Category Archives: Blog

Your blog category

Monsoon 2026: ಕೇರಳದಿಂದಲೇ ಮಾನ್ಸೂನ್ ಭಾರತವನ್ನು ಪ್ರವೇಶಿಸುವುದೇಕೆ? – Kannada News

ನವದೆಹಲಿ, ಜೂನ್ 3: ನಾಳೆ (ಜೂನ್ 4) ಮಾನ್ಸೂನ್ (Monsoon) ಕೇರಳವನ್ನು ತಲುಪಲಿದೆ. ಇದು ಅಧಿಕೃತವಾಗಿ ಭಾರತದಲ್ಲಿ ಮಳೆಗಾಲದ ಆರಂಭವನ್ನು ಸೂಚಿಸುತ್ತದೆ. ಈಗಾಗಲೇ ದೇಶಾದ್ಯಂತ ಪೂರ್ವ ಮಾನ್ಸೂನ್ ಮಳೆ ಶುರುವಾಗಿದೆ. ಹಾಗಾದರೆ, ಮಾನ್ಸೂನ್ ಕೇರಳದಿಂದಲೇ ಭಾರತವನ್ನು ಪ್ರವೇಶಿಸಲು ಕಾರಣವೇನು? ಮಾನ್ಸೂನ್ ಮಳೆಗಾಗಿ ಒತ್ತಡವನ್ನು ಹೇಗೆ ಸೃಷ್ಟಿಸುತ್ತವೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

ಜೂನ್ 4ರಂದು ಮಾನ್ಸೂನ್ ಕೇರಳವನ್ನು ತಲುಪಲಿದೆ. ಕೇರಳವು ಅರಬ್ಬಿ ಸಮುದ್ರದ ತೀರದಲ್ಲಿದೆ. ಅರಬ್ಬಿ ಸಮುದ್ರದ ಶಾಖೆಯು ಮೊದಲು ಭಾರತದ ಪಶ್ಚಿಮ ಕರಾವಳಿಯನ್ನು ತಲುಪುತ್ತದೆ. ಆ ಮಾರ್ಗದಲ್ಲಿ ಕೇರಳವು ಮೊದಲ ಪ್ರಮುಖ ದ್ವಾರವಾಗಿದೆ. ಹೀಗಾಗಿ, ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದ ಬಳಿಕ ಉಳಿದ ರಾಜ್ಯಗಳಿಗೆ ಎಂಟ್ರಿ ನೀಡುತ್ತದೆ. ಅರಬ್ಬಿ ಸಮುದ್ರವು ತ್ವರಿತ ಮತ್ತು ಹೇರಳವಾದ ತೇವಾಂಶವನ್ನು ಒದಗಿಸುತ್ತದೆ. ಬೇಸಿಗೆಯಲ್ಲಿ, ಅರಬ್ಬಿ ಸಮುದ್ರದಿಂದ ಬೀಸುವ ಗಾಳಿಯು ಬಹಳಷ್ಟು ತೇವಾಂಶವನ್ನು ಹೊತ್ತೊಯ್ಯಬಹುದು. ಈ ಗಾಳಿ ಕೇರಳ ಕರಾವಳಿಯನ್ನು ತಲುಪಿದಾಗ, ವಾತಾವರಣವು ಬೇಗನೆ ತೇವವಾಗುತ್ತದೆ. ಇದರಿಂದಾಗಿ ಮಳೆ ಪ್ರಾರಂಭವಾಗಲು ಸುಲಭವಾಗುತ್ತದೆ.

ಇದನ್ನೂ ಓದಿ: ಕೊಡಗು ಭೀಕರ ಪ್ರವಾಹ ಸಂತ್ರಸ್ತರಿಗೆ 7 ವರ್ಷಗಳಾದರೂ ಸಿಗದ ಪುನರ್ವಸತಿ ಆಸರೆ: ಮಳೆಗಾಲದಲ್ಲಿ ಪ್ರವಾಹದ ಭೀತಿ

ಬೇಸಿಗೆಯ ಅವಧಿಯಲ್ಲಿ (ಏಪ್ರಿಲ್ ಮತ್ತು ಮೇ) ಉತ್ತರ ಹಾಗೂ ಮಧ್ಯ ಭಾರತದ ಭೂಭಾಗವು ಸೂರ್ಯನ ತೀವ್ರ ಶಾಖದಿಂದಾಗಿ ಭಾರೀ ಪ್ರಮಾಣದಲ್ಲಿ ಕಾಯುತ್ತದೆ. ಭೂಮಿ ಬಿಸಿಯಾದಾಗ ಅದರ ಮೇಲಿರುವ ಗಾಳಿಯು ಹಗುರವಾಗಿ ಮೇಲಕ್ಕೆ ಏರುತ್ತದೆ. ಇದರಿಂದಾಗಿ ಭಾರತದ ಭೂಭಾಗದ ಮೇಲೆ ದೊಡ್ಡ ಕಡಿಮೆ ಒತ್ತಡದ ವಲಯ ಸೃಷ್ಟಿಯಾಗುತ್ತದೆ. ಆದರೆ, ಹಿಂದೂ ಮಹಾಸಾಗರದ ನೀರು ಭೂಮಿಯಷ್ಟು ಬೇಗ ಕಾಯುವುದಿಲ್ಲ. ಹಾಗಾಗಿ ಅಲ್ಲಿ ಹೆಚ್ಚು ಒತ್ತಡದ ವಲಯ ಇರುತ್ತದೆ. ಗಾಳಿಯು ಯಾವಾಗಲೂ ಹೆಚ್ಚು ಒತ್ತಡದ ಪ್ರದೇಶದಿಂದ ಕಡಿಮೆ ಒತ್ತಡದ ಪ್ರದೇಶದ ಕಡೆಗೆ ಬೀಸುವುದರಿಂದ, ಸಮುದ್ರದ ಮೇಲಿನ ತೇವಾಂಶಭರಿತ ಗಾಳಿಯು ಭಾರತದ ಭೂಭಾಗದ ಕಡೆಗೆ ವೇಗವಾಗಿ ನುಗ್ಗಿ ಬರುತ್ತದೆ.

ಪಶ್ಚಿಮ ಘಟ್ಟಗಳು ಕೇರಳದಿಂದ ನೇರವಾಗಿ ಹಿಂಭಾಗದಲ್ಲಿ ಇವೆ. ಕರಾವಳಿ ಗಾಳಿಯು ಪರ್ವತಗಳಿಗೆ ಡಿಕ್ಕಿ ಹೊಡೆದು ಮೇಲೇರುತ್ತದೆ. ಅದು ಮೇಲೇರುತ್ತಿದ್ದಂತೆ ಮೋಡಗಳು ರೂಪುಗೊಳ್ಳುತ್ತವೆ ಮತ್ತು ಭೂಗೋಳದ ಮಳೆಯು ತೀವ್ರಗೊಳ್ಳುತ್ತದೆ. ಆಗ ಮಾನ್ಸೂನ್‌ನ ಮುಖ್ಯ ಹರಿವು ಮೊದಲು ದಕ್ಷಿಣ ಭಾರತದ ಮೇಲೆ ಇಳಿಯುತ್ತದೆ. ಮಾನ್ಸೂನ್ ಹರಿವು ಕ್ರಮೇಣ ಬಲಗೊಳ್ಳುತ್ತದೆ. ಆರಂಭದಲ್ಲಿ, ಇದು ಮೊದಲು ದಕ್ಷಿಣ ಭಾರತದಲ್ಲಿ ಶುರುವಾಗಿ ನಂತರ ಉತ್ತರ ಭಾರತಕ್ಕೆ ಹರಡುತ್ತದೆ.

ಇದನ್ನೂ ಓದಿ: Monsoon 2026: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಮಳೆಗಾಲ ಯಾವಾಗ ಶುರು?

ಭಾರತದಲ್ಲಿ ಎಷ್ಟು ರೀತಿಯ ಮಾನ್ಸೂನ್ ಮಾರುತಗಳಿವೆ?:

ನೈಋತ್ಯ ಮಾನ್ಸೂನ್: ಇದು ಜೂನ್ ಮತ್ತು ಸೆಪ್ಟೆಂಬರ್ ನಡುವೆ ಸಕ್ರಿಯವಾಗಿರುತ್ತದೆ. ಇದನ್ನು ಭಾರತದ ಪ್ರಾಥಮಿಕ ಮಳೆಗಾಲವೆಂದು ಪರಿಗಣಿಸಲಾಗುತ್ತದೆ. ಒಟ್ಟು ಮಳೆಯ ಬಹುಪಾಲು ಈ ಸಮಯದಲ್ಲಿ ಸಂಭವಿಸುತ್ತದೆ. ಇದು ಮೊದಲು ಕೇರಳ ಮತ್ತು ಕರ್ನಾಟಕದ ಕರಾವಳಿಗಳ ಕಡೆಗೆ ಸಾಗುತ್ತದೆ. ಬಳಿಕ ಈಶಾನ್ಯ ಭಾರತ ಮತ್ತು ಬಂಗಾಳ-ಒಡಿಶಾ ಕಡೆಗೆ ಚಲಿಸಿ, ನಂತರ ಬಯಲು ಪ್ರದೇಶಗಳಲ್ಲಿ ಹರಡಿ ಉತ್ತರ ಮತ್ತು ಪಶ್ಚಿಮಕ್ಕೆ ಚಲಿಸುತ್ತದೆ.

ಈಶಾನ್ಯ ಮಾನ್ಸೂನ್: ಇದು ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ಸಂಭವಿಸುತ್ತದೆ. ಇದು ವಿಶೇಷವಾಗಿ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ, ಪುದುಚೇರಿ ಮತ್ತು ಸುತ್ತಮುತ್ತಲಿನ ಕರಾವಳಿಗಳಿಗೆ ಉತ್ತಮ ಮಳೆಯನ್ನು ತರುತ್ತದೆ.

ಭಾರತದ ಮುಖ್ಯ ಭೂಭಾಗಕ್ಕೆ ಕೇರಳದಲ್ಲೇ ಮೊದಲು ಮುಂಗಾರು ಪ್ರವೇಶಿಸಿದರೂ, ಅದಕ್ಕಿಂತ ಮುಂಚಿತವಾಗಿ ಅಂದರೆ ಮೇ ಮಧ್ಯಭಾಗದಲ್ಲೇ ಭಾರತದ ದ್ವೀಪಗಳಾದ ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಮುಂಗಾರು ಮಳೆ ಆರಂಭವಾಗುತ್ತದೆ. ಏಕೆಂದರೆ ಇವು ಭೂಮಧ್ಯ ರೇಖೆಗೆ ಹಾಗೂ ಬಂಗಾಳ ಕೊಲ್ಲಿಗೆ ಹತ್ತಿರದಲ್ಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್ – Kannada News

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ‘ಭಾರತ್ ಭಾಗ್ಯ ವಿಧಾತ’ (Bharat Bhagya Vidhata) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದಾರೆ. ದೇಶವನ್ನೇ ನಡುಗಿಸಿದ್ದ 2008ರ 26/11 ಮುಂಬೈ ಉಗ್ರರ ದಾಳಿಯ ಕರಾಳ ರಾತ್ರಿಗೆ ಸಂಬಂಧಿಸಿದಂತೆ ತಮ್ಮ ನೆನಪೊಂದನ್ನು ಅವರು ಹಂಚಿಕೊಂಡಿದ್ದಾರೆ. ಉಗ್ರರು ಮುಂಬೈ ಮೇಲೆ ದಾಳಿ ಮಾಡಿದ ಆ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವಿಷಯವನ್ನು ಕಂಗನಾ (Kangana Ranaut) ಬಹಿರಂಗಪಡಿಸಿದ್ದಾರೆ.

ಆ ಕರಾಳ ರಾತ್ರಿಯನ್ನು ನೆನಸಿಕೊಂಡ ಕಂಗನಾ, ‘ಅಂದು ನಟಿ ಶಹಾನಾ ಗೋಸ್ವಾಮಿ ಅವರು ಯಾರಿ ರೋಡ್‌ನಲ್ಲಿ ಹೊಸ ಮನೆಗೆ ಗೃಹಪ್ರವೇಶ ಮಾಡಿದ್ದರು. ಆ ಖುಷಿಯಲ್ಲಿ ಅವರು ವಿಶೇಷ್ ಫಿಲ್ಮ್ಸ್ ಬ್ಯಾನರ್‌ನ ಆಪ್ತ ನಟ-ನಟಿಯರಿಗೆ ಹೌಸ್ ಪಾರ್ಟಿ ಆಯೋಜಿಸಿದ್ದರು. ನಾವೆಲ್ಲರೂ ಹಾಡು, ಡ್ಯಾನ್ಸ್ ಮಾಡುತ್ತಾ ಪಾರ್ಟಿ ಮೂಡ್‌ನಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದೆವು’ ಎಂದಿದ್ದಾರೆ.

‘ನಾವು ಪಾರ್ಟಿ ಮಾಡುತ್ತಿದ್ದ ಜಾಗಕ್ಕೆ ಹಿರಿಯ ನಿರ್ದೇಶಕ ಮಹೇಶ್ ಭಟ್ ಅವರು ಬಂದರು. ತಕ್ಷಣವೇ ಪಾರ್ಟಿ ನಿಲ್ಲಿಸಿ, ಟಿವಿ ಆನ್ ಮಾಡುವಂತೆ ನಮಗೆ ತಿಳಿಸಿದರು. ನಾವು ಟಿವಿ ಹಾಕಿದಾಗ ಇಡೀ ಮುಂಬೈನಲ್ಲಿ ಉಗ್ರರು ಅಟ್ಟಹಾಸ ಮೆರೆಯುತ್ತಿರುವ ಲೈವ್ ನ್ಯೂಸ್ ಬಿತ್ತರವಾಗುತ್ತಿತ್ತು. ಅದನ್ನು ನೋಡಿ ನಾವೆಲ್ಲರೂ ಒಂದು ಕ್ಷಣ ದಿಗ್ಭ್ರಮೆಗೊಂಡೆವು’ ಎಂದು ಕಂಗನಾ ಆ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.

‘ಆರಂಭದಲ್ಲಿ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದು ನಮಗೆ ಅರ್ಥವಾಗಲಿಲ್ಲ. ಪಾರ್ಟಿ ಮುಂದುವರಿಸಬೇಕೇ ಅಥವಾ ಮನೆಗೆ ಹೋಗಬೇಕೇ ಎಂದು ನಮ್ಮ ನಡುವೆ ಚರ್ಚೆ ನಡೆಯುತ್ತಿತ್ತು. ಆದರೆ ಮಹೇಶ್ ಭಟ್ ಅವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ತಕ್ಷಣವೇ ಎಲ್ಲರಿಗೂ ಪಾರ್ಟಿ ನಿಲ್ಲಿಸಿ ಮನೆಗೆ ಮರಳುವಂತೆ ಖಡಕ್ ಆಗಿ ಸೂಚಿಸಿದರು. ಅವರ ಮಾತನ್ನು ಕೇಳಿ ನಾವೆಲ್ಲರೂ ಅಲ್ಲಿಂದ ಹೊರಟೆವು. ಒಂದು ವೇಳೆ ಅಂದು ಮಹೇಶ್ ಭಟ್ ನಮಗೆ ಮಾಹಿತಿ ನೀಡದಿದ್ದರೆ, ಮುಂಬೈನಲ್ಲಿ ಅಷ್ಟು ದೊಡ್ಡ ದುರಂತ ನಡೆಯುತ್ತಿರುವುದು ನಮಗೆ ತಡವಾಗಿ ತಿಳಿಯುತ್ತಿತ್ತು’ ಎಂದು ಕಂಗನಾ ಹೇಳಿದ್ದಾರೆ.

ಇದನ್ನೂ ಓದಿ: ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

‘ಭಾರತ್ ಭಾಗ್ಯ ವಿಧಾತ’ ಚಿತ್ರದ ಕಥೆ:
ಕಂಗನಾ ರಣಾವತ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಭಾರತ್ ಭಾಗ್ಯ ವಿಧಾತ’ ಸಿನಿಮಾವು 26/11ರ ಮುಂಬೈ ಉಗ್ರರ ದಾಳಿಯ ನೈಜ ಘಟನೆಗಳನ್ನು ಆಧರಿಸಿ ತಯಾರಾಗಿದೆ. ದಾಳಿಯ ಸಮಯದಲ್ಲಿ ಮುಂಬೈನ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ವೈದ್ಯರು ಪ್ರಾಣದ ಹಂಗು ತೊರೆದು ನೂರಾರು ಜನರ ಜೀವ ಉಳಿಸಲು ತೋರಿದ ಅಪ್ರತಿಮ ಧೈರ್ಯ ಮತ್ತು ಹೋರಾಟದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಚಿತ್ರದಲ್ಲಿ ಕಂಗನಾ ಅವರು ನರ್ಸ್ ಪಾತ್ರವನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದನ್ನು ಒಪ್ಪಿಕೊಂಡ ಶಿಲ್ಪಾ ಶಿಂಧೆ; ನಟಿಯ ಬಂಧನಕ್ಕೆ ಒತ್ತಾಯ – Kannada News

ಕಿರುತೆರೆಯ ಜನಪ್ರಿಯ ನಟಿ ಮತ್ತು ‘ಬಿಗ್ ಬಾಸ್’ ವಿನ್ನರ್ ಶಿಲ್ಪಾ ಶಿಂಧೆ (Shilpa Shinde) ಅವರು ತಮ್ಮ ಹಳೆಯ ವಿವಾದವೊಂದರ ಕುರಿತು ನೀಡಿರುವ ಹೇಳಿಕೆ ಈಗ ಹೊಸದೊಂದು ಕಾನೂನು ಸಂಕಷ್ಟಕ್ಕೆ ಕಾರಣವಾಗಿದೆ. ಸೂಪರ್ ಹಿಟ್ ಹಿಂದಿ ಧಾರಾವಾಹಿ ‘ಭಾಬಿ ಜಿ ಘರ್ ಪರ್ ಹೈ’ (Bhabi Ji Ghar Par Hain) ನಿರ್ಮಾಪಕರ ವಿರುದ್ಧ ತಾವು ಈ ಹಿಂದೆ ಹೂಡಿದ್ದ ಲೈಂಗಿಕ ಕಿರುಕುಳದ ಕೇಸ್ (Harassment Case) ಸುಳ್ಳು ಎಂದು ಅವರು ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಪುರುಷರ ಹಕ್ಕುಗಳ ಸಂಘಟನೆಯೊಂದು ನಟಿಯನ್ನು ಬಂಧಿಸುವಂತೆ ಮುಂಬೈ ಪೊಲೀಸರನ್ನು ಆಗ್ರಹಿಸಿದೆ.

ಭಾರ್ತಿ ಸಿಂಗ್ ಮತ್ತು ಹರ್ಷ್ ಲಿಂಬಾಚಿಯಾ ನಡೆಸಿಕೊಡುವ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶಿಲ್ಪಾ ಶಿಂಧೆ ಈ ಆಘಾತಕಾರಿ ವಿಷಯವನ್ನು ಹಂಚಿಕೊಂಡಿದ್ದಾರೆ. ಅವರ ಈ ಹೇಳಿಕೆ ಹೊರಬರುತ್ತಿದ್ದಂತೆ ದೆಹಲಿ ಮೂಲದ ಪುರುಷರ ಹಕ್ಕುಗಳ ಸಂಘಟನೆಯಾದ ‘NCMIndia Council for Men Affairs’ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಶಿಲ್ಪಾ ಶಿಂಧೆ ಅವರು ಕಾನೂನನ್ನು ದುರುಪಯೋಗಪಡಿಸಿಕೊಂಡು ನಿರ್ಮಾಪಕರ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು ಎಂಬುದು ಅವರ ಒಪ್ಪಿಗೆಯಿಂದಲೇ ಸಾಬೀತಾಗಿದೆ. ಹಾಗಾಗಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಘಟನೆಯು ಮುಂಬೈ ಪೊಲೀಸರನ್ನು ಒತ್ತಾಯಿಸಿದೆ.

ಪಾಡ್‌ಕಾಸ್ಟ್‌ನಲ್ಲಿ ಶಿಲ್ಪಾ ಶಿಂಧೆ ಹೇಳಿದ್ದೇನು?
ಧಾರಾವಾಹಿಯ ನಿರ್ಮಾಪಕ ಸಂಜಯ್ ಕೊಹ್ಲಿ ವಿರುದ್ಧ ವರ್ಷಗಳ ಹಿಂದೆ ದಾಖಲಿಸಿದ್ದ ಲೈಂಗಿಕ ಕಿರುಕುಳದ ದೂರು ಸಂಪೂರ್ಣವಾಗಿ ನಿಜವಾಗಿರಲಿಲ್ಲ ಎಂದು ಶಿಲ್ಪಾ ಅವರು ಪಾಡ್‌ಕಾಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಆ ಸಮಯದಲ್ಲಿ ತಮಗೆ ಬೇರೆ ಯಾವುದೇ ದಾರಿ ಕಾಣದಿದ್ದಕ್ಕೆ ಮತ್ತು ತಮ್ಮ ಬಾಕಿ ಹಣವನ್ನು ವಸೂಲಿ ಮಾಡುವ ಉದ್ದೇಶದಿಂದ ಅನಿವಾರ್ಯವಾಗಿ ಆ ರೀತಿಯ ಕೇಸ್ ದಾಖಲಿಸಬೇಕಾಯಿತು ಎಂದು ಅವರು ಹೇಳಿದ್ದಾರೆ.

‘ಬಳಿಕ ಆ ಪ್ರಕರಣವು ಇಬ್ಬರ ನಡುವಿನ ಮಾತುಕತೆಯ ಮೂಲಕ ಇತ್ಯರ್ಥವಾಯಿತು. ನನ್ನ ಬಾಕಿ ಇದ್ದ ಪೇಮೆಂಟ್ ಕೂಡ ಕ್ಲಿಯರ್ ಆಯಿತು. ಈಗ ನಿರ್ಮಾಪಕರ ಜೊತೆ ನನ್ನ ಸಂಬಂಧ ಚೆನ್ನಾಗಿದೆ ಮತ್ತು ನಮ್ಮ ನಡುವೆ ಯಾವುದೇ ದ್ವೇಷ ಇಲ್ಲ’ ಎಂದು ಶಿಲ್ಪಾ ಶಿಂಧೆ ಸಮರ್ಥಿಸಿಕೊಂಡಿದ್ದಾರೆ. ಆದರೆ, ತಾವು ನೀಡಿದ್ದ ದೂರು ಸುಳ್ಳು ಎಂದು ಈಗ ಸ್ವತಃ ಅವರೇ ಒಪ್ಪಿಕೊಂಡಿರುವುದು ಪುರುಷರ ಹಕ್ಕುಗಳ ಪರ ಹೋರಾಡುವ ಸಂಘಟನೆಗಳನ್ನು ಕೆರಳಿಸಿದೆ.

ಇದನ್ನೂ ಓದಿ: ‘ಧುರಂಧರ್’ ಚಿತ್ರತಂಡದ ಸದಸ್ಯನ ಲೈಂಗಿಕ ದೌರ್ಜನ್ಯ ಕೃತ್ಯ ಸಾಬೀತು; ಕಠಿಣ ಕ್ರಮ

ವಿವಾದದ ಹಿನ್ನೆಲೆ:
2016ರಲ್ಲಿ ‘ಭಾಬಿ ಜಿ ಘರ್ ಪರ್ ಹೈ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುವ ಮೂಲಕ ಶಿಲ್ಪಾ ಶಿಂಧೆ ದೇಶಾದ್ಯಂತ ಮನೆಮಾತಾಗಿದ್ದರು. ಆದರೆ ಅದೇ ಸಮಯದಲ್ಲಿ ಸಂಭಾವನೆ ಮತ್ತು ಒಪ್ಪಂದದ ವಿಚಾರವಾಗಿ ನಿರ್ಮಾಪಕರೊಂದಿಗೆ ಭಿನ್ನಾಭಿಪ್ರಾಯ ಮೂಡಿ ಅವರು ದಿಢೀರ್ ಶೋನಿಂದ ಹೊರನಡೆದಿದ್ದರು. ಈ ವೇಳೆ ಇಡೀ ಟಿವಿ ಉದ್ಯಮದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಈ ವಿವಾದ, ಕೋರ್ಟ್ ಮೆಟ್ಟಿಲೇರಿ ತಿಂಗಳುಗಟ್ಟಲೆ ಸುದ್ದಿಯಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು – Kannada News

ನವದೆಹಲಿ, ಜೂನ್ 3: ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೇಂದ್ರ ಸಚಿವರು ಪರಿಸರ ಕಾಳಜಿ ಮೆರೆದಿರುವ ಅಪರೂಪದ ವಿದ್ಯಮಾನವೊಂದು ನಡೆದಿದೆ. ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿರುವ ಹಿನ್ನೆಲೆಯಲ್ಲಿ ಒಂದೇ ಕಾರಿನಲ್ಲಿ ಕ್ಯಾಬಿನೆಟ್ ಸಭೆಗೆ ತೆರಳಿ ಕೇಂದ್ರ ಸಚಿವರು ಮಾದರಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲು ಮತ್ತು ಪರಿಸರ ಮಾಲಿನ್ಯ ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕೇಂದ್ರ ಸಚಿವರು ಅದ್ಭುತವಾಗಿ ಸ್ಪಂದಿಸಿದ್ದಾರೆ.

ಇಂದು ನಡೆದ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆಗೆ ಕೇಂದ್ರ ಸಚಿವರಾದ ಜಿ. ಕಿಶನ್ ರೆಡ್ಡಿ, ಶಿವರಾಜ್ ಸಿಂಗ್ ಚೌಹಾಣ್, ಪ್ರಲ್ಹಾದ್ ಜೋಶಿ ಮತ್ತಿತರ ಕೇಂದ್ರ ಸಚಿವರು ತಮ್ಮ ವೈಯಕ್ತಿಕ ಅಧಿಕೃತ ಕಾರುಗಳನ್ನು ಬಿಟ್ಟು, ಒಂದೇ ಕಾರಿನಲ್ಲಿ ‘ಕಾರ್‌ಪೂಲಿಂಗ್’ (Carpooling) ಮಾಡುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ?

ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಹಾಗೂ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಫೋಟೋ ಹಾಗೂ ವಿವರಗಳನ್ನು ಹಂಚಿಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ಇಂಧನ ಸಂರಕ್ಷಣೆ ಮತ್ತು ಮಾಲಿನ್ಯ ಮುಕ್ತ ಭಾರತದ ಕರೆಯನ್ನು ಬೆಂಬಲಿಸಿ, ನಾವು ಇಂದು ಕ್ಯಾಬಿನೆಟ್ ಸಭೆಗೆ ಒಟ್ಟಿಗೆ ಕಾರ್‌ಪೂಲ್ ಮಾಡಿದ್ದೇವೆ” ಎಂದು ಕಿಶನ್ ರೆಡ್ಡಿ ತಿಳಿಸಿದ್ದಾರೆ. ಕಿಶನ್ ರೆಡ್ಡಿ, ಶಿವರಾಜ್ ಸಿಂಗ್ ಚೌಹಾಣ್, ಸಿ ಆರ್ ಪಾಟೀಲ್ ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ್ದಾರೆ.

ಹಾಗೇ, ಕೇಂದ್ರ ಸಚಿವರಾದ ಕಿರಣ್ ರಿಜಿಜು, ರಾಜೀವ್ ರಂಜನ್ ಸಿಂಗ್, ಮನೋಹರ್ ಖಟ್ಟರ್ ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ್ದಾರೆ.

ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಗಜೇಂದ್ರ ಸಿಂಗ್ ಶೇಖಾವತ್ ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ್ದಾರೆ.

ಇತ್ತೀಚಿನ ಜಾಗತಿಕ ಹವಾಮಾನ ಬದಲಾವಣೆ ಮತ್ತು ಇಂಧನ ದರಗಳ ಏರಿಳಿತದ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಸಾಧ್ಯವಾದಷ್ಟು ಇಂಧನ ಉಳಿತಾಯದ ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದರು. ಸಾರ್ವಜನಿಕ ಸಾರಿಗೆ ಬಳಕೆ, ಎಲೆಕ್ಟ್ರಿಕ್ ವಾಹನಗಳ ಬಳಕೆ ಹಾಗೂ ಕಾರ್‌ಪೂಲಿಂಗ್ ಮಾಡುವುದರಿಂದ ದೇಶದ ಇಂಧನ ಆಮದು ವೆಚ್ಚ ಕಡಿಮೆಯಾಗುವುದಲ್ಲದೆ, ಮಾಲಿನ್ಯವೂ ತಗ್ಗುತ್ತದೆ ಎಂಬುದು ಸರ್ಕಾರದ ಆಶಯವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಯಕತ್ವದ ಜೊತೆಗೆ ಟಿ20 ತಂಡದಿಂದಲೂ ಸೂರ್ಯಕುಮಾರ್​ಗೆ ಗೇಟ್​ಪಾಸ್ – Kannada News

2026 ರ ಐಪಿಎಲ್‌ನಲ್ಲಿ (IPL 2026) ಕಳಪೆ ಪ್ರದರ್ಶನದ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಪ್ರಸ್ತುತ ಮುಂಬೈ ಟಿ20 ಲೀಗ್​ನಲ್ಲಿ ಆಡುತ್ತಿದ್ದಾರೆ. ಈ ಲೀಗ್​ನಲ್ಲೂ ಸೂರ್ಯನಿಗೆ ಉತ್ತಮ ಆರಂಭ ಸಿಕ್ಕಿಲ್ಲ. ಇದೆಲ್ಲದರ ನಡುವೆ ಹೊರಬಿದ್ದಿರುವ ಮಾಹಿತಿ ಪ್ರಕಾರ, ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟಿ20 ತಂಡದ ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಅವರನ್ನು ಭಾರತ ಟಿ20 ತಂಡದಿಂದಲೂ ಕೈಬಿಡಲಾಗುತ್ತಿದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಾಯಕತ್ವದ ಜೊತೆಗೆ ತಂಡದಿಂದಲೂ ಕೋಕ್

ಭಾರತ ಟಿ20 ತಂಡದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ತಂಡಕ್ಕೆ ಹೊರ ನಾಯಕನ ಹುಡುಕಾಟ ಶುರು ಮಾಡಿದೆ. ಕೋಚ್ ಗೌತಮ್ ಗಂಭೀರ್, ತಂಡದ ನಿರ್ವಹಣೆ ಮತ್ತು ಆಯ್ಕೆ ಸಮಿತಿಯೊಂದಿಗೆ ಚರ್ಚಿಸಿದ ನಂತರ ಹೊಸ ಟಿ20 ನಾಯಕನನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ‘ಸೂರ್ಯ ಅವರ ನಾಯಕತ್ವದಲ್ಲಿ ತಂಡವು ಟಿ20 ವಿಶ್ವಕಪ್ ಗೆದ್ದಿದ್ದರೂ, ಅವರ ವೈಯಕ್ತಿಕ ಫಾರ್ಮ್ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಗಳಿಗೆ ನಿರ್ಧರಿಸಲಾಗಿದೆ. ಹೀಗಾಗಿ ಸೂರ್ಯ ಅವರನ್ನು ಟಿ20 ತಂಡದಿಂದ ಕೈಬಿಡಲಾಗುವುದು. ಶೀಘ್ರದಲ್ಲೇ ಈ ನಿರ್ಧಾರವನ್ನು ಸೂರ್ಯನಿಗೆ ತಿಳಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ.

ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಸೂರ್ಯ

ಸೂರ್ಯಕುಮಾರ್ ಯಾದವ್ 2024 ರಿಂದ ನಾಯಕನಾಗಿ ಭಾರತವನ್ನು ಸತತ ಟಿ20 ಸರಣಿ ಗೆಲುವುಗಳಿಗೆ ಮುನ್ನಡೆಸಿದ್ದಾರೆ. ಅವರ ನಾಯಕತ್ವದಲ್ಲಿ, ಟೀಂ ಇಂಡಿಯಾ ವಿಶ್ವ ಚಾಂಪಿಯನ್ ಆಯಿತು. ಆದಾಗ್ಯೂ, ಆಟಗಾರನಾಗಿ ಸೂರ್ಯ ಅವರ ಫಾರ್ಮ್​ ಅತ್ಯಂತ ಕಳಪೆಯಾಗಿತ್ತು. 2021, 2022 ಮತ್ತು 2023 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಸೂರ್ಯ, 2024 ಮತ್ತು 2025 ರಲ್ಲಿ, ತೀರ ಕಳಪೆ ಪ್ರದರ್ಶನ ನೀಡಿದ್ದಾರೆ. 2026 ರಲ್ಲಿ 14 ಟಿ20 ಪಂದ್ಯಗಳನ್ನಾಡಿದ್ದ ಸೂರ್ಯ, 44 ರ ಸರಾಸರಿಯಲ್ಲಿ 484 ರನ್ ಗಳಿಸಿದ್ದರು. ಹಾಗೆಯೇ ಐಪಿಎಲ್ 2026 ರಲ್ಲಿ ಅವರ ಪ್ರದರ್ಶನವು ವಿಶೇಷವಾಗಿರಲಿಲ್ಲ. ಆಡಿದ 13 ಇನ್ನಿಂಗ್ಸ್‌ಗಳಲ್ಲಿ ಕೇವಲ ಒಂದು ಅರ್ಧಶತಕದೊಂದಿಗೆ ಕೇವಲ 270 ರನ್ ಮಾತ್ರ ಕಲೆಹಾಕಿದ್ದರು.

ತಂದೆಯಾಗುವ ಸಂತಸದಲ್ಲಿ ಸೂರ್ಯಕುಮಾರ್; ಬೇಬಿ ಶವರ್ ವಿಡಿಯೋ ವೈರಲ್

ಸೂರ್ಯನ ಬದಲಿಗೆ ಯಾರಿಗೆ ನಾಯಕತ್ವ?

ಪ್ರಸ್ತುತ ಟಿ20 ತಂಡದ ನಾಯಕತ್ವಕ್ಕೆ ಶ್ರೇಯಸ್ ಅಯ್ಯರ್ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಅಯ್ಯರ್ ಅವರ ಜೊತೆಗೆ, ಶುಭಮನ್ ಗಿಲ್, ಅಕ್ಷರ್ ಪಟೇಲ್, ಇಶಾನ್ ಕಿಶನ್ ಮತ್ತು ತಿಲಕ್ ವರ್ಮಾ ಅವರ ಹೆಸರುಗಳನ್ನು ಸಹ ಟಿ20 ತಂಡದ ನಾಯಕತ್ವಕ್ಕೆ ಚರ್ಚಿಸಲಾಗುತ್ತಿದೆ. ಇದರಲ್ಲಿ ಶ್ರೇಯಸ್ ಅಯ್ಯರ್​ಗೆ ಕೊಂಚ ಮೇಲುಗೈ ಸಾಧಿಸಿದ್ದಾರೆ. ಏಕೆಂದರೆ ನಾಯಕತ್ವದ ಅನುಭವ ಹೊಂದಿರುವ ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೆಕೆಆರ್ ತಂಡವನ್ನು ಐಪಿಎಲ್ ಪ್ರಶಸ್ತಿಗೆ ಮುನ್ನಡೆಸಿದ್ದರು. ಹಾಗೆಯೇ ಪಂಜಾಬ್ ತಂಡವನ್ನು ಫೈನಲ್​ಗೇರಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ – Kannada News

ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನImage Credit source: PTI

ಬೆಂಗಳೂರು, ಜೂನ್​​ 03: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್​​ ಕಾಣಿಸಿಕೊಂಡಿರೋದು ಗಮನಸೆಳೆಯಿತು.

ಮುಖ್ಯಾಂಶಗಳು

  • ಕರ್ನಾಟಕದ 25ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
  • ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜ್ಯಪಾಲ ಗೆಹ್ಲೋಟ್​​
  • ಬೆಂಗಳೂರಿನ ರಾಜಭವನದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗಿ

ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್​ ರೆಡ್ಡಿ
ಕೇರಳಂ ಸಿಎಂ ಸತೀಶನ್​,  ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್​, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್​​ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್​​ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿರೋದು ವಿಶೇಷವಾಗಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ; ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್

ಪ್ರಮಾಣವಚನಕ್ಕೂ ಮುನ್ನ ವಿಶೇಷ ಪೂಜೆ

ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್​​ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ 5ಕ್ಕೂ ಹೆಚ್ಚು ಪುರೋಹಿತರಿಂದ ವಿಶೇಷ ಪೂಜೆ ನೆರವೇರಿಸಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 4:16 pm, Wed, 3 June 26

Source link

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ – Kannada News

ಬೆಂಗಳೂರು, ಜೂನ್​ 03: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ (DK Shivakumar)
ಪ್ರಮಾಣ‌ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಲೋಕಭವನಕ್ಕೆ ಆಗಮಿಸುತ್ತಿದ್ದ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಹಸ್ರಾರು ಕಾರ್ಯಕರ್ತರತ್ತ ಕೈ ಬೀಸಿದರು. ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಅಭಿಮಾನಿಗಳು ರಾಹುಲ್ ಗಾಂಧಿಯವರನ್ನು ನೋಡುತ್ತಿದ್ದಂತೆ, “ಸರ್, ವೇವ್ ಯುವರ್ ಹ್ಯಾಂಡ್ ಸರ್,” “ರಾಹುಲ್ ಸರ್, ವೇವ್ ಯುವರ್ ಹ್ಯಾಂಡ್,” ಎಂದು ಪದೇ ಪದೇ ಕೂಗಿದರು. ಈ ವೇಳೆ ರಾಹುಲ್ ಗಾಂಧಿ ಅಭಿಮಾನಿಗಳತ್ತ ಫ್ಲೈಯಿಂಗ್ ಕಿಸ್ ನೀಡಿದರು. ಇನ್ನು ರಾಹುಲ್ ಗಾಂಧಿ ಜೊತೆಗೆ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ.ವೇಣುಗೋಪಾಲ್ ಅವರೂ ಸಹ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: ಸಿಎಂ ಘೋಷಿಸಿದ 6 ಕೊಡುಗೆಗಳಾವುವು? – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More

Source link

ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ – Kannada News

ಬೆಂಗಳೂರು, (ಜೂನ್ 03): ಸಚಿವ ಸ್ಥಾನ ಆಸೆ ಈಡೇರದಿದ್ದರೂ ಸಹ ಬಿಕೆ ಹರಿಪ್ರಸಾದ್​​​ಗೆ (BK Hariprasad) ಎರಡೆರಡು ಹುದ್ದೆಗು ಒದಗಿ ಬಂದಿವೆ. ವಿಧಾನ ಪರಿಷತ್​​​ಗೆ ಮತ್ತೊಮ್ಮೆ ಹರಿಪ್ರಸಾದ್​​ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಇದರ ಜೊತೆ ಕೆಪಿಸಿಸಿ (KPCC President)  ಪಟ್ಟವನ್ನು ಕಟ್ಟಿದೆ. ಹೌದು….ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು ಈ ಆದೇಶ ಹೊರಡಿಸಿದ್ದು, ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ಹೆಸರು ಘೋಷಣೆ
  • ಡಿಕೆ ರಾಜೀನಾಮೆ ಬೆನ್ನಲ್ಲೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ
  • ಕೆಪಿಸಿಸಿ ಅಧ್ಯಕ್ಷರಾಗಿ ಬಿ‌.ಕೆ‌.ಹರಿಪ್ರಸಾದ್ ನೇಮಿಸಿದ ಎಐಸಿಸಿ
  • ಒಬಿಸಿ ಸಮುದಾಯದ ನಾಯಕನಿಗೆ ಮಣೆ ಹಾಕಿದ ಎಐಸಿಸಿ

ಸಚಿವ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷ ಹುದ್ದೆ ಎರಡರ ಮೇಲೂ ಕಣ್ಣಿಟ್ಟಿದ್ದ ಸತೀಶ್‌ ಜಾರಕಿಹೊಳಿಯವರಿಗೆ ಹೈಕಮಾಂಡ್‌ ಶಾಕ್‌ ನೀಡಿದ್ದು, ಸಚಿವ ಸ್ಥಾನಕ್ಕೆ ಸಿಮಿತಗೊಳಿಸಿದೆ. ಕೆಪಿಸಿಸಿ ಸಾರಥ್ಯವನ್ನು ಬಿ.ಕೆ. ಹರಿಪ್ರಸಾದ್‌ ಅವರ ಹೆಗಲಿಗೆ ಹೊರಿಸಿದೆ. ಇನ್ನು ಬಿಕೆ ಹರಿ ಪ್ರಸಾದ್ ಸಹ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅವರಿಗೆ ಡಿಕೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಹೈಕಮಾಂಡ್  ನಿರ್ಧಾರ ಬದಲಿಸಿದ್ದು, ವಿಧಾನಪರಿಷತ್ ಜೊತೆಗೆ ಕೆಪಿಸಿಸಿ ಪಟ್ಟವನ್ನು ಕಟ್ಟಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ, ಜೈಲಿನಿಂದ ಬಂದು 6 ವರ್ಷ ಪಕ್ಷ ಸಂಘಟಿಸಿದ್ಹೇಗೆ?

ಕಳೆದ ಆರು ವರ್ಷಗಳಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಿಕೆ ಶಿವಕುಮಾರ್ ಅವರು ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಈಗ ಅನುಭವಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತರಲಾಗಿದೆ.

Source link

ಡಾರ್ಕ್ ಪ್ಯಾಟರ್ನ್ ವಿರುದ್ಧ CCPA ಕಠಿಣ ಕ್ರಮ; 5 ಲಕ್ಷದವರೆಗೆ ದಂಡ – Kannada News

ನವದೆಹಲಿ, ಜೂನ್ 3: ಗ್ರಾಹಕರನ್ನು ವಂಚಿಸುವ ಇ-ಕಾಮರ್ಸ್ ವೆಬ್‌ಸೈಟ್‌ಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತು ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಭಾರಿ ಸಮರ ಸಾರಿವೆ. ಆನ್‌ಲೈನ್‌ನಲ್ಲಿ ಗ್ರಾಹಕರಿಗೆ ಗೊತ್ತಿಲ್ಲದಂತೆ ಮೋಸ ಮಾಡುವ ‘ಡಾರ್ಕ್ ಪ್ಯಾಟರ್ನ್ಸ್‌’ ಹಾವಳಿಗೆ ಬ್ರೇಕ್ ಹಾಕಲು CCPA (Central Consumer Protection Authority) ಈಗ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಭಾರಿ ದಂಡ ವಿಧಿಸಿದೆ. ಡಿಜಿಟಲ್, ಇ ಕಾಮರ್ಸ್ ವೇದಿಕೆಗಳಲ್ಲಿ ಕರಾಳ ಮಾದರಿ (ಡಾರ್ಕ್ ಪ್ಯಾಟರ್ನ್) ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕಠಿಣ ಕ್ರಮ ಕೈಗೊಳ್ಳುತ್ತಿದ್ದು, 2 ಪ್ರಮುಖ ಕಂಪನಿಗಳಿಗೆ 5 ಲಕ್ಷ ರೂ.ವರೆಗೆ ದಂಡ ವಿಧಿಸಿದ್ದಲ್ಲದೆ, ಗ್ರಾಹಕರನ್ನು ಮೋಸಗೊಳಿಸದಂತೆ ನಿರ್ದೇಶನ ನೀಡಿದೆ.

ಡಾರ್ಕ್ ಪ್ಯಾಟರ್ನ್ ನಿಂದಾಗಿ ಗ್ರಾಹಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದ PhysicsWallah ಮತ್ತು McAfee ಕಂಪನಿ ವಿರುದ್ಧ ಸ್ವಯಂ ಕಾರ್ಯಾಚರಣೆ ನಡೆಸಿದ ಸಿಸಿಪಿಎ, ಫಿಸಿಕ್ಸ್ ವಲ್ಲಾಹ್​ಗೆ 5 ಲಕ್ಷ ರೂ. ಮತ್ತು ಮ್ಯಾಕ್‌ಅಫೀಗೆ 1 ಲಕ್ಷ ರೂ. ದಂಡ ವಿಧಿಸಿದೆ.

ಇದನ್ನೂ ಓದಿ: ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಜನರ ದಾರಿತಪ್ಪಿಸುವ ಜಾಹೀರಾತು: ಎರಡು ಕೋಚಿಂಗ್ ಸಂಸ್ಥೆಗೆ 7 ಲಕ್ಷ ರೂ. ದಂಡ

CCPA ಮುಖ್ಯ ಆಯುಕ್ತೆ ನಿಧಿ ಖರೆ ಮತ್ತು ಆಯುಕ್ತೆ ಅನುಪಮ್ ಮಿಶ್ರಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಗ್ರಾಹಕರನ್ನು ದಾರಿ ತಪ್ಪಿಸುವ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಆಯ್ಕೆಗಳ ಮೇಲೆ ಪ್ರಭಾವ ಬೀರುವ ಡಾರ್ಕ್ ಪ್ಯಾಟರ್ನ್ ಬಳಸಿದ್ದಕ್ಕಾಗಿ ಫಿಸಿಕ್ಸ್‌ವಾಲಾ ಲಿಮಿಟೆಡ್ ಮತ್ತು ಮ್ಯಾಕ್‌ಅಫೀ ಸಾಫ್ಟ್‌ವೇರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಗಳ ಪ್ರಕಾರ, ಗ್ರಾಹಕರ ಹಕ್ಕುಗಳನ್ನು ಉಲ್ಲಂಘಿಸುವ ಮತ್ತು ಡಿಜಿಟಲ್ ಜಗತ್ತಿನಲ್ಲಿ ಜನರನ್ನು ದಾರಿ ತಪ್ಪಿಸುವ ಕಂಪನಿಗಳಿಗೆ ಭಾರಿ ದಂಡ ವಿಧಿಸಲಾಗುತ್ತದೆ. ನಿಯಮ ಉಲ್ಲಂಘಿಸುವ ಕಂಪನಿಗಳು ಅಥವಾ ವೆಬ್‌ಸೈಟ್‌ಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಇಷ್ಟಾದರೂ ಸುಧಾರಿಸದ ಇ-ಕಾಮರ್ಸ್ ಸಂಸ್ಥೆಗಳ ವಿರುದ್ಧ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ಪರವಾನಗಿ ರದ್ದುಪಡಿಸುವ ಎಚ್ಚರಿಕೆ ಸಹ ನೀಡಲಾಗಿದೆ.

‘ಡಾರ್ಕ್ ಪ್ಯಾಟರ್ನ್’ ಅಂದರೆ ಏನು?:

ಆನ್‌ಲೈನ್ ಶಾಪಿಂಗ್ ಆ್ಯಪ್‌ಗಳು, ಟಿಕೆಟ್ ಬುಕಿಂಗ್ ವೆಬ್‌ಸೈಟ್‌ಗಳು ಅಥವಾ ಸಾಮಾಜಿಕ ಜಾಲತಾಣಗಳು ಗ್ರಾಹಕರಿಗೆ ತಿಳಿಯದಂತೆ ಅವರ ಜೇಬಿಗೆ ಕತ್ತರಿ ಹಾಕಲು ಬಳಸುವ ತಂತ್ರಜ್ಞಾನದ ತಂತ್ರಗಳನ್ನೇ ‘ಡಾರ್ಕ್ ಪ್ಯಾಟರ್ನ್’ ಎನ್ನಲಾಗುತ್ತದೆ. ನೀವು ಖರೀದಿಸುವ ವಸ್ತುವಿನ ಪಕ್ಕದಲ್ಲಿ “ಇನ್ನೂ ಕೇವಲ 2 ನಿಮಿಷ ಮಾತ್ರ ಬಾಕಿ ಇದೆ” ಅಥವಾ “ಇನ್ನು ಕೇವಲ 1 ಸ್ಟಾಕ್ ಇದೆ” ಎಂದು ಸುಳ್ಳು ಹೇಳಿ ಗ್ರಾಹಕರಲ್ಲಿ ಗೊಂದಲ ಸೃಷ್ಟಿಸಲಾಗುತ್ತದೆ. ಕೊನೆಯ ಕ್ಷಣದವರೆಗೆ ವಸ್ತುವಿನ ಅಸಲಿ ಬೆಲೆ ತೋರಿಸದೆ, ಪೇಮೆಂಟ್ ಮಾಡುವ ಹಂತದಲ್ಲಿ ‘ಕಾನ್ವೆನಿಯನ್ಸ್ ಫೀಸ್’ ಅಥವಾ ಹೆಚ್ಚುವರಿ ಟ್ಯಾಕ್ಸ್ ಎಂದು ಹಣ ವಸೂಲಿ ಮಾಡಲಾಗುತ್ತದೆ.

ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ

CCPA ನಿಷೇಧಿಸಿರುವ ಪ್ರಮುಖ ಡಾರ್ಕ್ ಪ್ಯಾಟರ್ನ್‌ಗಳು:

CCPA ಒಟ್ಟು 13 ಕ್ಕೂ ಹೆಚ್ಚು ರೀತಿಯ ಡಾರ್ಕ್ ಪ್ಯಾಟರ್ನ್‌ಗಳನ್ನು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ಘೋಷಿಸಿದೆ. ಅವುಗಳೆಂದರೆ,

  • ಗ್ರಾಹಕರನ್ನು ಬಲವಂತವಾಗಿ ಜಾಹೀರಾತುಗಳನ್ನು ನೋಡುವಂತೆ ಮಾಡುವುದು.
  • ಖರೀದಿಸದ ಸೇವೆಗಳಿಗೆ ಕಡ್ಡಾಯವಾಗಿ ಹಣ ವಸೂಲಿ ಮಾಡುವುದು.
  • ವೆಬ್‌ಸೈಟ್‌ಗಳಲ್ಲಿ ಕ್ಯಾನ್ಸಲ್ ಮಾಡುವ ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link