Category Archives: Blog

Your blog category

ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಪೊಲೀಸರ ಕಾರ್ಯಾಚರಣೆ: 8,750 ಕ್ಕೂ ಹೆಚ್ಚು ವೆಬ್‌ಸೈಟ್‌ಗಳು ಬ್ಲಾಕ್! – Kannada News

ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಕರ್ನಾಟಕ ಪೊಲೀಸರ ಬಿಗ್ ಕ್ರಾಕ್‌ಡೌನ್

ಬೆಂಗಳೂರು, ಜೂನ್ 02: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫೈನಲ್ ಪಂದ್ಯದ ವೇಳೆ ಅಕ್ರಮ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್‌ಗೆ ಲಗಾಮು ಹಾಕಲು ಕರ್ನಾಟಕ ಪೊಲೀಸರು ಮತ್ತು ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಐಪಿಎಲ್ ಕ್ರಿಕೆಟ್ ಜೂಜಾಟವನ್ನು ಗುರಿಯಾಗಿಸಿಕೊಂಡು ದೇಶಾದ್ಯಂತ ಸಕ್ರಿಯವಾಗಿದ್ದ ಸುಮಾರು 8,750ಕ್ಕೂ ಹೆಚ್ಚು ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳು ಹಾಗೂ ಲಿಂಕ್‌ಗಳನ್ನು ಯಶಸ್ವಿಯಾಗಿ ಬ್ಲಾಕ್ ಮಾಡಲಾಗಿದೆ.

ಮುಖ್ಯಾಂಶಗಳು

  • ಐಪಿಎಲ್ ಫೈನಲ್ ವೇಳೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಬೃಹತ್ ಕಾರ್ಯಾಚರಣೆ.
  • ಕರ್ನಾಟಕ ಪೊಲೀಸರ ಶಿಫಾರಸಿನ ಮೇರೆಗೆ 8,750 ವೆಬ್‌ಸೈಟ್‌ಗಳು ಸಂಪೂರ್ಣ ಬ್ಲಾಕ್.
  • ಯುವ ಪೀಳಿಗೆ ಹಣ ಕಳೆದುಕೊಳ್ಳದಂತೆ ಸೈಬರ್ ಪೊಲೀಸರಿಂದ ಕಟ್ಟುನಿಟ್ಟಿನ ಎಚ್ಚರಿಕೆ.

ಸೈಬರ್ ಪೊಲೀಸರ ಹದ್ದಿನ ಕಣ್ಣು

ಐಪಿಎಲ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ಬೆಟ್ಟಿಂಗ್ ನಡೆಯುವ ಸಾಧ್ಯತೆ ಇರುವುದನ್ನು ಮನಗಂಡಿದ್ದ ಸೈಬರ್ ಕ್ರೈಮ್ ವಿಭಾಗದ ಸಿಐಡಿ (CID) ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದರು. ಸಾರ್ವಜನಿಕರನ್ನು ಸುಲಭವಾಗಿ ಹಣ ಗಳಿಸುವ ಆಮಿಷಕ್ಕೆ ಒಡ್ಡಿ ಹಣ ದೋಚುತ್ತಿದ್ದ ಸಾವಿರಾರು ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ತಾಂತ್ರಿಕ ವಿಶ್ಲೇಷಣೆಯ ಮೂಲಕ ಪತ್ತೆ ಹಚ್ಚಲಾಗಿದೆ.

ಕರ್ನಾಟಕ ಪೊಲೀಸರ ಶಿಫಾರಸಿನ ಮೇರೆಗೆ ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಈ ಅಕ್ರಮ ವೆಬ್‌ಸೈಟ್‌ಗಳನ್ನು ದೇಶಾದ್ಯಂತ ನಿಷೇಧಿಸಲು ತಕ್ಷಣದ ಆದೇಶ ಹೊರಡಿಸಿದೆ.

ಯುವ ಪೀಳಿಗೆಗೆ ಸೈಬರ್ ತಜ್ಞರ ಎಚ್ಚರಿಕೆ

ಅನಧಿಕೃತ ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ವೆಬ್‌ಸೈಟ್‌ಗಳು ಕೇವಲ ಹಣದ ನಷ್ಟವನ್ನು ಮಾತ್ರ ಉಂಟುಮಾಡುವುದಿಲ್ಲ, ಬದಲಿಗೆ ಬಳಕೆದಾರರ ಬ್ಯಾಂಕಿಂಗ್ ವಿವರಗಳು ಹಾಗೂ ವೈಯಕ್ತಿಕ ಡೇಟಾವನ್ನು ಕದಿಯುವ ಸೈಬರ್ ವಂಚನೆಗಳಿಗೂ ದಾರಿಯಾಗುತ್ತಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಯುವಕರು ಮತ್ತು ವಿದ್ಯಾರ್ಥಿಗಳು ಇಂತಹ ಆಪ್‌ಗಳ ಮೋಡಿಗೆ ಬಲಿಯಾಗಿ ಲಕ್ಷಾಂತರ ರೂಪಾಯಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ಯಾವುದೇ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಣ ಹೂಡಿ ಕ್ರಿಕೆಟ್ ಬೆಟ್ಟಿಂಗ್ ನಡೆಸುವುದು ಕಾನೂನುಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ. ಇಂತಹ ಸೈಬರ್ ಅಪರಾಧಗಳ ವಿರುದ್ಧ ನಮ್ಮ ತನಿಖೆ ಮತ್ತು ಕ್ರಾಕ್‌ಡೌನ್ ಕಾರ್ಯಾಚರಣೆ ಮುಂದೆಯೂ ಮುಂದುವರಿಯಲಿದೆ ಎಂದು ಕರ್ನಾಟಕ ಸೈಬರ್ ಪೊಲೀಸ್ ವಿಭಾಗ ಎಚ್ಚರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ – Kannada News

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ (DK Shivakumar) ಅವರು ನಾಳೆ (ಮೇ ಜೂನ್ 03) ಸಂಜೆ 4.05ಕ್ಕೆ ಲೋಕಭವನದ (Lokbhavana) ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಮುಂದಾಗಿದ್ದಾರೆ.

ಮುಖ್ಯಾಂಶಗಳು

  • ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಡಿ.ಕೆ.ಶಿವಕುಮಾರ್​
  • ಸರ್ವ ಧರ್ಮ, ಸಮುದಾಯದ ಶ್ರೀಗಳ ಸಮ್ಮುಖದಲ್ಲಿ ಡಿಕೆ ಪದಗ್ರಹಣ
  • ಲೋಕಭವನದಲ್ಲಿ ನಡೆಯೋ ಪ್ರಮಾಣವಚನಕ್ಕೆ 55 ಮಠಾಧಿಪತಿಗಳು,
    ಫಾದರ್ ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದ ಆಹ್ವಾನ
  • ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಿಎಂ ಮತ್ತು ಸಚಿವರು

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪ್ರಮಾಣವಚನ

ಸರ್ವ ಧರ್ಮ, ಸರ್ವ ಸಮುದಾಯದ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, 55 ಸ್ವಾಮೀಜಿಗಳು, ಫಾದರ್ , ಮಠಾಧಿಪತಿಗಳು ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದಲೇ ಅಧಿಕೃತ ಆಹ್ವಾನ ಕಳಿಸಲು ಡಿಕೆ ಶಿವಕುಮಾರ್ ಸೂಚನೆ ನೀಡಿದೆ.ಇದರ ಬೆನ್ನಲ್ಲೇ ಯಾರಿಗೆಲ್ಲಾ ಆಹ್ವಾನ ನೀಡಬೇಕೆಂದು ಶಿಷ್ಟಾಚಾರ ವಿಭಾಗವು ಡಿ.ಕೆ ಶಿವಕುಮಾರ್ ಕಚೇರಿಯಿಂದ ಪಟ್ಟಿ ಪಡೆದುಕೊಂಡಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

ಪೂರ್ವಾಭಿಮುಖವಾಗಿ ಪ್ರಮಾಣ ವಚನ

ಇನ್ನು ಡಿಕೆ ಶಿವಕುಮಾರ್ ಜ್ಯೋತಿಷ್ಯಯನ್ನು ಬಹಳ ನಂಬುವರು. ಹೀಗಾಗಿ ಸ್ವಾಮೀಜಿಗಳು ಹೇಳಿದ ದಿನಾಂಕ, ಸಮಯವನ್ನು ಚಾಚು ತಪ್ಪಿದೆ ಪಾಲನೆ ಮಾಡಲಿದ್ದಾರೆ. ಅದರಂತೆ ಡಿಕೆ ಶಿವಕುಮಾರ್ ಅವರು ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಗಾಜಿನ ಮನೆಯಲ್ಲಿ 1100 ರಷ್ಟು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿಗಳು, ಧರ್ಮಗುರುಗಳು, ನ್ಯಾಯಾಧೀಶರು, ವಿಶೇಷ ಆಹ್ವಾನಿತರು, ಬೇರೆ ರಾಜ್ಯಗಳ ಸಿಎಂಗಳಿಗೆ ಸೇರಿದಂತೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಆಹ್ವಾನದ ಪಟ್ಟಿಯಲ್ಲಿರುವ ಪ್ರಮುಖ ಶ್ರೀಗಳ ಹೆಸರು

  •  ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು- ಆದಿಚುಂಚನಗಿರಿ ಮಹಾಸಂಸ್ಥಾನಮಠ, ಆದಿಚುಂಚನಗಿರಿ.
  •  ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳು- ಸುತ್ತೂರುಮಠ,ಮೈಸೂರು.
  • ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು- ಶ್ರೀಸಿದ್ಧಗಂಗಾಮಠ, ತುಮಕೂರು.
  •  ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮಿಗಳು- ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠ, ಬೆಂಗಳೂರು.
    05. ಶ್ರೀ ನಂಜಾವಧೂತ ಮಹಾಸ್ವಾಮಿಗಳು- ಗುರು ಬೃಹ್ಮೇಶ್ವರಮಠ, ಪಟ್ಟನಾಯಕನಹಳ್ಳಿ, ಶಿರಾ.
  • .ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು, ಕಾಡಸಿದ್ಧೇಶ್ವರಮಠ, ನೊಣವಿನಕೆರೆ.
  •  ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ತರಳಬಾಳು ಬೃಹನ್ಮಠ, ಸಿರಿಗೆರೆ.
  •  ಶ್ರೀ ವಚನಾನಂದ ಮಹಾಸ್ವಾಮಿಗಳು- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರ.
  •  ಶ್ರೀ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ-ಮಹಾಸ್ವಾಮಿಗಳು,ರಂಭಾಪುರ ಪೀಠ, ಬಾಳೆಹೊನ್ನೂರು.
  • ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಮಹಾಸ್ವಾಮಿಗಳು, ಉಜ್ಜಯಿನಿಪೀಠ,ಉಜ್ಜಯಿನಿ. ವಿಜಯನಗರ ಜಿಲ್ಲೆ.
  • ಶ್ರೀ ಭೀಮಾಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಕೇದಾರಪೀಠ, ಕೇದಾರನಾಥ.
  •  ಶ್ರೀ ಚೆನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು,ಶ್ರೀಶೈಲಪೀಠ,ಶ್ರೀಶೈಲ.
  •  ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕನಕ ಗುರುಪೀಠ,ಕಾಗಿನೆಲೆ
  •  ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ,ಚಿತ್ರದುರ್ಗ.
  • ಶ್ರೀ ಶಾಂತವೀರ ಸ್ವಾಮೀಜಿ ಕುಂಚಟಿಗ ಗುರುಪೀಠ,ಹೊಸದುರ್ಗ.
  • ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ,ಮಾದಾರ ಚನ್ನಯ್ಯ ಗುರುಪೀಠ, ಚಿತ್ರದುರ್ಗ.
  •  ಶ್ರೀ ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮಿಗಳು, ಪೇಜಾವರಮಠ, ಉಡುಪಿ.
  •  ಶ್ರೀ ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್ ಆಶ್ರಮ, ಬೆಂಗಳೂರು.
  •  ಶ್ರೀ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ದಿಗಂಬರ ಜೈನಮಠ, ಶ್ರವಣಬೆಳಗೊಳ.
  • ಶ್ರೀ ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು, ನಿಡುಮಾಮಡಿಮಠ, ಬೆಂಗಳೂರು.
  •  ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ, ಬೆಂಗಳೂರು.
  •  ಆರ್ಚಬಿಷಪ್ ಡಾ.ಪೀಟರ್ ಮಚಾಡೋ,ಕ್ಯಾಥೋಲಿಕ್ ಚರ್ಚ,ಬೆಂಗಳೂರು.
  • ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್,ದರ್ಗಾ ಹಜರತ್ ಖ್ವಾಜಾ ಬಂದೆನವಾಜ್,ಕಲಬುರ್ಗಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ತಮಿಳುನಾಡು ರಾಜಕಾರಣದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಆಕ್ರಮಣಕಾರಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ದಿಢೀರ್ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದೆಹಲಿಗೆ ಭೇಟಿ ನೀಡಿರುವ ಅವರು ಪಕ್ಷದ ಉಸ್ತುವಾರಿ ಹಾಗೂ ಹಿರಿಯ ನಾಯಕರಾದ ನಿತಿನ್ ನಬಿನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಮತ್ತು ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Source link

ಎರಡು ಲಕ್ಷ ರೂ. ಇದ್ದ ಹಣದ ಬ್ಯಾಗ್ ಕದ್ದೊಯ್ದು, ಮರದ ಮೇಲೆ ಕುಳಿತು ನೋಟಿನ ಮಳೆ ಸುರಿಸಿದ ಕೋತಿ – Kannada News

ಬುಲಂದ್‌ಶಹರ್, ಜೂನ್ 02: ಸಾಮಾನ್ಯವಾಗಿ ಕೋತಿ(Monkey)ಗಳು ಜನರ ಕೈಯಿಂದ ಮೊಬೈಲ್, ಹಣ್ಣು, ಪರ್ಸ್​, ಕನ್ನಡಕ ಇತ್ಯಾದಿ ಕಸಿದುಕೊಳ್ಳುವುದನ್ನು ಕಂಡಿದ್ದೇವೆ. ಆದರೆ ಉತ್ತರ ಪ್ರದೇಶದ ನ್ಯಾಯಾಲಯದ ಆವರಣದಲ್ಲಿ ಕೋತಿಯೊಂದು 2 ಲಕ್ಷ ರೂ. ಇದ್ದ ಬ್ಯಾಗ್​ ಕದ್ದೊಯ್ದು, ಮರದ ಮೇಲೆ ಕುಳಿತು ಹಣದ ಮಳೆ ಸುರಿಸಿರುವ ವಿಡಿಯೋ ವೈರಲ್ ಆಗಿದೆ.

ಬೇವಿನ ಮರದಲ್ಲಿ ‘ನೋಟುಗಳ ಮಳೆ’
ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬರು ಹಣದ ಚೀಲದೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಕೋತಿಯು ಚೀಲವನ್ನು ಕಸಿದುಕೊಂಡು ಕ್ಷಣಾರ್ಧದಲ್ಲಿ ಹತ್ತಿರದ ಬೇವಿನ ಮರವನ್ನು ಹತ್ತಿದೆ. ಚೀಲದೊಳಗೆ ಹಣ್ಣು ಅಥವಾ ಬಿಸ್ಕತ್ತು ಇರಬಹುದೆಂದು ಭಾವಿಸಿದ ಕೋತಿ, ಬ್ಯಾಗ್ ಜಿಪ್ ತೆರೆದು ನೋಟುಗಳ ಕಂತೆಗಳನ್ನು ಹೊರತೆಗೆಯಲು ಆರಂಭಿಸಿದೆ. ನಂತರ ಒಂದೊಂದೇ ನೋಟುಗಳನ್ನು ಗಾಳಿಯಲ್ಲಿ ತೂರಲಾರಂಭಿಸಿತು.

ವಿಡಿಯೋ

ಹಣ ಆಯ್ದುಕೊಂಡ ಜನರು: ಮರದಿಂದ 500 ರೂ. ಮುಖಬೆಲೆಯ ನೋಟುಗಳು ಗಾಳಿಯಲ್ಲಿ ತೇಲುತ್ತಾ ಕೆಳಗೆ ಬೀಳುತ್ತಿದ್ದಂತೆ, ನ್ಯಾಯಾಲಯದ ಆವರಣದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಕೆಳಗೆ ನಿಂತಿದ್ದ ಸಾರ್ವಜನಿಕರು ಹಾಗೂ ವಕೀಲರು ನೋಟುಗಳನ್ನು ಸಂಗ್ರಹಿಸಿ, ಮಾಲೀಕರಿಗೆ ಸಹಾಯ ಮಾಡಲು ಮುಂದಾದರು. ಸ್ವಲ್ಪ ಸಮಯದವರೆಗೆ ಇಡೀ ಆವರಣ ಆಕಾಶದಿಂದ ಹಣದ ಮಳೆಯಾಗುತ್ತಿರುವಂತೆ ಕಾಣಿಸುತ್ತಿತ್ತು.

ಮತ್ತಷ್ಟು ಓದಿ: Video Viral: ಕೋತಿ ಜೊತೆಯೇ ಚೇಷ್ಟೆ ಮಾಡಲು ಹೋದ್ರೆ ಏನಾಗುತ್ತೆ ನೋಡಿ; ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ನಗುವಿನ ಅಲೆ
ಈ ಇಡೀ ರೋಚಕ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ತಮಾಷೆಯ ಕಾಮೆಂಟ್‌ಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.ಬಂದರ್ ಬಾಬಾ ಇಂದು ಎಲ್ಲರಿಗೂ ಉಚಿತ ಬೋನಸ್ ನೀಡುತ್ತಿದ್ದಾರೆ ಎಂದು ಒಬ್ಬರು ಬರೆದರೆ, ಇಷ್ಟು ದಿನ ಸಿನಿಮಾಗಳಲ್ಲಿ ಮಾತ್ರ ಹಣದ ಮಳೆ ನೋಡಿರುತ್ತೀರಿ, ಇಂದು ಕೋತಿರಾಯ ನಿಜವಾಗಿಯೇ ಆಸೆ ಈಡೇರಿಸಿದ್ದಾನೆ ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಯಾರಿಗೂ ಯಾವುದೇ ಹಾನಿಯಾಗದೆ, ಕಳೆದುಹೋದ ಹಣವು ವಾಪಸ್ ಸಿಗುವಂತಾದ ಈ ಅಪರೂಪದ ವೀಡಿಯೊ ಲಕ್ಷಾಂತರ ವೀಕ್ಷಣೆಗಳನ್ನು ಪಡೆದು ಇಂಟರ್ನೆಟ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮುಂದಿನ 6 ತಿಂಗಳಲ್ಲಿ ಸಂಪೂರ್ಣ ಕಾಗದ ರಹಿತವಾಗಲಿದೆ ಕರ್ನಾಟಕ ವಿಧಾನಮಂಡಲ: ಶಾಸಕರಿಗೆ ಸಿಗಲಿದೆ ಐಪ್ಯಾಡ್ – Kannada News

ಮುಂದಿನ 6 ತಿಂಗಳಲ್ಲಿ ಪೇಪರ್​ಲೆಸ್ ವಿಧಾನಮಂಡಲ: ಶಾಸಕರಿಗೆ ಐಪ್ಯಾಡ್!Image Credit source: tv9

ಮಂಗಳೂರು, ಜೂನ್ 2: ಕರ್ನಾಟಕ ವಿಧಾನಮಂಡಲವು ಮುಂದಿನ ಆರು ತಿಂಗಳಲ್ಲಿ ಸಂಪೂರ್ಣವಾಗಿ ಡಿಜಿಟಲೀಕರಣಗೊಂಡು ಕಾಗದ ರಹಿತವಾಗಿ (Paperless) ಬದಲಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ತಿಳಿಸಿದ್ದಾರೆ. ಇನ್ಮುಂದೆ ಅಧಿವೇಶನದ ಅವಧಿಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಕಾಗದದ ಕಡತಗಳ ಬದಲಿಗೆ ಇನ್‌ಬಿಲ್ಟ್ ಅಪ್ಲಿಕೇಶನ್ ಒಳಗೊಂಡಿರುವ ಐಪ್ಯಾಡ್‌ಗಳನ್ನು (iPads) ಬಳಸಲಿದ್ದಾರೆ. ಈ ಮಹತ್ವಾಕಾಂಕ್ಷಿ ನಿರ್ಧಾರದಿಂದಾಗಿ ಮುದ್ರಣ ಮತ್ತು ಸಾಗಣೆಗೆ ತಗಲುತ್ತಿದ್ದ ಕೋಟ್ಯಂತರ ರೂಪಾಯಿ ವೆಚ್ಚ ಹಾಗೂ ಕಾಗದದ ಬಳಕೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಮುಖ್ಯಾಂಶಗಳು

  • ಮುಂದಿನ 6 ತಿಂಗಳಲ್ಲಿ ಕರ್ನಾಟಕ ವಿಧಾನಮಂಡಲ ಸಂಪೂರ್ಣ ಡಿಜಿಟಲೀಕರಣ.
  • ಅಧಿವೇಶನದಲ್ಲಿ ಕಾಗದದ ಬದಲು ಐಪ್ಯಾಡ್ ಬಳಸಲಿರುವ ಶಾಸಕರು.
  • ಬೆಂಗಳೂರು, ಬೆಳಗಾವಿಯ ಸದನಗಳ ಡಿಜಿಟಲೀಕರಣಕ್ಕೆ ಒಟ್ಟು 130 ಕೋಟಿ ರೂ. ಅಂದಾಜು ವೆಚ್ಚ; ಶೇ 60 ರಷ್ಟು ಹಣ ಭರಿಸಲಿರುವ ಕೇಂದ್ರ ಸರ್ಕಾರ.

ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (NeVA) ಜೊತೆ ಒಪ್ಪಂದ

ಈ ಡಿಜಿಟಲ್ ಕ್ರಾಂತಿಗಾಗಿ ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ ಜಂಟಿಯಾಗಿ ‘ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (NeVA)’ ಯೋಜನೆಯೊಂದಿಗೆ ಒಪ್ಪಂದಕ್ಕೆ (MoU) ಸಹಿ ಹಾಕಿವೆ. ಈ ಪ್ರಕ್ರಿಯೆಯ ಸಂಪೂರ್ಣ ಮೇಲ್ವಿಚಾರಣೆಯನ್ನು ‘ನೆವಾ’ ಮತ್ತು ರಾಜ್ಯ ಉಸ್ತುವಾರಿ ಸಮಿತಿಯ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಬೆಂಗಳೂರು ಮತ್ತು ಬೆಳಗಾವಿಯ ಸುವರ್ಣಸೌಧದ ವಿಧಾನಸಭೆ ಕಲಾಪಗಳ ಡಿಜಿಟಲೀಕರಣಕ್ಕೆ 78 ಕೋಟಿ ರೂ. ಹಾಗೂ ವಿಧಾನಪರಿಷತ್ ಡಿಜಿಟಲೀಕರಣಕ್ಕೆ 52 ಕೋಟಿ ರೂ. ಸೇರಿ ಒಟ್ಟು 130 ಕೋಟಿ ರೂ. ವೆಚ್ಚವಾಗಲಿದ್ದು, ಇದರಲ್ಲಿ ಕೇಂದ್ರ ಸರ್ಕಾರ ಶೇ 60 ರಷ್ಟು ಪಾಲನ್ನು ನೀಡಲಿದೆ.

ಐಪ್ಯಾಡ್ ಮೂಲಕವೇ ಸಿಗಲಿದೆ ಸಕಲ ಮಾಹಿತಿ, ಶಾಸಕರಿಗೆ ತರಬೇತಿ

ಅಧಿವೇಶನದ ದಿನದ ಕಾರ್ಯಸೂಚಿ (Agenda), ಪ್ರಶ್ನೋತ್ತರಗಳು ಹಾಗೂ ಮಂಡನೆಯಾಗುವ ಎಲ್ಲಾ ವಿಧೇಯಕಗಳನ್ನು (Bills) ಶಾಸಕರಿಗೆ ಇ-ಫಾರ್ಮ್ಯಾಟ್ (ಡಿಜಿಟಲ್) ಮೂಲಕವೇ ಸುಲಭವಾಗಿ ಸಿಗುವಂತೆ ಕಳುಹಿಸಲಾಗುತ್ತದೆ. ಇದರಿಂದಾಗಿ ಕಡತಗಳು ಕಾಣೆಯಾಗುವ ಭೀತಿ ಇರುವುದಿಲ್ಲ. ಅಧಿವೇಶನದ ಸಮಯದಲ್ಲಿ ಶಾಸಕರ ಮೇಜುಗಳಿಗೆ ಐಪ್ಯಾಡ್‌ಗಳನ್ನು ಅಳವಡಿಸಲಾಗುತ್ತದೆಯಲ್ಲದೆ, ಕಲಾಪ ಮುಗಿದ ನಂತರ ಅವುಗಳನ್ನು ಸುರಕ್ಷಿತವಾಗಿ ತೆಗೆದಿಡಲಾಗುತ್ತದೆ. ಈ ವ್ಯವಸ್ಥೆಯನ್ನು ಬಳಸಲು ಎಲ್ಲಾ ಶಾಸಕರಿಗೂ ವಿಶೇಷ ತರಬೇತಿ ನೀಡಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ.

ಡಿಜಿಟಲ್ ಹಾಜರಾತಿ ಮತ್ತು ಕಿಯೋಸ್ಕ್ ಅಳವಡಿಕೆ

ಕೇವಲ ಕಲಾಪ ಮಾತ್ರವಲ್ಲದೆ ಶಾಸಕರ ಹಾಜರಾತಿ (Attendance) ವ್ಯವಸ್ಥೆಯನ್ನು ಕೂಡ ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಇದರೊಂದಿಗೆ, ವಿಧಾನಸೌಧದ ವಿವಿಧ ಮಹಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳು ಹಾಗೂ ಅಧಿಕಾರಿಗಳ ವಿವರಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸಲು ವಿಧಾನಮಂಡಲದ ಐಟಿ ತಂಡವು ಸೌಧದ ಆವರಣದಲ್ಲಿ ಮಾಹಿತಿ ಕೇಂದ್ರಗಳನ್ನು (Kiosks) ಸ್ಥಾಪಿಸಲಿದೆ ಎಂದು ಯುಟಿ ಖಾದರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – Kannada News

ಬೆಂಗಳೂರು, ಜೂನ್​​ 02: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶ ಹಾಗೂ ರಾಜ್ಯದ ಅತಿಗಣ್ಯವ್ಯಕ್ತಿಗಳು ಹಾಗೂ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರಿನ ಚಂಚಾರ ಪೊಲೀಸರು ತಿಳಿಸಿದ್ದರೆ.

ಯಾವೆಲ್ಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ?

  • ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ
  • ಬಾಳೇಕುಂದ್ರಿ ಜಂಕ್ಷನ್‌ನಿಂದ ಅಂಬೇಡ್ಕರ್ ರಸ್ತೆ ಕಡೆಗೆ
  • ಡಾ. ಅಂಬೇಡ್ಕರ್ ರಸ್ತೆಯಲ್ಲಿ ಕೆ.ಆರ್. ಸರ್ಕಲ್ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್‌ವರೆಗೆ
  • ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ, ಜೆ.ಡಿ.ಎಸ್ ಕ್ರಾಸ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ
  • ಕ್ಲೀನ್ಸ್ ಜಂಕ್ಷನ್ ಕಡೆಯಿಂದ ಸಿ.ಟಿ.ಓ ಕಡೆಗೆ
  • ಕ್ಲೀನ್ಸ್ ಜಂಕ್ಷನ್‌ನಲ್ಲಿ ಸೆಂಟ್ ಮಾರ್ಕ್ಸ್ ರಸ್ತೆಯಿಂದ ಸಿ.ಟಿ.ಓ. ಜಂಕ್ಷನ್ ಕಡೆಗೆ

ಈ ಮೇಲಿನ ಮಾರ್ಗಗಳಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಸಿಎಂ ಆಗಿ ನಾಳೆ ಡಿಕೆಶಿ ಪ್ರಮಾಣ; ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿ, ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ

ಪರ್ಯಾಯ ಮಾರ್ಗಗಳು

  • ಕಬ್ಬನ್ ರಸ್ತೆಯ ಬಿ.ಆರ್.ವಿ ಜಂಕ್ಷನ್‌ನಿಂದ ಸಿ.ಟಿ.ಓ. ಜಂಕ್ಷನ್ ವರೆಗೆ ಹಾಗೂ ಸಿ.ಟಿ.ಓ. ವೃತ್ತದಿಂದ ಲೋಕಭವನದವರೆಗೆ ಸಂಚರಿಸುವ ವಾಹನಗಳು ಬಿ.ಆರ್.ವಿ. ಜಂಕ್ಷನ್ ಬಳಿ ಶಿವಾಜಿನಗರ ಕಡೆಗೆ ಬಲತಿರುವು ಹಾಗೂ ಅನಿಲ್‌ ಕುಂಬ್ಳೆ ಜಂಕ್ಷನ್ ಕಡೆಗೆ ಎಡತಿರುವು ಪಡೆದು ಸಂಚರಿಸಬಹುದಾಗಿದೆ.
  • ಕ್ಲೀನ್ಸ್ ರಸ್ತೆ ಹಾಗೂ ಶಿವಾಜಿನಗರ ಕಡೆಯಿಂದ ಬರುವ ವಾಹನಗಳು ಬಾಳೇಕುಂದ್ರಿ ಜಂಕ್ಷನ್ ಬಳಿ ಕನ್ನಿಂಗ್‌ಹ್ಯಾಮ್ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ.
  • ಕೆ.ಆರ್. ಸರ್ಕಲ್‌ ಕಡೆಯಿಂದ ಕಾಫಿಬೋರ್ಡ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ನೃಪತುಂಗ ರಸ್ತೆಯ ಮುಖಾಂತರ ಸಂಚರಿಸಬಹುದಾಗಿದೆ.
  • ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಸುಬ್ಬಣ್ಣ ಜಂಕ್ಷನ್ ವರೆಗೆ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್ ಕಡೆಯಿಂದ ಶಿವಾನಂದ ಜಂಕ್ಷನ್ ಮೂಲಕ ಎಸ್.ಸಿ. ರಸ್ತೆ ಜಂಕ್ಷನ್ ತಲುಪಿ ಎಡತಿರುವು ಪಡೆದು ಸಂಚರಿಸಬಹುದಾಗಿದೆ.
  • ಕ್ಲೀನ್ಸ್ ಜಂಕ್ಷನ್ ಕಡೆಯಿಂದ ಲೋಕ ಭವನದ ಕಡೆಗೆ ಸಂಚರಿಸುವ ವಾಹನಗಳು ಅನಿಲ್‌ ಕುಂಬ್ಳೆ ಹಾಗೂ ಬಿ.ಆರ್.ವಿ. ಜಂಕ್ಷನ್ ಮುಖಾಂತರ ಸಂಚರಿಸಬಹುದಾಗಿದೆ.
  • ಹಲಸೂರು ಮತ್ತು ಹಳೆ ಏರ್‌ಪೋರ್ಟ್ ಕಡೆಯಿಂದ ಕೆಂಪೇಗೌಡ ಏರ್‌ಪೋರ್ಟ್‌ ಮತ್ತು ಬಸವೇಶ್ವರ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳ ಸವಾರರು ಬಿ.ಆರ್.ವಿ ಜಂಕ್ಷನ್ ಬಳಿ ಬಲ ತಿರುವು ಪಡೆದು ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.
  • ಹಲಸೂರು ಮತ್ತು ಹಳೇ ಮದ್ರಾಸ್ ರಸ್ತೆ ಕಡೆಯಿಂದ ಹೆಬ್ಬಾಳ ಕಡೆಗೆ ಸಂಚರಿಸುವ ವಾಹನಗಳ ಸವಾರರು ಹಲಸೂರು ಲೇಕ್ ಮೂಲಕ ಟಿನ್ ಫ್ಯಾಕ್ಟರಿ ಜಂಕ್ಷನ್ ಬಳಿಯಿಂದ ರಿಂಗ್ ರಸ್ತೆಯ ಮೂಲಕ ಹೆಬ್ಬಾಳ ಕಡೆಗೆ ಸಂಚರಿಸುವುದು.
  • ಆಶೀರ್ವಾದಂ ವೃತ್ತ ಹಾಗೂ ಎಂ.ಜಿ. ರಸ್ತೆ ಕಡೆಯಿಂದ ಬರುವಂತಹ ವಾಹನಗಳು ಬಿ.ಆರ್.ವಿ ಜಂಕ್ಷನ್ ಶಿವಾಜಿನಗರ ಬಸ್‌ನಿಲ್ದಾಣ ಮೂಲಕ ಬಾಳೆಕುಂದ್ರಿ ಜಂಕ್ಷನ್, ಕನ್ನಿಂಗ್ ಹ್ಯಾಂ ರಸ್ತೆ, ವಸಂತನಗರದಿಂದ ಹೆಬ್ಬಾಳ ಕಡೆಗೆ ಸಂಚರಿಸುವುದು.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ.
  • ಲೋಕಭವನ ರಸ್ತೆ ಬಿ.ಆರ್.ವಿ. ವೃತ್ತದಿಂದ – ಲೋಕಭವನ ಜಂಕ್ಷನ್ ವರೆಗೆ
  • ಎಲ್.ಹೆಚ್.ರಸ್ತೆ, ಲೋಕಭವನ ಜಂಕ್ಷನ್ ನಿಂದ – ಚಾಲುಕ್ಯ ವೃತ್ತದ ವರೆಗೆ
  • ಕ್ಲೀನ್ಸ್ ರಸ್ತೆ, ಬಾಳೇಕುಂದ್ರಿ ಜಂಕ್ಷನ್‌ನಿಂದ – ಕೀನ್ಸ್ ವೃತ್ತದ ವರೆಗೆ
  • ಪ್ಯಾಲೇಸ್ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ – ವಸಂತನಗರ ಕೆಳಸೇತುವೆ ವರೆಗೆ
  • ದೇವರಾಜ ಅರಸ್ ರಸ್ತೆ, ಚಾಲುಕ್ಯ ವೃತ್ತದಿಂದ – ಎಂ.ಎಸ್.ಬಿಲ್ಡಿಂಗ್ ವರೆಗೆ (ಒಳಭಾಗದ ರಸ್ತೆ ಸೇರಿ)
  • ರೇಸ್ ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್ ನಿಂದ ಚಾಲುಕ್ಯ ವೃತ್ತದ ವರೆಗೆ
  • ಪಾರ್ಕ್‌ಹೌಸ್‌ ರಸ್ತೆ, ಎ.ಜಿ.ಎಸ್. ಜಂಕ್ಷನ್ ನಿಂದ ಸಿ.ಐ.ಡಿ. ವೃತ್ತದ ವರೆಗೆ
  • ಕಬ್ಬನ್ ಉದ್ಯಾನವನದ ಒಳಭಾಗದ ರಸ್ತೆಗಳು
  • ಮಿಲ್ಲರ್ ರಸ್ತೆ, ಎಲ್.ಆರ್.ಡಿ.ಇ. ಜಂಕ್ಷನ್ ನಿಂದ ಬಸವೇಶ್ವರ ವೃತ್ತದ ವರೆಗೆ
  • ಇನ್‌ಫೆಂಟ್ರಿ ರಸ್ತೆ, ಅಲಿ ಆಸ್ಕರ್ ರಸ್ತೆ ಜಂಕ್ಷನ್ ನಿಂದ ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್ ವರೆಗೆ
  • ಅಲಿ ಆಸ್ಕರ್ ರಸ್ತೆ, ರಾಜಭವನ ಜಂಕ್ಷನ್ ನಿಂದ ಅಲಿ ಆಸ್ಕರ್ ಕ್ರಾಸ್ ವರೆಗೆ
  • ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್ ನಿಂದ ಮೈಸೂರು ಬ್ಯಾಂಕ್ ವೃತ್ತದ ವರೆಗೆ
  • ಹಳೇ ಅಂಚೆ ಕಚೇರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ- ನೃಪತುಂಗ ರಸ್ತೆ, ಕೆ.ಆರ್.ವೃತ್ತದಿಂದ ಪೊಲೀಸ್ ಕಾರ್ನರ್ ವರೆಗೆ
  • ಕಸ್ತೂರಿಬಾ ರಸ್ತೆ, ಹಯ್ಸನ್ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
  • ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್ ವರೆಗೆ
  • ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡನ್ ವೃತ್ತದ ವರೆಗೆ
  • ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಮಣಿಪಾಲ್ ಸೆಂಟರ್ ವರೆಗೆ
  • ಟಿ.ಚೌಡಯ್ಯ ರಸ್ತೆ, ಹಳೇ ಗೌಂಡ್ ಜಂಕ್ಷನ್ ನಿಂದ ಕಾವೇರಿ ಜಂಕ್ಷನ್ ವರೆಗೆ- ರಮಣ ಮಹರ್ಷಿ ರಸ್ತೆ, ಕಾವೇರಿ ಜಂಕ್ಷನ್ ನಿಂದ ಮೇಖಿ ವೃತ್ತದ ವರೆಗೆ

ವಾಹನಗಳ ನಿಲುಗಡೆ

ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿರುವ ವಾಹನಗಳು: ವಿಧಾನಸೌಧದ ಸಿಮೆಂಟ್ ಪಾರ್ಕಿಂಗ್ ಸ್ಥಳ ಹಾಗೂ ವಿಕಾಸಸೌಧದ ಸುತ್ತಮುತ್ತ, ರಾಜಭವನ ಹಿಂಭಾಗದ ಎಲ್.ಹೆಚ್. ವಾಹನ ನಿಲುಗಡೆ ಸ್ಥಳ, ನೆಹರೂ ತಾರಾಲಯದ ಆವರಣ

ಕಾರ್ಯಕ್ರಮಕ್ಕೆ ಬರುವ ಪಾಸ್ ಹೊಂದಿಲ್ಲದ ವಾಹನಗಳು: ಕೊಂಡಜ್ಜಿ ಭವನ ಅವರಣ, ಶಿವಾಜಿನಗರ ಬಸ್‌ನಿಲ್ದಾಣದ ಮೇಲ್ಬಾಗದ ಮಲೆವೆಲ್ ಪಾರ್ಕಿಂಗ್ ಸ್ಥಳ, ಕಂಠೀರವ ಕ್ರೀಡಾಂಗಣ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ ಕಾರ್ಪೊರೇಷನ್​ ಕಚೇರಿ ಸ್ಥಳ, ಸರ್ಕಾರಿ ಕಲಾ ಕಾಲೇಜು ಆವರಣ, ಪ್ಯಾಲೇಸ್ ಮೈದಾನದ ಗೇಟ್ ನಂ. 2, 3 ಮತ್ತು 4 ರಲ್ಲಿ

ಭಾರಿ ವಾಹನಗಳ ಸಂಚಾರ ನಿಷೇಧ

ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10ರವರೆಗೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ.

ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್​ಗಳ ಏಕದಿನ ಸರಣಿ ನಡೆಯಲಿದೆ. ಈ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ದಿನಾಂಕ

ಸಮಯ

ಪಂದ್ಯ

ಸ್ವರೂಪ

ಸ್ಥಳ

ಜೂನ್ 6

ಬೆಳಿಗ್ಗೆ 9:30

ಭಾರತ vs ಅಫ್ಘಾನಿಸ್ತಾನ್

ಟೆಸ್ಟ್

ನ್ಯೂ ಚಂಡೀಗಢ್

ಜೂನ್ 14

ಮಧ್ಯಾಹ್ನ 1:30

ಭಾರತ vs ಅಫ್ಘಾನಿಸ್ತಾನ್

ಏಕದಿನ

ಧರ್ಮಶಾಲಾ

ಜೂನ್ 17

ಮಧ್ಯಾಹ್ನ 1:30

ಭಾರತ vs ಅಫ್ಘಾನಿಸ್ತಾನ್

ಏಕದಿನ 

ಲಕ್ನೋ

ಜೂನ್ 20

ಮಧ್ಯಾಹ್ನ 1:30

ಭಾರತ vs ಅಫ್ಘಾನಿಸ್ತಾನ್

ಏಕದಿನ 

ಚೆನ್ನೈ

8 ವರ್ಷಗಳ ಬಳಿಕ ಟೆಸ್ಟ್:

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯಲಿರುವುದು ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ.

ಅಂದರೆ ಇದೇ ಮೊದಲ ಬಾರಿಗೆ ಚಂಡೀಗಢ್​ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲಿದೆ. ಮುಲ್ಲನ್​ಪುರ್​ನಲ್ಲಿರುವ ಎಂವೈಎಸ್ ಸ್ಟೇಡಿಯಂನಲ್ಲಿ ಈವರೆಗೆ ಐಪಿಎಲ್ ಪಂದ್ಯಗಳು, ಒಂದು ಪುರುಷರ ಟಿ20 ಪಂದ್ಯ ಮತ್ತು ಎರಡು ಮಹಿಳಾ ಏಕದಿನ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯಕ್ಕೆ ಆತಿಥ್ಯವಹಿಸಲು ಸಜ್ಜಾಗಿದೆ.

ಇದನ್ನೂ ಓದಿ: ಟೆಸ್ಟ್​ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ..!

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್:

ಜೂನ್ 14 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯಲಿದ್ದಾರೆ. ಅಂದರೆ ಈ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಪರ ಕೊನೆಯ ಬಾರಿ ಆಡಿದ್ದು ಅಕ್ಟೋಬರ್​ನಲ್ಲಿ. ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಏಕದಿನ ಸರಣಿಯ ಮೂಲಕ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

Published On – 2:06 pm, Tue, 2 June 26

Source link

ಹೈದರಾಬಾದ್​​ಗೆ ಮರಳಿ ಬರುತ್ತಿದೆ ‘ಐಮ್ಯಾಕ್ಸ್’, ‘ವಾರಣಾಸಿ’ಯೇ ಕಾರಣ

ಐಮ್ಯಾಕ್ಸ್, ವಿಶ್ವದ ಅತ್ಯುತ್ತಮ ಸಿನಿಮಾ ಸ್ಕ್ರೀನ್ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅಧಿಕೃತ ಐಮ್ಯಾಕ್ಸ್ (IMAX) ಸ್ಕ್ರೀನ್​​ನಲ್ಲಿ ಸಿನಿಮಾ ನೋಡಿದರಷ್ಟೆ ನಿಜವಾದ ಸಿನಿಮಾ ಅನುಭವ ಪಡೆದಂತೆ ಎಂಬ ನಂಬಿಕೆ ಇದೆ. ಹಾಲಿವುಡ್​​ನ ಪರಮೋಚ್ಛ ನಿರ್ದೇಶಕರುಗಳು ನಿರ್ದಿಷ್ಟವಾಗಿ ಐಮ್ಯಾಕ್ಸ್ ಸ್ಕ್ರೀನ್​​ಗಳಿಗೆಂದೇ ಸಿನಿಮಾ ಮಾಡುತ್ತಾರೆ. ಇದೀಗ ರಾಜಮೌಳಿ ಸಹ ಐಮ್ಯಾಕ್ಸ್​ ಸ್ಕ್ರೀನ್​​ನ ಅನುಪಾತದಲ್ಲಿಯೇ ‘ವಾರಣಾಸಿ’ (Varanasi) ಸಿನಿಮಾ ಮಾಡಿದ್ದಾರೆ. ಆದರೆ ಅದನ್ನು ಪ್ರದರ್ಶಿಸಲು ತೆಲುಗು ರಾಜ್ಯಗಳಲ್ಲಿ ಐಮ್ಯಾಕ್ಸ್ ಸ್ಕ್ರೀನ್​​ಗಳು ಇರಲಿಲ್ಲ. ಇದೀಗ ಮೊದಲ ಬಾರಿಗೆ ಹೈದರಾಬಾದ್​​ಗೆ ಐಮ್ಯಾಕ್ಸ್ ಸ್ಕ್ರೀನ್ ಬರುತ್ತಿದೆ.

ಐಮ್ಯಾಕ್ಸ್ ಕಾರ್ಪೊರೇಷನ್ ಭಾರತದಲ್ಲಿ ಮೂರು ಹೊಸ ‘ಐಮ್ಯಾಕ್ಸ್ ವಿತ್ ಲೇಸರ್’ (IMAX with Laser) ಚಿತ್ರಮಂದಿರಗಳನ್ನು ತೆರೆಯುವ ಯೋಜನೆಗಳನ್ನು ಘೋಷಿಸಿವೆ. ಇವುಗಳಲ್ಲಿ ಎರಡು ಹೈದರಾಬಾದ್‌ನಲ್ಲಿ ಸ್ಥಾಪನೆಗೊಳ್ಳಲಿವೆ. ಮಹೇಶ್ ಬಾಬು ಮತ್ತು ಏಷಿಯನ್ ಸುನಿಲ್ ನಾರಂಗ್ ಜಂಟಿ ಒಡೆತನದ ಎಎಂಬಿ ಸಿನೆಮಾಸ್ ಹೈದರಾಬಾದ್​​ನ ಮೊದಲ ಅಧಿಕೃತ ಐಮ್ಯಾಕ್ಸ್ ಸ್ಕ್ರೀನ್ ಅನ್ನು ಹೊಂದಲಿದೆ. ಎಎಂಬಿ ಕ್ಲಾಸಿಕ್ ಸುದರ್ಶನ್​​ನಲ್ಲಿ ಹೈದರಾಬಾದ್​​ನ ಮೊದಲ ಐಮ್ಯಾಕ್ಸ್ ಅಸೆಂಬಲ್ ಆಗಲಿದೆ.

ಕೆಲ ತಿಂಗಳ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾಜಮೌಳಿ, ಭಾರತದಲ್ಲಿ ಐಮ್ಯಾಕ್ಸ್ ಸ್ಕ್ರೀನ್​​ಗಳ ಸಂಖ್ಯೆ ಹೆಚ್ಚಾಗಬೇಕು ಎಂದಿದ್ದರು. ಅದರ ಬೆನ್ನಲ್ಲೆ ಇದೀಗ ಹೈದರಾಬಾದ್​​ಗೆ ಐಮ್ಯಾಕ್ಸ್ ಬರುತ್ತಿದೆ. ‘ವಾರಣಾಸಿ’ ಸಿನಿಮಾದ ನಾಯಕ ಮಹೇಶ್ ಬಾಬು ಅವರ ಒತ್ತಾಸೆಯಿಂದ ಇದು ಸಾಧ್ಯವಾಗಿದೆ ಎನ್ನಲಾಗುತ್ತಿದೆ. 2026 ರ ಅಂತ್ಯದ ವೇಳೆಗೆ ಹೈದರಾಬಾದ್‌ನ ‘ಎಎಂಬಿ ಕ್ಲಾಸಿಕ್’ನಲ್ಲಿ ಐಮ್ಯಾಕ್ಸ್ ಸ್ಥಾಪನೆ ಆಗಲಿದೆ. ಉಳಿದ ಎರಡು ಸ್ಕ್ರೀನ್​​ಗಳನ್ನು 2028 ಕ್ಕೆ ಯೋಜಿಸಲಾಗಿದೆ.

ಇದನ್ನೂ ಓದಿ:‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ಐಮ್ಯಾಕ್ಸ್ ಸಿಇಒ ರಿಚ್ ಗಿಲ್ಫಾಂಡ್ ಕೂಡ ಭಾರತದಲ್ಲಿ ಪ್ರೀಮಿಯಂ ಲಾರ್ಜ್-ಫಾರ್ಮ್ಯಾಟ್ (ದೊಡ್ಡ ಪರದೆ) ಅನುಭವಗಳಿಗಾಗಿ ಹೆಚ್ಚುತ್ತಿರುವ ಬೇಡಿಕೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ‘2025 ನೇ ವರ್ಷವು ಭಾರತದ ಬಾಕ್ಸ್ ಆಫೀಸ್‌ನಲ್ಲಿ ನಮಗೆ ಇದುವರೆಗಿನ ಅತ್ಯುತ್ತಮ ವರ್ಷವಾಗಿತ್ತು ಹಾಲಿವುಡ್ ಮತ್ತು ಭಾರತೀಯ ಚಲನಚಿತ್ರಗಳು ಅದ್ಭುತ ಪ್ರದರ್ಶನ ನೀಡಿವೆ. ಭಾರತದಲ್ಲಿ ಹೊಸ ಮತ್ತು ಅಸ್ತಿತ್ವದಲ್ಲಿರುವ ಪ್ರದರ್ಶನ ಪಾಲುದಾರರಲ್ಲಿ ಬೇಡಿಕೆಯನ್ನು ಹೆಚ್ಚಿಸುತ್ತಿದೆ’ ಎಂದು ಗಿಲ್ಫಾಂಡ್ ಹೇಳಿದ್ದಾರೆ.

2015 ರಲ್ಲಿ ಹೈದರಾಬಾದ್​​ನ ಏಕೈಕ ಐಮ್ಯಾಕ್ಸ್ ಥಿಯೇಟರ್ ಪ್ರಸಾದ್ಸ್ ಐಮ್ಯಾಕ್ಸ್ ಮುಚ್ಚಲ್ಪಟ್ಟಿತ್ತು, ಅದಾದ ಬಳಿಕ ಹೈದರಾಬಾದ್​​ನಲ್ಲಿ ಐಮ್ಯಾಕ್ಸ್ ಸ್ಕ್ರೀನ್​​ಗಳು ಇರಲೇ ಇಲ್ಲ. ಇದೀಗ 10 ವರ್ಷಗಳ ಬಳಿಕ ಹೊಸ ಮತ್ತು ಆಧುನಿಕ ತಂತ್ರಜ್ಞಾನದ ಐಮ್ಯಾಕ್ಸ್ ಸ್ಕ್ರೀನ್​​ ಬರುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇದು ರಿಯಲ್ ಸ್ಟೋರಿ..! ಆಟೋ, ಟೆಂಪೋ ಓಡಿಸುತ್ತಿದ್ದ ವ್ಯಕ್ತಿ ಏರ್ಲೈನ್ಸ್ ಕಂಪನಿಯ ಮಾಲೀಕನಾದ ಕಥೆ – Kannada News

ಶ್ರವಣ್ ಕುಮಾರ್ ವಿಶ್ವಕರ್ಮImage Credit source: Instagram @Sharvankrvishwakarma

ಕಾನಪುರದ ರಸ್ತೆಗಳಲ್ಲಿ ಟೆಂಪೋ ಓಡಿಸುತ್ತಿದ್ದ ಸಾಮಾನ್ಯ ವ್ಯಕ್ತಿಯೊಬ್ಬರು, ಇಂದು ದೇಶದ ಅತ್ಯಂತ ಕಠಿಣ ಮತ್ತು ಕೋಟ್ಯಂತರ ರೂಪಾಯಿ ಬಂಡವಾಳ ಬೇಡುವ ವಿಮಾನಯಾನ (Aviation) ಕ್ಷೇತ್ರಕ್ಕೆ ಕಾಲಿಟ್ಟು ಸ್ವಂತ ಏರ್‌ಲೈನ್ಸ್ ಕಂಪನಿ ಆರಂಭಿಸುತ್ತಿದ್ದಾರೆ ಎಂದರೆ ಅದು ಸಿನಿಮಾ ಕಥೆಯಂತೆ ಕೇಳಿಸಬಹುದು. ಆದರೆ ಇದು 35 ವರ್ಷದ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma) ಅವರ ನಿಜ ಜೀವನದ ರೋಮಾಂಚಕ ಯಶೋಗಾಥೆ! ಅವರು ಸ್ಥಾಪಿಸಿರುವ ‘ಶಂಖ್ ಏರ್’ (Shankh Air) ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ಸಚಿವಾಲಯದಿಂದ (Ministry of Civil Aviation) ಅನುಮತಿ (NOC) ಪಡೆದುಕೊಂಡು, ಉತ್ತರ ಪ್ರದೇಶದ ಮೊದಲ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾಗಿ ಹಾರಾಟ ನಡೆಸಲು ಸಜ್ಜಾಗಿದೆ.

ಹಳ್ಳ ಹಿಡಿದಿದ್ದ ಬಾಲ್ಯ ಮತ್ತು ಕಠಿಣ ದಿನಗಳು

ಉತ್ತರ ಪ್ರದೇಶದ ಕಾನ್ಪುರದ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಶ್ರವಣ್ ಅವರಿಗೆ ಶಾಲೆಯಲ್ಲಿ ಓದಿನ ಮೇಲೆ ಅಷ್ಟಾಗಿ ಆಸಕ್ತಿ ಇರಲಿಲ್ಲ. “ನಾನು ಒಳ್ಳೆಯ ವಿದ್ಯಾರ್ಥಿಯೇನೂ ಆಗಿರಲಿಲ್ಲ, ಆದರೆ ಕಾನ್ಪುರದ ರಸ್ತೆಗಳೇ ನನಗೆ ಜಗತ್ತನ್ನು ಕಲಿಸಿದ ಗುರುಗಳು” ಎಂದು ಅವರೇ ನೆನಪಿಸಿಕೊಳ್ಳುತ್ತಾರೆ. ಬದುಕಿನ ಬಂಡಿ ಸಾಗಿಸಲು ಅವರು ಕಾನ್ಪುರದ ರಸ್ತೆಗಳಲ್ಲಿ ಗೂಡ್ಸ್ ಲೋಡರ್ ಆಗಿ, ಆಟೋ ಮತ್ತು ಟೆಂಪೋ ಚಾಲಕನಾಗಿ ಕೆಲಸ ಮಾಡಿದರು. ಗೆಳೆಯರೊಂದಿಗೆ ಸೇರಿ ಸಣ್ಣಪುಟ್ಟ ಬಿಸಿನೆಸ್ ಮಾಡಲು ಕೈಹಾಕಿದಾಗಲೆಲ್ಲಾ ಭಾರಿ ನಷ್ಟ ಅನುಭವಿಸಿ ಸೋಲನ್ನೇ ಕಂಡರು. ಆದರೂ ಅವರು ಧೃತಿಗೆಡಲಿಲ್ಲ.

ಯಶಸ್ಸಿನ ಮೆಟ್ಟಿಲಾದ ಸಾರಿಗೆ ಮತ್ತು ವ್ಯಾಪಾರ

2014 ಶ್ರವಣ್ ಅವರ ಬದುಕಿನ ಮಹತ್ತರ ತಿರುವು. ಅವರು ಸಿಮೆಂಟ್ ವ್ಯಾಪಾರಕ್ಕೆ ಕೈಹಾಕಿದರು. ಅದರಲ್ಲಿ ಸಿಕ್ಕ ಯಶಸ್ಸಿನಿಂದ ಕಬ್ಬಿಣ (TMT Bars) ಮತ್ತು ಗಣಿಗಾರಿಕೆ (Mining) ಕ್ಷೇತ್ರಕ್ಕೂ ಕಾಲಿಟ್ಟರು. ಟೆಂಪೋ ಓಡಿಸುತ್ತಿದ್ದ ಅದೇ ಕೈಗಳು, ಮುಂದೆ ಸರಕು ಸಾಗಣೆಯ ಬೃಹತ್ ಟ್ರಕ್‌ಗಳ ಸಾಮ್ರಾಜ್ಯವನ್ನೇ (Transport Business) ನಿರ್ಮಿಸಿದವು. ಈ ಸಾರಿಗೆ ಉದ್ಯಮವು ಅವರಿಗೆ ದೊಡ್ಡ ಮಟ್ಟದ ಬಂಡವಾಳ ಮತ್ತು ಉದ್ಯಮ ನಡೆಸುವ ಆತ್ಮವಿಶ್ವಾಸವನ್ನು ತಂದುಕೊಟ್ಟಿತು.

ಇದನ್ನೂ ಓದಿ: ಎಐ ಅಲೆಯಲ್ಲಿ ಹಿಂದುಳಿದ ಭಾರತ; ಷೇರುಬಜಾರಿನ ಬಲದಲ್ಲಿ 5ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿತ

ಆಕಾಶದ ಕಡೆಗೆ ದೃಷ್ಟಿ: ‘ಶಂಖ್ ಏರ್’ ಉದಯ

ನಾಲ್ಕು ವರ್ಷಗಳ ಹಿಂದೆ ಶ್ರವಣ್ ಅವರಿಗೆ ಸ್ವಂತ ಏರ್‌ಲೈನ್ಸ್ ಆರಂಭಿಸುವ ಆಲೋಚನೆ ಬಂತು. ವಿಮಾನಯಾನ ಕ್ಷೇತ್ರದ ನಿಯಮಗಳು, ಪರವಾನಗಿ ಪ್ರಕ್ರಿಯೆಗಳು ಅತ್ಯಂತ ಸಂಕೀರ್ಣವಾಗಿದ್ದರೂ, ಅವರು ಬಿಟ್ಟುಕೊಡದೆ ಪ್ರತಿ ಹಂತವನ್ನೂ ಆಳವಾಗಿ ಅಧ್ಯಯನ ಮಾಡಿದರು. ಪರಿಣಾಮವಾಗಿ, ಅವರ ಕನಸಿನ ‘ಶಂಖ್ ಏರ್’ ಜನ್ಮತಾಳಿತು. ಮೂರು ಏರ್‌ಬಸ್ (Airbus A320) ವಿಮಾನಗಳೊಂದಿಗೆ ಲಕ್ನೋ, ದೆಹಲಿ, ಮುಂಬೈ ಹಾಗೂ ಬೆಂಗಳೂರಿನಂತಹ ಪ್ರಮುಖ ನಗರಗಳನ್ನು ಸಂಪರ್ಕಿಸಲು ಈ ಏರ್‌ಲೈನ್ಸ್ ಸಿದ್ಧವಾಗಿದೆ.

“ವಿಮಾನ ಕೂಡ ಬಸ್ ಅಥವಾ ಟೆಂಪೋದಂತೆ ಕೇವಲ ಒಂದು ಸಾರಿಗೆ ಸಂಪರ್ಕ ಸಾಧನವಷ್ಟೇ. ಅದು ಕೇವಲ ಶ್ರೀಮಂತರಿಗೆ ಮಾತ್ರ ಸೀಮಿತವಾಗಿರಬಾರದು. ಸಾಮಾನ್ಯ ಮಧ್ಯಮ ವರ್ಗದ ಜನರಿಗೂ ವಿಮಾನ ಪ್ರಯಾಣ ಕೈಗೆಟುಕುವಂತಾಗಬೇಕು” ಎನ್ನುವುದು ಶ್ರವಣ್ ಕುಮಾರ್ ವಿಶ್ವಕರ್ಮ ಅವರ ಆಲೋಚನೆ.

ಇದನ್ನೂ ಓದಿ: ಜೂನ್​ನಲ್ಲಿ ಪ್ಯಾನ್ ಕಾರ್ಡ್, ಯುಪಿಐ, ಅಡ್ವಾನ್ಸ್ ಟ್ಯಾಕ್ಸ್ ಇತ್ಯಾದಿ ಪ್ರಮುಖ ಬದಲಾವಣೆಗಳನ್ನು ಗಮನಿಸಿ

ಶ್ರವಣರ ಯಶಸ್ಸಿನಿಂದ ಕಲಿಯಬೇಕಾದ 3 ಪ್ರಮುಖ ಪಾಠಗಳು

  1. ಸೋಲು ಅಂತಿಮವಲ್ಲ: ಆರಂಭದಲ್ಲಿ ಹಲವು ಸಣ್ಣ ಉದ್ಯಮಗಳಲ್ಲಿ ಸೋತರೂ ಶ್ರವಣ್ ಹಿಂಜರಿಯಲಿಲ್ಲ. ಪ್ರತಿ ಸೋಲನ್ನೂ ಮುಂದಿನ ಯಶಸ್ಸಿನ ಪಾಠವಾಗಿ ಬಳಸಿಕೊಂಡರು.
  2. ದೊಡ್ಡದಾಗಿ ಕನಸು ಕಾಣಿ: “ನಾವು ಬೆಳೆದ ಪರಿಸರದಲ್ಲಿ ಕೇವಲ ಹೊಟ್ಟೆಪಾಡಿಗೆ ದುಡಿದರೆ ಸಾಕು ಎನ್ನುವ ಮನಸ್ಥಿತಿ ಇತ್ತು. ಅದರಾಚೆ ಯೋಚಿಸುವುದು ಅಸಾಧ್ಯವಾಗಿತ್ತು” ಎನ್ನುವ ಶ್ರವಣ್, ಪರಿಸ್ಥಿತಿಯನ್ನು ಮೀರಿ ನಿಂತು ವಿಮಾನ ಸಂಸ್ಥೆಯ ಮಾಲೀಕರಾದರು.
  3. ಮನಸ್ಥಿತಿಯಷ್ಟೇ ಮುಖ್ಯ (Mindset Matters): ಅವರೇ ಹೇಳುವಂತೆ, “ಜನರು ಏನು ಅಂದುಕೊಳ್ಳುತ್ತಾರೆ ಎನ್ನುವುದನ್ನು ಯೋಚಿಸುವುದನ್ನು ಮೊದಲು ನಿಲ್ಲಿಸಬೇಕು. ಒಮ್ಮೆ ಟೆಂಪೋ ಓಡಿಸುತ್ತಿದ್ದ ವ್ಯಕ್ತಿ ಏರ್‌ಲೈನ್ಸ್ ನಡೆಸಬಲ್ಲ ಎಂದಾದರೆ, ಜಗತ್ತಿನಲ್ಲಿ ಯಾರಿಗೆ ಬೇಕಾದರೂ ಸಾಧನೆ ಮಾಡಲು ಸಾಧ್ಯವಿದೆ. ವ್ಯತ್ಯಾಸವಿರುವುದು ಕೇವಲ ನಮ್ಮ ಯೋಚನಾ ಶೈಲಿಯಲ್ಲಿ ಮಾತ್ರ.”

ಸಾಮಾನ್ಯ ರಸ್ತೆಯ ಧೂಳಿನಿಂದ ಆಕಾಶದ ಎತ್ತರಕ್ಕೆ ಜಿಗಿದ ಶ್ರವಣ್ ಕುಮಾರ್ ವಿಶ್ವಕರ್ಮ ಅವರ ಕಥೆ, “ಶ್ರದ್ಧೆ ಮತ್ತು ಕಠಿಣ ಪರಿಶ್ರಮವಿದ್ದರೆ ನಮ್ಮ ಹಿನ್ನೆಲೆ ಏನೇ ಇರಲಿ, ನಾವು ಅಂದುಕೊಂಡ ಗುರಿ ತಲುಪಬಹುದು” ಎಂಬುದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಟೆಸ್ಟ್​ ಕ್ರಿಕೆಟ್​ನಲ್ಲಿ ಮಹತ್ವದ ಬದಲಾವಣೆ..! – Kannada News

ಟೆಸ್ಟ್ ಕ್ರಿಕೆಟ್‌ನಲ್ಲಿ ಮಂದಬೆಳಕಿನ ಕಾರಣದಿಂದ ಪಂದ್ಯಗಳು ಬೇಗನೆ ಸ್ಥಗಿತಗೊಳ್ಳುವುದು ಮತ್ತು ಪ್ರೇಕ್ಷಕರು ನಿರಾಶರಾಗುವುದು ಹಲವು ವರ್ಷಗಳ ಹಳೆಯ ಸಮಸ್ಯೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಐಸಿಸಿ ಇದೀಗ ಮಹತ್ವದ ಹೆಜ್ಜೆಯನ್ನಟ್ಟಿದೆ. ಅದರಂತೆ ಇನ್ಮುಂದೆ ಮಂದ ಬೆಳಕಿನ ವೇಳೆ ಸಾಂಪ್ರದಾಯಿಕ ಕೆಂಪು ಚೆಂಡಿನ ಬದಲಿಗೆ ಪಿಂಕ್ ಬಾಲ್ ಬಳಸಲು ಅನುಮತಿ ನೀಡಲಾಗಿದೆ.

ಡೇ ಟೆಸ್ಟ್ ಪಂದ್ಯದ ದಿನದಾಟದ ಅಂತ್ಯದ ವೇಳೆ ಮಂದ ಬೆಳಕಿನ ಸಮಸ್ಯೆ ಎದುರಾಗುವುದು ಸಾಮಾನ್ಯ. ಸಂಜೆ ವೇಳೆ ಕತ್ತಲಾರಂಭಿಸಿದರೆ ಇಲ್ಲಾ ಕಾರ್ಮೋಡ ಕವಿದಾಗ ಫ್ಲಡ್​ ಲೈಟ್​ಗಳ ಸಹಾಯದಿಂದ ಪಂದ್ಯ ನಡೆಸಲು ಅವಕಾಶ ಇದ್ದರೂ, ರೆಡ್ ಬಾಲ್​ನೊಂದಿಗೆ​ ಆಡುವುದು ಕಷ್ಟವಾಗುತ್ತಿತ್ತು. ಹೀಗಾಗಿ ಮಂದ ಬೆಳಕಿನ ಕಾರಣ ದಿನದಾಟವನ್ನು ಬೇಗನೆ ಸ್ಥಗಿತಗೊಳಿಸಲಾಗುತ್ತಿತ್ತು.

ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ಪಿಂಕ್ ಬಳಸಲು ಐಸಿಸಿ ಅನುಮತಿ ನೀಡಿದೆ. ಅದರಂತೆ ಇನ್ಮುಂದೆ ಡೇ ಟೆಸ್ಟ್​ ಪಂದ್ಯದ ದಿನದಾಟದ ಅಂತ್ಯಕ್ಕೆ ಅಥವಾ ಕಾಮೋರ್ಡ ಕವಿದಾಗ ಫ್ಲಡ್​ ಲೈಟ್​ಗಳ ನೆರವಿನೊಂದಿಗೆ ಪಿಂಕ್ ಬಾಲ್​ಗಳಲ್ಲಿ ಪಂದ್ಯವನ್ನು ಮುಂದುವರೆಸಬಹುದು.

ಹೊಸ ನಿಯಮದ ವಿಶೇಷಗಳೆನು?

  •  ಪಂದ್ಯದ ಆರಂಭ: ಟೆಸ್ಟ್ ಪಂದ್ಯವು ಎಂದಿನಂತೆ ಸಾಂಪ್ರದಾಯಿಕ ರೆಡ್ ಬಾಲ್​​ನಲ್ಲೇ ಶುರುವಾಗಲಿದೆ.
  • ಬಾಲ್ ಬದಲಾವಣೆ: ಮಂದಬೆಳಕಿನ ಕಾರಣದಿಂದ ಪಂದ್ಯ ಮುಂದುವರೆಸಲು ಸಾಧ್ಯವಾಗದೇ ಇದ್ದಾಗ ಪಿಂಕ್ ಬಾಲ್​ ಬಳಸಲು ಅವಕಾಶ ನೀಡಲಾಗಿದೆ.
  • ಹೀಗೆ ಪಿಂಕ್ ಬಾಲ್ ಬಳಸಬೇಕಿದ್ದರೆ ಸ್ಟೇಡಿಯಂನಲ್ಲಿ ಫ್ಲಡ್​ಲೈಟ್​ಗಳನ್ನು ಆನ್​ ಮಾಡಬೇಕಾಗುತ್ತದೆ. ಅಂದರೆ ಡೇ ಟೆಸ್ಟ್​ ಅನ್ನು ಮುಂದುವರೆಸಲು ಕನಿಷ್ಠ ಬೆಳಕು ಇರಲೇಬೇಕು ಎಂದು ತಿಳಿಸಲಾಗಿದೆ.
  • ಮುಂಚಿತ ಒಪ್ಪಂದ ಕಡ್ಡಾಯ: ರೆಡ್ ಬಾಲ್ ಜೊತೆ ಪಿಂಕ್ ಬಾಲ್ ಬಳಸಬೇಕಿದ್ದರೆ ಸರಣಿ ಆರಂಭಕ್ಕೂ ಮುನ್ನವೇ ಕಣಕ್ಕಿಳಿಯುವ ಎರಡು ತಂಡಗಳ ಕ್ರಿಕೆಟ್​ ಮಂಡಳಿ ಲಿಖಿತ ಒಪ್ಪಿಗೆ ನೀಡಿರಬೇಕು.

ಬಾಲ್ ಬದಲಾವಣೆ ಯಾಕೆ ಮುಖ್ಯ?

ಕೆಂಪು ಚೆಂಡು ಫ್ಲಡ್‌ಲೈಟ್ ಬೆಳಕಿನಲ್ಲಿ ಬ್ಯಾಟರ್‌ಗಳಿಗೆ ಸರಿಯಾಗಿ ಕಾಣಿಸುವುದಿಲ್ಲ. ಇದು ಆಟಗಾರರ ಸುರಕ್ಷತೆಗೂ ಅಪಾಯಕಾರಿ. ಹೀಗಾಗಿಯೇ ಮಂದ ಬೆಳಕಿನ ವೇಳೆ ಪಂದ್ಯವನ್ನು ಸ್ಥಗಿತಗೊಳಿಸಲಾಗುತ್ತದೆ. ಅದೇ ಪಿಂಕ್ ಬಾಲ್​ ಕೃತಕ ಬೆಳಕಿನಲ್ಲಿ (ಫ್ಲಡ್ ಲೈಟ್​) ಸ್ಪಷ್ಟವಾಗಿ ಗೋಚರಿಸುತ್ತದೆ.

ಇಲ್ಲಿ ಪಿಂಕ್ ಬಾಲ್ ಸ್ಪಷ್ಟವಾಗಿ ಕಾಣಿಸುವುದರೊಂದಿಗೆ ಪಂದ್ಯವನ್ನು ನಿಲ್ಲಿಸದೇ ಫ್ಲಡ್​ಲೈಟ್​ನಲ್ಲಿ ದಿನದಾಟವನ್ನು ಪೂರ್ಣಗೊಳಿಸಬಹುದು. ಹೀಗೆ ಪ್ರತಿ ದಿನದಾಟ ಪೂರ್ಣಗೊಂಡರೆ ಫಲಿತಾಂಶ ಮೂಡಿ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಡೇ ಟೆಸ್ಟ್ ಪಂದ್ಯದಲ್ಲಿ ಇನ್ಮುಂದೆ ರೆಡ್ ಬಾಲ್ ಮತ್ತು ಪಿಂಕ್ ಬಾಲ್ ಬಳಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಭುವನೇಶ್ವರ್ ಕುಮಾರ್​ ಯಶಸ್ಸಿನ ಗುಟ್ಟು ರಟ್ಟು ಮಾಡಿದ ಸಚಿನ್!

ಹೊಸ ನಿಯಮ ಜಾರಿಗೆ ಬರುವುದು ಯಾವಾಗ?

ಮೇ 31 ರಂದು ನಡೆದ ಐಸಿಸಿ ಮಂಡಳಿಯ ಸಭೆಯಲ್ಲಿ ಹೊಸ ನಿಯಮಕ್ಕೆ ಅನುಮೋದನೆ ನೀಡಲಾಗಿದೆ. ಹೀಗಾಗಿ ಈ ನಿಯಮವು ಜೂನ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಅಥವಾ ಮುಂಬರುವ ಟೆಸ್ಟ್​ ಪಂದ್ಯಗಳಲ್ಲಿ ಜಾರಿಗೆ ಬರುವ ಸಾಧ್ಯತೆಯಿದೆ.

Source link