Headlines

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More

‘ನಮ್ಮನ್ನು ಕರೆಯಲ್ವಾ’; ಮದುವೆ ಆಮಂತ್ರಣ ಕೇಳಿದ್ದಕ್ಕೆ ರಶ್ಮಿಕಾ ಹೇಳಿದ್ದೇನು? – Kannada News | Rashmika Mandanna Smiles and escape after Question about marriage

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ವೃತ್ತಿ ಜೀವನ ಹಾಗೂ ವೈಯಕ್ತಿಕ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ನಟನೆಯ ‘ಗರ್ಲ್​​ಫ್ರೆಂಡ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅವರ ನಟನೆಯನ್ನು ಎಲ್ಲರೂ ಕೊಂಡಾಡಿದರು. ಈಗ ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುತ್ತಾರೆ ಎನ್ನಲಾಗಿದೆ. ಈ ವಿಷಯದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನೆ ಮಾಡಲಾಗಿದೆ. ವಿಷಯ ಗೊತ್ತಿದ್ದೂ, ಗೊತ್ತಿಲ್ಲದಂತೆ ಅವರು ನಡೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 1ರ ದಿನಭವಿಷ್ಯ

ಆರೋಗ್ಯದ ವಿಚಾರದಲ್ಲಿಯೇ ಒಂದು ಬಗೆಯ ಆತಂಕ ಕಾಡುತ್ತಿದೆ. ಅದು ನಿಮ್ಮದೇ ಆರೋಗ್ಯ ಇರಬಹುದು ಅಥವಾ ನಿಮಗೆ ಸಂಬಂಧಿಸಿದವರ ಆರೋಗ್ಯವೇ ಇರಬಹುದು. ಒಟ್ಟಿನಲ್ಲಿ ದೈಹಿಕ ಆರೋಗ್ಯ ಸರಿಯಾಗಲು ಹಾಗೂ ಮಾನಸಿಕವಾಗಿ ಶಾಂತಿ ದೊರೆಯುವುದಕ್ಕೆ ಆದಿತ್ಯ ಹೃದಯ ಸ್ತೋತ್ರದ ಶ್ರವಣ ಮಾಡಿ. ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ

ನಿಮ್ಮ ಅದೃಷ್ಟ ಹಾಗೂ ಅವಕಾಶಗಳನ್ನು ಲಾಭವಾಗಿ ಪರಿವರ್ತಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದಾದಲ್ಲಿ ಅದಕ್ಕೆ ಭಾಗ್ಯಾ ಸೂಕ್ತವನ್ನು ಕೇಳಿಸಿಕೊಳ್ಳಿ. ಬೆಳಗ್ಗೆ ವೇಳೆಗೆ ಇದನ್ನು ಯೂಟ್ಯೂಬ್ ಅಥವಾ ಬೇರೆ ಯಾವುದೇ ಮಾಧ್ಯಮದಲ್ಲಿ ಕೇಳಿಸಿಕೊಳ್ಳುವುದರಿಂದ ಆರ್ಥಿಕ ಒತ್ತಡದಿಂದ ಕೂಡ ಹೊರಗೆ ಬರುವುದು ಸಾಧ್ಯವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ…

Read More

Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ – Kannada News | Horoscope Today: February 01, Sunday 2026 Daily Zodiac Predictions and Lucky Signs

ಮೇಷ ರಾಶಿ: ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿದ್ರಾಹೀನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಿ. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನೇ ಯೋಚಿಸುವರು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು….

Read More

ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ – Kannada News | Karnataka film chamber of commerce election video

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (Karntaka Film Chamber) ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತಂತ್ರಜ್ಞರು, ನಿರ್ಮಾಪಕರು, ವಿತರಕರುಗಳು ತಮ್ಮಿಷ್ಟದ ಅಭ್ಯರ್ಥಿಗೆ ಮತದಾನ ಮಾಡಿದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಮಾಲ ಅವರು ವಿಜೇತರಾಗಿ ಹೊರಹೊಮ್ಮಿದರು. ಅಂತೆಯೇ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ್ ರಾಜು (ನಿರ್ಮಾಪಕರು) ಇನ್ನೂ ಕೆಲವರು ಗೆದ್ದರು. ಮತದಾನದ ವೇಳೆ ಮೇಳೈವಿಸಿದ್ದ ತಾರಾ ಮೇಳದ…

Read More

IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್​ಗೆ ರೆಡಿ ಎಂದ ಟೀಂ ಇಂಡಿಯಾ – Kannada News | India Dominates New Zealand 4 1 in T20 Series Ahead of 2026 World Cup

2026 ರ ಟಿ20 ವಿಶ್ವಕಪ್‌ಗೆ ಮೊದಲು ನ್ಯೂಜಿಲೆಂಡ್ ವಿರುದ್ಧ ತನ್ನ ಕೊನೆಯ ಟಿ20 ಸರಣಿಯನ್ನು ಆಡಿದ ಭಾರತ ತಂಡ ಐದು ಪಂದ್ಯಗಳ ಟಿ20ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತು. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಆದಾಗ್ಯೂ, ಕಿವೀಸ್ ನಾಲ್ಕನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತಕ್ಕೆ ದಿಟ್ಟ ಉತ್ತರ ನೀಡಿತ್ತು. ಇದೀಗ ಐದನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಸರಣಿ ಗೆಲುವಿನೊಂದಿಗೆ ಟಿ20 ವಿಶ್ವಕಪ್​ಗೆ ಕಾಲಿಡುತ್ತಿದೆ. ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ…

Read More

ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ? – Kannada News | Jana Nayagan producer to withdraw application against CBFC

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ವಿಳಂಬ ಆಗುತ್ತಲೇ ಇದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್​​ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ ಅಲ್ಲಿಯೂ ಸಹ ‘ಜನ ನಾಯಗನ್’ ನಿರ್ಮಾಪಕರಿಗೆ ಸೂಕ್ತವಾಗಿ ನ್ಯಾಯ ದೊರಕಿಲ್ಲ ಬದಲಿಗೆ ನ್ಯಾಯ ವಿತರಣೆ ತಡ ಆಗುತ್ತಲೇ ಸಾಗುತ್ತಿದೆ. ಇದರಿಂದಾಗಿ ರೋಸಿ ಹೋಗಿರುವ ನಿರ್ಮಾಪಕರು ದೂರನ್ನೇ ಹಿಂಪಡೆಯಲು…

Read More

IND vs NZ: ಕೊಹ್ಲಿ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಸೂರ್ಯಕುಮಾರ್ – Kannada News | Suryakumar Yadav Breaks Kohli Record, Sets T20 World Mark for Fastest 3000 Runs

ಈ ದಾಖಲೆಯ ಜೊತೆಗೆ ಮತ್ತೊಂದು ವಿಶ್ವ ದಾಖಲೆಯನ್ನು ಸೃಷ್ಟಿಸಿದ ಸೂರ್ಯ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್‌ ಪೂರೈಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು. ಸೂರ್ಯ 1,822 ಎಸೆತಗಳಲ್ಲಿ 3,000 ಟಿ20ರನ್‌ಗಳನ್ನು ಪೂರ್ಣಗೊಳಿಸಿದರು. ಈ ಹಿಂದೆ, ಈ ದಾಖಲೆಯನ್ನು ಯುಎಇಯ ಮೊಹಮ್ಮದ್ ವಾಸಿಮ್ ಹೊಂದಿದ್ದರು, ಅವರು 1,947 ಎಸೆತಗಳಲ್ಲಿ 3,000 ಟಿ20 ರನ್‌ ಪೂರೈಸಿದ್ದರು. Source link

Read More