Headlines

ರೈಲು ವಿಳಂಬದಿಂದ ಪರೀಕ್ಷೆ ಮಿಸ್​​​: ವಿದ್ಯಾರ್ಥಿನಿಗೆ ರೈಲ್ವೆಯಿಂದ 9 ಲಕ್ಷ ರೂ. ಪರಿಹಾರ – Kannada News | Indian Railways Fined 9.1 Lakh for Train Delay; Student Missed Exam, 8 Year Legal Battle Ends

ಉತ್ತರ ಪ್ರದೇಶ, ಫೆ.2: ರೈಲು ವಿಳಂಬದಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ಉತ್ತರ ಪ್ರದೇಶದ ವಿದ್ಯಾರ್ಥಿನಿಗೆ ಭಾರತೀಯ ರೈಲ್ವೆಯು (Indian Railways) 9 ಲಕ್ಷ ರೂ. ಪರಿಹಾರ ನೀಡಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. 2018ರಿಂದ ಈ ವಿಚಾರವಾಗಿ ಗ್ರಾಹಕ ಆಯೋಗ ತನಿಖೆ ನಡೆಸಿತ್ತು. ಇದೀಗ ಈ ವಿಚಾರಗಾಗಿ ಗ್ರಾಹಕ ಆಯೋಗ​​ ಮಹತ್ವದ ಆದೇಶ ನೀಡಿದೆ. ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಸಮೃದ್ಧಿ ಎಂಬ ವಿದ್ಯಾರ್ಥಿನಿ 2018ರಲ್ಲಿ ಲಕ್ನೋದಲ್ಲಿ ನಡೆಯಬೇಕಿದ್ದ ಬಿ.ಎಸ್ಸಿ ಬಯೋಟೆಕ್ನಾಲಜಿ ಪ್ರವೇಶ ಪರೀಕ್ಷೆಗೆ…

Read More

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು? – Kannada News | Karnataka Governmnet revises school timings for Urdu medium schools during Ramzan

ಬೆಂಗಳುರು, (ಫೆಬ್ರವರಿ 02): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ (Ramzan Festival)  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ (Urdu medium school) ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ…

Read More

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ – Kannada News | Case filed against Chakravarthy Chandrachud over derogatory remarks on KVN Productions

Venkat K. Narayana Thalapathy Vijay, ChandrachudImage Credit source: KVN Productions, Chakravarthy Chandrachud ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ (Kannada Film Producers Association) ದೂರು ನೀಡಿದೆ. ತಮ್ಮದೇ ಯೂಟ್ಯೂಬ್ ಚಾನಲ್ ಹೊಂದಿರುವ ಚಂದ್ರಚೂಡ್ ಅವರು ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣದ ‘ಜನ ನಾಯಗನ್’…

Read More

Viral Video: ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ; ಈ ಮಗು ಬದುಕುಳಿದಿದ್ದೇ ಪವಾಡ – Kannada News | Beware before leaving kids on road little girl saved by miracle in Kerala Watch Viral Video

ಕೋಝಿಕೋಡ್, ಫೆಬ್ರವರಿ 2: ಎಲ್ಲ ಪೋಷಕರೂ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚು ಗಮನ ವಹಿಸುತ್ತಾರೆ. ಒಂದುವೇಳೆ ಒಂದೆರಡು ಸೆಕೆಂಡ್ ಮಕ್ಕಳ ಬಗ್ಗೆ ಗಮನ ಕೊಡದೇ ಇದ್ದರೂ ಅವರ ಜೀವಕ್ಕೇ ಅಪಾಯ ಉಂಟಾದೀತು. ಕೇರಳದ (Kerala)  ಕೋಝಿಕೋಡ್​​ನಲ್ಲಿ ಚಿಕ್ಕ ಹೆಣ್ಣುಮಗುವೊಂದು ರಸ್ತೆಗೆ ಓಡಿಬಂದಾಗಲೇ ಬಸ್​ ಅಡ್ಡಬಂದಿದೆ. ದೇವರ ಕೃಪೆಯಿಂದ ಆ ಬಸ್​ ಆ ಮಗುವಿಗೆ ಡಿಕ್ಕಿ ಹೊಡೆದಿಲ್ಲ. ಅಷ್ಟರಲ್ಲಿ ಆ ಮಗು ಹೆದರಿ ವಾಪಾಸ್ ಓಡಿದೆ. ಆ ವೇಳೆಗೆ ಬೇರೆ ಯಾವುದಾದರೂ ವಾಹನ ಬಂದಿದ್ದರೂ ಆ ಮಗುವಿಗೆ…

Read More

ನೀವು ಲಿಫ್ಟ್ ಬಳಸಬಾರದು: ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್ – Kannada News | Viral: Delivery Boy Denied Lift Access, Carries Heavy Parcel Up 6 Floors; Netizens Condemn

ಡೆಲಿವರಿ ಬಾಯ್ ಒಬ್ಬರು ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಯವರೆಗೆ ಮೆಟ್ಟಿಲುಗಳನ್ನು ಹತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಇದೀಗ ಈ ವಿಡಿಯೋ ನೋಡಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿದ್ದಾರೆ. ನಗರವೊಂದರ ವಸತಿ ಸಂಕೀರ್ಣವೊಂದರಲ್ಲಿ (Housing Society), ಡೆಲಿವರಿ ಬಾಯ್ ಒಬ್ಬರಿಗೆ ಲಿಫ್ಟ್ ಬಳಸಲು ಅಲ್ಲಿನ ಭದ್ರತಾ ಸಿಬ್ಬಂದಿ ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ಈ ಡೆಲಿವರಿ ಬಾಯ್​​​​​​​​ ಮೆಟ್ಟಿಲಿನಲ್ಲಿ ಹತ್ತಿಕೊಂಡೆ ಬಂದಿದ್ದಾರೆ. ಪಾರ್ಸೆಲ್​​ ತಲುಪಿಸುವ ಅನಿವಾರ್ಯವಾಗಿ ಅತ್ಯಂತ ಭಾರವಾದ ಪಾರ್ಸೆಲ್ ಅನ್ನು ತನ್ನ ಬೆನ್ನಿನ…

Read More

Kalaburagi: ದೆಹಲಿ ಪೊಲೀಸರ ಸೋಗಲ್ಲಿ ದರೋಡೆ; ಸಿನಿಮಾ ಸ್ಟೈಲ್​​ನಲ್ಲಿ ಆರೋಪಿಗಳು ಲಾಕ್​​ – Kannada News | Kalaburagi Police Nab Fake Delhi Cops; Interstate Robbery Gang Arrested

ಬಂಧಿತ ಆರೋಪಿಗಳ ಜೊತೆ ಪೊಲೀಸರುImage Credit source: Tv9 Kannada ಕಲಬುರಗಿ, ಫೆಬ್ರವರಿ 02: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ಮಾಡ್ತಿದ್ದ ನಟೋರಿಯಸ್ ಗ್ಯಾಂಗ್​​ನ ಖೆಡ್ಡಾಕ್ಕೆ ಕೆಡವುವಲ್ಲಿ ಕೊನೆಗೂ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳು ದೆಹಲಿ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಐದು ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದರು ಎನ್ನಲಾಗಿದ್ದು, ಅಂತಾರಾಜ್ಯ ದರೋಡೆ ಕೋರರಿಂದ ದೆಹಲಿ ಪೊಲೀಸರ ನಕಲಿ ಐಡಿ ಕಾರ್ಡ್​​ಗಳನ್ನ ವಶಪಡಿಸಿಕೊಳ್ಳಲಾಗಿದೆ. 90 ಗ್ರಾಂ ಚಿನ್ನಾಭರಣ ಸೇರಿದಂರೆ ಬರೋಬ್ಬರಿ 27 ಲಕ್ಷ ಮೌಲ್ಯದ ವಸ್ತುಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ….

Read More

ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು – Kannada News | Chikkaballapur: POCSO case over child marriage; Young man dies after attempting suicide

ಚಿಕ್ಕಬಳ್ಳಾಪುರ, ಫೆಬ್ರವರಿ 02: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ (POCSO Case) ದಾಖಲು ಹಿನ್ನೆಲೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(19) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಚೇಳೂರು ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್​ ಇನ್ಸ್ಟಾಗ್ರಾಮ್​ನಲ್ಲಿ​ ಸಾತನೂರು ಮೂಲದ ಹುಡುಗಿಯನ್ನು ಪರಿಚಯ ಮಾಡಿಕೊಂಡು…

Read More

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು…

Read More

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್…

Read More

3 ತಿಂಗಳಿಂದ ಬಾಂಗ್ಲಾದೇಶದ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್ – Kannada News | 9 fishermen from Andhra Pradesh return home after being detained in Bangladesh for 3 months

ಹೈದರಾಬಾದ್, ಫೆಬ್ರವರಿ 2: ಬಾಂಗ್ಲಾದೇಶದಲ್ಲಿ ಕಳೆದ 3 ತಿಂಗಳಿನಿಂದ ಬಂಧನದಲ್ಲಿದ್ದ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ 9 ಮೀನುಗಾರರು (Fishermen) ಸ್ವದೇಶಕ್ಕೆ ಮರಳಿದ್ದಾರೆ. ಜನವರಿ 29ರಂದು ಬಾಂಗ್ಲಾದೇಶದ ಕೋಸ್ಟ್ ಗಾರ್ಡ್ ಮೀನುಗಾರರನ್ನು ಭಾರತದ ಕೋಸ್ಟ್​ ಗಾರ್ಡ್​ಗೆ ಹಸ್ತಾಂತರಿಸಲಾಯಿತು. ನಂತರ ಅವರು ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದರು. 2025ರ ಅಕ್ಟೋಬರ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದ 9 ಮೀನುಗಾರರು ಬಂಗಾಳಕೊಲ್ಲಿಯಲ್ಲಿ ಮೀನುಗಾರಿಕೆ ಮಾಡುವಾಗ ಅಜಾಗರೂಕತೆಯಿಂದ ಸಮುದ್ರದ ಗಡಿಯನ್ನು ದಾಟಿದ್ದರು. ಹೀಗಾಗಿ, ಬಾಂಗ್ಲಾದೇಶದ ನೌಕಾಪಡೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಬಗೇರ್‌ಹಟ್ ಜೈಲಿನಲ್ಲಿ…

Read More