Category Archives: Blog

Your blog category

IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs New Zealand 5th T20: Thiruvananthapuram Finale; IND Batting First, Full Playing XIs

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಕಿವೀಸ್ ತಂಡವು ನಾಲ್ಕನೇ ಟಿ20ಯಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಸರಣಿಯ ಅಂತಿಮ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾದ ಕೊನೆಯ ಪಂದ್ಯವಾಗಿದೆ.

ಟಾಸ್ ಗೆದ್ದ ಟೀಂ ಇಂಡಿಯಾ

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ. ಅದರಂತೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಅಕ್ಷರ್ ಪಟೇಲ್ ಮತ್ತು ಇಶಾನ್ ಕಿಶನ್ ತಂಡಕ್ಕೆ ಮರಳಿದ್ದಾರೆ. ವರುಣ್ ಚಕ್ರವರ್ತಿ ಕೂಡ ಆಡಲಿದ್ದಾರೆ. ನ್ಯೂಜಿಲೆಂಡ್ ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಪಂದ್ಯಕ್ಕೆ ನಾಲ್ಕು ಬದಲಾವಣೆಗಳನ್ನು ಮಾಡಿದೆ. ಡೆವೊನ್ ಕಾನ್ವೇ ಬದಲಿಗೆ ಫಿನ್ ಅಲೆನ್, ಜಾಕೋಬ್ ಡಫಿ ಬದಲಿಗೆ ಮಾರ್ಕ್ ಚಾಪ್ಮನ್ ಮತ್ತು ಮ್ಯಾಟ್ ಹೆನ್ರಿ ಬದಲಿಗೆ ಲಾಕಿ ಫರ್ಗುಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೈಲ್ ಜೇಮಿಸನ್ ಕೂಡ ಈ ಪಂದ್ಯದಲ್ಲಿ ಆಡಲಿದ್ದಾರೆ.

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಬೆವನ್ ಜಾಕೋಬ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:46 pm, Sat, 31 January 26

Source link

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ – Kannada News | CJ Roy Death Case: Bengaluru Police Commissioner Orders SIT Probe

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್ ರವಿ ಕೂಡ ಈ ಎಸ್ಐಟಿ ತಂಡದಲ್ಲಿದ್ದಾರೆ. ಆತ್ಮಹತ್ಯೆಗೆ ಐಟಿ ರೈಡ್ ಒತ್ತಡವೇ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಎಸ್ಐಟಿ ಈ ಕುರಿತು ಸಮಗ್ರ ತನಿಖೆ ನಡೆಸಲಿದೆ. ಅವರ ಮೊಬೈಲ್ ಫೋನ್ ಪರಿಶೀಲಿಸಿ, ಹಣಕಾಸು ವ್ಯವಹಾರಗಳು ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್ ರವಿ ಕೂಡ ಈ ಎಸ್ಐಟಿ ತಂಡದಲ್ಲಿದ್ದಾರೆ. ಆತ್ಮಹತ್ಯೆಗೆ ಐಟಿ ರೈಡ್ ಒತ್ತಡವೇ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಎಸ್ಐಟಿ ಈ ಕುರಿತು ಸಮಗ್ರ ತನಿಖೆ ನಡೆಸಲಿದೆ. ಅವರ ಮೊಬೈಲ್ ಫೋನ್ ಪರಿಶೀಲಿಸಿ, ಹಣಕಾಸು ವ್ಯವಹಾರಗಳು ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಜಾಹೀರಾತು ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಬಳಸುವುದು ಸಾರ್ವಜನಿಕ ಹಣದ ದುರುಪಯೋಗ ಎಂದು ಬಿಜೆಪಿ ಆರೋಪಿಸಿದೆ.

ಅಲ್ಲದೆ, ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಯೋಜನೆಯನ್ನು ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿದ ಅವಮಾನ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಬರಬಹುದು, ಆದರೆ ಸಾರ್ವಜನಿಕ ಹಣ ಬಳಸಿರುವುದರಿಂದ ಅದು ಸುಪ್ರೀಂಕೋರ್ಟ್‌ನ 2015ರ ಮಾರ್ಗಸೂಚಿಗಳ ಗಂಭೀರ ಉಲ್ಲಂಘನೆಯಾಗಿದೆ. ಸರ್ಕಾರಿ ಜಾಹೀರಾತುಗಳು ಕೇವಲ ಮಾಹಿತಿಯುಕ್ತವಾಗಿರಬೇಕು. ಯಾವುದೇ ರಾಜಕೀಯ ಪಕ್ಷದ ಹಿತಾಸಕ್ತಿ ಉತ್ತೇಜಿಸಲು ಅಥವಾ ವಿರೋಧ ಪಕ್ಷದ ವಿರುದ್ಧ ನಕಾರಾತ್ಮಕ ಚಿತ್ರಣ ನೀಡಲು ಸಾರ್ವಜನಿಕ ಹಣ ಬಳಸುವಂತಿಲ್ಲ.ರಾಜಕೀಯ ಟೀಕೆಗಳಿಗಾಗಿ ಸರ್ಕಾರಿ ಇಲಾಖೆಯ ಹೆಸರಿನಲ್ಲಿ ಜಾಹೀರಾತು ನೀಡುವುದು ಸಂವಿಧಾನದ 14ನೇ ವಿಧಿ ಮತ್ತು 21ನೇ ವಿಧಿಯ ಉಲ್ಲಂಘನೆ ಎಂದು ಕೋರ್ಟ್ ತಿಳಿಸಿದೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯದ ಬಗ್ಗೆ ಟೀಕೆ ಮಾಡಲು ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ. ಆದರೆ, ಸರ್ಕಾರಿ ಯಂತ್ರವನ್ನು ಬಳಸಿ ಜನರ ದಾರಿ ತಪ್ಪಿಸುವಂತಹ ಅಥವಾ ಸುಳ್ಳು ಮಾಹಿತಿ ನೀಡುವಂತಹ ಅಪಪ್ರಚಾರ ಮಾಡುವುದು ಸಂವಿಧಾನದ ಆಶಯಗಳಿಗೆ ವಿರುದ್ಧ ಎಂದು ಬಿಜೆಪಿ ದೂರಿದೆ.

ಇದನ್ನೂ ಓದಿ: ಜಾಹೀರಾತು ಜಟಾಪಟಿಗೆ ತಿರುಗಿದ ನರೇಗಾ ಯುದ್ಧ; ಅಧಿವೇಶನದಲ್ಲೂ ‘ಗಾಂಧಿ Vs ಸಂಘಪ್ಪ’ ಸಮರ!

ಕೇಂದ್ರದ ಕಾನೂನಿನ ಬಗ್ಗೆ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಬಹುದು ಅಥವಾ ಕೋರ್ಟ್‌ನಲ್ಲಿ ಸವಾಲು ಹಾಕಬಹುದು. ಆದರೆ, ಅಧಿಕೃತವಾಗಿ ಆ ಕಾನೂನನ್ನು ಜಾರಿಗೆ ತರುವಲ್ಲಿ ಅಡ್ಡಿಪಡಿಸುವುದು ಅಥವಾ ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುವುದು ಸಾಂವಿಧಾನಿಕವಾಗಿ ತಪ್ಪು. ಹಾಗಾಗಿ ಸಾರ್ವಜನಿಕರ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡು ಜಾಹೀರಾತು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆ ಮುಖ್ಯಕಾರ್ಯದರ್ಶಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾ ಬಿಜೆಪಿ ಆಗ್ರಹಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು – Kannada News | PM Narendra Modi Punjab visit on Feb 1st on occasion of Sant Ravidas Jayanti

ನವದೆಹಲಿ, ಜನವರಿ 31: ಸಂತ ಗುರು ರವಿದಾಸ್ ಅವರ 649ನೇ ಜಯಂತಿ ಆಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಭಾನುವಾರ (ಫೆ. 1) ಪಂಜಾಬ್​ಗೆ ಭೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ 3:45ಕ್ಕೆ ಪಂಜಾಬ್​ಗೆ ತೆರಳಲಿರುವ ಪಿಎಂ, ಜಲಂಧರ್ ಜಿಲ್ಲೆಯಲ್ಲಿನ ದೇರಾ ಸಖಚಂದ್ ಬಲ್ಲನ್​ಗೆ ಭೇಟಿ ನೀಡಲಿ್ದಾರೆ. ಅಲ್ಲಿ ಸಂತ ಗುರು ರವಿದಾಸ್ ಗೌರವಾರ್ಥ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನರೇಂದ್ರ ಮೋದಿ ಅವರು ದೇರಾ ಸಖಚಂದ್ ಬಲ್ಲನ್ ಮಂದಿರಕ್ಕೆ ತೆರಳಿ ಸಂತ ಗುರು ರವಿದಾಸ್ ಅವರ ಮೂರ್ತಿಗೆ ಪುಷ್ಪಾರ್ಚಣೆ ಮಾಡಲಿದ್ದಾರೆ. ದೇರಾ ಸಖಚಂದ್ ಬಲ್ಲನ್​ನ ಎರಡನೇ ಗದ್ದಿ ನಶೀನ್ (ಪೀಠಾಧಿಪತಿ) ಆದ ಸಂತ ಸರ್ವಣ ದಾಸ್ ಅವರಿಗೂ ಪುಷ್ಪಾರ್ಚಣೆ ಮಾಡಲಿದ್ದಾರೆ. ಪರಿಕ್ರಮ ಆಚರಣೆ ಹಾಗೂ ಆರ್ದಾಸ್ ಕಾರ್ಯಕ್ರಮದಲ್ಲೂ ಮೋದಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ; ಮಹಾರಾಷ್ಟ್ರಕ್ಕೆ ಮೊತ್ತಮೊದಲ ಮಹಿಳಾ ಡಿಸಿಎಂ ಈಕೆ

ಅದಂಪುರ್ ಏರ್​ಪೋರ್ಟ್​ಗೆ ರವಿದಾಸ್ ಹೆಸರು

ಪ್ರಧಾನಿಗಳು ಇದೇ ವೇಳೆ ಅದಂಪುರ್​ನಲ್ಲಿರುವ ವಿಮಾನ ನಿಲ್ದಾಣಕ್ಕೆ ಶ್ರೀ ಗುರು ರವಿದಾಸ್​ಜಿ ಏರ್ಪೋರ್ಟ್ ಎಂದು ಹೊಸ ಹೆಸರು ಇಡಲಿದ್ದಾರೆ.

ಹಾಗೆಯೇ, ಪಂಜಾಬ್​ನ ಲೂಧಿಯಾನದಲ್ಲಿರುವ ಹಲ್ವಾರ ಏರ್ಪೋರ್ಟ್​ನಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಕಟ್ಟಡದ ಉದ್ಘಾಟೆಯನ್ನೂ ಪ್ರಧಾನಿಗಳು ಮಾಡಲಿದ್ದಾರೆ. ಇದೇ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಸ್ಟೇಷನ್ ಇರುವುದರಿಂದ ಹಲ್ವಾರ ಏರ್ಪೋರ್ಟ್ ಆಯಕಟ್ಟಿನ ಜಾಗವೆಂದು ಪರಿಗಣಿತವಾಗಿದೆ.

ವಾಯುಪಡೆಯ ಉಪಸ್ಥಿತಿ ಒಂದೇ ಕಾರಣಕ್ಕೆ ಹಲ್ವಾರ ಏರ್ಪೋರ್ಟ್ ಪ್ರಾಮುಖ್ಯತೆ ಪಡೆದಿಲ್ಲ. ಲೂಧಿಯಾನ ಹಾಗೂ ಅದರ ಸುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಈ ಏರ್ಪೋರ್ಟ್ ಉತ್ತಮ ಸಂಪರ್ಕ ಕಲ್ಪಿಸುತ್ತದೆ. ಹಲ್ವಾರ ಏರ್ಪೋರ್ಟ್​ನಲ್ಲಿ ರನ್​ವೇ ದೊಡ್ಡದು ಮಾಡಿರುವುದು ಸೇರಿದಂತೆ ಇನ್​ಫ್ರಾಸ್ಟ್ರಕ್ಚರ್ ಅನ್ನು ಉತ್ತಮಗೊಳಿಸಲಾಗಿದೆ.

ಇದನ್ನೂ ಓದಿ: “ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ?

ಜಲಂಧರ್​ನಲ್ಲಿ ಬಾಂಬ್ ಬೆದರಿಕೆ

ರವಿದಾಸ್ ಜಯಂತಿ ಸಲುವಾಗಿ ಪ್ರಧಾನಿ ಮೋದಿ ಭೇಟಿ ನೀಡಲಿರುವ ಸುದ್ದಿ ಜೊತೆ ಜೊತೆಗೆ ಬಾಂಬ್ ಬೆದರಿಕೆಗಳೂ ಬಂದಿವೆ. ಜಲಂಧರ್​ನ ಕೇಂಬ್ರಿಡ್ಜ್ ಸ್ಕೂಲ್​ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಬಿಲ್ಲಿ ಹಾಲ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಈ ಇಮೇಲ್ ಕಳುಹಿಸಿದ್ದು, ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮೂರ್ನಾಲ್ಕು ಶಾಲೆಗಳಲ್ಲಿ ಬಾಂಬ್ ಸ್ಫೋಟ ಮಾಡಲಾಗುವುದು ಎಂದ ಹೆದರಿಸಿದ್ದಾನೆ. ಆದರೆ, ಪೊಲೀಸರು ಕೇಂಬ್ರಿಡ್ಜ್ ಶಾಲೆಗೆ ತೆರಳಿ ಎಲ್ಲೆಡೆ ಶೋಧ ನಡೆಸಿದ್ದಾರೆ. ಯಾವುದೇ ಬಾಂಬ್ ಪತ್ತೆಯಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ಗೆದ್ದ ಕಝಾಕಿಸ್ತಾನದ ಎಲೆನಾ ರೈಬಾಕಿನಾ – Kannada News | Elena Rybakina Wins Australian Open Women’s Singles Title, Defeats Sabalenka

ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕಝಾಕಿಸ್ತಾನ್‌ನ ಎಲೆನಾ ರೈಬಾಕಿನಾ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಇಬ್ಬರೂ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಆದರೆ ರೈಬಾಕಿನಾ ಅದ್ಭುತ ಪುನರಾಗಮನ ಮಾಡಿ ಪ್ರಶಸ್ತಿ ಗೆದ್ದರು.

ಈ ಪಂದ್ಯದಲ್ಲಿ ಎಲೆನಾ ರೈಬಾಕಿನಾ, ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್‌ಗಳಿಂದ ಸೋಲಿಸಿದರು. ರೈಬಾಕಿನಾ ಮೊದಲ ಸೆಟ್ ಅನ್ನು 6-4 ಅಂತರದಲ್ಲಿ ಗೆದ್ದುಕೊಂಡರೆ, ಸಬಲೆಂಕಾ ಎರಡನೇ ಸೆಟ್‌ ಅನ್ನು 6-4 ಅಂತರದಿಂದ ಗೆದ್ದುಕೊಂಡರು. ಮೂರನೇ ಸೆಟ್‌ನಲ್ಲಿ, ಸಬಲೆಂಕಾ ಆರಂಭದಲ್ಲಿ 3-0 ಮುನ್ನಡೆ ಸಾಧಿಸಿದರಾದರೂ ರೈಬಾಕಿನಾ ಅಂತಿಮವಾಗಿ ಸೆಟ್ ಅನ್ನು 6-4 ಅಂತರದಲ್ಲಿ ಗೆದ್ದು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎಲೆನಾ ರೈಬಾಕಿನಾಗೆ ಇದು ಎರಡನೇ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಚಾಂಪಿಯನ್ ಆಗಿರುವ ಸಬಲೆಂಕಾ ಈ ಬಾರಿ ಮೂರನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ವಿಫಲರಾದರು.

ಇದರೊಂದಿಗೆ, ಎಲೆನಾ ರೈಬಾಕಿನಾ ಆಸ್ಟ್ರೇಲಿಯನ್ ಓಪನ್ ಗೆದ್ದ ಕಝಾಕಿಸ್ತಾನ್‌ನ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಈ ಐತಿಹಾಸಿಕ ಗೆಲುವಿಗೆ ಪ್ರತಿಯಾಗಿ ಅವರಿಗೆ 25 ಕೋಟಿ ರೂ. ಬಹುಮಾನದ ಹಣವು ಸಿಕ್ಕಿದೆ. ಇದಕ್ಕೂ ಮೊದಲು, ಅವರು 2022 ರಲ್ಲಿ ವಿಂಬಲ್ಡನ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಗ್ರ್ಯಾಂಡ್ ಸ್ಲ್ಯಾಮ್ ಗೆದ್ದ ಕಝಾಕಿಸ್ತಾನದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ; ಮಹಾರಾಷ್ಟ್ರಕ್ಕೆ ಮೊತ್ತಮೊದಲ ಮಹಿಳಾ ಡಿಸಿಎಂ ಈಕೆ – Kannada News | Sunetra Pawar takes oath as Maharashtra Dy CM, and becomes first woman to become Maha DCM

ಸುನೇತ್ರಾ ಪವಾರ್Image Credit source: Emmanual Yogoni, The Hindu

ಮುಂಬೈ, ಜನವರಿ 31: ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ತಮ್ಮ ಪತಿಯ ಸ್ಥಾನವನ್ನು ಅವರು ತುಂಬಿದ್ದಾರೆ. ಮಹಾರಾಷ್ಟ್ರದ ರಾಜಕೀಯದಲ್ಲಿ ಸುನೇತ್ರಾ ಪವಾರ್ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲೀ, ಉಪಮುಖ್ಯಮಂತ್ರಿಯಾಗಲೀ ಆಗಿದ್ದಿಲ್ಲ. ಸುನೇತ್ರಾ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎನ್ನುವ ದಾಖಲೆಯನ್ನಂತೂ ಮಾಡಿದ್ದಾರೆ.

ತಮ್ಮ ಪತಿಯ ನೆರಳಿನಲ್ಲೇ ಬಹುತೇಕ ಜೀವನ ಸವೆಸಿದ ಸುನೇತ್ರಾ ಪವಾರ್ 61ನೇ ವಯಸ್ಸಿನಲ್ಲಿ ಸಕ್ರಿಯ ರಾಜಕಾರಣ ಪ್ರವೇಶ ಮಾಡಿದ್ದರು. ಪ್ರಬಲ ರಾಜಕೀಯ ವ್ಯಕ್ತಿಗಳಿರುವ ಕುಟುಂಬದಲ್ಲೇ ಹುಟ್ಟಿ ಬೆಳೆದರೂ ಕುಟುಂಬ ಪಾಲನೆಯಲ್ಲೇ ಹೆಚ್ಚಿನ ಸಮಯ ಕಳೆದಿದ್ದರು. ಅವರ ಸಹೋದರ ಪದಂಸಿಂಗ್ ಬಾಜಿರಾವ್ ಪಾಟೀಲ್ ಅವರು ಮಾಜಿ ಸಚಿವರು, ಹಾಗೂ ಎನ್​ಸಿಪಿ ಪಕ್ಷದ ಆರಂಭಿಕರಲ್ಲಿ ಒಬ್ಬರು. ಶರದ್ ಪವಾರ್ ಅವರ ಆಪ್ತರೂ ಹೌದು.

ಇದನ್ನೂ ಓದಿ: “ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ?

ಪ್ರಬಲ ರಾಜಕೀಯ ಕುಟುಂಬದ ಹಿನ್ನೆಲೆಯಿದ್ದರೂ ಸುನೇತ್ರಾ ಸಕ್ರಿಯ ರಾಜಕಾರಣಕ್ಕೆ ಬರಲು 61ನೇ ವಯಸ್ಸು ದಾಟಬೇಕಾಯಿತು. ತಮ್ಮ ಪತಿ ಪ್ರತಿನಿಧಿಸುತ್ತಿದ್ದ ಬಾರಾಮತಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವುದರಲ್ಲೇ ಸುನೇತ್ರಾ ತೃಪ್ತಿಪಡುತ್ತಿದ್ದರು.

ಲೋಕಸಭಾ ಚುನಾವಣೆಯಲ್ಲಿ ಬಾರಾಮತಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಬಂದಿದ್ದರಾದರೂ ಅವರ ನಿರ್ಧಾರ ಒಲ್ಲದ ಮನಸ್ಸಿನದ್ದಾಗಿತ್ತು. ಆ ಕ್ಷೇತ್ರದಲ್ಲಿ ಶರದ್ ಪವಾರ್ ಮಗಳಾದ ಸುಪ್ರಿಯಾ ಸುಲೆ ಎದುರು ಸ್ಪರ್ಧಿಸಿ ಸೋತರು. ನಂತರ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ನಿಲ್ಲಿಸಿ ಗೆಲ್ಲಿಸಿ ಸಂಸತ್ತಿಗೆ ಕಳುಹಿಸಿಕೊಡಲಾಯಿತು. ಈ ಮೂಲಕ ಸುನೇತ್ರಾ ಪವಾರ್ ಅವರು ಸಂಸದರಾದರು.

ಇದನ್ನೂ ಓದಿ: ಎನ್​ಸಿಪಿ ಮತ್ತೆ ವಿಲೀನವಾಗುತ್ತಾ? ಅಜಿತ್ ಪವಾರ್ ಕೊನೆಯ ಆಸೆಯ ಬಗ್ಗೆ ಶುರುವಾಯ್ತು ಚರ್ಚೆ

ಸುನೇತ್ರಾ ಪವಾರ್ ಅವರನ್ನು ಎನ್​ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಛಗನ್ ಭುಜಬಲ್, ಪ್ರಫುಲ್ ಪಟೇಲ್ ಮೊದಲಾದ ಅನುಭವಿ ರಾಜಕಾರಣಿಗಳಿರುವ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯೂ ಅವರ ಹೆಗಲಿಗಿದೆ. ಸಕ್ರಿಯ ಆಡಳಿತದಲ್ಲಿ ಅನುಭವ ಇಲ್ಲದಿದ್ದರೂ ಅದನ್ನು ನಿಭಾಯಿಸುವ ಅನಿವಾರ್ಯತೆ ಅವರಿಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 5:44 pm, Sat, 31 January 26

Source link

ಕರೆಂಟ್​​ ಶಾಕ್​​ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು – Kannada News | Raichur Govt School Tragedy: Student Tanushree Dies of Electric Shock from Faulty Water Purifier

ರಾಯಚೂರು, ಜನವರಿ 31: ನೀರು ತರಲು ಹೋದಾಗ ವಾಟರ್​​ ಪ್ಯೂರಿಫೈರ್​​ ಸ್ವಿಚ್​​ನಿಂದ ವಿದ್ಯುತ್​​ ಪ್ರವಹಿಸಿದ ಪರಿಣಾಮ ಕರೆಂಟ್​​ ಶಾಕ್​​ಗೆ ಸರಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕಯೊಬ್ಬರು ಬಾಟಲ್​​ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್​​ ಪ್ಯೂರಿಫೈರ್​​ ಬಳಿ ತೆರಳಿದ್ದಳು ಎನ್ನಲಾಗಿದೆ.

ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ ತನುಶ್ರೀ, ಓದಿನಲ್ಲಿಯೂ ಜಾಣೆಯಾಗಿದ್ದಳು. ಒಂದು ದಿನವೂ ತಪ್ಪಿಸದೆ ಶಾಲೆಗೆ ತೆರಳುತ್ತಿದ್ದಳು. ಶಿಕ್ಷಕರು ಹೇಳಿದ್ದಾರೆ ಎಂದು ನೀರು ತರಲು ಹೋದ ಈಕೆ ವಾಟರ್​​ ಪ್ಯೂರಿಫೈರ್​​ ಸ್ವಿಚ್​​ ಆನ್​​ ಮಾಡಿದ್ದಾಳೆ. ಆ ವೇಳೆ ಬಾಲಕಿಯ ಎಡಗೈಗೆ ವಿದ್ಯುತ್​​ ಶಾಕ್​​ ತಗುಲಿದ್ದು, ಅಲ್ಲೇ ಆಕೆ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕರು ಕೂಡಲೇ ಸ್ಥಳೀಯ ವೈದ್ಯರೊಬ್ಬರನ್ನ ಕರೆಸಿ ಚಿಕಿತ್ಸೆ ಕೊಡಿಸುವ ಯತ್ನ ಮಾಡಿದ್ದಾರೆ. ವೈದ್ಯರು ತನುಶ್ರೀ ಸ್ಥಿತಿ ಗಂಭಿರವಾಗಿದೆ ಎಂದು ಹೇಳಿದ ಕಾರಣ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಆದ್ರೆ ತಾಲೂಕು ಆಸ್ಪತ್ರೆ ಆವರಣದಲ್ಲಿಯೇ ಆಕೆ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ

ಘಟನೆ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ನಿತೀಶ್ ಕೆ., ಸಿಂಧನೂರು ತಹಶಿಲ್ದಾರ್ ಗೆ ಆದೇಶಿಸಿದ್ದಾರೆ. ಬಿಇಒ, ತಹಶೀಲ್ದಾರ್, ಜೆಸ್ಕಾಂ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡಲಿದ್ದು, ಅದರ ಆಧಾರದಲ್ಲಿ ತಪ್ಪಿತಸ್ಥ ಶಾಲಾ ಸಿಬ್ಬಂದಿ ವಿರುದ್ಧ ಕ್ರಮ ಆಗಲಿದೆ ಎನ್ನಲಾಗಿದೆ. ಅಲ್ಲದೆ ಜಿಲ್ಲೆಯ ಉಳಿದ ಶಾಲೆಗಳಲ್ಲಿಯೂ ವಿದ್ಯುತ್ ಸಮಸ್ಯೆಗಳಿದ್ದರೆ ತಕ್ಷಣ ಪರಿಶೀಲಿಸಿ ಕ್ರಮಕ್ಕೆ ಸೂಚಿಸಲಾಗಿದೆ. ಮೃತಳ ಕುಟುಂಬಕ್ಕೆ ಪರಿಹಾರ ನೀಡೋ ಭರವಸೆ ಜಿಲ್ಲಾಧಿಕಾರಿಗಳಿಂದ ಸಿಕ್ಕಿದೆ. ಇನ್ನು ಘಟನಾ ಸ್ಥಳಕ್ಕೆ ತುರ್ವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತಳ ತಂದೆ ಶಾಮಣ್ಣ ನೀಡಿದ ದೂರಿನನ್ವಯ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಕೇಸ್ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಯಂಗ್ ಇಂಡಿಯಾಗೆ ಕ್ರಿಕೆಟ್ ದೇವರ ಪಾಠ – Kannada News | U19 World Cup: India vs Pakistan Showdown! Sachin Tendulkar’s Pep Talk Ignites Team India’s Semifinal Bid

ಅಂಡರ್ 19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ಯುವ ತಂಡಗಳ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ. ಈ ಹಿಂದೆ ನಡೆದಿದ್ದ ಏಷ್ಯಾಕಪ್​ ಫೈನಲ್​ನಲ್ಲಿ ಭಾರತಕ್ಕೆ ಸೋಲಿನ ಆಘಾತ ನೀಡಿದ್ದ ಪಾಕ್ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ. ಅದಕ್ಕೆ ಪೂರಕವೆಂಬಂತೆ ಯುವ ಆಟಗಾರರಿಗೆ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಪಂದ್ಯಕ್ಕೆ ಒಂದು ದಿನ ಮೊದಲು ವಿಡಿಯೋ ಕರೆಯ ಮುಖಾಂತರ ಸವಾಂದ ನಡೆಸಿದ್ದಾರೆ. ಈ ವೇಳೆ ತಮ್ಮ ಅನುಭವಗಳನ್ನು ಧಾರೆ ಎರೆಯುವ ಮೂಲಕ ಯಂಗ್ ಇಂಡಿಯಾದ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸ ಮಾಡಿದ್ದಾರೆ.

ಸಚಿನ್ ತೆಂಡೂಲ್ಕರ್ ವೀಡಿಯೊ ಕರೆ

ಅಂಡರ್-19 ವಿಶ್ವಕಪ್ ಸೂಪರ್-6 ರ ಭಾಗವಾಗಿ ಭಾರತ ಮತ್ತು ಪಾಕಿಸ್ತಾನ ಭಾನುವಾರ ಪರಸ್ಪರ ಮುಖಾಮುಖಿಯಾಗಲಿವೆ. ಗ್ರೂಪ್-1 ರಿಂದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ಮತ್ತು ಗ್ರೂಪ್-2 ರಿಂದ ಇಂಗ್ಲೆಂಡ್ ಈಗಾಗಲೇ ಸೆಮಿಫೈನಲ್ ತಲುಪಿದ್ದು, ಉಳಿದ ಸ್ಥಾನಕ್ಕಾಗಿ ಭಾರತ ಮತ್ತು ಪಾಕಿಸ್ತಾನ ಪೈಪೋಟಿಯಲ್ಲಿವೆ. ಈ ಹೆಚ್ಚಿನ ಒತ್ತಡದ ಪಂದ್ಯಕ್ಕೂ ಮುನ್ನ, ಬಿಸಿಸಿಐ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದ್ದು, ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ನಮ್ಮ ಯುವ ಆಟಗಾರರೊಂದಿಗೆ ವೀಡಿಯೊ ಕರೆಯ ಮೂಲಕ ಸಂವಾದ ನಡೆಸಿದರು. ಬ್ಯಾಟಿಂಗ್ ತಂತ್ರ ಮಾತ್ರವಲ್ಲದೆ, ಮಾನಸಿಕವಾಗಿ ಬಲಶಾಲಿ, ಶಿಸ್ತು ಮತ್ತು ನಮ್ರತೆ ಯಶಸ್ಸಿಗೆ ಎಷ್ಟು ಮುಖ್ಯ ಎಂಬುದರ ಕುರಿತು ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಅಂಕಪಟ್ಟಿಯಲ್ಲಿ ಭಾರತದ ಮೇಲುಗೈ

ಭಾರತ ತಂಡವು ಪ್ರಸ್ತುತ 3 ಪಂದ್ಯಗಳಲ್ಲಿ 3 ಗೆಲುವುಗಳೊಂದಿಗೆ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಅದರ ನೆಟ್ ರನ್​ರೇಟ್ +3.337 ಆಗಿದೆ. ಇತ್ತ ಪಾಕಿಸ್ತಾನ 4 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಭಾನುವಾರ ಪಾಕಿಸ್ತಾನ ಗೆದ್ದರೂ ಸಹ ನೆಟ್​ ರನ್ ರೇಟ್​ನಲ್ಲಿ ಭಾರತವನ್ನು ಮೀರಿಸುವುದು ತುಂಬಾ ಕಷ್ಟಕರ. ಆದ್ದರಿಂದ ಪಾಕ್ ತಂಡ ಭಾರತದ ವಿರುದ್ಧ ಭಾರಿ ಅಂತರದಲ್ಲಿ ಗೆಲ್ಲಬೇಕು. ಇತ್ತ ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಸಾಕು ನೇರವಾಗಿ ಸೆಮಿಫೈನಲ್​ ಆಡಲಿದೆ.

ಉಭಯ ತಂಡಗಳ ನಡುವಿನ ಈ ಪಂದ್ಯವು ಫೆಬ್ರವರಿ 1 (ಭಾನುವಾರ) ರಂದು ಜಿಂಬಾಬ್ವೆಯ ಬುಲವಾಯೊದಲ್ಲಿರುವ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ನೀವು ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿಯೂ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Vijayanagara ZP Recruitment 2026: ವಿಜಯನಗರ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; SLWM ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – Kannada News | SLWM Consultant Recruitment 2026: Vijayanagara ZP Invites Civil Engineers

ವಿಜಯನಗರ ಜಿಲ್ಲಾ ಪಂಚಾಯತ್ ನೇಮಕಾತಿ

ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮೂಲಕ SLWM ಕನ್ಸಲ್ಟೆಂಟ್ (Solid Liquid Waste Management Consultant) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ  ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 12 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಿಜಯನಗರ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ವಿವರ:

  • ಸಂಸ್ಥೆಯ ಹೆಸರು: ವಿಜಯನಗರ ಜಿಲ್ಲಾ ಪಂಚಾಯತ್
  • ಹುದ್ದೆಯ ಹೆಸರು: SLWM ಕನ್ಸಲ್ಟೆಂಟ್
  • ಹುದ್ದೆಗಳ ಸಂಖ್ಯೆ: 1
  • ಉದ್ಯೋಗ ಸ್ಥಳ: ವಿಜಯನಗರ
  • ಸಂಬಳ: ತಿಂಗಳಿಗೆ 25,000 ರೂ.

ಶೈಕ್ಷಣಿಕ ಅರ್ಹತೆ:

ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ / ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಯ ಗರಿಷ್ಠ ವಯಸ್ಸು: 40 ವರ್ಷಗಳು

ಇದನ್ನೂ ಓದಿ: ಶಿವಮೊಗ್ಗದಲ್ಲಿ ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ;10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವ ವಿಧಾನ:

  • ಮೊದಲು ವಿಜಯನಗರ ಜಿಲ್ಲಾ ಪಂಚಾಯತ್ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಆನ್‌ಲೈನ್ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಿ.
  • ಐಡಿ ಪ್ರೂಫ್, ವಯಸ್ಸಿನ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ ದಾಖಲೆಗಳು, ರೆಸ್ಯೂಮ್ ಹಾಗೂ (ಅನ್ವಯಿಸಿದರೆ) ಅನುಭವ ಪ್ರಮಾಣಪತ್ರಗಳನ್ನು ಸ್ಕ್ಯಾನ್ ಮಾಡಿ ಸಿದ್ಧಪಡಿಸಿಕೊಳ್ಳಿ.
  • SLWM ಕನ್ಸಲ್ಟೆಂಟ್ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ನಿಮ್ಮ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರದೊಂದಿಗೆ ಅಪ್‌ಲೋಡ್ ಮಾಡಿ.
  • ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ Submit ಬಟನ್ ಕ್ಲಿಕ್ ಮಾಡಿ.

ಒಟ್ಟಾರೆ, ಸರ್ಕಾರಿ ಕ್ಷೇತ್ರದಲ್ಲಿ ಉತ್ತಮ ವೇತನದೊಂದಿಗೆ ವೃತ್ತಿಜೀವನ ಆರಂಭಿಸಲು ಬಯಸುವ ಸಿವಿಲ್ ಎಂಜಿನಿಯರಿಂಗ್ ಪದವೀಧರರಿಗೆ ವಿಜಯನಗರ ಜಿಲ್ಲಾ ಪಂಚಾಯತ್ SLWM ಕನ್ಸಲ್ಟೆಂಟ್ ಹುದ್ದೆ ಉತ್ತಮ ಅವಕಾಶವಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:34 pm, Sat, 31 January 26

Source link