Category Archives: Blog

Your blog category

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಔಟ್..! ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿತ್ತು. ಆದರೀಗ ಆ ತಂಡಕ್ಕೆ ಬದಲಿ ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ವಾಸ್ತವವಾಗಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಅವರ ಬದಲಿಯಾಗಿ ಜೈಸ್ವಾಲ್​ಗೆ ಅವಕಾಶ ನೀಡಲಾಗಿದೆ. ಕೊಹ್ಲಿ ಸರಣಿಯಲ್ಲಿ ಆಡುತ್ತಿಲ್ಲ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಆದರೀಗ ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಕೊಹ್ಲಿ ಚೇತರಿಕೆಗೆ ಸಮಯಾವಕಾಶ ಮಾಡಿಕೊಟ್ಟಿದೆ.

Source link

ವಿಜಯ್ ಜೊತೆ ದುನಿಯಾ ವಿಜಯ್: ತೆಲುಗು ಸಿನಿಮಾ ಅಪ್​​ಡೇಟ್ – Kannada News

ದುನಿಯಾ ವಿಜಯ್ (Duniya Vijay) ಕನ್ನಡದ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರ ಅದ್ಭುತ ಮೈಕಟ್ಟು ಅದ್ಭುತ ನಟನೆಯಿಂದಾಗಿ ಅವರಿಗೆ ಪರ ಭಾಷೆಗಳಲ್ಲಿಯೂ ಬೇಡಿಕೆ ಇದೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ನಟಿಸಿ ಬಂದಿರುವ ದುನಿಯಾ ವಿಜಿ, ಈಗ ತಮಿಳಿನಲ್ಲಿ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್’ ಸಿನಿಮಾನಲ್ಲಿಯೂ ನಟಿಸಿ ಬಂದಿದ್ದಾರೆ. ಇವು ಮಾತ್ರವೇ ಅಲ್ಲದೆ ಇತ್ತೀಚೆಗಷ್ಟೆ ತೆಲುಗಿನ ಮತ್ತೊಂದು ಪ್ರಮುಖ ಸಿನಿಮಾನಲ್ಲಿ ದುನಿಯಾ ವಿಜಯ್ ನಟಿಸಿದ್ದು, ಸಿನಿಮಾದ ಅಪ್​​ಡೇಟ್ ಒಂದು ಹೊರಬಿದ್ದಿದೆ.

ಖ್ಯಾತ ನಟ ವಿಜಯ್ ಸೇತುಪತಿ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಸ್ಲಂ ಡಾಗ್’ ಸಿನಿಮಾನಲ್ಲಿ ದುನಿಯಾ ವಿಜಯ್ ಸಹ ಮಹತ್ವದ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶನ ಮಾಡಿದ್ದು, ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ಅಭಿಪ್ರಾಯಗಳು ತೆಲುಗು ಚಿತ್ರರಂಗದಲ್ಲಿ ಕೇಳಿ ಬರುತ್ತಿವೆ. ಮಾತ್ರವಲ್ಲದೆ, ಈ ಸಿನಿಮಾನಲ್ಲಿ ದುನಿಯಾ ವಿಜಯ್ ಅವರದ್ದು ಬಹಳ ವಿಭಿನ್ನ ರೀತಿಯ ಪಾತ್ರ ಎನ್ನಲಾಗುತ್ತಿದೆ.

ಇದೀಗ ಈ ಸಿನಿಮಾದ ಅಪ್​​ಡೇಟ್ ಹೊರಬಿದ್ದಿದ್ದು, ಸಿನಿಮಾದ ಮೊದಲ ಟೀಸರ್ ಜೂನ್ 8 ರಂದು ಬಿಡುಗಡೆ ಆಗಲಿದೆ. ಈ ಕುರಿತು ಚಿತ್ರತಂಡ ಘೋಷಣೆ ಮಾಡಿದ್ದು, ವಿಜಯ್ ಸೇತುಪತಿ ಅವರು ರಕ್ತ ಸಿಕ್ತ ಆಯುಧವೊಂದನ್ನು ಹಿಡಿದಿರುವ ಪೋಸ್ಟರ್ ಅನ್ನು ಸಹ ಚಿತ್ರತಂಡ ಹಂಚಿಕೊಂಡಿದೆ. ಸಿನಿಮಾದ ಹೆಸರೇ ಸೂಚಿಸುತ್ತಿರುವಂತೆ ಸ್ಲಂನಲ್ಲಿ ನಡೆಯುವ ಕತೆಯನ್ನು ಸಿನಿಮಾ ಒಳಗೊಂಡಿದ್ದು, ಭಿಕ್ಷುಕ ಮಾಫಿಯಾದ ಕತೆಯನ್ನು ಈ ಸಿನಿಮಾ ಹೊಂದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:‘ಸೆಟ್​​ನಲ್ಲಿ ಮೋನಿಷಾನ ಮಗಳು ಅಂತ ನಾನು ಯಾವಾಗಲೂ ನೋಡಿಲ್ಲ’; ದುನಿಯಾ ವಿಜಯ್

ಈ ಹಿಂದೆ ಸಿನಿಮಾ ತಂಡವು ವಿಜಯ್ ಅವರ ಚಿತ್ರವೊಂದನ್ನು ಸಹ ಹಂಚಿಕೊಂಡಿತ್ತು. ಚಿತ್ರದಲ್ಲಿ ವಿಜಯ್ ಅವರು ಬಲು ಕಲರ್​ಫುಲ್ ಆದ ಉಡುಗೆ ಮತ್ತು ಟೋಪಿ ಧರಿಸಿ ಕಾಣಿಸಿಕೊಂಡಿದ್ದರು. ಪೋಸ್ಟರ್ ನೋಡಿದವರಿಗೆ ವಿಜಯ್ ಅವರು ವಿಲನ್ನಾ ಅಥವಾ ಬೇರೆ ರೀತಿಯ ಪಾತ್ರವಾ ಎಂಬ ಅನುಮಾನವೂ ಮೂಡಿತ್ತು. ಈಗ ಜೂನ್ 8 ರಂದು ಸಿನಿಮಾದ ಟೀಸರ್ ರಿಲೀಸ್ ಆಗಲಿದ್ದು, ಆ ದಿನ ಅನುಮಾನಗಳಿಗೆ ಉತ್ತರ ಸಿಗುವ ಸಾಧ್ಯತೆ ಇದೆ.

ತೆಲುಗು ಚಿತ್ರರಂಗದ ಸ್ಟಾರ್ ನಿರ್ದೇಶಕ ಎನಿಸಿಕೊಂಡಿದ್ದ ಪುರಿ ಜಗನ್ನಾಥ್ ಕಳೆದ ಕೆಲ ವರ್ಷಗಳಿಂದ ಒಂದೇ ಒಂದು ಹಿಟ್ ಸಿನಿಮಾ ನೀಡಿಲ್ಲ. ಈಗ ಅವರು ‘ಸ್ಲಂ ಡಾಗ್’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಈ ಸಿನಿಮಾ ಅವರ ಪಾಲಿಗೆ ಮಾಡು-ಮಡಿ ಸಿನಿಮಾ ಆಗಿದೆ. ಇದೇ ಕಾರಣಕ್ಕೆ ಅವರು ಬಲು ಗಟ್ಟಿಯಾದ ಕತೆಯನ್ನು ಸಿನಿಮಾಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಸಿನಿಮಾಕ್ಕೆ ಪುರಿ ಜಗನ್ನಾಥ್ ಮತ್ತು ಅವರ ಗೆಳತಿ ಚಾರ್ಮಿ ಅವರೇ ಬಂಡವಾಳ ಹೂಡಿದ್ದಾರೆ. ಸಿನಿಮಾನಲ್ಲಿ ಖ್ಯಾತ ನಟಿ ಟಬು ಅವರು ನಾಯಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನೆಹರು ದಾಖಲೆ ಮುರಿಯಲು ಸಜ್ಜಾದ ಮೋದಿ; ಇಬ್ಬರೂ ಪ್ರಧಾನಿಗಳ ಅಧಿಕಾರಾವಧಿಯ ನಡುವಿನ ಹೋಲಿಕೆಗಳೇನು? – Kannada News

ನವದೆಹಲಿ, ಜೂನ್ 6: ಬರುವ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ, ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಪ್ರಧಾನಿ ಎಂಬ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ದೇಶವನ್ನು ಮುನ್ನಡೆಸಿದ ಪ್ರಮುಖ ಪ್ರಧಾನಿಗಳು. ಆದರೆ, ಇಬ್ಬರ ನಾಯಕತ್ವದ ಶೈಲಿ, ಸಿದ್ಧಾಂತ ಮತ್ತು ಅವರು ಆಡಳಿತ ನಡೆಸಿದ ಕಾಲಘಟ್ಟಗಳು ಸಂಪೂರ್ಣವಾಗಿ ಭಿನ್ನವಾಗಿವೆ. ಇಬ್ಬರ ನಾಯಕತ್ವದ ನಡುವಿನ ಪ್ರಮುಖ ವ್ಯತ್ಯಾಸಗಳು ಹಾಗೂ ಹೋಲಿಕೆಗಳು ಇಲ್ಲಿವೆ.

ಆಡಳಿತದ ಮಾದರಿ ಹೇಗಿತ್ತು?:

ನೆಹರು ಅವರ ಆಡಳಿತವು ಹೆಚ್ಚಾಗಿ ಕೇಂದ್ರೀಕೃತವಾಗಿತ್ತು. ರಾಜಕೀಯ ಗಣ್ಯರು, ತಜ್ಞರು ಮತ್ತು ಆಯ್ದ ಅಧಿಕಾರಿಗಳ ಮೂಲಕ ಮೇಲಿಂದ ಕೆಳಮಟ್ಟಕ್ಕೆ ನಿರ್ಧಾರಗಳು ಹರಿದು ಬರುತ್ತಿದ್ದವು. ಆದರೆ, ಪ್ರಧಾನಿ ಮೋದಿ ಅವರ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್” ತತ್ವವು ಆಡಳಿತವನ್ನು ಕೇವಲ ಸರ್ಕಾರದ ಕಾರ್ಯಕ್ರಮವಾಗಿಸದೆ, ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯ ‘ಜನ ಚಳುವಳಿ’ಯನ್ನಾಗಿ ಮಾರ್ಪಡಿಸಿದೆ. ಸ್ವಚ್ಛ ಭಾರತ ಅಭಿಯಾನ ಅದಕ್ಕೆ ಉದಾಹರಣೆ.

ಇದನ್ನೂ ಓದಿ: ಜೂನ್ 10 ಕ್ಕೆ ಪ್ರಧಾನಿ ಮೋದಿ ಹೆಸರಿಗೆ ಹೊಸ ದಾಖಲೆ, ನೆಹರು ಅಧಿಕಾರಾವಧಿ ಹಿಂದಿಕ್ಕಲಿರುವ ನವ ಭಾರತದ ಸಾರಥಿ

ನೆಹರು ಅವರು ಸೋವಿಯತ್ ಮಾದರಿಯ ಸಮಾಜವಾದಿ ಆರ್ಥಿಕತೆಗೆ ಆದ್ಯತೆ ನೀಡಿದರು. ಭಾರಿ ಉದ್ಯಮಗಳು, ಅಣೆಕಟ್ಟುಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಸರ್ಕಾರದ ಸಂಪೂರ್ಣ ನಿಯಂತ್ರಣದಲ್ಲಿ ಸ್ಥಾಪಿಸಲು ಒತ್ತು ನೀಡಿದರು. ಖಾಸಗಿ ಬಂಡವಾಳಕ್ಕೆ ಮಿತಿ ಇತ್ತು. ಪ್ರಧಾನಿ ಮೋದಿ ಅವರ ಮಾದರಿಯು ‘ಆತ್ಮನಿರ್ಭರ ಭಾರತ’ ಮತ್ತು ಮುಕ್ತ ಮಾರುಕಟ್ಟೆಗೆ ಆದ್ಯತೆ ನೀಡುತ್ತದೆ. ಸ್ಟಾರ್ಟ್‌ಅಪ್‌ಗಳು, ಡಿಜಿಟಲ್ ಆರ್ಥಿಕತೆ (UPI), ಮೇಕ್ ಇನ್ ಇಂಡಿಯಾ ಮತ್ತು ಖಾಸಗಿ ಉದ್ಯಮಿಗಳನ್ನು ದೇಶದ ಪ್ರಗತಿಯ ಸಹಭಾಗಿಗಳನ್ನಾಗಿ ನೋಡಲಾಗುತ್ತದೆ. ಬಡತನ ನಿರ್ಮೂಲನೆಗೆ ನೇರ ನಗದು ವರ್ಗಾವಣೆ (DBT) ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.

ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿ:

ಶೀತಲ ಸಮರದ ಕಾಲದಲ್ಲಿ ನೆಹರು ಅವರು ಯಾವುದೇ ಜಾಗತಿಕ ಬಣಕ್ಕೆ (ಅಮೆರಿಕ ಅಥವಾ ರಷ್ಯಾ) ಸೇರದೆ ‘ಅಲಿಪ್ತ ನೀತಿ’ಯನ್ನು ಅನುಸರಿಸಿದರು. ಇದು ನೈತಿಕ ಮತ್ತು ಬೌದ್ಧಿಕ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದರೂ, ಕೆಲವು ನಿರ್ಣಾಯಕ ಸಮಯದಲ್ಲಿ ಭಾರತ ಜಾಗತಿಕವಾಗಿ ಒಂಟಿಯಾಗುವಂತೆ ಮಾಡಿತು. ಮೋದಿ ಅವರ ವಿದೇಶಾಂಗ ನೀತಿಯು ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡುತ್ತದೆ. ಭಾರತವು ಅಮೆರಿಕ, ರಷ್ಯಾ, ಯುರೋಪ್ ಹಾಗೂ ಗಲ್ಫ್ ರಾಷ್ಟ್ರಗಳೊಂದಿಗೆ ಏಕಕಾಲದಲ್ಲಿ ಬಲಿಷ್ಠ ಮತ್ತು ಸಮಾನ ರಾಜತಾಂತ್ರಿಕ ಹಾಗೂ ರಕ್ಷಣಾತ್ಮಕ ಸಂಬಂಧವನ್ನು ಕಾಯ್ದುಕೊಂಡಿದೆ. ಇಂದು ಭಾರತವು ಜಾಗತಿಕ ನಿರ್ಧಾರಗಳನ್ನು ನಿಯಂತ್ರಿಸುವ ಶಕ್ತಿಯಾಗಿ ಹೊರಹೊಮ್ಮಿದೆ.

ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಗುರುತು:

ನೆಹರು ಅವರ ರಾಜಕಾರಣವು ಪಾಶ್ಚಿಮಾತ್ಯ ಆಧುನಿಕತೆ ಮತ್ತು ಪ್ರಗತಿಪರ ಚಿಂತನೆಗಳಿಂದ ಪ್ರಭಾವಿತವಾಗಿತ್ತು. ಅವರು ಸಾರ್ವಜನಿಕ ಜೀವನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಗುರುತುಗಳಿಂದ ಅಂತರ ಕಾಯ್ದುಕೊಳ್ಳಲು ಬಯಸಿದ್ದರು. ಪ್ರಧಾನಿ ಮೋದಿ ಭಾರತೀಯ ನಾಗರಿಕತೆಯ ಪ್ರಜ್ಞೆ, ಸಾಂಸ್ಕೃತಿಕ ಹೆಮ್ಮೆ ಮತ್ತು ಐತಿಹಾಸಿಕ ಗುರುತನ್ನು ರಾಷ್ಟ್ರೀಯ ರಾಜಕಾರಣದ ಕೇಂದ್ರಬಿಂದುವಾಗಿಸಿದ್ದಾರೆ. ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಜಾಗತಿಕ ಮಟ್ಟದಲ್ಲಿ ಅಂತರರಾಷ್ಟ್ರೀಯ ಯೋಗ ದಿನದಂತಹ ಭಾರತದ ಸಾಂಸ್ಕೃತಿಕ ರಾಯಭಾರತ್ವಕ್ಕೆ ಇವರ ಆಡಳಿತದಲ್ಲಿ ಹೆಚ್ಚಿನ ಒತ್ತು ಸಿಕ್ಕಿದೆ.

ಇದನ್ನೂ ಓದಿ: ಜವಾಹರಲಾಲ್ ನೆಹರು- ನರೇಂದ್ರ ಮೋದಿ ಅವಧಿಯ ವ್ಯತ್ಯಾಸಗಳೇನು? ಇಬ್ಬರ ನಾಯಕತ್ವದ ಅವಲೋಕನ ಇಲ್ಲಿದೆ

ರಾಜಕೀಯ ಹಿನ್ನೆಲೆ ಮತ್ತು ಸವಾಲುಗಳು;

ನೆಹರು ಸ್ವಾತಂತ್ರ್ಯ ಹೋರಾಟದ ನಾಯಕತ್ವದ ಹಿನ್ನೆಲೆ, ಮಹಾತ್ಮ ಗಾಂಧೀಜಿಯವರ ಬೆಂಬಲ ಹಾಗೂ ಕಾಂಗ್ರೆಸ್ ಪಕ್ಷದ ಏಕಸ್ವಾಮ್ಯದ ಅಲೆಯಲ್ಲಿ ನೆಹರು ನೇರವಾಗಿ ಅಧಿಕಾರಕ್ಕೆ ಬಂದರು. ಅವರಿಗೆ ದೇಶದ ಒಳಗಡೆ ರಾಜಕೀಯ ಪೈಪೋಟಿ ತೀರಾ ಕಡಿಮೆ ಇತ್ತು. ಆದರೆ ಮೋದಿ ಯಾವುದೇ ರಾಜಕೀಯ ಗಾಡ್‌ಫಾದರ್ ಇಲ್ಲದೆ, ದಶಕಗಳ ಕಾಲ ತಳಮಟ್ಟದ ಸಾಂಸ್ಥಿಕ ಹೋರಾಟ ಮತ್ತು ಸುದೀರ್ಘ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಆಡಳಿತಾತ್ಮಕ ಅನುಭವ ಪಡೆದ ನಂತರ ಪ್ರಧಾನಿ ಹುದ್ದೆಗೇರಿದ್ದಾರೆ. ಪ್ರಾದೇಶಿಕ ಪಕ್ಷಗಳ ಭಾರಿ ಪೈಪೋಟಿ, ತೀವ್ರ ರಾಜಕೀಯ ಸ್ಪರ್ಧೆ ಮತ್ತು ಸೋಷಿಯಲ್ ಮೀಡಿಯಾದ ಕಣ್ಗಾವಲಿನ ಯುಗದಲ್ಲಿ ಇವರು ಆಡಳಿತ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:41 pm, Sat, 6 June 26

Source link

Bhanu Saptami 2026: ಜೂ.7 ಭಾನು ಸಪ್ತಮಿ; ಈ ದಿನ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ – Kannada News

ಆತ್ಮವಿಶ್ವಾಸ, ಗೌರವ, ನಾಯಕತ್ವದ ಗುಣಗಳು ಮತ್ತು ಜೀವನದಲ್ಲಿ ಅಪಾರ ಯಶಸ್ಸನ್ನು ಬಯಸುವವರಿಗೆ ‘ಭಾನು ಸಪ್ತಮಿ’ ಅತ್ಯಂತ ವಿಶೇಷವಾದ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನನ್ನು ನವಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. ವ್ಯಕ್ತಿಯ ಆರೋಗ್ಯ, ಉದ್ಯೋಗ, ಸಾಮಾಜಿಕ ಗೌರವ ಮತ್ತು ವ್ಯಕ್ತಿತ್ವ ವಿಕಸನದ ಮೇಲೆ ಸೂರ್ಯನ ಪ್ರಭಾವ ಅಪಾರವಾಗಿರುತ್ತದೆ.

ವಿಶೇಷವೆಂದರೆ, 2026ರ ಅಧಿಕ ಮಾಸದಲ್ಲಿ ಬರುವ ಈ ಅಪರೂಪದ ಭಾನು ಸಪ್ತಮಿಯನ್ನು ಜೂನ್ 7 ರಂದು ಆಚರಿಸಲಾಗುತ್ತಿದೆ. ಈ ದಿನ ಸೂರ್ಯ ದೇವನನ್ನು ಭಕ್ತಿಯಿಂದ ಆರಾಧಿಸುವುದರಿಂದ ಜಾತಕದಲ್ಲಿ ಸೂರ್ಯ ಗ್ರಹವು ಬಲಗೊಂಡು, ಜೀವನದ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಭಾನು ಸಪ್ತಮಿ ಎಂದರೇನು? ಇದರ ಮಹತ್ವವೇನು?

ಚಾಂದ್ರಮಾನ ಕ್ಯಾಲೆಂಡರ್ ಪ್ರಕಾರ, ಸಪ್ತಮಿ ತಿಥಿಯು ಭಾನುವಾರದಂದು ಬಂದರೆ ಅದನ್ನು ‘ಭಾನು ಸಪ್ತಮಿ’ ಎಂದು ಕರೆಯಲಾಗುತ್ತದೆ. ಈ ದಿನ ಸಂಪೂರ್ಣವಾಗಿ ಸೂರ್ಯ ದೇವನಿಗೆ ಸಮರ್ಪಿತವಾಗಿದೆ. ಜಾತಕದಲ್ಲಿ ಸೂರ್ಯನು ದುರ್ಬಲನಾಗಿದ್ದರೆ ಉದ್ಯೋಗದಲ್ಲಿ ಸಮಸ್ಯೆ, ಆತ್ಮವಿಶ್ವಾಸದ ಕೊರತೆ ಮತ್ತು ಅಪಕೀರ್ತಿ ಎದುರಾಗಬಹುದು. ಅಂತಹ ದೋಷಗಳ ನಿವಾರಣೆಗೆ ಭಾನು ಸಪ್ತಮಿಯ ಪೂಜೆ ರಾಮಬಾಣವಾಗಿದೆ. ಅದರಲ್ಲೂ ಈ ಬಾರಿ ಅಧಿಕ ಮಾಸದಲ್ಲಿ ಇದು ಬಂದಿರುವುದರಿಂದ, ಈ ದಿನ ಮಾಡುವ ಜಪ-ತಪ ಮತ್ತು ದಾನಗಳಿಗೆ ನೂರು ಪಟ್ಟು ಹೆಚ್ಚಿನ ಪುಣ್ಯ ಲಭಿಸಲಿದೆ.

ಭಾನು ಸಪ್ತಮಿಯಂದು ಮಾಡಬಾರದ 5 ತಪ್ಪುಗಳು:

ಈ ಪವಿತ್ರ ದಿನದಂದು ನಕಾರಾತ್ಮಕ ಫಲಗಳನ್ನು ತಪ್ಪಿಸಲು ಕೆಳಗಿನ ತಪ್ಪುಗಳನ್ನು ಮಾಡದಂತೆ ಎಚ್ಚರ ವಹಿಸಿ:

  • ಸೂರ್ಯದೇವನು ಶಿಸ್ತಿನ ಸಂಕೇತ. ಆದ್ದರಿಂದ ಭಾನು ಸಪ್ತಮಿಯಂದು ಬೆಳಿಗ್ಗೆ ತಡವಾಗಿ ಏಳಬಾರದು. ಸೂರ್ಯೋದಯಕ್ಕೂ ಮುನ್ನವೇ ಎದ್ದು ಸ್ನಾನ ಮುಗಿಸಬೇಕು.
  • ಈ ದಿನ ಮಾಂಸಾಹಾರ, ಮದ್ಯಪಾನ, ಹಾಗೂ ಈರುಳ್ಳಿ-ಬೆಳ್ಳುಳ್ಳಿಯಂತಹ ತಾಮಸಿಕ ಆಹಾರಗಳಿಂದ ದೂರವಿರಬೇಕು. ಸಂಪೂರ್ಣ ಸಾತ್ವಿಕ ಆಹಾರ ಸೇವನೆ ಮಾಡುವುದು ಕಡ್ಡಾಯ.
  • ಸೂರ್ಯನು ಕೀರ್ತಿ ಮತ್ತು ಗೌರವದ ಕಾರಕ. ಈ ದಿನ ಯಾರನ್ನೂ ಕಟು ಶಬ್ದಗಳಿಂದ ನಿಂದಿಸಬಾರದು, ಕೋಪ ಮಾಡಿಕೊಳ್ಳಬಾರದು ಮತ್ತು ಹಿರಿಯರನ್ನು ಅವಮಾನಿಸಬಾರದು.
  • ಈ ದಿನ ಮನೆಗೆ ಬಂದ ಬಡವರಿಗೆ ಅಥವಾ ಅಗತ್ಯವಿರುವವರಿಗೆ ದಾನ ನೀಡದೆ ಬರಿಗೈಲಿ ಕಳುಹಿಸುವುದು ಮಹಾ ತಪ್ಪು.
  • ಭಾನು ಸಪ್ತಮಿಯಂದು ಸೂರ್ಯ ದೇವನಿಗೆ ಅರ್ಘ್ಯ ಅರ್ಪಿಸದೇ ಇರುವುದು ಪೂಜೆಯನ್ನು ಅಪೂರ್ಣಗೊಳಿಸುತ್ತದೆ.

ಇದನ್ನೂ ಓದಿ: ಮೊದಲ ಮಗು ಹೆಣ್ಣು ಜನಿಸಿದರೆ ತಂದೆಯ ಅದೃಷ್ಟವೇ ಬದಲಾಗುತ್ತಾ? ಶಾಸ್ತ್ರಗಳು ಹೇಳುವುದೇನು?

ಸೂರ್ಯನ ಕೃಪೆಗೆ ಈ ದಿನ ಮಾಡಬೇಕಾದ ಶುಭ ಕಾರ್ಯಗಳು:

ಜೂನ್ 7 ರ ಭಾನು ಸಪ್ತಮಿಯಂದು ನಿಮ್ಮ ಜಾತಕದಲ್ಲಿ ಸೂರ್ಯನನ್ನು ಬಲಪಡಿಸಲು ಈ ಕೆಳಗಿನ ಪರಿಹಾರಗಳನ್ನು ಮಾಡಿ:

  • ತಾಮ್ರದ ಪಾತ್ರೆಯಲ್ಲಿ ಶುದ್ಧ ನೀರನ್ನು ತೆಗೆದುಕೊಂಡು, ಅದಕ್ಕೆ ಕೆಂಪು ಹೂವು ಮತ್ತು ಅಕ್ಷತೆಯನ್ನು ಹಾಕಿ ಉದಯಿಸುತ್ತಿರುವ ಸೂರ್ಯನಿಗೆ ಅರ್ಪಿಸಿ.
  • ಸೂರ್ಯನಿಗೆ ಅರ್ಘ್ಯ ಕೊಡುವಾಗ ಅಥವಾ ಪೂಜೆ ಮಾಡುವಾಗ “ಓಂ ಘೃಣಿ ಸೂರ್ಯಾಯ ನಮಃ” ಎಂಬ ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸಿ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.
  • ಸೂರ್ಯ ದೇವರ ಅತ್ಯಂತ ಶಕ್ತಿಶಾಲಿ ಸ್ತೋತ್ರವಾದ ‘ಆದಿತ್ಯ ಹೃದಯ ಸ್ತೋತ್ರ’ವನ್ನು ಈ ದಿನ ಪಠಿಸುವುದರಿಂದ ಸಕಲ ಕಾರ್ಯಗಳಲ್ಲೂ ಜಯ ಸಿಗುತ್ತದೆ.
  • ಸೂರ್ಯನಿಗೆ ಪ್ರಿಯವಾದ ಕೆಂಪು ಬಣ್ಣದ ಬಟ್ಟೆ, ಗೋಧಿ, ಬೆಲ್ಲ ಮತ್ತು ತಾಮ್ರದ ವಸ್ತುಗಳನ್ನು ಬಡವರಿಗೆ ಅಥವಾ ಬ್ರಾಹ್ಮಣರಿಗೆ ದಾನ ಮಾಡಿ.

ಜ್ಯೋತಿಷ್ಯದ ಪ್ರಕಾರ, ಯಾರ ಜಾತಕದಲ್ಲಿ ಸೂರ್ಯ ಬಲಿಷ್ಠನಾಗಿರುತ್ತಾನೋ ಅವರು ಸಮಾಜದಲ್ಲಿ ಉತ್ತಮ ಉನ್ನತ ಹುದ್ದೆ, ನಾಯಕತ್ವ ಗುಣ ಮತ್ತು ಕೀರ್ತಿಯನ್ನು ಪಡೆಯುತ್ತಾರೆ. ಆದ್ದರಿಂದ, ಭಾನು ಸಪ್ತಮಿಯನ್ನು ಕೇವಲ ಒಂದು ಹಬ್ಬ ಎಂದು ಪರಿಗಣಿಸದೇ, ಜೀವನದಲ್ಲಿ ಸ್ವಯಂ ಶಿಸ್ತು ಮತ್ತು ಸಕಾರಾತ್ಮಕತೆಯನ್ನು ಅಳವಡಿಸಿಕೊಳ್ಳಲು ಸಿಗುವ ಉತ್ತಮ ಅವಕಾಶ ಎಂದು ಭಾವಿಸಿ ಸೂರ್ಯಾರಾಧನೆ ಮಾಡಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಮಳೆರಾಯನ ಆರ್ಭಟ!: ಮಲ್ಲೇಶ್ವರಂ, ವಿಜಯನಗರದಲ್ಲಿ ಧಾರಾಕಾರ ಮಳೆ: ಜೂನ್ 11ರವರೆಗೆ ಈ ಭಾಗದಲ್ಲೂ ಭಾರಿ ಮಳೆ – Kannada News

ಬೆಂಗಳೂರು, ಜೂ.6: ರಾಜಧಾನಿ ಬೆಂಗಳೂರಿನ ಸಾರ್ವಜನಿಕರಿಗೆ ಮಳೆರಾಯ ಶನಿವಾರ ಮಧ್ಯಾಹ್ನ ಬಿಗ್ ಶಾಕ್ ನೀಡಿದ್ದಾನೆ. ನಗರದ ಕೇಂದ್ರ ಭಾಗ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಹಠಾತ್ ಧಾರಾಕಾರ ಮಳೆ ಸುರಿದಿದ್ದು, ವಾರಾಂತ್ಯದ ಮೂಡ್‌ನಲ್ಲಿದ್ದ ಐಟಿ ಸಿಟಿ ಜನರಿಗೆ ಬಿಗ್​ ಶಾಕ್ ನೀಡಿದೆ. ಮುಂಗಾರು ಮಾರುತಗಳ ಆರ್ಭಟದ ಹಿನ್ನೆಲೆಯಲ್ಲಿ ನಗರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ವಸಂತನಗರ, ಪ್ಯಾಲೇಸ್ ಗುಟ್ಟಹಳ್ಳಿ, ಕಾಟನ್​ಪೇಟೆ, ಕಾರ್ಪೋರೇಷನ್, ಚಿಕ್ಕಪೇಟೆ ಮತ್ತು ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಬಹುತೇಕ ರಸ್ತೆಗಳಲ್ಲಿ ಮಳೆ ಸುರಿದಿದೆ. ದಿಢೀರ್ ಆಗಿ ಬಂದ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

ದಿಢೀರ್ ಆಗಿ ಮಳೆ ಸುರಿದಿದ್ದರಿಂದ ರಸ್ತೆಯಲ್ಲಿದ್ದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಶ್ರಯ ಪಡೆಯಲು ಜಾಗವಿಲ್ಲದೆ ತೀವ್ರ ತೊಂದರೆ ಅನುಭವಿಸಿದರು. ಮೇಲ್ಸೇತುವೆಗಳು, ನಮ್ಮ ಮೆಟ್ರೋ ನಿಲ್ದಾಣಗಳು ಮತ್ತು ಬಸ್ ತಂಗುದಾಣಗಳ ಅಡಿಯಲ್ಲಿ ಸವಾರರು ಬೈಕ್ ನಿಲ್ಲಿಸಿದ್ದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರ ವಹಿವಾಟಿಗೆ ಹೆಸರಾದ ಚಿಕ್ಕಪೇಟೆ, ಮೆಜೆಸ್ಟಿಕ್ ಮಾರುಕಟ್ಟೆ ಭಾಗದಲ್ಲಿ ರಸ್ತೆ ಬದಿಯ ವ್ಯಾಪಾರಿಗಳು ಮಳೆಯಿಂದ ತಮ್ಮ ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡಬೇಕಾಯಿತು.

ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಜೂನ್ 11ರವರೆಗೆ ಭಾರಿ ಮಳೆ:

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಾರುತಗಳು ಮತ್ತಷ್ಟು ತೀವ್ರಗೊಂಡಿದ್ದು, ಇಡೀ ರಾಜ್ಯವನ್ನು ಆವರಿಸಿಕೊಳ್ಳುತ್ತಿವೆ. ಜೂನ್ 5 ರಂದೇ ಮುಂಗಾರು ಮಾರುತಗಳು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಿಗೆ ಯಶಸ್ವಿಯಾಗಿ ಪ್ರವೇಶಿಸಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮತ್ತು ಹವಾಮಾನ ಇಲಾಖೆ ಜಂಟಿ ಪ್ರಕಟಣೆಯಲ್ಲಿ ತಿಳಿಸಿವೆ. ಮುಂದಿನ 2 ರಿಂದ 3 ದಿನಗಳಲ್ಲಿ ರಾಜ್ಯದ ಇನ್ನುಳಿದ ಭಾಗಗಳಿಗೂ ಮುಂಗಾರು ವ್ಯಾಪಿಸಲು ವಾತಾವರಣ ಪೂರಕವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜೂನ್ 6 ರಿಂದ ಜೂನ್ 11 ರವರೆಗೆ ರಾಜ್ಯದ ವಿವಿಧ ವಲಯಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ.

ಇದನ್ನೂ ಓದಿ: ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ

ಕರಾವಳಿ ಕರ್ನಾಟಕ :

ಜೂನ್ 6 ರಿಂದ 11 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಭಾರಿ (64.5mm – 115.4mm) ಹಾಗೂ ಅತಿ ಭಾರಿ (115.5mm – 204.4mm) ಮಳೆಯಾಗುವ ಸಾಧ್ಯತೆಯಿದೆ. ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗು ಪ್ರದೇಶಗಳಲ್ಲಿ ಹಠಾತ್ ಪ್ರವಾಹ (Flash Floods) ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಜಲಾವೃತಗೊಳ್ಳುವ (Urban Water Logging) ಭೀತಿ ಎದುರಾಗಿದೆ. ಮುನ್ನೆಚ್ಚರಿಕೆಯಾಗಿ ಈಗಾಗಲೇ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಮಲೆನಾಡು ಭಾಗ :

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 11 ರವರೆಗೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ವಿಶೇಷವಾಗಿ ಜೂನ್ 6 ರಿಂದ ಜೂನ್ 10 ರವರೆಗೆ ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡು

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 6 ರಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಜೂನ್ 9 ರವರೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ದಿನಗಳಲ್ಲಿ ಮಳೆಯ ಮುನ್ಸೂಚನೆಯ ನಿಖರತೆ ಬದಲಾಗಬಹುದಾಗಿದ್ದರಿಂದ, ಸಾರ್ವಜನಿಕರು ಹಾಗೂ ರೈತರು ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್‌ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ 68 ನೇ ಪಂದ್ಯವನ್ನಾಡುತ್ತಿರುವ ರಾಹುಲ್ 12ನೇ ಟೆಸ್ಟ್ ಶತಕವನ್ನು ಬಾರಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 164 ಎಸೆತಗಳನ್ನು ಎದುರಿಸಿದ ರಾಹುಲ್ 11 ಬೌಂಡರಿಗಳ ಸಹಿತ ಶತಕದ ಗಡಿ ದಾಟಿದರು.

Published On – 3:22 pm, Sat, 6 June 26

Source link

ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಅತಿ ಕಿರಿಯ; ಸಚಿನ್ ದಾಖಲೆ ಮುರಿದ ವೈಭವ್

Source link

ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ – Kannada News

ಚಿತ್ರದುರ್ಗ, ಜೂನ್​​ 06: ಬಯಲುಸೀಮೆಯ ಊಟಿ ಎಂದೇ ಖ್ಯಾತಿ ಪಡೆದಿರುವ ಜೋಗಿಮಟ್ಟಿ (Jogi Matti)  ವನ್ಯಜೀವಿಧಾಮ ವೀಕ್ಷಣೆಗೆ ನಿತ್ಯ ನೂರಾರು ಜನರು ಆಗಮಿಸುತ್ತಾರೆ. ಬೇಸಿಗೆ ಕಾಲದಲ್ಲಿ ಜೋಗಿಮಟ್ಟಿ ಪ್ರವೇಶಕ್ಕೆ ಅರಣ್ಯ ಇಲಾಖೆ ಇತ್ತೀಚೆಗೆ ನಿರ್ಬಂಧ ವಿಧಿಸಿತ್ತು. ಆದರೆ ಮಳೆಗಾಲ (Monsoon) ಆರಂಭವಾದರೂ ನಿರ್ಬಂಧ ತೆರವುಗೊಳಿಸದಿರುವುದು ಪರಿಸರ ಪ್ರಿಯರ ಹಿಡಿಶಾಪಕ್ಕೆ ಗುರಿ ಆಗಿದೆ.

ಮುಖ್ಯಾಂಶಗಳು

  • ಬೇಸಿಗೆ ಕಾಲದಲ್ಲಿ ಬೆಂಕಿ ಅವಘಡ ತಪ್ಪಿಸಲು ಅರಣ್ಯ ಪ್ರವೇಶಕ್ಕೆ ನಿರ್ಬಂಧ.
  • ಮಳೆಗಾಲ ಶುರುವಾದರೂ ನಿರ್ಬಂಧ ತೆರವುಗೊಳಿಸದ ಅಧಿಕಾರಿಗಳು.
  • ಜೋಗಿಮಟ್ಟಿ ಸೊಬಗು ಸವಿಯಲು ಬಂದವರಿಗೆ ನಿರಾಸೆ.

ಪರಿಸರ ಪ್ರಿಯರು, ಪ್ರವಾಸಿಗರು ಬೇಸರ

ಕೋಟೆನಾಡು ಚಿತ್ರದುರ್ಗದ ಬಳಿರುವ ಜೋಗಿಮಟ್ಟಿ ವನ್ಯಧಾಮ ಕುರುಚಲು ಕಾಡಾಗಿದ್ದು, ಬೇಸಿಗೆಯಲ್ಲಿ ಗಿಡಮರಗಳು ಒಣಗಿ ನಿಂತಿರುತ್ತವೆ. ಸಣ್ಣ ಎಡವಟ್ಟನಿಂದ ಅರಣ್ಯವೇ ಹೊತ್ತಿ ಉರಿಯುವ ಸಾಧ್ಯತೆ ಇದೆ. ಬೆಂಕಿ ಹೊತ್ತಿದರೆ ಅರಣ್ಯದ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ತೊಂದರೆ ಆಗಲಿದೆ. ಹೀಗಾಗಿ ಬೇಸಿಗೆಯಲ್ಲಿ ಜೋಗಿಮಟ್ಟಿ ಪ್ರವೇಶಕ್ಕೆ ನಿರ್ಬಂಧಿಸಲಾಗುತ್ತದೆ. ಆದರೆ ಮಳೆಗಾಲ ಆರಂಭವಾದರೂ ನಿರ್ಬಂಧ ತೆರವುಗೊಳಿಸದೇ ಇರುವುದು ಪರಿಸರ ಪ್ರಿಯರಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ: ಜೂ.1ರಿಂದ ಆ. 31ರವರೆಗೆ ದಾಂಡೇಲಿಗೆ ನೋ ಎಂಟ್ರಿ; ಸ್ಕೂಬಾ ಡೈವಿಂಗ್, ರ್ಯಾಫ್ಟಿಂಗ್‌ಗೆ ಬ್ರೇಕ್ ಹಾಕಿದ ಉತ್ತರ ಕನ್ನಡ ಡಿಸಿ

ಹಸಿರಿನಿಂದ ಕಂಗೊಳಿಸುತ್ತಿರುವ ಜೋಗಿಮಟ್ಟಿ ವೀಕ್ಷಣೆಗೆ ಬರುವ ಅನೇಕರು ನಿರಾಸೆಯಿಂದ ವಾಪಸ್ ಹೋಗುವಂತಾಗಿದ್ದು, ಅರಣ್ಯ ಇಲಾಖೆಗೆ ಇನ್ನೂ ಮಳೆಗಾಲವೇ ಶುರುವಾಗಿಲ್ವಾ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನು ಅರಣ್ಯ ಇಲಾಖೆಗೆ ಬರುವ ಆದಾಯಕ್ಕೂ ಕತ್ತರಿ ಬಿದ್ದಂತಾಗಿದೆ.

ಇನ್ನೊಂದು ಮಳೆ ಬಂದ ಮರುದಿನವೇ ನಿರ್ಬಂಧ ತೆರವು: ಗೋಪ್ಯಾ ನಾಯ್ಕ್

ಇನ್ನು ಪ್ರತಿನಿತ್ಯ ಜೋಗಿಮಟ್ಟಿ ಗೇಟ್ ಬಳಿಗೆ ಬರುವ ಅನೇಕ ಪ್ರವಾಸಿಗರು, ಪರಿಸರ ಪ್ರೇಮಿಗಳು ನಿರಾಸೆಯಿಂದ ವಾಪಸ್ ತೆರಳುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾ ನಾಯ್ಕ್ ಅವರನ್ನು ಕೇಳಿದರೆ, ಇನ್ನು ಕೆಲವೆಡೆ ಗಿಡಮರಗಳು ಒಣಗಿರುವ ಮಾಹಿತಿ ಇದೆ. ಇನ್ನೊಂದು ಮಳೆ ಬರಲಿ ಎಂದು ಕಾದಿದ್ದೇವೆ. ಮಳೆ ಬಂದ ಮರುದಿನವೇ ಜೋಗಿಮಟ್ಟಿ ಪ್ರವೇಶ ನಿರ್ಬಂಧ ತೆರವುಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಜೋಗಿಮಟ್ಟಿ ವನ್ಯಧಾಮ ವೀಕ್ಷಣೆಗೆ ವಿಧಿಸಿದ್ದ ನಿರ್ಬಂಧ ಇನ್ನೂ ತೆರವುಗೊಳಿಸದಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಅರಣ್ಯ ಇಲಾಖೆ ಈ ಬಗ್ಗೆ ಗಮನಹರಿಸಬೇಕಿದೆ. ಪರಿಸರ ಪ್ರಿಯರಿಗೆ, ಪ್ರವಾಸಿಗರಿಗೆ ಜೋಗಿಮಟ್ಟಿ ಅರಣ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಶಿವಣ್ಣನಿಗೂ ಹೀಗೆ ಕೇಳ್ತೀರಾ’; ಸಂಚಿತ್ ಎಂಟ್ರಿ ನೆಪೋಟಿಸಂ ಎಂದವರಿಗೆ ಸುದೀಪ್ ಖಡಕ್ ಉತ್ತರ – Kannada News

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ‘ಮ್ಯಾಂಗೋ ಪಚ್ಚ’ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಸಿನಿಮಾ ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುದೀಪ್ ಅವರಿಗೆ ಮಾಧ್ಯಮಗಳಿಂದ ‘ನೆಪೋಟಿಸಂ’ ಕುರಿತು ನೇರ ಪ್ರಶ್ನೆ ಎದುರಾಗಿದೆ. ಈ ವೇಳೆ ಸುದೀಪ್ ಹಾಗೂ ಸಂಚಿತ್ ಇಬ್ಬರೂ ಖಡಕ್ ಉತ್ತರ ನೀಡಿದ್ದಾರೆ.

ಖುಷಿ ಎಲ್ಲರಿಗೂ ಕಾಣುತ್ತಿದೆ ಎಂದ ಸಂಚಿತ್:

ಮೊದಲ ಸಿನಿಮಾದಲ್ಲೇ ತಮ್ಮ ನಟನೆಯ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ಸಂಚಿತ್ ಸಂಜೀವ್ ನೆಪೋಟಿಸಂ ಕುರಿತು ಮಾತನಾಡಿ, ‘ನಾನು ಸಿನಿಮಾದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ ಎಂಬುದು ನನ್ನ ನಂಬಿಕೆ. ಆ ಖುಷಿ ಈಗ ಎಲ್ಲರಿಗೂ ಕಾಣಿಸುತ್ತಿದೆ’ ಎಂದು ಸರಳವಾಗಿ ಉತ್ತರಿಸಿದರು.

ಬಾಲಿವುಡ್ ಪ್ರಶ್ನೆ ಇಲ್ಲಿ ಕೇಳಬೇಡಿ ಎಂದ ಕಿಚ್ಚ:

ನೆಪೋಟಿಸಂ ಬಗ್ಗೆ ಕೇಳಿದ ಪ್ರಶ್ನೆಗೆ ಸಖತ್ ಗರಂ ಆದ ಕಿಚ್ಚ ಸುದೀಪ್ ನೇರವಾಗಿಯೇ ಕೌಂಟರ್ ಕೊಟ್ಟರು. ‘ಈ ಪ್ರಶ್ನೆಯನ್ನು ನೀವು ಎಲ್ಲರಿಗೂ ಕೇಳ್ತೀರಾ? ದೊಡ್ಮನೆಯಿಂದ ಇದು ಆರಂಭ ಆಯ್ತಲ್ಲ. ಶಿವಣ್ಣನಿಗೆ ಎಂದಾದರೂ ಈ ಪ್ರಶ್ನೆ ಕೇಳಿದ್ರಾ? ಅವರಿಗೆ ಯಾಕೆ ಕೇಳಿಲ್ಲ? ಕೇಳುವುದಾದರೆ ಪ್ರತಿಯೊಬ್ಬರಿಗೂ ಕೇಳಬೇಕು. ಅಂಬಾನಿ ಮಗನಿಗೆ ಯಾಕೆ ನೆಪೋಟಿಸಂ ಬಗ್ಗೆ ಕೇಳೋದಿಲ್ಲ’ ಎಂದು ಪ್ರಶ್ನಿಸಿದರು.

‘ವರನಟ ಡಾ. ರಾಜ್​​ಕುಮಾರ್ ಅವರ ಸಮಯದಿಂದಲೂ ಕುಟುಂಬದವರಿಗೆ ಆ ಯೋಗ್ಯತೆ ಮತ್ತು ಅರ್ಹತೆ ಇದ್ದು, ಕನ್ನಡ ಜನತೆ ಇಷ್ಟಪಟ್ಟರೆ ಮಾತ್ರ ಉಳಿದುಕೊಳ್ಳುತ್ತಾರೆ. ಇದು ಯಾರಪ್ಪನ ಜಾಗವೂ ಅಲ್ಲ. ದೊಡ್ಮನೆಯಿಂದ ಬಂದ ಶಿವಣ್ಣ ಹಾಗೂ ಅಪ್ಪು ಅವರಿಂದ ಎಷ್ಟೋ ಜನಕ್ಕೆ ಒಳ್ಳೇದಾಗಿದೆ. ಅದಕ್ಕೆ ಅವರಲ್ಲಿರುವ ಪ್ರತಿಭೆ ಕಾರಣವೇ ಹೊರತು ನೆಪೋಟೀಸಮ್ ಅಲ್ಲ’ ಎಂದರು.

ಕಲೆ ಇದ್ದರೆ ಮಾತ್ರ ಬೆಳಿತಾರೆ:

ತಮ್ಮ ಕುಟುಂಬದ ಉದಾಹರಣೆ ನೀಡಿದ ಸುದೀಪ್, ‘ನಂಗೆ ನನ್ನ ಅಪ್ಪ ಇದ್ದಾರೆ, ಅವನಿಗೆ ಮಾವನಾಗಿ ನಾನು ಇದ್ದೀನಿ. ನನ್ನ ಮಗಳಿಗೆ ಸಿಂಗಿಂಗ್ ಅಲ್ಲಿ ಇಂಟ್ರೆಸ್ಟ್ ಇತ್ತು ಅದಕ್ಕೆ ಬಂದಿದ್ದಾಳೆ. ಇವನಿಗೆ (ಸಂಚಿತ್) ಆಕ್ಟಿಂಗ್ ಇಷ್ಟ ಇತ್ತು ಬಂದಿದ್ದಾನೆ. ನಮ್ಮ ಮನೆಯಲ್ಲಿ ಇನ್ನು ತುಂಬಾ ಜನ ಅಕ್ಕನ ಮಕ್ಕಳೆಲ್ಲ ಇದ್ದಾರೆ, ಅವರು ಯಾರೂ ಸಿನಿಮಾ ರಂಗಕ್ಕೆ ಬಂದಿಲ್ಲ’ ಎಂದರು.

ಇದನ್ನೂ ಓದಿ: ‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ

‘ಕನ್ನಡ ಚಿತ್ರರಂಗದಲ್ಲಿ ನೆಪೋಟೀಸಂ ಅನ್ನೋ ಪ್ರಶ್ನೆಯೇ ಬರೋದಿಲ್ಲ. ಆ ಬಾಲಿವುಡ್ ಪ್ರಶ್ನೆಯನ್ನು ತಂದು ಇಲ್ಲಿ ಕೇಳಬೇಡಿ. ಇಲ್ಲಿ ಕಲೆ ಇದ್ರೆ ಮಾತ್ರ ಬೆಳೆಯಲು ಸಾಧ್ಯ’ ಎಂದು ಖಡಾಖಂಡಿತವಾಗಿ ಹೇಳುವ ಮೂಲಕ ನೆಪೋಟಿಸಂ ಚರ್ಚೆಗೆ ಮುಕ್ತಾಯ ಹಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ – Kannada News

ಶಾಸಕ ಸಮೃದ್ಧಿ ಮಂಜುನಾಥ್ , ಎಸ್ಪಿ ಕನ್ನಿಕಾ ಸಿಕ್ರಿವಾಲ್

ಕೋಲಾರ, ಜೂ.6: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕನ್ನಿಕಾ ಸಿಕ್ರಿವಾಲ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರದಲ್ಲಿ ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು, ರೌಡಿಸಂ, ಡ್ರಗ್ಸ್ ಹಾಗೂ ಗಾಂಜಾ ಮಾರಾಟ ಜಾಲ ವ್ಯಾಪಕವಾಗಿ ಹೆಚ್ಚಾಗಿದೆ ಎಂದು ಶಾಸಕರು ಗಂಭೀರ ಆರೋಪ ಮಾಡಿದರು. “ಜಿಲ್ಲೆಯೊಂದರಲ್ಲೇ ಬರೋಬ್ಬರಿ 7 ಜನ ಪ್ರಮುಖ ಕ್ರಿಕೆಟ್ ಬೆಟ್ಟಿಂಗ್ ಕಿಂಗ್‌ಪಿನ್‌ಗಳಿದ್ದಾರೆ. ಇವರ ವಿರುದ್ಧ ಇಲಾಖೆ ಕೈಗೊಂಡಿರುವ ಕ್ರಮಗಳೇನು? ಎಷ್ಟು ಜನರ ವಿರುದ್ಧ ಕಟ್ಟುನಿಟ್ಟಿನ ಕೇಸ್ ದಾಖಲಿಸಿದ್ದೀರಿ?” ಎಂದು ಎಸ್ಪಿಯವರನ್ನು ನೇರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ: ಮಂಗಳೂರು ಬಳಿ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ಪೊಲೀಸ್ ಬಲೆಗೆ: ಕಲಬುರಗಿಯಲ್ಲಿ ವಂಚಿಸುತ್ತಿದ್ದ ಬಿಹಾರಿಗಳ ಬಂಧನ

ಇಲ್ಲಿದೆ ನೋಡಿ ವಿಡಿಯೋ:

ಕೋಲಾರವು ಗಡಿ ಜಿಲ್ಲೆಯಾಗಿರುವುದರಿಂದ ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಸರಣಿಯಾಗಿ ನಡೆಯುತ್ತಿವೆ. ಆದರೆ, ಸಾರ್ವಜನಿಕರಲ್ಲಿ ಕಾನೂನು ಮತ್ತು ಸುರಕ್ಷತೆಯ ಕುರಿತು ಅರಿವು ಮೂಡಿಸುವ ಯಾವುದೇ ಕಾರ್ಯಕ್ರಮಗಳನ್ನು ಇಲಾಖೆ ಹಮ್ಮಿಕೊಳ್ಳುತ್ತಿಲ್ಲ ಎಂದು ಮಂಜುನಾಥ್ ಅಸಮಾಧಾನ ಹೊರಹಾಕಿದರು. “ಪೊಲೀಸ್ ಇಲಾಖೆಯ ಸುಧಾರಣೆಗಾಗಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಅಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟ್ರಾಫಿಕ್ ಸಿಗ್ನಲ್ ಲೈಟ್‌ಗಳು ಹಾಗೂ ಇಲಾಖೆಯ ಬಳಕೆಗೆ 2 ಕಾರುಗಳನ್ನು ಕೊಡಿಸಲಾಗಿದೆ. ಇಷ್ಟೆಲ್ಲಾ ಸೌಲಭ್ಯ ನೀಡಿದರೂ ಜಿಲ್ಲೆಯಲ್ಲಿ ಅಪರಾಧಗಳು ನಿಯಂತ್ರಣಕ್ಕೆ ಬರುತ್ತಿಲ್ಲ ಏಕೆ?” ಎಂದು ತರಾಟೆಗೆ ತೆಗೆದುಕೊಂಡರು. ಶಾಸಕರ ಈ ಖಡಕ್ ಪ್ರಶ್ನೆಗಳಿಗೆ ಉತ್ತರಿಸಲು ಅಧಿಕಾರಿಗಳು ತಡಕಾಡಿದ ಪ್ರಸಂಗ ಸಭೆಯಲ್ಲಿ ನಡೆಯಿತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link