ಸಿಎಂ ಆದ ಮೊದಲ ಬಾರಿಗೆ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ – Kannada News
ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್ ತುಮಕೂರು, ಜೂನ್ 06: ಗಂಗಾಧರನ ಅಜ್ಜನ ಹೆಸರಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ಕೆ ಶಿವಕುಮಾರ್ (DK Shivakumar), ಇಂದು ಅದೇ ಅಜ್ಜನ ಸನ್ನಿಧಿಗೆ ಮುಖ್ಯಮಂತ್ರಿ ಆದ ಬಳಿಕ ಮೊದಲ ಭಾರಿಗೆ ಭೇಟಿ ನೀಡಿದರು. ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿಕೆರೆಯಲ್ಲಿರುವ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟು ಅಜ್ಜಯ್ಯನ ಆಶೀರ್ವಾದ ಪಡೆದರು. ಶಿವಯೋಗೀಶ್ವರ ಶ್ರೀಗಳ ಸಮ್ಮುಖದಲ್ಲಿ ಮಠದ ಗದ್ದುಗೆಯಲ್ಲಿ 20 ನಿಮಿಷ ವಿಶೇಷ ಪೂಜೆ ನೆರವೇರಿತು. ಇದಕ್ಕೂ ಮುನ್ನ ತುಮಕೂರಿನ…