Headlines

ಸಿಇಟಿ ಫಲಿತಾಂಶ ಪ್ರಕಟ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ: ರಿಸಲ್ಟ್​​ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಟ – Kannada News

ಪ್ರಾತಿನಿಧಿಕ ಚಿತ್ರImage Credit source: jagranjosh.com ಬೆಂಗಳೂರು, ಜೂನ್​​ 06: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET) ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಈ ಬಾರಿ ಕೂಡ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಇದೀಗ ತಾಂತ್ರಿಕ ಸಮಸ್ಯೆ ಒಂದು ಎದುರಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಫಲಿತಾಂಶ ನೋಡಬಹುದು ಎಂದು ಕೆಇಎ ಹೇಳಿತ್ತು, ಆದರೆ ತಾಂತ್ರಿಕ ಸಮಸ್ಯೆಯಿಂದ ಸಿಇಟಿ ಫಲಿತಾಂಶ ನೋಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮುಖ್ಯಾಂಶಗಳು ಸಿಇಟಿ ಫಲಿತಾಂಶ ಪ್ರಕಟ…

Read More

IND vs AFG: ಏಕದಿನ ಸರಣಿಯಿಂದ ಕೊಹ್ಲಿ ಔಟ್..! ಬದಲಿ ಆಟಗಾರನನ್ನು ಘೋಷಿಸಿದ ಬಿಸಿಸಿಐ

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಇಂದಿನಿಂದ ಆರಂಭವಾಗಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಪ್ರಕಟಿಸಿತ್ತು. ಆದರೀಗ ಆ ತಂಡಕ್ಕೆ ಬದಲಿ ಆಟಗಾರನಾಗಿ ಯಶಸ್ವಿ ಜೈಸ್ವಾಲ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ವಾಸ್ತವವಾಗಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಅವರ ಬದಲಿಯಾಗಿ ಜೈಸ್ವಾಲ್​ಗೆ ಅವಕಾಶ ನೀಡಲಾಗಿದೆ. ಕೊಹ್ಲಿ…

Read More

ವಿಜಯ್ ಜೊತೆ ದುನಿಯಾ ವಿಜಯ್: ತೆಲುಗು ಸಿನಿಮಾ ಅಪ್​​ಡೇಟ್ – Kannada News

ದುನಿಯಾ ವಿಜಯ್ (Duniya Vijay) ಕನ್ನಡದ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರ ಅದ್ಭುತ ಮೈಕಟ್ಟು ಅದ್ಭುತ ನಟನೆಯಿಂದಾಗಿ ಅವರಿಗೆ ಪರ ಭಾಷೆಗಳಲ್ಲಿಯೂ ಬೇಡಿಕೆ ಇದೆ. ಈಗಾಗಲೇ ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಜೊತೆಗೆ ನಟಿಸಿ ಬಂದಿರುವ ದುನಿಯಾ ವಿಜಿ, ಈಗ ತಮಿಳಿನಲ್ಲಿ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್’ ಸಿನಿಮಾನಲ್ಲಿಯೂ ನಟಿಸಿ ಬಂದಿದ್ದಾರೆ. ಇವು ಮಾತ್ರವೇ ಅಲ್ಲದೆ ಇತ್ತೀಚೆಗಷ್ಟೆ ತೆಲುಗಿನ ಮತ್ತೊಂದು ಪ್ರಮುಖ ಸಿನಿಮಾನಲ್ಲಿ ದುನಿಯಾ ವಿಜಯ್ ನಟಿಸಿದ್ದು, ಸಿನಿಮಾದ ಅಪ್​​ಡೇಟ್ ಒಂದು ಹೊರಬಿದ್ದಿದೆ. ಖ್ಯಾತ ನಟ ವಿಜಯ್ ಸೇತುಪತಿ…

Read More

ನೆಹರು ದಾಖಲೆ ಮುರಿಯಲು ಸಜ್ಜಾದ ಮೋದಿ; ಇಬ್ಬರೂ ಪ್ರಧಾನಿಗಳ ಅಧಿಕಾರಾವಧಿಯ ನಡುವಿನ ಹೋಲಿಕೆಗಳೇನು? – Kannada News

ನವದೆಹಲಿ, ಜೂನ್ 6: ಬರುವ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ, ಭಾರತದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಪ್ರಧಾನಿ ಎಂಬ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ದೇಶವನ್ನು ಮುನ್ನಡೆಸಿದ ಪ್ರಮುಖ ಪ್ರಧಾನಿಗಳು. ಆದರೆ, ಇಬ್ಬರ ನಾಯಕತ್ವದ ಶೈಲಿ, ಸಿದ್ಧಾಂತ ಮತ್ತು…

Read More

Bhanu Saptami 2026: ಜೂ.7 ಭಾನು ಸಪ್ತಮಿ; ಈ ದಿನ ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ – Kannada News

ಆತ್ಮವಿಶ್ವಾಸ, ಗೌರವ, ನಾಯಕತ್ವದ ಗುಣಗಳು ಮತ್ತು ಜೀವನದಲ್ಲಿ ಅಪಾರ ಯಶಸ್ಸನ್ನು ಬಯಸುವವರಿಗೆ ‘ಭಾನು ಸಪ್ತಮಿ’ ಅತ್ಯಂತ ವಿಶೇಷವಾದ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನನ್ನು ನವಗ್ರಹಗಳ ಅಧಿಪತಿ ಎಂದು ಕರೆಯಲಾಗುತ್ತದೆ. ವ್ಯಕ್ತಿಯ ಆರೋಗ್ಯ, ಉದ್ಯೋಗ, ಸಾಮಾಜಿಕ ಗೌರವ ಮತ್ತು ವ್ಯಕ್ತಿತ್ವ ವಿಕಸನದ ಮೇಲೆ ಸೂರ್ಯನ ಪ್ರಭಾವ ಅಪಾರವಾಗಿರುತ್ತದೆ. ವಿಶೇಷವೆಂದರೆ, 2026ರ ಅಧಿಕ ಮಾಸದಲ್ಲಿ ಬರುವ ಈ ಅಪರೂಪದ ಭಾನು ಸಪ್ತಮಿಯನ್ನು ಜೂನ್ 7 ರಂದು ಆಚರಿಸಲಾಗುತ್ತಿದೆ. ಈ ದಿನ ಸೂರ್ಯ ದೇವನನ್ನು ಭಕ್ತಿಯಿಂದ ಆರಾಧಿಸುವುದರಿಂದ ಜಾತಕದಲ್ಲಿ ಸೂರ್ಯ…

Read More

ಸಿಲಿಕಾನ್ ಸಿಟಿಯಲ್ಲಿ ದಿಢೀರ್ ಮಳೆರಾಯನ ಆರ್ಭಟ!: ಮಲ್ಲೇಶ್ವರಂ, ವಿಜಯನಗರದಲ್ಲಿ ಧಾರಾಕಾರ ಮಳೆ: ಜೂನ್ 11ರವರೆಗೆ ಈ ಭಾಗದಲ್ಲೂ ಭಾರಿ ಮಳೆ – Kannada News

ಬೆಂಗಳೂರು, ಜೂ.6: ರಾಜಧಾನಿ ಬೆಂಗಳೂರಿನ ಸಾರ್ವಜನಿಕರಿಗೆ ಮಳೆರಾಯ ಶನಿವಾರ ಮಧ್ಯಾಹ್ನ ಬಿಗ್ ಶಾಕ್ ನೀಡಿದ್ದಾನೆ. ನಗರದ ಕೇಂದ್ರ ಭಾಗ ಸೇರಿದಂತೆ ಪ್ರಮುಖ ಬಡಾವಣೆಗಳಲ್ಲಿ ಹಠಾತ್ ಧಾರಾಕಾರ ಮಳೆ ಸುರಿದಿದ್ದು, ವಾರಾಂತ್ಯದ ಮೂಡ್‌ನಲ್ಲಿದ್ದ ಐಟಿ ಸಿಟಿ ಜನರಿಗೆ ಬಿಗ್​ ಶಾಕ್ ನೀಡಿದೆ. ಮುಂಗಾರು ಮಾರುತಗಳ ಆರ್ಭಟದ ಹಿನ್ನೆಲೆಯಲ್ಲಿ ನಗರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ನಗರದ ಹೃದಯಭಾಗವಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ವಿಜಯನಗರ, ವಸಂತನಗರ, ಪ್ಯಾಲೇಸ್ ಗುಟ್ಟಹಳ್ಳಿ, ಕಾಟನ್​ಪೇಟೆ, ಕಾರ್ಪೋರೇಷನ್, ಚಿಕ್ಕಪೇಟೆ ಮತ್ತು ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಬಹುತೇಕ ರಸ್ತೆಗಳಲ್ಲಿ…

Read More

IND vs AFG: ಅಫ್ಘನ್ ವಿರುದ್ಧ 12ನೇ ಟೆಸ್ಟ್ ಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್‌ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯ ಜೂನ್ 6 ರ ಶನಿವಾರದಿಂದ ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಎಂಟು ವರ್ಷಗಳ ನಂತರ ಎರಡೂ ದೇಶಗಳ ನಡುವೆ ಈ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಭರ್ಜರಿ ಶತಕ ಬಾರಿಸಿದ್ದಾರೆ. ತಮ್ಮ ಟೆಸ್ಟ್ ವೃತ್ತಿಜೀವನದ…

Read More

ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಅತಿ ಕಿರಿಯ; ಸಚಿನ್ ದಾಖಲೆ ಮುರಿದ ವೈಭವ್

ಜೂನ್-ಜುಲೈನಲ್ಲಿ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಾಗೂ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ಟಿ20 ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 16 ಸದಸ್ಯರ ಈ ತಂಡವನ್ನು ನೂತನ ನಾಯಕ ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ ತಿಲಕ್ ವರ್ಮಾ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ (PC- PTI). ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ಅದರಲ್ಲೂ ಈ ಸೀಸನ್‌ನಲ್ಲಿ ರನ್​ಗಳ ಮಳೆ ಹರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ 15…

Read More

ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ – Kannada News

ಚಿತ್ರದುರ್ಗ, ಜೂನ್​​ 06: ಬಯಲುಸೀಮೆಯ ಊಟಿ ಎಂದೇ ಖ್ಯಾತಿ ಪಡೆದಿರುವ ಜೋಗಿಮಟ್ಟಿ (Jogi Matti)  ವನ್ಯಜೀವಿಧಾಮ ವೀಕ್ಷಣೆಗೆ ನಿತ್ಯ ನೂರಾರು ಜನರು ಆಗಮಿಸುತ್ತಾರೆ. ಬೇಸಿಗೆ ಕಾಲದಲ್ಲಿ ಜೋಗಿಮಟ್ಟಿ ಪ್ರವೇಶಕ್ಕೆ ಅರಣ್ಯ ಇಲಾಖೆ ಇತ್ತೀಚೆಗೆ ನಿರ್ಬಂಧ ವಿಧಿಸಿತ್ತು. ಆದರೆ ಮಳೆಗಾಲ (Monsoon) ಆರಂಭವಾದರೂ ನಿರ್ಬಂಧ ತೆರವುಗೊಳಿಸದಿರುವುದು ಪರಿಸರ ಪ್ರಿಯರ ಹಿಡಿಶಾಪಕ್ಕೆ ಗುರಿ ಆಗಿದೆ. ಮುಖ್ಯಾಂಶಗಳು ಬೇಸಿಗೆ ಕಾಲದಲ್ಲಿ ಬೆಂಕಿ ಅವಘಡ ತಪ್ಪಿಸಲು ಅರಣ್ಯ ಪ್ರವೇಶಕ್ಕೆ ನಿರ್ಬಂಧ. ಮಳೆಗಾಲ ಶುರುವಾದರೂ ನಿರ್ಬಂಧ ತೆರವುಗೊಳಿಸದ ಅಧಿಕಾರಿಗಳು. ಜೋಗಿಮಟ್ಟಿ ಸೊಬಗು ಸವಿಯಲು ಬಂದವರಿಗೆ…

Read More

‘ಶಿವಣ್ಣನಿಗೂ ಹೀಗೆ ಕೇಳ್ತೀರಾ’; ಸಂಚಿತ್ ಎಂಟ್ರಿ ನೆಪೋಟಿಸಂ ಎಂದವರಿಗೆ ಸುದೀಪ್ ಖಡಕ್ ಉತ್ತರ – Kannada News

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ‘ಮ್ಯಾಂಗೋ ಪಚ್ಚ’ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಸಿನಿಮಾ ಎಲ್ಲೆಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸುದೀಪ್ ಅವರಿಗೆ ಮಾಧ್ಯಮಗಳಿಂದ ‘ನೆಪೋಟಿಸಂ’ ಕುರಿತು ನೇರ ಪ್ರಶ್ನೆ ಎದುರಾಗಿದೆ. ಈ ವೇಳೆ ಸುದೀಪ್ ಹಾಗೂ ಸಂಚಿತ್ ಇಬ್ಬರೂ ಖಡಕ್ ಉತ್ತರ ನೀಡಿದ್ದಾರೆ. ಖುಷಿ ಎಲ್ಲರಿಗೂ ಕಾಣುತ್ತಿದೆ ಎಂದ ಸಂಚಿತ್: ಮೊದಲ ಸಿನಿಮಾದಲ್ಲೇ ತಮ್ಮ ನಟನೆಯ ಮೂಲಕ ಪ್ರೇಕ್ಷಕರ…

Read More