Category Archives: Blog

Your blog category

ದೂರುದಾರರ ಮೊಬೈಲ್​​ ಸಂಖ್ಯೆ ಪೊಲೀಸರಿಂದಲೇ ದುರುಪಯೋಗ?: ಚರ್ಚೆಗೆ ಗ್ರಾಸವಾದ ಮಹಿಳೆಯ ಪೋಸ್ಟ್​​ – Kannada News | Bengaluru Police Under Fire After Woman Alleges Officer Misused Her Complaint Contact for Private WhatsApp Texts

ಬೆಂಗಳೂರು, ಜೂನ್​​ 18: ನೀಡಿದ್ದ ದೂರಿನಲ್ಲಿದ್ದ ಮೊಬೈಲ್​ ಸಂಖ್ಯೆಯನ್ನು ಪೊಲೀಸರೇ ದುರುಪಯೋಗಪಡಿಸಿಕೊಂಡು ವಾಟ್ಸ್ಯಾಪ್​​ನಲ್ಲಿ ಮೆಸೇಜ್​​ ಮಾಡುತ್ತಿರೋದಾಗಿ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ನಿವಾಸಿ ಜಾನ್ಹವಿ ದೇಸಾಯಿ ಅವರು ಜೂನ್ 17ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ತಾವು 2025ರ ಆಗಸ್ಟ್ 31ರಂದು ಪೊಲೀಸ್ ದೂರು ದಾಖಲಿಸಿದ್ದೆ ಎಂದು ತಿಳಿಸಿದ್ದಾರೆ. ದೂರು ದಾಖಲಿಸಿದ ಹಲವು ತಿಂಗಳ ಬಳಿಕ ತಮ್ಮ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಸಂದೇಶ ಬಂದಿರುವುದನ್ನು ಪ್ರಶ್ನಿಸಿರುವ ಅವರು, ತಮ್ಮ ವೈಯಕ್ತಿಕ ಮಾಹಿತಿಯ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಯುವತಿಯ ಆರೋಪವೇನು?

ತಮ್ಮ ಪೋಸ್ಟ್‌ಗೆ ವಾಟ್ಸಾಪ್ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಲಗತ್ತಿಸಿರುವ ಜಾನ್ಹವಿ, ಸಂಬಂಧಿತ ಪೊಲೀಸ್ ಅಧಿಕಾರಿ ಬಳಿಕ ವಾಟ್ಸಾಪ್‌ನಲ್ಲಿ ಗೌಪ್ಯತಾ ಸೆಟ್ಟಿಂಗ್‌ಗಳನ್ನು ಬದಲಾಯಿಸಿ, ಚಾಟ್‌ನ್ನು ‘ಎಕ್ಸ್‌ಟ್ರಾ ಪ್ರೈವೇಟ್’ ಮತ್ತು ತಾತ್ಕಾಲಿಕ (Temporary) ರೂಪದಲ್ಲಿ ಹೊಂದಿಸಿ ವೈಯಕ್ತಿಕವಾಗಿ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ಹಂಚಿಕೊಂಡಿರುವ ಚಾಟ್ ಸ್ಕ್ರೀನ್‌ಶಾಟ್‌ನಲ್ಲಿ ಹಾಯ್​​ ಹಾಗೂ ಹೇಗಿದ್ದೀರ ಮೇಡಂ ಎಂಬ ಸಂದೇಶಗಳು ಕಾಣುತ್ತಿದ್ದು, ಅದಕ್ಕೆ ಜಾನ್ಹವಿ ನನಗೆ ಮೆಸೇಜ್ ಮಾಡುತ್ತಿರುವ ಕಾರಣವೇನು? ಎಂದು ಪ್ರಶ್ನಿಸಿರುವುದನ್ನು ಸಹ ಗಮನಿಸಬಹುದಾಗಿದೆ.

ಇದನ್ನೂ ಓದಿ: ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!; ಕರ್ನಾಟಕ ಪೊಲೀಸ್ ಮುಖ್ಯಸ್ಥರ ಖಡಕ್ ಆದೇಶ

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಅಧಿಕೃತ ಖಾತೆಯನ್ನು ಟ್ಯಾಗ್ ಮಾಡಿರುವ ಈ ಪೋಸ್ಟ್​​ಗೆ ಬೆಂಗಳೂರು ನಗರ ಪೊಲೀಸರು ಪ್ರತಿಕ್ರಿಯಿಸಿದ್ದು, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಆದರೆ ಕೆಲವೇ ಗಂಟೆಗಳ ಬಳಿಕ ಜಾನ್ಹವಿ ಮತ್ತೊಂದು ಪೋಸ್ಟ್ ಮಾಡಿ, ಈವರೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಯಾರು ಕ್ರಮ ಕೈಗೊಂಡಿದ್ದಾರೆ? ನನಗೆ ಯಾವುದೇ ಪರಿಶೀಲನಾ ಕರೆ ಅಥವಾ ಮಾಹಿತಿ ಬಂದಿಲ್ಲ. ದಯವಿಟ್ಟು ಗಮನಿಸಿ, ಈ ವ್ಯಕ್ತಿಯ ಬಳಿ ನನ್ನ ಮನೆಯ ವಿಳಾಸವೂ ಇದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಇಲಾಖೆಯನ್ನು ಟ್ಯಾಗ್ ಮಾಡಿ ಪ್ರಶ್ನಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿಯ ಗೌಪ್ಯತೆ ಹಾಗೂ ಅಧಿಕೃತವಾಗಿ ಸಂಗ್ರಹಿಸಲಾದ ನಾಗರಿಕರ ಮಾಹಿತಿಯ ದುರುಪಯೋಗದ ಬಗ್ಗೆ ಚರ್ಚೆಗೆ ಕಾರಣವಾಗಿದೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:31 pm, Thu, 18 June 26

Source link

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

Source link

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್? – Kannada News | Salman Khan and Farhan Akhtar Two Part Historical epic Movie updates

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ಮುಂಬರುವ ಸಿನಿಮಾಗಳ ಲಿಸ್ಟ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿರುವ ಸಲ್ಲು ಭಾಯ್, ಇದೀಗ ಭಾರತೀಯ ಇತಿಹಾಸದ ಪ್ರಮುಖ ಪುಟಗಳನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಈ ಸಿನಿಮಾಗಾಗಿ ಖ್ಯಾತ ನಟ ಮತ್ತು ನಿರ್ದೇಶಕ ಫರ್ಹಾನ್ ಅಖ್ತರ್ (Farhan Akhtar) ಜೊತೆ ಸಲ್ಮಾನ್ ಖಾನ್ ಕೈಜೋಡಿಸುತ್ತಾರೆ ಎನ್ನಲಾಗಿದೆ.

ಕೇಳಿಬರುತ್ತಿರುವ ಮಾಹಿತಿ ನಿಜವಾಗಿದ್ದರೆ, ಇದು ಸಲ್ಮಾನ್ ಖಾನ್ ಮತ್ತು ಫರ್ಹಾನ್ ಅಖ್ತರ್ ಅವರ ಕಾಂಬಿನೇಷನ್‌ನ ಮೊದಲ ಸಿನಿಮಾವಾಗಲಿದೆ. ‘ಪಿಂಕ್‌ವಿಲ್ಲಾ’ ವರದಿಯ ಪ್ರಕಾರ, ಇದೊಂದು ಬೃಹತ್ ಮಟ್ಟದ ಐತಿಹಾಸಿಕ ಆ್ಯಕ್ಷನ್ ಡ್ರಾಮಾ ಆಗಿರಲಿದ್ದು, ಕಥೆಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಎರಡು ಭಾಗಗಳಲ್ಲಿ ಸಿನಿಮಾವನ್ನು ಕಟ್ಟಿ ಕೊಡುವ ಪ್ಲಾನ್ ನಡೆದಿದೆ.

ಸಿನಿಮಾ ಮೂಲಗಳ ಪ್ರಕಾರ, ಸಲ್ಮಾನ್ ಖಾನ್ ಮತ್ತು ಫರ್ಹಾನ್ ಅಖ್ತರ್ ಕಳೆದ ಒಂದು ತಿಂಗಳಿನಿಂದ ಆಗಾಗ ಭೇಟಿಯಾಗುತ್ತಿದ್ದು, ಈ ಪ್ರಾಜೆಕ್ಟ್ ಬಗ್ಗೆ ಚರ್ಚಿಸುತ್ತಿದ್ದಾರೆ. ಫರ್ಹಾನ್ ಅಖ್ತರ್ ಹೇಳಿದ ಕಥೆ ಮತ್ತು ಅದರ ಸ್ಕೇಲ್ ಸಲ್ಮಾನ್ ಖಾನ್‌ಗೆ ತುಂಬಾನೇ ಇಷ್ಟವಾಗಿದ್ದು, ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಮಾತುಕತೆ ಆರಂಭಿಕ ಹಂತದಲ್ಲಿದ್ದು, ಇನ್ನೂ ಅಧಿಕೃತ ಒಪ್ಪಂದಕ್ಕೆ ಸಹಿ ಹಾಕಬೇಕಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ‘ಎಕ್ಸೆಲ್ ಎಂಟರ್ಟೈನ್ಮೆಂಟ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಮೂಡಿಬರಲಿದ್ದು, 2027ರ ಬೇಸಿಗೆಯಲ್ಲಿ ಶೂಟಿಂಗ್ ಆರಂಭವಾಗುವ ಸಾಧ್ಯತೆ ಇದೆ. ಪ್ರಸ್ತುತ ಸಲ್ಮಾನ್ ಖಾನ್ ಅವರ ಶೆಡ್ಯೂಲ್ ಸಖತ್ ಬ್ಯುಸಿಯಾಗಿದೆ. ಒಂದರ ಮೇಲೊಂದು ಸಿನಿಮಾವನ್ನು ಅವರು ಒಪ್ಪಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ

ಸದ್ಯ ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ನಿರ್ದೇಶನದ ಆ್ಯಕ್ಷನ್ ಎಂಟರ್ಟೈನರ್ ಚಿತ್ರದಲ್ಲಿ ಸಲ್ಮಾನ್ ನಟಿಸುತ್ತಿದ್ದಾರೆ. ಇದರಲ್ಲಿ ಸೌತ್ ಲೇಡಿ ಸೂಪರ್‌ಸ್ಟಾರ್ ನಯನತಾರಾ ನಾಯಕಿಯಾಗಿದ್ದಾರೆ. ಇದರ ಬೆನ್ನಲ್ಲೇ ‘ದಿ ಫ್ಯಾಮಿಲಿ ಮ್ಯಾನ್’ ಖ್ಯಾತಿಯ ರಾಜ್ ಮತ್ತು ಡಿಕೆ ಜೋಡಿಯ ಆ್ಯಕ್ಷನ್-ಕಾಮಿಡಿ ಸಿನಿಮಾದಲ್ಲಿ ಸಲ್ಮಾನ್ ನಟಿಸಲಿದ್ದಾರೆ. ನಿವೃತ್ತ ಸೂಪರ್‌ಹೀರೋ ಕಥೆ ಹೊಂದಿರುವ ಈ ಚಿತ್ರದ ಶೂಟಿಂಗ್ 2026ರ ಅಕ್ಟೋಬರ್ ಆಸುಪಾಸಿನಲ್ಲಿ ಆರಂಭವಾಗಲಿದೆ.

ಮತ್ತೊಂದೆಡೆ, ಅಪೂರ್ವ ಲಖಿಯಾ ನಿರ್ದೇಶನದಲ್ಲಿ ಅನೌನ್ಸ್ ಆಗಿದ್ದ ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಚಿತ್ರದ ಬಿಡುಗಡೆ ಸದ್ಯಕ್ಕೆ ತಡವಾಗುತ್ತಿದೆ. ಆ ಬಗ್ಗೆ ಮುಂದಿನ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಈ ನಡುವೆ ಸಲ್ಮಾನ್ ಖಾನ್ ಅವರು ಫರ್ಹಾನ್ ಅಖ್ತರ್ ಜೊತೆ ಹೊಸ ಸಿನಿಮಾಗಾಗಿ ಮಾತುಕಥೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು – Kannada News | Karnataka MLC Election: Congress Confident of Winning Five Seats Amid Cross Voting Allegations

ಬೆಂಗಳೂರು, ಜೂನ್​ 18: ಪರಿಷತ್​ನ 7 ಸ್ಥಾನ ಗಳಿಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ. 222 ಮತ ಚಲಾವಣೆ ಆಗುವ ಮೂಲಕ ಶೇ.100ರಷ್ಟು ಮತದಾನ ಆಗಿದೆ. ಕೆಲವೇ ಹೊತ್ತಿನಲ್ಲಿ ಮತ ಎಣಿಕೆ ಕಾರ್ಯ ಕೂಡ ಆರಂಭಗೊಳ್ಳಲಿದೆ. ಈ ಮಧ್ಯೆ ಕಾಂಗ್ರೆಸ್​ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ ಯಾವುದೇ ಅಡ್ಡಮತದಾನ ಭಯವಿಲ್ಲ. ಕಾಂಗ್ರೆಸ್​​​ನ ಐವರು ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಐಕ್ಯತೆಯನ್ನು ಎತ್ತಿ ಹಿಡಿದು ನಾಯಕತ್ವದಲ್ಲಿ ಪಕ್ಷವು ಒಗ್ಗಟ್ಟನ್ನು ಪ್ರದರ್ಶಿಸಿದೆ. ಸಿಎಲ್‌ಪಿ ಶಾಸಕಾಂಗ ಸಭೆಗಳಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಪಕ್ಷದಲ್ಲಿ ಯಾವುದೇ ಭಯ ಅಥವಾ ಅಡ್ಡಮತದಾನದ ಆತಂಕವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷವು ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸದಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

2025-26ಕ್ಕೆ ಶೇ. 8.25 ಇಪಿಎಫ್ ಬಡ್ಡಿಗೆ ಅನುಮೋದನೆ; ಸಕ್ರಿಯವಲ್ಲದ ಇಪಿಎಫ್ ಖಾತೆಗಳಿಗೂ ಸಿಗುತ್ತಾ ಹಣ? – Kannada News | EPFO update, govt ratifies epf interest rate for 2025 26 fy, know if non merged accounts get interest credit

ನವದೆಹಲಿ, ಜೂನ್ 18: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (EPFO) ಕೋಟ್ಯಂತರ ಸದಸ್ಯರಿಗೆ ಕೇಂದ್ರ ಸರ್ಕಾರವು ಖುಷಿ ಸುದ್ದಿ ನೀಡಿದೆ. 2025-26ರ ಹಣಕಾಸು ವರ್ಷಕ್ಕೆ (FY26) ನೌಕರರ ಭವಿಷ್ಯ ನಿಧಿ (EPF) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ. 8.25 ರಷ್ಟು ನಿಗದಿಪಡಿಸುವ ಪ್ರಸ್ತಾವನೆಗೆ ಕೇಂದ್ರ ಹಣಕಾಸು ಸಚಿವಾಲಯವು ಅಧಿಕೃತವಾಗಿ ಅನುಮೋದನೆ (Ratify) ನೀಡಿದೆ. ಕೇಂದ್ರ ಸರ್ಕಾರದ ಒಪ್ಪಿಗೆ ಸಿಕ್ಕಿರುವುದರಿಂದ, ಇಪಿಎಫ್‌ಒ (EPFO) ಸಂಸ್ಥೆಯು ಕಾರ್ಮಿಕ ಸಚಿವಾಲಯದ ನಿರ್ದೇಶನದಂತೆ 2025-26ರ ಸಾಲಿನ ಬಡ್ಡ ಹಣವನ್ನು ದೇಶದ 7 ಕೋಟಿಗೂ ಅಧಿಕ ಚಂದಾದಾರರ ಖಾತೆಗಳಿಗೆ ಇದೇ ತಿಂಗಳೊಳಗೆ (ಜೂನ್ 2026) ಜಮೆ ಮಾಡುವ ಸಾಧ್ಯತೆಯಿದೆ.

ಹೊಸ ತಂತ್ರಜ್ಞಾನದ ಲಾಭ

ಇಪಿಎಫ್‌ಒ ಅಭಿವೃದ್ಧಿಪಡಿಸಿರುವ ಹೊಸ ತಂತ್ರಜ್ಞಾನ ವ್ಯವಸ್ಥೆಯಿಂದಾಗಿ (New Ecosystem), ಸರ್ಕಾರದಿಂದ ಅನುಮೋದನೆ ಸಿಕ್ಕ ತಕ್ಷಣವೇ ಯಾವುದೇ ವಿಳಂಬವಿಲ್ಲದೆ ಬಡ್ಡಿಯ ಮೊತ್ತವು ನೇರವಾಗಿ ಮತ್ತು ತಕ್ಷಣವೇ ಇಪಿಎಫ್ ಖಾತೆಗಳಿಗೆ ಕ್ರೆಡಿಟ್ ಆಗಲಿದೆ.

ಸತತ ಮೂರನೇ ವರ್ಷವೂ ಒಂದೇ ದರ

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರ ನೇತೃತ್ವದಲ್ಲಿ ಮಾರ್ಚ್ 2, 2026 ರಂದು ನಡೆದ ಇಪಿಎಫ್‌ಒನ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಾದ ‘ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್’ (CBT) ಸಭೆಯಲ್ಲಿ 8.25% ಬಡ್ಡಿ ದರವನ್ನು ಶಿಫಾರಸು ಮಾಡಲಾಗಿತ್ತು. ಭಾರತ ಸರ್ಕಾರವು ಇಪಿಎಫ್‌ನ ಗ್ಯಾರಂಟರ್ ಆಗಿರುವುದರಿಂದ ಇದಕ್ಕೆ ಹಣಕಾಸು ಸಚಿವಾಲಯದ ಒಪ್ಪಿಗೆ ಬೇಕಾಗಿತ್ತು. ಪ್ರಸ್ತುತ ಸರ್ಕಾರ ಇದನ್ನು ಯಥಾವತ್ತಾಗಿ ಅಂಗೀಕರಿಸಿದೆ. ಇದರೊಂದಿಗೆ ಸತತ ಮೂರನೇ ವರ್ಷವೂ ಇಪಿಎಫ್ ಬಡ್ಡಿ ದರವನ್ನು 8.25% ನಲ್ಲೇ ಕಾಯ್ದುಕೊಳ್ಳಲಾಗಿದೆ. 2023-24, 2024-25 ರಲ್ಲೂ ಇಪಿಎಫ್ ಬಡ್ಡಿ ದರ 8.25% ಇತ್ತು.

ಇದನ್ನೂ ಓದಿ: ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ ದಿನಾಂಕ ಪ್ರಕಟ; ಇನ್ನೆರಡು ದಿನದಲ್ಲಿ ರೈತರ ಖಾತೆಗೆ ಬರಲಿದೆ 2,000 ರೂ

ಕೆಲವು ವರ್ಷಗಳಿಂದ ಇರುವ ಇಪಿಎಫ್ ಬಡ್ಡಿ ದರಗಳು

  • 2025-26: 8.25%
  • 2024-25: 8.25%
  • 2023-24: 8.25%
  • 2022-23: 8.15%
  • 2021-22: 8.10%

2021-22ರಲ್ಲಿನ ಶೇ. 8.1 ಬಡ್ಡಿದರವು ಕಳೆದ ನಾಲ್ಕು ದಶಕಗಳಲ್ಲೇ ಅತ್ಯಂತ ಕಡಿಮೆ ಇಪಿಎಫ್ ಬಡ್ಡಿಯಾಗಿದೆ. 90ರ ದಶಕದ ಒಂದು ವರ್ಷದಲ್ಲಿ ಇಪಿಎಫ್ ಬಡ್ಡಿದರ ಶೇ. 12ರಷ್ಟಿತ್ತು. ಇದೂವರೆಗಿನ ಗರಿಷ್ಠ ಬಡ್ಡಿ ದರ ಅದು. 2010-22ರಲ್ಲಿ ಬಡ್ಡಿದರ ಶೇ. 9.50ರಷ್ಟು ಇತ್ತು. ಕುತೂಹಲಕ್ಕೆ ತಿಳಿಸುವುದಾದರೆ, ಇಪಿಎಫ್​ಒ ಸಂಸ್ಥೆ ಸ್ಥಾಪನೆಯಾಗಿದ್ದು 1952ರಲ್ಲಿ. ಅದು ಇಪಿಎಫ್ ಖಾತೆಗಳಿಗೆ ಘೋಷಿಸಿದ ಆರಂಭಿಕ ಬಡ್ಡಿದರ ಶೇ. 3 ಮಾತ್ರ.

ಸಕ್ರಿಯ ಖಾತೆಗಳಿಗೆ ಮಾತ್ರವೇ ಸಿಗುತ್ತಾ ಬಡ್ಡಿ?

ಸದ್ಯ ಸಕ್ರಿಯವಾಗಿರುವ ಖಾತೆಗಳಿಗೆ, ಅಂದರೆ, ಉದ್ಯೋಗಿಗಳು ಹಾಗೂ ಕಂಪನಿಗಳಿಂದ ಪ್ರತೀ ತಿಂಗಳು ಹಣ ಜಮೆಯಾಗುತ್ತಿರುವ ಇಪಿಎಫ್ ಖಾತೆಗಳಿಗೆ ಮಾತ್ರ ಬಡ್ಡಿ ಹಣ ಜಮೆ ಆಗುತ್ತದೆ ಎಂದು ಕೆಲ ಮಾಧ್ಯಮಗಳಲ್ಲಿ ಹೇಳುವುದುಂಟು. ಆದರೆ, ವಾಸ್ತವದಲ್ಲಿ ಹಾಗೇನಿಲ್ಲ. ಎಲ್ಲಾ ಇಪಿಎಫ್ ಖಾತೆಗಳಿಗೂ ಸರ್ಕಾರದ ವತಿಯಿಂದ ಬಡ್ಡಿ ಹಣ ಪ್ರತೀ ವರ್ಷ ಜಮೆ ಆಗುತ್ತಿರುತ್ತದೆ. ಉದ್ಯೋಗಿ ವಯಸ್ಸು 60 ವರ್ಷ ಮುಟ್ಟುವವರೆಗೂ ಇದು ನಿಲ್ಲುವುದಿಲ್ಲ.

ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 80 ಡಾಲರ್​ಗಿಂತ ಕಡಿಮೆ; ಪೆಟ್ರೋಲ್, ಡೀಸಲ್ ಬೆಲೆ ಕಡಿಮೆಗೊಳ್ಳುತ್ತಾ?

ಉತ್ತಮ ನಿವೃತ್ತಿ ಯೋಜನೆ ಇಪಿಎಫ್

ಖಾಸಗಿ ವಲಯದ ಉದ್ಯೋಗಿಗಳಿಗೆ ದೀರ್ಘಾವಧಿಯ ಉಳಿತಾಯದ ದೃಷ್ಟಿಯಿಂದ ಇಪಿಎಫ್ ಉತ್ತಮ ಸ್ಕೀಮ್ ಆಗಿದೆ. ಈ 8.25% ಬಡ್ಡಿ ದರ ಕಡಿಮೆಯೇನಲ್ಲ. ಫಿಕ್ಸೆಡ್ ಡೆಪಾಸಿಟ್​ಗಳಿಗಿಂತಲೂ ಉತ್ತಮ ರಿಟರ್ನ್ಸ್ ತರಬಲ್ಲುದು ಇಪಿಎಫ್. ಹೀಗಾಗಿ, ಉದ್ಯೋಗಿಗಳು ಇಪಿಎಫ್ ಅಕೌಂಟ್​ನಿಂದ ಹಣ ಹಿಂಪಡೆಯುವ ಬದಲು ವಿಪಿಎಫ್ ಇತ್ಯಾದಿ ಮೂಲಕ ಹೂಡಿಕೆ ಹೆಚ್ಚಿಸಲು ಚಿಂತಿಸುವುದು ಉತ್ತಮ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಬಿಜೆಪಿ ಉಚ್ಛಾಟಿತ ಶಾಸಕ – Kannada News | Congress Offered Me an Entry, Claims Expelled BJP MLA Yatnal

ಬೆಂಗಳೂರು, ಜೂನ್​​ 18: ಶಾಸಕ ಬಸನಗೌಡ ಪಾಟೀಲ್​​ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದರೂ ತಾವು ಪಕ್ಷಕ್ಕೆ ತೋರುತ್ತಿರುವ ನಿಷ್ಠೆಯನ್ನು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ರಾಜಕೀಯದಲ್ಲಿ ತಮ್ಮ ನಿಲುವು ದೃಢವಾಗಿದೆ ಎಂದು ಹೇಳಿದ ಅವರು, ಕರ್ನಾಟಕದಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದಿಂದ ಮುಕ್ತಿ ಸಿಗುವವರೆಗೂ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಂದೊಮ್ಮೆ ಎಂಎಲ್‌ಸಿ ಆಗಿದ್ದಾಗ ನಡೆದ ಘಟನೆಯನ್ನು ಯತ್ನಾಳ್ ನೆನಪಿಸಿಕೊಂಡಿದ್ದು, ಶಂಕರ್ ಮೂರ್ತಿ ವಿರುದ್ಧ ಉಗ್ರಪ್ಪನವರು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ಅವರು ತಮ್ಮನ್ನು ಭೇಟಿ ಮಾಡಿದ್ದರು. ಸಿಂದಗಿ ಅಥವಾ ದೇವರಿಪ್ಪಳಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಸಾಕಷ್ಟು ಅಭಿವೃದ್ಧಿ ಹಣ ನೀಡುವುದಾಗಿ ಆಮಿಷವೊಡ್ಡಿ, ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವಂತೆ ಕೇಳಿದ್ದರು. ಆದರೆ, ತಾವು ಬಿಜೆಪಿ ಚಿಹ್ನೆಯಿಂದ ಆಯ್ಕೆಯಾಗಿದ್ದು, ತಮ್ಮ ನಿಷ್ಠೆ ಬಿಜೆಪಿಗೆ ಮಾತ್ರ ಎಂದು ಸ್ಪಷ್ಟಪಡಿಸಿ ಆ ಪ್ರಸ್ತಾಪವನ್ನು ತಿರಸ್ಕರಿಸಿದ್ದೆ. ಆ ಮತದಿಂದಾಗಿಯೇ ಡಿ.ಎಸ್. ಶಂಕರ್ ಮೂರ್ತಿ ಸಭಾಪತಿಯಾಗಿ ಮುಂದುವರೆಯಲು ಸಾಧ್ಯವಾಯಿತು ಎಂದು ಅವರು ನೆನಪಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು? – Kannada News | Bigg Boss Kannada, Sooraj may enter Bigg Boss house

ಬಿಗ್​​ಬಾಸ್ ಕನ್ನಡ (Bigg Boss) ಹೊಸ ಸೀಸನ್​​ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ಸ್ಪರ್ಧಿಗಳ ಆಯ್ಕೆಯೂ ಬಹುತೇಕ ಪೂರ್ಣಗೊಂಡಿದೆ. ಈ ಬಾರಿ ತುಸು ಮುಂಚಿತವಾಗಿಯೇ ಬಿಗ್​​ಬಾಸ್ ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ. ಪ್ರತಿ ಬಿಗ್​​ಬಾಸ್​​ ಸೀಸನ್​​ಗೂ ಕಡ್ಡಾಯವಾಗಿ ಹಾಸ್ಯನಟರನ್ನು ಸ್ಪರ್ಧಿಗಳಾಗಿ ಕಳಿಸಲಾಗುತ್ತದೆ. ತುಕಾಲಿ, ಮಂಜು ಇನ್ನೂ ಹಲವು ಕಾಮಿಡಿಯನ್​​ಗಳು ಸ್ಪರ್ಧಿಗಳಾಗಿದ್ದಾರೆ ಒಳ್ಳೆಯ ಪ್ರದರ್ಶನ ಸಹ ಮಾಡಿದ್ದಾರೆ. ಈ ಬಾರಿ ಹಾಸ್ಯ ರಿಯಾಲಿಟಿ ಶೋಗಳಲ್ಲಿ ಹೆಸರು ಮಾಡಿರುವ ಸೂರಜ್, ಬಿಗ್​​ಬಾಸ್​​ಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಖುದ್ದು ಸೂರಜ್ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಭಾರತದಲ್ಲಿ ಕ್ಷೀಣಿಸಿದ ಮುಂಗಾರು; ಜೂನ್ 4ರಿಂದ 18ರವರೆಗೆ ಶೇ. 42ಕ್ಕೆ ಏರಿದ ಮಳೆ ಕೊರತೆ ಪ್ರಮಾಣ! – Kannada News | Monsoon 2026 struggle continues why India records 42 percent rainfall deficit

ನವದೆಹಲಿ, ಜೂನ್ 18: ಭಾರತದಲ್ಲಿ ಮುಂಗಾರು ಮಳೆಯ (Monsoon 2026) ಕೊರತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ದೇಶದ ಕೃಷಿ ವಲಯ ಹಾಗೂ ಜಲಮೂಲಗಳಿಗೆ ಭಾರಿ ಆತಂಕ ಎದುರಾಗಿದೆ. ದೇಶಾದ್ಯಂತ ಮುಂಗಾರು ಮಾರುತಗಳ ಆರ್ಭಟ ಕ್ಷೀಣಿಸಿದ್ದು, ಮಳೆಯ ಕೊರತೆಯ ಪ್ರಮಾಣವು ಆಘಾತಕಾರಿ ರೀತಿಯಲ್ಲಿ ಶೇ. 42ಕ್ಕೆ ತಲುಪಿದೆ. ಜೂನ್ ತಿಂಗಳು ಮುಗಿಯುತ್ತ ಬಂದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಜಲಾಶಯಗಳು ಬತ್ತುತ್ತಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಕುಂಠಿತಗೊಂಡಿವೆ. ಮುಂದಿನ ದಿನಗಳಲ್ಲಿ ಈ ಕೊರತೆಯನ್ನು ಸರಿದೂಗಿಸುವುದು ಅತ್ಯಂತ ಸವಾಲಿನ ಕೆಲಸ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲೇ ದೇಶವನ್ನು ಪ್ರವೇಶಿಸುವ ಮುಂಗಾರು ಮಾರುತಗಳು ಇಷ್ಟು ಹೊತ್ತಿಗಾಗಲೇ ಇಡೀ ದೇಶವನ್ನು ಆವರಿಸಬೇಕಿತ್ತು. ಆದರೆ, ಈ ಬಾರಿ ಆರಂಭಿಕ ಮುನ್ನಡೆಯ ನಂತರ ಮುಂಗಾರು ಮಾರುತಗಳ ಚಲನೆ ಮಂದಗತಿಯಾಗಿದೆ. ಹವಾಮಾನ ಇಲಾಖೆಯ (IMD) ತಾಜಾ ಅಂಕಿ-ಅಂಶಗಳ ಪ್ರಕಾರ, ದೇಶದ ಬಹುತೇಕ ರಾಜ್ಯಗಳಲ್ಲಿ ವಾಡಿಕೆಗಿಂತ ಭಾರಿ ಕಡಿಮೆ ಮಳೆಯಾಗಿದ್ದು, ಒಟ್ಟಾರೆ ಮಳೆ ಕೊರತೆಯ ಗ್ರಾಫ್ ಶೇ. 42ರಷ್ಟು ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಶೇ 21 ರಷ್ಟು ಮುಂಗಾರು ಮಳೆ ಕೊರತೆ: ಪ್ರಮುಖ ಡ್ಯಾಂಗಳಲ್ಲಿ ತಳ ಸೇರಿದ ನೀರು

ಜೂನ್ ತಿಂಗಳು ದೇಶದ ಮುಂಗಾರು ಹಂಗಾಮಿನ ಬಿತ್ತನೆಗೆ ಅತ್ಯಂತ ಪ್ರಮುಖವಾದ ಸಮಯವಾಗಿದೆ. ಲಕ್ಷಾಂತರ ಎಕರೆ ಕೃಷಿ ಭೂಮಿ ಮಳೆಯಿಲ್ಲದೆ ಒಣಗುತ್ತಿದ್ದು, ರೈತರು ಬಿತ್ತನೆ ಕಾರ್ಯವನ್ನು ಮುಂದೂಡುತ್ತಿದ್ದಾರೆ. ದೇಶದ ಪ್ರಮುಖ ನದಿಗಳು, ಕೆರೆಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ಇದು ಕೇವಲ ಕೃಷಿಗೆ ಮಾತ್ರವಲ್ಲದೆ ಕುಡಿಯುವ ನೀರಿಗೂ ತತ್ವಾರ ಸೃಷ್ಟಿಸುವ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ವಿಶ್ಲೇಷಕರ ಪ್ರಕಾರ, ಜೂನ್ ತಿಂಗಳಿನಲ್ಲಿ ಉಂಟಾಗಿರುವ ಈ ಭಾರಿ ಪ್ರಮಾಣದ (ಶೇ. 42) ಮಳೆ ಕೊರತೆಯನ್ನು ಮುಂಬರುವ ಜುಲೈ ಮತ್ತು ಆಗಸ್ಟ್ ತಿಂಗಳುಗಳಲ್ಲಿ ಸರಿದೂಗಿಸುವುದು ಅತ್ಯಂತ ಕಠಿಣವಾಗಿದೆ. ಯಾಕೆಂದರೆ, ಮುಂಗಾರು ಮಾರುತಗಳನ್ನು ಬಲಪಡಿಸುವ ಜಾಗತಿಕ ಹವಾಮಾನ ವಿದ್ಯಮಾನಗಳು ಸದ್ಯಕ್ಕೆ ಪೂರಕವಾಗಿ ಕಾಣಿಸುತ್ತಿಲ್ಲ. ಒಂದು ವೇಳೆ ಜುಲೈ ತಿಂಗಳಿನಲ್ಲೂ ಇದೇ ಪರಿಸ್ಥಿತಿ ಮುಂದುವರಿದರೆ ದೇಶವು ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ಇದು ಆಹಾರ ಧಾನ್ಯಗಳ ಬೆಲೆ ಏರಿಕೆಗೆ ಕಾರಣವಾಗಬಹುದು ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ!

ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಸೇರಿದಂತೆ ದಕ್ಷಿಣ ಹಾಗೂ ಮಧ್ಯ ಭಾರತದ ರಾಜ್ಯಗಳಲ್ಲಿ ಮುಂಗಾರು ಮಳೆಯ ಕೊರತೆ ತೀವ್ರವಾಗಿದೆ. ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದರೂ, ಒಳನಾಡಿನ ಜಿಲ್ಲೆಗಳಲ್ಲಿ ಧಗೆ ಮುಂದುವರಿದಿದೆ. ಹವಾಮಾನ ಇಲಾಖೆಯು ಮುಂಬರುವ ದಿನಗಳಲ್ಲಿ ವಾಯುಭಾರ ಕುಸಿತ ಉಂಟಾಗಿ ಮಾರುತಗಳು ಚುರುಕಾಗಬಹುದು ಎಂಬ ನಿರೀಕ್ಷೆಯಲ್ಲಿದೆಯಾದರೂ, ಸದ್ಯದ ಪರಿಸ್ಥಿತಿ ಮಾತ್ರ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಮಳೆಯ ಅಭಾವದ ತೀವ್ರತೆಯು ಈಗಾಗಲೇ ಕೃಷಿ ಮತ್ತು ಜಲಮೂಲಗಳ ಮೇಲೆ ಬೀಳಲಾರಂಭಿಸಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಕೊರತೆ ದಾಖಲಾಗಿದ್ದು, ಮುಂಬೈ ನಗರವು ಕಳೆದ ಒಂದು ದಶಕದಲ್ಲೇ ಅತ್ಯಂತ ಒಣಹವೆಯ ಜೂನ್ ತಿಂಗಳನ್ನು ಎದುರಿಸುತ್ತಿದೆ. ಇದರಿಂದಾಗಿ ಅಧಿಕಾರಿಗಳು ನೀರು ಸರಬರಾಜಿನಲ್ಲಿ ಕಡಿತ ಅಥವಾ ನಿರ್ಬಂಧಗಳನ್ನು ಹೇರಲು ಉದ್ಯುಕ್ತರಾಗಿದ್ದಾರೆ. ವಿದರ್ಭ ಮತ್ತು ಮಧ್ಯಪ್ರದೇಶ ಸೇರಿದಂತೆ ಮಧ್ಯ ಭಾರತದ ಇತರ ಭಾಗಗಳು ಕೂಡ ಮುಂಗಾರು ಮರುಜೀವ ಪಡೆಯುವುದಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿವೆ.
ಜೂನ್ ತಿಂಗಳ ದ್ವಿತೀಯಾರ್ಧ ಈಗಾಗಲೇ ಆರಂಭವಾಗಿರುವುದರಿಂದ, ಇಲ್ಲಿಯವರೆಗೆ ಉಂಟಾಗಿರುವ ಭಾರಿ ಮಳೆ ಕೊರತೆಯನ್ನು ನೀಗಿಸಲು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಎರಡೂ ಕಡೆಯಿಂದ ಮುಂಗಾರು ಮಾರುತಗಳು ಭಾರಿ ವೇಗದಲ್ಲಿ ಚುರುಕಾಗಬೇಕಿದೆ. ಆದರೆ, ಸದ್ಯದ ಉಪಗ್ರಹ ಚಿತ್ರಗಳನ್ನು ನೋಡಿದರೆ ಅಂತಹ ದೊಡ್ಡ ಮಟ್ಟದ ಚೇತರಿಕೆಯ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರದೊಳಗೆ ಸಮುದ್ರದಲ್ಲಿ ಬಲವಾದ ವಾಯುಭಾರ ಕುಸಿತದ ವಾತಾವರಣ ನಿರ್ಮಾಣವಾಗಿ, ತೇವಾಂಶದ ಚಲನೆ ತೀವ್ರಗೊಳ್ಳದಿದ್ದರೆ, ಈ ಮಳೆ ಕೊರತೆಯು ಜೂನ್ ಅಂತ್ಯದವರೆಗೂ ಮುಂದುವರಿಯಲಿದೆ. ಇದರಿಂದ ಈ ವರ್ಷದ ಮಳೆಯ ಪ್ರಮಾಣದ ಮೇಲೆ ಭಾರೀ ಹೊಡೆತ ಬೀಳಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಟವಾಡುತ್ತಿದ್ದಾಗ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಕಂದಮ್ಮ ದಾರುಣ ಅಂತ್ಯ! – Kannada News | Nelamangala: 2 Year Old Child Dies After Falling From First Floor While Playing

ಪ್ರಾತಿನಿಧಿಕ ಚಿತ್ರ Image Credit source: Getty images

ನೆಲಮಂಗಲ, ಜೂನ್​​ 18: ಆಟವಾಡುತ್ತಿದ್ದಾಗ ಮೊದಲನೇ ಮಹಡಿಯಿಂದ ಬಿದ್ದು 2 ವರ್ಷದ ಮಗು (Child) ಸಾವನ್ನಪ್ಪಿರುವಂತಹ (death) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ದೀಕ್ಷಿತ್ ಮೃತ ಮಗು. 24 ಗಂಟೆಗಳ ಕಾಲ ಕೋಮಾದಲ್ಲಿದ್ದ ದೀಕ್ಷಿತ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮುಖ್ಯಾಂಶಗಳು

  • ಕಟ್ಟಡದ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಮಗು ಸಾವು
  • ಆಟವಾಡುತ್ತಿದ್ದಾಗ ಸಂಭವಿಸಿದ ಘಟನೆ
  • ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ

ನಡೆದಿದ್ದೇನು? 

ದಾಸರಹಳ್ಳಿಯ ನವೀನ್ ಕುಮಾರ್, ಕಾವ್ಯ ದಂಪತಿ ಮತ್ತು ಮಗು ದೀಕ್ಷಿತ್ ಸೇರಿದಂತೆ ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಆಟವಾಡುತ್ತಿದ್ದಾಗ ಕಟ್ಟಡದ ಮೊದಲ ಮಹಡಿ ಮೆಟ್ಟಿಲು ಮೇಲಿಂದ ದೀಕ್ಷಿತ್ ಉರುಳಿಬಿದ್ದ. ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ. ಮಗುವನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ವಸತಿ ಶಾಲೆಯಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವು

ಅನುಮಾನಾಸ್ಪದವಾಗಿ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಧಾರವಾಡ ಜಿಲ್ಲೆಯ ನವಲಗುಂದದ ಅಣ್ಣಿಗೇರಿ ರಸ್ತೆಯಲ್ಲಿರುವ ವಿದ್ಯಾಜ್ಯೋತಿ ವಸತಿ ಶಾಲೆಯಲ್ಲಿ ನಡೆದಿದೆ. ಶಾನವಾಡ ಗ್ರಾಮದ ಆಕಾಶ್ ನೀಲಣ್ಣವರ್(10) ಮೃತ ದುರ್ದೈವಿ.

ಇದನ್ನೂ ಓದಿ: ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

10 ದಿನದ ಹಿಂದೆ ತಂದೆ ವಸಂತ್ ಅವರು ಆಕಾಶ್​​ನನ್ನು 4ನೇ ತರಗತಿಗೆ ವಸತಿ ಶಾಲೆಗೆ ಸೇರಿಸಿದ್ದರು. ಇಂದು ಮುಂಜಾನೆ ಕಾಂಪೌಂಡ್ ಮೇಲಿಂದ ಬಿದ್ದಿದ್ದು, ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶಾಲೆಯ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದರು. ಆದರೆ ನಿನ್ನೆ ಕರೆ ಮಾಡಿದ್ದಾಗ ಶಿಕ್ಷಕರು ಹೊಡೆದಿರುವುದಾಗಿ ಆಕಾಶ್ ಹೇಳಿದ್ದ.

ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ತಂದೆ

ಇನ್ನು ಮಗನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ತಂದೆ ಮುಂದಾಗಿದ್ದು, ನವಲಗುಂದ ಸರ್ಕಾರಿ ಆಸ್ಪತ್ರೆಯಿಂದ ಕಿಮ್ಸ್​ಗೆ ಕರೆತರುವಷ್ಟರಲ್ಲಿ ಆಕಾಶ್​ ಸಾವನ್ನಪ್ಪಿದ್ದಾನೆ. ಸದ್ಯ ಪುತ್ರ ಆಕಾಶ್ ಸಾವಿನ ಬಗ್ಗೆ ವಸಂತ್ ಸಂಶಯ ವ್ಯಕ್ತಪಡಿಸಿದ್ದಾರೆ. ಕಾಂಪೌಂಡ್ ಮೇಲಿಂದ ಬಿದ್ದರೆ ಸಾಯುವುದಿಲ್ಲ ಎಂದಿರುವ ವಸಂತ್, ಮಗ ಕಾಂಪೌಂಡ್ ಮೇಲಿಂದ ಬಿದ್ದಿದ್ನಾ ಅಥವಾ ಶಾಲಾ ಕಟ್ಟಡದಿಂದ ಬಿದ್ದಿದ್ನಾ? ಎಂದು ಸಿಸಿಟಿವಿ ದೃಶ್ಯ ನೋಡಿದ ನಂತರ ನಿರ್ಧರಿಸುತ್ತೇವೆ ಎನ್ನುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ ತೆರೆಗೆ ಬರಲು ಸಿದ್ಧವಾಗುತ್ತಿದೆ.

‘ವೆರೈಟಿ ಇಂಡಿಯಾ’ ವರದಿಯ ಪ್ರಕಾರ, ಮೊದಲು ಒಂದೇ ಭಾಗದಲ್ಲಿ ತೆರೆಗೆ ಬರಬೇಕಿದ್ದ ಈ ಐತಿಹಾಸಿಕ ಸಿನಿಮಾವನ್ನು ಈಗ ದೊಡ್ಡ ಮಟ್ಟದಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದ ಬಜೆಟ್ ಬರೋಬ್ಬರಿ 500 ಕೋಟಿ ರೂಪಾಯಿ ದಾಟಲಿದ್ದು, ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಐತಿಹಾಸಿಕ ಚಿತ್ರಗಳಲ್ಲಿ ಒಂದಾಗಿ ಇದು ಮೂಡಿಬರಲಿದೆ.

ಸಂದೀಪ್ ಸಿಂಗ್ ನಿರ್ದೇಶನದ ಈ ಸಿನಿಮಾವನ್ನು ಕೇವಲ ಮೂರು ಗಂಟೆಗಳ ಒಂದೇ ಚಿತ್ರವಾಗಿ ಕಟ್ಟಿ ಕೊಡುವುದು ಕಷ್ಟ ಎಂದು ನಿರ್ಮಾಪಕರು ಭಾವಿಸಿದ್ದಾರೆ. ಶಿವಾಜಿ ಮಹಾರಾಜ್ ಅವರ ನಾಯಕತ್ವ, ರಾಜತಾಂತ್ರಿಕ ನಡೆ ಮತ್ತು ಅವರ ಸಾಮ್ರಾಜ್ಯದ ಇತಿಹಾಸವನ್ನು ಸಂಪೂರ್ಣವಾಗಿ ಪ್ರೇಕ್ಷಕರಿಗೆ ತಲುಪಿಸಲು ಎರಡು ಭಾಗಗಳಾಗಿ ಮಾಡಲು ತೀರ್ಮಾನಿಸಲಾಗಿದೆ.

ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನದ ಪ್ರಮುಖ ಘಟನೆಗಳು ನಡೆದ ಮಹಾರಾಷ್ಟ್ರದ ನೈಜ ತಾಣಗಳಲ್ಲೇ ಚಿತ್ರದ ಬಹುತೇಕ ಭಾಗದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ರೂಪಿಸಿದೆ. ಬಾಲಿವುಡ್‌ನ ಖ್ಯಾತ ನಟ ಅರ್ಜುನ್ ರಾಂಪಾಲ್ ಈ ಚಿತ್ರದಲ್ಲಿ ಪ್ರಮುಖ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೆಫಾಲಿ ಶಾ ಅವರು ರಾಜಮಾತೆ ಜೀಜಾಬಾಯಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪ್ರೀತಮ್ ಅವರ ಸಂಗೀತ ಹಾಗೂ ರವಿವರ್ಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಇದನ್ನೂ ಓದಿ: ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ

ಸದ್ಯಕ್ಕೆ ರಿಷಬ್ ಶೆಟ್ಟಿ ಅವರು ಪ್ರಶಾಂತ್ ವರ್ಮ ನಿರ್ದೇಶನದ ‘ಜೈ ಹನುಮಾನ್’ ಸಿನಿಮಾದಲ್ಲಿ ಹನುಮಂತನ ಪಾತ್ರವನ್ನು ಮಾಡುತ್ತಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದ ಕೆಲಸ ಮುಗಿದ ನಂತರವೇ ರಿಷಬ್ ಅವರು ‘ಛತ್ರಪತಿ ಶಿವಾಜಿ ಮಹಾರಾಜ್’ ಸೆಟ್‌ಗೆ ಬರಲಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ದೊಡ್ಡ ಕಥೆಗಳನ್ನು ಎರಡು ಭಾಗಗಳಲ್ಲಿ ಹೇಳುವ ಟ್ರೆಂಡ್ ಹೆಚ್ಚಾಗಿದ್ದು, ಈಗ ಅದೇ ಹಾದಿಯಲ್ಲಿ ರಿಷಬ್ ಶೆಟ್ಟಿ ಅವರ ಈ ಸಿನಿಮಾ ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link