Category Archives: Blog

Your blog category

ಪ್ರಧಾನಿ ಮೋದಿಯಿಂದ ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಏರ್​​ಪೋರ್ಟ್ ಎಂದು ಮರುನಾಮಕರಣ – Kannada News | PM Narendra Modi renames Punjabs Adampur airport after Sant Ravidas

ನವದೆಹಲಿ, ಫೆಬ್ರವರಿ 1: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು? – Kannada News | Anurag Kashyap defends Yash’s Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್​​ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಭಾರಿ ವೈರಲ್ ಆಗಿತ್ತು. ಅತ್ಯಂತ ಕಡಿಮೆ ಅವಧಿಯಲ್ಲಿ ದಾಖಲೆ ಸಂಖ್ಯೆಯ ವೀಕ್ಷಣೆಗಳನ್ನು ‘ಟಾಕ್ಸಿಕ್’ ಸಿನಿಮಾ ಟೀಸರ್ ಗಳಿಸಿಕೊಂಡಿತ್ತು. ಸಿನಿಮಾದ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸಿನಿಮಾದ ಟೀಸರ್ ಅಶ್ಲೀಲವಾಗಿದೆ, ಪುರುಷ ಅಹಂಕಾರದಿಂದ ತುಂಬಿದೆ ಎಂದೆಲ್ಲ ವಿಮರ್ಶೆ ಮಾಡಲಾಗಿತ್ತು. ಇದೀಗ ಬಾಲಿವುಡ್​ನ ಜನಪ್ರಿಯ ನಿರ್ದೇಶಕ ಅನುರಾಗ್ ಕಶ್ಯಪ್ ‘ಟಾಕ್ಸಿಕ್’ ಟೀಸರ್ ಬಗ್ಗೆ ಮಾತನಾಡಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏರ್ಪಡಿಸಲಾಗಿದ್ದ ಸಂವಾದದಲ್ಲಿ ಮಾತನಾಡಿದ ಅನುರಾಗ್ ಕಶ್ಯಪ್ ಅವರು, ‘ಟಾಕ್ಸಿಕ್’ ಸಿನಿಮಾದ ಟೀಸರ್ ಅನ್ನು ‘ಒಂದು ಧೈರ್ಯಶಾಲಿ ಯತ್ನ’ ಎಂದು ಬಣ್ಣಿಸಿದ್ದಾರೆ. ‘ಟೀಸರ್ ವಿರುದ್ಧ ವ್ಯಕ್ತವಾಗಿರುವ ಆಕ್ರೋಶ ನಮ್ಮ ಸಮಾಜದ ಸಾಂಸ್ಕೃತಿಕ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತಿದೆ. ಪುರುಷ ನಟರು ಪರದೆಯ ಮೇಲೆ ಶರ್ಟ್‌ ಧರಿಸದೆ ಬರಿಮೈಯಲ್ಲಿ ಕಾಣಿಸಿಕೊಂಡಾಗ ಅಥವಾ ಅತಿಯಾದ ಪುರುಷತ್ವವನ್ನು ಪ್ರದರ್ಶಿಸಿದಾಗ, ಯಾರೂ ಅದನ್ನು ಪ್ರಶ್ನಿಸುವುದಿಲ್ಲ. ಆದರೆ ಒಬ್ಬ ಮಹಿಳೆ ತನ್ನ ಲೈಂಗಿಕತೆಯನ್ನು ಆಚರಿಸಿದಾಗ, ಅದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಕಶ್ಯಪ್ ಹೇಳಿದ್ದಾರೆ.

ಇದನ್ನೂ ಓದಿ:‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಕನ್ನಡದ ಮಹಿಳಾ ನಿರ್ದೇಶಕಿ

‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ಕೆಲವರು ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಿಸಿದ್ದು, ಟೀಸರ್​​ನಲ್ಲಿ ಮಹಿಳೆಯರನ್ನು ಭೋಗದ ವಸ್ತುಗಳನ್ನಾಗಿ ತೋರಿಸಲಾಗಿದೆ ಎಂದಿದ್ದಾರೆ. ಒಬ್ಬ ಸಾಮಾಜಿಕ ಕಾರ್ಯಕರ್ತರಂತೂ ಸಿಬಿಎಫ್​​ಸಿಗೆ ದೂರು ನೀಡಿದ್ದು, ‘ಟಾಕ್ಸಿಕ್’ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಬಾರದು ಎಂದು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಹ ಹಲವಾರು ಮಂದಿ ‘ಟಾಕ್ಸಿಕ್’ ನಿಜಕ್ಕೂ ಟಾಕ್ಸಿಕ್ ಆಗಿದೆ ಎಂದು ಮೂಗು ಮುರಿದಿದ್ದಾರೆ.

‘ಟಾಕ್ಸಿಕ್’ ಟೀಸರ್​​ನಲ್ಲಿ ಯಶ್, ಮಹಿಳೆಯೊಬ್ಬರೊಟ್ಟಿಗೆ ಲೈಂಗಿಕತೆಯಲ್ಲಿ ತೊಡಗಿರುವ ದೃಶ್ಯವಿದೆ. ಇದು ಹಲವರ ಟೀಕೆಗೆ ಕಾರಣವಾಗಿದೆ. ಆದರೆ ಇನ್ನು ಕೆಲವರು ಸಿನಿಮಾನಲ್ಲಿ ಇದೆಲ್ಲ ಸಾಮಾನ್ಯ ಎಂದಿದ್ದಾರೆ. ಟೀಸರ್ ನೋಡಿ, ಸಿನಿಮಾ ಹೀಗೆಯೇ ಇರಲಿದೆ ಎಂದು ಊಹಿಸುವಂತಿಲ್ಲ ಎಂದಿದ್ದಾರೆ.

‘ಟಾಕ್ಸಿಕ್’ ಸಿನಿಮಾವನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾನಲ್ಲಿ ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಹಲವು ಹಾಲಿವುಡ್ ನಟ-ನಟಿಯರು ಸಹ ಈ ಸಿನಿಮಾನಲ್ಲಿದ್ದಾರೆ. ಸಿನಿಮಾಕ್ಕೆ ಕೆವಿಎನ್ ಮತ್ತು ಯಶ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

PAK vs AUS: ಪಾಕ್ ವಿರುದ್ಧ 111 ರನ್​ಗಳಿಂದ ಸೋತ ಆಸ್ಟ್ರೇಲಿಯಾ – Kannada News | Pakistan Dominates Australia: 3 0 T20 Series Clean Sweep Before World Cup

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan vs Australia) ನಡುವಿನ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಫೆಬ್ರವರಿ 1 ರ ಭಾನುವಾರ ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಪಾಕಿಸ್ತಾನ ಬರೋಬ್ಬರಿ 111 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ. ಅಂದರೆ ಈ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದೆ ಕ್ಲೀನ್ ಸ್ವೀಪ್ ಮುಜುಗರಕ್ಕೊಳಗಾಗಿದೆ. ಟಿ20 ವಿಶ್ವಕಪ್​ಗೂ (T20 World Cup) ಮುನ್ನ ಆಸೀಸ್ ತಂಡದ ಈ ಹೀನಾಯ ಪ್ರದರ್ಶನ ತಂಡದ ಮನೋಬಲವನ್ನು ಕುಗ್ಗಿಸಿದರೆ, ಇತ್ತ ಪಾಕಿಸ್ತಾನ ಸರಣಿ ಗೆಲುವಿನ ಆತ್ಮಸ್ಥೈರ್ಯದೊಂದಿಗೆ ವಿಶ್ವಕಪ್​ಗೆ ಪ್ರವೇಶಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಗೆಲ್ಲಲು 208 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 96 ರನ್​ಗಳಿಗೆ ಆಲೌಟ್ ಆಯಿತು.

207 ರನ್ ಕಲೆಹಾಕಿದ ಪಾಕಿಸ್ತಾನ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಪರ ಮಾಜಿ ನಾಯಕ ಬಾಬರ್ ಆಝಂ 36 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಅಜೇಯ 50 ರನ್ ಗಳಿಸಿದರೆ, ಸ್ಯಾಮ್ ಅಯೂಬ್ ಕೂಡ 37 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು. ಶಾದಾಬ್ ಖಾನ್ 19 ಎಸೆತಗಳಲ್ಲಿ 2 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ 46 ರನ್​ಗಳ ಕಾಣಿಕೆ ನೀಡಿದರು. ಈ ಮೂವರ ಆಟದಿಂದಾಗಿ ಪಾಕಿಸ್ತಾನ ತನ್ನ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 207 ರನ್ ಗಳಿಸಿತು. ಆಸ್ಟ್ರೇಲಿಯಾದ ಬೌಲರ್‌ಗಳ ಬಗ್ಗೆ ಹೇಳುವುದಾದರೆ, ಬೆನ್ ದ್ವಾರ್ಶುಯಿಸ್ 4 ಓವರ್‌ಗಳಲ್ಲಿ 39 ರನ್‌ಗಳಿಗೆ 2 ವಿಕೆಟ್ ಪಡೆದರೆ, ಮ್ಯಾಥ್ಯೂ ಕುಹ್ನೆಮನ್, ಮ್ಯಾಥ್ಯೂ ಶಾರ್ಟ್, ಕೂಪರ್ ಕಾನೊಲಿ ಮತ್ತು ಕ್ಯಾಮರೂನ್ ಗ್ರೀನ್ ತಲಾ ಒಂದು ವಿಕೆಟ್ ಪಡೆದರು.

96 ರನ್​ಗಳಿಗೆ ಆಸೀಸ್ ಆಲೌಟ್

ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಕಳೆದೆರಡು ಪಂದ್ಯಗಳಂತೆ ಕಳಪೆ ಆರಂಭ ಪಡೆದುಕೊಂಡಿತು. ಪವರ್‌ಪ್ಲೇನಲ್ಲಿಯೇ ತಂಡವು ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ತಂಡದ ಪರ ಕ್ಯಾಮರೂನ್ ಗ್ರೀನ್ 24 ಎಸೆತಗಳಲ್ಲಿ 22 ರನ್ ಗಳಿಸಿದರೆ,ಮಾರ್ಕಸ್ ಸ್ಟೊಯಿನಿಸ್ 22 ಎಸೆತಗಳಲ್ಲಿ 23 ರನ್ ಗಳಿಸಿದರು. ಬೇರೆ ಯಾವುದೇ ಆಟಗಾರನಿಗೂ 20 ರನ್ ಗಳಿಸಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ, ಆಸ್ಟ್ರೇಲಿಯಾ 16.5 ಓವರ್‌ಗಳಲ್ಲಿ 96 ರನ್‌ಗಳಿಗೆ ಆಲೌಟ್ ಆಯಿತು. ಆದಾಗ್ಯೂ, ಆಡಮ್ ಜಂಪಾ ಗಾಯದಿಂದಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ.

3ನೇ ಬಾರಿಗೆ ಕ್ಲೀನ್ ಸ್ವೀಪ್ ಅವಮಾನ

ಮತ್ತೊಂದೆಡೆ, ಪಾಕಿಸ್ತಾನದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಮೊಹಮ್ಮದ್ ನವಾಜ್ 4 ಓವರ್‌ಗಳಲ್ಲಿ 18 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿ ಪಂದ್ಯದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು. ಶಾಹೀನ್ ಶಾ ಅಫ್ರಿದಿ ಕೂಡ 3 ಓವರ್‌ಗಳಲ್ಲಿ 16 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಬಳಿಸಿದರು. ನಸೀಮ್ ಶಾ ಮತ್ತು ಅಬ್ರಾರ್ ಅಹ್ಮದ್ ಕೂಡ ತಲಾ ಒಂದು ವಿಕೆಟ್ ಪಡೆದರು. ಪಾಕಿಸ್ತಾನ ಈ ಹಿಂದೆ 2018 ರಲ್ಲಿ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾವನ್ನು 3-0 ಅಂತರದಿಂದ ಸೋಲಿಸಿತ್ತು. ಇತ್ತ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ಕ್ಲೀನ್ ಸ್ವೀಪ್ ಎದುರಿಸಿದ್ದು ಇದು ಕೇವಲ ಮೂರನೇ ಬಾರಿ. ಪಾಕಿಸ್ತಾನವನ್ನು ಹೊರತುಪಡಿಸಿ, ಭಾರತ ಕೂಡ ಒಮ್ಮೆ ಈ ಸಾಧನೆ ಮಾಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:03 pm, Sun, 1 February 26

Source link

T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ – Kannada News | T20 World Cup 2026: Pakistan Boycotts India Clash Over Political Tensions

2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನವೇ ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಇಷ್ಟು ದಿನ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ವಿವಾದವನ್ನು ಬಗೆಹರಿಸಲು ಹರಸಾಹಸ ಪಟ್ಟಿದ್ದ ಐಸಿಸಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಟಿ20 ವಿಶ್ವಕಪ್​ನಲ್ಲಿ ನಮ್ಮ ತಂಡ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎನ್ನುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇದೀಗ ಐಸಿಸಿಗೆ ದೊಡ್ಡ ಶಾಕ್ ನೀಡಿದೆ. ತನ್ನ ತಂಡ ಟಿ20 ವಿಶ್ವಕಪ್​ನಲ್ಲಿ ಆಡುವುದನ್ನು ಪಾಕಿಸ್ತಾನ ಸರ್ಕಾರ ಖಚಿತಪಡಿಸಿದೆ. ಆದರೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಬೇಕಿದ್ದ ಭಾರತದ ವಿರುದ್ಧ ಗುಂಪು ಹಂತದ ಪಂದ್ಯವನ್ನು ಆಡುವುದಿಲ್ಲ ಎಂದಿದೆ. ರಾಜಕೀಯ ಮತ್ತು ಇತ್ತೀಚಿನ ಬೆಳವಣಿಗೆಗಳ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಾಕ್ ಸರ್ಕಾರ ತಿಳಿಸಿದೆ.

Source link

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು! – Kannada News | Water suddenly started gushing out after Underground Pipe Bursts inside the house Video viral

ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್​​ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿಂಗ್ ಕೊಹ್ಲಿಯ ವಿಶ್ವ ದಾಖಲೆ ಮುರಿದ ಬಾಬರ್ ಆಝಂ

Source link

ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ ಆರೆಂಜ್ ಎಕನಾಮಿ ಎಂದರೇನು? – Kannada News | What is Orange Economy, highlighted in the Budget by Nirmala Sitharaman

ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ (Union Budget 2026) ಭಾಷಣದಲ್ಲಿ ಆರೆಂಜ್ ಎಕನಾಮಿ (Orange Economy) ಬಗ್ಗೆ ಮಾತನಾಡಿದ್ದಾರೆ. ಆರೆಂಜ್ ಎಕನಾಮಿ ಅಥವಾ ಕಿತ್ತಳೆ ಆರ್ಥಿಕತೆಗೆ ಪುಷ್ಟಿ ಕೊಡುವುದಾಗಿ ಹೇಳಿದ್ದಾರೆ. ಬಜೆಟ್​ಗೆ ಮುಂಚೆ ಬಿಡುಗಡೆಯಾದ ಆರ್ಥಿಕ ಸಮೀಕ್ಷೆಯಲ್ಲೂ ಕಿತ್ತಳೆ ಆರ್ಥಿಕತೆಯ ಪ್ರಸ್ತಾಪ ಇತ್ತು. ಸರ್ಕಾರ ಯಾಕೆ ಆರೆಂಜ್ ಎಕನಾಮಿ ಬಗ್ಗೆ ಮುತುವರ್ತಿ ತೋರುತ್ತಿದೆ?

ಆರೆಂಜ್ ಎಕನಾಮಿ ಎಂದರೇನು?

ಅನಿಮೇಶನ್, ಗೇಮಿಂಗ್, ಫಿಲಂ, ಮ್ಯೂಸಿಕ್, ಡಿಸೈನ್, ಡಿಜಿಟಲ್ ಕಂಟೆಂಟ್ ಇತ್ಯಾದಿ ಕ್ರಿಯೇಟಿವ್ ಕೆಲಸಗಳಿರುವ ಕ್ಷೇತ್ರವನ್ನು ಆರೆಂಜ್ ಎಕನಾಮಿ ಎಂದು ಬಣ್ಣಿಸಲಾಗುತ್ತದೆ. ಹೊಸ ಕ್ರಿಯೇಟಿವ್ ಐಡಿಯಾಗಳು, ಟೆಕ್ನಾಲಜಿ, ಸಂಸ್ಕೃತಿ ಇತ್ಯಾದಿಯಿಂದ ಪ್ರೇರಿತವಾದ ಈ ಉದ್ಯಮದಿಂದ ಉದ್ಯೋಗಸೃಷ್ಟಿ, ನಗರ ಅಭಿವೃದ್ಧಿ ಮತ್ತು ಸಾಂಸ್ಕೃತಿಕ ಮೌಲ್ಯ ವರ್ಧಿಸಬಲ್ಲುದು.

ಜಾಹೀರಾತು, ಅನಿಮೇಶನ್, ಸಾಫ್ಟ್​ವೇರ್, ವಿಡಿಯೋ ಗೇಮ್ಸ್, ಸಿನಿಮಾ, ಫ್ಯಾಷನ್, ಪಬ್ಲಿಶಿಂಗ್ ಇತ್ಯಾದಿ ಸೆಕ್ಟರ್​ಗಳು ಈ ಆರ್ಥಿಕ ವರ್ಗಕ್ಕೆ ಸೇರುತ್ತವೆ. ಯೂಟ್ಯೂಬ್​ನ ಕಂಟೆಂಟ್ ಕ್ರಿಯೇಟರ್​ಗಳು, ರೀಲ್ಸ್ ಮಾಡುವವರ ಬ್ಯುಸಿನೆಸ್ ಕೂಡ ಇದೇ ವರ್ಗಕ್ಕೆ ಸೇರುತ್ತದೆ.

ಇದನ್ನೂ ಓದಿ: Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​

‘ಭಾರತದ ಅನಿಮೇಶನ್, ವಿಷುವಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ (ಎವಿಜಿಸಿ) ಸೆಕ್ಟರ್ ಬೆಳೆಯುತ್ತಿರುವ ಉದ್ಯಮವಾಗಿದೆ. 2030ರೊಳಗೆ 20 ಲಕ್ಷ ವೃತ್ತಿಪರರ ಅಗತ್ಯತೆ ಇದಕ್ಕಿರುತ್ತದೆ. 15,000 ಹೈಸ್ಕೂಲುಗಳು, 500 ಕಾಲೇಜುಗಳಲ್ಲಿ ಎವಿಜಿಸಿ ಕಂಟೆಂಟ್ ಕ್ರಿಯೇಟರ್ ಲ್ಯಾಬ್​ಗಳನ್ನು ಆರಂಭಿಸಲು ಮುಂಬೈನಲ್ಲಿರುವ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಕಂಟೆಂಟ್ ಟೆಕ್ನಾಲಜೀಸ್​ಗೆ ನೆರವು ನೀಡಲಾಗುವುದು’ ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

ವೇವ್ಸ್ ಸಮಿಟ್​ನಲ್ಲೂ ಪ್ರಧಾನಿ ಮೋದಿಯಿಂದ ಪ್ರಸ್ತಾಪ

2025ರ ವೇವ್ಸ್ ಶೃಂಗಸಭೆಯಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಭಾರತದ ಆರೆಂಜ್ ಎಕನಾಮಿ ಬಗ್ಗೆ ಪ್ರಸ್ತಾಪ ಮಾಡಿದ್ದರು.

2025-26ರ ಆರ್ಥಿಕ ಸಮೀಕ್ಷೆಯು ಆರೆಂಜ್ ಎಕನಾಮಿ ಬಗ್ಗೆ ಪ್ರಸ್ತಾಪಿಸಿ, ಭಾರತದ ಉದ್ಯೋಗ, ನಗರ ಸೇವೆ ಮತ್ತು ಪ್ರವಾಸೋದ್ಯಮಕ್ಕೆ ಇದು ಪುಷ್ಟಿ ಕೊಡಬಲ್ಲುದು ಎಂದು ಅಭಿಪ್ರಾಯಪಡಲಾಗಿತ್ತು.

ಇದನ್ನೂ ಓದಿ: ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು?

ಕ್ರಿಯೇಟಿವ್ ಉದ್ಯಮಗಳನ್ನು ಮನರಂಜನೆಯ ಬ್ಯುಸಿನೆಸ್ ಎಂದು ನೋಡದೇ ಏಕೀಕೃತ ನಗರ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ತಂತ್ರವಾಗಿ ಪರಿಗಣಿಸಬೇಕು. ಡಿಸೈನರ್​ಗಳು ಮತ್ತು ಕ್ರಿಯೇಟಿವ್ ಪ್ರೊಫೆಷನ್​ಗಳ ಕೊರತೆಯನ್ನು ನೀಗಿಸಲು ಸೂಕ್ತ ಕೌಶಲ್ಯ ತರಬೇತಿಯ ವ್ಯವಸ್ಥೆ ಮಾಡಬೇಕು ಎಂಬಿತ್ಯಾದಿ ಸಲಹೆಗಳನ್ನು ಆರ್ಥಿಕ ಸಮಿಕ್ಷೆಯಲ್ಲಿ ನೀಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ – Kannada News | Yash mother Pushpa talks about land dispute here is the video

ಯಶ್ (Yash) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ತಮಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ ಹೆಸರು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳು ನಮ್ಮ ಬಳಿ ಇದ್ದು, ನಾನೇ ಅದರ ನಿಜವಾದ ಮಾಲಕಿ’ ಎಂದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller

ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್‌ ಬಾರಿಸಿದರು. ಇವರೊಂದಿಗೆ ಆರಂಭಿಕ ವೈಭವ್ ಸೂರ್ಯವಂಶಿ 30 ರನ್​, ಆರ್‌ಎಸ್ ಅಂಬ್ರೀಶ್ 29 ರನ್, ಕನಿಷ್ಕ್ ಚೌಹಾಣ್ 35 ಮತ್ತು ಖಿಲಾನ್ ಪಟೇಲ್ 21 ರನ್​ಗಳ ಕಾಣಿಕೆ ನೀಡಿದರು.

ಗುರಿ ಬೆನ್ನಟ್ಟುವಲ್ಲಿ ಪಾಕ್ ವಿಫಲ

ಈ ಹಿಂದೆ ನಡೆದಿದ್ದ ಏಷ್ಯಾಕಪ್‌ನಲ್ಲಿ ಇದೇ ಭಾರತ ತಂಡವನ್ನು ಸೋಲಿಸಿದ್ದ ಪಾಕಿಸ್ತಾನ ಈ ಪಂದ್ಯದಲ್ಲೂ ಗೆಲುವಿನ ಇರಾದೆಯಲ್ಲಿತ್ತು. ಆದರೆ ಸೆಮಿಫೈನಲ್‌ಗೇರಬೇಕೆಂದರೆ ಪಾಕಿಸ್ತಾನ ಈ ಪಂದ್ಯವನ್ನು 50 ಓವರ್​ಗಳ ಬದಲಿಗೆ 33.3 ಓವರ್​ಗಳಲ್ಲಿ ಗೆದ್ದುಕೊಳ್ಳಬೇಕಿತ್ತು. ಆದರೆ ಪಾಕಿಸ್ತಾನ ತಂಡಕ್ಕೆ 34 ಓವರ್​ಗಳ ಒಳಗೆ ಗುರಿ ಬೆನ್ನಟ್ಟಲು ಸಾಧ್ಯವಾಗಲಿಲ್ಲ. ಹೀಗಾಗಿ ನೆಟ್ ರನ್​ರೇಟ್ ಆದಾರದ ಮೇಲೆ ಟೀಂ ಇಂಡಿಯಾ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

252 ರನ್ ಕಲೆಹಾಕಿದ ಭಾರತ

ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಎಚ್ಚರಿಕೆಯಿಂದ ಇನ್ನಿಂಗ್ಸ್ ಆರಂಭಿಸಿತು. ಹಮ್ಜಾ ಜಹೂರ್ ಮತ್ತು ಸಮೀರ್ ಮಿನ್ಹಾಸ್ 23 ರನ್‌ಗಳ ಜೊತೆಯಾಟ ನಡೆಸಿದರು. ಆದರೆ ಸಮೀರ್ ಮಿನ್ಹಾಸ್ ಕೇವಲ 9 ರನ್‌ಗಳಿಸಿ ಔಟಾದರು. ಇದರಿಂದಾಗಿ, ಪಾಕಿಸ್ತಾನದ ಮೇಲಿನ ಒತ್ತಡ ಹೆಚ್ಚಾಯಿತು. ಆ ನಂತರ, ಹಮ್ಜಾ ಜಹೂರ್ ಮತ್ತು ಉಸ್ಮಾನ್ ಖಾನ್ ತಂಡದ ಇನ್ನಿಂಗ್ಸ್​ಗೆ ಚೇತರಿಕೆ ನೀಡಿದರು. ಎರಡನೇ ವಿಕೆಟ್‌ಗೆ ಈ ಜೋಡಿ 80 ಎಸೆತಗಳಲ್ಲಿ 65 ರನ್ ಗಳಿಸಿತು. ಇದರಿಂದಾಗಿ, ಟೀಂ ಇಂಡಿಯಾದ ಉದ್ವಿಗ್ನತೆ ಹೆಚ್ಚಾಯಿತು. ಆದರೆ ಆರಂಭಿಕ ಹಮ್ಜಾ ಜಹೂರ್ 42 ರನ್​ಗಳಿಗೆ ಔಟಾಗುವ ಮೂಲಕ ಈ ಜೊತೆಯಾಟ ಮುರಿದುಬಿತ್ತು. ನಂತರ ಉಸ್ಮಾನ್ ಖಾನ್ ಮತ್ತು ನಾಯಕ ಫರ್ಹಾನ್ ಯೂಸುಫ್ ನಿಧಾನಗತಿಯಾಗಿ ಇನ್ನಿಂಗ್ಸ್ ಕಟ್ಟಿದರು. ಇದೇ ವೇಳೆ ಉಸ್ಮಾನ್ ಖಾನ್ 77 ಎಸೆತಗಳಲ್ಲಿ 5 ಬೌಂಡರಿಗಳನ್ನು ಬಾರಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು.

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು

ಭಾರತದ ಕರಾರುವಕ್ಕಾದ ದಾಳಿ

ಇತ್ತ ಫರ್ಹಾನ್ ಯೂಸುಫ್ 39 ಓವರ್‌ಗಳಲ್ಲಿ 38 ರನ್ ಗಳಿಸಿ ಔಟಾದರು. ಆ ನಂತರ, ಬ್ಯಾಟಿಂಗ್‌ಗೆ ಬಂದ ಅಹ್ಮದ್ ಹುಸೇನ್ ವಿಶೇಷವಾದ ಏನನ್ನೂ ಮಾಡಲು ಸಾಧ್ಯವಾಗದೆ 6 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಔಟಾದರು. ಹೀಗಾಗಿ ಪಾಕಿಸ್ತಾನ 33.3 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 167 ರನ್ ಗಳಿಸಿತು. ಮೇಲೆ ಹೇಳಿದಂತೆ ಭಾರತ ಗೆಲುವಿಗೆ ನಿಗದಿಪಡಿಸಿದ 252 ರನ್‌ಗಳ ಗುರಿಯನ್ನು 33.3 ಓವರ್‌ಗಳಲ್ಲಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಪಾಕಿಸ್ತಾನ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಲಿಲ್ಲ. ಆದ್ದರಿಂದ, ಈ ಪಂದ್ಯವನ್ನು ಪಾಕಿಸ್ತಾನ ಗೆದ್ದರೂ ಸಹ, ಅದು ಅಪ್ರಸ್ತುತವಾಗುತ್ತದೆ. ಏಕೆಂದರೆ ಭಾರತಕ್ಕೆ ಸೆಮಿಫೈನಲ್‌ಗೆ ಟಿಕೆಟ್ ಸಿಕ್ಕಿದೆ. ಭಾರತದ ನೆಟ್ ರನ್ ದರ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ. ಆದ್ದರಿಂದ, ಪಾಕಿಸ್ತಾನ ಈಗ ಗೆದ್ದರೂ ಸಹ, ಉಪಯೋಗಕ್ಕೆ ಬರುವುದಿಲ್ಲ. ಪ್ರಸ್ತುತ ಭಾರತದ ನೆಟ್ ರನ್​ರೇಟ್ +3.337 ಇದ್ದರೆ, ಪಾಕಿಸ್ತಾನದ ನೆಟ್ ರನ್​ರೇಟ್ +1.484 ಆಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:22 pm, Sun, 1 February 26

Source link

ಗಂಡ ಡ್ರೈವಿಂಗ್ ಕಲಿಸುವಾಗ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಹೆಂಡತಿಯಿಂದ ಕೆರೆಗೆ ಬಿದ್ದ ಕಾರು – Kannada News | Car plunged into Water pond after wife accidently pressed accelerator instead of Break in Karaikudi

ಚೆನ್ನೈ, ಫೆಬ್ರವರಿ 1: ತಮಿಳುನಾಡಿನ ಕಾರೈಕುಡಿಯಲ್ಲಿ ಕಣ್ಣನ್ ಎಂಬ ವ್ಯಕ್ತಿ ತನ್ನ ಹೆಂಡತಿಗೆ ಕಾರು ಓಡಿಸುವುದು ಹೇಗೆಂದು ಕಲಿಸುತ್ತಿದ್ದರು. ಆಗ ಆ ಮಹಿಳೆ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಒತ್ತಿದಾಗ, ಕಾರು (Car) ದೇವಸ್ಥಾನದ ಕೊಳಕ್ಕೆ ಉರುಳಿ ಬಿದ್ದಿತು. ಇದರಿಂದಾಗಿ ಆ ಪ್ರದೇಶದಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಯಿತು. ಕಣ್ಣನ್ ಶಿವಗಂಗೈ ಜಿಲ್ಲೆಯ ಕಾರೈಕುಡಿ ಬಳಿಯ ಕಲ್ಲಲ್ ಪ್ರದೇಶದ ನಿವಾಸಿ. ಅವರು ನಿನ್ನೆ (ಜನವರಿ 31) ತಮ್ಮ ಮಕ್ಕಳನ್ನು ಕಾರಿನಲ್ಲಿ ಶಾಲೆಗೆ ಕರೆದೊಯ್ದರು. ಅವರನ್ನು ಶಾಲೆಗೆ ಬಿಟ್ಟ ನಂತರ ಕಣ್ಣನ್ ತನ್ನ ಹೆಂಡತಿಯೊಂದಿಗೆ ಮನೆಗೆ ಮರಳಿದರು. ಆ ಸಮಯದಲ್ಲಿ, ಅವರ ಪತ್ನಿ ಕಣ್ಣನ್ ಅವರನ್ನು ಕಾರು ಓಡಿಸುವುದು ಹೇಗೆಂದು ಕಲಿಸಲು ಕೇಳಿಕೊಂಡರು.

ಅವರ ಪತ್ನಿಯ ಆಸೆಯಂತೆ ಕಣ್ಣನ್ ಕಲ್ಲಕ್ ತೆಪ್ಪಕುಲಂ ಪ್ರದೇಶದಲ್ಲಿ ತಮ್ಮ ಹೆಂಡತಿಗೆ ಕಾರು ಓಡಿಸುವುದು ಹೇಗೆಂದು ಕಲಿಸುತ್ತಿದ್ದರು. ಕಣ್ಣನ್ ಸಹಾಯದಿಂದ ಡ್ರೈವಿಂಗ್ ಅಭ್ಯಾಸ ಮಾಡುತ್ತಿದ್ದ ಅವರ ಪತ್ನಿ ಬ್ರೇಕ್ ಹಾಕುವ ಬದಲು ಆಕ್ಸಿಲರೇಟರ್ ಮೇಲೆ ಕಾಲು ಊರಿದರು. ಇದರ ಪರಿಣಾಮವಾಗಿ ಕಾರು ನಿಯಂತ್ರಣ ತಪ್ಪಿ ದೇವಸ್ಥಾನದ ಕೆರೆಯ ಮೆಟ್ಟಿಲುಗಳ ಮೂಲಕ ರಸ್ತೆಯಿಂದ ಕೆಳಗೆ ಉರುಳಿ ಕೆರೆಯೊಳಗೆ ಬಿದ್ದಿತು. ಕೆರೆಯಲ್ಲಿ ಸಾಕಷ್ಟು ನೀರು ಇದ್ದ ಕಾರಣದಿಂದಾಗಿ ಕಾರು ನಿಧಾನವಾಗಿ ಮುಳುಗಲು ಪ್ರಾರಂಭಿಸಿತು.

ಇದನ್ನೂ ಓದಿ: ಹೈದಾರಾಬಾದ್​ನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಕಾರು ಕೊಳಕ್ಕೆ ಬಿದ್ದು ಮುಳುಗುತ್ತಿರುವುದನ್ನು ನೋಡಿ ಆ ಪ್ರದೇಶದ ಸಾರ್ವಜನಿಕರು ಆಘಾತಕ್ಕೊಳಗಾದರು. ಕಾರಿನಲ್ಲಿ ಗಂಡ ಹೆಂಡತಿ ಇದ್ದುದನ್ನು ನೋಡಿದ ಸಾರ್ವಜನಿಕರು ಅವರಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಕಾರು ಮುಳುಗಲು ಪ್ರಾರಂಭಿಸುತ್ತಿರುವುದನ್ನು ಅರಿತ ಗಂಡ ಹೆಂಡತಿ ತಕ್ಷಣ ಕಾರಿನ ಬಾಗಿಲು ತೆರೆದು ಹೊರಬಂದರು. ಹೀಗಾಗಿ, ಅವರು ಯಾವುದೇ ತೊಂದರೆಯಿಲ್ಲದೆ ಬದುಕುಳಿದರು.

ಇದನ್ನೂ ಓದಿ: ಬಸ್​​ ಡಿಕ್ಕಿಯ ರಭಸಕ್ಕೆ ಹಾರಿಬಿದ್ದ ಕಾರು: ವಿಡಿಯೋ ವೈರಲ್​​

ದಂಪತಿಗಳು ಬಾಗಿಲು ತೆರೆದು ಹೊರಬರುತ್ತಿದ್ದಂತೆ ಕಾರು ಕೆರೆಯ ಮಧ್ಯಕ್ಕೆ ಉರುಳಿ ಮುಳುಗಿತು. ಈ ಸಂದರ್ಭದಲ್ಲಿ, ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಅಗ್ನಿಶಾಮಕ ದಳದ ಸಹಾಯದಿಂದ ಕಾರನ್ನು ಹೊರತಂದರು. ಕಾರು ಡ್ರೈವಿಂಗ್ ಕಲಿಸುವಾಗ ಪತಿ-ಪತ್ನಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಅಪಘಾತಕ್ಕೀಡಾದ ಘಟನೆ ಈ ಪ್ರದೇಶದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:12 pm, Sun, 1 February 26

Source link