‘ಲಕ್ಷಾಂತರ ರೂ. ಅನುದಾನ ಕೊಟ್ಟರೂ ಜಿಲ್ಲೆಯಲ್ಲಿ ಗಾಂಜಾ, ಬೆಟ್ಟಿಂಗ್ ನಿಂತಿಲ್ಲ ಯಾಕೆ’?: ಕೋಲಾರ ಎಸ್ಪಿಗೆ ಶಾಸಕ ಸಮೃದ್ಧಿ ಮಂಜುನಾಥ್ ತರಾಟೆ – Kannada News
ಶಾಸಕ ಸಮೃದ್ಧಿ ಮಂಜುನಾಥ್ , ಎಸ್ಪಿ ಕನ್ನಿಕಾ ಸಿಕ್ರಿವಾಲ್ ಕೋಲಾರ, ಜೂ.6: ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕನ್ನಿಕಾ ಸಿಕ್ರಿವಾಲ್ ಅವರನ್ನು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳು ಮಿತಿಮೀರಿದ್ದರೂ ಪೊಲೀಸ್ ಇಲಾಖೆ ಮೌನವಾಗಿದೆ ಎಂದು ಅವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಲಾರದಲ್ಲಿ ಅಪ್ರಾಪ್ತರ…