Category Archives: Blog

Your blog category

ಕೊಪ್ಪಳದಲ್ಲಿ ಕಾರ್ಖಾನೆಗಳ ವಿರುದ್ಧ ಧರಣಿ: ದಾಖಲೆ ಬರೆದ ಗವಿ ಸಿದ್ದೇಶ್ವರ ಶ್ರೀ ಭಾಗಿಯಾಗಿದ್ದ ಹೋರಾಟ – Kannada News | Koppal: Protest against factories; Gavi Siddeshwara Sri participated Protest make Record

ಬಲ್ಡೋಟಾ, ಪ್ರತಿಭಟನೆImage Credit source: tv9 kannada

ಕೊಪ್ಪಳ, ಫೆಬ್ರವರಿ 01: ಅದು ಸುಮಾರು 54 ಸಾವಿರ ಕೋಟಿ ರೂ ವೆಚ್ಚದಲ್ಲಿ ವಿಸ್ತರಣೆಯಾಗುತ್ತಿರುವ ಕಾರ್ಖಾನೆ (Baldota Factory). ಆ ಕಾರ್ಖಾನೆ ವಿರೋಧಿಸಿ ಅಲ್ಲಿ ದೊಡ್ಡ ಹೋರಾಟ ನಡೆದಿತ್ತು. ಖುದ್ದು ಗವಿ ಸಿದ್ದೇಶ್ವರ ಶ್ರೀಗಳು ಹೋರಾಟದಲ್ಲಿ (Protest) ಭಾಗಿಯಾಗಿದ್ದರು. ಕಾರ್ಖಾನೆ ವಿಸ್ತರಿಸಿದ ಹಿನ್ನೆಲೆ ಕೊಪ್ಪಳ ಬಂದ್ ಕರೆ ನೀಡಲಾಗಿತ್ತು. ಗವಿ ಶ್ರೀಗಳು ಹೋರಾಟಕ್ಕೆ ಧುಮುಕಿದಾಗ ಸರ್ಕಾರ ತಾತ್ಕಾಲಿಕವಾಗಿ ಆ ಕಾರ್ಖಾನೆ ಕೆಲಸ ನಿಲ್ಲಿಸಿತ್ತು. ಆದರೆ ಇದೀಗ ಆ ಕಾರ್ಖಾನೆ ಮತ್ತೆ ಎಂದಿನಂತೆ ಕೆಲಸ ಆರಂಭಿಸಿದೆ. ಇದು ಸಹಜವಾಗಿ ಕೊಪ್ಪಳ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಕಾರ್ಖಾನೆ ವಿರೋಧಿಸಿ ಕೊಪ್ಪಳದಲ್ಲಿ ಕಳೆದ 94 ದಿನಗಳಿಂದ ಹೋರಾಟ ನಡೆಯುತ್ತಿದ್ದು, ಇದೀಗ ಈ ಹೋರಾಟ ದಾಖಲೆ ಬರೆದಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಇಷ್ಟೊಂದು ದಿನ ಹೋರಾಟ ನಡೆದ ಇತಿಹಾಸವೇ ಇಲ್ಲ.

ದಾಖಲೆ ಬರೆದ 94 ದಿನಗಳ ಧರಣಿ 

ಬಲ್ಡೋಟಾ ಸ್ಟೀಲ್ ಆ್ಯಂಡ್ ಪವರ್ ಲಿಮಿಟಿಡ್, ಕೊಪ್ಪಳ ತಾಲೂಕಿನ ಬಸಾಪೂರ ಬಳಿ ಸುಮಾರು 54 ಸಾವಿರ ಕೋಟಿ ರೂ ವೆಚ್ಚದಲ್ಲಿ ವಿಸ್ತರಣೆಯಾಗುತ್ತಿರುವ ಕಾರ್ಖಾನೆ. ಆದರೆ ಈ ಕಾರ್ಖಾನೆ ವಿರೋಧಿಸಿ ಕೊಪ್ಪಳದಲ್ಲಿ ಕಳೆದ 94 ದಿನಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಈ ಹೋರಾಟ ದಾಖಲೆ ಬರೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ನಿರಂತರವಾಗಿ ಇಷ್ಟೊಂದು ದಿನ ಹೋರಾಟ ನಡೆದ ಇತಿಹಾಸವೇ ಇಲ್ಲ. ಕೊಪ್ಪಳ ಜಿಲ್ಲಾ ಬಚಾವೋ ಆಂದಲೋನ ಸಮಿತಿಯಿಂದ ನಿರಂತರ 94 ದಿನಗಳ ಧರಣಿ ಇದೀಗ ದಾಖಲೆ ಬರೆದಿದೆ.

ಇದನ್ನೂ ಓದಿ: ಕಾರ್ಖಾನೆಗಳ ಹೊಗೆಗೆ ರೋಸಿ ಹೋದ ಅನ್ನದಾತ: ಹೋರಾಟಕ್ಕೆ ಗವಿಸಿದ್ದೇಶ್ವರ ಸ್ವಾಮೀಜಿಯನ್ನ ಕರೀತಿವಿ ಎಂದ ರೈತರು

1991ರಲ್ಲಿ ರಾಯಚೂರು ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯನ್ನ ಪ್ರತ್ಯೇಕಗೊಳಿಸಲು ಹೋರಾಟ ನಡೆದಿತ್ತು. ಅದು 80 ದಿನಗಳ ಕಾಲ ನಿರಂತರ ನಡೆದಿತ್ತು. ಆ ಸಮಯದಲ್ಲಿ ರಾಜೀವ್ ಗಾಂಧಿ ಹತ್ಯೆಯಾದ ಹಿನ್ನಲೆ ಹೋರಾಟ ವಾಪಸ್ ಪಡೆಯಲಾಗಿತ್ತು. ಇದೀಗ ಆ ದಾಖಲೆಯನ್ನ ಮುರಿದು ಕಾರ್ಖಾನೆಗಳ ವಿರುದ್ದ ನಿರಂತರ 94 ದಿನಗಳಿಂದ ಹೋರಾಟ ನಡೆಯುತ್ತಿದೆ. ಕೊಪ್ಪಳದ ನಗರಸಭೆ ಮುಂಭಾಗ ಪರಿಸರವಾದಿಗಳು ಹೋರಾಟ ಆರಂಭಿಸಿದ್ದಾರೆ. ಈಗಾಗಲೇ ನಾಡಿನ ಅನೇಕ ಗಣ್ಯರು ಈ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಚಿಂತಕ ಭಗವಾನ್, ನಟ ಅಹಿಂಸಾ ಚೇತನ್ ಸೇರಿ ಅನೇಕ ಗಣ್ಯರು ಹೋರಾಟದಲ್ಲಿ ಭಾಗಿಯಾಗಿದ್ದಾರೆ, ಆದರೆ ಇದುವರೆಗೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ ಎಂದು ಹೋರಾಟಗಾರ ಅಲ್ಲಮಪ್ರಭು ಬೆಟದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಲ್ಡೋಟಾ ಸೇರಿ ಅನೇಕ ಕಾರ್ಖಾನೆಗಳ ವಿರುದ್ದ ಕಳೆದ 94 ದಿನಗಳಿಂದ ನಿರಂತರ ಧರಣಿ ನಡೆಯುತ್ತಿದೆ. ಕಾರ್ಖಾನೆಗಳು ಹೊರಸುಸುವ ಹೊಗೆಯಿಂದ ಈಗಾಗಲೇ ಕೊಪ್ಪಳ ತಾಲೂಕಿನ ಅನೇಕ ಹಳ್ಳಿಗಳಿಗೆ ಸಮಸ್ಯೆ ಉಂಟಾಗಿದೆ. ಅಲ್ಲಾನಗರ, ಬಸಾಪೂರ, ಹಾಲವರ್ತಿ, ಕುಣಿಕೇರಿ, ಹಿರೇಬಗನಾಳ ಸೇರಿ ಹತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಸಮಸ್ಯೆ ಎದುರಾಗಿದೆ. ಈ ಕಾರಣಕ್ಕೆ ಬಲ್ಡೋಟಾ ವಿಸ್ತರಣೆ ಬೇಡ ಎಂದು ಹೋರಾಟ ನಡೆದಿದೆ.

ಮತ್ತೊಮ್ಮೆ ಬಂದ್? 

ಕಳೆದ ವರ್ಷ ಫೆಬ್ರುವರಿ 24 ರಂದು ಕೊಪ್ಪಳ ಜಿಲ್ಲೆಯ ಬಂದ್ ಮಾಡಿ ಹೊರಾಟ ಮಾಡಲಾಗಿತ್ತು. ಹೋರಾಟದಲ್ಲಿ ಗವಿಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಭಾಗಿಯಾಗಿದ್ದರು. ಇದಾದ ಬಳಿಕ ಶ್ರೀಗಳು ಮೌನಕ್ಕೆ ಜಾರಿದ್ದಾರೆ. ಮತ್ತೊಂದು ಕಡೆ ಜಿಲ್ಲೆಯ ಜನ ಪ್ರತಿನಿಧಿಗಳು ಹೋರಾಟಗಾರರ ಮನವಿಗೆ ಸ್ಪಂದಿಸುತ್ತಿಲ್ಲ. ಕಳೆದ ತಿಂಗಳು ಕಾಟಾಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹೋರಾಟಗಾರರನ್ನು ಭೇಟಿ ಮಾಡಿ ಹೋಗಿದ್ದಾರೆ. ಆದರೆ ಇದುವರೆಗೂ ಕಾರ್ಖಾನೆ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ತಿಳಿಸಿಲ್ಲ. ಇದೀಗ 94 ದಿನಗಳಾಗಿದ್ದು, ಫೆಬ್ರವರಿ 24 ರಂದು ಕೊಪ್ಪಳ ಬಂದ್​ಗೆ ಒಂದು ವರ್ಷವಾಗುವ ಹಿನ್ನಲೆ ಹೋರಾಟಗಾರರು ದೊಡ್ಡ ಮಟ್ಟದ ಹೋರಾಟಕ್ಕೆ ಸಿದ್ಧಗೊಂಡಿದ್ದಾರೆ. ಸುಮಾರು 2000ಕ್ಕೂ ಅಧಿಕ ಜನ ಸೇರಿ ಮತ್ತೊಮ್ಮೆ ಹೋರಾಟದ ಕಹಳೆ ಮೊಳಗಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಮತ್ತೆ‌ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಒಟ್ಟಾರೆ ಬಲ್ಡೋಟಾ ಕಾರ್ಖಾನೆ ವಿರುದ್ಧದ ನಿರಂತರ ಧರಣಿ ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ದಾಖಲೆಯಾಗಿದೆ. ಇಷ್ಟೊಂದು ನಿರಂತರ ಧರಣಿ ನಡೆದ ಉದಾಹರಣೆ ಕೊಪ್ಪಳದಲ್ಲಿ ಇಲ್ಲವೇ ಇಲ್ಲ. ಅನೇಕ ಹೋರಾಟಗಳು ನಡೆದರೂ ನಿರಂತರ 94 ದಿನಗಳವರೆಗೂ ಯಾವ ಹೋರಾಟವೂ ನಡೆದಿರಲಿಲ್ಲ. 371 ತಿದ್ದುಪಡಿಗಾಗಿ ನಡೆದ ದೊಡ್ಡ ಹೋರಾಟವೂ ಇಷ್ಟು ದಿನ ನಡೆದಿರಲಿಲ್ಲ. ಆದರೂ ಸರ್ಕಾರ ಮಾತ್ರ ಹೋರಾಟಗಾರರಿಗೆ ಕ್ಯಾರೇ ಅನ್ನುತ್ತಿಲ್ಲ. ಮುಂದೆ ಆಗುವ ಅನಾಹುತಕ್ಕೆ ಸರ್ಕಾರವೇ ನೇರಹೊಣೆ ಎಂದು ಈಗಾಗಲೇ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು – Kannada News | Karnataka is biggest gaine in tax devolution share under 16th Finance Commission formula

ನವದೆಹಲಿ, ಫೆಬ್ರವರಿ 1: ಕೇಂದ್ರ ಸರ್ಕಾರ 16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕ (Karnataka) ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಿಸಿದೆ. ಈ ಮೂಲಕ ತೆರಿಗೆ ಪಾಲಿನಲ್ಲಿ ಈ ವರ್ಷ ಅತಿದೊಡ್ಡ ಫಲಾನುಭವಿಯಾಗಿ ಕರ್ನಾಟಕ ಹೊರಹೊಮ್ಮಿದೆ. ಮಧ್ಯಪ್ರದೇಶವು ಅತಿ ಕಡಿಮೆ ತೆರಿಗೆ ಪಾಲನ್ನು ಹೊಂದುವ ಸಾಧ್ಯತೆಯಿದೆ. ಏಕೆಂದರೆ, ಈ ಸಮಿತಿಯು ಈಕ್ವಿಟಿ ಜೊತೆಗೆ ಆರ್ಥಿಕ ದಕ್ಷತೆಯ ಮೇಲೆ ತನ್ನ ಗಮನವನ್ನು ನೆಟ್ಟಿದೆ.

ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ 63,050 ಕೋಟಿ ರೂ. ತೆರಿಗೆ ಪಾಲು ದೊರೆಯಲಿದೆ.

ಹೊಸ ಸೂತ್ರದಡಿ ಕೇಂದ್ರ ಸರ್ಕಾರದ ತೆರಿಗೆ ವಿಕೇಂದ್ರೀಕರಣದಲ್ಲಿ ಕರ್ನಾಟಕದ ಪಾಲನ್ನು 2026ರಲ್ಲಿ ಶೇ. 4.13ಕ್ಕೆ ಹೆಚ್ಚಿಸಲಾಗಿದೆ. ಇದು 15ನೇ ಹಣಕಾಸು ಆಯೋಗದ ಅಡಿಯಲ್ಲಿ ಶೇ. 3.65 ರಷ್ಟಿತ್ತು. ಕಳೆದ ಬಾರಿಗಿಂತ ಈ ಬಾರಿ 7,387 ಕೋಟಿ ರೂ. ಹೆಚ್ಚುವರಿಯಾಗಿ ಸಿಕ್ಕಿದೆ. ಈ ಮೂಲಕ ಕರ್ನಾಟಕದ ತೆರಿಗೆ ಹಂಚಿಕೆಯನ್ನು 63,050 ಕೋಟಿ ರೂ.ಗೆ ಏರಿದೆ.

ಇದನ್ನೂ ಓದಿ: ರಾಜ್ಯಗಳಿಗೆ ಶೇ. 41 ತೆರಿಗೆ ಹಂಚಿಕೆ ಸೂತ್ರ; 16ನೇ ಹಣಕಾಸು ಆಯೋಗದ ಶಿಫಾರಸು ಒಪ್ಪಿದ ಕೇಂದ್ರ

ಕರ್ನಾಟಕದ ಬಳಿಕ ತೆರಿಗೆ ಹಂಚಿಕೆಯಲ್ಲಿ ಕೇರಳ ಎರಡನೇ ಅತಿ ಹೆಚ್ಚು ಲಾಭ ಗಳಿಸುತ್ತಿರುವ ರಾಜ್ಯವಾಗಿದೆ. ಇದರ ಹಂಚಿಕೆ 6,975 ಕೋಟಿ ರೂ.ಗಳಷ್ಟು ಹೆಚ್ಚಾಗಿದೆ. ಗುಜರಾತ್ (4,228 ಕೋಟಿ ರೂ.ಗಳು) ಮತ್ತು ಹರಿಯಾಣ (4,090 ಕೋಟಿ ರೂ.ಗಳು) ಸಹ ಲಾಭವನ್ನು ಕಂಡಿವೆ. ಇದು ಅವರ ಹೆಚ್ಚಿನ ತಲಾ ಆದಾಯ ಮತ್ತು GDP ಗೆ ಬಲವಾದ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ. ಭಾರತದ ಅತಿದೊಡ್ಡ ರಾಜ್ಯ ಆರ್ಥಿಕತೆಯಾದ ಮಹಾರಾಷ್ಟ್ರವು ಹೆಚ್ಚುವರಿಯಾಗಿ 1,893 ಕೋಟಿ ರೂ. ಗಳಿಸುತ್ತಿದೆ.

ಆದರೆ, ಮಧ್ಯಪ್ರದೇಶವು ಅತಿದೊಡ್ಡ ನಷ್ಟವನ್ನು ಅನುಭವಿಸುತ್ತಿದೆ. ಇದರ ಹಂಚಿಕೆ 7,677 ಕೋಟಿ ರೂ.ಗಳಷ್ಟು ಕುಸಿದು 1.12 ಲಕ್ಷ ಕೋಟಿ ರೂ.ಗಳಿಗೆ ತಲುಪಿದೆ. ಉತ್ತರ ಪ್ರದೇಶವು 4,884 ಕೋಟಿ ರೂ.ಗಳನ್ನು ಕಳೆದುಕೊಂಡರೆ, ಪಶ್ಚಿಮ ಬಂಗಾಳವು 4,701 ಕೋಟಿ ರೂ.ಗಳನ್ನು ಕಡಿತಗೊಳಿಸಿದೆ.

ಇದನ್ನೂ ಓದಿ: Budget 2026 Announcements LIVE: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ, ತೆರಿಗೆ ವಿಳಂಬಕ್ಕೆ ದಂಡ ಮಾತ್ರ, ಶಿಕ್ಷೆ ಇಲ್ಲ

ಇದರ ಜೊತೆಗೆ ಈ ಬಾರಿಯ ಬಜೆಟ್​​ನಲ್ಲಿ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಸ್ಮಾರ್ಟ್ ನಗರಗಳು, ತಂತ್ರಜ್ಞಾನ ನೇತೃತ್ವದ ಬೆಳವಣಿಗೆ ಮತ್ತು ಸುಸ್ಥಿರ ಕರಾವಳಿ ಅಭಿವೃದ್ಧಿಯ ಮೂಲಕ ಕರ್ನಾಟಕ ರಾಜ್ಯವನ್ನು ಭಾರತದ ಭವಿಷ್ಯಕ್ಕೆ ಸಂಪರ್ಕಿಸಿದೆ. ಬಜೆಟ್‌ನಲ್ಲಿ ಘೋಷಿಸಲಾದ 3 ಹೈಸ್ಪೀಡ್ ರೈಲು ಕಾರಿಡಾರ್‌ಗಳು ಕರ್ನಾಟಕದ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಅದರಲ್ಲಿ ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್ ಮತ್ತು ಕಲಬುರಗಿ ಮೂಲಕ ಹೈದರಾಬಾದ್-ಪುಣೆಗೆ ರೈಲು ಪ್ರಯಾಣಿಸುತ್ತದೆ. ಅವು ಬೆಂಗಳೂರನ್ನು ಭಾರತದ ಅತಿದೊಡ್ಡ ತಂತ್ರಜ್ಞಾನ, ಉತ್ಪಾದನೆ ಮತ್ತು ಲಾಜಿಸ್ಟಿಕ್ಸ್ ಕೇಂದ್ರಗಳಿಗೆ ಸಂಪರ್ಕಿಸುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ – Kannada News | Karnataka Bulldozers won the CCL 2026 cup under Sudeep captaincy

ವಿವಿಧ ಚಿತ್ರರಂಗದವರು ಒಟ್ಟಿಗೆ ಸೇರಿ ಕ್ರಿಕೆಟ್ ಆಡುವ ಸಿಸಿಎಲ್ (ಸೆಲೆಬ್ರಿಟಿ ಕ್ರಿಕೆಟ್ ಲೀಗ್) 2026 ಫೈನಲ್ ಇಂದು (ಫೆಬ್ರವರಿ 1) ನಡೆದಿದ್ದು, ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಇಂದು ಕೊಯಮತ್ತೂರಿನಲ್ಲಿ ನಡೆದ ಫೈನಲ್​​ನಲ್ಲಿ ಬಂಗಾಳ ತಂಡವನ್ನು ಎದುರಿಸಿದ ಕರ್ನಾಟಕ ಬುಲ್ಡೋಜರ್ಸ್ ತಂಡ ಆಲ್​​ರೌಂಡ್ ಪ್ರದರ್ಶನ ತೋರಿ ಫೈನಲ್ ಪಂದ್ಯದಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ. ಅದೂ ಬರೋಬ್ಬರಿ 12 ವರ್ಷಗಳ ಬಳಿಕ ಕರ್ನಾಟಕ ಬುಲ್ಡೋಜರ್ಸ್ ತಂಡ ಚಾಂಪಿಯನ್ ಎನಿಸಿಕೊಂಡಿದೆ.

ಕರ್ನಾಟಕ ಬುಲ್ಡೋಜರ್ಸ್ ಈಗಾಗಲೆ ಎರಡು ಬಾರಿ ಚಾಂಪಿಯನ್ ಆಗಿತ್ತು. ಇದೀಗ 12 ವರ್ಷಗಳ ಬಳಿಕ ಮತ್ತೆ ಗೆದ್ದು ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುಂಚೆ ಬರೋಬ್ಬರಿ ಆರು ಬಾರಿ ಫೈನಲ್ ವರೆಗೂ ತಲುಪಿ ರನ್ನರ್ ಅಪ್ ಎನಿಸಿಕೊಂಡಿದ್ದರು. ಆದರೆ ಈ ಸೀಸನ್​​ನಲ್ಲಿ ಆರಂಭದ ಮ್ಯಾಚಿನಿಂದಲೇ ಅದ್ಭುತವಾಗಿ, ಸಂಘಟಿತ ಆಟವಾಡುತ್ತಾ ಬಂದ ಕರ್ನಾಟಕ ತಂಡ ಇದೀಗ ಫೈನಲ್ ಗೆದ್ದಿದೆ.

ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬೆಂಗಾಲ್ ಟೈಗರ್ಸ್ ತಂಡ, ಕರ್ನಾಟಕದ ಉತ್ತಮ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಮೊತ್ತ ಕಲೆ ಹಾಕಲು ವಿಫಲವಾದವು. ಬೆಂಗಾಲ್ ಟೈಗರ್ಸ್ ತಂಡ 20 ಓವರ್​​​ಗಳಲ್ಲಿ ಗಳಿಸಿದ್ದು ಕೇವಲ 129 ರನ್ನುಗಳನ್ನಷ್ಟೆ. ಕರ್ನಾಟಕದ ಪರ ಉತ್ತಮ ಬೌಲಿಂಗ್ ಮಾಡಿದ ಪ್ರತಾಪ್ ಮೂರು ವಿಕೆಟ್ ಪಡೆದರೆ, ಸುನೀಲ್ ಎರಡು ವಿಕೆಟ್ ಗಳಿಸಿದರು.

ಬಳಿಕ ಬ್ಯಾಟಿಂಗ್​​ಗೆ ಇಳಿದ ಕರ್ನಾಟಕಕ್ಕೆ ಬಹಳ ಉತ್ತಮ ಆರಂಭ ಒದಗಿತು. ಕರ್ನಾಟಕ ಬುಲ್ಡೋಜರ್ಸ್ ತಂಡದ ಪ್ರಮುಖ ದಾಂಡಿಗ ರಾಜೀವ್ ಪ್ರತಿ ಬಾರಿಯಂತೆ ಈ ಬಾರಿಯೂ ಅದ್ಭುತ ಆರಂಭ ಒದಗಿಸಿದರು. ಕೇವಲ 37 ಬಾಲಿಗೆ 69 ರನ್ ಭಾರಿಸಿದರು. ಆದರೆ ರಾಜೀವ್ ಔಟಾದ ಬಳಿಕ ಆಟ ತುಸು ನಿಧಾನವಾಯ್ತು. ಬೆಂಗಾಲ್ ಪರ ರತನ್​​ದೀಪ್ ಅವರು ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ಗಮನ ಸೆಳೆದರು. ಆದರೆ ಕರ್ನಾಟಕ ತಂಡದ ಆಟಗಾರರು ಎಚ್ಚರಿಕೆಯ ಆಟವಾಡಿ ಗೆಲುವು ತಮ್ಮದಾಗಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:45 pm, Sun, 1 February 26

Source link

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್​ಗೆ ಅರ್ಹತೆ ಪಡೆಯಬೇಕಿದ್ದರೆ, ಈ ಪಂದ್ಯದಲ್ಲಿ ಡೆಲ್ಲಿ ಸೋಲಬೇಕಿತ್ತು. ಆದರೆ ಅದು ನಡೆಯಲಿಲ್ಲ. ಹೀಗಾಗಿ ಎಲಿಮಿನೇಟರ್​ನಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

Source link

ಆರತಕ್ಷತೆಗೆ ತೆರಳುವಾಗ ಅಡ್ಡಗಟ್ಟಿ ವರನಿಗೆ ಚಾಕು ಇರಿತ ಕೇಸ್​​​ಗೆ ಬಿಗ್ ಟ್ವಿಸ್ಟ್​, ಮದ್ವೆಯಾಗಬೇಕಿದ್ದವಳೇ ವಿಲನ್ – Kannada News | Big Twist To Chamarajanagar Groom stabbed Case: Bride And Her Lover arrested Who Attacked On Ravish for Stop marriage

ಚಾಮರಾಜನಗರ, (ಫೆಬ್ರವರಿ 01): ಕೊಳ್ಳೇಗಾಲದಲ್ಲಿ (Kollegala) ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್​, ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅಸಲಿಯತ್ತು ಬಯಲಾಗಿದೆ. ಮದುವೆ ನಿಲ್ಲಿಸಲು ಪ್ರಿಯಕರನ ಜೊತೆ ಸೇರಿ ನಯನಾ (ರವೀಶ್​​ನ ಮದ್ವೆಯಾಗಬೇಕಿದ್ದ ಯುವತಿ) ಈ ರೀತಿ ಪ್ಲ್ಯಾನ್ ಮಾಡಿದ್ದಾಳೆ ಎನ್ನುವುದು ಕೊಳ್ಳೇಗಾಲ ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿದೆ.​

ತಮಟೆ ಹೊಡೆಯುವ ಕೆಲಸ ಮಾಡ್ತಿದ್ದ ದರ್ಶನ್​ ಎನ್ನುವಾತನನ್ನು ನಯನಾ ಲವ್ ಮಾಡುತ್ತಿದ್ದಳು. ಆದ್ರೆ,​​ ದರ್ಶನ್ ಕೆಲಸದ ಬಗ್ಗೆ ಮನೆಯಲ್ಲಿ ಹೇಳಲು ಹೆದರಿದ್ದಳು. ಹೀಗಾಗಿ ಈ ಮದುವೆ ನೀನೇ ನಿಲ್ಲಿಸು ಎಂದು ನಯನಾ, ಪ್ರಿಯಕರ ದರ್ಶನ್​​ಗೆ ಹೇಳಿದ್ದಳು. ಅದರಂತೆ ಪ್ರಿಯಕರ ದರ್ಶನ್ ಗ್ಯಾಂಗ್, ಜನವರಿ 27ರಂದು ರವೀಶ್ ಕೊಳ್ಳೇಗಾಲದ ಕಲ್ಯಾಣ ಮಂಟಪ್ಪಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆಯೇ ಕಾರು ಅಡ್ಡಗಟ್ಟಿದ್ದು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಪರಾರಿಯಾಗಿತ್ತು. ಬಳಿಕ ರವೀಶ್ ದಾಖಲಾಗಿದ್ದ ಆಸ್ಪತ್ರೆಗೆ ನಯನಾ ಬಂದು ತನ್ನ ಮದುವೆಯಾಗು ಎಂದು ನಾಟಕವಾಡಿದ್ದಳು. ಆದಾಗಲೇ ರವೀಶ್​​ಗೂ ಸಹ ಅನುಮಾನ ಬಂದಿದ್ದರಿಂದ ನಯನಾಳನ್ನು ಮದುವೆಯಾಗಲು ನಿರಾಕರಿಸಿದ್ದ. ಇದೀಗ ನಯನಾಳ ಅಸಲಿ ನೌಟಂಕಿ ಆಟ ಬಯಲಾಗಿದೆ.

ಇದನ್ನೂ ಓದಿ: ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ

Source link

ಹೆಂಡತಿಗೆ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಜ್ಯುವೆಲರಿ ಶಾಪ್​ನಿಂದ 7 ಕೋಟಿ ರೂ. ಚಿನ್ನ ಕದ್ದ ಗಂಡ! – Kannada News | Andhra Pradesh Eluru Man stolen 7 crore rs Gold for Revenge After Owner Insulted Wife

ಎಲೂರು, ಫೆಬ್ರವರಿ 1: ಆಂಧ್ರಪ್ರದೇಶದ ಎಲೂರಿನಲ್ಲಿ ತನ್ನ ಮಾಲೀಕ ತನ್ನ ಹೆಂಡತಿಗೆ ಮಾಡಿದ ಅವಮಾನದಿಂದ ಬೇಸತ್ತು ಉಮಾಮಹೇಶ್ ಎಂಬ ವ್ಯಕ್ತಿ ಸೇಡು ತೀರಿಸಿಕೊಳ್ಳಲು 7 ಕೋಟಿ ರೂ. ಮೌಲ್ಯದ ಚಿನ್ನವನ್ನು (Gold Theft) ಕದ್ದಿದ್ದಾರೆ. ಕನಕದುರ್ಗಾ ಫೈನಾನ್ಸ್ ಕಂಪನಿಯಲ್ಲಿ ನಡೆದ ಈ ಬೃಹತ್ ಕಳ್ಳತನದ ಹಿಂದಿನ ಉದ್ದೇಶ ಸೇಡು. ವೃತ್ತಿಯಲ್ಲಿ ಕಳ್ಳನಲ್ಲದಿದ್ದರೂ ಮಹೇಶ್ ತನ್ನ ಮಾಲೀಕನಿಗೆ ತೊಂದರೆಯನ್ನುಂಟುಮಾಡಲು ಈ ನಿರ್ಧಾರ ಮಾಡಿದರು.

ಅದಾಗಿ 4 ತಿಂಗಳ ನಂತರ ಪೊಲೀಸರು ಆತನನ್ನು ಬಂಧಿಸಿ, ಚಿನ್ನವನ್ನು ವಶಪಡಿಸಿಕೊಂಡರು. ಆಂಧ್ರಪ್ರದೇಶದ ಎಲೂರಿನ ಚಿಂತಲಪುಡಿಯಲ್ಲಿ ಈ ಘಟನೆ ನಡೆದಿದೆ. ಸೆಪ್ಟೆಂಬರ್ 9, 2025ರಂದು ಚಿಂತಲಪುಡಿಯ ಕನಕ ದುರ್ಗಾ ಫೈನಾನ್ಸ್ ಕಂಪನಿಯಲ್ಲಿ ಒಂದು ದೊಡ್ಡ ಕಳ್ಳತನ ನಡೆದಿತ್ತು. ಆ ಕಂಪನಿಯು ತನ್ನ ಗ್ರಾಹಕರಿಗೆ ಚಿನ್ನದ ಆಭರಣಗಳ ಅಡಮಾನದ ಮೇಲೆ ಸಾಲ ನೀಡುತ್ತದೆ. ವಡಲ್ಮುಡಿ ಉದ್ಯೋಗಿ ಉಮಾ ಮಹೇಶ್ ಒತ್ತೆ ಇಟ್ಟ ಚಿನ್ನವನ್ನು ಲೆಕ್ಕಪರಿಶೋಧಿಸುತ್ತಿದ್ದಾಗ ತನ್ನೊಂದಿಗೆ ತಂದಿದ್ದ ಚೀಲದಲ್ಲಿ ನಾಲ್ಕೂವರೆ ಕೆಜಿ ಚಿನ್ನವನ್ನು ಕದ್ದು ಪರಾರಿಯಾಗಿದ್ದರು. ಕಂಪನಿಯ ವ್ಯವಸ್ಥಾಪಕರು ಆ ರಾತ್ರಿ ಪೊಲೀಸ್ ದೂರು ದಾಖಲಿಸಿದರು. ಚಿಂತಲಪುಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದರು. ಆ ಸಮಯದಲ್ಲಿ ಶೋಧ ನಡೆಸಿದರೂ, ಆರೋಪಿಗಳು ಪತ್ತೆಯಾಗಲಿಲ್ಲ.

ಇದನ್ನೂ ಓದಿ: 400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಆದರೆ, ಕೊನೆಗೂ ಕಳ್ಳತನದ ನಂತರ ತಲೆಮರೆಸಿಕೊಂಡಿದ್ದ ಉಮಾಮಹೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕದ್ದ ಚಿನ್ನದ ಒಟ್ಟು ಮೌಲ್ಯ ಸುಮಾರು 7 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಆದರೆ, ಮಹೇಶ್ ತನ್ನ ವೈಯಕ್ತಿಕ ಬಳಕೆಗಾಗಿ ಕೇವಲ 6 ಗ್ರಾಂ ಉಂಗುರವನ್ನು ಮಾತ್ರ ಬಳಸಿದ್ದರು. ಪೊಲೀಸರು ಆರೋಪಿಯಿಂದ ಉಳಿದ ಚಿನ್ನವನ್ನು ವಶಪಡಿಸಿಕೊಂಡರು. ಈ ಕಳ್ಳತನದ ಹಿಂದಿನ ಕಾರಣದ ಬಗ್ಗೆ ಪೊಲೀಸರು ಮಹೇಶ್‌ನನ್ನು ಪ್ರಶ್ನಿಸಿದಾಗ ಅದು ತುಂಬಾ ವಿಚಿತ್ರವಾಗಿತ್ತು.

ಮಹೇಶ್ ಅವರ ಸ್ವಂತ ಜಿಲ್ಲೆ ನೆಲ್ಲೂರು. ಅವರ ಪತ್ನಿ ಕೂಡ ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ. ಕಂಪನಿ ಮಾಲೀಕರು ಆತನ ಪತ್ನಿಯೊಂದಿಗೆ ಅಸಭ್ಯವಾಗಿ ಮಾತನಾಡಿದಾಗ ಮಹೇಶ್ ಕೋಪಗೊಂಡು ಕಳ್ಳತನಕ್ಕೆ ಮುಂದಾದರು. ತನ್ನ ಹೆಂಡತಿಗೆ ಮಾಡಿದ ಅವಮಾನದಿಂದ ಅವರು ಒತ್ತಡಕ್ಕೊಳಗಾಗಿದ್ದರು. ಹೀಗಾಗಿ, ಅವರು ಕಂಪನಿಗೆ ನಷ್ಟ ಉಂಟುಮಾಡಿ ತೊಂದರೆಯಲ್ಲಿ ಸಿಲುಕಿಸಲು 4 ಕೆಜಿ ಚಿನ್ನ ಕದ್ದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೀನಾಯವಾಗಿ ಸೋಲಿಸಿ ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಭಾರತ – Kannada News | India U19 Dominates Pakistan in Super Six: Secures ICC World Cup Semi Final Spot

2026 ರ ಐಸಿಸಿ ಅಂಡರ್-19 ವಿಶ್ವಕಪ್‌ನ ಸೂಪರ್ ಸಿಕ್ಸ್ ಹಂತದಲ್ಲಿ, ಭಾರತ ಅಂಡರ್-19 ತಂಡವು ಪಾಕಿಸ್ತಾನ ಅಂಡರ್-19 ತಂಡದ ವಿರುದ್ಧ 58 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಈ ಪಂದ್ಯ ಎರಡೂ ತಂಡಗಳಿಗೆ ನಿರ್ಣಾಯಕವಾಗಿತ್ತು. ಅದರಂತೆ ಟೀಂ ಇಂಡಿಯಾ ಪಾಕಿಸ್ತಾನವನ್ನು ಭಾರಿ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ತಲುಪಿದರೆ, ಇತ್ತ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ ಸಿಕ್ಸ್ ಹಂತದಲ್ಲಿ ಆಡಿದ 3 ಪಂದ್ಯಗಳನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ 2ನೇ ಗುಂಪಿನಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಸೆಮಿಫೈನಲ್‌ ಸುತ್ತಿನಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.

ವೇದಾಂತ್ ತ್ರಿವೇದಿ ಅರ್ಧಶತಕ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅಂಡರ್-19 ತಂಡ 49.5 ಓವರ್‌ಗಳಲ್ಲಿ 252 ರನ್‌ಗಳಿಗೆ ಆಲೌಟ್ ಆಯಿತು. ವೈಭವ್ ಸೂರ್ಯವಂಶಿ 22 ಎಸೆತಗಳಲ್ಲಿ 30 ರನ್ ಗಳಿಸುವ ಮೂಲಕ ತಂಡಕ್ಕೆ ತ್ವರಿತ ಆರಂಭ ನೀಡಿದರು. ವೈಭವ್ ಔಟಾದ ಬಳಿಕ ತಂಡದ ಇನ್ನಿಂಗ್ಸ್ ಕುಸಿಯಿತು. ಇದರ ಪರಿಣಾಮವಾಗಿ ಕೇವಲ ಒಂಬತ್ತು ಓವರ್‌ಗಳಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ವೇದಾಂತ್ ತ್ರಿವೇದಿ 98 ಎಸೆತಗಳಲ್ಲಿ 68 ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಇತ್ತ ಕನಿಷ್ಕ್ ಚೌಹಾಣ್ ಕೂಡ 29 ಎಸೆತಗಳಲ್ಲಿ 35 ರನ್‌ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಆರ್‌ಎಸ್ ಅಂಬ್ರೀಶ್ 38 ಎಸೆತಗಳಲ್ಲಿ 29 ರನ್‌ಗಳ ಕಾಣಿಕೆ ನೀಡಿದರು. ಕೊನೆಯ ಓವರ್‌ಗಳಲ್ಲಿ ಕನಿಷ್ಕ್ ಚೌಹಾಣ್ ಮತ್ತು ಖಿಲನ್ ಪಟೇಲ್ ನಡುವಿನ 50 ರನ್‌ಗಳ ಪಾಲುದಾರಿಕೆಯು ಸ್ಕೋರ್ ಅನ್ನು 250 ರ ಗಡಿ ದಾಟಿಸಿತು. ಪಾಕಿಸ್ತಾನ ಪರ, ಅಬ್ದುಲ್ ಸುಭಾನ್ 9.5 ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರೆ, ಮೊಹಮ್ಮದ್ ಸಯ್ಯಮ್ ಎರಡು ವಿಕೆಟ್‌ಗಳನ್ನು ಪಡೆದರು.

ಪಾಕಿಸ್ತಾನ 194 ರನ್‌ಗಳಿಗೆ ಆಲೌಟ್

253 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಅಂಡರ್-19 ತಂಡವು ಉತ್ತಮ ಆರಂಭ ಪಡೆದುಕೊಂಡಿತು. ಆದರೆ ಮಧ್ಯಮ ಓವರ್‌ಗಳಲ್ಲಿ ಭಾರತೀಯ ಬೌಲರ್‌ಗಳು ಪಾಕ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಉಸ್ಮಾನ್ ಖಾನ್ 92 ಎಸೆತಗಳಲ್ಲಿ 66 ರನ್ ಗಳಿಸಿದರೆ, ಹಮ್ಜಾ ಜಹೂರ್ 49 ಎಸೆತಗಳಲ್ಲಿ 42 ರನ್ ಗಳಿಸಿದರು. ಫರ್ಹಾನ್ ಯೂಸುಫ್ ಕೂಡ 39 ಎಸೆತಗಳಲ್ಲಿ 38 ರನ್​ಗಳ ಕಾಣಿಕೆ ನೀಡಿದರು. ಆದಾಗ್ಯೂ, ಪಾಕಿಸ್ತಾನ 46.2 ಓವರ್‌ಗಳಲ್ಲಿ 194 ರನ್‌ಗಳಿಗೆ ಆಲೌಟ್ ಆಗಿ ಪಂದ್ಯವನ್ನು ಸೋತಿದಲ್ಲದೆ ಟೂರ್ನಿಯಿಂದ ಹೊರಬಿತ್ತು. ಭಾರತದ ಪರ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಖಿಲನ್ ಪಟೇಲ್ ಮತ್ತು ಆಯುಷ್ ಮ್ಹಾತ್ರೆ ತಲಾ ಮೂರು ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮತ್ತೆ ಬಾಲಿವುಡ್​​ನತ್ತ ಗನ್ನು ಗುರಿ ಇಟ್ಟ ಭೂಗತ ಜಗತ್ತು: ಎಲ್ಲೆಲ್ಲಿ ದಾಳಿ? – Kannada News | Under world mafia again troubling Bollywood here is the recent attacks

ಬಾಲಿವುಡ್ (Bollywood) ಮತ್ತು ಭೂಗತ ಜಗತ್ತಿನ ನಂಟು ಬಹಳ ಹಳೆಯದ್ದು. ದಾವೂದ್ ಇಬ್ರಾಹಿಂಗಿಂತಲೂ ಮುಂಚಿನಿಂದಲೂ ಭೂತದ ಪಾತಕಿಗಳು ಬಾಲಿವುಡ್​​ ಜೊತೆಗೆ ಸಕ್ರಿಯ ನಂಟು ಹೊಂದಿದ್ದಾರೆ. ಬಾಲಿವುಡ್​​ನಲ್ಲಿರುವ ರಾಶಿ-ರಾಶಿ ಹಣ ಭೂಗತ ಜಗತ್ತನ್ನು ಅದರತ್ತ ಸೆಳೆದಿದೆ. ದಾವೂದ್ ಕಾಲದಿಂದಲೂ ಸಿನಿಮಾಗಳ ನಿರ್ಮಾಣ, ನಟ-ನಟಿಯರ ಆಯ್ಕೆ, ಹಫ್ತಾ ವಸೂಲಿ, ಲಾಭ ಹಂಚಿಕೆ, ಸಿನಿಮಾ ಫೈನ್ಯಾನ್ಸ್ ಇನ್ನೂ ಹಲವು ವಿಷಯಗಳಲ್ಲಿ ಭೂಗತ ಲೋಕದವರು ಬಾಲಿವುಡ್​​ ಮೇಲೆ ಪ್ರಭಾವ ಬೀರುತ್ತಲೇ ಬರುತ್ತಿದ್ದಾರೆ.

ಬಾಲಿವುಡ್​​ನ ಹಲವಾರು ನಟ-ನಟಿ, ನಿರ್ಮಾಪಕ, ನಿರ್ದೇಶಕರುಗಳು ಭೂಗತ ಪಾತಕಿಗಳಿಂದ ಬೆದರಿಕೆ ಎದರಿಸಿದ್ದಾರೆ. ಕೆಲವು ನಟ-ನಟಿಯರು ಈ ಪಾತಕಿಗಳೊಟ್ಟಿಗೆ ಆತ್ಮೀಯ ಬಂಧವನ್ನೂ ಇರಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡಿದ್ದಿದೆ. ಕೆಲವರು ಈ ಪಾತಕಿಗಳ ಮನೆ ಕಾರ್ಯಕ್ರಮಗಳಲ್ಲಿ ಡ್ಯಾನ್ಸ್ ಮಾಡಿದ್ದೂ ಸಹ ಇದೆ. ಕೆಲವು ಸೆಲೆಬ್ರಿಟಿಗಳ ಕೊಲೆಯನ್ನೂ ಸಹ ಭೂಗತ ಪಾತಕಿಗಳು ಮಾಡಿದ್ದಾರೆ. ಆದರೆ ಕಳೆದ ಒಂದು ದಶಕದಿಂದ ಬಾಲಿವುಡ್​​ಗೆ ಭೂಗತ ಪಾತಕಿಗಳ ಕಾಟ ತುಸು ತಪ್ಪಿತ್ತು. ಆದರೆ ಈಗ ಮತ್ತೆ ಶುರುವಾಗಿದೆ.

ಕಳೆದ ಕೆಲವಾರು ವರ್ಷಗಳಿಂದ ಬಾಲಿವುಡ್​ ಮೇಲೆ ಮತ್ತೆ ಭೂಗತ ಪಾತಕಿಗಳ ಕಣ್ಣು ಬಿದ್ದಿದೆ. ಸಲ್ಮಾನ್ ಖಾನ್ ಮನೆ ಮೇಲೆ ಹಲವು ಬಾರಿ ದಾಳಿ ಮಾಡಲಾಯ್ತು. ಈ ಸಂಬಂಧ ಕೆಲವರ ಬಂಧನವೂ ಆಯ್ತು. ಖ್ಯಾತ ಕಮಿಡಿಯನ್ ಕಪಿಲ್ ಶರ್ಮಾಗೆ ಸೇರಿದ ರೆಸ್ಟೊರೆಂಟ್ ಮೇಲೆ ಸತತ ದಾಳಿಗಳು ನಡೆದಿವೆ. ನಿರ್ಮಾಪಕ, ರಾಜಕಾರಣಿ ಹಾಗೂ ಸಲ್ಮಾನ್, ಶಾರುಖ್ ಅವರಿಗೆ ಆಪ್ತವಾಗಿದ್ದ ಬಾಬಾ ಸಿದ್ಧಿಖಿಯನ್ನು ಕೊಲೆ ಮಾಡಲಾಯ್ತು. ಗಾಯಕ ಅರಿಜಿತ್ ಸಿಂಗ್​​ಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ದೂರು ಸಹ ದಾಖಲಾಗಿದೆ. ಗಾಯಕ ಹನಿ ಸಿಂಗ್ ಅವರಿಗೂ ಕೊಲೆ ಬೆದರಿಕೆಗಳು ಬಂದಿವೆ. ಗಾಯಕ ದಿಲ್ಜೀತ್ ದೊಸ್ಸಾಂಜ್ ಅವರಿಗೂ ಬೆದರಿಕೆ ಬಂದಿವೆ.

ಇದನ್ನೂ ಓದಿ:ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್​​ ನಟನ ಕರೆತಂದ ಪ್ರಶಾಂತ್ ನೀಲ್: ಯಾರದು?

ಇಂದು ಬೆಳ್ಳಂಬೆಳಿಗ್ಗೆ ಖ್ಯಾತ ನಿರ್ದೇಶಕ, ನಿರ್ಮಾಪಕರೂ ಆಗಿರುವ ರೋಹಿತ್ ಶೆಟ್ಟಿ ಮನೆ ಮೇಲೆ ದಾಳಿ ಮಾಡಲಾಗಿದೆ. ಕೆಲವರು ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆದರೆ ರೋಹಿತ್ ಶೆಟ್ಟಿ ಮನೆ ಮೇಲೆ ದಾಳಿ ಮಾಡಿದ್ದಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಇವರಷ್ಟೆ ಅಲ್ಲದೆ, ಬಾಲಿವುಡ್​ನ ಇನ್ನೂ ಕೆಲವು ನಟ, ನಿರ್ಮಾಪಕರುಗಳಿಗೆ ಸಹ ಭೂಗತ ಪಾತಕಿಗಳ ಬೆದರಿಕೆಗಳು ಬಂದಿವೆ. ಒಟ್ಟಾರೆ ಮತ್ತೆ ಭೂಗತ ಜಗತ್ತು ಬಾಲಿವುಡ್​ ಮೇಲೆ ಕಣ್ಣು ಹಾಕಿದೆ. ಇದು ಬಾಲಿವುಡ್​ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ ಕಾರಣಿಕವನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಹಲವು ವರ್ಷಗಳಿಂದ ಭರತ ಹುಣ್ಣಿಮೆಯಂದು ಕಾರಣಿಕ ನುಡಿಯುವ ಸಂಪ್ರದಾಯ ಇಲ್ಲಿದೆ. ಇಲ್ಲಿಯ ಕಾರಣಿಕದ ನಂತರ ಮೈಲಾರದಲ್ಲಿ ಕಾರಣಿಕವಾಗುತ್ತದೆ. ‘ಈ ಬಾರಿ ಮಳೆಬೆಳೆಯಾಗಿ ರಾಜ್ಯದ ಜನರು ಸುಖದಿಂದ ಇರುತ್ತಾರೆ’ ಎಂದು ಹಲವಾರು ಜನರು ಕಾರಣಿಕವನ್ನು ವಿವರಿಸಿದ್ದಾರೆ. ಇಲ್ಲಿನ ಕಾರಣಿಕ ಸತ್ಯವಾಗುತ್ತದೆ ಎಂದು ಜನರು ನಂಬುತ್ತಾರೆ.

Source link

ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ – Kannada News | Yadgir Farmer Earns 16 Lakh from Watermelon in Drought Prone Land

ಯಾದಗಿರಿ, ಫೆಬ್ರವರಿ 01: ಅದು ಬರದ ನಾಡು. ಮಳೆ ಬಂದರೆ ಬೆಳೆ, ಇಲ್ಲವೆಂದರೆ ಬರಗಾಲ ಎನ್ನುವಂತಿದೆ. ಹೀಗಾಗಿ ಬಹುತೇಕ ರೈತರು ಮಳೆ ಆಶ್ರಿತ ಬೆಳೆಗಳನ್ನ ಹೆಚ್ಚಾಗಿ ಬೆಳೆಯುತ್ತಾರೆ. ಅನೇಕ ರೈತರು ನಷ್ಟ ಅನುಭವಿಸುತ್ತಾರೆ. ಆದರೆ ಆ ಯುವ ರೈತ (Farmer) ಮಾತ್ರ ಇದಕ್ಕೆ ವಿರೋಧ ಎನ್ನುವ ಹಾಗೆ ತೋಟಗಾರಿಕೆ ಬೆಳೆಯನ್ನ ಬೆಳೆದು ಭರ್ಜರಿ ಲಾಭ ಗಳಿಸಿದ್ದಾರೆ. ಕೇವಲ ಮೂರುವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ (Watermelon) ಬೆಳೆಯನ್ನ ಬೆಳೆದು ಲಕ್ಷಾಂತರ ರೂ. ಲಾಭ ಪಡೆದು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ಅಂದರೆ ಸಾಕು ಬರದ ನಾಡು ಅಂತಲೇ ಕರೆಯಲಾಗುತ್ತೆ. ಏಕೆಂದರೆ ಜಿಲ್ಲೆಯಲ್ಲಿ ಅನ್ನದಾತರ ಸ್ಥಿತಿ ಹೇಗಿದೆ ಅಂದರೆ ಮಳೆ ಬಂದರೆ ಬೆಳೆ, ಇಲ್ಲವೆಂದರೆ ಬರಗಾಲ ಎನ್ನುವಂತ ಸ್ಥಿತಿಯಿದೆ. ಅದರಲ್ಲೂ ಬಹುತೇಕ ರೈತರು ಸಂಪ್ರದಾಯಿಕ ಬೆಳೆಗಳಾದ ತೊಗರಿ, ಹತ್ತಿ, ಸಜ್ಜೆ ಇನ್ನಿತರ ಬೆಳೆಗಳನ್ನ ಬೆಳೆದು ಮಳೆ ಮೇಲೆ ಬಾರ ಹಾಕಿಕೊಂಡು ಕುಳಿತುಕೊಳ್ಳುತ್ತಾರೆ. ಮಳೆ ಬಂದರೆ ಬೆಳೆ ಸಿಗುತ್ತೆ ಇಲ್ಲಂದ್ರೆ ಮೈತುಂಬಾ ಸಾಲ ಮಾಡಿಕೊಂಡು ಊರು ಬಿಟ್ಟು ಹೊಟ್ಟೆ ಪಾಡಿಗಾಗಿ ಮಹಾನಗರಗಳಿಗೆ ಹೋಗಬೇಕು.

ಇದನ್ನೂ ಓದಿ: ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ

ಇಂತಹ ಪರಿಸ್ಥಿಯಲ್ಲಿ ಯಾದಗಿರಿ ತಾಲೂಕಿನ ಅಶೋಕ್ ನಗರದ ತಾಂಡದ ಯುವ ರೈತ ಮಲ್ಲಿಕಾರ್ಜುನ ತೋಟಗಾರಿಕೆ ಬೆಳೆಯನ್ನ ಬೆಳೆದು ಎಲ್ಲಾ ರೈತರಿಗೆ ಮಾದರಿಯಾಗಿದ್ದಾರೆ. 20 ಸಾವಿರ ರೂ ಕೊಟ್ಟು ಮೂರುವರೆ ಎಕರೆ ಜಮೀನು ಲೀಸ್ ಗೆ ಪಡೆದು ಕಲ್ಲಂಗಡಿ ಬೆಳೆಯನ್ನ ಬೆಳೆದು ಲಕ್ಷಾಂತರ ರೂ. ಲಾಭ ಗಳಿಸಿದ್ದಾರೆ. ಕೇವಲ ಎರಡು ತಿಂಗಳಲ್ಲೇ 20 ಲಕ್ಷ ರೂ ಲಾಭ ಪಡೆದು ಸಾಧನೆ ಮಾಡಿದ್ದಾರೆ.

ಇನ್ನು ರೈತ ಮಲ್ಲಿಕಾರ್ಜುನ ಬೋರವೆಲ್ ನೀರು ಸೇರಿದಂತೆ ಜಮೀನಿನಲ್ಲಿ ಯಾವುದೇ ನೀರು ಇಲ್ಲದ ಜಮೀನು ಲೀಸ್ ಪಡೆದಿದ್ದರು. ಮೂರುವರೆ ಎಕರೆಯಲ್ಲಿ ಹೇಗಾದರೂ ಮಾಡಿ ತೋಟಗಾರಿಕೆ ಬೆಳೆಯನ್ನ ಬೆಳೆಯಬೇಕು ಎಂದು ನಿರ್ಧರಿಸಿ ಕಲ್ಲಂಗಡಿ ಬೆಳೆಯೋಕೆ ಪ್ಲಾನ್ ಮಾಡಿದ್ದರು. ಜಮೀನಿನಲ್ಲಿ ನೀರು ಇಲ್ಲದ ಕಾರಣಕ್ಕೆ ಇದು ಅಸಾಧ್ಯವಾಗಿತ್ತು. ಆದರೆ ಪಕ್ಕದ ಜಮೀನಿನಲ್ಲಿರುವ ಬೋರವೆಲ್ ‌ನೀರು ಬಾಡಿಗೆಗೆ ಪಡೆದು ಕಲ್ಲಂಗಡಿ ಬೆಳೆದಿದ್ದಾರೆ.

ಕೊಪ್ಪಳದಿಂದ ಕಲ್ಲಂಗಡಿ ಬೆಳೆಯ ಮೆಲೊಡಿ ತಳಿಯ ಸಸಿಗಳನ್ನ ತಂದು ಹಾಕಿದ್ದಾರೆ. ಜೊತೆಗೆ ತೋಟಗಾರಿಕೆ ಇಲಾಖೆಯ ಯಾವುದೇ ಸಹಾಯವಿಲ್ಲದೆ ತಾವೇ ಸ್ವಂತ ದುಡ್ಡು ಖರ್ಚು ಮಾಡಿ ಸ್ಪಿಂಕ್ಲರ್ ಪೈಪ್​ಗಳನ್ನ ತಂದು ಅಳವಡಿಕೆ ಮಾಡಿದ್ದಾರೆ. ಬಳಿಕ ಇಡೀ ಕುಟುಂಬಸ್ಥರೊಂದಿಗೆ ಜಮೀನಿನಲ್ಲಿ ದುಡಿದ ಕಾರಣ ಎರಡೇ ತಿಂಗಳಲ್ಲಿ ಭರ್ಜರಿ ಬೆಳೆ ಕೈಗೆ ಬಂದಿದೆ.

ಬರೋಬರಿ 16 ಲಕ್ಷ ರೂ  ಲಾಭ

ಮೊದಲ ಫಸಲು 22 ಟನ್ ಬಂದಿದ್ದು, ಸುಮಾರು 22 ರೂ. ಕೆಜಿ ಮಾರಾಟ ಮಾಡಿ ಸುಮಾರು 15 ಲಕ್ಷ ರೂ ಲಾಭ ಗಳಿಸಿದ್ದಾರೆ. ಇನ್ನು ಎರಡನೇ ಕಟಾವು 12 ಟನ್ ಬಂದಿದ್ದು ಸ್ವಲ್ಪ ಬೆಲೆ ಕಡಿಮೆ ಸಿಕ್ಕ ಕಾರಣಕ್ಕೆ 4 ಲಕ್ಷ ರೂ ಲಾಭ ಸಿಕ್ಕಿದೆ. ಕೊನೆಯ ಕಾಟಾವಿನಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ಲಾಭ ಸಿಕ್ಕಿದೆ. ಈ ಬೆಳೆಯನ್ನ ಬೆಳೆಯೋಕೆ ಸುಮಾರು 4 ಲಕ್ಷ ರೂ ಖರ್ಚು ಮಾಡಿದ್ದು, ಖರ್ಚು ತೆಗೆದು ಬರೋಬರಿ 16 ಲಕ್ಷ ರೂ ಮಲ್ಲಿಕಾರ್ಜುನ ಅವರಿಗೆ ಲಾಭವಾಗಿದೆ. ಕೇವಲ ಎರಡೇ ತಿಂಗಳಲ್ಲಿ ಇಷ್ಟು ಲಾಭ ಆಗಿದ್ದಕ್ಕೆ ತಾಂಡದ ನಿವಾಸಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು

ಒಟ್ಟಿನಲ್ಲಿ ಯುವ ರೈತ ಮಲ್ಲಿಕಾರ್ಜುನ ಕೇವಲ ಮೂರುವರೆ ಎಕರೆ ಜಮೀನಿನಲ್ಲಿ ಖರ್ಚು ತೆಗೆದು ಬರೋಬರಿ 16 ಲಕ್ಷ ರೂ ಲಾಭ ಪಡೆದಿದ್ದು ಸಾಂಪ್ರದಾಯಿಕ ಬೆಳೆಯನ್ನ ಬೆಳೆದು ನಷ್ಟ ಅನುಭವಿಸುವ ರೈತರಿಗೆ ಮಾದರಿಯಾಗಿದ್ದಾರೆ. ಹೀಗಾಗಿ ರೈತರು ತೋಟಗಾರಿಕೆ ಇಲಾಖೆಯಿಂದ ಸವಲತ್ತು ಪಡೆದು ಈ ರೀತಿಯ ಬೆಳೆಗಳನ್ನ ಬೆಳೆದು ಲಾಭ ಪಡೆಯಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:21 pm, Sun, 1 February 26

Source link