Category Archives: Blog

Your blog category

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ – Kannada News | Kadampuliyur Immolation: Farmer Rajendran Killed in Brutal Petrol Attack; Illicit Affair Link

ತಮಿಳುನಾಡು, ಜ.31: ಕಡಲೂರು (Cuddalore) ಜಿಲ್ಲೆಯಲ್ಲಿ ನಡೆದ ಈ ಘಟನೆ ಅತ್ಯಂತ ಭೀಕರವಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಡಲೂರು ಜಿಲ್ಲೆಯ ಪನ್ರುಟಿ (Panruti) ಸಮೀಪದ ಕಡಂಪುಲಿಯೂರು (Kadampuliyur) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಲಿಗಂಪಟ್ಟು ಗ್ರಾಮದ ನಿವಾಸಿ ಮತ್ತು ರೈತ ರಾಜೇಂದ್ರನ್ (70) ಸಾವನ್ನಪ್ಪಿದ್ದಾರೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಎಂಬುವವರ ಜೊತೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ವೇಳೆ ಒಂದು ವ್ಯಾನ್‌ನಲ್ಲಿ ಬಂದ ದುಷ್ಕರ್ಮಿಗಳ ತಂಡ ಇವರನ್ನು ಅಡ್ಡಗಟ್ಟಿದ್ದಾರೆ. ಆ ಸಮಯದಲ್ಲಿ ಹೆದರಿದ ಕಂದನ್ ಸ್ಥಳದಿಂದ ಓಡಿಹೋಗಿದ್ದಾರೆ. ಒಂಟಿಯಾದ ರಾಜೇಂದ್ರನ್ ಅವರ ಮೇಲೆ ದಾಳಿ ಮಾಡಿದ ಈ ಅಪರಿಚಿತ ವ್ಯಕ್ತಿಗಳು ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ರಾಜೇಂದ್ರನ್ ಅವರು ಬೆಂಕಿಯ ಜ್ವಾಲೆಯಲ್ಲಿ ರಸ್ತೆಯಲ್ಲೇ ಓಡುತ್ತಾ ಸಹಾಯಕ್ಕಾಗಿ ಕಿರುಚುತ್ತಿದ್ದಾರೆ.

ಈ ಭೀಕರ ದೃಶ್ಯವು ಸಿಸಿಟಿವಿ ಕೆಮರಾಗಳಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ನಡುಗಿಸುವಂತಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದೊಂದು ಕೌಟುಂಬಿಕ ಕಲಹ ಅಥವಾ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಹತ್ಯೆ ಎಂದು ಹೇಳಲಾಗಿದೆ. ರಾಜೇಂದ್ರನ್ ಅವರ ಸೊಸೆಯೊಂದಿಗೆ ಮಣಿಕಂಠನ್ ಎಂಬ ವ್ಯಕ್ತಿ ಅಕ್ರಮ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಇದನ್ನು ರಾಜೇಂದ್ರನ್ ಅವರು ಬಲವಾಗಿ ವಿರೋಧಿಸಿದ್ದರು. ಇದೇ ದ್ವೇಷದಿಂದ ಮಣಿಕಂಠನ್ ಮತ್ತು ಅವನ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ರಾಜ್‌ಕೋಟ್ ಬಳಿ ಸೇತುವೆಯಿಂದ ಬಿದ್ದು ಹೊತ್ತಿ ಉರಿದ ಕಾರು; ಮೂವರು ಸಾವು

ಘಟನೆಯ ನಂತರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ನಾಲ್ವರು ಆರೋಪಿಗಳನ್ನು (ಮಣಿಕಂಠನ್ ಮತ್ತು ಅವನ ಸಹಚರರು ಹಾಗೂ ರಾಜೇಂದ್ರನ್ ಅವರ ಸೊಸೆ) ಬಂಧಿಸಿದ್ದಾರೆ.ರಾಜೇಂದ್ರನ್ ಅವರು ಸುಮಾರು 70% ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಕಿಲ್ಪಾಕ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ದುರದೃಷ್ಟವಶಾತ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಘಟನೆಯು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ (AIADMK) ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಬಂಧಿತ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅವರನ್ನು ಕಡಲೂರು ಕೇಂದ್ರ ಕಾರಾಗೃಹಕ್ಕೆ (Cuddalore Central Prison) ರವಾನಿಸಲಾಗಿದೆ. ಘಟನೆಯ ಭೀಕರತೆಯನ್ನು ಗಮನಿಸಿ ಪೊಲೀಸರು ಈ ಪ್ರಕರಣವನ್ನು ‘ಫಾಸ್ಟ್ ಟ್ರ್ಯಾಕ್’ ಕೋರ್ಟ್ ಮೂಲಕ ಶೀಘ್ರವಾಗಿ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:54 am, Sat, 31 January 26

Source link

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ – Kannada News | Suspicious Blast in Bidar’s Molkera Injures 5 Kids

ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ!

ಬೀದರ್, ಜನವರಿ 31: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ (Bidar) ಗ್ರಾಮದಲ್ಲಿ ಶುಕ್ರವಾರ ಬೆಳಂಬೆಳಿಗ್ಗೆ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗ್ರಾಮದಲ್ಲಿ ಆತಂಕ ಮೂಡಿದೆ. ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಗೆ ತೆರಳುತ್ತಿದ್ದ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದ್ರಾಬಾದ್ ಆಸ್ಪತ್ರೆಗೆ ಗಾಯಾಳುಗಳ ರವಾನೆ

ಸ್ಫೋಟದಲ್ಲಿಅನ್ವರ್ ‌ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದಂತೆ ಪರಿಜಾರ್(8), ಅಜೀಜ್(5), ಬುಶ್ರಾ(4)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ಪಡೆದ ತಕ್ಷಣ ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ (SOCO) ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿ ಪರಿಶೀಲನೆ ನಡೆಸಿಸಿದ್ದಾರೆ.

6 ತಿಂಗಳಲ್ಲಿ ಎರಡನೇ ಬಾರಿಗೆ ಸ್ಫೋಟ

ಕಳೆದ ಆರು ತಿಂಗಳ ಅವಧಿಯಲ್ಲಿ ಇದೇ ಗ್ರಾಮದಲ್ಲಿ ಇದು ಎರಡನೇ ಬಾರಿ ಸಂಭವಿಸಿರುವ ಸ್ಫೋಟವಾಗಿದೆ. ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳಿಂದ ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್ – Kannada News | T20 World Cup 2026: Tilak Varma, Washington Sundar’s recovery going as per plan

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.

Source link

Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ – Kannada News | Gold Price Today on 31st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 31: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕುಸಿದಿದೆ. ಬೆಳ್ಳಿ ಬೆಲೆಯಂತೂ ಮಹಾ ಕುಸಿತ ಕಂಡಿದೆ. ಒಂದೇ ದಿನ 45 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ಎರಡು ದಿನದಲ್ಲಿ ಬರೋಬ್ಬರಿ 60 ರೂಗಳಷ್ಟು ತಗ್ಗಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,47,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,60,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 35,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,47,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 35,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 35,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 31ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,058 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,720 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,044 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 350 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,058 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,720 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 350 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,720 ರೂ
  • ಚೆನ್ನೈ: 14,900 ರೂ
  • ಮುಂಬೈ: 14,720 ರೂ
  • ದೆಹಲಿ: 14,735 ರೂ
  • ಕೋಲ್ಕತಾ: 14,720 ರೂ
  • ಕೇರಳ: 14,720 ರೂ
  • ಅಹ್ಮದಾಬಾದ್: 14,725 ರೂ
  • ಜೈಪುರ್: 14,735 ರೂ
  • ಲಕ್ನೋ: 14,735 ರೂ
  • ಭುವನೇಶ್ವರ್: 14,720 ರೂ

ಇದನ್ನೂ ಓದಿ: ಈ ಡೇಂಜರಸ್ ಆ್ಯಪ್​ಗಳು ನಿಮ್ಮ ವೈಯಕ್ತಿಕ ಮಾಹಿತಿ ಕದಿಯಬಹುದು; ನಿಮ್ಮ ಫೋನ್​ನಲ್ಲಿ ಇವು ಇವೆಯಾ ಪರಿಶೀಲಿಸಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 655 ರಿಂಗಿಟ್ (15,236 ರುಪಾಯಿ)
  • ದುಬೈ: 546.75 ಡಿರಾಮ್ (13,649 ರುಪಾಯಿ)
  • ಅಮೆರಿಕ: 150 ಡಾಲರ್ (13,754 ರುಪಾಯಿ)
  • ಸಿಂಗಾಪುರ: 201.90 ಸಿಂಗಾಪುರ್ ಡಾಲರ್ (14,550 ರುಪಾಯಿ)
  • ಕತಾರ್: 555 ಕತಾರಿ ರಿಯಾಲ್ (13,964 ರೂ)
  • ಸೌದಿ ಅರೇಬಿಯಾ: 556 ಸೌದಿ ರಿಯಾಲ್ (13,596 ರುಪಾಯಿ)
  • ಓಮನ್: 59.60 ಒಮಾನಿ ರಿಯಾಲ್ (14,195 ರುಪಾಯಿ)
  • ಕುವೇತ್: 43.83 ಕುವೇತಿ ದಿನಾರ್ (11,188 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 350 ರೂ
  • ಚೆನ್ನೈ: 350 ರೂ
  • ಮುಂಬೈ: 350 ರೂ
  • ದೆಹಲಿ: 350 ರೂ
  • ಕೋಲ್ಕತಾ: 350 ರೂ
  • ಕೇರಳ: 350 ರೂ
  • ಅಹ್ಮದಾಬಾದ್: 350 ರೂ
  • ಜೈಪುರ್: 350 ರೂ
  • ಲಕ್ನೋ: 350 ರೂ
  • ಭುವನೇಶ್ವರ್: 350 ರೂ
  • ಪುಣೆ: 350

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ – Kannada News | Mysuru Drug Lab Bust: NCB Exposes Secret MD Factory, Contradicting Karnataka Government’s Phenyl Claim

ಮೈಸೂರು, ಜನವರಿ 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ಮಾಡಿದಾಗ ಸಿಕ್ಕಿದ್ದು ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ ಪರಮೇಶ್ವರ (G Prameshwara) ಹೇಳಿಕೆಗೆ ಈಗ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ದಾಳಿ ನಡೆಸಿದ್ದ ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಹೈಟೆಕ್ ಡ್ರಗ್ಸ್ ಲ್ಯಾಬ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರೊಂದಿಗೆ, ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ.

ಮೈಸೂರು ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಎನ್​​ಸಿಬಿ ಹೇಳಿದ್ದೇನು?

ಗುಜರಾತ್ ಮತ್ತು ಕರ್ನಾಟಕದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್ ಮಾದಕ ದ್ರವ್ಯ ಜಾಲವನ್ನು ಭೇದಿಸಲಾಗಿದೆ. ಸುಮಾರು 10 ಕೋಟಿ ರೂಪಾಯಿ ಮೌಲ್ಯದ 35 ಕೆಜಿ ಮೆಫೆಡ್ರೋನ್ (MD), 1.8 ಕೆಜಿ ಅಫೀಮು ಮತ್ತು 25.6 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯ ಮಹೇಂದ್ರ ಕುಮಾರ್ ವಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಎನ್​​ಸಿಬಿ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಫಿನಾಯಿಲ್ ಫ್ಯಾಕ್ಟರಿ ಹೆಸರಲ್ಲಿ ರಹಸ್ಯ ಡ್ರಗ್ಸ್ ಲ್ಯಾಬ್!

ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿ ಈ ಡ್ರಗ್ಸ್ ಘಟಕ ಕಾರ್ಯನಿರ್ವಹಿಸುತ್ತಿತ್ತು. ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಅಲ್ಲಿ ಅತ್ಯಾಧುನಿಕ ಉಪಕರಣಗಳು ಮತ್ತು ಡ್ರಗ್ಸ್ ತಯಾರಿಕೆಗೆ ಬಳಸುವ ವಸ್ತುಗಳು ದೊರೆತಿವೆ ಎಂಬುದು ಎನ್​​ಸಿಬಿ ಪತ್ರಿಕಾ ಪ್ರಕಟಣೆಯಿಂದ ತಿಳಿದುಬಂದಿದೆ.

ಜೈಲಿನಿಂದ ಹೊರಬಂದು ಮೈಸೂರಿನಲ್ಲಿ ರಹಸ್ಯ ಪ್ರಯೋಗಾಲಯ ಸ್ಥಾಪಿಸಿದ್ದ ಆರೋಪಿ

ಜೈಲಿನಲ್ಲಿದ್ದಾಗ ಡ್ರಗ್ಸ್ ತಯಾರಿಕೆಯನ್ನು ಕಲಿತಿದ್ದ ಮಾಸ್ಟರ್ ಮೈಂಡ್ ಮಹೇಂದ್ರ ಕುಮಾರ್, ಜಾಮೀನಿನ ಮೇಲೆ ಹೊರಬಂದ ಬಳಿಕ ಮೈಸೂರಿನಲ್ಲಿ ಈ ರಹಸ್ಯ ಪ್ರಯೋಗಾಲಯ ಸ್ಥಾಪಿಸಿದ್ದ ಎಂದು ಎನ್​ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗ

ಈ ಪ್ರಕರಣದ ಆರಂಭದಲ್ಲಿ ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಮೈಸೂರಿನಲ್ಲಿ ಪತ್ತೆಯಾಗಿರುವುದು ಕೇವಲ ಫಿನಾಯಿಲ್ ಫ್ಯಾಕ್ಟರಿ ಎಂದು ಹೇಳಿಕೆ ನೀಡಿದ್ದರು. ಅಲ್ಲಿ ಯಾವುದೇ ಮಾದಕ ವಸ್ತು ಅಥವಾ ತಯಾರಿಕಾ ಕಚ್ಚಾ ವಸ್ತುಗಳು ಸಿಕ್ಕಿಲ್ಲ ಎಂದು ಸ್ಥಳೀಯ ಪೊಲೀಸರ ವರದಿಯನ್ನು ಸಮರ್ಥಿಸಿಕೊಂಡಿದ್ದರು. ಆದರೆ ಈಗ ಕೇಂದ್ರ ಸಂಸ್ಥೆಯಾದ ಎನ್​ಸಿಬಿ, ಇದು ಪೂರ್ಣ ಪ್ರಮಾಣದ ‘ರಹಸ್ಯ ಡ್ರಗ್ಸ್ ಲ್ಯಾಬ್’ ಎಂದು ಸಾಕ್ಷ್ಯ ಸಮೇತ ಬಹಿರಂಗಪಡಿಸಿರುವುದು ರಾಜ್ಯ ಸರ್ಕಾರದ ಗುಪ್ತಚರ ಮತ್ತು ಸ್ಥಳೀಯ ತನಿಖಾ ವೈಫಲ್ಯವನ್ನು ಎತ್ತಿ ತೋರಿಸಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

ಬಂಧಿತ ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಿಸಲಾಗಿದೆ. ಮೈಸೂರಿನ ಈ ಘಟಕಕ್ಕೆ ರಾಸಾಯನಿಕ ಪೂರೈಸುತ್ತಿದ್ದ ಜಾಲದ ಬಗ್ಗೆ ತನಿಖೆ ಮುಂದುವರಿದಿದೆ. ‘ನಶಾ ಮುಕ್ತ ಭಾರತ’ ಅಭಿಯಾನದಡಿ ದೇಶಾದ್ಯಂತ ಇಂತಹ ರಹಸ್ಯ ಘಟಕಗಳ ಮೇಲೆ ನಿಗಾ ಇಡಲು ನಿರ್ಧರಿಸಲಾಗಿದೆ ಎಂದು ಎನ್​ಸಿಬಿ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ – Kannada News | Murughashree Legal Trouble: Murugha Math Plot Sale Case in Hosadurga

ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ

ಚಿತ್ರದುರ್ಗ, ಜನವರಿ 31: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀಗೆ (Murughashree) ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರು ಈ ಸಂಬಂಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಸರ್ಕಾರದಿಂದ ನೇಮಕಗೊಂಡಿರುವ ಮಠದ ಆಡಳಿತ ಸಮಿತಿಗೆ ಪ್ರಕಾಶ್ ಎಂಬುವರಿಂದ ಈ ಬಗ್ಗೆ ದೂರು ಬಂದಿತ್ತು ಈ ಹಿನ್ನೆಲೆಯಲ್ಲಿ ವಿಷಯವನ್ನು ಪರಿಶೀಲಿಸಲಾಗಿದ್ದು, ಬಳಿಕ ಕೋರ್ಟ್ ಮೊರೆ ಹೋಗಲಾಗಿದೆ.

ಕೋರ್ಟ್ ನಿರ್ಬಂಧ ಇದ್ದರೂ ಮುರುಘಾಶ್ರೀ ಅವರು ಹೊಸದುರ್ಗದ ಎಂ. ಮಂಜುನಾಥ್ ಅವರಿಗೆ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ನೀಡಿ, ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಮಮತಾ ಹಾಗೂ ನಳಿನಿ ಎಂಬವರಿಗೆ ಮಾರಾಟ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜ.30ರಂದು ಮುರುಘಾಮಠದ ಆಡಳಿತ ಸಮಿತಿ ಅಧಿಕೃತವಾಗಿ ನ್ಯಾಯಾಲಯವನ್ನು ಸಂಪರ್ಕಿಸಿದೆ. ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿಯಲಿದೆ.

ಈಗಾಗಲೇ A1 ಆರೋಪಿಯಾಗಿರುವ ಮುರುಘಾಶ್ರೀ

ಮುರುಘಾಶ್ರೀ ವಿರುದ್ಧ ಈಗಾಗಲೇ ಫೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದ್ದು, ಆ ಪ್ರಕರಣದಲ್ಲಿ ಅವರು ಎ1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆ ಕೋರ್ಟ್ ಅವರ ಮೇಲೆ ಆಸ್ತಿ ವಹಿವಾಟಿಗೆ ಸಂಬಂಧಿಸಿದಂತೆ ನಿರ್ಬಂಧ ವಿಧಿಸಿತ್ತು. ಅದನ್ನೇ ಉಲ್ಲಂಘಿಸಿ ನಿವೇಶನ ಮಾರಾಟ ನಡೆದಿದೆ ಎಂಬುದು ಆಡಳಿತ ಸಮಿತಿಯ ಆರೋಪವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Shani Transit 2026: ಮಾರ್ಚ್ 13ರಂದು ಮೀನ ರಾಶಿಗೆ ಶನಿ ಪ್ರವೇಶ; ಈಮೂರು ರಾಶಿಗೆ ಅದೃಷ್ಟವೋ ಅದೃಷ್ಟ – Kannada News | Shani Transit 2026: Saturn Enters Pisces! 3 Zodiacs to Gain Immense Fortune and Success

ಶನಿದೇವನನ್ನು ಕರ್ಮದ ಫಲವನ್ನು ನೀಡುವ ಹಾಗೂ ನ್ಯಾಯದ ದೇವರು ಎಂದು ಹೇಳಲಾಗುತ್ತದೆ. ಒಂಬತ್ತು ಗ್ರಹಗಳಲ್ಲಿಯೂ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಶಾಲಿ ಗ್ರಹವೆಂದರೆ ಶನಿ. ಶಿಸ್ತು, ಸದಾಚಾರ, ಪರಿಶ್ರಮ, ಕರ್ಮ ಹಾಗೂ ಆಧ್ಯಾತ್ಮಿಕತೆಯ ಮೇಲೆ ಶನಿಯ ಪ್ರಭಾವ ಅತ್ಯಂತ ಗಾಢವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹವೂ ನಿರ್ದಿಷ್ಟ ಅವಧಿಯ ನಂತರ ತನ್ನ ರಾಶಿಚಕ್ರ ಸ್ಥಾನವನ್ನು ಬದಲಾಯಿಸುತ್ತದೆ. ಈ ಗ್ರಹ ಸಂಚಾರಗಳು ಮಾನವ ಜೀವನದ ಮೇಲೆ ಧನಾತ್ಮಕ ಹಾಗೂ ಋಣಾತ್ಮಕ ಪರಿಣಾಮಗಳನ್ನು ಬೀರುತ್ತವೆ. ಅದರಲ್ಲೂ ಶನಿಯ ಸಂಚಾರವು ದೀರ್ಘಕಾಲಿಕ ಬದಲಾವಣೆಗಳನ್ನು ತರುತ್ತದೆ ಎನ್ನುವುದು ಜ್ಯೋತಿಷ್ಯರ ಅಭಿಪ್ರಾಯ.

ಪ್ರಸ್ತುತ ಶನಿಗ್ರಹವು ಮೀನ ರಾಶಿಯ ಮೂಲಕ ಸಂಚರಿಸುತ್ತಿದ್ದು, ಈ ವರ್ಷ ಮಾರ್ಚ್ 13ರಂದು ಸಂಜೆ 7:13ಕ್ಕೆ ಶನಿದೇವನು ಮೀನ ರಾಶಿಯಲ್ಲಿ ಪ್ರವೇಶಿಸುತ್ತಾನೆ. ಸುಮಾರು 30 ವರ್ಷಗಳ ಬಳಿಕ ನಡೆಯುತ್ತಿರುವ ಈ ಅಪರೂಪದ ಸಂಯೋಗವು ಕೆಲ ರಾಶಿಚಕ್ರಗಳಿಗೆ ವಿಶೇಷವಾಗಿ ಶುಭಫಲಗಳನ್ನು ನೀಡಲಿದೆ. ಶನಿಯ ಈ ಸಂಚಾರವು ಸಕಾರಾತ್ಮಕ ಶಕ್ತಿ, ಸ್ಥಿರತೆ ಮತ್ತು ಅದೃಷ್ಟವನ್ನು ತರಲಿದೆ ಎಂದು ಜ್ಯೋತಿಷ್ಯ ಹೇಳುತ್ತದೆ.

ಈ ಶನಿಯ ಸಂಚಾರದಿಂದ ವಿಶೇಷ ಲಾಭ ಪಡೆಯುವ ಮೂರು ರಾಶಿಗಳು ಇವು:

ಧನು ರಾಶಿ:

ಮೀನ ರಾಶಿಯಲ್ಲಿ ಶನಿಗ್ರಹದ ಸ್ಥಾನವು ಧನು ರಾಶಿಯವರಿಗೆ ಅತ್ಯಂತ ಶುಭಕರವಾಗಿರುತ್ತದೆ. ಸರ್ಕಾರಿ ಹಾಗೂ ಖಾಸಗಿ ನೌಕರರಿಗೆ ಬಯಸಿದ ಬಡ್ತಿ ದೊರೆಯುವ ಸಾಧ್ಯತೆ ಇದೆ. ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹೆಚ್ಚುವರಿ ಜವಾಬ್ದಾರಿಗಳು ಸಿಗುತ್ತವೆ. ಹೊಸ ವ್ಯವಹಾರವನ್ನು ಆರಂಭಿಸಲು ಇದು ಅತ್ಯುತ್ತಮ ಸಮಯ. ಆದಾಯದಲ್ಲಿ ಹೆಚ್ಚಳವಾಗುವುದರಿಂದ ಆರ್ಥಿಕ ಪರಿಸ್ಥಿತಿ ಬಲವಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುವರು. ವಿದೇಶ ಪ್ರಯಾಣದ ಅವಕಾಶಗಳು ಸಿಗಬಹುದು. ದಾಂಪತ್ಯ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತಿದ್ದು, ಗಂಡ-ಹೆಂಡತಿ ಒಟ್ಟಾಗಿ ದೀರ್ಘ ಪ್ರವಾಸಕ್ಕೆ ತೆರಳುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಜೋಡಿ ಒಂಟೆಯ ಪ್ರತಿಮೆ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಕುಂಭ ರಾಶಿ:

ಕುಂಭ ರಾಶಿಯವರಿಗೆ ಶನಿಯ ಮೀನ ರಾಶಿ ಸಂಚಾರವು ಬಹು ನಿರೀಕ್ಷಿತ ಶುಭಫಲಗಳನ್ನು ತರುತ್ತದೆ. ದೀರ್ಘಕಾಲದಿಂದ ಕಾಡುತ್ತಿದ್ದ ಸಮಸ್ಯೆಗಳು ನಿಧಾನವಾಗಿ ಬಗೆಹರಿಯಲಾರಂಭಿಸುತ್ತವೆ. ಹಠಾತ್ ಆರ್ಥಿಕ ಲಾಭಗಳು ದೊರೆಯುವ ಸಾಧ್ಯತೆ ಇದೆ. ಹಳೆಯ ಸಾಲಗಳನ್ನು ತೀರಿಸುವಲ್ಲಿ ಯಶಸ್ಸು ಸಿಗುತ್ತದೆ. ಆಸ್ತಿ ಹಾಗೂ ಭೂಮಿಗೆ ಸಂಬಂಧಿಸಿದ ವಿಚಾರಗಳಲ್ಲಿ ಅನುಕೂಲಕರ ನಿರ್ಧಾರಗಳು ಕೈಗೂಡುತ್ತವೆ. ಬಹುಕಾಲದಿಂದ ಬಾಕಿ ಉಳಿದ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಉದ್ಯೋಗ ಕ್ಷೇತ್ರದ ಅಡೆತಡೆಗಳು ದೂರವಾಗುತ್ತವೆ. ಕುಟುಂಬದ ಆರ್ಥಿಕ ತೊಂದರೆಗಳು ನಿವಾರಣೆಯಾಗುತ್ತವೆ. ಹೊಸ ವ್ಯವಹಾರ ಆರಂಭಿಸುವ ಅವಕಾಶ ಸಿಗಬಹುದು. ಹಿಂದಿನ ಹೂಡಿಕೆಗಳು ಉತ್ತಮ ಲಾಭವನ್ನು ನೀಡುವ ಸೂಚನೆಗಳಿವೆ.

ಮೀನ ರಾಶಿ:

ಶನಿಗ್ರಹವು ಸ್ವಂತ ರಾಶಿಯಾದ ಮೀನದಲ್ಲಿ ಸಂಚರಿಸುವುದರಿಂದ ಮೀನ ರಾಶಿಯವರಿಗೆ ಸಂಪತ್ತು, ಗೌರವ ಹಾಗೂ ಖ್ಯಾತಿ ಹೆಚ್ಚಾಗಲಿದೆ. ಮಾರ್ಚ್ ತಿಂಗಳಿನಿಂದ ಕುಟುಂಬದ ಆರ್ಥಿಕ ಸಮಸ್ಯೆಗಳು ನಿಧಾನವಾಗಿ ಪರಿಹಾರವಾಗಲು ಪ್ರಾರಂಭಿಸುತ್ತವೆ. ಹಳೆಯ ಸಾಲಗಳನ್ನು ಮರುಪಾವತಿಸಲು ಸಾಧ್ಯವಾಗುತ್ತದೆ. ಆಸ್ತಿಯನ್ನು ಉತ್ತಮ ಬೆಲೆಗೆ ಮಾರಾಟ ಮಾಡುವ ಅವಕಾಶ ಸಿಗಬಹುದು. ಉದ್ಯಮಿಗಳು ವ್ಯವಹಾರದಲ್ಲಿ ಬೆಳವಣಿಗೆ ಮತ್ತು ಲಾಭವನ್ನು ಕಾಣುತ್ತಾರೆ. ಹೊಸ ವ್ಯಾಪಾರ ಒಪ್ಪಂದಗಳು ಕೈಗೂಡುತ್ತವೆ. ಮನೆ, ವಾಹನ ಅಥವಾ ಆಭರಣ ಖರೀದಿಸುವ ಯೋಗವೂ ಇದೆ. ಅವಿವಾಹಿತರಿಗೆ ಶೀಘ್ರದಲ್ಲೇ ಉತ್ತಮ ಜೀವನ ಸಂಗಾತಿ ದೊರೆಯುವ ಸೂಚನೆಗಳಿವೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Spiritual Greetings: ಹಿರಿಯರಿಗೆ ನಮಸ್ಕಾರ ಮಾಡುವಾಗ ಈ ತಪ್ಪು ಮಾಡಲೇಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Spiritual Significance of Namaskara: A Guide to Proper Devotional Greetings

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನಮಸ್ಕಾರ ಮಾಡುವ ಸರಿಯಾದ ವಿಧಾನದ ಬಗ್ಗೆ ವಿವರಿಸಿದ್ದಾರೆ. ನಮಸ್ಕಾರಗಳನ್ನು ಸರಿಯಾದ ವಿಧಾನದಲ್ಲಿ ಮಾಡಿದಾಗ ಮಾತ್ರ ಅವುಗಳ ಸಂಪೂರ್ಣ ಫಲ ನಮಗೆ ಲಭಿಸುತ್ತದೆ. ದೇವರುಗಳಿಗೆ, ಮನುಷ್ಯರಿಗೆ, ಹಿರಿಯರಿಗೆ ಹಾಗೂ ಗುರುಗಳಿಗೆ ನಾವು ಸಲ್ಲಿಸುವ ನಮಸ್ಕಾರವು ಯಾಂತ್ರಿಕವಾಗಿರದೆ, ಶ್ರದ್ಧೆ, ಭಕ್ತಿ ಮತ್ತು ಮನಸ್ಸಿನಿಂದ ಬಂದಂತಹ ವಿನಯದಿಂದ ಕೂಡಿರಬೇಕು. ಅಂತಹ ನಮಸ್ಕಾರಗಳು ನಿಜವಾದ ಫಲಗಳನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ನಿರ್ದಿಷ್ಟವಾಗಿ, ವಿಷ್ಣು ದೇವರಾಗಬಹುದು, ಸಮಸ್ತ ವಿಷ್ಣು ಅಂಶವಿರುವ ಎಲ್ಲಾ ದೇವರುಗಳಾಗಬಹುದು ಅಥವಾ ಶಿವನ ದೇವಸ್ಥಾನದಲ್ಲಿ ನಮಸ್ಕರಿಸುವಾಗ ವಿಶೇಷ ಕ್ರಮವನ್ನು ಪಾಲಿಸಬೇಕು. ಎರಡೂ ಕೈಗಳನ್ನು ಜೋಡಿಸಿ, ತಲೆಯ ಮೇಲೆ ಸುಮಾರು ಹನ್ನೆರಡು ಇಂಚು ಎತ್ತರದಲ್ಲಿ ಹಿಡಿದು, ತಲೆಬಾಗಿ, ಶ್ರದ್ಧಾಭಕ್ತಿಯಿಂದ ಮತ್ತು ವಿನಯದಿಂದ ನಮಸ್ಕರಿಸಬೇಕು. ಹೀಗೆ ಮಾಡಿದಾಗ ಆ ನಮಸ್ಕಾರದ ಫಲ ನಮಗೆ ಹೆಚ್ಚಾಗಿ ಸಿಗುತ್ತದೆ.

ಇನ್ನು, ಬೇರೆ ಎಲ್ಲಾ ದೇವರುಗಳಿಗೆ ನಮಸ್ಕರಿಸುವ ಸಂದರ್ಭದಲ್ಲಿ, ಎರಡೂ ಕೈಗಳನ್ನು ತಲೆಯ ಮೇಲೆ ಜೋಡಿಸಿ ನಮಸ್ಕರಿಸುವುದು ವಾಡಿಕೆ. ಈ ವಿಧಾನವು ಕೂಡ ಶುಭ ಫಲಗಳನ್ನು ತರುತ್ತದೆ. ಗುರುಗಳಿಗೆ ನಮಸ್ಕರಿಸುವಾಗ ನಾವು ಬಾಯಿಂದ ನಮಸ್ಕಾರ ಸರ್ ಎಂದು ಹೇಳುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಗುರುವಿಗೆ ಶಿರಬಾಗಿ, ತಲೆಯನ್ನು ಪೂರ್ತಿಯಾಗಿ ಬಾಗಿಸಿ, ಎರಡೂ ಕೈಗಳನ್ನು ಜೋಡಿಸಿ ವಿನಯದಿಂದ ನಮಸ್ಕರಿಸಬೇಕು. ಮೂಗು ಕೈ ಬೆರಳುಗಳ ಮೇಲೆ ಬರುವಂತೆ ನಮಸ್ಕರಿಸುವುದು ಉತ್ತಮ ವಿಧಾನ. ಈ ರೀತಿಯ ನಮಸ್ಕಾರದಿಂದ ಗುರುವಿನ ಋಣವನ್ನು ತೀರಿಸಿಕೊಳ್ಳಲು ಸಾಧ್ಯವಾಗುತ್ತದೆ. ಯಾವುದೇ ಕಾರಣಕ್ಕೂ ಗುರುವಿಗೆ ಬಾಯಲ್ಲಿ ನಮಸ್ಕಾರ ಹೇಳಬಾರದು.

ಮಹನೀಯರು, ಯೋಗಿಗಳು, ಸಾಧುಸಂತರು ಅಥವಾ ದೊಡ್ಡ ಯೋಗಿಗಳಿಗೆ ನಮಸ್ಕರಿಸುವಾಗ ಎರಡೂ ಕೈಗಳನ್ನು ವಕ್ಷಸ್ಥಳದಲ್ಲಿ (ಎದೆಯ ಭಾಗದಲ್ಲಿ) ಜೋಡಿಸಿ ಶಿರಬಾಗಿ ನಮಸ್ಕರಿಸಬೇಕು. ಇದರಿಂದ ನಮಗೂ ಶುಭ ಫಲಗಳು ದೊರೆಯುತ್ತವೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಜೋಡಿ ಒಂಟೆಯ ಪ್ರತಿಮೆ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ತಂದೆ ಅಥವಾ ಪೋಷಕರಿಗೆ ನಮಸ್ಕರಿಸುವಾಗ, ಎರಡೂ ಕೈಗಳನ್ನು ಬಾಯಿಯ ಹತ್ತಿರ ಜೋಡಿಸಿ ನಮಸ್ಕರಿಸಬೇಕು. ತಾಯಿಗೆ ಮಾತ್ರ ವಿಶೇಷವಾಗಿ, ಹೊಟ್ಟೆಯ ಭಾಗದಲ್ಲಿ ಅಥವಾ ಹೃದಯದ ಭಾಗದಲ್ಲಿ ಕೈಗಳನ್ನು ಜೋಡಿಸಿ ನಮಸ್ಕರಿಸಬಹುದು. ತಾಯಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದೂ ಕೂಡಾ ಅತ್ಯಂತ ಶ್ರೇಷ್ಠವೆಂದು ಪರಿಗಣಿಸಲಾಗಿದೆ.

ನಮಸ್ಕಾರವು ಕೇವಲ ಸಾಮಾನ್ಯ ಭಕ್ತಿಯ ಅಭಿವ್ಯಕ್ತಿಯಲ್ಲ. ಯೋಗಾಭ್ಯಾಸದಲ್ಲಿ, ವಾಸ್ತು ರೀತ್ಯಾ, ಮತ್ತು ಶಾಸ್ತ್ರ ರೀತ್ಯಾ ಕೂಡ ನಮಸ್ಕಾರದ ವಿವಿಧ ವಿಧಾನಗಳಿಗೆ ಮಹತ್ವವಿದೆ. ಈ ಕ್ರಮಬದ್ಧವಾದ ನಮಸ್ಕಾರಗಳಿಂದ ಅಪಾರ ಫಲ ದೊರೆಯುತ್ತದೆ. ವಿಷ್ಣು ದೇವಸ್ಥಾನಕ್ಕೆ ಹೋದಾಗ, ತಲೆಯ ಮೇಲ್ಭಾಗದಲ್ಲಿ ಹನ್ನೆರಡು ಇಂಚು ಎತ್ತರದಲ್ಲಿ ಕೈ ಜೋಡಿಸಿ ತಲೆಬಾಗಿಸಿದಾಗ, ದೇವರ ದೃಷ್ಟಿ ನಮ್ಮ ಮೇಲೆ ಬೀಳುತ್ತದೆ ಎಂಬ ನಂಬಿಕೆಯಿದೆ. ನಾವು ಆಗಾಗ ದೇವಸ್ಥಾನಗಳಿಗೆ ಹೋಗುತ್ತಿದ್ದರೂ, ಶಾಸ್ತ್ರೋಕ್ತವಾಗಿ ನಮಸ್ಕಾರ ಮಾಡಿದಾಗ ಮಾತ್ರ ಅದರ ಸಂಪೂರ್ಣ ಫಲ ಸಿಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:17 am, Sat, 31 January 26

Source link

ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅನುಶ್ರೀ ಅವರ ಮಿಮಿಕ್ರಿಯನ್ನು ‘ಡ್ಯಾನ್ಸ್ ಕರ್ನಾಟಕ Dance-2025 ಮತ್ತು ಕಿಲಾಡಿ ಜೂನಿಯರ್ಸ್ ಮಹಾಸಂಗಮದಲ್ಲಿ ಮಾಡಲಾಗಿದೆ. ಅನುಶ್ರೀ ಅವರನ್ನು ಮಿಮಿಕ್ರಿ ಮಾಡಿದ್ದು ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗೋದು ಫಿಕ್ಸ್ ಎಂದೇ ಹೇಳಬಹುದು. DKD ವೇದಿಕೆಯ ದಿಗ್ಗಜರೆಲ್ಲರನ್ನೂ ಸಖತ್ ಸ್ಪೂಫ್ ಮೂಲಕ ನಗುವಿನ ಸುನಾಮಿಯಲ್ಲಿ ತೇಲಿಸಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ರೀತಿಯೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ – Kannada News | BJP and R Ashoka Slams Karnataka Congress Govt Over Drug Racket After Mysuru NCB Raid

ಬೆಂಗಳೂರು, ಜನವರಿ 31: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್, ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಪರಮೇಶ್ವರ್ ಉಡಾಫೆ ಉತ್ತರ ಕೊಟ್ಟಿದ್ದರು ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್ ಎಕ್ಸ್ ಸಂದೇಶ

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link