂದ್ರಚೂಡ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಚಂದ್ರಚೂಡ್ ಹೇಳಿಕೆಗೆ ಕೆ. ಮಂಜು (Producer K Manju) ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ….

Read More

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್ – Kannada News | CM Siddaramaiah Reacts on BJP Leader Alleged about Karnataka Governmnet

ಬೆಂಗಳೂರು, ಫೆಬ್ರವರಿ 2): ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಭಾರೀ ಚರ್ಚೆಯಾಗಿದೆ. ಇನ್ನೂ ಇದೇ ವೇಲೆ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಮಾತನಾಡಿ ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಹದಗೆಟ್ಟಿದೆ. ಸಿಎಂ ಸಹ ಅಸಹಾಯಕರಾಗಿದ್ದಾರೆ ಎಂದರು. ಇದಕ್ಕೆ ಸಿದ್ದರಾಮಯ್ಯ  (Siddaramaiah) ಪ್ರತಿಕ್ರಿಯಿಸಿ, ಕಾನೂನು ಹದಗೆಟ್ಟಿಲ್ಲ….

Read More

ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ – Kannada News | Chikkaballapur: GSI Aerial Survey for gold deposits by helicopter; DC reveals explosive information

ಹೆಲಿಕಾಪ್ಟರ್ ಮೂಲಕ ಶೋಧImage Credit source: tv9 kannada ಚಿಕ್ಕಬಳ್ಳಾಪುರ, ಫೆಬ್ರವರಿ 02: ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ಹೆಲಿಕಾಪ್ಟರ್ (Helicopter survey) ಮೂಲಕ ಬಂಗಾರ ಸೇರಿದಂತೆ ಭೂಗರ್ಭದಲ್ಲಿರುವ ನಿಧಿ-ನಿಕ್ಷೇಪಗಳ ಶೋಧಕಾರ್ಯ ನಡೆಯುತ್ತಿದೆ. ಇದರಿಂದ ಸ್ಥಳೀಯರಲ್ಲಿ ಕುತೂಹಲ ಹೆಚ್ಚಾಗಿದೆ. ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (ಜಿಎಸ್‌ಐ) ವತಿಯಿಂದ ಈ ಏರಿಯಲ್ ಸರ್ವೆ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ ಹಾಗೂ ಅತ್ಯಾಧುನಿಕ ವೈಜ್ಞಾನಿಕ ಸಲಕರಣೆಗಳನ್ನು ಬಳಸಿ ಭೂಗರ್ಭದ ಖನಿಜ ಸಂಪತ್ತಿನ ಕುರಿತು ಸಮಗ್ರ ಶೋಧ ಕಾರ್ಯ ಕೈಗೊಳ್ಳಲಾಗಿದೆ….

Read More