Category Archives: Blog

Your blog category

ನಟ ಸೂರ್ಯ ಎಸ್‌ಜೆ ಸಿನಿಮಾ ಸೆಟ್​​​ನಲ್ಲಿ ಅವಘಡ; ಓರ್ವ ಸಾವು – Kannada News

ತಮಿಳಿನ ಖ್ಯಾತ ನಟ ಎಸ್‌ಜೆ ಸೂರ್ಯ (SJ Surya) ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಕಿಲ್ಲರ್’ ಸಿನಿಮಾದ ಚಿತ್ರೀಕರಣದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಶೂಟಿಂಗ್ ಸೆಟ್‌ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಚಿತ್ರತಂಡದ 26 ವರ್ಷದ ಯುವ ತಂತ್ರಜ್ಞರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಚೆನ್ನೈ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಚೆನ್ನೈನ ಪ್ರಸಿದ್ಧ ಬಿನ್ನಿ ಮಿಲ್ಸ್‌ನಲ್ಲಿ ‘ಕಿಲ್ಲರ್’ ಸಿನಿಮಾದ ಸೆಟ್ ಹಾಕಿ ಶೂಟಿಂಗ್ ಮಾಡಲಾಗುತ್ತಿತ್ತು. ಮುಂಜಾನೆಯ ವೇಳೆಯಲ್ಲಿ ಚಿತ್ರದ ಪ್ರಮುಖ ಸಾಹಸ ದೃಶ್ಯವೊಂದನ್ನು ಚಿತ್ರೀಕರಿಸಲು ತಂಡ ಸಜ್ಜಾಗಿತ್ತು. ಈ ಆ್ಯಕ್ಷನ್ ಸೀನ್‌ಗಾಗಿ ವಿಶೇಷ ಎಫೆಕ್ಟ್ಸ್ ನೀಡಲು ಗ್ಯಾಸ್ ಸಿಲಿಂಡರ್‌ಗಳನ್ನು ಬಳಸಲಾಗುತ್ತಿತ್ತು. ಆದರೆ, ಹಠಾತ್ ಆಗಿ ಸಿಲಿಂಡರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ದೊಡ್ಡ ಮಟ್ಟದಲ್ಲಿ ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಸೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ತಂತ್ರಜ್ಞರು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ಎಚ್ಚೆತ್ತ ಚಿತ್ರತಂಡ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಿತು. ಆದರೆ, ದುರದೃಷ್ಟವಶಾತ್ ಮದನ್ ಎಂಬುವವರು ತೀವ್ರ ರಕ್ತಸ್ರಾವ ಹಾಗೂ ಗಾಯಗಳಿಂದಾಗಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ಮೂವರು ತಂತ್ರಜ್ಞರಾದ ಶಕ್ತಿವೇಲ್, ಸೂರ್ಯ ಮತ್ತು ದಿನಕರನ್ ಅವರಿಗೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ದುರಂತದ ಬೆನ್ನಲ್ಲೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಷ್ಟು ದೊಡ್ಡ ಆ್ಯಕ್ಷನ್ ದೃಶ್ಯವನ್ನು ಚಿತ್ರೀಕರಿಸುವ ಮುನ್ನ ಚಿತ್ರತಂಡ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಂಡಿತ್ತೇ ಅಥವಾ ಇಲ್ಲವೇ ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಈ ಭೀಕರ ಸ್ಫೋಟಕ್ಕೆ ಕೇವಲ ತಾಂತ್ರಿಕ ದೋಷ ಕಾರಣವೇ ಅಥವಾ ಸಿಬ್ಬಂದಿಯ ನಿರ್ಲಕ್ಷ್ಯ ಕಾರಣವೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಚಿತ್ರೀಕರಣದ ಸ್ಥಳದಲ್ಲಿದ್ದ ಇತರ ತಂತ್ರಜ್ಞರು ಹಾಗೂ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಾರ್ತಿಕ್ ಸುಬ್ಬರಾಜು ಜೊತೆ ಕೈ ಜೋಡಿಸಿದ ಸೂರ್ಯ

ಪ್ರಕರಣದ ಪ್ರಾಥಮಿಕ ತನಿಖೆಯ ಬಳಿಕ ಚೆನ್ನೈ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸೆಟ್‌ಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡಿದ್ದ ವೆಂಡರ್ ರಾಮು ಹಾಗೂ ಸಿಲಿಂಡರ್‌ಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೇಲ್ವಿಚಾರಕ ಆರ್ಮುಗಂ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಶಸ್ವಿ ವಿದ್ಯಾರ್ಥಿಯಾಗಬೇಕೇ?: ಅದೃಷ್ಟ ಮಾತ್ರ ಸಾಲದು, ಈ 5 ಗುಣಗಳನ್ನು ಇಂದೇ ರೂಢಿಸಿಕೊಳ್ಳಿ!

ಬೆಂಗಳೂರು, ಜೂ.4: ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಜೀವನವು ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ರೂಢಿಸಿಕೊಳ್ಳುವ ಅಭ್ಯಾಸಗಳು ಭವಿಷ್ಯವನ್ನು ರೂಪಿಸುತ್ತವೆ. ಯಶಸ್ವಿ ವಿದ್ಯಾರ್ಥಿಯಾಗಲು ಕೇವಲ ಅದೃಷ್ಟವಷ್ಟೇ ಸಾಲದು. ಶಿಸ್ತು, ಸಂಯಮ, ತಾಳ್ಮೆ, ಸಹನೆ ಮತ್ತು ಆಲೋಚನಾ ಶಕ್ತಿಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯ. ಉದಾಸೀನತೆ ಹಾಗೂ ನಿರ್ಲಕ್ಷ್ಯ ಸ್ವಭಾವಗಳು ಯಶಸ್ಸಿಗೆ ಅಡ್ಡಿಯಾಗುತ್ತವೆ. ವಿದ್ಯಾದದಾತಿ ವಿನಯಂ ಎಂಬಂತೆ, ವಿದ್ಯೆಯು ವಿನಯವನ್ನು ನೀಡುತ್ತದೆ. ವಿನಯವು ಅರ್ಹತೆಯನ್ನು, ಅರ್ಹತೆಯು ಸಂಪತ್ತನ್ನು ಮತ್ತು ಸಂಪತ್ತು ಸುಖಮಯ ಜೀವನವನ್ನು ತರುತ್ತದೆ. ಆದರ್ಶ ವಿದ್ಯಾರ್ಥಿಯು ಸೂರ್ಯೋದಯಕ್ಕೆ ಮುನ್ನ ಏಳಬೇಕು, ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು ಮತ್ತು ಸಮತೋಲಿತ ಆಹಾರ ಸೇವಿಸಬೇಕು. ಬಾಲ್ಯದಿಂದಲೇ ಪೋಷಕರು ಮತ್ತು ಶಿಕ್ಷಕರು ಉತ್ತಮ ಸಂಸ್ಕಾರಗಳನ್ನು ಕಲಿಸುವುದು ಮುಖ್ಯ. ಜ್ಞಾನ ಸಂಪಾದನೆಗೆ ನಿರಂತರವಾಗಿ ಹೊಸ ವಿಷಯಗಳನ್ನು ಕಲಿಯುವುದು ಯಶಸ್ಸಿಗೆ ದಾರಿಯಾಗುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ ಟ್ವಿಟರ್ ವಿಮರ್ಶೆ: ರಾಮ್ ಚರಣ್ ನಟನೆಗೆ ಪ್ರೇಕ್ಷಕರು ಫಿದಾ; ಶಿವಣ್ಣನಿಗೂ ಜೈಕಾರ

ಬುಚಿ ಬಾಬು ಸನಾ ನಿರ್ದೇಶನದಲ್ಲಿ ಮೂಡಿಬಂದಿರುವ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ‘ಪೆದ್ದಿ’ (Peddi Movie) ಜೂನ್ 4ರಂದು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಿದೆ. ಜೂನ್ 3ರ ರಾತ್ರಿಯೇ ಸಿನಿಮಾಗೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗಿತ್ತು. ಇದನ್ನು ವೀಕ್ಷಿಸಿದ ಅಭಿಮಾನಿಗಳು ಹಾಗೂ ಪ್ರೇಕ್ಷಕರು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಕ್ರಿಕೆಟ್ ದೇವರಾದ ಸಚಿನ್ ತೆಂಡೂಲ್ಕರ್ ಆರಂಭದಲ್ಲಿ ಟೆನ್ನಿಸ್ ಇಷ್ಟಪಟ್ಟಿದ್ದರು, ಎಂ.ಎಸ್. ಧೋನಿ ಕ್ರಿಕೆಟ್‌ಗೆ ಬರುವ ಮುನ್ನ ಫುಟ್‌ಬಾಲ್ ಆಡುತ್ತಿದ್ದರು. ಹಾಗೆಯೇ ನಮ್ಮ ದೇಶದ ಹಲವು ಖ್ಯಾತ ಕ್ರೀಡಾಪಟುಗಳು ತಮ್ಮ ವೃತ್ತಿಜೀವನದಲ್ಲಿ ಇಂತಹ ಬದಲಾವಣೆಗಳನ್ನು ಕಂಡಿದ್ದಾರೆ. ಅದೇ ಮಾದರಿಯಲ್ಲಿ ‘ಪೆದ್ದಿ’ ಚಿತ್ರದಲ್ಲಿ ರಾಮ್ ಚರಣ್ ಒಬ್ಬ ಅಥ್ಲೀಟ್ ಆಗಿ ಕಾಣಿಸಿಕೊಂಡಿದ್ದು, ಅವರ ಕ್ರೀಡಾ ಪಯಣದ ಕಥೆಯನ್ನು ಸಿನಿಮಾ ಒಳಗೊಂಡಿದೆ.

ಎಕ್ಸ್ (ಟ್ವಿಟರ್) ತಾಣದಲ್ಲಿ ಸಿನಿಮಾಗೆ ಬಹುತೇಕ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗುತ್ತಿವೆ. ರಾಮ್ ಚರಣ್ ಅವರ ನಟನೆ ಮತ್ತು ಇಂಟ್ರೊಡಕ್ಷನ್ ಸೀನ್ ಪ್ರೇಕ್ಷಕರ ಮನಗೆದ್ದಿದೆ. ಇನ್ನು, ಶಿವರಾಜ್​​ಕುಮಾರ್ ಪಾತ್ರವನ್ನು ಜನರು ಕೊಂಡಾಡಿದ್ದಾರೆ.

‘ಚಿತ್ರದ ಮೊದಲಾರ್ಧ ಚೆನ್ನಾಗಿದೆ. ಪ್ರೀ-ಇಂಟರ್ವಲ್‌ನಿಂದ ಹಿಡಿದು ಇಂಟರ್ವಲ್ ಬ್ಲಾಕ್‌ವರೆಗಿನ ದೃಶ್ಯಗಳು ಅದ್ಭುತವಾಗಿ ಮೂಡಿಬಂದಿದ್ದು, ಚಿತ್ರದ ಪ್ರಮುಖ ಹೈಲೈಟ್ ಆಗಿವೆ. ರಾಮ್ ಚರಣ್ ಎಂಟ್ರಿ ಸೀನ್ ಮಾಸ್ ಆಗಿದೆ. ಆದರೆ ನಾಯಕಿ ಮತ್ತು ವಿಲನ್ ಟ್ರ್ಯಾಕ್ ಅಷ್ಟಾಗಿ ಕೆಲಸ ಮಾಡಿಲ್ಲ’ ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

ಪ್ರೇಕ್ಷಕರು ಚಿತ್ರದ ಹೆಲಿಕಾಪ್ಟರ್ ಶಾಟ್ ಅನ್ನು ಕೊಂಡಾಡಿದ್ದು, ‘ಫ್ಲಡ್ ಲೈಟ್ಸ್​ನಲ್ಲಿ ಬರುವ 360 ಡಿಗ್ರಿ ಮತ್ತು ಹೆಲಿಕಾಪ್ಟರ್ ಕ್ರಿಕೆಟಿಂಗ್ ಶಾಟ್‌ಗಳು, ಅದಕ್ಕೆ ಎ.ಆರ್. ರೆಹಮಾನ್ ಕೊಟ್ಟಿರುವ ಬಿಜಿಎಂ ಮತ್ತು ‘ಪೆದ್ದಿ’ ಚಾಂಟ್ಸ್ ಥಿಯೇಟರ್‌ನಲ್ಲಿ ರೋಮಾಂಚನ ಉಂಟುಮಾಡುತ್ತವೆ. ಹಾಡುಗಳ ವಿಶ್ಯುವಲ್ಸ್ ಸೂಪರ್ ಆಗಿದ್ದು, ಎಮೋಷನ್ಸ್ ಜೊತೆ ಬ್ಲಾಕ್‌ಬಸ್ಟರ್ ಆಗಿದೆ’ ಎಂದು ಕೊಂಡಾಡಿದ್ದಾರೆ.

ಮೊದಲಾರ್ಧದಲ್ಲಿ ಜಾನ್ವಿ ಕಪೂರ್ ನಟನೆಗೆ ತೂಕ ಇಲ್ಲ ಎಂದು ಫ್ಯಾನ್ಸ್ ಹೇಳಿದ್ದಾರೆ. ಕೆಲವು ಹಾಡುಗಳನ್ನು ಸುಖಾಸುಮ್ಮನೆ ಹಾಕಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಶಿವಣ್ಣ ಅವರ ನಟನೆ ಅಭಿಮಾನಿಗಳಿಗೆ ಇಷ್ಟ ಆಗಿದೆ. ರಾಮ್ ಚರಣ್ ನಟನೆ ಬೇರೆಯದೇ ಹಂತದಲ್ಲಿ ಇದೆ ಎಂದು ಅನೇಕರು ಹೇಳಿದ್ದಾರೆ. ಸಿನಿಮಾಟೋಗ್ರಫಿ ಹಾಗೂ ಎಆರ್​ ರೆಹಮಾನ್ ಮ್ಯೂಸಿಕ್ ಅಭಿಮಾನಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಇದೆ.

ಇದನ್ನೂ ಓದಿ: ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್ 

ಶಿವರಾಜ್‌ಕುಮಾರ್, ಜಾನ್ವಿ ಕಪೂರ್ , ದಿವ್ಯೇಂದು ಶರ್ಮಾ ಮತ್ತು ಜಗಪತಿ ಬಾಬು ಮೊದಲಾದವರು ನಟಿಸಿದ್ದಾರೆ. ಬುಚಿ ಬಾಬು ಸನಾ ಅವರೇ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗುರುವಾರದಂದು ರಾಘವೇಂದ್ರ ಸ್ವಾಮಿ, ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ – Kannada News

ಬೆಂಗಳೂರು, ಜೂ.4: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 4ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ ಚೌತಿ, ಉತ್ತರಾಷಾಡ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುವ ಈ ದಿನದ ಮಹತ್ವವನ್ನು ವಿವರಿಸಿದರು. ಗುರುವಾರದಂದು ಗುರುಗಳ ದರ್ಶನ, ಸ್ಮರಣೆ ಹಾಗೂ ದಾನಗಳು ಬಹಳ ಪ್ರಾಶಸ್ತ್ಯವನ್ನು ಹೊಂದಿದ್ದು, ಪೂಜ್ಯ ರಾಘವೇಂದ್ರ ಸ್ವಾಮಿಗಳು ಮತ್ತು ಶಿರಡಿ ಸಾಯಿಬಾಬಾ ಅವರಂತಹ ಗುರುಗಳನ್ನು ನೆನೆಯಲು ಸಲಹೆ ನೀಡಲಾಯಿತು. ಇದಲ್ಲದೆ, ಈ ದಿನವನ್ನು “ಬಾಲ ದೌರ್ಜನ್ಯ ವಿರೋಧಿ ದಿನ” ಎಂದು ಗುರುತಿಸಲಾಗಿದ್ದು, ಮಕ್ಕಳ ಆರೈಕೆ, ಅನ್ನದಾನ, ಆಶ್ರಯ ನೀಡುವುದರಿಂದ ಭಗವಂತನಿಗೆ ತೃಪ್ತಿ ಸಿಗುತ್ತದೆ ಎಂದು ತಿಳಿಸಿದರು. ಪ್ರತಿಯೊಬ್ಬರೂ ಮಕ್ಕಳ ಸಹಾಯಕ್ಕೆ ನಿಲ್ಲುವ ಸಂಕಲ್ಪ ಮಾಡಿಕೊಳ್ಳುವಂತೆ ಗುರೂಜಿ ಕರೆ ನೀಡಿದರು. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ಪ್ರತಿಯೊಂದು ರಾಶಿಯವರಿಗೂ ಆ ದಿನದ ಹಣಕಾಸು, ವೃತ್ತಿ, ಆರೋಗ್ಯ, ಪ್ರಯಾಣ, ಅದೃಷ್ಟ ಸಂಖ್ಯೆ, ಅದೃಷ್ಟ ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ್ದ ಸರ್ಕಾರಿ ಕಟ್ಟಡವೀಗ ಅನೈತಿಕ ಚಟುವಟಿಕೆಗಳ ತಾಣ: ಹೇಳೋರು ಇಲ್ಲ ಕೇಳೋರು ಇಲ್ಲ! – Kannada News

ಪಾಳು ಬಿದ್ದಿರುವ ಕಟ್ಟಡImage Credit source: Tv9 Kannada

ಬಾಗಲಕೋಟೆ, ಜೂನ್​​ 04: ಇಲ್ಲಿನ ನವನಗರ ಯುನಿಟ್ ಎರಡರ ಸೆಕ್ಟರ್ ನಂಬರ್​​ 10ರಲ್ಲಿ ಕೋಟ್ಯಾಂತರ ರೂಪಾಯಿ ಹಣ ವೆಚ್ಚ ಮಾಡಿ ನಿರ್ಮಿಸಲಾಗಿರುವ ಸರಕಾರಿ ನರ್ಸರಿ ಶಾಲೆಯ ಕಟ್ಟಡ ಭೂತ ಬಂಗಲೆಯಂತಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಆವರಣದ ಗೇಟ್​​ಗೆ ಕನಿಷ್ಠ ಬೀಗವೂ ಇಲ್ಲದ ಕಾರಣ ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಎಂಬಂತಾಗಿದೆ. ಕಿಟಕಿಗಳ ಗಾಜುಗಳು ಚೂರಾಗಿದ್ದರೆ, ಕೊಠಡಿಗಳ ಬಾಗಿಲು ಮುರಿದಿವೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದನ್ನು ನಿರ್ವಹಣೆ ಮಾಡಬೇಕಾದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಣ್ಮುಚ್ಚಿ ಕುಳಿತಿರುವ ಬಗ್ಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.

ಕಟ್ಟಡದ ಬಹುತೇಕ ಭಾಗಗಳು ಧ್ವಂಸ

ಆಲಮಟ್ಟಿ ಜಲಾಶಯದಿಂದಾಗಿ ಬಾಗಲಕೋಟೆ ನಗರದ ಬಹುತೇಕ ಪ್ರದೇಶಗಳು ಮುಳುಗಿದ ಬಳಿಕ ಅಲ್ಲಿನ ಸಂತ್ರಸ್ತರಿಗೆ ಸೂರು, ಶಾಲೆ ಸರಕಾರಿ ಕಚೇರಿ ಎಲ್ಲವನ್ನೂ ನವನಗರ ಎಂಬ ಹೊಸ ಸ್ಥಳ ನಿರ್ಮಾಣ ಮಾಡಿ ಸ್ಥಳಾಂತರ‌ ಮಾಡಲಾಗಿದೆ. ಆದರೆ ಯುನಿಟ್ ಎರಡರಲ್ಲಿನ ಕೆಲ ಸರಕಾರಿ ಕಟ್ಟಡಗಳು ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿಗಿದ್ದು, ಅದಕ್ಕೆ ಜ್ವಲಂತ ಸಾಕ್ಷಿ ಎಂಬಂತಿದೆ ಈ ನರ್ಸರಿ ಶಾಲೆಯ ಕಟ್ಟಡ. ದುರಂತ ಅಂದರೆ ಮಕ್ಕಳ ಶಿಕ್ಷಣಕ್ಕಾಗಿ ನಿರ್ಮಿಸಿದ ಈ ಕಟ್ಟಡದಲ್ಲಿ ಒಂದೇ ಒಂದು ದಿನ ಶಾಲೆ ನಡೆದಿಲ್ಲ‌. ಬಳಕೆಗೂ ಮುನ್ನವೇ ಕಟ್ಟಡದ ಬಹುತೇಕ ಭಾಗಗಳು ಧ್ವಂಸಗೊಂಡಿದ್ದು, ಕಟ್ಟಡದ ಉದ್ದೇಶವೇ ಇದನ್ನು ನಿರ್ಮಿಸಿದವರಿಗೆ ಮರೆತಂದಿದೆ.

ಇದನ್ನೂ ಓದಿ: ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ!

ಅಧಿಕಾರಿಗಳು ಹೇಳೋದೇನು?

ಇಷ್ಟೆಲ್ಲ ಆದರೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಮಾತ್ರ ಕನಿಷ್ಠ ಇತ್ತ ತಿರುಗಿಯೂ ನೋಡ್ತಿಲ್ಲ. ಹೀಗಾಗಿ ಸಾರ್ವಜನಿಕರ ತೆರಿಗೆ ಹಣ ಇಲ್ಲಿ ಮಣ್ಣು ಪಾಲಾಗಿದೆ. ಇನ್ನು ಈ ಬಗ್ಗೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳನ್ನು ಕೇಳಿದರೆ, ನಾವು ಆವರಣಕ್ಕೆ ಬೀಗ ಹಾಕಿದ್ದೆವು.  ಗೇಟ್ ಸರಿಪಡಿಸಿದ್ದೆವು. ಜೊತೆಗೆ ಸಿಸಿ ಕ್ಯಾಮರಾಗಳನ್ನು ಕೂಡ ಅಳವಡಿಸಿದ್ದೆವು. ಆದರೆ ಕಿಡಿಕೇಡಿಗಳು ಎಲ್ಲವನ್ನೂ ಜಖಂ ಮಾಡಿದ್ದಾರೆ ಎನ್ನುತ್ತಿದ್ದಾರೆ. ಅಲ್ಲದೆ ಸದ್ಯ ಈ ಕಟ್ಟಡವನ್ನು ಬಾಗಲಕೋಟೆ ಮೆಡಿಕಲ್ ಕಾಲೇಜಿಗೆ ಹಸ್ತಾಂತರ ಮಾಡಿದ್ದೇವೆ. ಮೆಡಿಕಲ್ ಕಾಲೇಜಿನಿಂದ ಇದು ಹುಡುಗರ ಹಾಸ್ಟೆಲ್ ಆಗಿ ಬದಲಾಗಲಿದೆ. ಈಗ ಅವರೇ ಇದರ ದುರಸ್ತಿ ಮಾಡಲಿದ್ದಾರೆ ಎಂದು ಹೇಳಿ ನುಣುಚಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಜ್ಯಾದ್ಯಂತ ವಾಯು ಗುಣಮಟ್ಟ ಸುಧಾರಣೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ನಿರಾಳ ವಾತಾವರಣ – Kannada News

ಬೆಂಗಳೂರು, ಜೂ.4: ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದಾಗಿ ಇಂದು ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟವು ‘ಉತ್ತಮ’ (Good) ಹಾಗೂ ‘ಸಾಧಾರಣ’ (Moderate) ಮಟ್ಟದಲ್ಲಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ವರದಿ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಸರಾಸರಿ AQI 46 ರಿಂದ 65ರ ಆಸುಪಾಸಿನಲ್ಲಿದೆ. ಮಳೆಯ ಸಿಂಚನ ಮತ್ತು ತಂಗಾಳಿಯ ಕಾರಣದಿಂದಾಗಿ ಧೂಳಿನ ಕಣಗಳು ನೆಲಕಚ್ಚಿದ್ದು, ಸಾರ್ವಜನಿಕರು ನಿರಾಳವಾಗಿ ಉಸಿರಾಡುವಂತಾಗಿದೆ.

ಮಂಗಳೂರು, ಮಡಿಕೇರಿ ಮತ್ತು ಹಾಸನ ಜಿಲ್ಲೆಗಳಲ್ಲಿ ನಿರಂತರವಾಗಿ ಮೋಡ ಕವಿದ ವಾತಾವರಣ ಮತ್ತು ಮಳೆಯಾಗುತ್ತಿರುವುದರಿಂದ ಇಲ್ಲಿನ ಗಾಳಿ ಸಂಪೂರ್ಣವಾಗಿ ಶುದ್ಧವಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇಂದು ಸರಾಸರಿ AQI 30 ರಿಂದ 45ರ ಒಳಗಿದ್ದು, ಅತ್ಯುತ್ತಮ ಶ್ರೇಣಿಯಲ್ಲಿದೆ. ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಒಣ ಹವೆ ಮತ್ತು ಬಿಸಿಲು ಹೆಚ್ಚಾಗಿದ್ದರೂ, ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಇಲ್ಲಿನ ಇಂದಿನ ಸರಾಸರಿ AQI 55 ರಿಂದ 75ರ ಆಸುಪಾಸಿನಲ್ಲಿದ್ದು, ‘ಸಾಧಾರಣ’ಮಟ್ಟವನ್ನು ಕಾಯ್ದುಕೊಂಡಿದೆ.

ಉತ್ತರ ಕರ್ನಾಟಕದಲ್ಲಿ ವಾಯು ಗುಣಮಟ್ಟವು ನಿಯಂತ್ರಣದಲ್ಲಿದೆ (ಸಾಧಾರಣ ಮಟ್ಟ). ಹಾಗಾಗಿ ಸಾರ್ವಜನಿಕರು ಧೈರ್ಯವಾಗಿ ಹೊರಾಂಗಣ ಚಟುವಟಿಕೆಗಳನ್ನು ನಡೆಸಬಹುದು. ಆದರೆ, ಶ್ವಾಸಕೋಶದ ತೊಂದರೆ ಅಥವಾ ಅಸ್ತಮಾ ಇರುವಂತಹ ಸೂಕ್ಷ್ಮ ಆರೋಗ್ಯದ ವ್ಯಕ್ತಿಗಳು ಮಧ್ಯಾಹ್ನದ ತೀವ್ರ ಬಿಸಿಲು ಮತ್ತು ಧೂಳಿನ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸುವುದು ಒಳಿತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ!

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Weather Report: ಕರಾವಳಿ-ಮಲೆನಾಡಿಗೆ ಮಳೆ ಸಿಂಚನ, ಉತ್ತರ ಕರ್ನಾಟಕಕ್ಕೆ ಸೂರ್ಯನ ತಾಪ! – Kannada News

ಬೆಂಗಳೂರು, ಜೂ.4:ಕರಾವಳಿಯಿಂದ ಬಯಲು ಸೀಮೆಯವರೆಗೆ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ಬಿಗುವಿನ ವಾತಾವರಣಕ್ಕೆ ಬ್ರೇಕ್ ಬೀಳುವ ಸಮಯ ಬಂದಿದೆ. ರಾಜ್ಯದಲ್ಲಿ ವರುಣದೇವ ಅಬ್ಬರ ಹೆಚ್ಚಾಗಲಿದೆ. ಇಂದು ಮಧ್ಯಾಹ್ನದ ನಂತರ ಕರ್ನಾಟಕದಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ (Heavy Rain Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಣಗಿದ ಭೂಮಿಯನ್ನು ಮತ್ತೆ ತಂಪಾಗಿಸಲಿದೆ.

ಇಂದು ಬೆಳಗಿನ ಜಾವದಿಂದಲೇ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಶೇ. 90 ರಷ್ಟು ತೇವಾಂಶ ದಾಖಲಾಗಿದ್ದು, ವಾತಾವರಣದಲ್ಲಿ ಗರಿಷ್ಠ ತಂಪಾದ ಅನುಭವವಾಗುತ್ತಿದೆ. ನೈಋತ್ಯ ದಿಕ್ಕಿನಿಂದ ಬೀಸುತ್ತಿರುವ ತಂಗಾಳಿಯು ಮಧ್ಯಾಹ್ನದ ವೇಳೆಗೆ ತೀವ್ರಗೊಳ್ಳಲಿದ್ದು, ಪಶ್ಚಿಮ ದಿಕ್ಕಿನಿಂದ ಗಂಟೆಗೆ 14 ಮೈಲಿಗೂ ಅಧಿಕ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಇದು ಮುಂಗಾರಿನ ದಟ್ಟ ಮೋಡಗಳು ರಾಜ್ಯದಲ್ಲಿ ಹೆಚ್ಚಿನ ಮಳೆಯ ನೀಡುವ ಸಾಧ್ಯತೆಗಳು ಇದೆ.

ಇನ್ನು ಬೆಳಿಗ್ಗೆಯಿಂದ ಸೂರ್ಯನ ಪ್ರಖರತೆ ಹೆಚ್ಚಾಗಲಿದ್ದು, ಗರಿಷ್ಠ ತಾಪಮಾನವು 31°C ಆಸುಪಾಸಿನಲ್ಲಿರಲಿದೆ. ಯುವಿ ಇಂಡೆಕ್ಸ್ 8 ರಷ್ಟಿರುವುದರಿಂದ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನ ಬೇಗೆ ಜೋರಾಗಿರಲಿದೆ. ಆದರೆ, ಸಂಜೆಯಾಗುತ್ತಿದ್ದಂತೆ ಹವಾಮಾನದಲ್ಲಿ ಬದಲಾವಣೆ ಕಂಡುಬರಲಿದೆ. ರಾಜ್ಯದಾದ್ಯಂತ ಶೇ. 55 ರಷ್ಟು ಮಳೆಯಾಗುವ ಭಾರಿ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ರಾತ್ರಿಯ ವೇಳೆಗೆ ತಾಪಮಾನವು 24°C ಗೆ ಇಳಿಕೆಯಾಗಲಿದ್ದು, ಮೋಡ ಕವಿದ ತಂಪಾದ ವಾತಾವರಣ ಇರಲಿದೆ.

ಮಂಗಳೂರಿನಲ್ಲಿ ಇಂದು ತೇವಾಂಶದ ಪ್ರಮಾಣ ಶೇ. 85 ಕ್ಕೂ ಅಧಿಕ ದಾಖಲಾಗಿದೆ. ಗರಿಷ್ಠ ತಾಪಮಾನ 32°C ಇರಲಿದ್ದು, ಕರಾವಳಿ ತೀರದಲ್ಲಿ ನೈಋತ್ಯ ದಿಕ್ಕಿನಿಂದ ಬಲವಾದ ಗಾಳಿ ಬೀಸುತ್ತಿದೆ. ಮಧ್ಯಾಹ್ನದ ನಂತರ ಮತ್ತು ಸಂಜೆ ವೇಳೆಗೆ ನಗರದ ಹಲವೆಡೆ ಗುಡುಗು ಸಹಿತ ಭರ್ಜರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಡಿಕೇರಿ ಸೇರಿದಂತೆ ಇಡೀ ಮಲೆನಾಡು ಭಾಗದಲ್ಲಿ ಇಂದು ಅತ್ಯಂತ ಆಹ್ಲಾದಕರ ಹಾಗೂ ತಂಪಾದ ವಾತಾವರಣವಿದೆ. ಇಲ್ಲಿನ ಗರಿಷ್ಠ ತಾಪಮಾನ 26°C ನಿಂದ 28°C ಆಸುಪಾಸಿನಲ್ಲಿದ್ದು, ಕನಿಷ್ಠ ತಾಪಮಾನ 19°C ಗೆ ಕುಸಿದಿದೆ. ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

ಹಾಸನ ಜಿಲ್ಲೆಯಲ್ಲಿ ಇಂದು ಮಿಶ್ರ ಹವಾಮಾನ ಇರಲಿದೆ. ಹಗಲಿನಲ್ಲಿ ಸ್ವಲ್ಪ ಬಿಸಿಲಿನ ವಾತಾವರಣವಿದ್ದರೂ, ಸಂಜೆಯ ವೇಳೆಗೆ ಹವಾಮಾನ ತಂಪಾಗಲಿದೆ. ಗರಿಷ್ಠ ತಾಪಮಾನ 30°C ಇರಲಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಹನಿಗಳು ಬೀಳುವ ಮೂಲಕ ಇಳೆಯನ್ನು ತಂಪಾಗಿಸಲಿವೆ. ಕರಾವಳಿ ಮತ್ತು ಮಲೆನಾಡಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ (ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು) ಬಿಸಿಲಿನ ಆರ್ಭಟ ಜೋರಾಗಿದೆ. ಇಲ್ಲಿ ಗರಿಷ್ಠ ತಾಪಮಾನ 36°C ಇಂದ 38°C ವರೆಗೆ ದಾಖಲಾಗುವ ಸಾಧ್ಯತೆ ಇದ್ದು, ಯುವಿ ಇಂಡೆಕ್ಸ್ ತೀವ್ರವಾಗಿದೆ. ಆದರೆ, ರಾತ್ರಿಯ ವೇಳೆಗೆ ಒಣ ಹವೆ ಕಡಿಮೆಯಾಗಿ ತಂಗಾಳಿ ಬೀಸುವ ನಿರೀಕ್ಷೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಮನಸ್ಸಿಗೆ ಏನನ್ನು ಅರ್ಥಮಾಡಿಸುವುದೂ ಕಷ್ಟ.. – Kannada News

ಮೇಷ ರಾಶಿ:

ನಿಮ್ಮ ವೈವಾಹಿಕ ಜೀವನದಲ್ಲಿ ಯಾವುದೇ ಅಡೆತಡೆಗಳು ಕಂಡುಬಂದರೆ, ಅದು ಕೊನೆಗೊಳ್ಳುತ್ತದೆ. ಬಂದ ಕಳಂಕವನ್ನು ಯಾವುದಾರೂ ರೀತಿಯಲ್ಲಿ ತೊಳೆಯುವ ಪ್ರಯತ್ನ ಮಾಡುವಿರಿ. ಕೆಲಸದಲ್ಲಿ ಒತ್ತಡ ತಕ್ಷಣ ಉಂಟಾಗಬಹುದು ಆದರೆ ನಿರ್ವಹಿಸಬಹುದಾದ ಮಟ್ಟದಲ್ಲಿದೆ. ಹೆಚ್ಚು ನಿರುಪಯುಕ್ತ ಮಾತುಗಳು ನಿಮ್ಮಿಂದ ಬರಬಹುದು. ಅನಿರೀಕ್ಷಿತ ಅಶುಭವಾರ್ತೆಯನ್ನು ನೀವು ಕೇಳಬೇಕಾದೀತು.‌ ತನ್ನವರ ಬಗ್ಗೆ ನಂಬಿಕೆ ಇರದು. ನಂಬಿಕೆಯಲ್ಲಿ ಪಕ್ವತೆ ಇರಲಿದೆ.

ವೃಷಭ ರಾಶಿ:

ನಿಮ್ಮ ಮನಸ್ಸಿಗೆ ಅದು ಒಪ್ಪಿಗೆಯಾಗಲಿ. ಎಲ್ಲ ವಿಷಯಗಳಲ್ಲಿ ಸ್ಪಷ್ಟತೆಯೊಂದಿಗೆ ನಡೆದುಕೊಳ್ಳಿ. ಹಣಕಾಸಿನಲ್ಲಿ ಉತ್ತಮ ಸ್ಥಿತಿ ಕಾಣಬಹುದು. ಆದರೂ ಕೆಲವು ಕೆಲಸಗಳಲ್ಲಿ ವಿಳಂಬ ಸಂಭವಿಸಬಹುದು. ಉತ್ಸಾಹವಿಲ್ಲದಂತೆ ಇದ್ದರೂ ಕೆಲಸಗಳು ಒಂದರಹಿಂದೆ ಬರುತ್ತಲೇ ಇರುವುದು. ಹಿರಿಯರಿಂದ ಮಾರ್ಗದರ್ಶನ ಒಳಿತು. ಮಿತ್ರರೊಂದಿಗೆ ಮನೋರಂಜನೆಯ ಕಾಲ ಕಳೆಯಬಹುದು. ಸಣ್ಣ ವ್ಯಾಪಾರವು ಹೆಚ್ಚುವರಿಯಾಗಿ ಲಾಭವನ್ನು ಕೊಡುವುದು. ಉದ್ಯೋಗದ ಕನಸನ್ನು ಕಾಣುತ್ತಾ ಇರುವಿರಿ. ಉತ್ತಮ‌ ವಸ್ತುಗಳ ಖರೀದಿ ಮಾಡುವಿರಿ.

ಮಿಥುನ ರಾಶಿ:

ಸಾಲ ಕೊಟ್ಟವರು ಕಟುವಾಗಿ ಮಾತನಾಡಬಹುದು. ಪ್ರಾಮಾಣಿಕ ಪ್ರಯತ್ನ ಯಶಸ್ಸಿಗೆ ದಾರಿ ಮಾಡಿಕೊಡಲಿದೆ. ಲಘು ಆರೋಗ್ಯ ಸಮಸ್ಯೆ ತೊಂದರೆ ಮಾಡಬಹುದು. ಮನೆಯಲ್ಲಿನ ಜವಾಬ್ದಾರಿಗಳು ಹೆಚ್ಚಾಗಲಿವೆ. ಹಣಕಾಸಿನಲ್ಲಿ ನಿರ್ವಹಣಾ ಜಾಣ್ಮೆ ಅಗತ್ಯ. ಸಹೋದರರೊಂದಿಗೆ ಮಾತುಕತೆ ಎಚ್ಚರಿಕೆಯಿಂದ ಇರಲಿ. ರಾಜಕೀಯದಲ್ಲಿ ಕೆಲಸ ಮಾಡುವ ಸ್ಥಳೀಯರು ಎಚ್ಚರಿಕೆಯಿಂದ ಇರಬೇಕು. ಭವಿಷ್ಯದ ಬಗ್ಗೆ ನಿಮಗೆ ಏನೇನೋ ಆಲೋಚನೆಗಳನ್ನು ಇಟ್ಟುಕೊಳ್ಳುವಿರಿ.

ಕರ್ಕಾಟಕ ರಾಶಿ:

ಕರ್ಮದ ನಡುವೆ ಸಮತೋಲನ ಅಗತ್ಯ. ಕೆಲಸದಲ್ಲಿ ಹೊಸ ಅವಕಾಶಗಳು ಬರಬಹುದು. ಧೈರ್ಯದಿಂದ ಮಾತಾಡುವುದು ಉತ್ತಮ. ಸುಳ್ಳು ಸುದ್ದಿಗಳಿಗೆ ಮಾರುಹೋಗುವಿರಿ.ತ ದೂರದ ಸಂಬಂಧಿಕರಿಂದ ಒಳ್ಳೆಯ ಸುದ್ದಿ. ಹಣಕಾಸಿನಲ್ಲಿ ತಾತ್ಕಾಲಿಕ ಒತ್ತಡ. ಮಕ್ಕಳು ನಿಮ್ಮನ್ನು ಪ್ರೇರೇಪಿಸುತ್ತಾರೆ. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ವ್ಯವಸ್ಥೆಯ ಕಾರಣಕ್ಕೆ ವ್ಯಕ್ತಿಯನ್ನು ದ್ವೇಷಿಸುವಿರಿ.

ಸಿಂಹ ರಾಶಿ :

ಹಳೆಯ ಸಮಸ್ಯೆ ಮತ್ತೆ ಎದುರಾಗಬಹುದು. ಧೈರ್ಯದಿಂದ ನಿಭಾಯಿಸಿದರೆ ಪ್ರಯೋಜನ ಸ್ನೇಹಿತರ ಸಲಹೆ ಉಪಯುಕ್ತ. ಮಾತಿನ ಸೌಮ್ಯತೆಯು ನಿಮಗೆ ಗೌರವವನ್ನು ಕೊಡುವುದು. ನಿಮಗೆ ಹಿಡಿಸದ ವ್ಯವಹಾರವನ್ನು ಕಠೋರವಾಗಿ ಠೀಕಿಸುವಿರಿ. ವೈವಾಹಿಕ ಜೀವನವನ್ನು ನಡೆಸಲು ನಿಮಗೆ ಕಷ್ಟ ಎನಿಸಬಹುದು. ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿ, ಇನ್ನೊಬ್ಬರಿಗೆ ಸಹಾಯ ಮಾಡುವಿರಿ. ಯಾವುದೂ ಅಂತ್ಯವಲ್ಲ.‌

ಕನ್ಯಾ ರಾಶಿ:

ನಿಮ್ಮ ಬಾಯಿಯ ಚಪಲಕ್ಕೆ ಅಸಂಬದ್ಧವನ್ನು ಹೇಳುವಿರಿ. ಸದಾ ನಗುಮುಖದಿಂದ ಇರಿ. ಮನಸ್ತಾಪವು ಆಸ್ತಿ ವಿಭಜನೆಯವರೆಗೆ ಹೋಗಬಹುದು. ಯೋಜನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವುದು ಬಗೆಯನ್ನು ಚಿಂತಿಸಿ. ಸಹೋದ್ಯೋಗಿಗಳಿಂದ ಮೆಚ್ಚುಗೆ. ನಿಮ್ಮ ಅಂತಸ್ತಿನ ಬಗ್ಗೆ ನಿಮಗೆ ಬಿಮ್ಮು ಇರುವುದು. ನೀವು ಹೂಡಿಕೆ ವಿಷಯಗಳಲ್ಲಿ ಉತ್ತಮ ಆದಾಯವನ್ನು ಪಡೆಯುವ ಸಾಧ್ಯತೆಯಿದೆ. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ.

ತುಲಾ ರಾಶಿ:

ಊಹೆಗೂ ನಿಲುಕದ ವಿಷಯವು ನಿಮ್ಮೆದುರು ಪ್ರಸ್ತಾಪಗೊಂಡೀತು. ನಡವಳಿಕೆಯಲ್ಲಿ ಶಿಸ್ತು ಅಗತ್ಯ. ಹಣಕಾಸಿನಲ್ಲಿ ಸ್ವಲ್ಪ ಚಿಂತೆಗಳು ಎದುರಾಗಬಹುದು. ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಧೈರ್ಯದಿಂದ ನಿರ್ಧಾರ ಕೈಗೊಳ್ಳಿ. ಕೆಲವರಿಂದ ಅನಿರೀಕ್ಷಿತ ಸಹಾಯ ದೊರೆಯುತ್ತದೆ. ಯಾವುದೇ ವಿಚಾರಕ್ಕೆ ಮಿತವಾಗಿ ಮಾತನಾಡುವುದು ಒಳಿತು. ಕೆಲವರು ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕೆಲಸವನ್ನು ಮಾಡುವಿರಿ.

ವೃಶ್ಚಿಕ ರಾಶಿ:

ನಿಮ್ಮ ಆಲಸ್ಯ ಕ್ಷಣಾರ್ಧದಲ್ಲಿ ಮಾಯವಾಗುವುದು. ಮಾಜಿ ಪ್ರೇಯಸಿ ಕಂಡಳೆಂದು ಹಿಗ್ಗುವುದು ಬೇಡ. ಕೆಲಸದಲ್ಲಿ ನಿಖರತೆ ಅಗತ್ಯ. ಇಂದಿನ ಆದಾಯವನ್ನು ಹೆಚ್ಚು ಮಾಡಿಕೊಳ್ಳಬಹುದು. ಹಣಕಾಸಿನಲ್ಲಿ ಲಘು ವ್ಯತ್ಯಾಸವು ಚಿಂತೆಗಿಳಿಸುವುದು. ಪ್ರಬಲ ವೈರಿಗಳನ್ನು ನೀವು ಮೆಟ್ಟಿನಿಲ್ಲುವ ಛಾತಿ ಇರಲಿದೆ. ಹೂಡಿಕೆಯ ಬಗ್ಗೆ ನಿಮ್ಮ ಸ್ನೇಹಿತರು ನಿಮ್ಮ ಜೊತೆ ಮಾತನಾಡಬಹುದು. ಮಕ್ಕಳಿಗೆ ಮನೆಯ ಜವಾಬ್ದಾರಿಯನ್ನು ಕೊಟ್ಟು ನಿಶ್ಚಿಂತರಾಗಲು ಇಷ್ಟಪಡುವಿರಿ.

ಧನು ರಾಶಿ:

ಸಮಯವನ್ನು ಬಳಸಿಕೊಳ್ಳುವುದನ್ನು ಕಲಿಯುವಿರಿ. ನಿಮ್ಮ ಹೆಚ್ಚಿನ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ, ಏಕೆಂದರೆ ಅನಂತರ ಆರೋಗ್ಯ ಸ್ವಲ್ಪ ಹದಗೆಡಬಹುದು. ಕುಟುಂಬ ಸಂಬಂಧಿ ವಿಚಾರದಲ್ಲಿ ಕೆಲಚರ್ಚೆಗಳು ನಡೆಯಬಹುದು. ಸೌಕರ್ಯಗಳಿಗಾಗಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಿಕೊಳ್ಳುವಿರಿ. ನೂತನ ವಸ್ತ್ರ, ವಸ್ತುಗಳ ಖರೀದಿಗೆ ಹೆಚ್ಚು ಸಮಯವನ್ನು ಕೊಡಬೇಕಾದೀತು. ಸಂಗಾತಿಯ ಮನೋಭಾವವನ್ನು ಅರ್ಥವಾಗುವುದು ಕಷ್ಟವಾದೀತು.

ಮಕರ ರಾಶಿ :

ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ ಎಂದು ಕಾಯಬೇಡಿ. ಆತ್ಮವಿಶ್ವಾಸ ಕಾಪಾಡಿಕೊಳ್ಳಿ. ನಿಮ್ಮ ಲೆಕ್ಕಾಚಾರವನ್ನು ವ್ಯತ್ಯಾಸ ಆಗಬಹುದು. ಕುಟುಂಬದ ಸದಸ್ಯರೊಂದಿಗೆ ಸಂತೋಷಕರ ಕ್ಷಣಗಳು ಕಳೆಯಬಹುದು. ಮೇಲಧಿಕಾರಿಗಳ ಅಸಮಾಧಾನವನ್ನು ದೂರ ಮಾಡಿ. ಹಣಕಾಸು ಯೋಜನೆ ಹೊಸ ರೂಪ ಪಡೆಯಲಿದೆ. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು.

ಕುಂಭ ರಾಶಿ :

ಇಂದು ನಿಮ್ಮ ಸಾಮರ್ಥ್ಯವನ್ನು ತೋರಿಸುತ್ತದೆ. ಅಹಂಕಾರದಿಂದ ಬೀಗುವುದು ಬೇಡ. ಇತರರು ಅಚ್ಚರಿ ಪಡುವಂತೆ ಮಾಡುತ್ತದೆ. ನಿಮ್ಮ ಉತ್ಸಾಹ ಉಳಿದಂತೆ ನೋಡಿಕೊಳ್ಳಿ. ಯತ್ನಿಸಿದ ಕೆಲಸಗಳಲ್ಲಿ ಹೆಚ್ಚಿನ ಪ್ರಯೋಜನ ದೊರೆಯಬಹುದು. ಸ್ನೇಹಿತರಿಂದ ಸಹಾಯ ಲಭ್ಯವಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಗಮನ ಸೆಳೆಯುವಿರಿ. ವೈಯಕ್ತಿಕ ವಹಿವಾಟಿನ ವಿಷಯದಲ್ಲಿ ನಿಮಗೆ ಸ್ಪಷ್ಟತೆ ಇರಲಿ.

ಮೀನ ರಾಶಿ :

ನಿಮ್ಮ ಸಹನೆಯನ್ನೇ ಆಯುಧವಾಗಿರಿಸಿಕೊಳ್ಳಿ. ಸಮಾರಂಭಗಳಿಗೆ ತೆರಳಲಿದ್ದೀರಿ. ಸಿಟ್ಟಿನಿಂದ ಇನ್ನಷ್ಟು ಪರಿಹಾಸ್ಯಕ್ಕೆ ಒಳಗಾಗಬೇಡಿ. ಮುಂದಾಳುತ್ವ ವಹಿಸಿದರೆ, ನೀವೊಬ್ಬರೇ ಕೊನೆಗೆ ಉಳಿಯುವುದು. ತಾತ್ಕಾಲಿಕ ತೀರ್ಮಾನಗಳು ದೀರ್ಘಾವಧಿಯಲ್ಲಿ ಲಾಭಕಾರಿಯಾಗಬಹುದು. ನವೀನ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ಬೇಸರಗೊಳ್ಳದೇ ಖುಷಿಯಿಂದ ಮಾಡಿ. ನಿಮ್ಮ ಜವಾಬ್ದಾರಿಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಉತ್ತರಾಷಾಢಾ, ಯೋಗ : ಶುಭ, ಕರಣ : ಬಾಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:59 – 15:36, ಯಮಗಂಡ ಕಾಲ 05:56 – 07:33, ಗುಳಿಕ ಕಾಲ 09:09 – 10:46

– ಲೋಹಿತ್ ಹೆಬ್ಬಾರ್-8762924271 (what’s app only)

Source link

ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ – Kannada News

ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ (Fire Accident) 21 ಜನರು ಸಾವನ್ನಪ್ಪಿದ ನಂತರ ಲೆಫ್ಟಿನೆಂಟ್ ಗವರ್ನರ್ ಇಂದು ತುರ್ತು ಸಭೆ ಕರೆದಿದ್ದರು. ಈ ವೇಳೆ ಅವರು ದೆಹಲಿಯಲ್ಲಿ ಒಂದು ತಿಂಗಳ ವಿಶೇಷ ಅಗ್ನಿ ಸುರಕ್ಷತಾ ಅಭಿಯಾನವನ್ನು ನಡೆಸಲು ಆದೇಶಿಸಿದ್ದಾರೆ. ಇದರಲ್ಲಿ ಎಲ್ಲಾ ಹೋಟೆಲ್‌ಗಳು, ಅತಿಥಿ ಗೃಹಗಳು ಮತ್ತು ಸೂಕ್ಷ್ಮ ಕಟ್ಟಡಗಳ ತಪಾಸಣೆ ಸೇರಿದೆ. ಈ ಬೆಂಕಿ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ. ಪರಾರಿಯಾಗಿದ್ದ ಹೋಟೆಲ್ ಮಾಲೀಕರನ್ನು ಕೂಡ ಬಂಧಿಸಲಾಗಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರು ದೆಹಲಿ ಸರ್ಕಾರ ಮತ್ತು ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ, ಅಗ್ನಿಶಾಮಕ ನಿಯಮಗಳನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಸೀಲಿಂಗ್‌ನಂತಹ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದರು. ದೆಹಲಿಯ ಬೆಂಕಿ ದುರಂತದ ನಂತರ, ದೆಹಲಿ ಗೃಹ ಸಚಿವ ಆಶಿಶ್ ಸೂದ್ ಅವರೊಂದಿಗೆ ಲೆಫ್ಟಿನೆಂಟ್ ಗವರ್ನರ್ ತರಣ್‌ಜಿತ್ ಸಿಂಗ್ ಸಂಧು ಈ ತುರ್ತು ಪರಿಶೀಲನಾ ಸಭೆಯನ್ನು ನಡೆಸಿದರು. ಇದರಲ್ಲಿ ಅಗ್ನಿಶಾಮಕ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ.

ಇದನ್ನೂ ಓದಿ: ದೆಹಲಿಯ ಬೆಂಕಿ ದುರಂತದಲ್ಲಿ ಬಾಂಗ್ಲಾ, ಅಫ್ಘಾನ್, ಆಫ್ರಿಕಾದ ಪ್ರವಾಸಿಗರೂ ಸಾವು; ಹೋಟೆಲ್ ಮಾಲೀಕ ಪರಾರಿ

ಹೋಟೆಲ್ ಮಾಲೀಕ ಬಂಧನ:

ದುರಂತ ಸಂಭವಿಸಿ ಎಫ್‌ಐಆರ್ (FIR) ದಾಖಲಾಗುತ್ತಿದ್ದಂತೆ ಹೋಟೆಲ್ ಮಾಲೀಕ ಲವಕೇಶ್ ಬಜಾಜ್ ತಲೆಮರೆಸಿಕೊಂಡಿದ್ದರು. ಅವರು ದೇಶ ಬಿಟ್ಟು ಓಡಿಹೋಗದಂತೆ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ತೀವ್ರ ಶೋಧದ ಬಳಿಕ ಕೊನೆಗೂ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

5 ಅಂತಸ್ತಿನ ಈ ಬೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ (B&B) ಕಟ್ಟಡದಲ್ಲಿ ಯಾವುದೇ ಅಗ್ನಿಶಾಮಕ ಮುನ್ನೆಚ್ಚರಿಕಾ ಕ್ರಮಗಳು ಅಥವಾ ಕಡ್ಡಾಯ ಸುರಕ್ಷತಾ ಪರವಾನಗಿಗಳು ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ನಿರ್ಲಕ್ಷ್ಯದ ಮೂಲಕ ಸಾವು ಉಂಟುಮಾಡಿದ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮೃತಪಟ್ಟ 21 ಜನರಲ್ಲಿ 18 ಮಂದಿ ನೈಜೀರಿಯಾ, ಮೊಜಾಂಬಿಕ್, ಬಾಂಗ್ಲಾದೇಶ, ಸೊಮಾಲಿಯಾ, ಲೈಬೀರಿಯಾ ಮತ್ತು ಅಫ್ಘಾನಿಸ್ತಾನದ ಪ್ರಜೆಗಳಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೇಳೆ 10 ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆರ್​ಸಿಬಿ ಹ್ಯಾಟ್ರಿಕ್ ಕಪ್ ಗೆಲ್ಲುವುದು ಕಷ್ಟಕರ..! ಇದು ಐಪಿಎಲ್ ಇತಿಹಾಸ ನುಡಿದ ಭವಿಷ್ಯ – Kannada News

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಐಪಿಎಲ್ (IPL) ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತ ಎರಡು ಪ್ರಶಸ್ತಿಗಳನ್ನು ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಒಂದು ಟ್ರೋಫಿಗಾಗಿ ಬರೋಬ್ಬರಿ 17 ವರ್ಷಗಳ ಕಾಲ ಕಾದಿದ್ದ ಆರ್​ಸಿಬಿ, ಎರಡನೇ ಟ್ರೋಫಿಯನ್ನು ಕೇವಲ ಒಂದು ವರ್ಷದಲ್ಲೇ ಗೆದ್ದುಕೊಂಡಿತು. ಇದೀಗ ಆರ್​ಸಿಬಿ ಸತತ ಮೂರನೇ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ತಂಡದ ಆಟಗಾರರು ಕೂಡ ಇದೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಆರ್​ಸಿಬಿ ತನ್ನ ಮೂರನೇ ಟ್ರೋಫಿಗಾಗಿ ಸಾಕಷ್ಟು ಸಮಯ ಕಾಯಬೇಕಾಗಬಹುದು ಎಂದು ಐಪಿಎಲ್ ಇತಿಹಾಸ ಭವಿಷ್ಯ ನುಡಿದಿದೆ.

ಸತತ 2 ಪ್ರಶಸ್ತಿ ಗೆದ್ದಿದ್ದ ಸಿಎಸ್​ಕೆ, ಮುಂಬೈ

ಮೇಲೆ ಹೇಳಿದಂತೆ ಆರ್‌ಸಿಬಿಗಿಂತ ಮೊದಲು, ಕೇವಲ ಎರಡು ತಂಡಗಳು ಮಾತ್ರ ಸತತ ಎರಡು ಬಾರಿ ಐಪಿಎಲ್ ಗೆದ್ದಿವೆ. ಚೆನ್ನೈ ಸೂಪರ್ ಕಿಂಗ್ಸ್ 2010 ಮತ್ತು 2011 ರಲ್ಲಿ ಈ ಸಾಧನೆ ಮಾಡಿದ್ದರೆ, ಮುಂಬೈ ಇಂಡಿಯನ್ಸ್ 2019 ಮತ್ತು 2020 ರಲ್ಲಿ ಎರಡು ಬಾರಿ ಐಪಿಎಲ್ ಗೆದ್ದಿತ್ತು. ಈ ಎರಡು ಪ್ರಶಸ್ತಿ ಗೆಲುವಿನ ನಂತರ, ಚೆನ್ನೈ ಮತ್ತು ಮುಂಬೈನ ಮುಂದಿನ ಟ್ರೋಫಿಯ ಗೆಲುವಿಗಾಗಿ ಬಹಳ ವರ್ಷ ಕಾಯಬೇಕಾಯಿತು.

ಸಿಎಸ್​ಕೆಗೆ 7 ವರ್ಷ, ಮುಂಬೈಗೆ?

2010 ಮತ್ತು 2011 ರಲ್ಲಿ ಸತತ ಎರಡು ಪ್ರಶಸ್ತಿಗಳನ್ನು ಗೆದ್ದಿದ್ದ ಸಿಎಸ್​ಕೆ ತನ್ನ ಮುಂದಿನ ಟ್ರೋಫಿಗಾಗಿ 2018 ರವರೆಗೆ ಕಾಯಬೇಕಾಯಿತು. ಅಂದರೆ ಸಿಎಸ್​ಕೆ ತನ್ನ ಮುಂದಿನ ಪ್ರಶಸ್ತಿಗಾಗಿ ಏಳು ವರ್ಷ ಕಾಯಬೇಕಾಯಿತು. ಇತ್ತ 2019 ಮತ್ತು 2020 ರಲ್ಲಿ ಎರಡು ಬಾರಿ ಐಪಿಎಲ್ ಗೆದ್ದಿದ್ದ ಮುಂಬೈ, ತನ್ನ ಮುಂದಿನ ಪ್ರಶಸ್ತಿಗಾಗಿ ಈಗಲೂ ಕಾಯುತ್ತಲೇ ಇದೆ. ಅಂದರೆ ಮುಂಬೈ ಕೂಡ ಆರು ವರ್ಷಗಳಿಂದ ಪ್ರಶಸ್ತಿಯನ್ನು ಗೆದ್ದಿಲ್ಲ.

IPL 2026: ಅತ್ಯಧಿಕ ವೀಕ್ಷಣೆ ಕಂಡ 7 ಪಂದ್ಯಗಳಲ್ಲಿ ಆರ್​ಸಿಬಿಯದ್ದೇ 6 ಪಂದ್ಯಗಳು ..!

ಹ್ಯಾಟ್ರಿಕ್ ಕಪ್ ಗೆಲ್ಲುತ್ತಾ ಆರ್​ಸಿಬಿ?

ಇವು ಕೇವಲ ಅಂಕಿಅಂಶಗಳಾಗಿದ್ದು, ಇದು ಸಂಭವಿಸುವ ಸಾಧ್ಯತೆ ಎಷ್ಟರ ಮಟ್ಟಿಗೆ ಇದೆ ಎಂದು ಹೇಳಲು ಸಾಧ್ಯವಿಲ್ಲ, ಆದರೆ ಸತತ ಎರಡು ಪ್ರಶಸ್ತಿಗಳನ್ನು ಗೆದ್ದ ನಂತರದ ಮಾದರಿಯನ್ನು ನೋಡಿದರೆ, ಆರ್‌ಸಿಬಿ ತನ್ನ ಮೂರನೇ ಪ್ರಶಸ್ತಿಗಾಗಿ ಸಾಕಷ್ಟು ಸಮಯ ಕಾಯಬೇಕಾಗಬಹುದು. ಆರ್‌ಸಿಬಿ ಈ ಹಿಂದೆ 2009, 2011 ಮತ್ತು 2016 ರಲ್ಲಿ ಐಪಿಎಲ್ ಫೈನಲ್‌ನಲ್ಲಿ ಆಡಿತ್ತು, ಆದರೆ ಆ ಎಲ್ಲಾ ಪಂದ್ಯಗಳಲ್ಲಿ ಸೋತಿತ್ತು. 2025 ರಲ್ಲಿ ನಾಲ್ಕನೇ ಬಾರಿಗೆ ಫೈನಲ್ ತಲುಪಿ ಗೆಲುವು ಸಾಧಿಸಿತ್ತು. ಇದೀಗ ಈ ಆವೃತ್ತಿಯಲ್ಲೂ ತಂಡವು ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲು ಯಶಸ್ವಿಯಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link